Headlines

ಡಿಕೆಶಿ ಸಂಪುಟದಲ್ಲಿ ಯಾರ್ಯಾರು ಸಚಿವರಾಗುತ್ತಾರೆ?: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ನಿಯೋಜಿತ ಸಿಎಂ

ಬೆಂಗಳೂರು, ಮೇ.31: ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದಂತೆ, ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾರ್ಯಾರು ಸಚಿವ ಸ್ಥಾನಗಳನ್ನು ಪಡೆಯಲಿದ್ದಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಯಾರ್ಯಾರು ಸಚಿವರಾಗುತ್ತಾರೆ ಅದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ಬಗ್ಗೆ ನನಗೆ ಇನ್ನು ಮಾಹಿತಿ ಇಲ್ಲ” ಎಂದು ಪುನರುಚ್ಚರಿಸಿದ್ದಾರೆ….

Read More

IPL 2026: ಐಪಿಎಲ್ 2026 ರ ಸಮಾರೋಪ ಸಮಾರಂಭಕ್ಕೆ ಬಿಸಿಸಿಐ ಭರ್ಜರಿ ತಯಾರಿ

2026 ರ ಮೇ 31 ರಂದು ನಡೆಯಲಿರುವ ಫೈನಲ್ (IPL 2026) ಪಂದ್ಯದೊಂದಿಗೆ 19ನೇ ಆವೃತ್ತಿಯ ಐಪಿಎಲ್​ಗೆ ತೆರೆ ಬೀಳಲಿದೆ. ಈ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ಈ ಹೈ-ವೋಲ್ಟೇಜ್ ಫೈನಲ್ ಪಂದ್ಯವನ್ನು ಇನ್ನಷ್ಟು ವಿಶೇಷಗೊಳಿಸಲು ಬಿಸಿಸಿಐ ಕೂಡ ಸಮಾರೋಪ ಸಮಾರಂಭವನ್ನು (IPL 2026 Closing Ceremony) ಪ್ರತಿ ಬಾರಿಯಂತೆ ಈ ಬಾರಿಯೂ ಆಯೋಜಿಸಲಿದೆ ಎಂದು…

Read More

RCB ಫೈನಲ್ ಮ್ಯಾಚ್: ಇಂದು ರಾತ್ರಿಯಿಂದಲೇ ಬೆಂಗಳೂರಿನ ಈ ಪ್ರಮುಖ ಫ್ಲೈಓವರ್‌ಗಳು ಬಂದ್!

ಬೆಂಗಳೂರು, ಮೇ 31: ಐಪಿಎಲ್​ನ (IPL) ಮಹಾಯುದ್ಧ ಫೈನಲ್ ಹಂತ ತಲುಪಿದೆ. ಇಂದು ಗುಜರಾತ್​ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​​ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವೆ 2ನೇ ಟ್ರೋಫಿಗಾಗಿ ಜಿದ್ದಾಜಿದ್ದಿನ ಕಾದಾಟ ನಡೆಯಲಿದೆ. ಸದ್ಯ ನಗರದಲ್ಲಿ ಜನರ ಕ್ರೇಜ್​ ಜೋರಾಗಿದೆ. ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಫೈನಲ್ ಪಂದ್ಯಾವಳಿ ಹಿನ್ನೆಲೆ ಸಂಭ್ರಮಾಚರಣೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರು ಸಂಚಾರ ಪೊಲೀಸರು ನಗರದ ಕೆಲ ಫ್ಲೈಓವರ್​ಗಳಲ್ಲಿ ವಾಹನ ಸಂಚಾರ (Traffic advisory) ನಿರ್ಬಂಧಿಸಿದ್ದಾರೆ. ಮುಖ್ಯಾಂಶಗಳು ಐಪಿಎಲ್ ಫೈನಲ್…

Read More

‘ನಮಗೆ ಬೇಕಾದ್ದು ದಕ್ಕದೇ ಹೋದರೆ ಬೇರೆ ಮಾರ್ಗದಲ್ಲಿ ಕೊನೆಗಾಣಿಸಬೇಕಾಗುತ್ತದೆ’- ಇರಾನ್​ಗೆ ಟ್ರಂಪ್ ವಾರ್ನಿಂಗ್

