Headlines

ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಆಯೋಗಕ್ಕೆ ಸರ್ಕಾರ ಪತ್ರ, ಕಾರಣವೇನು? – Kannada News | Karnataka government Letter To election commission for Postpone GBA Election

ಬೆಂಗಳೂರು, (ಏಪ್ರಿಲ್ 17): ಇದೇ ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ (GBA Election) ನಡೆಸುವಂತೆ ಸುಪ್ರೀಂಕೋರ್ಟ್ ಅದೇಶಿಸಿದೆ. ಆದ್ರೆ, ಇದೀಗ ರಾಜ್ಯ ಸರ್ಕಾರ (Karnataka Government), ನಾನಾ ಕಾರಣಗಳನ್ನು ನೀಡಿ ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಮನವಿ ಮಾಡಿದೆ. ಈ ಸಂಬಂಧ ಸಿದ್ದರಾಮಯ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗಕ್ಕೆ (Karnataka Election Commission) ಪತ್ರ ಬರೆದಿದ್ದು, ಜನ ಗಣತಿ ಕಾರಣ ಮುಂದಿಟ್ಟು ಸೆಪ್ಟೆಂಬರ್ 30ರ ರವರೆಗೆ ವಿಸ್ತರಣೆಗೆ ಮನವಿ ಮಾಡಿದೆ….

Read More

ಕಳೆದ 5 ವರ್ಷದಿಂದ ಅಕ್ಷಯ ತೃತೀಯದಂದು ಚಿನ್ನ ಖರೀದಿಸುತ್ತಿದ್ದರೆ ಇವತ್ತಿನ ಮೌಲ್ಯವೆಷ್ಟಿರುತ್ತಿತ್ತು ಗೊತ್ತಾ? – Kannada News | Akshaya Tritiya Gold Investment: 5 Year Returns Show How Your Wealth Could Grow

ಅಕ್ಷಯ ತೃತೀಯವು (Akshaya Tritiya) ಭಾರತೀಯರ ಪಾಲಿಗೆ ಬಹಳ ಪುಣ್ಯವೆಂದು ಭಾವಿಸಲಾಗಿರುವ ದಿನ. ಶುಭ ಕಾರ್ಯಗಳಿಗೆ ಈ ದಿನ ಶ್ರೇಷ್ಠ ಎನ್ನಲಾಗಿದೆ. ಚಿನ್ನ ಹಾಗೂ ಅದರ ಸಂಬಂಧಿತ ಉತ್ಪನ್ನಗಳನ್ನು ಖರೀದಿಸಿದರೆ ಸಂಪತ್ತು ಸಮೃದ್ಧವಾಗಿ ಸೇರುತ್ತದೆ ಎನ್ನುವ ನಂಬಿಕೆ ಇದೆ. ಅಂತೆಯೇ, ಬಹಳಷ್ಟು ಹಿಂದೂಗಳು ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸುತ್ತಾರೆ. ಈ ವರ್ಷ (2026) ಅಕ್ಷಯ ತೃತೀಯವು ಏಪ್ರಿಲ್ 19ರಂದು ಇದೆ. ಭಾನುವಾರವೇ ಆಗಿರುವುದರಿಂದ ಹೆಚ್ಚಿನ ಜನರು ಒಡವೆ ಅಂಗಡಿಗಳಿಗೆ ಮುಗಿಬೀಳುವುದು ಹೌದು. ಅಕ್ಷಯ ತೃತೀಯದಂದು ಹೂಡಿಕೆಗಾಗಿ…

Read More

IPL 2026: ಆರ್​ಸಿಬಿ- ಡೆಲ್ಲಿ ಕಾಳಗಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಬೆಂಗಳೂರು ಹವಾಮಾನ? – Kannada News | RCB vs DC IPL 2026 Match Preview: Chinnaswamy Pitch, Prediction and Head to Head

2026 ರ ಐಪಿಎಲ್‌ನ (IPL 2026) 26 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಏಪ್ರಿಲ್ 18 ರಂದು ಮಧ್ಯಾಹ್ನ 3.30 ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಾದಿಯಲ್ಲಿದೆ. ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್‌ ಹಳಿತಪ್ಪಿದ್ದು. ಸತತ ಎರಡು…

