IPL 2026 Final: ಮೋದಿ ಮೈದಾನದಲ್ಲಿ ಕೊಹ್ಲಿ- ಗಿಲ್ ದಾಖಲೆ ಹೇಗಿದೆ?

ಐಪಿಎಲ್ 2026 ರ ಫೈನಲ್ (IPL 2026 Final ) ಪಂದ್ಯ ಮೇ 31 ರಂದು ಅಂದರೆ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಆತಿಥೇಯ ಗುಜರಾತ್ ತಂಡವನ್ನು ಎದುರಿಸಲಿದ್ದು, ಎರಡೂ ತಂಡಗಳು ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೊಂದಿವೆ. ಅಂದರೆ ಉಭಯ ತಂಡಗಳು ಈಗಾಗಲೇ ತಲಾ ಒಮ್ಮೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿವೆ. ಇದೀಗ ಈ ಫೈನಲ್ ಪಂದ್ಯವನ್ನು ಆರ್‌ಸಿಬಿ ಗೆದ್ದರೆ, ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಲಿದೆ. ಇತ್ತ ಗುಜರಾತ್ ಗೆದ್ದರೆ, 2022 ರ ನಂತರ ಮತ್ತೆ ಪ್ರಶಸ್ತಿಯನ್ನು ಎತ್ತಿಹಿಡಿಯಲಿದೆ.

ಗಿಲ್- ಕೊಹ್ಲಿ ಪ್ರದರ್ಶನ

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪೈನಲ್ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಆರ್‌ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಗುಜರಾತ್ ನಾಯಕ ಗಿಲ್ ಮೇಲೆ ಇರುತ್ತವೆ. ಏಕೆಂದರೆ ಇವರಿಬ್ಬರು ಕ್ರೀಸ್​ನಲ್ಲಿ ನೆಲ ಕಚ್ಚಿ ನಿಂತರೆ ತಂಡಗಳಿಗೆ ಗೆಲುವು ತಂದುಕೊಡುವ ಸಾಮರ್ಥ್ಯ ಹೊಂದಿದ್ದಾರೆ. ಇದು ಈ ಬಾರಿಯ ಐಪಿಎಲ್‌ನಲ್ಲಿ ಎಷ್ಟೋ ಬಾರಿ ಸಾಭೀತಾಗಿದೆ. ಹೀಗಾಗಿ ಉಭಯ ತಂಡಗಳ ಅಭಿಮಾನಿಗಳು ಇವರಿಬ್ಬರು ಒಂದೊಳ್ಳೆ ಇನ್ನಿಂಗ್ಸ್ ಆಡಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

1374 ರನ್ ಬಾರಿಸಿರುವ ಗಿಲ್

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಭ್​ಮನ್ ಗಿಲ್ ಅವರ ಐಪಿಎಲ್ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಗಿಲ್ ಈ ಮೈದಾನದಲ್ಲಿ ಇದುವರೆಗೆ ಆಡಿರುವ 31 ಐಪಿಎಲ್ ಇನ್ನಿಂಗ್ಸ್‌ಗಳಲ್ಲಿ 49.07 ರ ಸರಾಸರಿ ಮತ್ತು 163 ರ ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 1374 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಗಿಲ್ 3 ಶತಕಗಳು ಮತ್ತು 7 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ ಗಿಲ್ ಈ ಮೈದಾನದಲ್ಲಿ 132 ಬೌಂಡರಿಗಳು ಮತ್ತು 54 ಸಿಕ್ಸರ್‌ಗಳನ್ನು ಸಹ ಹೊಡೆದಿದ್ದಾರೆ.

ಕೊಹ್ಲಿ ಪ್ರದರ್ಶನ ಹೇಗಿದೆ?

ಇತ್ತ ಅಹಮದಾಬಾದ್‌ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಈ ಮೈದಾನದಲ್ಲಿ ಇದುವರೆಗೆ ಎಂಟು ಇನ್ನಿಂಗ್ಸ್‌ಗಳನ್ನಾಡಿರುವ ಕೊಹ್ಲಿ 48.33 ಸರಾಸರಿ ಮತ್ತು ಸುಮಾರು 135 ಸ್ಟ್ರೈಕ್ ರೇಟ್‌ನಲ್ಲಿ 290 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕಗಳು ಸೇರಿದ್ದು, ಅವರ ಅತ್ಯಧಿಕ ಸ್ಕೋರ್ ಅಜೇಯ 70 ರನ್ ಆಗಿದೆ. ಕೊಹ್ಲಿ ಇಲ್ಲಿ ಗಿಲ್‌ನಷ್ಟು ಪಂದ್ಯಗಳನ್ನು ಆಡಿಲ್ಲ, ಆದರೆ ಅವರು ಇಲ್ಲಿ ಆಡಿದ ಪಂದ್ಯಗಳು ವಿಶೇಷವಾಗಿವೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ಆಟಗಾರರು ಮಿಂಚುವ ಅವಕಾಶವಿದೆ. ಅಂತಿಮವಾಗಿ ಯಾರು ತಂಡಕ್ಕೆ ಜಯ ತಂದುಕೊಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಿನ್ನ ಜೀವನ ನಡೆಯೋದೇ ನಮ್ಮಿಂದ!’: ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ

