‘ಎಲ್ಲವನ್ನು ಸರಿಪಡಿಸಿಕೊಳ್ಳೋಣ’; ಬಿಸಿಸಿಐಗೆ ಪತ್ರ ಬರೆದ ಬಾಂಗ್ಲಾ ಕ್ರಿಕೆಟ್ ಮಂಡಳಿ

‘ಎಲ್ಲವನ್ನು ಸರಿಪಡಿಸಿಕೊಳ್ಳೋಣ’; ಬಿಸಿಸಿಐಗೆ ಪತ್ರ ಬರೆದ ಬಾಂಗ್ಲಾ ಕ್ರಿಕೆಟ್ ಮಂಡಳಿ

ಬಿಸಿಸಿಐ (BCCI) ಎದುರು ತೊಡೆ ತಟ್ಟಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಇದೀಗ ಸೋತು ಶರಣಾದಂತೆ ತೋರುತ್ತಿದೆ. ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇದರ ಪರಿಣಾಮವಾಗಿ ತನ್ನ ತಂಡದ ಆಟಗಾರರು ಐಪಿಎಲ್ ಆಡದಂತ್ತಾಯಿತು. ಇದರ ಜೊತೆಗೆ ತನ್ನ ತಂಡ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸದಂತ್ತಾಯಿತು. ಇದೀಗ ಮುಂಬರುವ ಉಭಯ ದೇಶಗಳ ಸರಣಿಯೂ ರದ್ದಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಆವೃತ್ತಿಯ ಏಷ್ಯಾಕಪ್ ಕೂಡ ಕೈಜಾರುವ ಸ್ಥಿತಿಯಲ್ಲಿದೆ. ಈಗಾಗಲೇ ನಷ್ಟದ ಸುಳಿಯಲ್ಲಿ ಸಿಲುಕಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ, ಬಿಸಿಸಿಐನೊಂದಿಗೆ ಸಂಬಂಧ ಮತ್ತಷ್ಟು ಹಳಸಿದರೆ, ಪಾತಾಳಕ್ಕೆ ಕುಸಿಯಲಿದೆ. ಹೀಗಾಗಿ ಅದಗೆಟ್ಟಿರುವ ಸಂಬಂಧವನ್ನು ಸರಿಪಡಿಸಿಕೊಳ್ಳುವ ಸಲುವಾಗಿ ಬಿಸಿಸಿಐಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇತ್ತೀಚೆಗೆ ಬಿಸಿಸಿಐಗೆ ಪತ್ರ ಬರೆದಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ . ಭಾರತ ಮತ್ತು ಬಾಂಗ್ಲಾದೇಶ ನಡುವಿನ ದೀರ್ಘಕಾಲದ ಕ್ರಿಕೆಟ್ ಸಂಬಂಧಗಳನ್ನು ಈ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಎರಡು ಮಂಡಳಿಗಳ ನಡುವಿನ ಸಂಬಂಧವನ್ನು ಪುನಃಸ್ಥಾಪಿಸುವ ಬಯಕೆಯನ್ನು ವ್ಯಕ್ತಪಡಿಸಲಾಗಿದೆ ಎಂದು ಬಿಸಿಸಿಐ ಮತ್ತು ಬಿಸಿಬಿಯ ಮೂಲಗಳು ತಿಳಿಸಿವೆ.

ಬಾಂಗ್ಲಾ ಮಂಡಳಿಗೆ ಸಾಲು ಸಾಲು ಸಂಕಷ್ಟ

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಿಲುವು ಬದಲಾವಣೆಗೆ ಪ್ರಮುಖ ಕಾರಣ ಮುಂಬರುವ ಪ್ರಮುಖ ಟೂರ್ನಮೆಂಟ್ ಮತ್ತು ಸರಣಿ. ಭಾರತ ಮತ್ತು ಬಾಂಗ್ಲಾದೇಶ ಈ ವರ್ಷದ ಸೆಪ್ಟೆಂಬರ್‌ನಲ್ಲಿ ಏಕದಿನ ಮತ್ತು ಟಿ20 ಸರಣಿಯನ್ನು ಆಡಲಿವೆ, ಇದಕ್ಕಾಗಿ ಟೀಂ ಇಂಡಿಯಾ ಬಾಂಗ್ಲಾದೇಶ ಪ್ರವಾಸ ಮಾಡಬೇಕಾಗಿದೆ. ಈ ಸರಣಿಯನ್ನು ಮೂಲತಃ ಕಳೆದ ವರ್ಷ ಆಡಲು ನಿರ್ಧರಿಸಲಾಗಿತ್ತು, ಆದರೆ ಬಾಂಗ್ಲಾದೇಶದ ಪರಿಸ್ಥಿತಿಯಿಂದಾಗಿ, ಅದನ್ನು ಸೆಪ್ಟೆಂಬರ್ 2026 ಕ್ಕೆ ಮುಂದೂಡಲು ನಿರ್ಧರಿಸಲಾಯಿತು. ಆದಾಗ್ಯೂ, ಐಪಿಎಲ್ ಮತ್ತು ಟಿ20 ವಿಶ್ವಕಪ್ ಸುತ್ತಲಿನ ವಿವಾದವು ಈ ಸರಣಿಯನ್ನು ಅಪಾಯಕ್ಕೆ ಸಿಲುಕಿಸಿದೆ.

