Headlines

ಒಂದು ತಿಂಗಳ ಕಾಲ ಚಹಾ ಸೇವಿಸದಿದ್ದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳನ್ನು ಸಂಭವಿಸುತ್ತವೆ? – Kannada News | What are the positive changes that occur in the body if stop drinking tea for a month?

ಚಹಾವನ್ನು (tea) ಬಹುತೇಕ ಎಲ್ಲರೂ ಇಷ್ಟಪಟ್ಟು ಸೇವನೆ ಮಾಡುತ್ತಾರೆ. ಅದರಲ್ಲೂ ಹೆಚ್ಚಿನ ಭಾರತೀಯರ ದಿನ ಆರಂಭವಾಗುವುದೇ ಒಂದು ಕಪ್‌ ಬಿಸಿ ಬಿಸಿ ಚಹಾದೊಂದಿದೆ. ಕೆಲವರಂತೂ ಬೆಳಗ್ಗೆ, ಕೆಲಸದಲ್ಲಿ ವಿರಾಮದ ಸಮಯದಲ್ಲಿ, ಸಂಜೆ ಹೊತ್ತು ಸೇರಿ ದಿನಕ್ಕೆ 5 ರಿಂದ 6 ಬಾರಿ ಚಹಾ ಸೇವಿಸುತ್ತಾರೆ. ಇದು ದೇಹಕ್ಕೆ ಎನರ್ಜಿ ನೀಡುವುದೇನೋ ನಿಜ ಆದರೆ ಈ ರೀತಿ ಅತಿಯಾಗಿ ಟೀ ಕುಡಿಯುವುದು ಒಳ್ಳೆಯದಲ್ಲ. ಚಹಾದಲ್ಲಿರುವ ಕೆಫೀನ್ ಮತ್ತು ಸಕ್ಕರೆ ಅತಿಯಾಗಿ ಸೇವಿಸಿದರೆ ನಿದ್ರೆ, ಜೀರ್ಣಕ್ರಿಯೆ ಮತ್ತು ಮಾನಸಿಕ ಆರೋಗ್ಯದ…

Read More

‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್ – Kannada News | Ravichandran best wishes to Kannada movie Kavala

‘ಕವಳ’ (Kavala) ಕನ್ನಡ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು ನಟ ರವಿಚಂದ್ರನ್ (Ravichandran) ಅವರು ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಶುಭ ಹಾರೈಸಿದರು. ತಮಿಳಿನ ಜನಪ್ರಿಯ ನಟ, ನಿರ್ದೇಶಕ ಸಮುದ್ರಕಿಣಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಆಕ್ಷನ್ ಸಿನಿಮಾ ಆಗಿದ್ದು, ಕವಳ ಹೆಸರಿನ ರೌಡಿಯ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ನಾಯಕನಾಗಿ ಸಂದೀಪ್ ನಾಗರಾಜ್ ನಟಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣ ಆಗುತ್ತಿದೆ. ಸಿನಿಮಾವನ್ನುಶ್ರೀ ಜೈ ನಿರ್ದೇಶನ ಮಾಡುತ್ತಿದ್ದಾರೆ. ನಟ…

Read More

ಮನೆ ಬಾಗಿಲು ಹಾಕಲು ಮರೆತು ಹೋದ ಯುವತಿ, ಪಾರ್ಸೆಲ್ ಡೆಲಿವರಿಗೆಂದು ಬಂದ ವ್ಯಕ್ತಿ ಮಾಡಿದ್ದೇನು? – Kannada News | Delivery Worker Steps Up, Guards Home After Spotting Open Door

