ಹುಬ್ಬಳ್ಳಿ, (ಏಪ್ರಿಲ್ 03): ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ (Hubballi Love Jihad Case) ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಜಿಮ್ ಟ್ರೈನರ್ (Gym Trainer) ಸಮೀರ್ ನ ಕಾಮುಕ ಮುಖ ಬಿಚ್ಚಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು, ಬೊಬೈಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದಾಗ ಸಮೀರ್ ಮತ್ತಷ್ಟು ಬಂಡಾಳ ಬಟಾಬಯಲಾಗಿದೆ. ಸಮೀರ್ನ ಮೊಬೈಲ್ನಲ್ಲಿ ಬೇರೆ ಬೇರೆ ಯುವತಿಯ ಜತೆ ಇದ್ದ ಫೋಟೋಗಳು ಪತ್ತೆಯಾಗಿವೆ. ಅಲ್ಲದೇ ಗರ್ಭನಿರೋಧಕ ಮಾತ್ರೆ ಫೋಟೋ ಸಹ ಸಿಕ್ಕಿದೆ. ಇನ್ನು ಸಮೀರ್ ತನ್ನ ಅರೆಬೆತ್ತಲೆ ಫೋಟೋಗಳನ್ನ ಯುವತಿಯರಿಗೆ ಕಳುಹಿಸುತ್ತಿದ್ದನಂತೆ. ಈ ಸಂಬಂಧ ಪೊಲೀಸ್ ತನಿಖೆ ಚುರುಕುಗೊಳಡಿಸಿದ್ದಾರೆ.
ಹೈದರಾಬಾದ್, ಏಪ್ರಿಲ್ 3: ತೆಲಂಗಾಣದಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಮತ್ತೊಂದು ಬಾರಿ ಗರ್ಭಿಣಿಯಾಗಿದ್ದ (Pregnant Death) ಹೆಂಡತಿ ಈ ಬಾರಿಯೂ ಹೆಣ್ಣುಮಗುವನ್ನೇ ಹೆರುತ್ತಾಳೆ ಎಂಬ ಭಯದಿಂದ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ, ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಆ ಬಳಿಕ ಇದೊಂದು ಆಕಸ್ಮಿಕ ಸಾವು ಎಂದು ಎಲ್ಲರನ್ನೂ ನಂಬಿಸಿದ್ದಾನೆ. ಆದರೂ ಮೃತ ಮಹಿಳೆಯ ಕುಟುಂಬಸ್ಥರ ಅನುಮಾನದಿಂದಾಗಿ ಆತ ಸಿಕ್ಕಿಹಾಕಿಕೊಂಡಿದ್ದಾನೆ. ತೆಲಂಗಾಣದ ಹನ್ಮಕೊಂಡ ಜಿಲ್ಲೆಯ ಐನವೊಲು ಮಂಡಲದ ಪುನ್ನೇಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅಜರುದ್ದೀನ್ ಎಂಬ ವ್ಯಕ್ತಿಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳಿದ್ದರು. ಅವರ ಪತ್ನಿ ಗರ್ಭಿಣಿಯಾಗಿದ್ದರು. ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದುದರಿಂದ ಈ ಬಾರಿಯೂ ಹೆಣ್ಣುಮಗುವಾಗುತ್ತದೆ ಎಂದು ಆತನಿಗೆ ಆತಂಕವಿತ್ತು. ಆಕೆ ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ್ದರಿಂದ ಆತನ ಭಯ ಹೆಚ್ಚಾಗಿತ್ತು. ಆಕೆಯ ಹೊಟ್ಟೆಯಲ್ಲಿರುವುದು ಹೆಣ್ಣು ಮಗುವೇ ಎಂಬ ಅನುಮಾನದಿಂದ ಆತ ಕೋಪಗೊಂಡಿದ್ದ.