ಬೆಂಗಳೂರು, ಮೇ,31: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಥಳೀಯರು ಹಾಗೂ ಪರಭಾಷಿಕರ ನಡುವಿನ ಭಾಷಾ ಸಂಘರ್ಷ ಮತ್ತು ದರ್ಪದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಆಟೋ ಪ್ರಯಾಣದ ವೇಳೆ ಹೆಚ್ಚಿನ ಲಗೇಜ್ ತಂದಿದ್ದನ್ನು ಪ್ರಶ್ನಿಸಿದ ಆಟೋ ಡ್ರೈವರ್ ಒಬ್ಬನ ಮೇಲೆ ಮಹಿಳೆ ಸೇರಿದಂತೆ ನಾಲ್ವರು ಹಿಂದಿ ಭಾಷೆಯಲ್ಲಿ ನಿಂದಿಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಒಟ್ಟಾಗಿ ಪ್ರಯಾಣಿಸಲು ಆಟೋ ಬುಕ್ ಮಾಡಿದ್ದರು. ಆದರೆ, ಅವರು ನಿಯಮಕ್ಕಿಂತ ಅತಿ ಹೆಚ್ಚಿನ ಲಗೇಜ್ ಹೊಂದಿದ್ದ ಹಿನ್ನೆಲೆಯಲ್ಲಿ, “ಇಷ್ಟೊಂದು ಲಗೇಜ್ ಮತ್ತು ನಾಲ್ಕು ಜನ ಪ್ರಯಾಣಿಕರು ಆಟೋದಲ್ಲಿ ಹಿಡಿಸುವುದಿಲ್ಲ” ಎಂದು ಆಟೋ ಚಾಲಕ ಅತ್ಯಂತ ವಿನಮ್ರವಾಗಿ ಹೇಳಿದ್ದಾರೆ. ಇದಕ್ಕೆ ಕೆರಳಿದ ಮಹಿಳೆ ಮತ್ತು ಆಕೆಯ ಜೊತೆಗಿದ್ದವರು ರಸ್ತೆಯಲ್ಲೇ ಮನಬಂದಂತೆ ನಿಂದಿಸಲು ಆರಂಭಿಸಿದ್ದಾರೆ. ಮಹಿಳೆ ಆಟೋ ಚಾಲಕನಿಗೆ ತೀವ್ರವಾಗಿ ನಿಂದಿಸುತ್ತಾ, “ಇದೇನು ನಿನ್ನ ಅಪ್ಪನ ರಸ್ತೆಯೇ? ನೀವೆಲ್ಲಾ ನಮ್ಮ ದುಡ್ಡಿನಿಂದಲೇ ಬದುಕುತ್ತಿರೋದು! ನಾನು ಆಟೋ ಬುಕ್ ಮಾಡಿದರೆ ಮಾತ್ರ ನಿನ್ನ ಜೀವನ ನಡೆಯುತ್ತದೆ” ಎಂದು ಅತ್ಯಂತ ಕೀಳಾಗಿ ಮಾತನಾಡಿದ್ದಾರೆ. ಅಷ್ಟಕ್ಕೇ ನಿಲ್ಲಿಸದ ಆಕೆ, ಸ್ಥಳೀಯ ಭಾಷೆಯ ಗಂಧ-ಗಾಳಿಯಿಲ್ಲದೆ “ನನ್ನ ಜೊತೆ ಹಿಂದಿಯಲ್ಲೇ ಮಾತನಾಡು” ಎಂದು ಆಟೋ ಚಾಲಕನಿಗೆ ದರ್ಪದಿಂದ ಅವಾಜ್ ಹಾಕಿದ್ದಾರೆ.

ಬಡ ಆಟೋ ಚಾಲಕ ತನಗಾದ ಅನ್ಯಾಯ ಮತ್ತು ನಿಂದನೆಯನ್ನು ಮೊಬೈಲ್‌ನಲ್ಲಿ ವೀಡಿಯೊ ರೆಕಾರ್ಡ್ ಮಾಡಿಕೊಂಡಿದ್ದು, ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೀಡಿಯೊ ವೀಕ್ಷಿಸಿದ ಕನ್ನಡಿಗರು ಮತ್ತು ನೆಟ್ಟಿಗರು ಪರಭಾಷಿಕರ ಈ ಉದ್ಧಟತನ ಹಾಗೂ ಭಾಷಾ ಅಹಂಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. “ಬೆಂಗಳೂರಿಗೆ ಬಂದು ಇಲ್ಲಿನ ಬಡ ದುಡಿಮೆಗಾರರ ಮೇಲೆ ಇಂತಹ ದರ್ಪ ತೋರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಮೆಂಟ್ ಮಾಡುತ್ತಿದ್ದು, ಪೊಲೀಸರು ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದುಬಿಟ್ಟಿದ್ದರು ಶಿವಣ್ಣ: ಕಾರಣ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಭಾರಿ ಬಜೆಟ್​ನ ಸಿನಿಮಾ ಇದಾಗಿದ್ದು, ರಾಮ್ ಚರಣ್ ಸೇರಿದಂತೆ ಇಡೀ ಚಿತ್ರತಂಡ ದೇಶದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರ ಮಾಡುತ್ತಿದೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಪ್ರಮುಖವಾದ ಪಾತ್ರ ಮಾಡಿದ್ದಾರೆ. ಶಿವಣ್ಣನ ಪಾತ್ರದ ಬಗ್ಗೆ ಮಾತನಾಡಿದ್ದ ರಾಮ್ ಚರಣ್ ಅದೊಂದು ಅದ್ಭುತವಾದ ಪಾತ್ರ, ಶಿವಣ್ಣ ಅದಕ್ಕೆ ಅತ್ಯಂತ ಸೂಕ್ತ ವ್ಯಕ್ತಿ ಎಂದಿದ್ದರು. ಆದರೆ ಶಿವರಾಜ್ ಕುಮಾರ್ ಅವರು ‘ಪೆದ್ದಿ’ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದುಬಿಟ್ಟಿದ್ದರಂತೆ. ಕಾರಣವೇನು?

‘ಪೆದ್ದಿ’ ಸಿನಿಮಾದ ಆಫರ್ ಮೊದಲು ಬಂದಾಗ ಶಿವಣ್ಣ ಖುಷಿಯಿಂದಲೇ ಒಪ್ಪಿಕೊಂಡಿದ್ದರು. ಆದರೆ ಆಫರ್ ಬಂದ ಕೆಲ ದಿನಗಳಲ್ಲಿಯೇ ಶಿವಣ್ಣನಿಗೆ ಅನಾರೋಗ್ಯ ಕಾಡಲು ಶುರುವಾಯ್ತು. ಈ ಬಗ್ಗೆ ಚೆನ್ನೈನಲ್ಲಿ ಮಾತನಾಡಿರುವ ಶಿವರಾಜ್ ಕುಮಾರ್, ‘ನನಗೆ ಮೊದಲು ಬುಚ್ಚಿಬಾಬು ಕತೆ ಹೇಳಿದಾಗ ಬಹಳ ಇಷ್ಟವಾಯ್ತು. ಅದೇ ದಿನ ನಾನು ರಾಮ್ ಚರಣ್ ಜೊತೆ ಸಹ ಮಾತನಾಡಿ, ಸಿನಿಮಾನಲ್ಲಿ ನಟಿಸುವೆನೆಂದು ಸಹ ಹೇಳಿದ್ದೆ. ಆದರೆ ಆ ನಂತರ ನನಗೆ ಕ್ಯಾನ್ಸರ್ ಇರುವುದು ಗೊತ್ತಾಯ್ತು. ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಬೇಕಾಯ್ತು’ ಎಂದಿದ್ದಾರೆ ಶಿವರಾಜ್ ಕುಮಾರ್.