ದಿವ್ಯಾ ಉನ್ನಿ ಯಾವುದೋ ಗಡಿಬಿಡಿಯಲ್ಲಿ ಮನೆಯ ಬಾಗಿಲು ಹಾಕದೆ ಹೊರಗೆ ಹೋಗಿದ್ದರು. ಅಮ್ಜದ್ ಮನೆಗೆ ಪಾರ್ಸೆಲ್ ಕೊಡಲು ಬಂದ ವ್ಯಕ್ತಿಯೊಬ್ಬರು ಬಾಗಿಲು ತೆರೆದಿದ್ದನ್ನು ನೋಡಿ ಮೊದಲು ಮಾಲೀಕರು ಮನೆಯೊಳಗಿದ್ದಾರೆ ಎಂದುಕೊಂಡರು. ಬಳಿಕ ಯಾರೂ ಇಲ್ಲವೆಂದು ಅರಿವಾಗಿತ್ತು. ಸಾಕಿದ ಬೆಕ್ಕು ಕೂಡ ಅಲ್ಲೇ ಇತ್ತು. ಬಳಿಕ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ಮನೆಯ ಒಳಗೆ ಟೇಬಲ್ ಮೇಲಿರಿಸಿದ್ದಾರೆ. ಮನೆಯೊಳಗೆ ಯಾರೂ ಇಲ್ಲದಿದ್ದರೂ ಬಾಗಿಲು ತೆರೆದಿದ್ದರೆ ಕಳ್ಳರ ಭಯ ಅಥವಾ ಸಾಕುಪ್ರಾಣಿಗಳು ಓಡಿಹೋಗುವ ಅಪಾಯವಿರುತ್ತದೆ ಎಂದು ಅರಿತ ಅಮ್ಜಾದ್, ಮೊದಲು ಪಾರ್ಸೆಲ್…

Read More

ಕೋಮು ಸೂಕ್ಷ್ಮ ಉದಯಗಿರಿಯಲ್ಲಿ ಮತ್ತೊಮ್ಮೆ ಹೊತ್ತಿದ ಅಪರಾಧದ ಕಿಡಿ! ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ – Kannada News | Mysore Udayagiri Shock: Youth Stabbed to Death Amid Rising Violence

ಮೈಸೂರು, ಜನವರಿ 20: ಉದಯಗಿರಿಯಲ್ಲಿ ಕಳೆದ ವರ್ಷ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಅಷ್ಟೇ ಅಲ್ಲದೆ ಎರಡು ದಿನಗಳ ಹಿಂದೆ ಯುವಕರು ಮಚ್ಚು, ಲಾಂಗು ಹಿಡಿದು ಓಡಾಡಿದ ವೀಡಿಯೋ ಸಹ ಭಾರಿ ಸುದ್ದಿ ಮಾಡಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮೊದಲೇ ಮತ್ತೊಂದು ಭೀಕರ ಘಟನೆ ಉದಯಗಿರಿಯಲ್ಲಿ (Udayagiri) ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನೊಬ್ಬನ ಕೊಲೆಯಾಗಿದ್ದು, ಮತ್ತೊಮ್ಮೆ ಮೈಸೂರಿನಲ್ಲಿ ಹಲ್ ಚಲ್ ಎಬ್ಬಿಸಿದೆ. ಇತ್ತೀಚೆಗಷ್ಟೇ ಮಚ್ಚು ಹಿಡಿದು ಓಡಾಡಿದ್ದ ಯುವಕರು…

Read More

IND vs AFG: ಅರ್ಷದೀಪ್ ಮಾತು ಕೇಳದೆ ಕೆಟ್ಟ ಗಿಲ್; 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ – Kannada News | Rahmanullah Gurbaz Century vs India: Gill’s DRS Blunder Costs Dearly in Dharamshala ODI

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡದ ಪರ ಅನುಭವಿ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಸ್ಫೋಟಕ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳನ್ನು…

Read More

ಜಗತ್ತಿನ ಭವಿಷ್ಯದ ಹಿತಕ್ಕಾಗಿ ಇರಾನ್ ಮೇಲಿನ ದಾಳಿ ರದ್ದು: ಡೊನಾಲ್ಡ್ ಟ್ರಂಪ್ ಘೋಷಣೆ, ಹಾರ್ಮುಜ್ ಜಲಸಂಧಿ ತೆರೆಯಲು ಸಮ್ಮತಿ – Kannada News | Trump Halts Iran Attack for Global Peace; Strait of Hormuz Opens

