ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ – Kannada News | Karnataka KERC Hikes Electricity 56 Paise per Unit, effect From May

ಬೆಂಗಳೂರು, ಏಪ್ರಿಲ್​ 17: ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಿ ಕೆಇಆರ್​​ಸಿ ಶುಕ್ರವಾರ ಆದೇಶ ಹೊರಡಿಸಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸದ್ಯ ಗೀತಾಮಣಿ ಹಾಗೂ ಗಂಗಾಧರ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಪಿಡಿಓ ಗೀತಾಮಣಿ ಅವರು ⁠1,50,000 ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಹಣವನ್ನು ಯುಟ್ಯೂಬರ್ ಗಂಗಾಧರ್ ಗೆ ನೀಡುವಂತೆ ಸೂಚಿಸಿದ್ದರು. ಈ ವಿಚಾರವನ್ನು ಗೀತಾಮಣಿ, ಗಂಗಾಧರ್​​ಗೆ ಹೇಳಿದ್ದರು. ಡೀಲ್​​ ನಂತೆ ಫೈಜಲ್ ನಿಂದ ಗಂಗಾಧರ್ 1,20,000 ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಅಧಿಕಾರಿಗಳು ಪಿಐ ಉಮಾ ಮಹೇಶ್, ಹಾಗೂ ಎಸ್ ಪಿ ಮಹಾಂತೇಶ್ವರ ಜಿದ್ದಿ ತಂಡ ದಾಳಿ ಮಾಡಿದ್ದು, ರೆಡ್​ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ವಿಜಯಪುರ: ಇನ್ನೊಂದೆಡೆ ಪೆಟ್ರೋಲ್ ಬಂಕ್ ಜಾಗದ ನಕಾಶೆ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಲು ಲಂಚ ಸ್ವೀಕರಿಸುತ್ತಿದ್ದಾಗ ಎಸ್​​ಡಿಎ ಹಾಗೂ ಕಂಪ್ಯೂಟರ್ ಆಪರೇಟರ್ ಸಿಕ್ಕಿಬಿದ್ದಿದ್ದಾರೆ. ಜಿಲ್ಲಾಡಳಿತ ಕಚೇರಿಯ ಎಸ್ ಡಿ ಎ ಅರವಿಂದ ಪವಾರ್ ಹಾಗೂ ಕಂಪ್ಯೂಟರ ಆಪರೇಟರ್ ಅಯ್ಯಬ್ ತೊಣಸ್ಯಾಳ ಲೋಕಾಯುಕ್ತ ಬಲೆಗೆ ಬಿದ್ದಿವರು. 15,000 ನಗದು ಸ್ವೀಕಾರ ಮಾಡುವ ವೇಳೆ ರೆಡ್ ಹ್ಯಾಂಡ್ ಅಗಿ ಸಿಕ್ಕಿಬಿದ್ದಿದ್ದು, ಸದ್ಯ ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಆರ್​​ಸಿಬಿ ಗ್ರೀನ್ ಜೆರ್ಸಿ ತೊಡುವುದು ಏಕೆ? ಈ ಜೆರ್ಸಿಯ ವಿಶೇಷತೆ ಏನು? – Kannada News | RCB’s Green Jersey Game vs Delhi Capitals: IPL 2026 Match 26 Preview and History

ಐಪಿಎಲ್ 2026 (IPL 2026) ರ 26ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳ ನಡುವೆ ನಡೆಯಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30 ರಿಂದ ಆರಂಭವಾಗಲಿರುವ ಈ ಪಂದ್ಯ ಕನ್ನಡಿಗರು vs ಕರ್ನಾಟಕದ ತಂಡದ ನಡುವಿನ ಕಾಳಗ ಎನ್ನಬಹುದು. ಏಕೆಂದರೆ ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಕರುಣ್ ನಾಯರ್ ಇದ್ದಾರೆ. ಹೀಗಾಗಿ ಈ ಪಂದ್ಯ ಕನ್ನಡಿಗರಿಗೆ ತುಂಬಾ ವಿಶೇಷವಾಗಿರಲಿದೆ. ಇನ್ನು ಈ ಪಂದ್ಯವನ್ನು ಮತ್ತಷ್ಟು ವಿಶೇಷಗೊಳಿಸುವ ಸಲುವಾಗಿ ಆರ್​ಸಿಬಿ ಈ ಪಂದ್ಯದಲ್ಲಿ ಗ್ರೀನ್ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದೆ.

ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ

ವಾಸ್ತವವಾಗಿ, 2011 ರ ಐಪಿಎಲ್​ ಆವೃತ್ತಿಯಿಂದ ಆರ್​ಸಿಬಿ ತಂಡ ಸೀಸನ್​ನಲ್ಲಿ ಆಡುವ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ತನ್ನ ಅಭಿಮಾನಿಗಳಲ್ಲಿ ಸ್ವಚ್ಛ ಮತ್ತು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್​ಸಿಬಿ ಈ ಹಸಿರು ಜೆರ್ಸಿಯನ್ನು ಧರಿಸಲಿದೆ. ಅದರಂತೆ ಈ ಬಾರಿಯೂ ಆರ್​ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹಸಿರು ಜೆರ್ಸಿ ತೊಟ್ಟು ಆಡಲಿದೆ. ತಂಡದ ಹೊಸ ಜೆರ್ಸಿ ಸಾಕಷ್ಟು ಆಕರ್ಷಕವಾಗಿದೆ. ಈ ಜೆರ್ಸಿಯ ಟೀ ಶರ್ಟ್‌ನಲ್ಲಿ ಹಸಿರು ಮತ್ತು ನೀಲಿ ಬಣ್ಣಗಳನ್ನು ಬಳಸಲಾಗಿದೆ.

ಗ್ರೀನ್ ಜೆರ್ಸಿಯಲ್ಲಿ ದಾಖಲೆ

ಮೇಲೆ ಹೇಳಿದಂತೆ 2011 ರಿಂದ, ಆರ್‌ಸಿಬಿ ಪ್ರತಿ ಐಪಿಎಲ್ ಆವೃತ್ತಿಯಲ್ಲಿ ಹಸಿರು ಜೆರ್ಸಿ ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಮರುಬಳಕೆಯ ವಸ್ತುಗಳಿಂದ ತಯಾರಿಸಿದ ಈ ಜೆರ್ಸಿಯನ್ನು ಆರ್​ಸಿಬಿ ಮಧ್ಯಾಹ್ನದ ಪಂದ್ಯಗಳಲ್ಲಿ ಧರಿಸಿ ಆಡುತ್ತದೆ. ಇನ್ನು ಹಸಿರು ಜೆರ್ಸಿಯಲ್ಲಿ ಆರ್‌ಸಿಬಿಯ ರಿಪೋರ್ಟ್ ಕಾರ್ಡ್ ನೋಡುವುದಾದರೆ.. ಆರ್​ಸಿಬಿ ಇದುವರೆಗೆ ಹಸಿರು ಜೆರ್ಸಿ ತೊಟ್ಟು 15 ಪಂದ್ಯಗಳನ್ನಾಡಿದೆ. ಇದರಲ್ಲಿ ಕೇವಲ 5 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ 9 ಪಂದ್ಯಗಳಲ್ಲಿ ಸೋತಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

