IPL 2026: ಐಪಿಎಲ್ RAPP ಲಿಸ್ಟ್ ಪ್ರಕಟ: 1,307 ಆಟಗಾರರಿಗೆ ಸ್ಥಾನ – Kannada News | BCCI Announced The RAPP sheet For IPL 2026

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)​ ಮಿನಿ ಹರಾಜಿಗಾಗಿ ಬರೋಬ್ಬರಿ 1390 ಆಟಗಾರರು ಹೆಸರು ನೊಂದಾಯಿಸಿಕೊಂಡಿದ್ದರು. ಈ 1390 ಆಟಗಾರರಲ್ಲಿ ಹರಾಜಿಗೆ ಆಯ್ಕೆಯಾಗಿದ್ದು ಕೇವಲ 359 ಆಟಗಾರರು ಮಾತ್ರ. ಇವರಲ್ಲಿ 77 ಆಟಗಾರರನ್ನು ಮಾತ್ರ ಖರೀದಿಸಲಾಗಿತ್ತು. ಅಂದರೆ ಬರೋಬ್ಬರಿ 1313 ಆಟಗಾರರು ಅವಕಾಶ ವಂಚಿತರಾಗಿದ್ದರು. ಇದೀಗ ಅವಕಾಶ ವಂಚಿತರಾದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಅದು ಕೂಡ RAPP ಲಿಸ್ಟ್​ನಲ್ಲಿ ಎಂಬುದು ವಿಶೇಷ.

ಏನಿದು RAPP ಲಿಸ್ಟ್​?

RAPP ಲಿಸ್ಟ್ ಎಂದರೆ ರಿಜಿಸ್ಟರ್ ಅವೇಲೇಬಲ್ ಪ್ಲೇಯರ್ ಪೂಲ್ (RAPP). ಐಪಿಎಲ್​ಗಾಗಿ ನೋಂದಾಯಿತ ಲಭ್ಯವಿರುವ ಆಟಗಾರರ ಪಟ್ಟಿ. ಬದಲಿ ಆಟಗಾರರ ಆಯ್ಕೆಗಾಗಿ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಅಂದರೆ ಯಾವುದಾದರೂ ಆಟಗಾರರು ಐಪಿಎಲ್​ನಿಂದ ಹೊರಗುಳಿದರೆ, RAPP ಲಿಸ್ಟ್​ನಲ್ಲಿರುವ ಆಟಗಾರರನ್ನೇ ಆಯ್ಕೆ ಮಾಡಬೇಕಾಗುತ್ತದೆ. ಅಲ್ಲದೆ ಅವರು ಹರಾಜಿಗಾಗಿ ನೊಂದಾಯಿಸಿದ್ದ ಮೂಲ ಬೆಲೆಗಿಂತ ಕಡಿಮೆ ಪಾವತಿಸುವಂತಿಲ್ಲ ಎಂಬ ನಿಯಮವನ್ನು ಜಾರಿಗೊಳಿಸಲಾಗಿದೆ.

ಅದರಂತೆ ಇದೀಗ 1307 ಆಟಗಾರರ ಹೆಸರನ್ನು ಹೊಂದಿರುವ RAPP ಲಿಸ್ಟ್ ಅನ್ನು ಬಿಸಿಸಿಐ ಸಿದ್ಧಪಡಿಸಿದೆ. ಹೀಗಾಗಿ ಈ ಪಟ್ಟಿಯಲ್ಲಿರುವ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

RAPP ಲಿಸ್ಟ್​ ನಿಯಮಗಳು:

  • ಫ್ರಾಂಚೈಸಿಗಳು ಈ ನಿರ್ದಿಷ್ಟ ಪೂಲ್‌ನಿಂದ ಬದಲಿ ಆಟಗಾರರನ್ನು ಮಾತ್ರ ಆಯ್ಕೆ ಮಾಡಬಹುದು. ಉದಾಹರಣೆಗೆ, ಗಾಯಗೊಂಡ ತಂಡದ ಸದಸ್ಯರಿಗೆ ಬದಲಿಗೆ RAPP ಲಿಸ್ಟ್​ನಲ್ಲಿರುವ ಆಟಗಾರರನ್ನು ಆಯ್ಕೆ ಮಾಡಬೇಕು.
  • ಒಬ್ಬ ಆಟಗಾರನನ್ನು ಅವರ ಮೂಲ ಹರಾಜಿನ ಮೀಸಲು ಬೆಲೆಗಿಂತ ಕಡಿಮೆ ಬೆಲೆಗೆ ಸಹಿ ಮಾಡುವಂತಿಲ್ಲ. ಉದಾಹರಣೆಗೆ, ಸ್ಟೀವ್ ಸ್ಮಿತ್ ಈ ಬಾರಿ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ. ಅವರನ್ನು ಅದಕ್ಕಿಂತ ಕಡಿಮೆ ಮೊತ್ತಕ್ಕೆ ಬದಲಿ ಆಟಗಾರನಾಗಿ ಆಯ್ಕೆ ಮಾಡುವಂತಿಲ್ಲ.
  •  RAPP ಲಿಸ್ಟ್​ನಲ್ಲಿರುವ ಆಟಗಾರರನ್ನು ನೆಟ್ ಬೌಲರ್‌ಗಳಾಗಿ ನೇಮಿಸಿಕೊಳ್ಳಬಹುದು. ಆದರೆ ಬೇರೆ ಯಾವುದಾದರೂ ಫ್ರಾಂಚೈಸಿ ಆ ಆಟಗಾರನನ್ನು ಬದಲಿಯಾಗಿ ಆಯ್ಕೆ ಮಾಡಲು ಬಯಸಿದರೆ ತಕ್ಷಣವೇ ಬಿಡುಗಡೆ ಮಾಡಬೇಕಾಗುತ್ತದೆ.