ವಾಷಿಂಗ್ಟನ್, ಮೇ 31: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ದೇಶಕ್ಕೆ ತೀವ್ರ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ. ಪಶ್ಚಿಮ ಏಷ್ಯಾ ಬಿಕ್ಕಟ್ಟು ತೀವ್ರಗೊಂಡಿರುವ ಈ ಸಂದರ್ಭದಲ್ಲಿ, ಶಾಂತಿ ಒಪ್ಪಂದದ ನಿಯಮಗಳನ್ನು ಕಠಿಣಗೊಳಿಸಿರುವ ಟ್ರಂಪ್, “ನಾವು ಅಂದುಕೊಂಡಿದ್ದು ನಮಗೆ ಸಿಗದಿದ್ದರೆ, ನಾವು ಬೇರೆ ಮಾರ್ಗದಲ್ಲೇ ಇದನ್ನು ಕೊನೆಗಾಣಿಸುತ್ತೇವೆ” ಎಂದು ನೇರ ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಮಧ್ಯವರ್ತಿಗಳ ಮೂಲಕ ನಡೆಯುತ್ತಿರುವ ಶಾಂತಿ ಒಪ್ಪಂದದ ಕರಡು ಪ್ರತಿಯನ್ನು (Draft MoU) ಶ್ವೇತಭವನದ ಸಿಚುಯೇಷನ್…

Read More

IPL 2026 Final: ಆರ್​ಸಿಬಿಗೆ 5ನೇ ಫೈನಲ್; ಕಳೆದ 4 ಫೈನಲ್​ಗಳಲ್ಲಿ ಕೊಹ್ಲಿ ಪ್ರದರ್ಶನ ಹೇಗಿತ್ತು?

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸತತ ಎರಡನೇ ಬಾರಿಗೆ ಟ್ರೋಫಿಗೆ ಮುತ್ತಿಡುವ ಹಾದಿಯಲ್ಲಿದೆ. ರಜತ್ ಪಾಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಬೇಕೆಂದರೆ ತಂಡದಿಂದ ಸಾಂಘಿಕ ಪ್ರದರ್ಶನ ಮೂಡಿಬರಬೇಕು. ಅದರಲ್ಲೂ ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ (Virat Kohli) ಈ ನಿರ್ಣಾಯಕ…

Read More

ಜೂ.1ರಿಂದ ಆ. 31ರವರೆಗೆ ದಾಂಡೇಲಿಗೆ ನೋ ಎಂಟ್ರಿ; ಸ್ಕೂಬಾ ಡೈವಿಂಗ್, ರ್ಯಾಫ್ಟಿಂಗ್‌ಗೆ ಬ್ರೇಕ್ ಹಾಕಿದ ಉತ್ತರ ಕನ್ನಡ ಡಿಸಿ

ಕಾರವಾರ, ಮೇ.31 : ಮಳೆಗಾಲದ ಆರಂಭ ಹಾಗೂ ಸಮುದ್ರದಲ್ಲಿನ ಪ್ರಕ್ಷುಬ್ಧ ವಾತಾವರಣದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ (ಜೂನ್ 1) ಅನ್ವಯವಾಗುವಂತೆ ಮುಂದಿನ ಮೂರು ತಿಂಗಳ ಕಾಲ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳನ್ನು (Water Sports) ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮಳೆಗಾಲದಲ್ಲಿ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಯ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗಿದೆ. ಜೂನ್ 1 ರಿಂದ ಆಗಸ್ಟ್…

