Headlines

ಮಾಕಳಿ ಬಳಿ ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೂ ಲೆಕ್ಕಿಸದೆ ಮೂಟೆಗಳಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ! – Kannada News | Makali Accident: Biker Killed in Multi Vehicle Crash as Onions Are Looted, Sparks Public Outrage

ನೆಲಮಂಗಲ, ಜನವರಿ 21: ಬೆಂಗಳೂರು (Bangalore) ಉತ್ತರ ತಾಲೂಕಿನ ಮಾಕಳಿ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೊಲ್ಲಾಪುರದಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಲಾರಿ, ಆಟೋ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಸಡನ್ ಆಗಿ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಕ್ಯಾಂಟರ್ ಲಾರಿಗೆ…

Read More

ಬಂಗಾರದ ದರ 1 ಕಿಲೋಗೆ 8-9 ಕೋಟಿ ರೂಗೆ ಏರುತ್ತಾ? ಯಾಕಿಷ್ಟು ಏರುತ್ತಿದೆ ಬೆಲೆ? – Kannada News | Reasons for rising gold prices, and future rates prediction

ನವದೆಹಲಿ, ಜನವರಿ 26: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಒಂದು ಔನ್ಸ್​ಗೆ 5,000 ಡಾಲರ್ ದಾಟಿ ಹೋಗಿದೆ. ಈ ಮೈಲಿಗಲ್ಲು ಮುಟ್ಟಿದ್ದು ಬಂಗಾರದ ಇತಿಹಾಸದಲ್ಲೇ ಇದು ಪ್ರಥಮ ಬಾರಿಗೆ. ಸ್ಪಾಟ್ ಗೋಲ್ಡ್ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ ಸೋಮವಾರ 5,092 ಡಾಲರ್​ವರೆಗೂ ಏರಿದೆ. ಒಂದು ಔನ್ಸ್ ಎಂದರೆ 28.3495 ಗ್ರಾಮ್. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ ಸ್ಪಾಟ್ ಮಾರ್ಕೆಟ್​ನಲ್ಲಿ 16,410 ರೂಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಏರಲು ಕಾರಣಗಳೇನು? ಸೆಂಟ್ರಲ್ ಬ್ಯಾಂಕುಗಳು…

Read More

Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | Good Governance Day 2025: What is the purpose behind celebrating Good Governance Day on December 25?

ಉತ್ತಮ ಆಡಳಿತ (Good Governance) ಎಂದರೆ ಪಾರದರ್ಶಕತೆ, ಹೊಣೆಗಾರಿಕೆ, ಸಾರ್ವಜನಿಕ ಕಲ್ಯಾಣ ಮತ್ತು ಜವಾಬ್ದಾರಿಯುತವಾಗಿ, ಪರಿಣಾಮಕಾರಿಯಾಗಿ ಆಡಳಿತವನ್ನು ನಡೆಸುವುದಾಗಿದೆ. ಸರ್ಕಾರಿ ನೀತಿಗಳನ್ನು ಸಾಮಾನ್ಯ ನಾಗರಿಕರಿಗೆ ಪ್ರಾಮಾಣಿಕವಾಗಿ ತಲುಪಿಸಿದಾಗ, ಭ್ರಷ್ಟಾಚಾರವನ್ನು ನಿಗ್ರಹಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳನ್ನು ಒದಗಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಂದು ಆಡಳಿತ ವರ್ಗಗಳು ಉತ್ತಮ ರೀತಿಯಲ್ಲಿ ಆಡಳಿತ ನಡೆಸಬೇಕು ಹಾಗೂ ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಡಿಸೆಂಬರ್‌…

Read More

Horoscope Today 28 December: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟವಿರಬಹುದು

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 28, ಭಾನುವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ಇದು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರ ಹಾಗೂ ವರಿಯನ್ ಯೋಗವಿರುವ ದಿನವಾಗಿದೆ. ಇಂದು ಮಧ್ಯಾಹ್ನ 4:37 ರಿಂದ 6:03 ರವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 1:46 ರಿಂದ 3:11 ರವರೆಗೆ ಶುಭ ಮತ್ತು ಸಂಕಲ್ಪ ಕಾಲವಿದೆ. ಸೂರ್ಯನು ಧನುಸ್ಸು ರಾಶಿಯಲ್ಲಿ ಮತ್ತು…