RAPP ಲಿಸ್ಟ್​ನಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರರು:

  • 2 ಕೋಟಿ ರೂ. ಮೂಲ ಬೆಲೆ: ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ), ಡೇರಿಲ್ ಮಿಚೆಲ್ (ನ್ಯೂಝಿಲೆಂಡ್), ಡೆವೊನ್ ಕಾನ್ವೇ (ನ್ಯೂಝಿಲೆಂಡ್), ಜೇಕ್ ಫ್ರೇಸರ್-ಮೆಕ್‌ಗುರ್ಕ್ (ಆಸ್ಟ್ರೇಲಿಯಾ), ರೀಸ್ ಟೋಪ್ಲಿ (ಇಂಗ್ಲೆಂಡ್), ಮತ್ತು ಜೇಮೀ ಸ್ಮಿತ್ (ಇಂಗ್ಲೆಂಡ್).
  • 1.5 ಕೋಟಿ ರೂ. ಮೂಲ ಬೆಲೆ: ರಹಮಾನುಲ್ಲಾ ಗುರ್ಬಾಝ್ (ಅಫ್ಘಾನಿಸ್ತಾನ್), ಸ್ಪೆನ್ಸರ್ ಜಾನ್ಸನ್ (ಆಸ್ಟ್ರೇಲಿಯಾ), ಮತ್ತು ಟಿಮ್ ಸೈಫರ್ಟ್ (ನ್ಯೂಝಿಲೆಂಡ್).
  • 1 ಕೋಟಿ ರೂ. ಮೂಲ ಬೆಲೆ: ಜಾನಿ ಬೈರ್‌ಸ್ಟೋವ್ (ಇಂಗ್ಲೆಂಡ್), ಫಝಲ್​ಹಕ್ ಫಾರೂಕಿ (ಅಫ್ಘಾನಿಸ್ತಾನ್).

ಇದನ್ನೂ ಓದಿ: 6,6,6,6,6,6,6,6,6: ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್

RAPP ಲಿಸ್ಟ್​ನಲ್ಲಿರುವ ಭಾರತದ ಪ್ರಮುಖ ಆಟಗಾರರು:

  • ಉಮೇಶ್ ಯಾದವ್ , ನವದೀಪ್ ಸೈನಿ , ಚೇತನ್ ಸಕರಿಯಾ, ಸಂದೀಪ್ ವಾರಿಯರ್, ಮಾಯಾಂಕ್ ಅಗರ್ವಾಲ್ , ದೀಪಕ್ ಹೂಡಾ , ಕೆ.ಎಸ್. ಭರತ್, ಯಶ್ ಧುಲ್, ಅಭಿನವ್ ಮನೋಹರ್, ಅಥರ್ವ ಟೈಡೆ,  ಮನನ್ ವೋಹ್ರಾ, ಮಹಿಪಾಲ್ ಲೋಮ್ರೋರ್ , ಕಮಲೇಶ್ ನಾಗರಕೋಟಿ ಮತ್ತು ರಾಜವರ್ಧನ್ ಹಂಗರ್ಗೇಕರ್.

Source link

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

Source link

ಜೆಮಿಮಾ ರೊಡ್ರಿಗಸ್​ಗೆ 12 ಲಕ್ಷ ರೂ. ದಂಡ

Source link

ಉಡುಪಿ ಡಿಸಿ, ಉಸ್ತುವಾರಿ ಸಚಿವರಿಂದಲೇ ಜಿಲ್ಲಾಡಳಿತದ ಸೂಚನೆ ಉಲ್ಲಂಘನೆ? ಆಗಿದ್ದೇನು? – Kannada News | Udupi DC and District In Charge Minister Travel in Boat Without Wearing Life Jackets; Video Goes Viral

ಲೈಫ್​​ ಜಾಕೆಟ್​​ ಧರಿಸದೆ ಪ್ರಯಾಣ

ಉಡುಪಿ, ಜನವರಿ 28: ಜಿಲ್ಲಾಡಳಿತದ ಸೂಚನೆಯನ್ನು ಸ್ವತಃ ಉಡುಪಿ ಡಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೇ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಕೋಡಿಬೆಂಗ್ರೆ ಬೋಟ್​​ ದುರಂತ ಪ್ರಕರಣದ ಬಳಿಕ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಆದರೆ ದುರ್ಘಟನೆ ನಡೆದ ಗಣರಾಜ್ಯೋತ್ಸವದ ದಿನವೇ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಲು ಬೋಟ್​​ನಲ್ಲಿ ತೆರಳಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡಿಸಿ ಸೇರಿ ಇತರ ಅಧಿಕಾರಿಗಳು ಲೈಫ್ ಜಾಕೆಟ್ ಧರಿಸದಿರುವ ವಿಡಿಯೋವೀಗ ವೈರಲ್​​ ಆಗಿದೆ.

ವೈರಲ್​​ ಆದ ವಿಡಿಯೋದಲ್ಲೇನಿದೆ?

ದುರ್ಘಟನೆ ಬಳಿಕ ಲೈಫ್​​ ಜಾಕೆಟ್​​ ಕಡ್ಡಾಯಗೊಳಿಸಿ ಡಿಸಿ ಆದೇಶಿಸಿದ್ದರೂ ಈ ಬಗ್ಗೆ ಹಿಂದಿನಿಂದಲೂ ಜಿಲ್ಲಾಡಳಿತದ ಸೂಚನೆ ಇದೆ. ಆದರೆ ಅದನ್ನು ಉಲ್ಲಂಘಿಸಿ ಜಾಕೆಟ್ ಧರಿಸದೆ ಬೋಟ್​​ನಲ್ಲಿ ನಿಂತು ಸಚಿವರು, ಅಧಿಕಾರಿಗಳು ಕೈಬೀಸಿದ್ದಾರೆ. ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಜನರಿಗೆ ಹೇಳಬೇಕಿರುವ ಇವರೇ ಹೀಗೆ ನಡೆದುಕೊಂಡರೆ ಹೇಗೆ ಎಂಬ ಮಾತುಗಳೀಗ ಕೇಳಿ ಬಂದಿವೆ.

ಇದನ್ನೂ ಓದಿ: ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ ಸಂಬಂಧ ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ

ಉಡುಪಿಯ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದ ಪರಿಣಾಮ ಒಟ್ಟು ಮೂವರು ಮೃತಪಟ್ಟಿದ್ದರು. ಮೈಸೂರಿನ ಸರಸ್ವತಿಪುರಂನಿಂದ ಪ್ರವಾಸಕ್ಕೆ ಆಗಮಿಸಿದ್ದ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳ 28 ಮಂದಿಯ ತಂಡವು ಎರಡು ಪ್ರವಾಸಿ ಬೋಟ್‌ಗಳಲ್ಲಿ ವಿಹಾರಕ್ಕೆ ತೆರಳಿತ್ತು. ಒಂದೊಂದು ಬೋಟ್‌ನಲ್ಲಿ 14 ಮಂದಿ ಇದ್ದು, ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಸಮುದ್ರದ ಭಾರೀ ಅಲೆಗಳಿಗೆ ಸಿಲುಕಿದ ಒಂದು ಬೋಟ್ ಅಚಾನಕ್ಕಾಗಿ ಮಗುಚಿ ಬಿದ್ದ ಪರಿಣಾಮ ಅವಘಡ ನಡೆದಿತ್ತು. ಆ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿದ್ದ ಉಡುಪಿ ಡಿಸಿ, ಪ್ರವಾಸಿ ಬೊಟುಗಳಲ್ಲಿ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ. ಲೈಫ್ ಜಾಕೆಟ್ ಬಳಕೆ ಬಗ್ಗೆ ಕರಪತ್ರ ಪ್ರಕಟಿಸಬೇಕು ಎಂದು ತಿಳಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Ajit Pawar Death: ಅಜಿತ್ ಪವಾರ್ ನಿಧನಕ್ಕೆ ರಾಜಕೀಯ ಗಣ್ಯರು ತೀವ್ರ ಸಂತಾಪ – Kannada News | Maharashtra Mourns Ajit Pawar: Leaders Pay Tributes to Late Deputy CM

ಬಾರಾಮತಿ, ಜ.28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶದಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ. ಇಂದು (ಜನವರಿ 28) ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪಕ್ಷಾತೀತವಾಗಿ ನಾಯಕರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿ ಅವರು ಅಜಿತ್ ಪವಾರ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದು, “ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ನಾಯಕ. ಅವರ ನಿಧನವು ನನಗೆ ವೈಯಕ್ತಿಕವಾಗಿ ಮತ್ತು ದೇಶದ ರಾಜಕೀಯಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್ ಅವರ ಚಿಕ್ಕಪ್ಪ ಹಾಗೂ ಎನ್‌ಸಿಪಿ (NCP) ಸ್ಥಾಪಕ ಶರದ್ ಪವಾರ್ ಅವರು ಈ ಸುದ್ದಿಯಿಂದ ದಿಗ್ಭ್ರಮೆಗೊಂಡಿದ್ದಾರೆ. “ಈ ದುರಂತವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಜಿತ್ ಯಾವಾಗಲೂ ಉತ್ಸಾಹಿ ಮತ್ತು ಕಷ್ಟಪಟ್ಟು ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ನನ್ನ ಮಗನನ್ನೇ ಕಳೆದುಕೊಂಡಷ್ಟು ನೋವಾಗುತ್ತಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರವು ಇಂದು ಒಬ್ಬ ದಕ್ಷ ಆಡಳಿತಗಾರನನ್ನು ಕಳೆದುಕೊಂಡಿದೆ. ನಮ್ಮ ಸರ್ಕಾರದ ಪ್ರಬಲ ಶಕ್ತಿಯಾಗಿದ್ದ ‘ದಾದಾ’ (ಅಜಿತ್ ಪವಾರ್) ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ದೊಡ್ಡ ಆಘಾತ ತಂದಿದೆ ಎಂದು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಅಜಿತ್ ಪವಾರ್ ಅವರ ಕೆಲಸದ ವೈಖರಿ ಮತ್ತು ನಿರ್ಧಾರ ತೆಗೆದುಕೊಳ್ಳುವ ವೇಗ ಎಲ್ಲರಿಗೂ ಮಾದರಿಯಾಗಿತ್ತು. ನಾವು ಒಬ್ಬ ಉತ್ತಮ ಸ್ನೇಹಿತ ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯದ ಚಾಣಕ್ಯ ಶರದ್ ಪವಾರ್​ಗೆ ಸೆಡ್ಡು ಹೊಡೆದು ಗೆದ್ದಿದ್ದ ಅಜಿತ್ ಪವಾರ್ ಇನ್ನು ನೆನಪು ಮಾತ್ರ

ಪ್ರಧಾನಿ ನರೇಂದ್ರ ಮೋದಿ ಸಂತಾಪ:

ಕರ್ನಾಟಕದ ನಾಯಕರ ಸಂತಾಪ:

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ಕರ್ನಾಟಕದ ರಾಜಕೀಯ ನಾಯಕರು ತೀವ್ರ ದಿಗ್ಭ್ರಮೆ ಮತ್ತು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಈ ಕುರಿತು ತಮ್ಮ ಸಂತಾಪದ ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅವರ ನಿಧನವು ಮಹಾರಾಷ್ಟ್ರದ ರಾಜಕೀಯ ಮತ್ತು ಸಾರ್ವಜನಿಕ ಜೀವನಕ್ಕೆ ದೊಡ್ಡ ನಷ್ಟ. ಅವರು ಅಪಾರ ಅನುಭವ ಮತ್ತು ದೃಢ ಸಂಕಲ್ಪ ಹೊಂದಿದ್ದ ನಾಯಕರಾಗಿದ್ದರು. ಅವರ ಕುಟುಂಬಕ್ಕೆ ಮತ್ತು ಬೆಂಬಲಿಗರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಡಿಕೆ ಶಿವಕುಮಾರ್​ ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್ ಅವರ ಸಾವಿನ ಸುದ್ದಿ ಅತ್ಯಂತ ಆಘಾತಕಾರಿ ಮತ್ತು ಬೇಸರ ತಂದಿದೆ. ಅವರು ದೇಶದ ರಾಜಕೀಯದಲ್ಲಿ ಅತ್ಯಂತ ಕ್ರಿಯಾಶೀಲ ನಾಯಕರಾಗಿದ್ದರು ಎಂದು ಹೇಳಿದ್ದಾರೆ.

ಹೆಚ್​​​ ಡಿ ಕುಮಾರಸ್ವಾಮಿ:

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅಜಿತ್ ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ನೆರೆಯ ರಾಜ್ಯದ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿರುವುದು ಇಡೀ ದೇಶಕ್ಕೆ ನಷ್ಟ ಎಂದು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:24 am, Wed, 28 January 26

Source link

Maharashtra Plane Crash: ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ – Kannada News | Ajit Pawar Dies in Horrific Baramati Plane Crash, Maharashtra: NDRF Recovers Bodies

ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28) ಸಂಭವಿಸಿದ ಭೀಕರ ವಿಮಾನ ಅಪಘಾತದ ಸ್ಥಳವು ಅತ್ಯಂತ ಭೀಕರವಾಗಿದೆ. ನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ವಿಮಾನದಲ್ಲಿ ದೊಡ್ಡ ಮಟ್ಟದ ಸ್ಫೋಟ ಸಂಭವಿಸಿದ್ದರಿಂದ, ವಿಮಾನದ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಕೇವಲ ವಿಮಾನದ ಬಾಲದ ಭಾಗ ಮತ್ತು ರೆಕ್ಕೆಗಳ ಕೆಲವು ಅವಶೇಷಗಳು ಮಾತ್ರ ಗುರುತಿಸಲು ಸಾಧ್ಯವಾಗುವಂತೆ ಉಳಿದಿವೆ. ವಿಮಾನ ಪತನವಾದ ರಭಸಕ್ಕೆ ಅದರ ಬಿಡಿಭಾಗಗಳು ರನ್‌ವೇ ಸುತ್ತಮುತ್ತ ನೂರಾರು ಮೀಟರ್‌ಗಳವರೆಗೆ ಚದುರಿಹೋಗಿವೆ. ಇಡೀ ಪ್ರದೇಶವು ಕಪ್ಪು ಹೊಗೆಯಿಂದ ಆವೃತವಾಗಿತ್ತು. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿವೆ. ಪ್ರಸ್ತುತ ಪೊಲೀಸ್ ಮತ್ತು ಎನ್‌ಡಿಆರ್‌ಎಫ್ (NDRF) ತಂಡಗಳು ವಿಮಾನದ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕೆಲಸದಲ್ಲಿ ತೊಡಗಿವೆ. ಈ ದುರಂತದಲ್ಲಿ ಅಜಿತ್ ಪವಾರ್ ಮತ್ತು ಇತರ ಐವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೆಟ್ರೋದಲ್ಲಿ ಸ್ಟಂಟ್ ಮಾಡಿದ ವರುಣ್ ಧವನ್​​ಗೆ ದಂಡ – Kannada News | Varun Dhawan Fined for Mumbai Metro Stunt: Viral Video Sparks Safety Debate

‘ಬಾರ್ಡರ್ 2’ ಚಿತ್ರ (Border 2 Movie) ಯಶಸ್ಸು ಕಂಡಿದೆ. ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಹೀಗಿರುವಾಗಲೇ ವರುಣ್ ಧವನ್ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಶನಿವಾರ, ವರುಣ್ ಧವನ್ ಮುಂಬೈನಲ್ಲಿ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವಿಡಿಯೋ ವೈರಲ್ ಆಗಿದೆ. ಮೆಟ್ರೋದಲ್ಲಿ ಮಾಡಿದ ಸ್ಟಂಟ್‌ನಿಂದಾಗಿ ವರುಣ್ ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ದಂಡ ಕೂಡ ವಿಧಿಸಲಾಗಿದೆ.

ಮುಂಬೈ ಮೆಟ್ರೋದಲ್ಲಿನ ಹ್ಯಾಂಡಲ್‌ಗಳಲ್ಲಿ ನೇತಾಡುವ ಮೂಲಕ ವರುಣ್ ಧವನ್ ಪುಲ್-ಅಪ್ ಮಾಡಲು ಪ್ರಯತ್ನಿಸಿದರು. ಆ ವಿಡಿಯೋ ವೈರಲ್ ಆಗಿದೆ. ಇದರಿಂದ ಅವರು ವಿವಾದಕ್ಕೆ ಸಿಲುಕಿದರು. ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರು ದೊಡ್ಡ ವಿವಾದಕ್ಕೆ ಸಿಲುಕಿದರು. ಅವರಿಗೆ ದಂಡವನ್ನೂ ವಿಧಿಸಲಾಯಿತು.

ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ (MMMOCL) ಅದೇ ವೀಡಿಯೊವನ್ನು ತನ್ನ ಖಾತೆಯಲ್ಲಿ ಪೋಸ್ಟ್ ಮಾಡಿ ವರುಣ್ ಧವನ​್​ಗೆ ಕಿವಿಮಾತು ಹೇಳಿದೆ. ವರುಣ್ ಧವನ್ ಅವರನ್ನು ಟ್ಯಾಗ್ ಮಾಡುವ ಮೂಲಕ ಸುರಕ್ಷತಾ ಸಂದೇಶವನ್ನು ಸಹ ನೀಡಿದೆ.

‘ವರುಣ್ ಧವನ್, ದಯವಿಟ್ಟು ಮುಂಬೈ ಮೆಟ್ರೋದಲ್ಲಿ ಈ ಸ್ಟಂಟ್ ಮಾಡಬೇಡಿ. ಸ್ನೇಹಿತರೊಂದಿಗೆ ಮೆಟ್ರೋದಲ್ಲಿ ಪ್ರಯಾಣಿಸುವುದು ಖುಷಿ ನೀಡುತ್ತದೆ ಎಂದು ನಮಗೆ ತಿಳಿದಿದೆ. ಆದರೆ ಈ ಹ್ಯಾಂಡಲ್‌ಗಳನ್ನು ಹಿಡಿದು ನೇತಾಡುವುದು ಸರಿ ಅಲ್ಲ. ಮೆಟ್ರೋದಲ್ಲಿನ ಹ್ಯಾಂಡಲ್‌ಗಳು ಇರೋದು ಪ್ರಯಾಣಿಕರ ಸುರಕ್ಷತೆಗಾಗಿ. ಇಂತಹ ಕೃತ್ಯಗಳು ಅಪಾಯಕಾರಿ ಮಾತ್ರವಲ್ಲ, ಇತರ ಪ್ರಯಾಣಿಕರಿಗೂ ಕಿರಿಕಿರಿ ಉಂಟುಮಾಡಬಹುದು’ ಎಂದು ಮುಂಬೈ ಮೆಟ್ರೋ ತನ್ನ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ. ಇದು ಎಲ್ಲೆಡೆ ಚರ್ಚೆಗೆ ನಾಂದಿ ಹಾಡಿತು ಮತ್ತು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಸಹ ವರುಣ್ ಅವರನ್ನು ಟ್ರೋಲ್ ಮಾಡಿದ್ದಾರೆ.

ಇದನ್ನೂ ಓದಿ: ಏರಿಕೆ ಕಂಡ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; 2 ದಿನಕ್ಕೆ ಎಷ್ಟು ಕೋಟಿ?

ಈ ಮಧ್ಯೆ, ಮೆಟ್ರೋದಲ್ಲಿ ಪ್ರಯಾಣಿಸುವಾಗ ಮೆಟ್ರೋ ರೈಲಿನ ಹ್ಯಾಂಡಲ್‌ಗೆ ನೇತಾಡಿದ್ದಕ್ಕಾಗಿ ನಟ ವರುಣ್ ಧವನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (MMRDA) ಕೊನೆಗೂ ವರುಣ್ ಧವನ್‌ಗೆ 500 ರೂ. ದಂಡ ವಿಧಿಸಿದ್ದು, ರೈಲಿನ ಹ್ಯಾಂಡಲ್‌ಗೆ ನೇತಾಡುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವೇದಿಕೆ ಮೇಲೆ ದೌರ್ಜನ್ಯ, ಅವಮಾನ ಆರೋಪ, ದೂರು ನೀಡಿದ ಖ್ಯಾತ ನಟಿ – Kannada News | Actress Mimi Chakraborty gave complaint alleging harassment

ಪಶ್ಚಿಮ ಬಂಗಾಳದ (West Bengal) ಖ್ಯಾತ ನಟಿ, ಟಿಎಂಸಿಯ ಮಾಜಿ ಸಂಸದೆ ಮಿಮಿ ಚಕ್ರವರ್ತಿ (Mimi Chakraborty) ಅವರು ದೌರ್ಜನ್ಯದ ಆರೋಪ ಮಾಡಿದ್ದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಳದ ಜಿಲ್ಲೆಯೊಂದರಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ವೇದಿಕೆ ಮೇಲೆ ತಮ್ಮ ಮೇಲೆ ದೌರ್ಜನ್ಯ ಎಸಗಲಾಯ್ತು, ಬಲವಂತದಿಂದ ನನ್ನ ಕಾರ್ಯಕ್ರಮವನ್ನು ನಿಲ್ಲಿಸಲಾಯ್ತು ಎಲ್ಲರೆದುರು ಅವಮಾನ ಮಾಡಲಾಯ್ತು ಎಂದು ನಟಿ ಮಿಮಿ ಚಕ್ರವರ್ತಿ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.

ಪಶ್ಚಿಮ ಬಂಗಾಳದ ನಯಾಗ್ರಾಂನ ಬೋಂಗೋನ್ ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಿಮಿ ಚಕ್ರವರ್ತಿಯನ್ನು ಅತಿಥಿಯಾಗಿ ಆಹ್ವಾನ ಮಾಡಲಾಗಿತ್ತು. ನಟಿ ನೀಡಿರುವ ದೂರಿನ ಅನ್ವಯ, ನಟಿ ಮಿಮಿ ವೇದಿಕೆ ಮೇಲೆ ಪ್ರದರ್ಶನ ನೀಡುತ್ತಿರುವಾಗಲೇ ವೇದಿಕೆ ಏರಿದ ಆಯೋಜಕರಲ್ಲಿ ಒಬ್ಬರಾದ ತನ್ಮಯ್ ಶಾಸ್ತ್ರಿ ಎಂಬುವರು ನಟಿಯನ್ನು ಪ್ರದರ್ಶನ ನಿಲ್ಲಿಸುವಂತೆ ಹೇಳಿದ್ದಲ್ಲದೆ, ಬಲವಂತದಿಂದ ಕೆಳಕ್ಕೆ ಇಳಿಸಿದ್ದಾರೆ. ‘ಸಾಕು ನಿಲ್ಲಿಸು, ಇಲ್ಲಿಂದ ತೆರಳು’ ಎಂದು ಕಠಿಣವಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

