Headlines

ಉತ್ತರ ಪ್ರದೇಶ: ಚಲಿಸುತ್ತಿದ್ದ ಟ್ರಕ್ ಟೈರ್ ಸ್ಫೋಟ, ಮನೆಯೊಳಗೆ ನುಗ್ಗಿದ ಲಾರಿಗೆ, ಒಂದೇ ಕುಟುಂಬದ ಮೂವರು ಬಲಿ – Kannada News | Mirzapur Fatal Accident: Truck Tire Burst Kills Three Family Members in House Crash

ಮಿರ್ಜಾಪುರ, ಜುಲೈ 16: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತ(Accident)ದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಸಿಮೆಂಟ್ ತುಂಬಿದ ಲಾರಿಯೊಂದು ಚಲಿಸುತ್ತಿರುವಾಗಲೇ ಟೈರ್ ಸ್ಫೋಟಗೊಂಡು, ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ್ದರಿಂದ ಈ ಘೋರ ದುರಂತ ಸಂಭವಿಸಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಸಿಮೆಂಟ್ ಚೀಲಗಳನ್ನು ಹೊತ್ತ ಟ್ರಕ್ ವಾರಾಣಸಿಯಿಂದ ಸೋನಭದ್ರಕ್ಕೆ ವೇಗವಾಗಿ…

Read More

ಟಿ20 ವಿಶ್ವಕಪ್​ನಲ್ಲೂ ಎಲಿಮಿನೇಟರ್ ರೌಂಡ್: ಸೆಮಿಫೈನಲ್ ಎಂಟ್ರಿ ಮತ್ತಷ್ಟು ರೋಚಕ! – Kannada News | ICC T20 World Cup 2028 format explained in Kannada

2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಸ್ವರೂಪದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಟಿ20 ವಿಶ್ವಕಪ್​ಗೂ ಐಪಿಎಲ್ ಮಾದರಿಯ ಎಲಿಮಿನೇಟರ್ ರೌಂಡ್ ಅನ್ನು ಪರಿಚಯಿಸಲಾಗಿದೆ. ಹಾಗೆಯೇ ಈ ಹಿಂದೆ ಇದ್ದ ಸಾಂಪ್ರದಾಯಿಕ ‘ಸೂಪರ್ 8’ ಹಂತಕ್ಕೆ ಬ್ರೇಕ್ ಹಾಕಿರುವ ಐಸಿಸಿ, ಅದರ ಜಾಗದಲ್ಲಿ ಮತ್ತಷ್ಟು ರೋಮಾಂಚನಕಾರಿ ಹಾಗೂ ಕಠಿಣ ಸವಾಲಿನ ‘ಸೂಪರ್ 10’ ಹಂತವನ್ನು ಪರಿಚಯಿಸಿದೆ. ಹೊಸ ಸಹವರ್ತಿ ರಾಷ್ಟ್ರಗಳಿಗೆ ವಿಶ್ವ ವೇದಿಕೆಯಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡಲು ಅವಕಾಶ ಕಲ್ಪಿಸುವ ಮತ್ತು ಟೂರ್ನಿಯ ಉತ್ತರಾರ್ಧದ…

Read More

TV9 Kannada News Live: ಫ್ಲ್ಯಾಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ, ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು; ಇಂದಿನ ಪ್ರಮುಖ ಸುದ್ದಿಗಳು – Kannada News | V9 Kannada Live Breaking News 16 July 2026 CM DK Shivakumar, Karnataka Politics, Dharwad News Cinema Latest Updates Online

Breaking News Today Live Updates in Kannada: ರಾಜಧಾನಿಯಲ್ಲಿ ಫ್ಲ್ಯಾಟ್ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಗಂಭೀರ ಆರೋಪದ ಮೇಲೆ ತಾಯಿ ಹಾಗೂ ಮಗಳ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಅರ್ಹನ್ ಪಾಷಾ (12) ಎಂಬ ಬಾಲಕ ಕ್ಲಾಸ್ ರೂಮ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ…