ಏಷ್ಯಾಕಪ್ ಸ್ಥಳಾಂತರವಾಗಬಹುದು

ಈ ಸರಣಿ ಮಾತ್ರವಲ್ಲ, ಮುಂದಿನ ವರ್ಷದ ಏಷ್ಯಾಕಪ್ ಕೂಡ ಈ ಪ್ರಯತ್ನಕ್ಕೆ ಪ್ರಮುಖ ಕಾರಣವಾಗಿದೆ. ಬಾಂಗ್ಲಾದೇಶದಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಆದ್ದರಿಂದ, ಬಿಸಿಸಿಐ ಜೊತೆಗಿನ ಸಂಬಂಧಗಳು ಸುಧಾರಿಸದಿದ್ದರೆ, ಟೀಂ ಇಂಡಿಯಾ ಈ ಪಂದ್ಯಾವಳಿಗಾಗಿ ಬಾಂಗ್ಲಾದೇಶಕ್ಕೆ ಪ್ರಯಾಣಿಸಲು ನಿರಾಕರಿಸಬಹುದು, ಇದರಿಂದಾಗಿ ಅದನ್ನು ಬಾಂಗ್ಲಾದೇಶದ ಹೊರಗೆ ಸ್ಥಳಾಂತರಿಸಬೇಕಾಗುತ್ತದೆ. ಒಂದು ವೇಳೆ, ಟೀಂ ಇಂಡಿಯಾ ದ್ವಿಪಕ್ಷೀಯ ಸರಣಿ ಮತ್ತು ಏಷ್ಯಾಕಪ್‌ಗಾಗಿ ಬಾಂಗ್ಲಾದೇಶಕ್ಕೆ ಪ್ರಯಾಣಿಸದಿದ್ದರೆ, ಅದು ಬಿಸಿಬಿಗೆ ಗಮನಾರ್ಹ ನಷ್ಟವನ್ನುಂಟು ಮಾಡುತ್ತದೆ. ಹೀಗಾಗಿ ಇದನ್ನು ತಪ್ಪಿಸಲು, ಪರಿಸ್ಥಿತಿಯನ್ನು ಸರಿಪಡಿಸುವ ಬಯಕೆಯನ್ನು ಮಂಡಳಿ ವ್ಯಕ್ತಪಡಿಸುತ್ತಿದೆ.

IPL 2026: 12 ಸ್ಥಳ, 50 ಪಂದ್ಯಗಳು; ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಬದಲಾವಣೆಗೆ ಮುಂದಾದ ಹೊಸ ಸರ್ಕಾರ

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಉರುಳಿಸಿದ ನಂತರ, ಕಳೆದ ಒಂದೂವರೆ ವರ್ಷದಿಂದ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳು ಹದಗೆಡುತ್ತಿವೆ. ಅಂದಿನಿಂದ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಹತ್ಯೆಗಳು ನಡೆಯುತ್ತಿವೆ. ಇದಲ್ಲದೆ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದೆ. ಜನವರಿ 2026 ರಲ್ಲಿ, ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರಗಿಡಲು ಬಿಸಿಸಿಐ ಆದೇಶಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಮಧ್ಯಂತರ ಸರ್ಕಾರದ ಕ್ರೀಡಾ ಸಚಿವರು ಮತ್ತು ಆ ಸಮಯದಲ್ಲಿ ಮಂಡಳಿಯ ಉಸ್ತುವಾರಿ ವಹಿಸಿದ್ದ ಅಧಿಕಾರಿಗಳು ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ನಿರಾಕರಿಸಿದರು.

ಐಸಿಸಿ ಪದೇ ಪದೇ ಒತ್ತಾಯಿಸಿದರೂ ಬಾಂಗ್ಲಾದೇಶ ಮಣಿಯಲು ನಿರಾಕರಿಸಿದಾಗ, ಅದನ್ನು ಪಂದ್ಯಾವಳಿಯಿಂದ ಹೊರಹಾಕಲಾಯಿತು. ಇದೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು ಅಂದಿನಿಂದ, ಬಾಂಗ್ಲಾದೇಶ ಸರ್ಕಾರ ಮತ್ತು ಅದರ ಮಂಡಳಿಯು ಭಾರತದೊಂದಿಗೆ ಸಂಬಂಧವನ್ನು ಸುಧಾರಿಸಲು ಕೆಲಸ ಮಾಡುತ್ತಿದೆ. ಇದರ ಪರಿಣಾಮವು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಸರ್ಕಾರದೊಂದಿಗೆ ಸಮಾಲೋಚಿಸಿದ ನಂತರವೇ ಬಿಸಿಸಿಐ ಈ ವಿಷಯದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನ ಐದೂ ಪಾಲಿಕೆಗಳಿಗೆ ಲೋಗೋ ಭಾಗ್ಯ: ಲಾಂಛನಗಳ ವಿಶೇಷತೆ ತಿಳಿಯಿರಿ

Source link

‘ದಿ ಕೇರಳ ಸ್ಟೋರಿ’ ಬಗ್ಗೆ ಮಲಯಾಳಂ ಸ್ಟಾರ್ ನಟ ಟೊವಿನೊ ಥಾಮಸ್ ಹೇಳಿದ್ದೇನು?