IPL 2026: ಆರ್​​ಸಿಬಿ ನಾಯಕನ ಈ ಎರಡು ಗುಣಗಳನ್ನು ಮನಸಾರೆ ಮೆಚ್ಚಿಕೊಂಡ ಶ್ರೇಯಸ್ ಅಯ್ಯರ್

ಇನ್ನು ಕಳೆದ ಆವೃತ್ತಿಯಲ್ಲಿ ರಾಜಸ್ಥಾನ್ ವಿರುದ್ಧ ಗ್ರೀನ್ ಜೆರ್ಸಿ ತೊಟ್ಟು ಆಡಿದ್ದ ಆರ್​ಸಿಬಿ ಭರ್ಜರಿ ಗೆಲುವು ದಾಖಲಿಸಿತ್ತು. ಆ ಪಂದ್ಯದಲ್ಲಿ ಆರ್​ಸಿಬಿ ಆರಂಭಿಕರಾದ ಫಿಲ್ ಸಾಲ್ಟ್ (65) ಹಾಗೂ ವಿರಾಟ್ ಕೊಹ್ಲಿ (62) ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದರು. ಹೀಗಾಗಿ ಈ ಬಾರಿಯೂ ಅದೇ ಪ್ರದರ್ಶನವನ್ನು ಮುಂದುವರೆಸಲು ಆರ್​ಸಿಬಿ ಪ್ರಯತ್ನಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್​ – Kannada News | Woman Murder case Solved: Victim Identified, Accused Arrested After Year Long Hunt

ಕೊಲೆಯಾದ ಮಹಿಳೆ, ಬಂಧಿತರುImage Credit source: tv9 kannada

ಚಿಕ್ಕಬಳ್ಳಾಪುರ, ಏಪ್ರಿಲ್​ 17: ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು (kill) ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ (woman) ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ತಲೆ ಬುರುಡೆ, ಮೂಳೆಗಳು ಪತ್ತೆ

2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಧ್ಯೆದ ಕುರುಚಲು ಕಾಡಿನ ಕಣಿವೆ ಪ್ರದೇಶದಲ್ಲಿ, ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಸ್ಥಳಕ್ಕೆ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ, ಸ್ಥಳದಲ್ಲಿ ಅರೆಬೆರೆ ಸುಟ್ಟ ಬಟ್ಟೆ, ಮೂಗುತಿ, ಸೀರೆ ಸೇರಿದಂತೆ ಮಹಿಳೆಯರು ಧರಿಸುವ ಕೆಲವು ವಸ್ತುಗಳು ಸಿಕ್ಕಿದ್ದವು. ಇದರಿಂದ ಮೃತಪಟ್ಟಿರುವುದು ಮಹಿಳೆ ಎನ್ನುವುದು ಗೊತ್ತಾಗಿತ್ತು.

ಇದನ್ನೂ ಓದಿ: ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಮೃತ ಮಹಿಳೆಯ ಗುರುತು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಟ್ಟಿದ್ದರು. ಕೊನೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಘೋಷಣೆ ಮಾಡಿದ್ದರು. ಆದರೂ ಮೃತರ ಗುರುತು ಪತ್ತೆಯಾಗಿರಲಿಲ್ಲ. ಬರೋಬ್ಬರಿ ವರ್ಷದ ನಂತರ ಈಗ ಪೊಲೀಸರು ಮೃತ ಮಹಿಳೆಯ ಗುರುತು ಪತ್ತೆಹಚ್ಚಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಪ್ಪರಾಯನದುರ್ಗ ನಿವಾಸಿ ನುಣಕಮ್ಮ (52) ಕೊಲೆ ಆಗಿದ್ದ ಮಹಿಳೆ.

ಚಿಕಿತ್ಸೆ ನೆಪದಲ್ಲಿ ಕರೆದುಕೊಂಡು ಹೋಗಿ ಕೊಲೆ

ಇನ್ನು ನುಣಕಮ್ಮಗೆ ಗಂಡ ಮಕ್ಕಳು ಇರಲಿಲ್ಲ. ಅಣ್ಣನ ಮನೆಯಲ್ಲಿ ಇದ್ದರು. ನುಣಕಮ್ಮಳಿಗೆ ಮಗಳು ಆಗಬೇಕಿದ್ದ 32 ವರ್ಷದ ನಾಗಲಕ್ಷ್ಮಿ ಹಾಗೂ ಆಕೆಯ ಪ್ರೀಯಕರ ಆಂಧ್ರದ ಮಡಕಸಿರ ನಿವಾಸಿ ಅಶೋಕ್ ಕುಮಾರ್ (27) ಸೇರಿ ಕೊಲೆ ಮಾಡಿದ್ದು ಬಯಲಾಗಿದೆ. ಪಿಡ್ಸ್ ಬರುತ್ತಿದೆ ಎಂದು ನುಣಕಮ್ಮಳನ್ನ ಚಿಕಿತ್ಸೆ ಕೊಡಿಸುವುದಾಗಿ ನಂಬಿಸಿ, ಬೈಕ್​​ನಲ್ಲಿ ಕರೆದುಕೊಂಡು ಸೆಪ್ಟೆಂಬರ್ 20 ರಂದು ಚಿಕ್ಕಬಳ್ಳಾಪುರದ ಅರಣ್ಯದಲ್ಲಿ ಕೊಂದು ಶವ ಬಿಸಾಡಿ ಹೋಗಿದ್ದರು.

ವರ್ಷದ ಬಳಿಕ ಇಬ್ಬರ ಬಂಧನ

ಇನ್ನು ನುಣಕಮ್ಮಳ ಬಳಿ ಇದ್ದ ಮನೆಯ ಬೀರು ಬೀಗ ತೆಗೆದುಕೊಂಡು, ಆಕೆಯ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ ಮಾಡಿ ನೆಮ್ಮದಿಯಾಗಿದ್ದರು. ಕೊಲೆ ಮಾಡಿದ ನಾಲ್ಕು ದಿನಗಳ ನಂತರ ಮತ್ತೆ ವಾಪಸ್ ಬಂದು ಶವಕ್ಕೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು. ನಂತರ ಏನು ಗೊತ್ತಿಲ್ಲದಂತೆ ಇದ್ದರು. ಆದರೆ ಪೊಲೀಸರು ವರ್ಷದ ನಂತರ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ

ಆರೋಪಿಗಳು ಚಾಪೆ ಕೆಳಗೆ ತೂರಿದರೆ, ಪೊಲೀಸರು ರಂಗೋಲಿ ಕೆಳಗೆ ತೂರಿ, ಕೊಲೆ ಪ್ರಕರಣ ಭೇದಿಸಿದ್ದಾರೆ. ಆದರೆ ಆರೋಪಿ ನಾಗಲಕ್ಷ್ಮಿ ಹಣ, ಚಿನ್ನಾಭರಣ ಹಾಗೂ ಚೀಟಿ ಹಣಕ್ಕೆ ಪ್ರಿಯಕರನ ಜೊತೆ ಸೇರಿ ಸ್ವಂತ ಚಿಕ್ಕಮ್ಮಳನ್ನು ಕೊಂದು ನಾಟಕವಾಡಿದ್ದು ಮಾತ್ರ ವಿಪರ್ಯಾಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು – Kannada News | Minister Satish Jarkiholi Stand With Muslim Leaders, here Is details Why He Met DK Shivakumar

ಬೆಂಗಳೂರು, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪ ಚುನಾವಣೆ  (Davanagere South By Election) ಬಳಿಕ ಕಾಂಗ್ರೆಸ್‌ನಲ್ಲಿ (Congress) ಒಳಜಗಳ ಭುಗಿಲೆದ್ದಿದೆ. ದಾವಣೆಗರೆ ಬೈ ಎಲೆಕ್ಷನ್​​ನಲ್ಲಿ ಟಿಕೆಟ್ ಕೃತಪ್ಪಿದ್ದಕ್ಕೆ ಕಲ ಮುಸ್ಲಿಂ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಕೆಲಸ ಮಾಡಿಲ್ಲ. ಬದಲಿಗೆ ಸೋಲಿಸಲು ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಆರೋಪ ಬೆನ್ನಲ್ಲೇ ವಿಧಾನ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಅಲ್ಲದೇ ನಾಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು, ಇದೀಗ ಸಚಿವ ಜಮೀರ್ ಅಹ್ಮದ್ ಬುಡಕ್ಕೆ ಬಂದಿದೆ. ಇದರಿಂದ ಮುಸ್ಲಿಂ ಸಮುದಾಯ ಕಾಂಗ್ರೆಸ್​​ ವಿರುದ್ಧ ಸಿಡಿದೆದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಪಾಠ ಕಲಿಸುತ್ತೇವೆಂದು ಎಚ್ಚರಿಕ ನೀಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಚಿವ ಸತೀಶ್ ಜಾರಕಿಹೊಳಿ ಮುಸ್ಲಿಂ ನಾಯಕರ ಬೆನ್ನಿಗೆ ನಿಂತಿದ್ದು, ಜಬ್ಬರ್ ಅವರ ಮೇಲಿನ ಕ್ರಮದ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾಡಿದ್ದಾರೆ. ಅಲ್ಲದೇ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಾಗಿಯೂ ಸಹ ಹೇಳಿದ್ದಾರೆ.

ಡಿಕೆಶಿಯನ್ನ ಭೇಟಿಯಾದ ಸತೀಶ್ ಜಾರಕಿಹೊಳಿ

ಹೌದು…ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಿರುವ ಬಗ್ಗೆ ಬೇಸರಗೊಂಡಿರುವ ಸತೀಶ್ ಜಾರಕಿಹೊಳಿ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಮೊದಲೇ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಂಬಂಧ ಅಷ್ಟಕಷ್ಟೇ. ಇಬ್ಬರೂ ಒಂದೇ ಪಕ್ಷದ ನಾಯಕರಾಗಿದ್ದರೂ ಸಹ ಸತೀಶ್‌ ಜಾರಕಿಹೊಳಿ ಕರ್ನಾಟಕ ಕಾಂಗ್ರೆಸ್‌ನ ಕೇಂದ್ರವಾಗಿದ್ದರೆ, ಡಿಕೆ ಶಿವಕುಮಾರ್ ಸಹ ಮತ್ತೊಂದು ಕೇಂದ್ರ. ಹೀಗೆ ಇಬ್ಬರೂ ಪ್ರಭಾವಿಗಳು. ಅಷ್ಟೇ ಅಲ್ಲ ರಾಜಕೀಯ ವಿಚಾರದಲ್ಲಿ ಇಬ್ಬರೂ ತಮ್ಮದೇ ನಡೆಯಬೇಕೆನ್ನುವ ಹಠವಾದಿಗಳು. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್‌ ಅವರಿಗೆ ಯಾರಾದರೂ ಪ್ರಬಲ ಟಕ್ಕರ್‌ ಕೊಡಬಲ್ಲರು ಅಂದ್ರೆ ಅದು ಸತೀಶ್‌ ಜಾರಕಿಹೊಳಿ.

ಇದನ್ನೂ ಓದಿ: ಸಂಪುಟ ಸಭೆಯಲ್ಲಿ ಕಿಡಿ ಹೊತ್ತಿಸಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ತಲೆದಂಡಕ್ಕೆ ಸಚಿವರ ಆಕ್ಷೇಪ

ಅಷ್ಟೇ ಅಲ್ಲ ಸಿದ್ದರಾಮಯ್ಯನವರ ಪರವಾಗಿ ನಿಂತು ಡಿಕೆಶಿ ವಿರುದ್ಧ ಮಾತನಾಡುವ ನಾಯಕ ಅಂದ್ರೆ ಅದು ಸತೀಶ್ ಜಾರಕಿಹೊಳಿ. ಡಿಕೆಶಿ ಹಾಗೂ ಅವರ ಬಣ ಸಿಎಂ ಬದಲಾವಣೆ ಧ್ವನಿ ಎತ್ತಿದಾಗಲೆಲ್ಲ ಸಿದ್ದರಾಮಯ್ಯನವರ ಪರವಾಗಿ ನಿಂತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಧ್ವನಿ ಎತ್ತಿದ್ದೂ ಉಂಟು. ಹೀಗಿರುವಾಗ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಪರಸ್ಪರ ಭೇಟಿ ಮಾಡಿದ್ದು, ಅಬ್ದುಲ್ ಜಬ್ಬಾರ್ ಅವರ ಅಮಾನತು ವಾಪಸ್ ತೆಗೆದುಕೊಳ್ಳುವಂತೆ ಡಿಕೆಶಿಗೆ ಸಲಹೆ ನೀಡಿದ್ದಾರೆ. ಅಲ್ಲದೇ ಈ ಸಂಬಂಧ ಹೈಕಮಾಂಡ್ ಜತೆ ಚರ್ಚಿಸಲು ದೆಹಲಿಗೆ ಹೋಗುವುದಾಗಿಯೂ ಪರೋಕ್ಷವಾಗಿ ತಮ್ಮದೇ ಸಂದೇಶವೊಂದನ್ನ ರವಾನಿಸಿದ್ದಾರೆ.