Read More

ಚಿಕ್ಕಮಗಳೂರು: ಹಣಕ್ಕಾಗಿ‌ 20 ವರ್ಷದ ಮಗಳನ್ನೇ ಪಶ್ಚಿಮ ಆಫ್ರಿಕಾದಲ್ಲಿ ಮಾರಾಟ ಮಾಡಿದ ಪೋಷಕರು! – Kannada News | Chikkamagaluru Girl Allegedly Sold in Senegal: Hakki Pikki Tribal Association Files Complaint with SP

ಮಗಳನ್ನೇ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ತಾಯಿ ಕ್ರಾಂತಿ (ಎಡ ಚಿತ್ರ) ಹಾಗೂ ಹಕ್ಕಿಪಿಕ್ಕಿ ಬುಡಕಟ್ಟು ಸಂಘದ ಪತ್ರದ ಪ್ರತಿImage Credit source: tv9 ಚಿಕ್ಕಮಗಳೂರು, ಜುಲೈ 16: ಚಿಕ್ಕಮಗಳೂರು (Chikmagalur) ಜಿಲ್ಲೆಯ ಹಕ್ಕಿಪಿಕ್ಕಿ ಕಾಲೋನಿಯ ಯುವತಿಯೊಬ್ಬಳನ್ನು ಹಣಕ್ಕಾಗಿ ಪೋಷಕರೇ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿ, ಆರೋಪಿಗಳ ವಿರುದ್ಧ…

Read More

ದೊಡ್ಡ ಹಾಲಿವುಡ್​​ ಸಿನಿಮಾ ಅವಕಾಶ ಕಳೆದುಕೊಂಡ ಫಹಾದ್ ಫಾಸಿಲ್ – Kannada News | Fahad Fazil got chance to act with Tom Cruise in Digger movie

ಭಾರತದ ಕೆಲವಾರು ನಟ-ನಟಿಯರು ಈಗಾಗಲೇ ಹಾಲಿವುಡ್ (Hollywood) ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಹಾಲಿವುಡ್​​ನ ದೊಡ್ಡ ನಿರ್ಮಾಣ ಸಂಸ್ಥೆಯ ದೊಡ್ಡ ಸಿನಿಮಾಗಳಲ್ಲಿ ನಟಿಸಿರುವುದು ಬೆರಳೆಣಿಕೆಯ ನಟರಷ್ಟೆ. ಇರ್ಫಾನ್ ಖಾನ್, ನಸಿರುದ್ದೀನ್ ಶಾ, ದೀಪಿಕಾ ಪಡುಕೋಣೆ ಇನ್ನೂ ಕೆಲವರಷ್ಟೆ ಹಾಲಿವುಡ್​​ನ ದೊಡ್ಡ ನಿರ್ಮಾಣ ಸಂಸ್ಥೆಗಳು, ಹೆಸರಾಂತ ನಟರುಗಳು ಹಾಗೂ ಖ್ಯಾತ ನಿರ್ದೇಶಕರುಗಳ ಜೊತೆಗೆ ಕೆಲಸ ಮಾಡಿದ್ದಾರೆ. ಇಂಥಹದ್ದೇ ಒಂದು ದೊಡ್ಡ ಹಾಲಿವುಡ್ ಸಿನಿಮಾನಲ್ಲಿ ನಟಿಸುವ ಅವಕಾಶ ಮಲಯಾಳಂ ಸ್ಟಾರ್ ನಟ ಫಹಾದ್ ಫಾಸಿಲ್ ಅವರಿಗೆ ದೊರಕಿತ್ತು, ಆದರೆ ಅವರೇ ಖುದ್ದು…

Read More

ಫೇಸ್​ಬುಕ್​ನಲ್ಲಿ ಸಿಕ್ಕ ಪ್ರೀತಿಗಾಗಿ ವೀಸಾ ಇಲ್ಲದೆ ಪಾಕ್​ಗೆ ಹಾರಿದ್ದ ಯುಪಿ ಯುವಕ, ಹೋದ್ಮೇಲೆ ನೀನ್ಯಾರು ಅಂದ್ಲು, ಆತ ಜೈಲು ಪಾಲು – Kannada News | UP Man Jailed in Pak for Facebook Love: Illegal Border Crossing Nightmare