ಎರಡು ಬಾರಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದರೂ ಆಕೆ ಒಪ್ಪಿರಲಿಲ್ಲ. ಅಜರುದ್ದೀನ್ ಮತ್ತು ಫರ್ಹತ್ ಅವರಿಗೆ ಉಮೇರಾ (8) ಮತ್ತು ಆಯೇಷಾ (6) ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ವಾರಂಗಲ್-ಖಮ್ಮಮ್ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗ್ರಾಮದ ಹೊರವಲಯದಲ್ಲಿರುವ ಈಜುಕೊಳವನ್ನು ನಿರ್ವಹಿಸುವ ಕೆಲಸವನ್ನು ಅಜರುದ್ದೀನ್ ಮಾಡುತ್ತಿದ್ದರು. ಅದೇ ಅವರ ಜೀವನಕ್ಕೆ ಆಧಾರವಾಗಿತ್ತು.
ವಿಚಿತ್ರ ಸಂಗತಿಯೆಂದರೆ, ಇಬ್ಬರು ಹೆಣ್ಣು ಮಕ್ಕಳ ಜನನದ ನಂತರ ಫರ್ಹತ್ ಮತ್ತೆ 2 ಬಾರಿ ಗರ್ಭಿಣಿಯಾಗಿದ್ದರು. ಆದರೆ ಎರಡೂ ಬಾರಿ ಆಕೆ ಇನ್ನೊಂದು ಹೆಣ್ಣು ಮಗುವಿಗೆ ಜನ್ಮ ನೀಡುತ್ತಾರೆ ಎಂಬ ಭಯದಿಂದ ಅಜರುದ್ದೀನ್ ಗರ್ಭಪಾತ ಮಾಡಿಸಿದ್ದ. ಅದಾದ 4 ವರ್ಷಗಳ ನಂತರ ಆಕೆ ಮತ್ತೆ ಗರ್ಭಿಣಿಯಾಗಿದ್ದರು. ಈ ಬಾರಿಯೂ ಹೆಣ್ಣುಮಗುವೇ ಆಗುತ್ತದೆ ಎಂದು ಅಜರುದ್ದೀನ್ಗೆ ಅನಿಸತೊಡಗಿತ್ತು. ಹೀಗಾಗಿ, ಮತ್ತೆ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದ. ಆದರೆ, ಈ ಬಾರಿ ಆಕೆ ಅದಕ್ಕೆ ಒಪ್ಪಿರಲಿಲ್ಲ. ಏನೇ ಆದರೂ ಈ ಮಗುವಿಗೆ ಜನ್ಮ ನೀಡುತ್ತೇನೆ ಎಂದು ಆಕೆ ಹಠ ಹಿಡಿದಿದ್ದರು. ಇದರಿಂದ ಆತ ಕೋಪಗೊಂಡಿದ್ದ.
ಬಳಿಕ ಆತ ತಾನು ಕೆಲಸ ಮಾಡುವ ಈಜುಕೊಳಕ್ಕೆ ತನ್ನ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಕರೆದೊಯ್ದು, ನೀರಿಗೆ ತಳ್ಳಿ ಕೊಲೆ ಮಾಡಿದ. ಇದಾದ ನಂತರ ಈ ಘಟನೆಯನ್ನು ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವುದಾಗಿ ಬಿಂಬಿಸಲು ಪ್ರಯತ್ನಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಮಗಳು ಮತ್ತು ಮೊಮ್ಮಕ್ಕಳ ಸಾವು ಸಹಜವಲ್ಲ ಎಂದು ಫರ್ಹತ್ನ ತಂದೆ ಅನುಮಾನ ವ್ಯಕ್ತಪಡಿಸಿ ಅಜರುದ್ದೀನ್ ವಿರುದ್ಧ ಆರೋಪ ಮಾಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ಅವನನ್ನು ವಿಚಾರಣೆಗಾಗಿ ವಶಕ್ಕೆ ಪಡೆದರ. ಆ ಸಮಯದಲ್ಲಿ ಆತ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ದೇವನಹಳ್ಳಿ, ಏಪ್ರಿಲ್ 03: ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಘಟನೆ ಬೆಂಗಳೂರುಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹೋದರ ವೆಂಕಟೇಶ್ ಮೇಲೆ ಇದ್ದ ಕೋಪಕ್ಕೆ ತಮ್ಮ ನಾರಾಯಣಸ್ವಾಮಿ ಈ ಕೃತ್ಯ ಎಸಗಿದ್ದು, ಆಸ್ತಿ ವಿಚಾರವಾಗಿ ಸಹೋದರರ ನಡುವೆ ಬಹು ಸಮಯದಿಂದ ಜಗಳ ನಡೆಯುತ್ತಿತ್ತು. ಈ ನಡುವೆ ತಾನು ಹೂಕೋಸು ಬೆಳೆದಿದ್ದ ಜಮೀನಿನಲ್ಲಿ ವೆಂಕಟೇಶ್ ಸಾಕಿದ್ದ ನಾಯಿ ಯಾವಾಗಲೂ ಸುತ್ತಾಡುತ್ತೆ ಎಂದು ಆರೋಪಿಸಿ ಸಹೋದರನ ಮನೆ ಬಳಿ ಬಂದ ನಾರಾಯಣಸ್ವಾಮಿ ಬಂದೂಕಿನಿಂದ ನಾಯಿಗೆ ಶೂಟ್ ಮಾಡಿದ್ದಾನೆ ಎನ್ನಲಾಗಿದೆ.
ಅಂದಹಾಗೆ ಇವರಿಬ್ಬರೂ ಮಲತಾಯಿ ಮಕ್ಕಳಾಗಿದ್ದು, ಇಬ್ಬರ ನಡುವೆ ಹಳೆಯ ದ್ವೇಷವಿತ್ತು. ನಾರಾಯಣಸ್ವಾಮಿ ಯಾವಾಗಲೂ ಅಣ್ಣ ವೆಂಕಟೇಶ್ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಮೊನ್ನೆಯೂ ಬೇಕು ಅಂತಾ ರಸ್ತೆಯಲ್ಲಿ ಹೋಗ್ತಿದ್ದ ನಾಯಿಗೆ ನಾರಾಯಣಸ್ವಾಮಿ ಕಲ್ಲು ಹೊಡೆದು ಓಡಿಸಿದ್ದಲ್ಲದೆ, ಅದರ ಮೇಲೆ ಫೈರಿಂಗ್ ಮಾಡಿದ್ದಾನೆ. ಪರಿಣಾಮ ಗುಂಡೇಟು ತಿಂದ ಸಾಕು ನಾಯಿ ಸ್ಥಳದಲ್ಲೇ ಜೀವ ಬಿಟ್ಟಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೃತ ನಾಯಿಯ ಶವ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಗಿದೆ. ಅಲ್ಲದೆ ಘಟನೆ ಬಗ್ಗೆ ವೆಂಕಟೇಶ್ ನೀಡಿದ ದೂರಿನ ಅನ್ವಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಇನ್ನು ಕೇಸ್ ದಾಖಲಾಗುತ್ತಿದ್ದಂತೆ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ನಾಯಿ ಮೇಲೆ ಶೂಟ್ ಮಾಡಿದ್ದ ಗುಂಡನ್ನ ವಶಕ್ಕೆ ಪಡೆದಿದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಾರಾಯಣಸ್ವಾಮಿ ಹಾಗೂ ಆತನ ಪತ್ನಿ ನಾಗಮ್ಮ ಮೇಲೆ FIR ದಾಖಲಾಗಿದ್ದು, ಸಹೋದರನ ಮೇಲಿನ ಸಿಟ್ಟಿಗೆ ಮೂಖ ಪ್ರಾಣಿಯನ್ನ ಕೊಂದ ಇಂತವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.
ಐಪಿಎಲ್ 2026 ರ ಏಳನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ತಮ್ಮ ತವರು ಮೈದಾನದಲ್ಲಿ ಎದುರಿಸುತ್ತಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ತಮ್ಮ ಮೊದಲ ಗೆಲುವಿನ ನಿರೀಕ್ಷೆಯನ್ನು ಕೊನೆಗೊಳಿಸಲು ಪ್ರಯತ್ನಿಸಿದರೆ, ಇತ್ತ ಪಂಜಾಬ್ ಕಿಂಗ್ಸ್ ತಂಡ ಸತತ ಎರಡನೇ ಪಂದ್ಯವನ್ನು ಗೆಲ್ಲ್ಲುವ ಇರಾದೆಯಲ್ಲಿದೆ.
