ಅಲ್ಲಿಂದ ನನ್ನ ಕೆಟ್ಟ ಟೈಮ್ ಶುರುವಾಗಿತ್ತು; ದ್ವಾರಕೀಶ್ ಹೇಳಿದ್ದ ಬೇಸರದ ಮಾತಿದು

ಕನ್ನಡ ಚಿತ್ರರಂಗದಲ್ಲಿ ಅದ್ಭುತ ಯಶಸ್ಸು ಕಂಡಿದ್ದ ಹಿರಿಯ ನಟ ಮತ್ತು ನಿರ್ಮಾಪಕ ದ್ವಾರಕೀಶ್ ಅವರು, ಸಿನಿಮಾ ಮೇಲಿನ ಅತಿಯಾದ ಹುಚ್ಚು ಮತ್ತು ಕೆಲವು ಆತುರದ ತಪ್ಪು ನಿರ್ಧಾರಗಳಿಂದ ತಮಗಾದ ಆರ್ಥಿಕ ಕುಸಿತದ ಬಗ್ಗೆ ಈ ಹಿಂದೆ ಮುಕ್ತವಾಗಿ ಮಾತನಾಡಿದ್ದರು. 1988ರವರೆಗೆ ಚಿತ್ರರಂಗದಲ್ಲಿ ಅತ್ಯಂತ ಯಶಸ್ವಿಯಾಗಿ ಮತ್ತು ಆರ್ಥಿಕವಾಗಿ ಸದೃಢವಾಗಿದ್ದ ತಮಗೆ, ಇಂಗ್ಲಿಷ್ ಸಿನಿಮಾಗಳ ಪ್ರಭಾವದಿಂದಾಗಿ ಮೂಡಿದ ಹೊಸ ಸಾಹಸದ ಆಸೆಯೇ ಮುಂದೆ ದೊಡ್ಡ ಹಿನ್ನಡೆಗೆ ಕಾರಣವಾಯಿತು ಎಂದು ಅವರು ಒಪ್ಪಿಕೊಂಡಿದ್ದರು. ಈ ಬಗ್ಗೆ ಬಿ. ಗಣಪತಿ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದರು.

ತಮಗೆ ಆಫ್ರಿಕಾದ ಹಿನ್ನೆಲೆಯಲ್ಲಿ ಸಿನಿಮಾ ಮಾಡಬೇಕೆಂಬ ಹುಚ್ಚು ಆಸೆ ಚಿಗುರೊಡೆಯಲು ಇಂಗ್ಲಿಷ್‌ನ ‘ಫಾರೆಸ್ಟ್’ ಎಂಬ ಚಿತ್ರವೇ ಪ್ರೇರಣೆಯಾಗಿತ್ತು ಎಂದು ದ್ವಾರಕೀಶ್ ನೆನಪಿಸಿಕೊಂಡಿದ್ದರು. ತಮಗೆ ಇಂಗ್ಲಿಷ್ ಸಿನಿಮಾಗಳನ್ನು ನೋಡುವ ಹವ್ಯಾಸವಿದ್ದು, ಆ ಪ್ರಭಾವದಿಂದಾಗಿ ಕೀನ್ಯಾ ಸೇರಿದಂತೆ ಆಫ್ರಿಕಾದ ದಟ್ಟ ಕಾಡುಗಳಲ್ಲಿ ಅದ್ಧೂರಿ ಸಿನಿಮಾ ನಿರ್ಮಿಸುವ ಯೋಜನೆ ಹಾಕಿಕೊಂಡರು. ಆದರೆ, ಸೂಕ್ತ ಲೆಕ್ಕಾಚಾರವಿಲ್ಲದೆ ಕೇವಲ ಆಸೆಯ ಬೆನ್ನತ್ತಿ ಹೋದದ್ದು ತಮಗೆ ತಾವೇ ಮಾಡಿಕೊಂಡ ಅನ್ಯಾಯವಾಗಿ ಪರಿಣಮಿಸಿತು ಎಂದು ಅವರು ವಿಷಾದಿಸಿದ್ದರು.

