Headlines

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್​ಗೆ ಚುನಾವಣೆಯಲ್ಲಿ ಗೆಲುವು – Kannada News | Jalna Civic Election Shock: Gauri Lankesh Murder Case Accused Shrikant Secures Independent Victory

ಮುಂಬೈ, ಜನವರಿ 16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ನಡೆಸಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು. ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಯಿತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು….

Read More

ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್​ಕುಮಾರ್ – Kannada News | Raghavendra Rajkumar awarded honorary doctorate by Yoga Samskrutham University in Mantralaya

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಇದೇ ಉತ್ಸವದ ವೇದಿಕೆಯಲ್ಲಿ ಹಲವು ಗಣ್ಯರಿಗೆ ಸನ್ಮಾನ ಮಾಡಲಾಗಿದೆ. ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ. ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ರಾಯರ ಅನುಗೃಹ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಯಿತು. ಅಮೆರಿಕದ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​​ಕುಮಾರ್ ಅವರು…

Read More

ನಾಳೆ ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ: ನೌಕರರಿಂದ ಬೆಂಗಳೂರು ಚಲೋ – Kannada News | KSRTC Bus Strike on Feb 19: Bengaluru Chalo Protest May Disrupt Bus Services Across Karnataka on Thursday

ಕೆಎಸ್​ಆರ್​ಟಿಸಿ ಬಸ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 18: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ (ಫೆಬ್ರವರಿ 19) ಕರ್ನಾಟಕ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ಕ್ಕೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ (KSRTC) ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು ಕಡೆಗೆ ಜಮಾಯಿಸುವ ನಿರೀಕ್ಷೆಯಿದೆ. ಇದರ ನಡುವೆಯೇ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ…

Read More

ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು – Kannada News | Mumbai Solapur Vande Bharat Express train derails while entering Pune station

ಪುಣೆ, ಏಪ್ರಿಲ್ 27: ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ ಒಂದು ಟ್ರಾಲಿ ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ತಪ್ಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ರೈಲು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಹೊರಟು ಮಹಾರಾಷ್ಟ್ರದ ಸೋಲಾಪುರಕ್ಕೆ ಹೋಗಬೇಕಿತ್ತು. ಇನ್ನಷ್ಟು…

Read More

ಲಾಂಗ್ ವೀಕೆಂಡ್ ಎಫೆಕ್ಸ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್! – Kannada News | Long Weekend Rush: Massive Traffic Jam on Bengaluru Nelamangala Highway as Residents Head to Hometowns

ನೆಲಮಂಗಲ, ಮೇ 1: ಇಂದಿನಿಂದ (ಮೇ 1) ಸತತ ಮೂರು ದಿನಗಳ ರಜೆ ಇರುವುದರಿಂದ ಬೆಂಗಳೂರಿಗರು ತಮ್ಮ ಊರುಗಳತ್ತ ಮತ್ತು ಪ್ರವಾಸಿ ತಾಣಗಳತ್ತ ತೆರಳುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಹೊರಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಕ್ರವಾರ ಬೆಳಗ್ಗೆ ವಾಹನಗಳ ದಟ್ಟಣೆ ವಿಪರೀತವಾಗಿ ಹೆಚ್ಚಾಗಿದ್ದು, ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯುವಂತಾಗಿದೆ. ಅದರಲ್ಲೂ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಿಲೋಮೀಟರ್‌ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಅತ್ಯಂತ ನಿಧಾನಗತಿಯಲ್ಲಿ ಚಲಿಸುತ್ತಿವೆ. ನೆಲಮಂಗಲ ಟೋಲ್ ಬಳಿ ವಾಹನಗಳು ಸಾಲುಗಟ್ಟಿರುವ ಚಾಚಿಕೊಂಡಿದ್ದು, ಸಂಚಾರ…

Read More

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ – Kannada News | Ram Fighting Competition in Andhra Pradesh ahead of New Year

ಹೈದರಾಬಾದ್, ಜನವರಿ 1: ಇಂದು ಹೊಸ ವರ್ಷದ (New Year Celebration) ಆಚರಣೆಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಪಂಗುಲೂರು ಮಂಡಲದ ರೇಣಿಂಗವರಂ ಗ್ರಾಮದಲ್ಲಿ ನಡೆದ ಸಾಂಪ್ರದಾಯಿಕ ಟಗರು ಸ್ಪರ್ಧೆಗಳು ಪ್ರೇಕ್ಷಕರನ್ನು ವಿಶೇಷವಾಗಿ ಆಕರ್ಷಿಸಿದವು. ನೆರೆಯ ಹಳ್ಳಿಗಳಿಂದ ಹಾಗೂ ಪ್ರಕಾಶಂ, ಬಾಪಟ್ಲ ಮತ್ತು ಮಾರ್ಕಪುರಂ ಜಿಲ್ಲೆಗಳಿಂದ ಸುಮಾರು 41 ಜೋಡಿ ಟಗರುಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಈ ಅಪರೂಪದ ಟಗರು ಕಾಳಗ ನೋಡಲು ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು. ತೆಲುಗು ದೇಶಂ ಪಕ್ಷದ ನಾಯಕ ಬೋರೆಡ್ಡಿ ಓಬುಲ್…