ಬೆಂಗಳೂರು, (ಏಪ್ರಿಲ್ 03): ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ (santosh hegde) ಅವರು ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದುಬಿದ್ದಿದ್ದಾರೆ. ಬೆಂಗಳೂರಿನ (Bengaluru) ಮಹಾರಾಣಿ ಕಾಲೇಜಿನ ಸಮೀಪವಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂತೋಷ್ ಹೆಗ್ಡೆ ಅವರನ್ನು ಆಹ್ವಾನಿಸಲಾಗಿತ್ತು. ವೇದಿಕೆಯ ಮೇಲೆ ಡಯಾಸ್ ಬಳಿ ನಿಂತು ನೆರೆದಿದ್ದವರನ್ನು ಉದ್ದೇಶಿಸಿ ಮಾತಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ಕುರ್ಚಿ ಮೇಲೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲೇ ಕೆಳಗೆ ಕುಸಿದು ಬಿದ್ದಿದ್ದಾರೆ. ಕೂಡಲೂ ಸಂತೋಷ್ ಹೆಗ್ಡೆ ಅವರನ್ನು ಸ್ಫೀಕರ್ ಯುಟಿ ಖಾದರ್ ತಮ್ಮ ಕಾರಿನಲ್ಲಿ ಮಣಿಪಾಲ್ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಸಂತೋಷ್ ಹೆಗ್ಡೆ ಅವರಿಗೆ ಏಕಾಏಕಿ ಏನಾಯ್ತು? ಎನ್ನುವ ಬಗ್ಗೆ ಖಾದರ್ ಅವರು ಮಾಹಿತಿ ನೀಡಿದ್ದಾರೆ.
ಮೋಹನ್ ಲಾಲ್ (Mohan Lal) ನಟಿಸಿ ಜೀತು ಜೋಸೆಫ್ ನಿರ್ದೇಶನದ ಬಹುನಿರೀಕ್ಷಿತ ಮಲಯಾಳಂ ಚಿತ್ರ ‘ದೃಶ್ಯಂ’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಎರಡನೇ ಭಾಗ ‘ದೃಶ್ಯಂ 2’ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿ ಅದೂ ಸಹ ದೊಡ್ಡ ಹಿಟ್ ಆಯ್ತು. ಇದೀಗ ಸಿನಿಮಾದ ಮೂರನೇ ಭಾಗ ‘ದೃಶ್ಯಂ 3’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಅದರ ಬೆನ್ನಲ್ಲೆ ಅಮೆಜಾನ್ ಪ್ರೈಂ ಬಹಿರಂಗ ಎಚ್ಚರಿಕೆಯೊಂದನ್ನು ನೀಡಿದೆ. ಈ ಎಚ್ಚರಿಕೆಯನ್ನು ಅಮೆಜಾನ್ ಪ್ರೈಂ ಸಾರ್ವಜನಿಕವಾಗಿ ಹೊರಡಿಸಿದ್ದು, ಸಿನಿಮಾದ ಡಿಜಿಟಲ್ ಹಕ್ಕಿನ ಕುರಿತಾದ ಎಚ್ಚರಿಕೆ ಇದಾಗಿದೆ.