ಆ ಸಮಯದಲ್ಲಿ ಹಣಕಾಸಿನ ನೆರವು ನೀಡಲು ವಿಜಯ ಬ್ಯಾಂಕ್ ಚೇರ್ಮನ್ ಸದಾನಂದ ಶೆಟ್ಟಿ ಅವರಂತಹ ದೊಡ್ಡ ದಾತರಿದ್ದರು. ಆದರೆ, ‘ಹನಿ ಹನಿ ಸೇರಿದರೆ ಹಳ್ಳ’ ಎನ್ನುವಂತೆ ಸ್ವಲ್ಪ ಸ್ವಲ್ಪವೇ ಪಡೆದ ಸಾಲ ಕೊನೆಗೆ 58 ಲಕ್ಷ ರೂಪಾಯಿಗಳ ಬೃಹತ್ ಮೊತ್ತವಾಗಿ ಬೆಳೆದು ನಿಂತಿತು. ಈ ಸಾಲವನ್ನು ತೀರಿಸಲು ದ್ವಾರಕೀಶ್ ಅವರು ತಮಿಳುನಾಡಿನ ಮದ್ರಾಸ್‌ನಲ್ಲಿದ್ದ ತಮ್ಮ ಸ್ವಂತ ಮನೆಯನ್ನೇ ಮಾರಬೇಕಾಯಿತು. ಜೊತೆಗೆ, ಇತರ ಸಿನಿಮಾಗಳಿಗೆ ಯೋಚಿಸದೆ ಫೈನಾನ್ಸ್ ಮಾಡಿ ಕೈಸುಟ್ಟುಕೊಂಡಿದ್ದರಿಂದ ಅವರ ಒಳ್ಳೆಯ ಸಮಯ ಮುಗಿದು, ಚಿತ್ರರಂಗದಲ್ಲಿ ತೆವಳಿಕೊಂಡು ಬರುವಂತಹ ಪರಿಸ್ಥಿತಿ ನಿರ್ಮಾಣವಾಯಿಗಿತ್ತು.

ಇದನ್ನೂ ಓದಿ: ದ್ವಾರಕೀಶ್ ನಿರ್ಮಾಣದ ಸಿನಿಮಾದಲ್ಲಿ ನಟಿಸಬೇಕಿತ್ತು ವಿಷ್ಣು-ಶ್ರೀದೇವಿ; ಸಿನಿಮಾ ನಿಂತಿದ್ದೇಕೆ?

ಅಂತಿಮವಾಗಿ ಸಾಕಷ್ಟು ವೀಸಾ ಅಡೆತಡೆಗಳ ನಡುವೆ ಕೀನ್ಯಾ ಮತ್ತಿತರ ದೇಶಗಳಲ್ಲಿ ‘ಆಫ್ರಿಕಾದಲ್ಲಿ ಶೀಲಾ’ ಎಂಬ ಬಿಗ್ ಬಜೆಟ್ ಸಿನಿಮಾವನ್ನು ನಾಲ್ಕು ಭಾಷೆಗಳಲ್ಲಿ ನಿರ್ಮಿಸಿದರು. ಲಂಡನ್‌ನಲ್ಲಿ ಬಪ್ಪಿ ಲಹರಿ ಅವರ ಸಂಗೀತ ನಿರ್ದೇಶನದಲ್ಲಿ ಅದ್ಧೂರಿಯಾಗಿ ಹಾಡುಗಳ ರೆಕಾರ್ಡಿಂಗ್ ಕೂಡ ಮಾಡಿಸಲಾಗಿತ್ತು. ಆದರೆ, ನಾಯಕಿ ಸಹಿಲಾ ಚಡ್ಡಾ ತಮಗೆ ನಟನೆ ಬರುತ್ತದೆ ಎಂದು ಸುಳ್ಳು ಹೇಳಿದ್ದರಿಂದ ಮತ್ತು ಅವರ ಕಳಪೆ ನಟನೆಯಿಂದಾಗಿ ಕೋಟಿ ಕೋಟಿ ಸುರಿದು ಮಾಡಿದ ಆ ಸಾಹಸದ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಂಪೂರ್ಣವಾಗಿ ನೆಲಕಚ್ಚಿ ಸೋತುಹೋಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿರಾಟ್ ಕೊಹ್ಲಿಯೊಂದಿಗೆ ಗೌತಮ್ ‘ಗಂಭೀರ’ – Kannada News | Virat Kohli and Gambhir ‘Cold War’ Rumours Spark Amid India vs England Series

ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವೇ? ಅದರಲ್ಲೂ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಭಿನ್ನಾಭಿಪ್ರಾಯ ಮೂಡಿದೆಯೇ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಬರ್ಮಿಂಗ್​ಹ್ಯಾಮ್​ನಲ್ಲಿ ಕಂಡುಬಂದ ದೃಶ್ಯಗಳೇ ಮುಖ್ಯ ಕಾರಣ.

ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ತರಬೇತಿ ಶಿಬಿರದ ವೇಳೆ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ಪರಸ್ಪರ ಮಾತನಾಡದೆ ದೂರ ಉಳಿದಿರುವುದು ಕಂಡು ಬಂದಿದೆ. ಇದರ ಬೆನ್ನಲ್ಲೇ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳು ಹುಟ್ಟಿಕೊಂಡಿವೆ.

ನೆಟ್ಸ್‌ನಲ್ಲಿ ನಡೆದಿದ್ದೇನು?

ವರದಿಗಳ ಪ್ರಕಾರ, ಇಡೀ ಅಭ್ಯಾಸದ ಅವಧಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಗಂಭೀರ್ ನಡುವೆ ಯಾವುದೇ ನೇರ ಸಂಭಾಷಣೆ ನಡೆದಿಲ್ಲ. ಕೋಚ್ ಗಂಭೀರ್ ಅವರು ನಾಯಕ ಶುಭ್​ಮನ್ ಗಿಲ್, ರೋಹಿತ್ ಶರ್ಮಾ ಮತ್ತು ಕೆ.ಎಲ್. ರಾಹುಲ್ ಅವರೊಂದಿಗೆ ಸುದೀರ್ಘವಾಗಿ ಕಾರ್ಯತಂತ್ರಗಳ ಬಗ್ಗೆ ಚರ್ಚಿಸುತ್ತಿದ್ದರು.

ಆದರೆ, ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿರುವ ವಿರಾಟ್ ಕೊಹ್ಲಿ ಕೇವಲ ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್ ಅವರೊಂದಿಗೆ ಮಾತ್ರ ಸುದೀರ್ಘವಾಗಿ ಮಾತನಾಡುತ್ತಾ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದರು.

ಅಲ್ಲದೆ ಬ್ಯಾಟಿಂಗ್ ಕೋಚ್ ಕೊಟಕ್ ಅವರೇ ಇಬ್ಬರ (ಕೊಹ್ಲಿ-ಗಂಭೀರ್) ನಡುವೆ ಸಂದೇಶ ರವಾನಿಸುವ ಕೊಂಡಿಯಾಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ವಿವಾದದ ಹಿನ್ನೆಲೆ ಮತ್ತು ಪ್ರಸ್ತುತ ಸ್ಥಿತಿ:

ಐಪಿಎಲ್ ಪಂದ್ಯಗಳ ವೇಳೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವೆ ನಡೆದಿದ್ದ ಮೈದಾನದ ಜಗಳಗಳು ಎಲ್ಲರಿಗೂ ತಿಳಿದಿವೆ. ಇತ್ತೀಚೆಗೆ ಗಂಭೀರ್ ಕೋಚ್ ಆಗಿ ನೇಮಕಗೊಂಡಾಗ ಇಬ್ಬರೂ ಭಿನ್ನಾಭಿಪ್ರಾಯ ಮರೆತಿದ್ದಾರೆ ಎನ್ನಲಾಗಿತ್ತಾದರೂ, ಪ್ರಸ್ತುತ ಘಟನೆ ಹಳೆಯ ಕಹಿ ಘಟನೆಯನ್ನು ಮತ್ತೆ ನೆನಪಿಸಿದೆ.