ಇತ್ತೀಚೆಗಷ್ಟೆ ‘ದಿ ಕೇರಳ ಸ್ಟೋರಿ 2’ (The Kerala story 2) ಸಿನಿಮಾ ಬಿಡುಗಡೆ ಆಯ್ತು. ಮೊದಲ ಭಾಗದಷ್ಟು ದೊಡ್ಡ ಹಿಟ್ ಆಗದಿದ್ದರೂ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಸೋಲನ್ನೇನೂ ಕಾಣಲಿಲ್ಲ. ಆದರೆ ಸಿನಿಮಾದ ಮೊದಲ ಭಾಗಕ್ಕೆ ಬಂದಷ್ಟು ವಿರೋಧ ವಿಶೇಷವಾಗಿ ಕೇರಳದಿಂದ ಈ ಬಾರಿ ವ್ಯಕ್ತವಾಗಲಿಲ್ಲ. ಮೊದಲ ಭಾಗ ಬಿಡುಗಡೆ ಆಗುವಾಗ ಖುದ್ದು ಸರ್ಕಾರವೇ ಸಿನಿಮಾದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ಮಾಡಿತ್ತು. ಕೆಲವಾರು ಸೆಲೆಬ್ರಿಟಿಗಳು ಸಹ ಸಿನಿಮಾದ ವಿರುದ್ಧ ಮಾತನಾಡಿದ್ದರು. ಆದರೆ ಈ ಬಾರಿ ಅಂಥಹದ್ದೇನೂ ಹೆಚ್ಚಿಗೆ ಕಂಡು ಬರಲಿಲ್ಲ. ಮಲಯಾಳಂನ ಸ್ಟಾರ್ ನಟರುಗಳಲ್ಲಿ ಒಬ್ಬರಾದ ಟೊವಿನೊ ಥಾಮಸ್ ಈ ಬಗ್ಗೆ ಮಾತನಾಡಿದ್ದಾರೆ.

ಟೊವಿನೊ ಥಾಮಸ್ ಅವರು ತಮ್ಮ ಹೊಸ ಸಿನಿಮಾದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಈ ವೇಳೆ ಅವರಿಗೆ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಗ್ಗೆ ಪ್ರಶ್ನೆ ಎದುರಾಗಿದೆ. ನೀವೇಕೆ ಸಿನಿಮಾದ ವಿರುದ್ಧ ಮಾತನಾಡಲಿಲ್ಲ ಅಥವಾ ಸಾಮಾಜಿಕ ಜಾಲತಾಣದಲ್ಲಿ ಯಾವ ಸಂದೇಶವನ್ನೂ ಸಹ ಹಂಚಿಕೊಂಡಿಲ್ಲ ಎಂಬ ಪ್ರಶ್ನೆ ಕೇಳಲಾಯ್ತು. ಇದಕ್ಕೆ ಜಾಣತನದ ಉತ್ತರವನ್ನು ಟೊವಿನೋ ಥಾಮಸ್ ನೀಡಿದ್ದಾರೆ ಅಲ್ಲದೆ, ಆ ಸಿನಿಮಾದ ಬಗ್ಗೆ ತಮ್ಮ ಸ್ಪಷ್ಟ ನಿಲವು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮುಗಿಯಿತು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ: ಅಂತಿಮವಾಗಿ ಆದ ಕಲೆಕ್ಷನ್ ಎಷ್ಟು?

‘ನಾನು ‘ಕೇರಳ ಸ್ಟೋರಿ’ ಮೊದಲ ಭಾಗ ನೋಡಿದೆ. ಎರಡನೇ ಭಾಗ ನಾನು ನೋಡಿಲ್ಲ. ನಾನು ಮಾತ್ರವಲ್ಲ ಕೇರಳದಲ್ಲಿ ಯಾರೂ ನೋಡಿದಂತಿಲ್ಲ. ಸುಮ್ಮನೆ ಮಾತನಾಡಿ, ಅದಕ್ಕೆ ಪ್ರಚಾರ ನೀಡುವ ಬದಲಿಗೆ ಸುಮ್ಮನಿರುವುದು ಒಳ್ಳೆಯದು ಎನಿಸಿ ನಾನು ಆ ಸಿನಿಮಾದ ಬಗ್ಗೆ ಏನೂ ಮಾತನಾಡಲಿಲ್ಲ. ಪೋಸ್ಟ್ ಸಹ ಮಾಡಲಿಲ್ಲ. ನಾವು ಅದನ್ನು ವಿರೋಧಿಸಿದ್ದರೂ ಸಹ ಅದಕ್ಕೆ ಪ್ರಚಾರ ನೀಡಿದಂತಾಗುತ್ತಿತ್ತು’ ಎಂದಿದ್ದಾರೆ ಟೊವಿನೊ ಥಾಮಸ್.