ಅಮೆಜಾನ್ ಸೆಲ್ಲರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಆಶೀರ್ವಾದ್ ಸಿನಿಮಾಸ್ ಮತ್ತು ತನ್ನ ನಡುವಿನ ಅಸ್ತಿತ್ವದಲ್ಲಿರುವ ಒಪ್ಪಂದಗಳ ಪ್ರಕಾರ, ‘ದೃಶ್ಯಂ 3’ ಚಿತ್ರದ ಎಲ್ಲಾ ರೀತಿಯ ಡಿಜಿಟಲ್ ಹಕ್ಕುಗಳು ತನಗೆ ಮಾತ್ರ ಸೇರಿವೆ ಎಂದು ಸ್ಪಷ್ಟಪಡಿಸಿದೆ. ಸಿನಿಮಾದ ಹಕ್ಕುಗಳನ್ನು ಅಮೆಜಾನ್ ಹೊರತುಪಡಿಸಿ ಬೇರೆ ಯಾರೂ ಹೊಂದಿಲ್ಲ. ಆಶೀರ್ವಾದ್ ಸಿನಿಮಾಸ್ ಅಥವಾ ಅದರ ಪ್ರತಿನಿಧಿಗಳಿಗೆ ಈ ಡಿಜಿಟಲ್ ಹಕ್ಕುಗಳನ್ನು ಬೇರೆಯವರಿಗೆ ಮಾರಾಟ ಮಾಡಲು ಅಥವಾ ಪರವಾನಗಿ ನೀಡಲು ಯಾವುದೇ ಅಧಿಕಾರವಿಲ್ಲ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.
ಅಮೆಜಾನ್ನ ಈ ಪ್ರತ್ಯೇಕ ಹಕ್ಕುಗಳನ್ನು ಉಲ್ಲಂಘಿಸಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಚಿತ್ರದ ಡಿಜಿಟಲ್ ಹಕ್ಕುಗಳಿಗೆ ಸಂಬಂಧಿಸಿದಂತೆ ವ್ಯವಹರಿಸಿದರೆ, ಅವರು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಮತ್ತು ಅದರಿಂದಾಗುವ ಹಾನಿಗೆ ಅವರೇ ಜವಾಬ್ದಾರರಾಗಿರುತ್ತಾರೆ ಎಂದು ಅಮೆಜಾನ್ ಎಚ್ಚರಿಸಿದೆ. ಆಶೀರ್ವಾದ್ ಸಿನಿಮಾಸ್ನ ಮಾಲೀಕ ಮತ್ತು ‘ದೃಶ್ಯಂ’ ಸಿನಿಮಾ ಸರಣಿಯ ನಿರ್ಮಾಪಕ ಆಂಟೋನಿ ಪೆರುಂಬವೂರ್ ಅವರು ಈ ನೋಟಿಸ್ಗೆ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ. ಆದರೆ, ಚಿತ್ರತಂಡವು ಅಮೆಜಾನ್ ಹೊರತುಪಡಿಸಿ ಇತರ ಡಿಜಿಟಲ್ ವೇದಿಕೆಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿರುವುದು ಈ ವಿವಾದಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
‘ದೃಶ್ಯಂ 3’ ಚಿತ್ರವು ಈ ಮೊದಲು ಏಪ್ರಿಲ್ 2 ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಕಾರಣದಿಂದಾಗಿ ಬಿಡುಗಡೆಯನ್ನು ಮುಂದೂಡಲಾಗಿದೆ. ಹೊಸ ಘೋಷಣೆಯಂತೆ, ಈ ಚಿತ್ರವು ಮೇ 21 ರಂದು ಮೋಹನ್ ಲಾಲ್ ಅವರ ಜನ್ಮದಿನದ ಅಂಗವಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಮೀನಾ, ಅನ್ಸಿಬಾ ಹಸನ್ ಮತ್ತು ಎಸ್ತರ್ ಅನಿಲ್ ಕೂಡ ತಮ್ಮ ಹಳೆಯ ಪಾತ್ರಗಳಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವು ‘ದೃಶ್ಯಂ’ ಸರಣಿಯ ಕೊನೆಯ ಭಾಗವಾಗಿದ್ದು, ಜಾರ್ಜ್ ಕುಟ್ಟಿಯ ಕಥೆ ಇಲ್ಲಿಗೆ ಮುಕ್ತಾಯವಾಗಲಿದೆ ಎಂದು ಹೇಳಲಾಗುತ್ತಿದೆ.