ಸತೀಶ್‌ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್‌ ಭೇಟಿ ಸೌಜನ್ಯಯುತ ಭೇಟಿ ಎಂದು ಬಣ್ಣಿಸಲಾಗಿದೆ. ಆದ್ರೆ, ಇದು ಸೌಜನ್ಯಯುತ ಭೇಟಿ ಅಲ್ಲ ಕಾಂಗ್ರೆಸ್‌ನಲ್ಲಿ ಸದ್ಯ ಭುಗಿಲೆದ್ದಿರುವ ಮುಸ್ಲಿಂ ನಾಯಕರ ಅಸಮಾಧಾನದ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೇ ಅಬ್ದುಲ್ ಜಬ್ಬಾರ್ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ಬೆಳವಣಿಗೆಗಳು ಮಾರಕವಾಗಹುದು ಎನ್ನುವುದನ್ನು ಸಹ ಸತೀಶ್ ಜಾರಕಿಹೊಳಿ, ಡಿಕೆಶಿ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಅಬ್ದುಲ್ ಜಬ್ಬಾರ್ ಅವರನ್ನ ವಾಪಸ್ ಕರೆದುಕೊಳ್ಳಬೇಕೆಂದು ಹೇಳಿದ್ದೇನೆಂದು ಸ್ವತಃ ಸತೀಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ ಮುಂದಿನ ವಾರ ಹೈಕಮಾಂಡ್ ಭೇಟಿ ಮಾಡುವುದಾಗಿಯೂ ಸಹ ಹೇಳಿದ್ದಾರೆ. ಇದರೊಂದಿಗೆ ಸಾಹುಕಾರ, ಮುಸ್ಲಿಂ ನಾಯಕರ ಬೆನ್ನಿಗೆ ನಿಂತಿದ್ದಾರೆ.

ಸಚಿವ ಸಂಪುಟದಲ್ಲಿ ಧ್ವನಿ ಎತ್ತಿರುವ ಸಾಹುಕಾರ

ಇನ್ನು ನಿನ್ನೆ (ಏಪ್ರಿಲ್ 16) ನಡೆದ ಸಚಿವ ಸಂಪುಟದಲ್ಲೂ ಸಹ ಮುಸ್ಲಿಂ ನಾಯಕರ ಮೇಲಿನ ಕ್ರಮದ ಬಗ್ಗೆ ಪ್ರಸ್ತಾಪಿಸಿ ಬೇಸರ ಹೊರಹಾಕಿದ್ದಾರೆ.  ನಾವು ಮುಸ್ಲಿಂ ಸಮುದಾಯವನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಸಿದರೆ, ಅಬ್ದುಲ್ ಜಬ್ಬಾರ್ ಮೇಲೆ ಕ್ರಮ ಕೈಗೊಂಡಿದ್ದು ತೀರಾ ಅವಸರದ ನಿರ್ಧಾರ. ಇದು ಸಮುದಾಯವೇ ನಮಗೆ ಸವಾಲು ಹಾಕುವಂತೆ ಮಾಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಪರೋಕವಾಗಿ ಎಚ್ಚರಿಸಿದ್ದಾರೆ.

ಹೈಕಮಾಂಡ್ ಭೇಟಿಗೂ ಮುಂದಾಗಿರುವ ಜಾರಕಿಹೊಳಿ

ಅಬ್ದುಲ್ ಜಬ್ಬಾರ್ ಅವರ ಅಮಾನತು ವಾಪಸ್ ಪಡೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸತೀಶ್ ಜಾರಕಿಹೊಳಿ ಸಲಹೆ ಕೊಟ್ಟಿದ್ದಾರೆ. ಒಂದು ವೇಳೆ ಸಸ್ಪೆಂಡ್ ವಾಪಸ್ ಪಡೆಯದಿದ್ದರೆ ಜಾರಕಿಹೊಳಿ ಹೈಕಮಾಂಡ್ ನಾಯಕರ ಭೇಟಿಗೂ ಸಿದ್ಧವಾಗಿ ನಿಂತಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಹೇಳಿದ್ದಾರೆ. ಮುಂದಿನ ವಾರ ದೆಹಲಿಗೆ ತೆರಳಿ ಹೈಕಮಾಂಡ್​​ ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದೊಂದಿಗೆ ಜಾರಕಿಹೊಳಿ ಮುಸ್ಲಿಂ ನಾಯಕರ ಬೆನ್ನಿಗೆ ನಿಂತಿರುವುದು ಸ್ಪಷ್ಟವಾಗಿದೆ.

ಹಾಗಾದ್ರೆ ಸತೀಶ್ ಜಾರಕಿಹಿಳಿ ಸಲಹೆಯನ್ನು ಸ್ವೀಕರಿಸಿ ಅಬ್ದುಲ್ ಜಬ್ಬಾರ್ ಅಮಾನತು ವಾಪಸ್ ಪಡೆದುಕೊಳ್ಳುತ್ತಾರಾ? ಅಥವಾ ಇಲ್ವಾ?  ಮುಂದಿನ ದಿನಗಳಲ್ಲಿ ಏನೆಲ್ಲಾ ರಾಜಕೀಯ ಬೆಳವಣಿಗೆಗಳು  ಆಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ – Kannada News | Ex CM B.S. Yediyurappa Reacts to Life Imprisonment for MLA Vinay Kulkarni

ಚಿಕ್ಕಮಗಳೂರು, ಏಪ್ರಿಲ್​​ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು ವಿವಾದವೆಂದು ತನಿಖೆ ಮಾಡಿದ್ದರು. ನಂತರ ಯೋಗೀಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಈ ಪ್ರಕರಣವನ್ನು CBI (ಸಿಬಿಐ) ತನಿಖೆಗೆ ವಹಿಸಿತ್ತು ಎಂಬುದಿಲ್ಲಿ ಗಮನಾರ್ಹ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಿಸಿಲ ಶಾಖದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಈ ಈ ಅಗತ್ಯ ಸಲಹೆಗಳನ್ನು ಪಾಲಿಸಿ – Kannada News | Keep these things in mind when going out this hot summer

ದಿನದಿಂದ ದಿನಕ್ಕೆ ಬಿಸಿಲ ತಾಪಮಾನ ಹೆಚ್ಚುತ್ತಿದ್ದು, ಸುಡುವ ಬಿಸಿಲ ತಾಪಕ್ಕೆ (Summer Heat) ಜನ ಬೆಂದು ಹೋಗಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಬಿಸಿಲ ಧಗೆಗೆ ಮನೆಯಿಂದ ಹೊರಗೆ ಕಾಲಿಡುವುದೇ ಕಷ್ಟಸಾಧ್ಯವಾಗಿದೆ. ಅದರಲ್ಲೂ ಈ ಉಷ್ಣಾಂಶ ಏರಿಕೆಯಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳಿಗೆ ಸಿಲುಕಿ ಜನ ಹೈರಾಣಾಗಿದ್ದಾರೆ. ಹೀಗಿರುವಾಗ ಈ ಹೆಚ್ಚುತ್ತಿರುವ ಬೇಸಿಗೆಯಲ್ಲಿ ನಮ್ಮ ಆರೋಗ್ಯದ ಬಗ್ಗೆ  ಸ್ವಲ್ಪ ಕಾಳಜಿ ವಹಿಸಿಕೊಳ್ಳುವುದು ತುಂಬಾನೇ ಮುಖ್ಯ. ಹೀಗಿರುವಾಗ ಶಾಖದ ಹೊಡೆತದಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ನೀವು ಈ ರೀತಿ ಕಾಳಜಿ ವಹಿಸಿ, ಜೊತೆಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