‘ಅಮೆರಿಕದಲ್ಲಿ ಚಿಕಿತ್ಸೆ ತಡವಾಗುತ್ತದೆ, ವಿಶ್ರಾಂತಿಗೆಲ್ಲ ಸಮಯ ಬೇಕಾಗುತ್ತದೆ ಎಂದಾದಾಗ ನಾನು ನಿರ್ದೇಶಕ ಬುಚ್ಚಿಬಾಬು ಬಳಿ ಮಾತನಾಡಿದೆ, ಕಷ್ಟವಾಗುತ್ತದೆ ನಾನು ನಟಿಸುವುದಿಲ್ಲ, ನೀವು ಬೇರೆಯವರನ್ನು ನೋಡಿಕೊಳ್ಳಿ ಎಂದೆ. ಆದರೆ ಬುಚ್ಚಿಬಾಬು ಒಪ್ಪಲಿಲ್ಲ, ನಾವು ನಿಮಗಾಗಿ ಕಾಯುತ್ತೇವೆ. ನಮಗೆ ನೀವೇ ಬೇಕು ಎಂದರು. ಮಾತ್ರವಲ್ಲದೆ ನನಗಾಗಿ ಅವರು ಬಹಳ ಸಮಯ ಕಾದರು ಸಹ. ಇದಕ್ಕೆ ನಾನು ಬುಚ್ಚಿಬಾಬು ಸನಾ ಅವರಿಗೆ ಆಭಾರಿ ಆಗಿದ್ದೇನೆ’ ಎಂದಿದ್ದಾರೆ ಶಿವಣ್ಣ. 2024 ರಲ್ಲಿ ಶಿವರಾಜ್ ಕುಮಾರ್ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಯ್ತು, ಅಮೆರಿಕದ ಮಿಯಾಮಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯ್ತು. ಬಳಿಕ ಅವರು ಸಂಪೂರ್ಣವಾಗಿ ಗುಣವಾದರು.

ಇದನ್ನೂ ಓದಿ:ಚೆನ್ನೈನಲ್ಲಿ ‘ಪೆದ್ದಿ’ ಪ್ರಚಾರಕ್ಕೆ ಬಂದ ರಾಮ್ ಚರಣ್: ವಿಡಿಯೋ

ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ವಾಪಸ್ಸಾಗಿ ಕೆಲ ವಾರಗಳ ಬಳಿಕ ಬುಚ್ಚಿಬಾಬು ಸನಾ ಶಿವಣ್ಣನ ಮನೆಗೆ ಬಂದು ಮೇಕಪ್ ಟೆಸ್ಟ್ ಮಾಡಿದ್ದರು. ಕ್ಯಾನ್ಸರ್ ಚಿಕಿತ್ಸೆಯ ಬಳಿಕ ಶಿವಣ್ಣ ಮೊದಲು ಮೇಕಪ್ ಧರಿಸಿದ್ದು ‘ಪೆದ್ದಿ’ ಸಿನಿಮಾಕ್ಕಾಗಿಯೇ. ಅದಾದ ನಂತರ ಶಿವಣ್ಣ ‘ಪೆದ್ದಿ’ ಸಿನಿಮಾದ ಶೂಟಿಂಗ್​​ನಲ್ಲಿ ಭಾಗಿ ಆದರು. ‘ಪೆದ್ದಿ’ ಸಿನಿಮಾನಲ್ಲಿ ಶಿವಣ್ಣ ಗೌಡನಾಯ್ಡು ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕ ರಾಮ್ ಚರಣ್​​ಗೆ ಕುಸ್ತಿ ಹೇಳಿಕೊಡುವ ಗುರುವಿನ ಪಾತ್ರ ಅವರದ್ದು.

‘ಪೆದ್ದಿ’ ಸಿನಿಮಾನಲ್ಲಿ ಶಿವರಾಜ್ ಕುಮಾರ್, ರಾಮ್ ಚರಣ್ ಜೊತೆಗೆ ಜಾನ್ಹವಿ ಕಪೂರ್ ನಾಯಕಿ. ಬಾಲಿವುಡ್ ನಟ ದಿವ್ಯೇಂದು ವಿಲನ್, ಬಾಲಿವುಡ್ ನಟ ಬೊಮನ್ ಇರಾನಿ, ಜಗಪತಿ ಬಾಬು ಇನ್ನೂ ಹಲವರಿದ್ದಾರೆ. ಶ್ರುತಿ ಹಾಸನ್, ‘ಪೆದ್ದಿ’ ಸಿನಿಮಾದ ಐಟಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಸಿನಿಮಾಕ್ಕೆ ಹಣ ಹೂಡಿರುವುದು ಮೈತ್ರಿ ಮೂವಿ ಮೇಕರ್ಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಂಧಾನಕ್ಕೆ ಮುಂದಾಗಿದ್ದ ರಣ್ವೀರ್ ಸಿಂಗ್, ತಿರಸ್ಕರಿಸಿದ ಫರ್ಹಾನ್ ಅಖ್ತರ್

ರಣ್ವೀರ್ ಸಿಂಗ್ (Ranveer Singh) ವಿರುದ್ಧ ಬಾಲಿವುಡ್​​ನ ನೌಕರರ ಒಕ್ಕೂಟ ನಿಷೇಧ ಹೇರಿದೆ. ರಣ್ವೀರ್ ಸಿಂಗ್, ‘ಡಾನ್ 3’ ಸಿನಿಮಾದ ಒಪ್ಪಂದ ಮುರಿದಿದ್ದು ಮಾತ್ರವಲ್ಲದೆ ನಷ್ಟ ಪರಿಹಾರ ನೀಡಲು ನಿರಾಕರಿಸಿದ ಕಾರಣಕ್ಕೆ ಈ ನಿಷೇಧ ಹೇರಲಾಗಿದೆ. ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ತಾವು ಕೆಲಸ ಮಾಡುವುದಿಲ್ಲ ಎಂದು ನೌಕರರ ಒಕ್ಕೂಟ ಘೋಷಿಸಿದೆ. ಆದರೆ ಈ ವಿವಾದವನ್ನು ಅಂತ್ಯಗೊಳಿಸಲು ರಣ್ವೀರ್ ಸಿಂಗ್ ಮುಂದಾಗಿದ್ದರಂತೆ, ರಣ್ವೀರ್ ಸಿಂಗ್ ಅವರು ಸಂಧಾನದ ಪ್ರಯತ್ನ ಮಾಡಿದ್ದರಂತೆ. ಆದರೆ ‘ಡಾನ್ 3’ ಸಿನಿಮಾದ ನಿರ್ಮಾಪಕರಾದ ಫರ್ಹಾನ್ ಅಖ್ತರ್ ಮತ್ತು ರಿತೇಷ್ ಸಿದ್ವಾನಿ ಅವರು ರಣ್ವೀರ್ ಆಫರ್ ಅನ್ನು ಸ್ಪಷ್ಟವಾಗಿ ತಿರಸ್ಕರಿಸಿದರಂತೆ.