ವಾಷಿಂಗ್ಟನ್, ಆಗಸ್ಟ್​ 02: ಇರಾನ್ ಹಾಗೂ ಮಧ್ಯಪ್ರಾಚ್ಯದ ಇತರ ರಾಷ್ಟ್ರಗಳ ಸತತ ಕೋರಿಕೆಯ ಮೇರೆಗೆ, ಇರಾನ್ ವಿರುದ್ಧ ಯೋಜಿಸಲಾಗಿದ್ದ ಸರಣಿ ಮಿಲಿಟರಿ ದಾಳಿಗಳನ್ನು ಅಮೆರಿಕ ಮತ್ತು ಇಸ್ರೇಲ್ ತಡೆಹಿಡಿದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump)  ಪ್ರಕಟಿಸಿದ್ದಾರೆ. ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಒಪ್ಪಂದಕ್ಕೆ ಬರಲಾಗಿದೆ ಎಂದಿದ್ದಾರೆ. ನೂತನ ಒಪ್ಪಂದದಂತೆ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ತಕ್ಷಣವೇ ಸಂಪೂರ್ಣವಾಗಿ ತೆರೆಯಲಾಗುವುದು…

Read More

ಅಲ್ಪಸಂಖ್ಯಾತರ ಮೇಲಿನ ದಾಳಿ ಬಗ್ಗೆ ಪಾಕಿಸ್ತಾನದ ಹೇಳಿಕೆಗೆ ಭಾರತ ತಿರುಗೇಟು – Kannada News | MEA rejects Pakistans remark over attacks on minorities in India

ನವದೆಹಲಿ, ಡಿಸೆಂಬರ್ 29: ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದು ಪಾಕಿಸ್ತಾನದ (Pakistan) ವಿದೇಶಾಂಗ ಸಚಿವಾಲಯದ ವಕ್ತಾರರು ನೀಡಿದ ಹೇಳಿಕೆಗಳನ್ನು ವಿದೇಶಾಂಗ ಸಚಿವಾಲಯ (MEA) ತಿರಸ್ಕರಿಸಿದೆ. ಅಲ್ಪಸಂಖ್ಯಾತರ ವಿರುದ್ಧ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಕೃತ್ಯಗಳೇ ಎಲ್ಲ ಹೇಳುತ್ತವೆ. ನಮ್ಮ ದೇಶದಲ್ಲಿ ಆ ರೀತಿಯ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಅವರ ಹೇಳಿಕೆಗಳ ಕುರಿತು ಮಾಧ್ಯಮ…

Read More

ಮಗ ರಾಮ್ ಚರಣ್ ಹುಟ್ಟುಹಬ್ಬಕ್ಕೆ ಹತ್ತು ಲಕ್ಷ ದೇಣಿಗೆ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ (Chiranjeevi), ತೆಲುಗು ಚಿತ್ರರಂಗ ಮಾತ್ರವಲ್ಲ, ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರು. ಈಗಲೂ ಸಹ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಚಿರಂಜೀವಿ ಅವರು ಸಿನಿಮಾ ನಟನೆಯ ಜೊತೆಗೆ ತಮ್ಮ ಅಪಾರ ಸಮಾಜ ಸೇವೆಯಿಂದಲೂ ಗುರುತಿಸಿಕೊಂಡಿದ್ದಾರೆ. ಚಿರಂಜೀವಿ ಬ್ಲಡ್ ಬ್ಯಾಂಕ್, ಐ ಬ್ಯಾಂಕ್ ಈಗಾಗಲೇ ಲಕ್ಷಾಂತರ ಜನರ ಜೀವ ಉಳಿಸಿವೆ. ಹಲವಾರು ಸಮಾಜ ಸೇವಾ ಕಾರ್ಯಕ್ರಗಳಲ್ಲಿ ತೊಡಗಿಕೊಂಡಿರುವ ನಟ ಚಿರಂಜೀವಿ, ಇದೀಗ ತಮ್ಮ ಮಗ, ಸೂಪರ್ ಸ್ಟಾರ್ ರಾಮ್ ಚರಣ್ ಹುಟ್ಟುಹಬ್ಬದಂದು ಹಲವಾರು ಮಂದಿಗೆ ಊಟ ಹಾಕಿಸಿದ…