ಆದರೆ ಆಯೋಜಕರು ಹೇಳುತ್ತಿರುವುದೇ ಬೇರೆ, ವೇದಿಕೆ ಕಾರ್ಯಕ್ರಮಕ್ಕೆ ಮಧ್ಯರಾತ್ರಿ 12 ಗಂಟೆಯ ವರೆಗೆ ಮಾತ್ರ ಪೊಲೀಸರು ಅವಕಾಶ ಕೊಟ್ಟಿದ್ದರಂತೆ. ಆದರೆ ನಟಿ ಸುಮಾರು ಒಂದು ಗಂಟೆ ತಡವಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದಲ್ಲದೆ, ವೇದಿಕೆ ಮೇಲೆ ಸಹ ಹೆಚ್ಚು ಸಮಯ ತೆಗೆದುಕೊಂಡರಂತೆ. ಪೊಲೀಸರ ನಿಯಮದ ಕಾರಣ ತಾವು ನಟಿಯನ್ನು ಕಾರ್ಯಕ್ರಮ ನಿಲ್ಲಿಸುವಂತೆ ಹೇಳಿದೆವು ಎಂದಿದ್ದಾರೆ. ಅಲ್ಲದೆ ತಾವು ಯಾವುದೇ ದೌರ್ಜನ್ಯವನ್ನಾಗಲಿ, ನಟಿಯೊಂದಿಗೆ ಅವಮಾನಕರ ರೀತಿಯಲ್ಲಾಗಲಿ ನಡೆದುಕೊಂಡಿಲ್ಲ ಎಂದು ಆಯೋಜಕರು ಹೇಳಿದ್ದಾರೆ. ಬದಲಿಗೆ, ನಟಿಯ ಬೌನ್ಸರ್​​ಗಳು ನಮ್ಮೊಂದಿಗೆ ಅನುಚಿತವಾಗಿ ನಡೆದುಕೊಂಡರು ಎಂದಿದ್ದಾರೆ.

ಇದನ್ನೂ ಓದಿ:ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?

ನಟಿ ಮಿಮಿ ಚಕ್ರವರ್ತಿ, ಇಮೇಲ್ ಮೂಲಕ ಬೊಂಗೋನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸಹ ತನಿಖೆ ಆರಂಭಿಸಿದ್ದಾರೆ. ನಟಿ ಮಿಮಿ ಅವರು ಈ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಬರೆದುಕೊಂಡಿದ್ದು, ನಟಿಯ ಪೋಸ್ಟ್​​ಗೆ ಪರ-ವಿರೋಧ ಅಭಿಪ್ರಾಯಗಳು ಸಹ ವ್ಯಕ್ತವಾಗಿವೆ. ಮಿಮಿ ಚಕ್ರವರ್ತಿ, ಬಂಗಾಳಿ ಸಿನಿಮಾ ರಂಗದ ಬಲು ಜನಪ್ರಿಯ ನಟಿ, ಮತ್ತು ಟಿಎಂಸಿ ಪಕ್ಷದ ಮಾಜಿ ಸಂಸದೆ ಸಹ ಆಗಿದ್ದವರು. ಬಂಗಾಳಿ ಸಿನಿಮಾಗಳ ಜೊತೆಗೆ ಒಂದು ಬಾಲಿವುಡ್ ಸಿನಿಮಾ ಮತ್ತು ಒಂದು ಬಾಂಗ್ಲಾದೇಶಿ ಸಿನಿಮಾನಲ್ಲಿಯೂ ನಟಿಸಿದ್ದಾರೆ ಮಿಮಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ: ವಾಯು ದುರಂತಗಳಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ರಾಜಕಾರಣಿಗಳು ಯಾರ್ಯಾರು? – Kannada News | Ajit Pawar’s Tragic Death: A Look at Indian Political Leaders Lost in Air Accidents

ಬಾರಾಮತಿ, ಜನವರಿ 28: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar)ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡ ಪರಿಣಾಮ ವಿಮಾನದಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಅವರೇ ಗೆದ್ದ ಕ್ಷೇತ್ರದಲ್ಲಿ ಅವರ ರಾಜಕೀಯ ಪಯಣವನ್ನು ಕೊನೆಗೊಳಿಸಿದರು. ಪುಣೆಯ ಬಾರಾಮತಿ ಪ್ರದೇಶದಲ್ಲಿ ಇಳಿಯುವಾಗ ವಿಮಾನ ಪತನಗೊಂಡಿತ್ತು. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ ರಾಜಕಾರಣಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ವಿಜಯ್ ರೂಪಾನಿ (2025)
ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಜೂನ್ 12, 2025 ರಂದು ಅಹಮದಾಬಾದ್‌ನಲ್ಲಿ ನಡೆದ ದುರಂತ ವಿಮಾನ ಅಪಘಾತದಲ್ಲಿ ನಿಧನರಾಗಿದ್ದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ  ಲಂಡನ್‌ಗೆ ತೆರಳುತ್ತಿದ್ದ ವಿಮಾನ ಪತನಗೊಂಡಿತ್ತು ಅದರಲ್ಲಿ ರೂಪಾನಿ ಇದ್ದರು. ವಿಮಾನದಲ್ಲಿದ್ದ 242 ಜನರಲ್ಲಿ 241 ಜನರು ಸಾವನ್ನಪ್ಪಿದರು.