‘ಮೊದಲ ಭಾಗ ಬಿಡುಗಡೆ ಆದಾಗ ನಾನು ಅದನ್ನು ವಿರೋಧಿಸಿ ಪೋಸ್ಟ್ ಹಾಕಿದ್ದೆ, ಅದು ಒಂದು ರೀತಿಯಲ್ಲಿ ಆ ಸಿನಿಮಾಕ್ಕೆ ಪ್ರಚಾರವೇ ಆಗಿಬಿಟ್ಟಿತು. ಅದನ್ನು ಗಮನಿಸಿದ್ದೆ ಹಾಗಾಗಿ ಈ ಬಾರಿ ಹಾಗೇನೂ ಮಾಡಲಿಲ್ಲ. ಕೇರಳದಲ್ಲಿ ಕೋಟ್ಯಂತರ ಮಂದಿ ಮಹಿಳೆಯರಿದ್ದಾರೆ. ಯಾವುದೋ 3 ಘಟನೆಗಳನ್ನು ಇರಿಸಿಕೊಂಡು ಇಡೀ ಕೇರಳದಲ್ಲಿ ಇಂಥಹುದ್ದೇ ನಡೆಯುತ್ತಿದೆ ಎಂದು ಬಿಂಬಿಸುವುದು ಕೆಟ್ಟದು. ಅದು ಸರಿಯಲ್ಲ’ ಎಂದಿದ್ದಾರೆ ಟೊವಿನೊ ಥಾಮಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇವರೇ ಅಲ್ವಾ ‘ಬೆಸ್ಟ್ ಬಾಸ್’ ಅಂದ್ರೆ!: ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ದೆಹಲಿ, ಏಪ್ರಿಲ್ 03: ಸಾಮಾನ್ಯವಾಗಿ ಹಣಕಾಸು ವರ್ಷದ ಅಂತ್ಯ ಎಂದರೆ ಉದ್ಯೋಗಿಗಳಿಗೆ ಟಾರ್ಗೆಟ್ ಮುಗಿಸುವ ಒತ್ತಡವಿರುತ್ತದೆ. ಆದರೆ ದೆಹಲಿಯ ಈ ಏಜೆನ್ಸಿ ಬಾಸ್ ಮಾತ್ರ ತನ್ನ ಉದ್ಯೋಗಿಗಳಿಗೆ ಅಚ್ಚರಿಯ ಮತ್ತು ಖುಷಿಯ ಸುದ್ದಿಯೊಂದನ್ನು ನೀಡಿದ್ದಾರೆ. ಕಳೆದ ಹಣಕಾಸು ವರ್ಷದಲ್ಲಿ ಕಂಪನಿಯು ಅದ್ಭುತ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ, ಎಲ್ಲಾ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸವನ್ನು ಉಡುಗೊರೆಯಾಗಿ ಘೋಷಿಸಿದ್ದಾರೆ. “ಕಳೆದ ಹಣಕಾಸು ವರ್ಷ ನಮಗೆ ಅದ್ಭುತವಾಗಿತ್ತು. ನಮ್ಮ ತಂಡದ ಕಠಿಣ ಪರಿಶ್ರಮಕ್ಕೆ ಪ್ರತಿಫಲವಾಗಿ ಎಲ್ಲರಿಗೂ 4 ದಿನಗಳ ಗೋವಾ ಪ್ರವಾಸವನ್ನು ಆಯೋಜಿಸಲಾಗಿದೆ. ಅಲ್ಲಿ ಎಲ್ಲರೂ ರಿಲ್ಯಾಕ್ಸ್ ಆಗಿ, ಮನಸ್ಸನ್ನು ರಿಸೆಟ್ ಮಾಡಿಕೊಂಡು ಮತ್ತೆ ಹೊಸ ಹುರುಪಿನಿಂದ ಕೆಲಸ ಮುಂದುವರಿಸೋಣ” ಎಂದು ಏಜೆನ್ಸಿ ಮುಖ್ಯಸ್ಥರು ಘೋಷಿಸಿದ್ದಾರೆ. ಕಂಪನಿಯ ಈ ನಿರ್ಧಾರಕ್ಕೆ ಉದ್ಯೋಗಿಗಳು ಫಿದಾ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಈಗ ಭಾರಿ ವೈರಲ್ ಆಗುತ್ತಿದೆ. “ಇಂತಹ ಬಾಸ್ ಎಲ್ಲರಿಗೂ ಸಿಗಲಿ” ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಮೊದಲ ಗೆಲುವಿನ ಹುಡುಕಾಟದಲ್ಲಿ ಸಿಎಸ್​ಕೆ; ತಂಡದಲ್ಲಿ ಏನೆಲ್ಲಾ ಬದಲಾವಣೆ?

ಐಪಿಎಲ್ 2026 (IPL 2026) ರ ಏಳನೇ ಪಂದ್ಯವು ಏಪ್ರಿಲ್ 3 ರ ಶುಕ್ರವಾರದಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ನಡುವೆ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಆರಂಭವಾಗಲಿದೆ. ಕಳೆದ ಆವೃತ್ತಿಯಲ್ಲಿ ಈ ಎರಡೂ ತಂಡಗಳ ನಡುವೆ ನಡೆದ 2 ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ಗೆದ್ದುಕೊಂಡಿದೆ. ಹೀಗಾಗಿ ಹಿಂದಿನ ಸೋಲುಗಳಿಗೆ ಸೇಡು ತೀರಿಸಿಕೊಳ್ಳಲು ಸಿಎಸ್​ಕೆ ಸಿದ್ಧವಾಗಿದೆ. ಆದಾಗ್ಯೂ ಈ ಆವೃತ್ತಿಯಲ್ಲಿ ಸಿಎಸ್​ಕೆ ತಂಡಕ್ಕೆ ಗೆಲುವಿನ ಆರಂಭ ಸಿಕ್ಕಿಲ್ಲ ಎಂಬುದು ತಂಡವನ್ನು ಒತ್ತಡಕ್ಕೆ ಸಿಲುಕಿಸಿದೆ. ಇತ್ತ ಪಂಜಾಬ್ ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಲು ಸಿಎಸ್​ಕೆ ಸಾಕಷ್ಟು ಬೆವರು ಹರಿಸಬೇಕಾಗಿದೆ.