ಬೇಸಿಗೆಯಲ್ಲಿ ನಿಮ್ಮನ್ನು ನೀವು ಈ ರೀತಿ ಕಾಳಜಿ ವಹಿಸಿ:

ದೇಹದ ನೀರಿನಂಶ ಕಾಪಾಡಿಕೊಳ್ಳಿ: ಬೇಸಿಗೆಯಲ್ಲಿ ದೇಹದ ನೀರಿನಂಶ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಸಾಕಷ್ಟು ನೀರು ಕುಡಿಯಿರಿ. ಬಾಯಾರಿಕೆಯಾಗಿದ್ದರೆ ನಿಂಬೆ ಪಾನಕ ಕುಡಿಯಬಹುದು. ಬೇಸಿಗೆಯಲ್ಲಿ ಊಟದ ಜೊತೆಗೆ ಮಜ್ಜಿಗೆ ಅಥವಾ ಲಸ್ಸಿ ಕುಡಿಯಿರಿ. ಹಣ್ಣಿನ ಜ್ಯೂಸ್‌ ಕುಡಿಯಿರಿ. ಇವು ದೇಹಕ್ಕೆ ನೀರಿನಾಂಶವನ್ನು ಒದಗಿಸುತ್ತವೆ ಮತ್ತು ದೇಹವನ್ನು ತಂಪಾಗಿಸುತ್ತವೆ. ಜೊತೆಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ತಪ್ಪದೇ ನೀರಿನ ಬಾಟಲಿಯನ್ನು ಕೊಂಡೊಯ್ಯಿರಿ.

ಬಿಸಿಲಿಗೆ ಹೊರಗೆ ಹೋಗುವುದನ್ನು ತಪ್ಪಿಸಿ: ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ, ಅಂದರೆ ಬಿಸಿಲಿನ ಝಳ ಹೆಚ್ಚಿರುವ  ಸಮಯದಲ್ಲಿ, ಹೊರಗೆ ಹೋಗುವುದನ್ನು ತಪ್ಪಿಸಿ. ಅಗತ್ಯವಿದ್ದರೆ  ಮಾತ್ರ ಹೊರಗೆ ಹೋಗಿ. ಹೊರಗೆ ಹೋಗಲೇಬೇಕಾದರೆ, ನೆರಳಿರುವ ಪ್ರದೇಶದಲ್ಲಿ  ಆಗಾಗ್ಗೆ ವಿರಾಮ ತೆಗೆದುಕೊಳ್ಳಿ.  ಶಾಖದ ಹೊಡೆತದಿಂದ ತಪ್ಪಿಸಲು ಚೆನ್ನಾಗಿ ನೀರು ಕುಡಿಯಿರಿ.

ಆರಾಮದಾಯಕ ಬಟ್ಟೆ ಧರಿಸಿ: ಹತ್ತಿ ಅಥವಾ ಲಿನಿನ್‌ನಂತಹ ಉಸಿರಾಡುವ, ಸಡಿಲವಾದ, ಹಗುರವಾದ ಮತ್ತು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ. ಇಂತಹ ಹಗುರ ಬಟ್ಟೆಗಳು ಉತ್ತಮ ಗಾಳಿಯ ಪ್ರಸರಣಕ್ಕೆ ಅವಕಾಶ ಮಾಡಿಕೊಡುತ್ತವೆ ಮತ್ತು ನಿಮ್ಮನ್ನು ತಂಪಾಗಿರಿಸುತ್ತವೆ. ಭಾರವಾದ ಮತ್ತು ಕಿರಿಕಿರಿ ಭಾವನೆಯನ್ನು ಉಂಟುಮಾಡುವ ಬಟ್ಟೆಗಳನ್ನು ಧರಿಸದಿರಿ. ನೇರ ಸೂರ್ಯನ ಬೆಳಕು ಮತ್ತು ಸುಡುವ ಗಾಳಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಅಗಲವಾದ ಅಂಚುಳ್ಳ ಟೋಪಿ, ಸನ್ಗ್ಲಾಸ್ ಮತ್ತು ಛತ್ರಿಯನ್ನು ಬಳಸಿ.

ಎಣ್ಣೆಯುಕ್ತ ಮತ್ತು ಮಸಾಲೆಯುಕ್ತ ಆಹಾರ ಸೇವನೆಯನ್ನು ತಪ್ಪಿಸಿ:   ಬೇಸಿಗೆಯಲ್ಲಿ ಹೊಟ್ಟೆ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಆದ್ದರಿಂದ, ನೀವು ಮಸಾಲೆಯುಕ್ತ ಅಥವಾ ಎಣ್ಣೆಯುಕ್ತ ಆಹಾರವನ್ನು ಈ ಸಮಯದಲ್ಲಿ ತಿನ್ನುವುದನ್ನು ತಪ್ಪಿಸಬೇಕು. ವಿಶೇಷವಾಗಿ, ಹೊರಗಿನ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ. ಆದಷ್ಟು ಹಗುರವಾದ ಆಹಾರವನ್ನು ಸೇವನೆ ಮಾಡಿ.

ಇದನ್ನೂ ಓದಿ: ನಿಮ್ಮ ದಿನವನ್ನು ಧನಾತ್ಮಕವಾಗಿ ಆರಂಭಿಸಲು ಸಲಹೆಗಳನ್ನು ಪಾಲಿಸಿ

ಪ್ರಮುಖ ವಸ್ತುಗಳನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ: ನೀವು ಮನೆಯಿಂದ ಹೊರಗೆ ಹೋಗುತ್ತಿದ್ದೀರಿ ಎಂದಾದರೆ ಮುಖ್ಯವಾಗಿ ನೀರಿನ ಬಾಟಲಿಯನ್ನು ಕೊಂಡೊಯ್ಯಿರಿ. ಸೂರ್ಯನ ಶಾಖದಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು, ಯಾವಾಗಲೂ ಸನ್ಗ್ಲಾಸ್, ಕ್ಯಾಪ್, ಟವಲ್ ಅಥವಾ ಛತ್ರಿಯನ್ನು ಕೊಂಡೊಯ್ಯಿರಿ. ಇವು ಶಾಖದಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.