ಅಲಿಗಢ,ಜುಲೈ 16: ಪ್ರೀತಿ(Love) ಕುರುಡು  ಅಂತಾರೆ, ಆದರೆ ಆ ಪ್ರೀತಿಯ ಹುಚ್ಚು ದೇಶದ ಗಡಿಗಳನ್ನೂ ಮೀರಿ ಜೈಲಿನ ಕತ್ತಲ ಕೋಣೆಗೆ ತಳ್ಳಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಅಲಿಗಢದ ವ್ಯಕ್ತಿಯೊಬ್ಬರ ಕಥೆಯೇ ಸಾಕ್ಷಿ. ಫೇಸ್​ಬುಕ್​ನಲ್ಲಿ ಪರಿಚಯವಾದ ಪಾಕಿಸ್ತಾನಿ ಪ್ರೇಯಸಿಯನ್ನು ಹುಡುಕಿಕೊಂಡು ವೀಸಾ ಇಲ್ಲದೆಯೇ ಅಕ್ರಮವಾಗಿ ಗಡಿ ದಾಟಿದ್ದ ಭಾರತೀಯ ಟೈಲರ್ ಬಾದಲ್ ಬಾಬು, ಸದ್ಯ ಲಾಹೋರ್​ನ ಕೋಟ್​ ಲಖ್​ಪತ್ ಜೈಲಿನಲ್ಲಿದ್ದಾರೆ. ವಿಶೇಷವೆಂದರೆ, ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯ ಅವಧಿ ಈಗಾಗಲೇ ಪೂರ್ಣಗೊಂಡಿದ್ದರೂ ಸಹ, ಉಭಯ ದೇಶಗಳ ನಡುವಿನ ಅಧಿಕೃತ…

Read More

ಅಲ್ಲಿಂದ ನನ್ನ ಕೆಟ್ಟ ಟೈಮ್ ಶುರುವಾಗಿತ್ತು; ದ್ವಾರಕೀಶ್ ಹೇಳಿದ್ದ ಬೇಸರದ ಮಾತಿದು

ಕನ್ನಡ ಚಿತ್ರರಂಗದಲ್ಲಿ ಅದ್ಭುತ ಯಶಸ್ಸು ಕಂಡಿದ್ದ ಹಿರಿಯ ನಟ ಮತ್ತು ನಿರ್ಮಾಪಕ ದ್ವಾರಕೀಶ್ ಅವರು, ಸಿನಿಮಾ ಮೇಲಿನ ಅತಿಯಾದ ಹುಚ್ಚು ಮತ್ತು ಕೆಲವು ಆತುರದ ತಪ್ಪು ನಿರ್ಧಾರಗಳಿಂದ ತಮಗಾದ ಆರ್ಥಿಕ ಕುಸಿತದ ಬಗ್ಗೆ ಈ ಹಿಂದೆ ಮುಕ್ತವಾಗಿ ಮಾತನಾಡಿದ್ದರು. 1988ರವರೆಗೆ ಚಿತ್ರರಂಗದಲ್ಲಿ ಅತ್ಯಂತ ಯಶಸ್ವಿಯಾಗಿ ಮತ್ತು ಆರ್ಥಿಕವಾಗಿ ಸದೃಢವಾಗಿದ್ದ ತಮಗೆ, ಇಂಗ್ಲಿಷ್ ಸಿನಿಮಾಗಳ ಪ್ರಭಾವದಿಂದಾಗಿ ಮೂಡಿದ ಹೊಸ ಸಾಹಸದ ಆಸೆಯೇ ಮುಂದೆ ದೊಡ್ಡ ಹಿನ್ನಡೆಗೆ ಕಾರಣವಾಯಿತು ಎಂದು ಅವರು ಒಪ್ಪಿಕೊಂಡಿದ್ದರು. ಈ ಬಗ್ಗೆ ಬಿ. ಗಣಪತಿ ಯೂಟ್ಯೂಬ್…