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಲ್ಲಿ ಸತತ ಸೋಲು ಕಂಡಿರುವ ಕಾರಣ ಗಂಭೀರ್ ಸದ್ಯ ತೀವ್ರ ಟೀಕೆಗೆ ಒಳಗಾಗಿದ್ದಾರೆ. ಹೀಗಾಗಿ ಏಕದಿನ ಸರಣಿ ಅವರ ಕೋಚಿಂಗ್ ಭವಿಷ್ಯಕ್ಕೆ ಅತ್ಯಂತ ಪ್ರಮುಖವಾಗಿದೆ. ಇದರ ನಡುವೆ ಕೊಹ್ಲಿಯೊಂದಿಗಿನ ಮುನಿಸಿನ ವದಂತಿ ಮಹತ್ವ ಪಡೆದುಕೊಂಡಿದೆ.

ಏನೇ ವದಂತಿಗಳಿದ್ದರೂ, ನಾಯಕ ಶುಭ್​ಮನ್ ಗಿಲ್ ಅವರು 2027ರ ಏಕದಿನ ವಿಶ್ವಕಪ್‌ಗೆ ವಿರಾಟ್ ಕೊಹ್ಲಿ ತಂಡದ ಪ್ರಮುಖ ಭಾಗವಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು

ಬಿಸಿಸಿಐ ಮೌನ:

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಹಲ್‌ಚಲ್ ಸೃಷ್ಟಿಯಾಗಿದ್ದರೂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಗಲಿ ಅಥವಾ ಕೊಹ್ಲಿ-ಗಂಭೀರ್ ಜೋಡಿಯಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದೀಗ ಟೀಮ್ ಇಂಡಿಯಾ ಎರಡನೇ ಏಕದಿನ ಪಂದ್ಯವಾಡಲು ಸಜ್ಜಾಗಿ ನಿಂತಿದ್ದು, ಈ ಪಂದ್ಯ ವೇಳೆಯಾದರೂ ಇಬ್ಬರು ಮುನಿಸು ಮರೆತು ಪರಸ್ಪರ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

Published On – 8:42 am, Thu, 16 July 26

Source link

ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು – Kannada News | COVID Checkpost at Pavagada Andhra Border: Karnataka Steps Up Screening as Cases Rise in Andhra Pradesh

ತುಮಕೂರು, ಜುಲೈ 16: ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿಭಾಗದಲ್ಲಿ ಕೋವಿಡ್ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಆಂಧ್ರದಲ್ಲಿ ಈಗಾಗಲೇ ಇಬ್ಬರು ಶಂಕಿತ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಒಂಬತ್ತಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಬೆಳವಣಿಗೆ ಕರ್ನಾಟಕಕ್ಕೂ ಸೋಂಕು ಹರಡುವ ಆತಂಕವನ್ನು ಸೃಷ್ಟಿಸಿದೆ. ತುಮಕೂರು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ, ಆರೋಗ್ಯ ಅಧಿಕಾರಿಗಳು ಪಾವಗಡ ಗಡಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಆಂಧ್ರದಿಂದ ಪಾವಗಡದ ಕಡೆಗೆ ಬರುವ ವಾಹನಗಳನ್ನು ತಡೆದು, ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ವಿಶೇಷವಾಗಿ ಜ್ವರದಂತಹ ಲಕ್ಷಣಗಳಿಗಾಗಿ ಪರಿಶೀಲನೆ ಮಾಡಲಾಗುತ್ತಿದೆ. ರಾಜವಂತಿಗೆ ಪ್ರವೇಶ ಮಾರ್ಗದಲ್ಲಿ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಈ ಸ್ಥಳವಲ್ಲದೆ ಇನ್ನೂ ಐದು ಪ್ರಮುಖ ಸ್ಥಳಗಳಲ್ಲಿಯೂ ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದೆ.