Read More

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು – Kannada News | Dubare Elephant Camp Tragedy: Tourist Killed in Kodagu as Elephants Fight

ಸಾಕಾನೆಗಳ ಕಾದಾಟದ ವೇಳೆ ಮಹಿಳೆ ಸಾವು ಮಡಿಕೇರಿ, ಮೇ 18: ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಶಿಬಿರದಲ್ಲಿ ನಡೆದಿದೆ. ಒಂದು ಆನೆ ಕೊಂಬಿನಿಂದ ತಿವಿದ ಪರಿಣಾಮ ಮತ್ತೊಂದು ಆನೆ ನೆಲಕ್ಕುರಿಳಿದೆ. ಈ ವೇಳೆ ಅಲ್ಲೇ ಇದ್ದ ಮಹಿಳೆ ಆನೆಯಡಿ ಸಿಲುಕಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಮೃತರನ್ನು ಚೆನ್ನೈ ಮೂಲದ ಜಿನ್ಶು(33)…

Read More

TV9 Kannada News Live: ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ; ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್? – Kannada News | TV9 Kannada News Live: Vijay’s TVK Set to Form Government in Tamil Nadu, Karnataka GBA Election likely soon

ಬೆಂಗಳೂರು, ಮೇ 08: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಶಕೆಯನ್ನು ಬರೆಯಲು ಹೊರಟಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಇದೀಗ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ತಲುಪಲು ಎಡಪಕ್ಷಗಳು ಮತ್ತು ಮೈತ್ರಿ ಪಕ್ಷಗಳು ವಿಜಯ್​​ಗೆ ಸಾಥ್ ನೀಡಿವೆ. ಆ ಮೂಲಕ ಅಗತ್ಯ ಶಾಸಕರ ಬೆಂಬಲ ಗಳಿಸಿರುವ ವಿಜಯ್, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಇದೀಗ ನಿಶ್ಚಿತವಾಗಿದೆ. ಮುಖ್ಯಾಂಶಗಳು ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಯ…

Read More

ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ – Kannada News | Sringeri Re counting Results: Congress MLA TD Rajegowda Wins Again; High Drama Outside IDSG College Chikkamagaluru

ಚಿಕ್ಕಮಗಳೂರು, ಮೇ 2: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಅಂತಿಮವಾಗಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾತ್ರಿ 8 ಗಂಟೆಯಾದರೂ ಫಲಿತಾಂಶದ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಗೊಂದಲಗಳಿಗೆ ಕಾರಣವಾಗಿದೆ. ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ…

Read More

World Wildlife Day 2026: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ – Kannada News | World Wildlife Day 2026: Why is World Wildlife Day celebrated? Here is the information

ಮನುಷ್ಯನಂತೆಯೇ ಸಕಲ ಜೀವರಾಶಿಗಳಿಗೂ ಭೂಮಿಯ ಮೇಲೆ ಬದುಕುವ ಸ್ವಾತಂತ್ರ್ಯವಿದೆ. ವಿಪರ್ಯಾಸ ಏನೆಂದರೆ ಇಂದು ಮನುಷ್ಯನ ಸ್ವಾರ್ಥದ ಕಾರಣದಿಂದಾಗಿ ಅದೆಷ್ಟೋ ಜಾತಿಯ ಪ್ರಾಣಿ, ಪಕ್ಷಿಗಳು, ಮರಗಿಡಗಳು ಅಳಿದುಹೋಗಿದೆ. ಇನ್ನೂ ಅದೆಷ್ಟೋ ಜೀವಿಗಳು ಅಳಿವಿನಂಚಿನಲ್ಲಿವೆ. ಹೌದು ಒಂದೆಡೆ ಆಧುನೀಕರಣ, ನಗರೀಕರಣ ಅಂತೆಲ್ಲಾ ಜಗತ್ತು ಅಭಿವೃದ್ಧಿ ಹೊಂದುತ್ತಿದ್ದರೆ ಇನ್ನೊಂದೆಡೆ ಕಾಡುಗಳ ನಾಶ, ಅಕ್ರಮ ಬೇಟೆ ಇತ್ಯಾದಿ ಕಾರಣಗಳಿಂದ ಅರಣ್ಯ, ವನ್ಯಜೀವಿಗಳು ವಿನಾಶದ ಅಂಚಿಗೆ ತಲುಪಿವೆ. ವಿಶ್ವಸಂಸ್ಥೆಯ ಪ್ರಕಾರ, ಹೆಚ್ಚುತ್ತಿರುವ ಪರಿಸರ ಸವಾಲುಗಳಿಂದಾಗಿ ಒಂದು ದಶಲಕ್ಷಕ್ಕೂ ಹೆಚ್ಚು ವನ್ಯಜೀವಿ ಪ್ರಭೇದಗಳು ಅಳಿವಿನ ಅಪಾಯದಲ್ಲಿವೆ….

Read More