ದೋರ್ಜಿ ಖಂಡು (2011)
ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ದೋರ್ಜಿ ಖಂಡು ಮತ್ತು ಇತರ ನಾಲ್ವರನ್ನು ಏಪ್ರಿಲ್ 30, 2011 ರಂದು ತವಾಂಗ್‌ನಿಂದ ಇಟಾನಗರಕ್ಕೆ ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ರಾಜ್ಯದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಮಹಾರಾಷ್ಟ್ರ ರಾಜಕೀಯದ ಚಾಣಕ್ಯ ಶರದ್ ಪವಾರ್​ಗೆ ಸೆಡ್ಡು ಹೊಡೆದು ಗೆದ್ದಿದ್ದ ಅಜಿತ್ ಪವಾರ್ ಇನ್ನು ನೆನಪು ಮಾತ್ರ

ವೈ.ಎಸ್. ರೆಡ್ಡಿ (2009)
ಆಂಧ್ರಪ್ರದೇಶದ ಆಗಿನ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ (2009), ವೈ.ಎಸ್.ಆರ್ ಎಂದೇ ಜನಪ್ರಿಯರಾಗಿದ್ದರು, ಸೆಪ್ಟೆಂಬರ್ 2, 2009 ರಂದು ಅವರ ಬೆಲ್ 430 ಹೆಲಿಕಾಪ್ಟರ್ ಕೆಟ್ಟ ಹವಾಮಾನದಿಂದಾಗಿ ದಟ್ಟವಾದ ನಲ್ಲಮಲ ಕಾಡಿನಲ್ಲಿ ಅಪಘಾತಕ್ಕೀಡಾಗಿ ನಿಧನರಾದರು.

OP ಜಿಂದಾಲ್ ಮತ್ತು ಸುರೇಂದರ್ ಸಿಂಗ್ (2005)
2005 ರಲ್ಲಿ ಕೈಗಾರಿಕೋದ್ಯಮಿ ಮತ್ತು ಹರಿಯಾಣ ಸಚಿವ ಓಂ ಪ್ರಕಾಶ್ ಜಿಂದಾಲ್ ಅವರು ಕೃಷಿ ಸಚಿವ ಸುರೇಂದರ್ ಸಿಂಗ್ ಅವರೊಂದಿಗೆ ಹೆಲಿಕಾಪ್ಟರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರು. ಅವರ ಹೆಲಿಕಾಪ್ಟರ್ ದೆಹಲಿಯಿಂದ ಚಂಡೀಗಢಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಅಪಘಾತಕ್ಕೀಡಾಯಿತು.

ಕೆ.ಎಸ್. ಸೌಮ್ಯ (2004)
ದಕ್ಷಿಣ ಭಾರತದ ಖ್ಯಾತ ನಟಿ ಕೆ.ಎಸ್. ಸೌಮ್ಯ, ಸೌಂದರ್ಯ ಎಂದೇ ಜನಪ್ರಿಯರಾಗಿದ್ದರು. ಅವರು ಏಪ್ರಿಲ್ 17, 2004 ರಂದು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದರು. ಸೂರ್ಯವಂಶಂ ಚಿತ್ರದ ನಟಿ ಬೆಂಗಳೂರಿನಿಂದ ಕರೀಂನಗರಕ್ಕೆ ತನ್ನ ಸಹೋದರನೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಸಿಪ್ರಿಯನ್ ಸಂಗ್ಮಾ (2004)
2004 ರ ಸೆಪ್ಟೆಂಬರ್ 22 ರಂದು ರಾಜ್ಯ ರಾಜಧಾನಿಯಿಂದ ಕೇವಲ 20 ಕಿ.ಮೀ ದೂರದಲ್ಲಿರುವ ಬಾರಾಪಾನಿ ಸರೋವರದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಮೇಘಾಲಯದ ಗ್ರಾಮೀಣಾಭಿವೃದ್ಧಿ ಸಚಿವ ಸಿಪ್ರಿಯನ್ ಸಂಗ್ಮಾ ಮತ್ತು ಇತರ ಒಂಬತ್ತು ಮಂದಿ ಪವನ್ ಹನ್ಸ್ ಹೆಲಿಕಾಪ್ಟರ್‌ನಲ್ಲಿ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಹೋಗುತ್ತಿದ್ದಾಗ ಸಾವನ್ನಪ್ಪಿದ್ದರು.

ಜಿಎಂಸಿ ಬಾಲಯೋಗಿ (2002)
ಲೋಕಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಜಿಎಂಸಿ ಬಾಲಯೋಗಿ ಅವರನ್ನು ಮಾರ್ಚ್ 3, 2002 ರಂದು ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಿಂದ ಕರೆದೊಯ್ಯುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕೈಕಲೂರು ಬಳಿಯ ಕೊಳಕ್ಕೆ ಅಪ್ಪಳಿಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು.

ಮಾಧವರಾವ್ ಸಿಂಧಿಯಾ (2001)
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದ ಮಾಧವರಾವ್ ಸಿಂಧಿಯಾ ಅವರು ಸೆಪ್ಟೆಂಬರ್ 30, 2001 ರಂದು ಕಾನ್ಪುರದಲ್ಲಿ ರಾಜಕೀಯ ರ್ಯಾಲಿಯೊಂದರ ಮಾರ್ಗಮಧ್ಯೆ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾದರು. ಉತ್ತರ ಪ್ರದೇಶದ ಮಣಿಪುರಿ ಬಳಿ ಪ್ರತಿಕೂಲ ಹವಾಮಾನದಿಂದಾಗಿ 10 ಆಸನಗಳ ಖಾಸಗಿ ವಿಮಾನ ಅಪಘಾತಕ್ಕೀಡಾಗಿತ್ತು.