ಪ್ರಯಾಣಿಕರ ದೇಹದ ಉಷ್ಣಾಂಶವನ್ನು ಪರಿಶೀಲಿಸಿ, ಅವರ ಆರೋಗ್ಯ ಸ್ಥಿತಿ ಮತ್ತು ಪ್ರಯಾಣದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜ್ವರ ಕಂಡುಬಂದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಅಗತ್ಯವಿದ್ದಲ್ಲಿ ಪಾವಗಡದ ಜನರಲ್ ಆಸ್ಪತ್ರೆಗೆ ರೆಫರ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಈ ತಪಾಸಣೆ ಪ್ರಕ್ರಿಯೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಆರೋಗ್ಯ ಸಿಬ್ಬಂದಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿಯಮ ಹೇಳೋರು ಎಲ್ಲೋದ್ರು?: ಜಯನಗರದಲ್ಲಿ ಪೊಲೀಸರು ಸೀಜ್ ಮಾಡಿದ ವಾಹನಗಳಿಂದಲೇ ಅರ್ಧ ರಸ್ತೆ ಬ್ಲಾಕ್ – Kannada News | Jayanagar Traffic Woes: Seized Vehicles by Bengaluru Police Occupy Roads for Years

ಬೆಂಗಳೂರು, ಜು.16: ರಾಜಧಾನಿಯ ಜನರಿಗೆ ಸಂಚಾರ ನಿಯಮ ಪಾಲನೆ ಮಾಡುವಂತೆ ಮತ್ತು ರಸ್ತೆ ಬದಿ ವಾಹನ ನಿಲ್ಲಿಸದಂತೆ ದಿನವಿಡೀ ಪಾಠ ಹೇಳುವ ಟ್ರಾಫಿಕ್ ಪೊಲೀಸರೇ ಈಗ ನಿಯಮ ಉಲ್ಲಂಘಿಸುತ್ತಿದ್ದಾರಾ? ಇಂತಹದ್ದೊಂದು ಗಂಭೀರ ಪ್ರಶ್ನೆ ಈಗ ಸಿಲಿಕಾನ್ ಸಿಟಿಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಜಯನಗರದ ಪ್ರಮುಖ ರಸ್ತೆಯೊಂದರ ಬದಿಯಲ್ಲೇ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿರುವ ವಾಹನಗಳು ವರ್ಷಗಳಿಂದ ಧೂಳು ಹಿಡಿದು ನಿಂತಿದ್ದು, ಅರ್ಧ ರಸ್ತೆಯನ್ನೇ ಆಕ್ರಮಿಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ದೃಶ್ಯ ಜಯನಗರದ ಪ್ರಮುಖ ರಸ್ತೆಯಲ್ಲಿ ಕಂಡು ಬಂದಿದೆ. ಇಲ್ಲಿ ಸಾಲು ಸಾಲಾಗಿ ಸಾಲುಗಟ್ಟಿ ನಿಂತಿರುವುದು ಯಾವುದೇ ಸಾಮಾನ್ಯ ಸವಾರರ ವಾಹನಗಳಲ್ಲ. ಬದಲಾಗಿ ಪೊಲೀಸರು ವಿವಿಧ ಅಪರಾಧ ಹಾಗೂ ಅಪಘಾತ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ (ಸೀಜ್) ವಾಹನಗಳು. ಈ ವಾಹನಗಳು ಕಳೆದ ಕೆಲವು ತಿಂಗಳುಗಳಲ್ಲ, ಬರೋಬ್ಬರಿ ವರ್ಷಗಳಿಂದ ಇದೇ ರಸ್ತೆ ಬದಿಯಲ್ಲಿ ಧೂಳು ಹಿಡಿದು, ತುಕ್ಕು ಹಿಡಿದು ನಿಂತಿವೆ.