ರಣ್ವೀರ್ ಸಿಂಗ್ ‘ಡಾನ್ 3’ ಸಿನಿಮಾ ನಿರಾಕರಿಸಿದರ ಪ್ರತಿಯಾಗಿ ಬೇರೊಂದು ಸಿನಿಮಾನಲ್ಲಿ ನಟಿಸುವುದಾಗಿ ಹೇಳಿದ್ದರಂತೆ. ಫರ್ಹಾನ್ ಅಖ್ತರ್ ಅಥವಾ ಅವರ ಸಹೋದರಿ ಜೋಯಾ ಅಖ್ತರ್ ಜೊತೆಗೆ ಹೊಸ ಸಿನಿಮಾನಲ್ಲಿ ಕೆಲಸ ಮಾಡುವ ಆಫರ್ ಅನ್ನು ನೀಡಿದ್ದರು ರಣ್ವೀರ್ ಸಿಂಗ್. ಮೂವರು ಒಟ್ಟಿಗೆ ಕೂತು ನಿರ್ಧರಿಸಿದ ಹೊಸ ಸಿನಿಮಾನಲ್ಲಿ ಕೆಲಸ ಮಾಡುವುದಾಗಿ ಹೇಳಿದ್ದರಂತೆ. ಆದರೆ ಈ ಆಫರ್ ಅನ್ನು ಫರ್ಹಾನ್ ಅಖ್ತರ್ ಮತ್ತು ಅವರ ಪಾರ್ಟನರ್ ರಿತೇಷ್ ಸಿದ್ವಾನಿ ನಿರಾಕರಿಸಿದರಂತೆ.

ಇದನ್ನೂ ಓದಿ:ರಣ್ವೀರ್ ಸಿಂಗ್​​ಗೆ ಮುಂಚೆ ಬಾಲಿವುಡ್​​ನಲ್ಲಿ ನಿಷೇಧಕ್ಕೊಳಗಾಗಿದ್ದ ನಟರಿವರು

ಅದು ಮಾತ್ರವೇ ಅಲ್ಲದೆ, ರಣ್ವೀರ್ ಸಿಂಗ್ ಯಾವುದೇ ಸಂಧಾನದ ಪ್ರಯತ್ನ ಅಥವಾ ಸಭೆಯ ಪ್ರಯತ್ನ ಮಾಡುವುದಾದರೆ ಖುದ್ದು ತಾವಿಬ್ಬರೂ ಹಾಜರಿರಲೇ ಬೇಕು ಎಂದು ಸಹ ಫರ್ಹಾನ್ ಮತ್ತು ರಿತೇಷ್ ಹೇಳಿದ್ದಾರೆ. ಈ ಹಿಂದೆ ಆಮಿರ್ ಖಾನ್ ಮನೆಯಲ್ಲಿ ಸಭೆ ನಡೆದಾಗ, ಫರ್ಹಾನ್ ಮತ್ತು ರಿತೇಷ್ ಹಾಜರಿದ್ದರೆ ತಾವು ಸಭೆಗೆ ಬರುವುದಿಲ್ಲ, ಸಭೆ ಪ್ರತ್ಯೇಕವಾಗಿಯೇ ನಡೆಯಬೇಕು ಎಂದು ಫರ್ಹಾನ್ ಅಖ್ತರ್ ಹೇಳಿದ್ದರಂತೆ. ಆ ಸಭೆಯ ಬಳಿಕ ರಣ್ವೀರ್ 10 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದರಂತೆ. ಆದರೆ ಫರ್ಹಾನ್ ಮತ್ತು ರಿತೇಶ್ ಆ ಆಫರ್ ಅನ್ನು ತಿರಸ್ಕರಿಸಿದ್ದರು.

ರಣ್ವೀರ್ ಸಿಂಗ್ ಅವರು ಫರ್ಹಾನ್ ಅಖ್ತರ್ ಸಹೋದರಿ ಜೋಯಾ ಅಖ್ತರ್ ಜೊತೆಗೆ ಆತ್ಮೀಯ ಗೆಳೆತನ ಹೊಂದಿದ್ದರು. ಜೋಯಾ ನಿರ್ದೇಶನ ಮಾಡಿರುವ ‘ದಿಲ್ ದಡಕ್ನೇ ದೋ’ ಮತ್ತು ‘ಗಲ್ಲಿ ಬಾಯ್’ ಸಿನಿಮಾಗಳಲ್ಲಿ ರಣ್ವೀರ್ ಸಿಂಗ್ ನಟಿಸಿದ್ದರು. ಆದರೆ ಈಗ ಫರ್ಹಾನ್ ಮತ್ತು ಜೋಯಾ ಇಬ್ಬರೂ ಸಹ ರಣ್ವೀರ್ ಸಿಂಗ್ ಜೊತೆಗೆ ಕೆಲಸ ಮಾಡದೇ ಇರಲು ನಿರ್ಧರಿಸಿದ್ದಾರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!

ಕಾರವಾರ, ಮೇ 31: ಉತ್ತರ ಕನ್ನಡ (uttara-kannada) ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್‌ವೊಂದು ಮುಳುಗಡೆಯಾಗಿದ್ದು (boat sinking), ಅದರಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಇಕ್ಬಾಲ್, ಅಬ್ದುಲ್ ಹಾಗೂ ಗಫೂರ್ ಎಂಬುವರಿಂದ 7 ಜನರ ರಕ್ಷಣೆ ಮಾಡಲಾಗಿದೆ. ಹೊನ್ನಾವರ ಸಿಎಸ್​ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ
  • ಸ್ಥಳೀಯ ಮೀನುಗಾರಿಕಾ ಬೋಟ್​ನಿಂದ 7 ಮೀನುಗಾರರ ರಕ್ಷಣೆ
  • ಹೊನ್ನಾವರ ಸಿಎಸ್​ಪಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ

ನಡೆದಿದ್ದೇನು?

ಅಂಕೋಲಾದ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿದ್ದ ಮಂಜುನಾಥ್ ಖಾರ್ವಿ ಅವರಿಗೆ ಸೇರಿದ ‘ಶ್ರೀ ನವರತ್ನ’ ಹೆಸರಿನ ಬೋಟ್, ಚಲಿಸುತ್ತಿದ್ದಾಗ ಬೋಟ್‌ನ ಹೊರಭಾಗಕ್ಕೆ ಹಾನಿಯಾದ ಹಿನ್ನೆಲೆ ಸಮುದ್ರದಲ್ಲಿ ಮುಳುಗಲು ಆರಂಭಿಸಿದೆ. ಈ ವೇಳೆ ಬೋಟ್‌ನಲ್ಲಿದ್ದ ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ ಎಂಬ ಏಳು ಜನ ಮೀನುಗಾರರು ನೀರುಪಾಲಾಗುವ ಭೀತಿಯಲ್ಲಿದ್ದರು.