ಚಿದಂಬರಂ ಪಿಚ್ ವರದಿ

ಐಪಿಎಲ್ 2026 ರ 7 ನೇ ಪಂದ್ಯವು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಇಲ್ಲಿ ಮೇಲುಗೈ. ಈ ಕ್ರೀಡಾಂಗಣದಲ್ಲಿ ಆಡಿದ ಕಳೆದ 5 ಟಿ20 ಪಂದ್ಯಗಳಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ತಂಡವು ನಾಲ್ಕು ಪಂದ್ಯಗಳಲ್ಲಿ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಳ್ಳಬಹುದು.

ಹೆಡ್-ಟು-ಹೆಡ್ ದಾಖಲೆ

ಉಭಯ ತಂಡಗಳ ನಡುವೆ ಇದುವರೆಗೆ 32 ಪಂದ್ಯಗಳು ನಡೆದಿವೆ. ಈ ಮುಖಾಮುಖಿಯಲ್ಲಿ ಉಭಯ ತಂಡಗಳು ಸಮಬಲದ ಹೋರಾಟ ನೀಡಿವೆ. ಅಂದರೆ ಚೆನ್ನೈ ಸೂಪರ್ ಕಿಂಗ್ಸ್ 16 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ಕೂಡ 16 ಪಂದ್ಯಗಳನ್ನು ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಮುನ್ನಡೆ ಸಾಧಿಸಲಿದೆ.

ಸಂಭಾವ್ಯ ಪ್ಲೇಯಿಂಗ್ 11

ಸಿಎಸ್​ಕೆ ತಂಡದಲ್ಲಿ 2 ಬದಲಾವಣೆ?

ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಸಿಎಸ್​ಕೆ ಇಂದಿನ ಪಂದ್ಯಕ್ಕೆ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ. ಗಾಯದಿಂದಾಗಿ ಮೊದಲ ಪಂದ್ಯದಿಂದ ಹಿಂದೆ ಸರಿದಿದ್ದ ಸ್ಫೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಈ ಪಂದ್ಯದಲ್ಲಿ ಆಡಬಹುದು. ಹಾಗೆಯೇ ಮೊದಲ ಪಂದ್ಯದಲ್ಲಿ ಸೊನ್ನೆ ಸುತ್ತಿದ್ದ ಆಯುಷ್ ಮ್ಹಾತ್ರೆ ಬದಲಿಗೆ ಆಲ್‌ರೌಂಡರ್ ಪ್ರಶಾಂತ್ ವೀರ್ ಅವರನ್ನು ಆಡಿಸಬಹುದು.

ಐಪಿಎಲ್​ನಿಂದ ಬ್ಯಾನ್ ಆಗಿರುವ ಹ್ಯಾರಿ ಬ್ರೂಕ್​ಗೆ ಪಿಎಸ್​ಎಲ್​ನಿಂದ ಆಹ್ವಾನ

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ಕ್ಯಾಚರ್), ಆಯುಷ್ ಮ್ಹಾತ್ರೆ/ ಪ್ರಶಾಂತ್ ವೀರ್, ಮ್ಯಾಟ್ ಶಾರ್ಟ್/ ಡೆವಾಲ್ಡ್ ಬ್ರೆವಿಸ್, ಕಾರ್ತಿಕ್ ಶರ್ಮಾ, ಶಿವಂ ದುಬೆ, ಜೇಮಿ ಓವರ್ಟನ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಬ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ನವದೆಹಲಿ, ಏಪ್ರಿಲ್ 03: ಭಾರತ ಸರ್ಕಾರವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಭಾರತವು ಅಮೆರಿಕದ ಆದೇಶ ಪಾಲಿಸುವ ದೇಶವಲ್ಲ ಎಂದಿರುವ ವಿಶ್ವಸಂಸ್ಥೆಯ ಮಾಜಿ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಈ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿ ಹಾಕಿದ್ದಾರೆ. ಭಾರತವು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಅವಿಧೇಯತೆ ತೋರಿದ ನಿದರ್ಶನಗಳ ದೀರ್ಘ ಪಟ್ಟಿಯೇ ಇದೆ ಎಂದು ಅವರು ಹೇಳಿದರು.