ಅಡ್ಡಾದಿಡ್ಡಿಯಾಗಿ ನಿಲ್ಲಿಸಿರುವ ಈ ವಾಹನಗಳಿಂದಾಗಿ ಅರ್ಧ ರಸ್ತೆಯೇ ಮುಚ್ಚಿ ಹೋಗಿದೆ. ಇದರ ಪರಿಣಾಮವಾಗಿ ಈ ಭಾಗದಲ್ಲಿ ಪ್ರತಿದಿನ ಸಂಚಾರ ದಟ್ಟಣೆ ಸೃಷ್ಟಿಯಾಗುತ್ತಿದ್ದು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಬೆಂಗಳೂರು ನಗರದಾದ್ಯಂತ ರಸ್ತೆ ಬದಿಗಳಲ್ಲಿ ಅನಾಥವಾಗಿ ಅಥವಾ ದೀರ್ಘಕಾಲ ನಿಂತಿರುವ ಸಾರ್ವಜನಿಕರ ವಾಹನಗಳನ್ನು ಗುರುತಿಸಿ, ನೋಟಿಸ್ ಸ್ಟಿಕ್ಕರ್ ಅಂಟಿಸಿ ಬಿಬಿಎಂಪಿ ಮತ್ತು ಟ್ರಾಫಿಕ್ ಪೊಲೀಸರು ಜಂಟಿಯಾಗಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ, ಜಯನಗರದ ಈ ರಸ್ತೆಯಲ್ಲಿ ಪೊಲೀಸರೇ ಕಾನೂನು ಉಲ್ಲಂಘಿಸಿ ಸೀಜ್ ವಾಹನಗಳನ್ನು ರಸ್ತೆಯಲ್ಲೇ ಬಿಟ್ಟಿರುವುದು ಸಾರ್ವಜನಿಕರ ಕಣ್ಣು ಕೆಂಪಾಗಿಸಿದೆ. “ಸಾಮಾನ್ಯ ನಾಗರಿಕರು ಗಾಡಿ ನಿಲ್ಲಿಸಿದರೆ ದಂಡ ಹಾಕುವ ಪೊಲೀಸರು, ತಾವೇ ರಸ್ತೆ ಆಕ್ರಮಿಸಿಕೊಂಡಾಗ ಮೌನ ವಹಿಸುವುದು ಎಷ್ಟು ಸರಿ? ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು,” ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

“ರಸ್ತೆ ನಿಯಮ ಪಾಲನೆ ಬಗ್ಗೆ ಜನರಿಗೆ ಪಾಠ ಹೇಳುವ ಇಲಾಖೆಗಳು ಮೊದಲು ತಮ್ಮ ಆವರಣ ಹಾಗೂ ತಮ್ಮ ವಶದಲ್ಲಿರುವ ವಾಹನಗಳ ಸೂಕ್ತ ವಿಲೇವಾರಿ ಬಗ್ಗೆ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಇಲಾಖೆಗೆ ಒಂದು ನ್ಯಾಯ, ಸಾಮಾನ್ಯ ಜನರಿಗೆ ಮತ್ತೊಂದು ನ್ಯಾಯ ಎನ್ನುವ ತಾರತಮ್ಯ ನಿಲ್ಲಬೇಕು.” ಎಂದು ಸ್ಥಳೀಯ ನಿವಾಸಿ ಜಯಪ್ರಕಾಶ್ ಹೇಳಿದ್ದಾರೆ.

ಇದನ್ನೂ ಓದಿ: ಇಂದು ರಾಜ್ಯಾದ್ಯಂತ ಅತ್ಯುತ್ತಮ ವಾಯು ಗುಣಮಟ್ಟ: ಬೆಂಗಳೂರಿನ ಹಲವೆಡೆ ‘ಗ್ರೀನ್ ಜೋನ್’

ಒಟ್ಟಿನಲ್ಲಿ, ಜನರ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿರುವ ಈ ಸೀಜ್ ವಾಹನಗಳನ್ನು ಪೊಲೀಸ್ ಇಲಾಖೆಯು ತಕ್ಷಣವೇ ತೆರವುಗೊಳಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಮುಕ್ತಗೊಳಿಸುತ್ತಾ? ಅಥವಾ ತನ್ನದೇ ಇಲಾಖೆಯ ಉಲ್ಲಂಘನೆಯನ್ನು ಕಣ್ಣುಮುಚ್ಚಿ ಕುಳಿತುಕೊಳ್ಳುತ್ತಾ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | ICC ODI World Cup 2027 format explained in Kannada

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ.