ಖಾಲಿ ಹೊಟ್ಟೆಯಲ್ಲಿ ಎಂದಿಗೂ ಹೊರಗೆ ಹೋಗಬೇಡಿ:  ಬೇಸಿಗೆಯಲ್ಲಿ ಆರೋಗ್ಯವಾಗಿರಲು, ಖಾಲಿ ಹೊಟ್ಟೆಯಲ್ಲಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸುವುದು ಬಹಳ ಮುಖ್ಯ. ಬಿಸಿಲಿನಲ್ಲಿ ಖಾಲಿ ಹೊಟ್ಟೆಯಲ್ಲಿ ಹೊರಗೆ ಹೋದರೆ ತಲೆತಿರುಗುವಿಕೆಗೆ ಕಾರಣವಾಗಬಹುದು. ಹೆಚ್ಚುವರಿಯಾಗಿ, ಆಮ್ಲೀಯತೆ ಮತ್ತು ವಾಂತಿ ಮುಂತಾದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:38 pm, Fri, 17 April 26

Source link

ತುಂಬಾ ಸಲ ಗರ್ಭಪಾತವಾದರೆ ಗರ್ಭಧಾರಣೆಯ ಸಾಧ್ಯತೆ ಕಡಿಮೆಯಾಗುತ್ತದೆಯೇ? ಇಲ್ಲಿದೆ ತಜ್ಞರ ಸ್ಪಷ್ಟನೆ – Kannada News | Recurrent Miscarriage and Fertility: What Doctors Say

ಗರ್ಭಪಾತ (Miscarriages) ಎನ್ನುವ ಪದವೇ ತುಂಬಾ ನೋವು ಕೊಡುತ್ತದೆ ಜೊತೆಗೆ ಭಯ ಹುಟ್ಟಿಸುತ್ತದೆ. ಅದರಲ್ಲಿಯೂ ಕೆಲವು ಮಹಿಳೆಯರಿಗೆ ಒಂದಕ್ಕಿಂತ ಹೆಚ್ಚು ಬಾರಿ ಗರ್ಭಪಾತ (ಮಿಸ್ಕ್ಯಾರೆಜ್) ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ಶಾರೀರಿಕದ ಜೊತೆಗೆ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಆದರೆ ಈ ರೀತಿ ತುಂಬಾ ಸಲ ಆದಲ್ಲಿ ಅದು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಅನುಮಾನ ಹಲವರನ್ನು ಕಾಡುತ್ತದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಪ್ರತಿಯೊಬ್ಬ ಮಹಿಳೆಗೂ ಒಳ್ಳೆಯದು. ಹಾಗಾದರೆ ಗರ್ಭಪಾತ ಭವಿಷ್ಯದಲ್ಲಿ ಗರ್ಭಧಾರಣೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆಯೇ, ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗರ್ಭಪಾತಕ್ಕೆ ಕಾರಣಗಳೇನು?

ತಜ್ಞರ ಪ್ರಕಾರ, ತುಂಬಾ ಸಲ ಗರ್ಭಪಾತವಾಗುವುದಕ್ಕೆ ಹಲವಾರು ಕಾರಣಗಳು ಇರಬಹುದು. ಹಾರ್ಮೋನ್ ಅಸಮತೋಲನ, ಥೈರಾಯ್ಡ್ ಸಮಸ್ಯೆ, ಜೆನೆಟಿಕ್ ಅಡಚಣೆ, ಗರ್ಭಾಶಯದ ರಚನೆಗೆ ಸಂಬಂಧಿಸಿದ ಸಮಸ್ಯೆಗಳು, ರೋಗನಿರೋಧಕ ಶಕ್ತಿಯ ದುರ್ಬಲತೆ ಅಥವಾ ರಕ್ತದ ಗಡ್ಡೆ ಸಮಸ್ಯೆಗಳು ಇದಕ್ಕೆ ಕಾರಣವಾಗಬಹುದು. ಜೊತೆಗೆ ಹೆಚ್ಚಿದ ವಯಸ್ಸು, ಅಸ್ವಸ್ಥ ಜೀವನಶೈಲಿ, ಒತ್ತಡ, ಧೂಮಪಾನ ಮತ್ತು ಪೋಷಕಾಂಶಗಳ ಕೊರತೆಯೂ ಈ ರೀತಿಯ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: 35 ವರ್ಷದ ನಂತರ ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಬೇಕು!

ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತದೆಯೇ?

ಪ್ರತಿಯೊಬ್ಬ ಮಹಿಳೆಯ ದೇಹ ವಿಭಿನ್ನವಾಗಿರುವುದರಿಂದ ಗರ್ಭಪಾತದ ಪರಿಣಾಮವೂ ಒಂದೇ ರೀತಿಯಾಗಿರುವುದಿಲ್ಲ. ಅನೇಕ ಸಂದರ್ಭಗಳಲ್ಲಿ ಮಹಿಳೆಯರಲ್ಲಿ ಮತ್ತೆ ಮತ್ತೆ ಗರ್ಭಪಾತದ ನಂತರವೂ ಯಶಸ್ವಿಯಾಗಿ ಗರ್ಭಧಾರಣೆ ಮಾಡಿ ಆರೋಗ್ಯಕರ ಮಗುವಿಗೆ ಜನ್ಮ ನೀಡುತ್ತಾರೆ. ಸಮಯಕ್ಕೆ ಸರಿಯಾದ ಪರೀಕ್ಷೆ ಮತ್ತು ಚಿಕಿತ್ಸೆಯಿಂದ ಸಮಸ್ಯೆಯ ಮೂಲ ಕಾರಣವನ್ನು ಕಂಡುಹಿಡಿದು ನಿಯಂತ್ರಿಸಬಹುದು. ಇಂದಿನ ವೈದ್ಯಕೀಯ ತಂತ್ರಜ್ಞಾನದಿಂದ ಅಪಾಯವನ್ನು ಕಡಿಮೆ ಮಾಡಲು ಹಲವಾರು ವಿಧಾನಗಳು ಲಭ್ಯವಿವೆ. ಈ ಸಮಸ್ಯೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ. ಜೊತೆಗೆ ಸಮತೋಲನ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ ಮತ್ತು ಒತ್ತಡ ನಿಯಂತ್ರಣ ದೇಹವನ್ನು ಬಲಪಡಿಸುತ್ತವೆ. ವೈದ್ಯರ ಸಲಹೆಯಂತೆ ಅಗತ್ಯ ಪರೀಕ್ಷೆಗಳು ಮತ್ತು ಔಷಧಿಗಳನ್ನು ತೆಗೆದುಕೊಳ್ಳುವುದು ಸಹಾಯಕ.

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ಗರ್ಭಪಾತವಾಗಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಸಮಯಕ್ಕೆ ಪರೀಕ್ಷೆ ಮಾಡಿದರೆ ಸಮಸ್ಯೆಯ ಕಾರಣ ತಿಳಿದು, ಮುಂದಿನ ಗರ್ಭಧಾರಣೆಯನ್ನು ಸುರಕ್ಷಿತವಾಗಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ – Kannada News | Parliament session Delimitation bill linked with Women’s Quota Bill Fails To Pass Lok Sabha Test

ನವದೆಹಲಿ, ಏಪ್ರಿಲ್ 17: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಸೂದೆಗಳು ಲೋಕಸಭೆಯಲ್ಲಿ ಇಂದು ಸಂಜೆ ನಡೆದ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಕ್ಷೇಪ್ರ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗೆ ಸಾಂವಿಧಾನಿಕ ತಿದ್ದುಪಡಿಗೆ ಅಗತ್ಯವಾದ ಮೂರನೇ ಎರಡರಷ್ಟು ಬಹುಮತ ಸಿಗದ ಹಿನ್ನೆಲೆಯಲ್ಲಿ ಈ ಮಸೂದೆ ಲೋಕಸಭೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಲೋಕಸಭೆಯಲ್ಲಿ ಇಂದು ಮತದಾನ ನಡೆದಿದೆ.