ಸಂಜಯ್ ಗಾಂಧಿ (1980)
ಕಾಂಗ್ರೆಸ್ ನಾಯಕ ಮತ್ತು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ, ಜೂನ್ 23, 1980 ರಂದು ನಡೆದ ದುರಂತ ಅಪಘಾತದಲ್ಲಿ ನಿಧನರಾದರು. ಸಫ್ದರ್ಜಂಗ್ ವಿಮಾನ ನಿಲ್ದಾಣದ ಬಳಿ ದೆಹಲಿ ಫ್ಲೈಯಿಂಗ್ ಕ್ಲಬ್ ವಿಮಾನದಲ್ಲಿ ವೈಮಾನಿಕ ಸಾಹಸ ಮಾಡಲು ಪ್ರಯತ್ನಿಸುತ್ತಿದ್ದಾಗ, ವಿಮಾನವು ನಿಯಂತ್ರಣ ತಪ್ಪಿ ಪತನಗೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Optical Illusion: ಗಿಳಿಗಳ ನಡುವೆ ಅಡಗಿದೆ ಬಣ್ಣದ ಚಿಟ್ಟೆ;‌ ಜಸ್ಟ್ 15 ಸೆಕೆಂಡುಗಳಲ್ಲಿ ಗುರುತಿಸಿ – Kannada News | Optical illusion: Ready to accept this challenge; Find the butterfly hidden among the parrots

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಒಂದು ರೀತಿಯ ಸವಾಲಿನ ಆಟಗಳು. ಹೀಗಾಗಿ ಈ ಸವಾಲಿನ ಆಟಗಳನ್ನು ಆಡಿ ಮುಗಿಸುವಷ್ಟರಲ್ಲಿ ಸುಸ್ತೋ ಸುಸ್ತು ಆಗಿರುತ್ತದೆ. ಹೌದು, ಇಂತಹ ಮೋಜಿನ ಆಟಗಳು ಸ್ವಲ್ಪ ಟ್ರಿಕ್ಕಿ ಅನಿಸಿದರೂ ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಇದು ಬುದ್ಧಿವಂತಿಕೆಗೆ ಸವಾಲೆಸುವ ಕಾರಣ ಹೆಚ್ಚಿನವರು ಈ ಒಗಟನ್ನು ಬಿಡಿಸುವಲ್ಲಿ ವಿಫಲರಾಗುತ್ತಾರೆ. ಇದೀಗ ಮೆದುಳಿಗೆ ಕೆಲಸ ನೀಡುವ ಕಠಿಣ ಸವಾಲಿನ ಚಿತ್ರವೊಂದು ವೈರಲ್‌ ಆಗಿದೆ. ಕಲರ್ ಫುಲ್ ಗಿಳಿಗಳ ನಡುವೆ ಬಣ್ಣದ ಚಿಟ್ಟೆಯೊಂದಿದೆ. ಈ ಚಿಟ್ಟೆಯನ್ನು (butterfly) ನಿರ್ದಿಷ್ಟ ಸಮಯದೊಳಗೆ ಗುರುತಿಸಲು ಸಾಧ್ಯವೇ?.

ಈ ಇಲ್ಯೂಷನ್‌ ಚಿತ್ರದಲ್ಲಿ ಏನಿದೆ?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಚಿತ್ರಗಳಲ್ಲಿ ಇದು ಒಂದು ಸೇರಿದ್ದು, ಇಲ್ಲಿ ಮರದ ಕೊಂಬೆಯ ಮೇಲೆ ಬಣ್ಣ ಬಣ್ಣದ ಗಿಳಿಗಳು ಕುಳಿತಿವೆ. ಈ ಪಕ್ಷಿಗಳು ನಡುವೆ ಚಿಟ್ಟೆಯೊಂದು ಅಡಗಿ ಕುಳಿತಿದ್ದು, 15 ಸೆಕೆಂಡುಗಳಲ್ಲಿ ಚಿಟ್ಟೆಯನ್ನು ಪತ್ತೆ ಹಚ್ಚಿ ಜಾಣರು ಎನಿಸಿಕೊಳ್ಳಿ. ಈ ಸವಾಲನ್ನು ಸ್ವೀಕರಿಸಲು ಸಿದ್ಧರಿದ್ರೆ ಈ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿರುವ ಮೂವರು ವ್ಯಕ್ತಿಗಳ ಮುಖಗಳನ್ನು ಪತ್ತೆ ಹಚ್ಚಿ

ಚಿಟ್ಟೆಯನ್ನು ಕಂಡು ಹಿಡಿಯುವಿರಾ?

ಇಲ್ಯೂಷನ್ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಇದು ಒಗಟು ಅನುಭವಿ ಆಟಗಾರರನ್ನು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದ್ರೆ ಮಾತ್ರ ನಿಮ್ಮ ಕಣ್ಣಿಗೆ ಬಣ್ಣದ ಚಿಟ್ಟೆ ಕಾಣಿಸಲು ಸಾಧ್ಯ. ನೀವು ಚಿತ್ರವನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ಕಣ್ಣು ಅಗಲಿಸಿ ನೋಡಿ. ಎಷ್ಟೇ ಪ್ರಯತ್ನ ಪಟ್ಟರೂ ಚಿಟ್ಟೆಯನ್ನು ಹುಡುಕಲು ಸಾಧ್ಯವಾಗಿಲ್ಲವೇ?, ಉತ್ತರವನ್ನು ನಾವೇ ನಿಮಗೆ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಚಿಟ್ಟೆ ಎಲ್ಲಿದೆ ಎಂದು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version