Read More

‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್ – Kannada News | Rajinikanth Jailer 2 Leaked Video goes Viral Sun Pictures warns fans

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಶೂಟಿಂಗ್ ಸೆಟ್‌ನ ವಿಡಿಯೋವೊಂದು ಲೀಕ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ತಲೆನೋವು ಶುರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ (Sun Pictures) ಪ್ರತಿಕ್ರಿಯೆ ನೀಡಿದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ‘ಜೈಲರ್ 2’ ಸಿನಿಮಾದ ಸೆಟ್‌ನಲ್ಲಿ ಚಿತ್ರೀಕರಿಸಲಾದ ಸಣ್ಣ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ…

Read More

ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ – Kannada News | Bengaluru Heatwave: Health Advisory for Rising Temperatures and Dehydration Risks

ಪ್ರಾತಿನಿಧಿಕ ಚಿತ್ರImage Credit source: indianexpress ಬೆಂಗಳೂರ, ಏಪ್ರಿಲ್​ 17: ಕೂಲ್ ಸಿಟಿ ಎಂದು ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು (bangaluru) ಸದ್ಯ ಹಾಟ್ ಸಿಟಿಯಾಗಿ (Heatwave) ಬದಲಾಗಿದೆ. ಸೆಕೆ ಜೊತೆಗೆ ಏರಿಕೆಯಾಗುತ್ತಿರುವ ತಾಪಮಾನಕ್ಕೆ ಸಿಟಿ ಜನ ಶಾಪ್ ಹಾಕುವುದಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಗರ್ಭಿಣಿಯರು, ಮಕ್ಕಳ ಬಗ್ಗೆ ಎಚ್ಚರ  ಬೆಂಗಳೂರಿನಲ್ಲಿ ಇಂದು 36ರ ಗರಿಷ್ಠ ತಾಪಮಾನ ದಾಖಲಾಗಿದೆ. ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿರುವ ರಾಜಧಾನಿಯ…

Read More

ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದಿದ್ದಕ್ಕೆ ಸಂಸತ್ ಆವರಣದಲ್ಲಿ ಎನ್​ಡಿಎ ನಾಯಕರ ಪ್ರತಿಭಟನೆ – Kannada News | NDA leaders protest in Parliament premises as the womens reservation bill fails to pass in Lok Sabha

ನವದೆಹಲಿ, ಏಪ್ರಿಲ್ 17: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ (Women’s Reservation) ನೀಡುವ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಕಾರಣದಿಂದಾಗಿ ಸಂಸತ್ತಿನ ಆವರಣದಲ್ಲಿ ಎನ್‌ಡಿಎ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಇಂದು ಲೋಕಸಭೆಯ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲ. 298 ಸದಸ್ಯರು ಈ ಮಸೂದೆಯ ಪರವಾಗಿ ಮತ್ತು 230 ಸದಸ್ಯರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮಸೂದೆಗೆ ಅಗತ್ಯವಿರುವ 3ನೇ 2ರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಇದರಿಂದ ಈ ಮಸೂದೆ…

Read More

Video: ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ, ಆಡಲು ಜತೆಗಾರರಿಲ್ಲ ಎಂಬ ಬೇಸರವಿಲ್ಲ, ಮುಖದಲ್ಲೊಂದು ಮಂದಹಾಸ