Read More

ಕಾಶಿಯಲ್ಲಿ ಮುಗಿಯಿತು ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ – Kannada News | Chikkanna new Kannada movie Lakshmiputra shooting in Kashi

ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ‘ಲಕ್ಷ್ಮಿಪುತ್ರ’ (Lakshmiputra) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಎಪಿ ಅರ್ಜುನ್ ಅವರು ಬಂಡವಾಳ ಹೂಡುತ್ತಿದ್ದಾರೆ. ಅನೇಕ ಹೊಸ ಹೀರೋಗಳ ಜೊತೆ ಕೆಲಸ ಮಾಡಿದ ಎ.ಪಿ. ಅರ್ಜುನ್ ಅವರು ಈಗ ಚಿಕ್ಕಣ್ಣ ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಎಪಿ ಅರ್ಜುನ್ ಅವರೇ ಕಥೆ ಬರೆದಿದ್ದಾರೆ. ಅವರದ್ದೇ ಬ್ಯಾನರ್​​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಚಿಕ್ಕಣ್ಣ (Chikkanna) ಜೊತೆ ಅನೇಕ ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ. ‘ಎಪಿ ಅರ್ಜುನ್ ಫಿಲ್ಮ್’ ಬ್ಯಾನರ್ ಮೂಲಕ…

Read More

Chocolate Day 2026: ನಿಮ್ಮ ಸಂಗಾತಿಗಾಗಿ ಪ್ರೀತಿಯಿಂದ ಮನೆಯಲ್ಲೇ ತಯಾರಿಸಿ ಸ್ಪೆಷಲ್ ಚಾಕೊಲೇಟ್;‌ ಇಲ್ಲಿದೆ ರೆಸಿಪಿ – Kannada News | Chocolate Day 2026: Make special chocolates at home for your partner

ಫೆಬ್ರವರಿಯನ್ನು ಪ್ರೀತಿ ಮತ್ತು ಪ್ರಣಯದ ತಿಂಗಳು ಎಂದೇ ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಫೆಬ್ರವರಿ 7 ರಂದು ರೋಸ್‌ ಡೇಯೊಂದಿಗೆ ಪ್ರೇಮಿಗಳ ವಾರ ಪ್ರಾರಂಭವಾಗುತ್ತದೆ. ಫೆಬ್ರವರಿ 9 ರಂದು ಚಾಕೊಲೇಟ್ ದಿನವನ್ನು (Chocolate Day) ಆಚರಿಸಲಾಗುತ್ತದೆ. ಈ ದಿನದಂದು, ಜನರು ತಮ್ಮ ಸಂಗಾತಿಗೆ ತರಹೇವಾರಿ ಚಾಕೊಲೇಟ್‌ಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಸಾಮಾನ್ಯವಾಗಿ ಎಲ್ಲರೂ ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ರೀತಿಯ ಚಾಕೊಲೇಟ್‌ಗಳನ್ನೇ ಗಿಫ್ಟ್‌ ಆಗಿ ನೀಡುತ್ತಾರೆ. ಈ ಬಾರಿಯ ಚಾಕೊಲೇಟ್‌ ಡೇ ಗೆ ಏನಾದರೂ ವಿಶೇಷವಾದದ್ದನ್ನು…

Read More

Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ ! – Kannada News | Daily Devotional: Three Zodiac Signs Should Avoid Black Clothes Until Ugadi