ಹಂತ 1: ಸೂಪರ್ ಸೀರೀಸ್:

  • ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ. ಅಂದರೆ 11 ತಂಡಗಳು ನೇರ ಅರ್ಹತೆ ಪಡೆದರೆ, 3 ತಂಡಗಳು ಟೂರ್ನಿ ಆರಂಭಕ್ಕೂ ಮುನ್ನ ಸೂಪರ್ ಸಿರೀಸ್ ಆಡಿ ಅರ್ಹತೆ ಪಡೆಯಬೇಕಿದೆ.
  • ಮಾದರಿ: ಈ ಮೂರು ತಂಡಗಳು ಪರಸ್ಪರ ತಲಾ ಒಂದು ಪಂದ್ಯವನ್ನು ಆಡಲಿವೆ (ಮಿನಿ ಲೀಗ್).
  • ಫಲಿತಾಂಶ: ಈ ಮೂರು ತಂಡಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಕೇವಲ 1 ತಂಡ ಮಾತ್ರ ಮುಂದಿನ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಉಳಿದ 2 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಹಂತ 2: ಗ್ರೂಪ್ ರೌಂಡ್:

  • ಯಾರ ನಡುವೆ?: ಸೂಪರ್ ಸೀರೀಸ್‌ನಿಂದ ಗೆದ್ದು ಬಂದ 1 ತಂಡವು, ಉಳಿದ 11 ಉನ್ನತ ಶ್ರೇಯಾಂಕದ ತಂಡಗಳನ್ನು ಸೇರಿಕೊಳ್ಳುತ್ತದೆ. ಅದರಂತೆ ದ್ವಿತೀಯ ಹಂತದಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ.
  • ಮಾದರಿ: ಈ 12 ತಂಡಗಳನ್ನು ತಲಾ 6 ತಂಡಗಳಂತೆ ಎರಡು ಗುಂಪುಗಳಾಗಿ (ಗ್ರೂಪ್ A ಮತ್ತು ಗ್ರೂಪ್ B) ವಿಂಗಡಿಸಲಾಗುತ್ತದೆ. ಪ್ರತಿಯೊಂದು ತಂಡವು ತನ್ನ ಗುಂಪಿನಲ್ಲಿರುವ ಉಳಿದ ಐದು ತಂಡಗಳೊಂದಿಗೆ ತಲಾ ಒಂದು ಪಂದ್ಯವನ್ನು (ಒಟ್ಟು 5 ಪಂದ್ಯಗಳು) ಆಡಲಿವೆ.
  • ಫಲಿತಾಂಶ: ಪ್ರತಿ ಗುಂಪಿನಿಂದ ಅಗ್ರ 3 ತಂಡಗಳು ನೇರವಾಗಿ ಮುಂದಿನ ಹಂತಕ್ಕೆ ಹೋಗುತ್ತವೆ (ಒಟ್ಟು 6 ತಂಡಗಳು). ಇದರೊಂದಿಗೆ, ಎರಡೂ ಗುಂಪುಗಳಲ್ಲಿ ಉಳಿದ ತಂಡಗಳ ಪೈಕಿ ಅತ್ಯುತ್ತಮ ಪ್ರದರ್ಶನ ನೀಡಿದ ಮತ್ತೊಂದು ಹೆಚ್ಚುವರಿ ತಂಡಕ್ಕೆ ಅವಕಾಶ ಸಿಗುತ್ತದೆ. ಹೀಗೆ ಒಟ್ಟು 7 ತಂಡಗಳು ಮುಂದಿನ ಹಂತಕ್ಕೆ ಲಗ್ಗೆ ಇಡುತ್ತವೆ.
  • 7ನೇ ತಂಡದ ಆಯ್ಕೆ ಹೇಗೆ?: ಗ್ರೂಪ್ ಹಂತದ 5 ಪಂದ್ಯಗಳ ಮುಕ್ತಾಯದ ನಂತರ, ಎರಡೂ ಗ್ರೂಪ್‌ಗಳ 4ನೇ ಸ್ಥಾನದಲ್ಲಿರುವ ತಂಡಗಳ ಪೈಕಿ ಯಾವ ತಂಡ ಅತಿ ಹೆಚ್ಚು ಅಂಕಗಳನ್ನು ಹೊಂದಿದೆಯೋ ಆ ತಂಡವು 7ನೇ ತಂಡವು ಮೂರನೇ ಹಂತಕ್ಕೆ ಪ್ರವೇಶಿಸುತ್ತದೆ.