ಜಗತ್ತು ಎಲ್ಲರಿಗೂ ಒಂದೇ ರೀತಿ ಇರುವುದಿಲ್ಲ. ಕೆಲವರಿಗೆ ಎಲ್ಲವೂ ಸುಲಭವಾಗಿ ಸಿಕ್ಕರೆ, ಇನ್ನು ಕೆಲವರಿಗೆ ಒಂದು ಸಾಮಾನ್ಯ ಕ್ಷಣವೂ ಒಂದು ದೊಡ್ಡ ಕನಸಾಗಿರುತ್ತದೆ. ಇತ್ತೀಚೆಗೆ ಕಂಡುಬಂದ ಈ ದೃಶ್ಯವು ನಮ್ಮನ್ನು ಸ್ತಬ್ಧಗೊಳಿಸುತ್ತದೆ. ಅವಳೊಬ್ಬಳು ಪುಟ್ಟ ಹುಡುಗಿ. ಹುಟ್ಟುತ್ತಲೇ ಆಕೆಗೆ ಕೈಗಳಿರಲಿಲ್ಲ, ಅಂಗಳದಲ್ಲಿ ಅವಳ ವಯಸ್ಸಿನ ಇತರ ಮಕ್ಕಳು ಓಡುತ್ತಾ, ಆಟವಾಡುತ್ತಾ, ಒಬ್ಬರನ್ನೊಬ್ಬರು ಕೈಹಿಡಿದು ಎಳೆಯುತ್ತಾ ಸಂಭ್ರಮಿಸುತ್ತಿದ್ದರು. ಆದರೆ ಈ ಮಗು? ಒಂದು ಮೂಲೆಯಲ್ಲಿ ಸದ್ದಿಲ್ಲದೆ ಕುಳಿತು ಸಂತೋಷದಿಂದಲೇ ನೋಡುತ್ತಿದ್ದಳು. ಜೀವನದ ಬಗ್ಗೆ ಯಾವುದೇ ವಿಷಾದವಿರಲಿಲ್ಲ. ಅವಳ ಮುಖದಲ್ಲಿ…

Read More

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ – Kannada News | Yadagiri Car Bus Collision: Six Burnt Alive in Tragic Accident; SP Provides Details

ಯಾದಗಿರಿ, ಏಪ್ರಿಲ್​ 17: ಕಾರು ಮತ್ತು ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಜೀವದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಬಳಿ ನಡೆದಿದೆ. ಘಟನೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​ಪಿ ಪೃಥ್ವಿಕ್ ಶಂಕರ್​​, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಎಲ್ಲರೂ ರಾಯಚೂರು ಜಿಲ್ಲೆಯ ಶಿರವಾರ್ ಪಟ್ಟಣ ನಿವಾಸಿಗಳು. ಸುರಪುರ ಪಟ್ಟಣದ…

Read More

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ – Kannada News | Lissy Lakshmi slams Kalyani Priyadarshan and Pranav Mohanlal wedding rumours

ಸೂಪರ್ ಹಿಟ್ ‘ಹೃದಯಂ’ ಸಿನಿಮಾದಲ್ಲಿ ನಟಿಸಿದ ಬಳಿಕ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ (Kalyani Priyadarshan) ಬಗ್ಗೆ ವದಂತಿಗಳು ಜಾಸ್ತಿ ಆದವು. ನಿಜಜೀವನದಲ್ಲೂ ಅವರಿಬ್ಬರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಕಲ್ಯಾಣಿ ಮತ್ತು ಪ್ರಣವ್ (Pranav Mohanlal) ನಡುವಿನ ಸಂಬಂಧ ಯಾವ ರೀತಿ ಇದೆ ಎಂಬ ಬಗ್ಗೆ ಗಾಸಿಪ್ ಮಂದಿ ಹಲವು ರೀತಿಯ ಕಥೆ ಕಟ್ಟಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಕಲ್ಯಾಣಿ ತಾಯಿ ಲಿಸ್ಸಿ ಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ. ಇತ್ತೀಚೆಗೆ ಮಲಯಾಳಂ ಹೊಸ…

Read More

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಕೇವಲ ಈ 4 ಕ್ರಮಗಳನ್ನು ಅನುಸರಿಸಿ ಸಾಕು! – Kannada News | Lower Your Cancer Risk: 4 Science Backed Daily Habits

Lower Your Cancer Risk: 5 Science-Backed Daily HabitsImage Credit source: Getty Images ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಇದು ಗಂಭೀರ ಕಾಯಿಲೆಯಾದರೂ, ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳನ್ನು ಅನುಸರಿಸುವ ಮೂಲಕ ಇದರ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಡಾ. ರೋಹಿತ್ ಕಪೂರ್ ಅವರ ಪ್ರಕಾರ, ಜೀನ್ಸ್ ಸಂಬಂಧಿತ ಕೆಲವು ಪ್ರಕರಣಗಳನ್ನು ಹೊರತುಪಡಿಸಿದರೆ, ಹೆಚ್ಚಿನ ಕ್ಯಾನ್ಸರ್ ಪ್ರಕರಣಗಳು ನಮ್ಮ ದಿನನಿತ್ಯದ ಅಭ್ಯಾಸಗಳು…

Read More