ಇದನ್ನೂ ಓದಿ: ಧಾರವಾಡದಲ್ಲಿ ಘೋರ ದುರಂತ: ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

ಇನ್ನು ಈ ವೇಳೆ ಸ್ಥಳೀಯ ಮೀನುಗಾರರಾದ ಇಕ್ಬಾಲ್, ಅಬ್ದುಲ್ ಹಾಗೂ ಗಫೂರ್ ತಮ್ಮ ಬೋಟ್ ಮೂಲಕ ತಕ್ಷಣವೇ ಸ್ಥಳಕ್ಕೆ ಧಾವಿಸಿ, ನೀರುಪಾಲಾಗುತ್ತಿದ್ದ ಏಳೂ ಜನರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆ ಮೂಲಕ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಸಿ.ಎಸ್.ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷಿ ಹೊಂಡದಲ್ಲಿ ಬಿದ್ದು ಅಣ್ಣ ತಮ್ಮ ಸಾವು

ಕೃಷಿ ಹೊಂಡದಲ್ಲಿ ಬಿದ್ದು ಅಣ್ಣ ತಮ್ಮ ಸಾವನ್ನಪ್ಪಿದ್ದ ಘಟನೆ ಇತ್ತೀಚೆಗೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ನಡೆದಿದೆ. ದೇವಕಿರಣ್ (12) ಹಾಗೂ ವಿನುತ್ (9) ಮೃತ ಅಣ್ಣ ತಮ್ಮಂದಿರು. ಶಾಲೆಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ತಾತನ ಮನೆಗೆ ಬಂದಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದ ಬಳಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು

ಕೃಷಿ ಹೊಂಡ ಮಾಡುವ ಉದ್ದೇಶದಿಂದ ಬೃಹತ್ ಹೊಂಡ ತೆಗೆಯಲಾಗಿತ್ತು. ವಸತಿ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಬೇಸಿಗೆ ರಜೆಗೆಂದು ಅಜ್ಜಿ ತಾತನ ಮನೆಗೆ ಬಂದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ಟಾರ್ ನಟಿಯರ ಡಿಸೈನರ್ ಅಂಜಲಿ ಕೈಚಳಕಕ್ಕೆ ಆರ್‌ಸಿಬಿ ಫ್ಯಾನ್ಸ್ ಫಿದಾ! ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್

ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ಕ್ರೇಜ್ ದಿನದಿಂದ ದಿನಕ್ಕೆ ಹೊಸ ಹೊಸ ಕಲೆಗೆ ಕಾರಣವಾಗಿದೆ. ಕೇವಲ ಮೈದಾನ ಅಥವಾ ಜರ್ಸಿಗಳಿಗಷ್ಟೇ ಸೀಮಿತವಾಗಿದ್ದ ಆರ್‌ಸಿಬಿ ಕ್ರೇಜ್, ಇದೀಗ ಮಹಿಳೆಯರ ಸಾಂಪ್ರದಾಯಿಕ ಉಡುಪುಗಳ ಫ್ಯಾಷನ್ ಜಗತ್ತಿಗೂ ಲಗ್ಗೆ ಇಟ್ಟಿದೆ. ಹೌದು, ನಗರದ ಪ್ರಸಿದ್ಧ ಸೀರೆ ಮತ್ತು ಬಟ್ಟೆಗಳ ಮಾರುಕಟ್ಟೆ ಕೇಂದ್ರವಾದ ಚಿಕ್ಕಪೇಟೆಯ ಖ್ಯಾತ ಮಹಿಳಾ ಮಾಡಲ್ ಡಿಸೈನರ್ ಅಂಜಲಿ ಅವರು ಆರ್‌ಸಿಬಿ ಥೀಮ್ ಆಧಾರಿತ ಅತ್ಯಂತ ಆಕರ್ಷಕ ಹಾಗೂ ಸ್ಟೈಲಿಶ್ ಬ್ಲೌಸ್ ವಿನ್ಯಾಸಗೊಳಿಸಿ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಖ್ಯಾತ ಸಿನಿ ತಾರೆಯರಿಗೂ ಬಟ್ಟೆಗಳನ್ನು ವಿನ್ಯಾಸಗೊಳಿಸುವ ಸೆಲೆಬ್ರಿಟಿ ಡಿಸೈನರ್ ಅಂಜಲಿ, ಆರ್‌ಸಿಬಿ ಮೇಲಿನ ತಮ್ಮ ಅಪ್ಪಟ ಅಭಿಮಾನಕ್ಕಾಗಿ ಈ ನೂತನ ಪ್ರಯೋಗ ಮಾಡಿದ್ದಾರೆ. ಆರ್‌ಸಿಬಿ ತಂಡದ ಅಧಿಕೃತ ಬಣ್ಣಗಳಾದ ಬ್ಲೂ, ರೆಡ್ ಹಾಗೂ ಗೋಲ್ಡ್ (ನೀಲಿ, ಕೆಂಪು ಮತ್ತು ಚಿನ್ನದ ಬಣ್ಣ) ಕಾಂಬಿನೇಷನ್‌ನಲ್ಲಿ ಅತ್ಯಾಧುನಿಕ ಮಾದರಿಯ ಬ್ಲೌಸ್ ಸಿದ್ಧಪಡಿಸಲಾಗಿದೆ. ಈ ಬ್ಲೌಸ್‌ನ ಅತ್ಯಂತ ಆಕರ್ಷಕ ಭಾಗವೆಂದರೆ, ಇದರ ಬೆನ್ನಿನ ಹಿಂಭಾಗದಲ್ಲಿ (Back Design) ಆರ್‌ಸಿಬಿಯ ಸಾರ್ವಕಾಲಿಕ ಜನಪ್ರಿಯ ಸ್ಲೋಗನ್ ಆಗಿರುವ ‘Ee Sala Cupp Namde’ (ಈ ಸಲ ಕಪ್ ನಮ್ದೇ) ಎಂದು ಅತ್ಯಂತ ಕಲಾತ್ಮಕವಾಗಿ ಸ್ಟೈಲಿಶ್ ಡಿಸೈನ್ ಮಾಡಲಾಗಿದೆ.