ನವದೆಹಲಿ, ಏಪ್ರಿಲ್ 3: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ತೈಲ ಮತ್ತು ಅನಿಲ ಪೂರೈಕೆ ಸ್ಥಗಿತಗೊಂಡಿದೆ. ಇದರಿಂದ ಭಾರತದ ಇಂಧನ ಕ್ಷೇತ್ರ ಒತ್ತಡಕ್ಕೆ ಸಿಲುಕಿದೆ. ರಷ್ಯಾದಿಂದ ಒಂದಷ್ಟು ತೈಲ ಪೂರೈಕೆಯಾಗುತ್ತಿರುವುದು ಸಮಾಧಾನದ ಸಂಗತಿ. ಆದರೆ, ಭಾರತದ ತೈಲ ಮತ್ತು ಅನಿಲದ ಅಗತ್ಯತೆ ಅಗಾಧವಾಗಿದೆ. ಹೀಗಾಗಿ, ಹೆಚ್ಚಿನ ಪ್ರಮಾಣದ ತೈಲ ಮತ್ತು ಅನಿಲವು ಭಾರತಕ್ಕೆ ನಿರಂತರವಾಗಿ ಸರಬರಾಜಾಗುವುದು ಅಗತ್ಯ. ಇದೇ ವೇಳೆ, ಭಾರತದ ನೆರವಿಗೆ ರಷ್ಯಾ ಮುಂದಾಗಿದೆ. ಭಾರತಕ್ಕೆ ತೈಲ ಮತ್ತು ಎಲ್ಎನ್ಜಿ (LNG) ಪೂರೈಕೆ ಹೆಚ್ಚಿಸಬಲ್ಲೆವು ಎಂದು ಹೇಳಿದೆ.
ರಷ್ಯಾದ ಮೊದಲ ಉಪಮುಖ್ಯಸ್ಥ ಡೆನಿಸ್ ಮಂಟುರೋವ್ (Denis Manturov) ಅವರು ಈ ಅಭಯ ಕೊಟ್ಟಿದ್ದಾರೆ. ರಷ್ಯನ್ ರಾಯಭಾರ ಕಚೇರಿ ಟೆಲಿಗ್ರಾಮ್ನಲ್ಲಿ ಈ ಹೇಳಿಕೆ ಬಿಡುಗಡೆ ಮಾಡಿದೆ. 2025ರಲ್ಲಿ ಭಾರತಕ್ಕೆ ಖನಿಜ ರಸಗೊಬ್ಬರಗಳ ಪೂರೈಕೆಯನ್ನು ಶೇ. 40ರಷ್ಟು ಹೆಚ್ಚಿಸಲಾಗಿದೆ. ಭಾರತದ ಅವಶ್ಯಕತೆ ಪೂರೈಸಲು ರಷ್ಯಾ ಸಿದ್ಧವಿದೆ ಎಂದು ಮಂಟುರೋವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಭಾರತದ ಮಾರುಕಟ್ಟೆಗೆ ತೈಲ ಮತ್ತು ಎನ್ಎನ್ಜಿ ಪೂರೈಕೆಯನ್ನು ಹೆಚ್ಚಿಸುವ ಸಾಮರ್ಥ್ಯ ರಷ್ಯನ್ ಕಂಪನಿಗಳಿಗೆ ಇದೆ. ಪರಮಾಣು ಇಂಧನ ಕ್ಷೇತ್ರದಲ್ಲಿ ಭಾರತ ಮತ್ತು ರಷ್ಯಾ ಪಾಲುದಾರಿಕೆ ಮತ್ತಷ್ಟು ಗಟ್ಟಿಯಾಗುತ್ತಿದೆ. ಕೂಡಂಕುಲಂ ಪರಮಾಣು ವಿದ್ಯುತ್ ಸ್ಥಾವರಗಳಿಗೆ ವಿದ್ಯುತ್ ಘಟಕಗಳನ್ನು ನಿರ್ಮಿಸುವ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ’ ಎಂದು ಡೆನಿಸ್ ಮಂಟುರೋವ್ ಹೇಳಿದ್ದಾರೆ.