Read More

ವಿರಾಟ್ ಕೊಹ್ಲಿಯೊಂದಿಗೆ ಗೌತಮ್ ‘ಗಂಭೀರ’ – Kannada News | Virat Kohli and Gambhir ‘Cold War’ Rumours Spark Amid India vs England Series

ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವೇ? ಅದರಲ್ಲೂ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಭಿನ್ನಾಭಿಪ್ರಾಯ ಮೂಡಿದೆಯೇ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಬರ್ಮಿಂಗ್​ಹ್ಯಾಮ್​ನಲ್ಲಿ ಕಂಡುಬಂದ ದೃಶ್ಯಗಳೇ ಮುಖ್ಯ ಕಾರಣ. ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ತರಬೇತಿ ಶಿಬಿರದ ವೇಳೆ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ಪರಸ್ಪರ ಮಾತನಾಡದೆ ದೂರ ಉಳಿದಿರುವುದು ಕಂಡು ಬಂದಿದೆ. ಇದರ ಬೆನ್ನಲ್ಲೇ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳು…

Read More

ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು – Kannada News | COVID Checkpost at Pavagada Andhra Border: Karnataka Steps Up Screening as Cases Rise in Andhra Pradesh

ತುಮಕೂರು, ಜುಲೈ 16: ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿಭಾಗದಲ್ಲಿ ಕೋವಿಡ್ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಆಂಧ್ರದಲ್ಲಿ ಈಗಾಗಲೇ ಇಬ್ಬರು ಶಂಕಿತ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಒಂಬತ್ತಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಬೆಳವಣಿಗೆ ಕರ್ನಾಟಕಕ್ಕೂ ಸೋಂಕು ಹರಡುವ ಆತಂಕವನ್ನು ಸೃಷ್ಟಿಸಿದೆ. ತುಮಕೂರು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ, ಆರೋಗ್ಯ ಅಧಿಕಾರಿಗಳು ಪಾವಗಡ ಗಡಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಆಂಧ್ರದಿಂದ ಪಾವಗಡದ ಕಡೆಗೆ ಬರುವ ವಾಹನಗಳನ್ನು ತಡೆದು, ಪ್ರಯಾಣಿಕರ ಆರೋಗ್ಯ…

Read More

ನಿಯಮ ಹೇಳೋರು ಎಲ್ಲೋದ್ರು?: ಜಯನಗರದಲ್ಲಿ ಪೊಲೀಸರು ಸೀಜ್ ಮಾಡಿದ ವಾಹನಗಳಿಂದಲೇ ಅರ್ಧ ರಸ್ತೆ ಬ್ಲಾಕ್ – Kannada News | Jayanagar Traffic Woes: Seized Vehicles by Bengaluru Police Occupy Roads for Years

ಬೆಂಗಳೂರು, ಜು.16: ರಾಜಧಾನಿಯ ಜನರಿಗೆ ಸಂಚಾರ ನಿಯಮ ಪಾಲನೆ ಮಾಡುವಂತೆ ಮತ್ತು ರಸ್ತೆ ಬದಿ ವಾಹನ ನಿಲ್ಲಿಸದಂತೆ ದಿನವಿಡೀ ಪಾಠ ಹೇಳುವ ಟ್ರಾಫಿಕ್ ಪೊಲೀಸರೇ ಈಗ ನಿಯಮ ಉಲ್ಲಂಘಿಸುತ್ತಿದ್ದಾರಾ? ಇಂತಹದ್ದೊಂದು ಗಂಭೀರ ಪ್ರಶ್ನೆ ಈಗ ಸಿಲಿಕಾನ್ ಸಿಟಿಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಜಯನಗರದ ಪ್ರಮುಖ ರಸ್ತೆಯೊಂದರ ಬದಿಯಲ್ಲೇ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿರುವ ವಾಹನಗಳು ವರ್ಷಗಳಿಂದ ಧೂಳು ಹಿಡಿದು ನಿಂತಿದ್ದು, ಅರ್ಧ ರಸ್ತೆಯನ್ನೇ ಆಕ್ರಮಿಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ದೃಶ್ಯ ಜಯನಗರದ ಪ್ರಮುಖ ರಸ್ತೆಯಲ್ಲಿ…

Read More