ಈ ಆರ್‌ಸಿಬಿ ಸ್ಟೈಲಿಶ್ ಬ್ಲೌಸ್‌ನ ಫೋಟೋಗಳು ಮತ್ತು ವೀಡಿಯೊಗಳು ವೈರಲ್​ ಆಗುತ್ತಿದ್ದಂತೆ ಬೆಂಗಳೂರಿನ ಮಹಿಳಾ ಅಭಿಮಾನಿಗಳು ಮಾರುಹೋಗಿದ್ದಾರೆ. ಸದ್ಯ ಡಿಸೈನರ್ ಅಂಜಲಿ ಅವರು ಸಿದ್ಧಪಡಿಸಿದ್ದ ಎಲ್ಲಾ ಬ್ಲೌಸ್‌ಗಳು ಈಗಾಗಲೇ ಸಂಪೂರ್ಣವಾಗಿ ಮಾರಾಟವಾಗಿದ್ದು (Out of Stock), ಹೊಸ ಆರ್ಡರ್‌ಗಳಿಗಾಗಿ ಆರ್‌ಸಿಬಿ ಮಹಿಳಾ ಮಣಿಗಳಿಂದ ಭಾರಿ ಡಿಮ್ಯಾಂಡ್ ಕೇಳಿಬರುತ್ತಿದೆ. ಐಪಿಎಲ್ ಕ್ರೇಜ್ ನಡುವೆ ಈ ವಿಭಿನ್ನ ಫ್ಯಾಷನ್ ಟ್ರೆಂಡ್ ಈಗ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

TET Mandatory: ಶಿಕ್ಷಕರ ಉದ್ಯೋಗ ಮತ್ತು ಬಡ್ತಿಗೆ TET ಕಡ್ಡಾಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುImage Credit source: Pinterest

ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ತೀರ್ಪು ದೇಶಾದ್ಯಂತ ಲಕ್ಷಾಂತರ ಶಿಕ್ಷಕರಲ್ಲಿ ತೀವ್ರ ಕಳವಳ ಮತ್ತು ಆತಂಕವನ್ನು ಹುಟ್ಟುಹಾಕಿದೆ. ಶಾಲಾ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಶಿಕ್ಷಕರ ಸೇವೆಯನ್ನು ಮುಂದುವರಿಸಲು ಮತ್ತು ಅವರಿಗೆ ಬಡ್ತಿ (Promotion) ನೀಡಲು ಟಿಇಟಿ (TET) ಪರೀಕ್ಷೆಯು ಕಡ್ಡಾಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ, ಈಗಾಗಲೇ ಸೇವೆಯಲ್ಲಿರುವ ಟಿಇಟಿ ಅಲ್ಲದ ಶಿಕ್ಷಕರಿಗೆ ಸಮಾಧಾನಕರ ಸುದ್ದಿಯೊಂದನ್ನು ನೀಡಿರುವ ಕೋರ್ಟ್, ಪರೀಕ್ಷೆ ಪಾಸ್ ಮಾಡಲು ನೀಡಲಾಗಿದ್ದ ಗಡುವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿದೆ.

ದೇಶದ 20 ಲಕ್ಷಕ್ಕೂ ಹೆಚ್ಚು ಶಿಕ್ಷಕರ ಭವಿಷ್ಯಕ್ಕೆ ಕಂಟಕ?

ನ್ಯಾಯಾಲಯವು ಈ ಹಿಂದೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ತಿರಸ್ಕರಿಸಿರುವುದರಿಂದ, ಟಿಇಟಿ ಉತ್ತೀರ್ಣರಾಗದ ಶಿಕ್ಷಕರಲ್ಲಿ ಗೊಂದಲ ಮತ್ತು ಅಸಮಾಧಾನ ಮೂಡಿದೆ. ಈ ನಿರ್ಧಾರದಿಂದಾಗಿ ದೇಶಾದ್ಯಂತ ಸುಮಾರು 20 ಲಕ್ಷಕ್ಕೂ ಹೆಚ್ಚು (2 ಮಿಲಿಯನ್) ಶಿಕ್ಷಕರ ಭವಿಷ್ಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಶಿಕ್ಷಕ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.

ನಿಯಮ ಪಾಲಿಸದಿದ್ದರೆ ಉದ್ಯೋಗ ನಷ್ಟದ ಭೀತಿ:

ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ 2028ರ ಗಡುವಿನೊಳಗೆ ಟಿಇಟಿ ಪರೀಕ್ಷೆಯನ್ನು ಎದುರಿಸಿ ಉತ್ತೀರ್ಣರಾಗಲು ವಿಫಲರಾಗುವ ಶಿಕ್ಷಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಅಂತಹ ಶಿಕ್ಷಕರು ಕಡ್ಡಾಯವಾಗಿ ಕೆಲಸ ಬಿಡಬೇಕಾಗಬಹುದು ಅಥವಾ ಸ್ವಯಂ ನಿವೃತ್ತಿ (VRS) ಪಡೆಯಬೇಕಾಗಬಹುದು. ಆದರೆ, ನಿವೃತ್ತಿಗೆ ಅತ್ಯಂತ ಕಡಿಮೆ ಸೇವೆ ಬಾಕಿ ಇರುವ ಹಿರಿಯ ಉದ್ಯೋಗಿಗಳಿಗೆ ಕೋರ್ಟ್‌ನಿಂದ ಸ್ವಲ್ಪ ವಿನಾಯಿತಿ ಸಿಗುವ ಸಾಧ್ಯತೆ ಇದೆ. ಆದಾಗ್ಯೂ, ಯಾವುದೇ ಶಿಕ್ಷಕರು ಮುಂದಿನ ಹಂತಕ್ಕೆ ಬಡ್ತಿ ಪಡೆಯಬೇಕಾದರೆ ಟಿಇಟಿ ಪರೀಕ್ಷೆ ಪಾಸ್ ಮಾಡುವುದು ಇನ್ಮುಂದೆ ಕಡ್ಡಾಯವಾಗಿರುತ್ತದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಸರ್ಕಾರದ ಹಸ್ತಕ್ಷೇಪಕ್ಕೆ ಶಿಕ್ಷಕ ಸಂಘಟನೆಗಳ ಆಗ್ರಹ:

ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಹಿತಾಸಕ್ತಿಯನ್ನು ರಕ್ಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಶಿಕ್ಷಕರ ಸಂಘಟನೆಗಳು ಒತ್ತಾಯಿಸಿವೆ. ಹಿರಿಯ ಶಿಕ್ಷಕರಿಗೆ ಟಿಇಟಿ ನಿಯಮಾವಳಿಗಳಿಂದ ವಿನಾಯಿತಿ ನೀಡಲು ಸರ್ಕಾರವು ವಿಶೇಷ ‘ಸುಗ್ರೀವಾಜ್ಞೆ’ (Ordinance) ಹೊರಡಿಸಬೇಕು ಎಂಬ ಬೇಡಿಕೆ ಕೇಳಿಬಂದಿದೆ. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೀಡಿದ ಪ್ರಮುಖ ನಿರ್ದೇಶನ:

ಶಿಕ್ಷಕರಿಗೆ ಪರೀಕ್ಷೆ ಬರೆಯಲು ಮತ್ತು ಅರ್ಹತೆ ಪಡೆಯಲು ಸೂಕ್ತ ಹಾಗೂ ಸಾಕಷ್ಟು ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಮಹತ್ವದ ಆದೇಶ ನೀಡಿದೆ. ಪ್ರತಿ ವರ್ಷ ಕನಿಷ್ಠ ಎರಡು ಬಾರಿ ಟಿಇಟಿ (TET) ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಇದು 2028ರ ಗಡುವಿನೊಳಗೆ ಶಿಕ್ಷಕರು ಪರೀಕ್ಷೆಯನ್ನು ಎದುರಿಸಿ, ತಮ್ಮ ಉದ್ಯೋಗವನ್ನು ಸುರಕ್ಷಿತವಾಗಿರಿಸಿಕೊಳ್ಳಲು ಒಂದು ಉತ್ತಮ ಅವಕಾಶವನ್ನು ಕಲ್ಪಿಸಿಕೊಡುತ್ತದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಭಿಷೇಕ್ ಬ್ಯಾನರ್ಜಿ ಹಲ್ಲೆ ಪ್ರಕರಣದಲ್ಲಿ ಟ್ವಿಸ್ಟ್; ಬಂಧಿತ ಆರೋಪಿಗಳಿಗೆ ಮಾಜಿ ಶಾಸಕಿ ಲವ್ಲಿ ಮೈತ್ರಾರೊಂದಿಗೆ ನಿಕಟ ಸಂಪರ್ಕ

ಹಲ್ಲೆ ಘಟನೆಯ ನಂತರ ಅಭಿಷೇಕ್ ಬ್ಯಾನರ್ಜಿ ಸುರಕ್ಷತೆಗೆ ಹೆಲ್ಮೆಟ್ ಧರಿಸಿರುವುದು.Image Credit source: PTI

ಕೋಲ್ಕತಾ, ಮೇ 31: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲಿನ ದಾಳಿ ಪ್ರಕರಣಕ್ಕೆ (Abhishek Banerjee assault case) ಸಂಬಂಧಿಸಿದಂತೆ ಈಗ ಒಂದು ಹೊಸ ತಿರುವು ಲಭಿಸಿದೆ. ದಕ್ಷಿಣ 24 ಪರಗಣ (South 24 Pargana) ಜಿಲ್ಲೆಯ ಸೋನಾರ್‌ಪುರದಲ್ಲಿ ನಡೆದ ಈ ದಾಳಿಯ ಪ್ರಕರಣದಲ್ಲಿ ಬಂಧಿತರಾಗಿರುವ ಹಲವು ಆರೋಪಿಗಳು ಟಿಎಂಸಿ ಪಕ್ಷದ ಮಾಜಿ ಶಾಸಕಿ ಲವ್ಲಿ ಮೈತ್ರಾ (Lovely Maitra) ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವುದು ಬಹಿರಂಗವಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಮುಕ್ತಾಯದ ನಂತರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಪಕ್ಷದ ಕಾರ್ಯಕರ್ತರ ಕುಟುಂಬಗಳನ್ನು ಭೇಟಿಯಾಗಲು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಸೋನಾರ್‌ಪುರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಉದ್ರಿಕ್ತ ಸ್ಥಳೀಯರು ಮತ್ತು ಪ್ರತಿಭಟನಾಕಾರರ ಗುಂಪು ಅವರ ಮೇಲೆ ಕಲ್ಲು, ಮೊಟ್ಟೆ ಹಾಗೂ ಶೂಗಳನ್ನು ಎಸೆದು ತೀವ್ರವಾಗಿ ದಾಳಿ ನಡೆಸಿತ್ತು.

ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು, ಅದರಲ್ಲಿರುವ ಕೆಲ ಆರೋಪಿಗಳು ಮಾಜಿ ಟಿಎಂಸಿ ಶಾಸಕಿ ಲವ್ಲಿ ಮೈತ್ರಾ ಅವರಿಗೆ ಅತ್ಯಂತ ಆಪ್ತನಾಗಿದ್ದಾರೆ ಎಂದು ನ್ಯೂಸ್18 ನಲ್ಲಿ ವರದಿಯಾಗಿದೆ. ಬಂಧಿತ ಐವರಲ್ಲಿ ತಪನ್ ಮೈತಿ, ನಿರ್ಮಲ್ಯ ಸೇನ್​ಗುಪ್ತ, ಕಾಜಲ್ ದಾಸ್ ಮತ್ತು ದೇವಶಿಷ್ ದತ್ತ ಅವರು ಮಾಜಿ ಶಾಸಕಿಗೆ ಆಪ್ತರೆನ್ನಲಾಗಿದೆ. ಹಾಗೆಯೇ, ಮತ್ತೊಬ್ಬ ಬಂಧಿತ ಆರೋಪಿ ಅಶೋಕ್ ಗಯಾನ್ ಕೂಡ ಟಿಎಂಸಿ ಕಾರ್ಯಕರ್ತ ಎನ್ನಲಾಗಿದೆ.

ಇದನ್ನೂ ಓದಿ: ಬಂಗಾಳದ ಲಕ್ಷ್ಮಿ ಭಂಡಾರ್ ಯೋಜನೆಯಲ್ಲಿ ಬೃಹತ್ ವಂಚನೆ; 30 ಲಕ್ಷ ಜನರಿಗೆ ಸಿಗಲ್ಲ ಸೌಲಭ್ಯ ಸಿಎಂ ಸುವೇಂದು ಘೋಷಣೆ

ದಾಳಿ ನಡೆಸಿದ ವ್ಯಕ್ತಿಗಳು ಪ್ರತಿಪಕ್ಷವಾದ ಬಿಜೆಪಿಗೆ ಸೇರಿದವರೆಂದು ಈ ಹಿಂದೆ ಟಿಎಂಸಿ ಆರೋಪಿಸಿತ್ತು. ಆದರೆ ಈಗ ಬಂಧಿತ ಆರೋಪಿಗಳು ಸ್ವಪಕ್ಷದ ಮಾಜಿ ಶಾಸಕಿಯ ಜೊತೆಗೇ ಸಂಪರ್ಕದಲ್ಲಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ದಾಳಿಯ ಸಮಯದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರ ಬಟ್ಟೆಗಳನ್ನು ಹರಿದು ಹಾಕಲಾಗಿತ್ತು ಹಾಗೂ ಅವರ ಕನ್ನಡಕವೂ ಮುರಿದಿತ್ತು. ಭದ್ರತಾ ಸಿಬ್ಬಂದಿ ಅವರಿಗೆ ಹೆಲ್ಮೆಟ್ ಧರಿಸಿ ರಕ್ಷಣೆ ನೀಡಬೇಕಾಗಿ ಬಂದಿತ್ತು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಭಿಷೇಕ್ ಬ್ಯಾನರ್ಜಿ, “ಅವರು ನನ್ನನ್ನು ಕೊಲ್ಲಲು ಸಂಚು ರೂಪಿಸಿದ್ದರು, ಈ ಇಡೀ ಘಟನೆಯ ವೀಡಿಯೊ ಸಾಕ್ಷ್ಯಗಳು ನಮ್ಮ ಬಳಿಯಿದ್ದು ನಾವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದೇವೆ” ಎಂದು ಹೇಳಿದ್ದರು.

ಆರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ನೇರವಾಗಿ ದೂರಿದ್ದರು. ಆದರೆ, ಬಂಧಿತ ಆರೋಪಿಯ ಟಿಎಂಸಿ ನಂಟಿನ ವಿವರಗಳು ಹೊರಬರುತ್ತಿದ್ದಂತೆ, ಇದು ಟಿಎಂಸಿ ಪಕ್ಷದ ಒಳಗಿನ ಆಂತರಿಕ ಭಿನ್ನಾಭಿಪ್ರಾಯ ಮತ್ತು ಬಣ ರಾಜಕೀಯದ (Internal Feud) ಪರಿಣಾಮ ಇರಬಹುದು ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಪ್ರಸ್ತುತ ಪಶ್ಚಿಮ ಬಂಗಾಳ ಪೊಲೀಸರು ಈ ಆಂತರಿಕ ನಂಟಿನ ಕುರಿತು ಹಾಗೂ ದಾಳಿಯ ಹಿಂದಿನ ನೈಜ ಪಿತೂರಿಯ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?

ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ

ಇದೇ ವೇಳೆ, ಹೂಗ್ಲಿಯಲ್ಲಿ ಮತ್ತೊಬ್ಬ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆಯೂ ಹಲ್ಲೆಯಾಗಿರುವ ಘಟನೆ ವರದಿಯಾಗಿದೆ. ಚಂದಿತಾಲ ಪೊಲೀಸ್ ಠಾಣೆಗೆ ಹೋಗುತ್ತಿರುವ ವೇಳೆ ಈ ಹಲ್ಲೆ ನಡೆದಿದೆ. ಭದ್ರತಾ ಸಿಬ್ಬಂದಿ ಇದ್ದಾಗ್ಯೂ ಈ ಘಟನೆಯಾಗಿತ್ತು. ಇದು ಬಿಜೆಪಿಯವರು ಮಾಡಿರುವ ಕೆಲಸ ಎಂದು ಕಲ್ಯಾಣ್ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

DK Shivakumar Oath-Taking: ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?

ಬೆಂಗಳೂರು, ಮೇ 31: ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಕುಮಾರಕೃಪ ಅತಿಥಿ ಗೃಹವನ್ನು ತಮ್ಮ ತಾತ್ಕಾಲಿಕ ಸರ್ಕಾರಿ ನಿವಾಸವನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಕುಮಾರಕೃಪಾ ರಸ್ತೆಯಲ್ಲಿರುವ ಕೆಕೆ ಗೆಸ್ಟ್‌ಹೌಸ್‌ನಲ್ಲಿರುವ ಬೃಹತ್ ಕಲ್ಲಿನ ಕಟ್ಟಡದಲ್ಲಿ ಅವರು ವಾಸಿಸಲಿದ್ದಾರೆ. ಇದೇ ವೇಳೆ, ಹಾಲಿ ಕಾವೇರಿ ನಿವಾಸದಲ್ಲಿ ವಾಸಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಅದನ್ನು ಬಿಟ್ಟುಕೊಡುವಂತೆ ತಕ್ಷಣ ಕೇಳದಿರಲು ಡಿ.ಕೆ. ಶಿವಕುಮಾರ್ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಭಾವನೆಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಕುಮಾರಕೃಪ ಗೆಸ್ಟ್‌ಹೌಸ್‌ಗೆ ಈಗಾಗಲೇ ಪೊಲೀಸರಿಂದ ಭದ್ರತೆ ಒದಗಿಸಲಾಗಿದ್ದು, ಹಿರಿಯ ಪೊಲೀಸ್ ಮತ್ತು ಪಿಡಬ್ಲ್ಯೂಡಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಭೆಗಳು ಮತ್ತು ಸಾರ್ವಜನಿಕರ ಕುಂದು ಕೊರತೆಗಳನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಆಲಿಸಲು ಚಿಂತನೆ ನಡೆಸಿದ್ದಾರೆ.

 

 

Source link

ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ

ಮಗು ಹುಟ್ಟಿದರೆ ನೆಲಭೋಜನ ಮಾಡುವುದಾಗಿ ಹರಿಪ್ರಿಯಾ (Haripriya) ಮತ್ತು ವಸಿಷ್ಠ ಸಿಂಹ ಅವರು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈ ದಂಪತಿಗೆ ಗಂಡು ಮಗು ಜನಿಸಿತು. ಈಗ ಮಗನೊಂದಿಗೆ ಬಂದು ಶ್ರೀಕೃಷ್ಣನ ದರ್ಶನ ಪಡೆದ ಅವರು ಮುಖ್ಯಪ್ರಾಣನ ಸನ್ನಿಧಿಯಲ್ಲಿ ನೆಲಭೋಜ‌ನ (Nela Bhojana) ಪ್ರಸಾದ ಸ್ವೀಕರಿಸಿದ್ದಾರೆ. ಜನಸಾಮಾನ್ಯರೊಂದಿಗೆ ಕುಳಿತು ನೆಲಭೋಜ‌ನ ಸ್ವೀಕರಿಸಿದ ಸ್ಟಾರ್ ದಂಪತಿಯ ವಿಡಿಯೋ ಲಭ್ಯವಾಗಿದೆ. ಮಗನೊಂದಿಗೆ ದೇವರ ದರ್ಶನ ಮಾಡಿದ ಬಳಿಕ ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದವನ್ನು ಕೂಡ ಅವರು ಪಡೆದರು. ‘ಬಹಳ ಗ್ಯಾಪ್ ಬಳಿಕ ನಾವು ಉಡುಪಿ ಮಠಕ್ಕೆ ಬಂದು ಶ್ರೀಕೃಷ್ಣನ ದರ್ಶನ ಮಾಡಿದೆವು. ಒಂದೂವರೆ ವರ್ಷದ ಹಿಂದೆ ಬಂದು ನಾವು ನೆಲಭೋಜನದ ಹರಿಕೆ ಮಾಡಿಕೊಂಡಿದ್ದೆವು. ದೇವರ ಅನುಗ್ರಹ ನಮಗೆ ಧಕ್ಕಿದೆ ಎಂಬುದು ನಮ್ಮ ನಂಬಿಕೆ. ಎಲ್ಲ ಪದ್ಧತಿಯು ಗಟ್ಟಿ ಹಿನ್ನೆಲೆಯಲ್ಲಿ ಹುಟ್ಟಿರುತ್ತದೆ. ಅದನ್ನು ನಾವು ಪಾಲಿಸಿದ್ದೇವೆ’ ಎಂದು ವಸಿಷ್ಠ ಸಿಂಹ (Vasishta Simha) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version