ರಷ್ಯಾದ ಮೊದಲ ಡೆಪ್ಯುಟಿ ಛೇರ್ಮನ್ ಆದ ಡೆನಿಸ್ ಮಂಟುರೋವ್ ಅವರು ನಿನ್ನೆ ಮತ್ತು ಇವತ್ತು (ಏ. 3) ಭಾರತಕ್ಕೆ ಭೇಟಿ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗು ಇತರ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ.
ಭಾರತವು ನೈಸರ್ಗಿಕ ಅನಿಲ ಪೂರೈಕೆ ಜಾಲ ಬಲಪಡಿಸಲು ಮಗ್ನವಾಗಿದೆ. ಎಲ್ಎನ್ಜಿಯನ್ನು ಭಾರತದಲ್ಲಿ ಅನಿಲವಾಗಿ ಪರಿವರ್ತಿಸಿ ಪೈಪ್ಡ್ ಗ್ಯಾಸ್ ಆಗಿ ಮನೆ ಮನೆಗೆ ಪೂರೈಸಲಾಗುತ್ತದೆ. ಈ ಪಿಎನ್ಜಿ ಜಾಲ ಹೆಚ್ಚಿಸಲು ಯತ್ನಿಸಲಾಗುತ್ತಿದೆ.
ಬಾಲಿವುಡ್ನ ಖ್ಯಾತ ನಟ ಆರ್. ಮಾಧವನ್ ಅವರು ಈಗ ‘ಧುರಂಧರ್: ದಿ ರಿವೇಂಜ್’ (Dhurandhar The Revenge) ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರತಿಕ್ರಿಯೆಯನ್ನು ಖುದ್ದಾಗಿ ನೋಡಲು ಮಾಧವನ್ (R Madhavan) ಅವರು ಯಾರಿಗೂ ಗೊತ್ತಾಗದಂತೆ ಮುಂಬೈನ ಚಿತ್ರಮಂದಿರವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಸಿನಿಮಾದಲ್ಲಿ ಅವರು ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.
ಚಿತ್ರಮಂದಿರದಲ್ಲಿ ಸಾಮಾನ್ಯ ಪ್ರೇಕ್ಷಕರಂತೆ ಯಾರಿಗೂ ಗುರುತು ಸಿಗದ ರೀತಿಯಲ್ಲಿ ಕುಳಿತು ಆರ್. ಮಾಧವನ್ ಅವರು ‘ಧುರಂಧರ್ 2’ ಸಿನಿಮಾವನ್ನು ವೀಕ್ಷಿಸಿದ್ದಾರೆ. ಅಭಿಮಾನಿಗಳ ಶಿಳ್ಳೆ, ಚಪ್ಪಾಳೆ ಮತ್ತು ಸಿನಿಮಾದ ಸನ್ನಿವೇಶಗಳಿಗೆ ಪ್ರೇಕ್ಷಕರು ನೀಡುವ ಪ್ರತಿಕ್ರಿಯೆಯನ್ನು ಕಂಡು ಮಾಧವನ್ ಸಂಭ್ರಮಿಸಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
ಈ ಕುರಿತ ವಿಡಿಯೋವನ್ನು ಪ್ರಸಿದ್ಧ ಚಿತ್ರ ಪ್ರದರ್ಶಕ ಅಕ್ಷಯ್ ರಾಠಿ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮಾಧವನ್ ಅವರು ಅತ್ಯಂತ ಸರಳವಾಗಿ ಕುಳಿತು ಸಿನಿಮಾವನ್ನು ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದು.