Read More

ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ: ಜುಲೈನಲ್ಲಿ 80ನೇ ಸ್ಥಾನಕ್ಕೆ ಕುಸಿದ ಭಾರತ; 56 ದೇಶಗಳಿಗೆ ವೀಸಾ ರಹಿತ ಪ್ರವೇಶ – Kannada News | Henley Passport Index July 2026, India at 80th place, with visa free entry to 56 countries

ನವದೆಹಲಿ, ಜುಲೈ 3: ಜಾಗತಿಕವಾಗಿ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡುವ ‘ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ’ದ (Henley Passport Index) ಜುಲೈ ತಿಂಗಳ ಹೊಸ ವರದಿಯಲ್ಲಿ ಭಾರತದ ಪಾಸ್‌ಪೋರ್ಟ್ ಶ್ರೇಯಾಂಕವು ಸ್ವಲ್ಪ ಕುಸಿತ ಕಂಡಿದೆ. ಕಳೆದ ಮೇ ತಿಂಗಳಲ್ಲಿ 78ನೇ ಸ್ಥಾನದಲ್ಲಿದ್ದ ಭಾರತ, ಪ್ರಸ್ತುತ 80ನೇ ಸ್ಥಾನಕ್ಕೆ ತಲುಪಿದೆ. 56 ದೇಶಗಳಿಗೆ ಮುಕ್ತ ಪ್ರವೇಶ: ಸ್ಥಾನ ಕುಸಿದಿದ್ದರೂ, ಭಾರತೀಯ ಪಾಸ್‌ಪೋರ್ಟ್ ಹೊಂದಿರುವ ನಾಗರಿಕರು ಪ್ರಪಂಚದ 56 ದೇಶಗಳಿಗೆ ಮುಂಚಿತವಾಗಿ ವೀಸಾ ಪಡೆಯದೆಯೇ (Visa-Free) ಅಥವಾ ‘ವೀಸಾ…

Read More

ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು – Kannada News | Man from Bangalore behind Anthropic’s new AI product that effected the fall of Indian IT stocks

ಬೆಂಗಳೂರು, ಫೆಬ್ರುವರಿ 9: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಐಟಿ ಸೆಕ್ಟರ್​ನ ವಿವಿಧ ಸ್ಟಾಕ್​ಗಳು ಕಳೆದ ಕೆಲ ದಿನಗಳಿಂದ ಬಹಳ ಹಿನ್ನಡೆ ಕಾಣುತ್ತಿವೆ. ನಿಫ್ಟಿ ಐಟಿ ಇಂಡೆಕ್ಸ್ ಇವತ್ತು ಸೋಮವಾರ ಪಾಸಿಟಿವ್ ಆಗಿದ್ದರೂ ಕಳೆದ ವಾರದಿಂದ ಶೇ. 7ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿದೆ. ಐಟಿ ಸ್ಟಾಕ್​ಗಳ ಮೇಲೆ ಹೂಡಿಕೆ ಮಾಡಿದ್ದವರಿಗೆ ಬರೋಬ್ಬರಿ ಎರಡೂವರೆ ಟ್ರಿಲಿಯನ್ ರುಪಾಯಿಗಳಷ್ಟು ನಷ್ಟ ಆಗಿದೆ. ಐಟಿ ಸ್ಟಾಕ್​ಗಳು ನಿರ್ದಿಷ್ಟವಾಗಿ ಕುಸಿಯಲು ಕಾರಣಗಳಿಲ್ಲದಿಲ್ಲ. ಎಐ ಟೆಕ್ನಾಲಜಿಯೇ ಈಗ ಭಾರತದ ಐಟಿ ಸೇವೆಗಳಿಗೆ ಮುಳುವಾಗುವಂತಿದೆ….

Read More