ಮಹಿಳಾ ಮೀಸಲಾತಿಯಂತಹ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲು ಮೂರನೇ ಎರಡರಷ್ಟು ವಿಶೇಷ ಬಹುಮತದ ಅಗತ್ಯವಿದೆ. 293 ಸಂಸದರನ್ನು ಹೊಂದಿರುವ ಎನ್‌ಡಿಎಗೆ ಸ್ವಂತವಾಗಿ ಅಂಗೀಕಾರ ಪಡೆಯಲು ಅಗತ್ಯವಾದ ಸಂಖ್ಯಾಬಲವಿರಲಿಲ್ಲ.

ಪ್ರಸ್ತುತ, ಲೋಕಸಭೆಯಲ್ಲಿ 540 ಸಂಸದರಿದ್ದಾರೆ. ಮೂರು ಸ್ಥಾನಗಳು ಖಾಲಿ ಇವೆ. ಈ ಮಸೂದೆಯು ಲೋಕಸಭೆಯಲ್ಲಿ ಅನುಮೋದನೆ ಪಡೆಯಲು 360 ಸಂಸದರು ಅದರ ಪರವಾಗಿ ಮತ ಚಲಾಯಿಸಬೇಕಾಗಿತ್ತು. ಆದರೆ, ಎನ್​ಡಿಎಗೆ ಅಗತ್ಯವಾದ ಸಂಖ್ಯಾಬಲವಿಲ್ಲದ ಕಾರಣದಿಂದ ಈ ಮಸೂದೆಯನ್ನು ಅಂಗೀಕರಿಸಲು ಕಾಂಗ್ರೆಸ್ ಅಥವಾ ಇತರ ಇಂಡಿಯ ಬ್ಲಾಕ್ ಪಕ್ಷಗಳ ಸಹಾಯದ ಅಗತ್ಯವಿತ್ತು. ಹೀಗಾಗಿಯೇ ಪ್ರಧಾನಿ ಮೋದಿ ಈ ಮಸೂದೆಗಳನ್ನು ಒಗ್ಗಟ್ಟಾಗಿ ಅಂಗೀಕರಿಸಲು ಮತ ಚಲಾಯಿಸಲು ಮನವಿ ಮಾಡಿದ್ದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬಳಿಯಬೇಡಿ; ಸಂಸತ್​​ನಲ್ಲಿ ಪ್ರಧಾನಿ ಮೋದಿ ಭಾಷಣ

ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಗುರುವಾರ ಸಂಸತ್ತಿನಲ್ಲಿ ಮೂರು ಮಸೂದೆಗಳಾದ ಸಂವಿಧಾನ (131 ನೇ ತಿದ್ದುಪಡಿ) ಮಸೂದೆ, 2026; ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026; ಮತ್ತು ಡಿಲಿಮಿಟೇಶನ್ ಮಸೂದೆ, 2026 ಅನ್ನು ಮಂಡಿಸಿದ್ದರು. ಈ ಮಸೂದೆಗಳು ಲೋಕಸಭೆಯ ಗಾತ್ರವನ್ನು ಹೆಚ್ಚಿಸಲು, 2011ರ ಜನಗಣತಿಯ ಆಧಾರದ ಮೇಲೆ ಸೀಮಾ ನಿರ್ಣಯವನ್ನು ಸಕ್ರಿಯಗೊಳಿಸಲು ಮತ್ತು ಈ ಸೀಮಾ ನಿರ್ಣಯದ ಆಧಾರದ ಮೇಲೆ ಮಹಿಳೆಯರಿಗೆ ಮೀಸಲಾತಿಯನ್ನು ಜಾರಿಗೆ ತರುವ ಉದ್ದೇಶವನ್ನು ಹೊಂದಿತ್ತು. ಕೇಂದ್ರಾಡಳಿತ ಪ್ರದೇಶಗಳ ಕಾನೂನು ಮಸೂದೆಯು ಪುದುಚೇರಿ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಇದೇ ರೀತಿಯ ನಿಬಂಧನೆಗಳನ್ನು ಒದಗಿಸುವುದಾಗಿ ಹೇಳಲಾಗಿತ್ತು.

ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿಗಳನ್ನು ಚರ್ಚಿಸಲು ಲೋಕಸಭೆಯು 12 ಗಂಟೆಗಳ ಕಾಲ ಮ್ಯಾರಥಾನ್ ಅಧಿವೇಶನವನ್ನು ನಡೆಸಿತು. ಇದರಲ್ಲಿ ಹೊಸ ಜನಗಣತಿ ನಡೆಸಿದ ನಂತರವೇ ಕಾನೂನನ್ನು ಜಾರಿಗೆ ತರುವ ಅವಶ್ಯಕತೆಯನ್ನು ತೆಗೆದುಹಾಕಲಾಯಿತು. ಅಂತಿಮ ವಿಭಾಗದ ಪ್ರಕಾರ, ಒಟ್ಟು 333 ಮತಗಳಲ್ಲಿ 251 ಸದಸ್ಯರು ಪರವಾಗಿ ಮತ್ತು 185 ವಿರುದ್ಧವಾಗಿ ಮತ ಚಲಾಯಿಸಿದರು. ಈ ಬಹುಮತದೊಂದಿಗೆ, ಸಂವಿಧಾನ (ನೂರ ಮೂವತ್ತೊಂದನೇ ತಿದ್ದುಪಡಿ) ಮಸೂದೆ, 2026 ಮತ್ತು ಕ್ಷೇತ್ರ ಮರು ವಿಂಗಡಣೆ ಮಸೂದೆ, 2026 ಸೇರಿದಂತೆ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಪರಿಚಯಿಸಲಾಯಿತು.

ಇದನ್ನೂ ಓದಿ: ತಿದ್ದುಪಡಿಗೆ ಅಲ್ಲ, ಮಹಿಳಾ ಮೀಸಲಾತಿಗೇ ಪ್ರತಿಪಕ್ಷದ ವಿರೋಧ: ಗೃಹ ಸಚಿವ ಅಮಿತ್​​ ಶಾ

ಈ ಕ್ಷೇತ್ರ ಮರು ವಿಂಗಡಣೆ ಮಸೂದೆಯನ್ನು ಅದರ ಪ್ರಸ್ತುತ ರೂಪದಲ್ಲಿ ಅಂಗೀಕರಿಸಿದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ಹಲವಾರು ಡಿಎಂಕೆ ಮತ್ತು ಕಾಂಗ್ರೆಸ್ ಸಂಸದರು ಆರೋಪಿಸಿದ್ದರು. ಉತ್ತರ ರಾಜ್ಯಗಳಿಗೆ ಹೋಲಿಸಿದರೆ ತೆಲಂಗಾಣ, ತಮಿಳುನಾಡು ಮತ್ತು ಕೇರಳದಂತಹ ರಾಜ್ಯಗಳು ಸೀಟುಗಳಲ್ಲಿ ಪ್ರಮಾಣಾನುಗುಣ ಹೆಚ್ಚಳವನ್ನು ಕಾಣದಿರಬಹುದು ಎಂದು ಮಾಣಿಕ್ಕಂ ಟ್ಯಾಗೋರ್ ಮತ್ತು ಎ ರಾಜಾ ಅವರಂತಹ ನಾಯಕರು ವಾದಿಸಿದ್ದರು. ಆ ರೀತಿಯ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 7:40 pm, Fri, 17 April 26