ಭಾರತ ಅಮೆರಿಕವನ್ನು ಅನುಸರಿಸುತ್ತಿದೆ ಎನ್ನುವ ಆರೋಪಗಳು ಕೂಡ ಆಧಾರ ರಹಿತ, ಡೊನಾಲ್ಡ್ ಟ್ರಂಪ್ ಶಾಂತಿ ಮಂಡಳಿಯನ್ನು ರಚಿಸಿದ್ದಾರೆ, ಪಾಕಿಸ್ತಾನ ಸೇರಿಕೊಂಡಿದೆ, ಭಾರತ ಸೇರಿಕೊಂಡಿಲ್ಲ ಯಾಕೆಂದರೆ ಅದು ನಿಜವಾದ ಅಂತಾರಾಷ್ಟ್ರೀಯ ಸಂಘಟನೆಯಲ್ಲ ಎಂದು ನಮಗೆ ತಿಳಿದಿದೆ ಎಂದರು.ಭಾರತದಲ್ಲಿನ ವಿರೋಧ ಪಕ್ಷವು ಆಗಾಗ ಸರ್ಕಾರವನ್ನು ಟೀಕಿಸಿದೆ ಮತ್ತು ಅದು ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಆರೋಪಿಸಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಹಲವಾರು ಸಂದರ್ಭಗಳಲ್ಲಿ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು.ಭಾರತವು ತಮ್ಮ ಮೂಲಕ ಇರಾನ್ ಜೊತೆ ಮಾತುಕತೆ ನಡೆಸಬೇಕೆಂದು ಅಮೆರಿಕ ಬಯಸಿತ್ತು, ನಾವು ಮಾಡಲಿಲ್ಲ, ಉಕ್ರೇನ್ ಸಮಯದಲ್ಲಿ ಭಾರತವು ಅಮೆರಿಕದ ಪರವಾಗಿ ಮತ ಚಲಾಯಿಸಬೇಕೆಂದು ಅಮೆರಿಕ ಬಯಸಿತ್ತು . ನಾವು ಮಾಡಲಿಲ್ಲ. ಭಾರತವು ಅಮೆರಿಕದ ಆದೇಶಗಳನ್ನು ಪಾಲಿಸುವ ದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳಿಯ ಕೃತ್ಯ!

ಅಯೋಧ್ಯೆ, ಏ.3: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ. ಅಯೋಧ್ಯೆಯ ಜನನಿಬಿಡ ಪ್ರದೇಶದಲ್ಲಿರುವ ಆಭರಣದ ಅಂಗಡಿಯೊಂದಕ್ಕೆ ಬಂದ ಮಹಿಳೆ, ಆಭರಣಗಳನ್ನು ಖರೀದಿಸುವ ನೆಪದಲ್ಲಿ ಒಳಬಂದಿದ್ದಾಳೆ. ಅಂಗಡಿಯವರು ಆಭರಣಗಳನ್ನು ತೋರಿಸುತ್ತಿದ್ದಾಗ ಸಮಯ ಸಾಧಿಸಿದ ಆಕೆ, ಸುಮಾರು 26 ಗ್ರಾಂ ತೂಕದ ಚಿನ್ನದ ಸರ ಮತ್ತು ನೆಕ್ಲೇಸ್‌ ಅನ್ನು ತನ್ನೊಂದಿಗೆ ತಂದಿದ್ದ ಬಟ್ಟೆಯೊಳಗೆ ಅಡಗಿಸಿಟ್ಟುಕೊಂಡಿದ್ದಾಳೆ. ಕಳುವಾದ ಈ ಆಭರಣಗಳ ಮೌಲ್ಯ ಸುಮಾರು 3,80,000 ರೂಪಾಯಿಗಳಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಅಂಗಡಿಯಿಂದ ಹೊರಬಂದ ತಕ್ಷಣವೇ ಹತ್ತಿರದಲ್ಲೇ ಬೈಕ್‌ನೊಂದಿಗೆ ಕಾಯುತ್ತಿದ್ದ ತನ್ನ ಸಹಚರನ ಜೊತೆಗೂಡಿ ಮಹಿಳೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಕೃತ್ಯದ ದೃಶ್ಯಗಳು ಸೆರೆಯಾಗಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮತ್ತೆ ಒಂದಾಗಿ ಸಿನಿಮಾ ಮಾಡ್ತಾರಾ ಅಜಯ್ ದೇವಗನ್, ಓಂ ರಾವುತ್? ಸಿಕ್ತು ಸ್ಪಷ್ಟನೆ

ಬಾಲಿವುಡ್‌ನ ಬ್ಲಾಕ್‌ಬಸ್ಟರ್ ಸಿನಿಮಾ ‘ತನಾಜಿ: ದಿ ಅನ್​ಸಂಗ್ ವಾರಿಯರ್’ ಮೂಲಕ ನಟ ಅಜಯ್ ದೇವಗನ್ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದರು. ಆ ಸಿನಿಮಾಗೆ ನಿರ್ದೇಶಕ ಓಂ ರಾವುತ್ (Om Raut) ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಈಗ ಓಂ ರಾವುತ್ ಮತ್ತು ಅಜಯ್ ದೇವಗನ್ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿತ್ತು. ಆದರೆ, ಈ ವರದಿಗಳ ಬಗ್ಗೆ ಈಗ ಅಜಯ್ ದೇವಗನ್ (Ajay Devgn) ಅವರ ಕಡೆಯಿಂದ ಅಧಿಕೃತ ಸ್ಪಷ್ಟನೆ ಬಂದಿದೆ.