ಬೆಂಗಳೂರು, ಜನವರಿ 26: ಬಣ್ಣಗಳು ಮತ್ತು ವಸ್ತ್ರಗಳು ನಮ್ಮ ಮನಸ್ಸು ಹಾಗೂ ಜೀವನದ ಮೇಲೆ ಗಣನೀಯ ಪ್ರಭಾವ ಬೀರುತ್ತವೆ. ಕೆಲವು ಬಣ್ಣಗಳು ಅದೃಷ್ಟ ತಂದರೆ, ಇನ್ನು ಕೆಲವು ದುರಾದೃಷ್ಟವನ್ನು ತರಬಹುದು. ಕಪ್ಪು ಬಣ್ಣವು ಶನಿಯ ಪ್ರತೀಕವಾಗಿದೆ. ಪ್ರತಿಯೊಂದು ಬಣ್ಣಕ್ಕೂ ತನ್ನದೇ ಆದ ಶಕ್ತಿ ಇರುತ್ತದೆ, ಅದು 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಯುಗಾದಿಯ (ಮಾರ್ಚ್ 19) ತನಕ ಮೂರು ನಿರ್ದಿಷ್ಟ ರಾಶಿಚಕ್ರದವರಿಗೆ ಕಪ್ಪು ಬಟ್ಟೆಗಳನ್ನು ಧರಿಸುವುದು ಅಶುಭಕರವೆಂದು ಪರಿಗಣಿಸಲಾಗಿದೆ. ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ…

Read More

ಬೆಂಗಳೂರು: ಬಯೋಕಾನ್ ಕಂಪನಿಯ 3ನೇ ಮಹಡಿಯಿಂದ ಜಿಗಿದು ಉದ್ಯೋಗಿ ಆತ್ಮಹತ್ಯೆ – Kannada News | Bengaluru: Biocon Employee Dies by Suicide After Jumping From Third Floor

ಬೆಂಗಳೂರು, ಡಿಸೆಂಬರ್​ 30: ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ (biocon company) ಉದ್ಯೋಗಿ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಅನಂತ್ ಭಟ್(35) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅನಾರೋಗ್ಯ: ಮನನೊಂದು ಆಟೋ ಡ್ರೈವರ್ ಆತ್ಮಹತ್ಯೆ ಅನಾರೋಗ್ಯದ ಹಿನ್ನೆಲೆ ಮನನೊಂದು ಆಟೋ…

Read More

62 ಎಸೆತಗಳಲ್ಲಿ 66 ರನ್, 68 ಎಸೆತಗಳಲ್ಲಿ 100 ರನ್..! ಹಾರ್ದಿಕ್ ಅಬ್ಬರ ಹೇಗಿತ್ತು ನೋಡಿ – Kannada News | Hardik Pandya Century: 133 Runs, 34 in Over for Baroda in Vijay Hazare 2026

2025-26 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬರೋಡಾ ಮತ್ತು ವಿದರ್ಭ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬರೋಡಾ ತಂಡ ಸೋತಿತ್ತಾದರೂ ತಂಡದ ಪರ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಬರೋಡಾ 71 ರನ್​ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಕಣಕ್ಕಿಳಿದ ಹಾರ್ದಿಕ್ ತಮ್ಮ ಸಹೋದರ ಕೃನಾಲ್ ಪಾಂಡ್ಯ ಅವರೊಂದಿಗೆ ಆರನೇ ವಿಕೆಟ್‌ಗೆ 65 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇದರ ಜೊತೆಗೆ ಹಾರ್ದಿಕ್ ಪಾಂಡ್ಯ 92 ಎಸೆತಗಳಲ್ಲಿ…

Read More

ಕಟ್ಟುನಿಟ್ಟಿನ ಕ್ರಮ: ಇನ್ಮುಂದೆ ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ – Kannada News | Transport Minister Ramalinga Reddy instructs 8 Rules mandatory to sleeper coach buses

ಬೆಂಗಳೂರು, (ಜನವರಿ 21): ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತ (Chitradruga Bus Accident) ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಅವರು ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದ ಖಾಸಗಿ ಬಸ್ ಮಾಲೀಕರು,ಬಸ್ ಕೋಚ್ ನಿರ್ಮಾಣ ಕಂಪನಿಗಳ ಮಾಲೀಕರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಈ ಸಭೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಯಾವ ರೀತಿಯಲ್ಲಿ ಬಸ್ ಗಳ ಬಾಡಿ ಬಿಲ್ಡಿಂಗ್ ಮಾಡಬೇಕು? ಎಷ್ಟು ಎಮರ್ಜೆನ್ಸಿ…

Read More