Source link

IPL 2026: ಆರ್​​ಸಿಬಿ ನಾಯಕನ ಈ ಎರಡು ಗುಣಗಳನ್ನು ಮನಸಾರೆ ಮೆಚ್ಚಿಕೊಂಡ ಶ್ರೇಯಸ್ ಅಯ್ಯರ್ – Kannada News | Rajat Patidar’s RCB Dominance: shreyas Iyer Praises Captaincy and Style in IPL Success

ಐಪಿಎಲ್​ನ (IPL) ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಆವೃತ್ತಿಯಲ್ಲೂ ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸಿದೆ. ತಂಡ ಎಲ್ಲಾ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದೆ. ತಂಡದ ಈ ಯಶೋಗಾಥೆಯಲ್ಲಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar ) ಅವರ ಪಾತ್ರ ಅಪಾರವಾಗಿದೆ. ಕಳೆದ ಸೀಸನ್​ನಲ್ಲಿ ಮೊದಲ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡು ತಂಡವನ್ನು ಚಾಂಪಿಯನ್ ಮಾಡಿದ್ದ ಪಾಟಿದಾರ್ ಈ ಆವೃತ್ತಿಯಲ್ಲೂ ತಂಡವನ್ನು ಚಾಂಪಿಯನ್‌ ಮಾಡುವತ್ತ ಪ್ರಯತ್ನ ನಡೆಸುತ್ತಿದ್ದಾರೆ.

ರಜತ್ ಅವರ ನಾಯಕತ್ವದ ಗುಣಗಳು ಉಳಿದ ಐಪಿಎಲ್ ಫ್ರಾಂಚೈಸಿಗಳನ್ನು ಬೆರಗಾಗಿಸಿವೆ. ಇದಕ್ಕೆ ಉದಾಹರಣೆ ಎಂಬಂತೆ ಕಳೆದ ಆವೃತ್ತಿಯ ಫೈನಲ್​ನಲ್ಲಿ ಇದೇ ಆರ್​ಸಿಬಿ ವಿರುದ್ಧ ಸೋತಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಅವರ ಈ ಎರಡು ಗುಣಗಳನ್ನು ಮೆಚ್ಚಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಅಯ್ಯರ್​ಗೆ ಪಾಟಿದರ್ ಅವರ ಈ 2 ಗುಣ ಇಷ್ಟ

ಐಪಿಎಲ್ ಪ್ರಸಾರಕ ಜಿಯೋಹಾಟ್‌ಸ್ಟಾರ್, ಯೂಟ್ಯೂಬ್‌ನಲ್ಲಿ ಶ್ರೇಯಸ್ ಅಯ್ಯರ್ ಅವರೊಂದಿಗಿನ ಸಂದರ್ಶನವನ್ನು ಪೋಸ್ಟ್ ಮಾಡಿದೆ. ಈ ಸಂದರ್ಶನದಲ್ಲಿ, ಅವರಿಗೆ 20 ಪ್ರಶ್ನೆಗಳನ್ನು ಕೇಳಲಾಗಿದೆ. ಈ 20 ಪ್ರಶ್ನೆಗಳಲ್ಲಿ ಎರಡು ಪ್ರಶ್ನೆಗಳಿಗೆ ಉತ್ತರವಾಗಿ ಶ್ರೇಯಸ್ ಅಯ್ಯರ್ ಪಾಟಿದಾರ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ. ಅದರಲ್ಲಿ ಮೊದಲನೇ ಪ್ರಶ್ನೆ, ಐಪಿಎಲ್‌ನಲ್ಲಿ ಯಾವ ನಾಯಕನಿಂದ ಸಲಹೆ ಪಡೆಯಲು ಬಯಸುತ್ತೀರಿ ಎಂದು ಅಯ್ಯರ್ ಅವರನ್ನು ಕೇಳಲಾಗಿದೆ. ಇದಕ್ಕೆ ಅವರು ನೇರವಾಗಿ ರಜತ್ ಪಾಟಿದಾರ್ ಎಂದು ಹೆಸರಿಸಿದ್ದಾರೆ. ನಂತರ, ಪ್ರಸ್ತುತ ಪೀಳಿಗೆಯಲ್ಲಿ ಅತ್ಯಂತ ಸ್ಟೈಲಿಶ್ ಬ್ಯಾಟ್ಸ್‌ಮನ್ ಯಾರು ಎಂಬ ಪ್ರಶ್ನೆಯನ್ನು ಕೇಳಲಾಗಿದೆ. ಇದಕ್ಕೆ ಅಯ್ಯರ್ ಮತ್ತೊಮ್ಮೆ ಪಾಟಿದಾರ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

IPL 2026: ಮೊದಲ ಬಾರಿಗೆ ಬದಲಾದ ಸಮಯದಲ್ಲಿ ಪಂದ್ಯವನ್ನಾಡಲಿದೆ ಆರ್​ಸಿಬಿ

ನಾಯಕನಾಗಿ ಗೆದ್ದ ಪಾಟಿದಾರ್

ಪ್ರಸ್ತುತ ಪಾಟಿದಾರ್ ಅವರ ನಾಯಕತ್ವ ಮತ್ತು ಅವರ ಬ್ಯಾಟಿಂಗ್‌ನ ಯಶಸ್ಸನ್ನು ಪರಿಗಣಿಸಿದರೆ, ಅಯ್ಯರ್ ನೀಡಿದ ಉತ್ತರಗಳು ತಪ್ಪಾಗಿ ಕಾಣುತ್ತಿಲ್ಲ. ಕಳೆದ ವರ್ಷ, ರಜತ್ ಪಾಟಿದಾರ್ ಮೊದಲ ಬಾರಿಗೆ ಆರ್‌ಸಿಬಿಯ ಉಸ್ತುವಾರಿ ವಹಿಸಿಕೊಂಡು ಮೊದಲ ಸೀಸನ್‌ನಲ್ಲಿಯೇ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. 2022-23 ಸೀಸನ್‌ನಿಂದ, ರಜತ್ ಪಾಟಿದಾರ್ ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಪ್ರಸ್ತುತ ಈ ಆವೃತ್ತಿಯಲ್ಲಿ ಪಾಟಿದಾರ್ ಕೇವಲ ಐದು ಪಂದ್ಯಗಳನ್ನಾಡಿದ್ದು 21 ಸಿಕ್ಸರ್‌ಗಳು ಸೇರಿದಂತೆ 222 ರ ಸ್ಟ್ರೈಕ್ ರೇಟ್‌ನಲ್ಲಿ 213 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version