ಕೇಳಿಬಂದ ವದಂತಿಗಳಿಗೆ ಅಜಯ್ ದೇವಗನ್ ಪರ ವಕ್ತಾರರು ತೆರೆ ಎಳೆದಿದ್ದಾರೆ. ಅಜಯ್ ದೇವಗನ್ ಮತ್ತು ಓಂ ರಾವುತ್ ಮತ್ತೊಂದು ಐತಿಹಾಸಿಕ ಸಿನಿಮಾಕ್ಕಾಗಿ ಒಂದಾಗುತ್ತಿದ್ದಾರೆ ಎಂಬ ವರದಿಗಳನ್ನು ನಟನ ತಂಡ ಸಂಪೂರ್ಣವಾಗಿ ನಿರಾಕರಿಸಿದೆ. ಈ ಬಗ್ಗೆ ‘ಅಜಯ್ ದೇವಗನ್ ಫಿಲ್ಮ್ಸ್’ ವಕ್ತಾರರು ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಅಜಯ್ ದೇವಗನ್ ಮತ್ತು ಓಂ ರಾವುತ್ ಮತ್ತೆ ಒಂದಾಗುತ್ತಿದ್ದಾರೆ ಎಂಬ ಸುದ್ದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಸದ್ಯಕ್ಕೆ ಅಂತಹ ಯಾವುದೇ ಚರ್ಚೆಗಳು ಅಥವಾ ಸಹಯೋಗಗಳು ನಡೆಯುತ್ತಿಲ್ಲ. ಈ ಸುದ್ದಿಗಳು ಸಂಪೂರ್ಣವಾಗಿ ಆಧಾರರಹಿತ. ಅಜಯ್ ಮತ್ತು ಓಂ ರಾವುತ್ ಇಬ್ಬರೂ ಪ್ರಸ್ತುತ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಟಿ ಕಾಜೋಲ್ ಬಳಿ ಆಸ್ತಿ ಇಷ್ಟೊಂದಾ? ಅಜಯ್ ದೇವಗನ್ ದಂಪತಿ ಪೈಕಿ ಯಾರು ಶ್ರೀಮಂತರು?

ಸದ್ಯಕ್ಕೆ ‘ದೃಶ್ಯಂ 3’ ಮೇಲೆ ಅಜಯ್ ದೇವಗನ್ ಅವರು ಗಮನ ಹರಿಸಿದ್ದಾರೆ. ಅಜಯ್ ದೇವಗನ್ ಕಳೆದ ವರ್ಷ ‘ದೇ ದೇ ಪ್ಯಾರ್ ದೇ 2’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಅವರು ಬಹುನಿರೀಕ್ಷಿತ ‘ದೃಶ್ಯಂ 3’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಅಕ್ಟೋಬರ್ 2ರಂದು ಆ ಸಿನಿಮಾ ಬಿಡುಗಡೆ ಆಗಲಿದೆ. ಆ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತೈಲ ಬಿಕ್ಕಟ್ಟು ಹೀಗೇ ಇದ್ದರೆ ಈ ವರ್ಷದ ಜಿಡಿಪಿ ಬೆಳವಣಿಗೆ ಎಷ್ಟಕ್ಕಿಳಿಯಬಹುದು ಗೊತ್ತಾ?

ಮುಂಬೈ, ಏಪ್ರಿಲ್ 3: ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದು ಜಾಗತಿಕ ತೈಲ ಬಿಕ್ಕಟ್ಟು ಸ್ಥಿತಿ ಉದ್ಭವವಾಗಿದೆ. ಇದು ಹೆಚ್ಚು ಕಾಲ ಹೀಗೇ ಮುಂದುವರಿದರೆ ಜಾಗತಿಕ ಆರ್ಥಿಕ ಹಿಂಜರಿತ ಶುರುವಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಭಾರತದ ಆರ್ಥಿಕತೆಯೂ ಈ ಪರಿಣಾಮದಿಂದ ಹೊರತಾಗಿರುವುದಿಲ್ಲ. ಕೇರ್ ಎಡ್ಜ್ ರೇಟಿಂಗ್ಸ್ (CareEdge Ratings) ವರದಿ ಪ್ರಕಾರ ದೀರ್ಘಾವಧಿ ತೈಲ ಬಿಕ್ಕಟ್ಟಿನಿಂದ ಭಾರತದ ಆರ್ಥಿಕ ಬೆಳವಣಿಗೆಯ ವೇಗ ಮಂದಗೊಳ್ಳಬಹುದು ಮತ್ತು ಹಣದುಬ್ಬರ ಹೆಚ್ಚಬಹುದು.

ಕಚ್ಛಾ ತೈಲ ಬೆಲೆ 2026-27ರ ವರ್ಷದಲ್ಲಿ ಒಂದು ಬ್ಯಾರಲ್​ಗೆ ಸರಾಸರಿ 100 ಡಾಲರ್ ಬೆಲೆ ಇದ್ದರೆ ಭಾರತದ ಆರ್ಥಿಕ ಬೆಳವಣಿಗೆ ಶೇ. 6.5 ಮಾತ್ರವೇ ಇರಬಹುದು ಎಂದು ಈ ಏಜೆನ್ಸಿ ಹೇಳುತ್ತದೆ. ಕಳೆದ ನಾಲ್ಕೈದು ಕ್ವಾರ್ಟರ್​ಗಳಿಂದ ಭಾರತದ ಜಿಡಿಪಿ ಗಮನಾರ್ಹ ವೇಗದಲ್ಲಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ 2026-27ರ ವರ್ಷದಲ್ಲೂ ಜಿಡಿಪಿ ದರ ಶೇ. 7 ಅನ್ನು ಸುಲಭವಾಗಿ ದಾಟುವ ನಿರೀಕ್ಷೆ ಇತ್ತು. ಆದರೆ, ಈಗ ಇರಾನ್ ಯುದ್ಧವು ಭಾರತದ ಬೆಳವಣಿಗೆಯ ಕಥೆಗೆ ಹಿನ್ನಡೆ ತಂದಿದೆ.