ಅಕ್ಷಯ್ ರಾಠಿ ಅವರು ಮಾಧವನ್ ಅವರ ಫೋಟೋ ಹಂಚಿಕೊಂಡು, ಸಿನಿಮಾದಲ್ಲಿನ ಅವರ ಪಾತ್ರವನ್ನು ಉಲ್ಲೇಖಿಸಿ ತಮಾಷೆಯಾಗಿ ಬರೆದುಕೊಂಡಿದ್ದಾರೆ. ‘ISI ಏನೇ ಪ್ಲಾನ್ ಮಾಡಲಿ, ಅಜಯ್ ಸನ್ಯಾಲ್ (ಮಾಧವನ್ ಪಾತ್ರದ ಹೆಸರು) ಕಣ್ಣು ಸದಾ ಅವರ ಮೇಲೆ ಇರುತ್ತದೆ ಎಂದು ಅವರಿಗೆ ತಿಳಿಸಿ’ ಎಂದು ಕಿಚಾಯಿಸಿದ್ದಾರೆ. ನಂತರ ಮಾಧವನ್ ಅವರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಹಂಚಿಕೊಂಡು ತಮ್ಮ ಅನುಭವವನ್ನು ತಿಳಿಸಿದ್ದಾರೆ.
ಮಾರ್ಚ್ 19ರಂದು ಬಿಡುಗಡೆ ಆದ ‘ಧುರಂಧರ್ 2’ ಸಿನಿಮಾಗೆ ಆದಿತ್ಯ ಧರ್ ನಿರ್ದೇಶನ ಮಾಡಿದ್ದಾರೆ. ಇದು ‘ಧುರಂಧರ್’ ಚಿತ್ರದ ಸೀಕ್ವೆಲ್ ಆಗಿದ್ದು, ಎಲ್ಲ ಕಡೆಗಳಲ್ಲಿ ಹೌಸ್ಪುಲ್ ಪ್ರದರ್ಶನ ಕಂಡಿದೆ. ಇದರಿಂದಾಗಿ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆದಿದೆ. ಅಜಯ್ ಸನ್ಯಾಲ್ ಆಗಿ ಆರ್. ಮಾಧವನ್ ನಟಿಸಿದ್ದಾರೆ. ಜನರಿಂದ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದಕ್ಕೆ ಅವರು ಖುಷಿ ಆಗಿದ್ದಾರೆ.
ಕಾರವಾರ, (ಏಪ್ರಿಲ್ 03): ಎರಡು ಬಸ್ಗಳ ನಡುವೆ ಭೀಕರ ಅಪಘಾತ (Two Bus Accident) ಸಂಭವಿಸಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆ ಶಿರಸಿ (sirsi) ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್ನಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆ, ಏಪ್ರಿಲ್ 03: ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್ಗೆ ತೀವ್ರ ತೊಂದರೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಅದು ಕೇಂದ್ರದ ಸಮಸ್ಯೆ, ಅಗತ್ಯಕ್ಕೆ ತಕ್ಕಂತೆ ಪೂರೈಸುತ್ತಿಲ್ಲ. ಹೀಗಿರುವಾಗ ಕೇಂದ್ರದವರು ಪೂರೈಸುತ್ತಿಲ್ಲ ಎಂದು ಹೇಳುವುದನ್ನು ಬಿಟ್ಟು, ಸಚಿವರು ಕೇಂದ್ರ ಸರ್ಕಾರದ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದಾರೆ. ಆಟೋ ಚಾಲಕರು ಬಂಕ್ಗಳಲ್ಲಿಯೇ ಮಲಗುತ್ತಿದ್ದು, ಅವರೆಲ್ಲ ರಾಜ್ಯ ಸರ್ಕಾರವೇ ಸಿಲಿಂಡರ್ ಪೂರೈಸ್ತಿದೆ ಎಂದು ತಿಳಿದಿದ್ದಾರೆ. ಹೀಗಾಗಿ ಹಿರಿಯ ಸಚಿವ, ಏಳು ಸಲ ಸಂಸದರಾಗಿದ್ದ ಮುನಿಯಪ್ಪ ಅವರು ಬಾಯಿ ಮುಚ್ಚಿಕೊಂಡು ಇದ್ದರೆ ಚಂದ. ನಾನು ದಯಮಾಡಿ ಕೈಮುಗಿದು ಬೇಡಿಕೊಳ್ಳುವೆ, ಪದೇಪದೆ ಸಭೆ ಮಾಡುವುದು ನಿಲ್ಲಿಸಿ ಎಂದು ಲಕ್ಷ್ಮಣ್ ಹೇಳಿದ್ದಾರೆ.