Read More

ತೆಲುಗು ಚಿತ್ರರಂಗವ ಕೊಂಡಾಡಿ, ದೀಪಿಕಾ ಪಡುಕೋಣೆಗೆ ಟಾಂಗ್ ಕೊಟ್ಟ ಜಾನ್ಹವಿ

ಜಾನ್ಹವಿ ಕಪೂರ್ (Janhvi Kapoor) ಬಾಲಿವುಡ್​​ನ ಜನಪ್ರಿಯ ಯುವನಟಿ. ದೊಡ್ಡ ಹಿಟ್ ಇಲ್ಲದೇ ಹೋದರು ಒಂದರ ಹಿಂದೊಂದು ಅವಕಾಶಗಳ ಬಾಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದಕ್ಷಿಣದ ಚಿತ್ರರಂಗದಲ್ಲಿಯೂ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ಜೂ ಎನ್​​ಟಿಆರ್ ಜೊತೆಗೆ ‘ದೇವರ’ ಸಿನಿಮಾನಲ್ಲಿ ನಟಿಸಿರುವ ಜಾನ್ಹವಿ ಇದೀಗ ರಾಮ್ ಚರಣ್ ಜೊತೆಗೆ ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದಾರೆ. ‘ಪೆದ್ದಿ’ ಸಿನಿಮಾ ಪ್ರಚಾರದಲ್ಲಿರುವ ನಟಿ ಜಾನ್ಹವಿ ಕಪೂರ್, ಇದೀಗ ತೆಲುಗು ಚಿತ್ರರಂಗದಲ್ಲಿರುವ ವೃತ್ತಿಪರತೆ, ಸಮಯ ಪಾಲನೆ ಇನ್ನಿತರೆ ವಿಷಯಗಳನ್ನು ಕೊಂಡಾಡಿದ್ದಾರೆ. ಆ ಮೂಲಕ ಪರೋಕ್ಷವಾಗಿ ದೀಪಿಕಾ ಪಡುಕೋಣೆಗೆ…

Read More

ಚಿಕ್ಕಬಳ್ಳಾಪುರ: ಸರಣಿ ಅಪಘಾತದಲ್ಲಿ ಐವರು ಸಾವು; 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿಕ್ಕಬಳ್ಳಾಪುರ, ಮೇ 31: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಭೀಕರ ಸರಣಿ ಅಪಘಾತ (Accident) ಸಂಭವಿಸಿದ್ದು, ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ವೇಗವಾಗಿ ಬಂದ ಥಾರ್ ಕಾರು…

Read More

Vastu Tips: ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿImage Credit source: Pinterest ಇತ್ತೀಚಿನ ದಿನಗಳಲ್ಲಿ ಸಭೆ-ಸಮಾರಂಭಗಳು, ಹುಟ್ಟುಹಬ್ಬ ಅಥವಾ ಗೃಹಪ್ರವೇಶದಂತಹ ಶುಭ ಸಂದರ್ಭಗಳಲ್ಲಿ ಸ್ನೇಹಿತರಿಗೆ ಮತ್ತು ಆಪ್ತರಿಗೆ ಸುಂದರವಾದ ಗಿಡಗಳನ್ನು ಉಡುಗೊರೆಯಾಗಿ (Green Gifting) ನೀಡುವುದು ಒಂದು ದೊಡ್ಡ ಟ್ರೆಂಡ್ ಆಗಿದೆ. ಗಿಡಗಳನ್ನು ನೀಡುವುದು ಪರಿಸರ ಮತ್ತು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದೇ ಆದರೂ, ವಾಸ್ತು ಶಾಸ್ತ್ರದ ಪ್ರಕಾರ ಕೆಲವು ಗಿಡಗಳನ್ನು ಇತರರಿಗೆ ಗಿಫ್ಟ್ ಆಗಿ ನೀಡುವುದು ಅಥವಾ ಇತರರಿಂದ ಪಡೆದುಕೊಳ್ಳುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಇಂತಹ…

Read More

ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ

ಕನ್ನಡ ಚಿತ್ರರಂಗದ ತಾರಾ ಜೋಡಿ ವಸಿಷ್ಠ ಸಿಂಹ (Vasishta Simha) ಮತ್ತು ಹರಿಪ್ರಿಯ. ಇತ್ತೀಚೆಗಷ್ಟೆ ಈ ದಂಪತಿಗೆ ಗಂಡು ಮಗು ಜನಿಸಿದೆ. ಇದೀಗ ಈ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಗು ಜನಿಸಿದ ಮೇಲೆ ಹರಕೆ ತೀರಿಸಲೆಂದು ದೇವಾಲಯಕ್ಕೆ ಈ ದಂಪತಿ ಭೇಟಿ ನೀಡಿದ್ದರು. ಕೃಷ್ಣ, ಮುಖ್ಯಪ್ರಾಣ ದರ್ಶನ ಪಡೆದ ವಸಿಷ್ಠ, ಹರಿಪ್ರಿಯ. ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದ ಪಡೆದ ದಂಪತಿ. ಮಗನಿಗೆ ಕೃಷ್ಣ, ಮುಖ್ಯ ಪ್ರಾಣ ದರ್ಶನ ಮಾಡಿದರು. ಬಳಿಕ ಹರಕೆ…

Read More