ಇದನ್ನೂ ಓದಿ: ಪೆಟ್ರೋಲ್​ಗೆ ಕೇಂದ್ರ, ರಾಜ್ಯ ತೆರಿಗೆಗಳು, ಕಮಿಷನ್​ಗಳೆಷ್ಟು? ಜಿಎಸ್​ಟಿಯಿಂದ ಬೆಲೆ ಕಡಿಮೆ ಆಗುತ್ತಾ?

ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 60-70 ಡಾಲರ್ ಇದ್ದಾಗ ಭಾರತದ ಜಿಡಿಪಿ ಬೆಳವಣಿಗೆ 2026-27ರಲ್ಲಿ ಶೇ. 7.2ರಷ್ಟಾಗಬಹುದು ಎನ್ನುವ ಅಂದಾಜು ಇತ್ತು. ತೈಲ ಬೆಲೆ 90 ಡಾಲರ್ ಇದ್ದರೆ ಜಿಡಿಪಿ ದರ ಶೇ. 6.7ಕ್ಕೆ ಇಳಿಯಬಹುದು. 100 ಡಾಲರ್ ಬೆಲೆ ಇದ್ದಾಗ ಶೇ. 6.5, ಮತ್ತು 110 ಡಾಲರ್ ಬೆಲೆ ಇದ್ದಾಗ ಶೇ. 6.1 ಬೆಳವಣಿಗೆ ಮಾತ್ರವೇ ದಾಖಲಾಗಬಹುದು. ಒಂದು ವೇಳೆ, ಸರಾಸರಿ ತೈಲ ಬೆಲೆ 120 ಡಾಲರ್ ಇದ್ದು ಬಿಟ್ಟರೆ ಭಾರತದ ಆರ್ಥಿಕತೆ ಶೇ. 6 ಅಥವಾ ಅದಕ್ಕಿಂತಲೂ ಕಡಿಮೆ ಆದರೂ ಆದೀತು.

ಹಣದುಬ್ಬರವೂ ಸತತ ಏರಿಕೆ ನಿರೀಕ್ಷೆ

ತೈಲ ಬೆಲೆ ಹೆಚ್ಚಿದಂತೆ ಪೆಟ್ರೋಲ್, ಡೀಸಲ್, ಎಲ್​ಪಿಜಿ ಇತ್ಯಾದಿ ಪೆಟ್ರೋಲಿಯಂ ಮತ್ತು ಗ್ಯಾಸ್ ಉತ್ಪನ್ನಗಳ ಬೆಲೆಯೂ ಹೆಚ್ಚುತ್ತದೆ. ಇದರ ಪರಿಣಾಮವಾಗಿ ಬೇರೆ ಹಲವು ಸರಕುಗಳ ಬೆಲೆಗಳೂ ಏರಿಕೆ ಆಗುತ್ತವೆ. ಇದರಿಂದ ಹಣದುಬ್ಬರ ಹೆಚ್ಚುತ್ತದೆ.

ಇದನ್ನೂ ಓದಿ: ಟ್ರಂಪ್ ಸರ್ಕಾರದಿಂದ ಫಾರ್ಮಾ ಉತ್ಪನ್ನಗಳಿಗೆ ನೂರಕ್ಕೆ ನೂರು ಟ್ಯಾರಿಫ್; ಲೋಹಗಳಿಗೂ ಭರ್ಜರಿ ಸುಂಕ

ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 60-70 ಡಾಲರ್ ಇದ್ದಾಗ ಭಾರತದ 2026-27ರ ಹಣದುಬ್ಬರ ಶೇ. 4.3 ಇರುವ ಅಂದಾಜಿತ್ತು. ತೈಲ ಬೆಲೆ 100 ಡಾಲರ್ ಇದ್ದರೆ ಹಣದುಬ್ಬರ ಶೇ. 5 ದಾಟುವ ಸಾಧ್ಯತೆ ಇದೆ. ಹಾಗೆಯೇ, ತೈಲ ಬೆಲೆ 120 ಡಾಲರ್​ನಷ್ಟು ಇದ್ದರೆ ಹಣದುಬ್ಬರ ಶೇ. 6.5ರ ಆಸುಪಾಸು ಇರಬಹುದು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದು ಸಂಘಟನೆಗಳು

ಹುಬ್ಬಳ್ಳಿ, (ಏಪ್ರಿಲ್ 03): ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ (Hubbli) ಮತ್ತೊಂದು ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್​​​ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್ ಮಾಡುತ್ತಿದ್ದಾನೆಂದು ಆರೋಪಿಸಲಾಗಿದೆ. ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version