ಹಂತ 3: ಸೂಪರ್ 7:

  • ಮಾದರಿ: ಅರ್ಹತೆ ಪಡೆದ 7 ತಂಡಗಳು ಸಿಂಗಲ್ ರೌಂಡ್-ರಾಬಿನ್ ಮಾದರಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತವೆ. ಅಂದರೆ ಇಲ್ಲಿ ಯಾವುದೇ ಗುಂಪುಗಳಿರುವುದಿಲ್ಲ, ಪ್ರತಿ ತಂಡವೂ ಉಳಿದ 6 ತಂಡಗಳ ವಿರುದ್ಧ ಆಡಲೇಬೇಕು (ಒಟ್ಟು 21 ಪಂದ್ಯಗಳು ನಡೆಯಲಿವೆ).
  • ನಾಕೌಟ್ ಹಂತ: ಸೂಪರ್ 7 ಹಂತದ ಅಂತ್ಯದಲ್ಲಿ ಅಂಕಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ತದನಂತರ ಸೆಮಿಫೈನಲ್ ಪಂದ್ಯಗಳು ಮತ್ತು ಫೈನಲ್​ ಪಂದ್ಯ ನಡೆಯಲಿದೆ.

ಏಕದಿನ ವಿಶ್ವಕಪ್ ಯಾವಾಗ ಶುರು?

2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು 2027ರ ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯಲಿದೆ. ಮುಂಬರುವ ಟೂರ್ನಿಗೆ ಆಫ್ರಿಕಾ ಖಂಡದ ಪ್ರಮುಖ ಮೂರು ದೇಶಗಳಾದ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸಲಿದೆ.

ಸ್ವರೂಪ ಬದಲಾವಣೆಗೆ ಕಾರಣವೇನು?

ಟೂರ್ನಿಯ ಆರಂಭಿಕ ಹಂತದಲ್ಲೇ ನೀರಸ ಪಂದ್ಯಗಳು ನಡೆಯುವುದನ್ನು ತಡೆಯಲು ಮತ್ತು ಬಲಿಷ್ಠ ತಂಡಗಳ ನಡುವೆ ಹೆಚ್ಚು ಹೈ-ವೋಲ್ಟೇಜ್ ಪಂದ್ಯಗಳು ಜರುಗುವಂತೆ ಮಾಡಲು ಐಸಿಸಿ ಈ ಕಠಿಣ ಸ್ವರೂಪವನ್ನು ಜಾರಿಗೆ ತಂದಿದೆ. ಇದಕ್ಕಾಗಿಯೇ ಈ ಹಿಂದೆ ಉದ್ದೇಶಿಸಲಾಗಿದ್ದ ಸಾಂಪ್ರದಾಯಿಕ ‘ಸೂಪರ್-6’ ಮಾದರಿಯನ್ನು ಸಂಪೂರ್ಣವಾಗಿ ಕೈಬಿಟ್ಟು, ಅದರ ಬದಲಿಗೆ ಕ್ರಾಂತಿಕಾರಕ ‘ಸೂಪರ್-7’ ಫಾರ್ಮ್ಯಾಟ್ ಪರಿಚಯಿಸಲಾಗಿದೆ.

ಈ ಹೊಸ ನಿಯಮದಿಂದಾಗಿ, ಬಲಿಷ್ಠ ತಂಡಗಳು ಕೇವಲ ಒಂದು ಪಂದ್ಯದ ಅದೃಷ್ಟದ ಆಧಾರದ ಮೇಲೆ ನಾಕೌಟ್ ತಲುಪಲು ಸಾಧ್ಯವಿಲ್ಲ. ಬದಲಿಗೆ, ಪ್ರತಿ ಪಂದ್ಯದಲ್ಲೂ ಉನ್ನತ ಮಟ್ಟದ ಸ್ಥಿರ ಪ್ರದರ್ಶನ ನೀಡುವ ಜಾಗತಿಕ ಕ್ರಿಕೆಟ್‌ನ ನೈಜ ಶಕ್ತಿಗಳು ಮಾತ್ರ ಸೆಮಿಫೈನಲ್ ತಲುಪಲು ಈ ಸ್ವರೂಪವು ದಾರಿ ಮಾಡಿಕೊಡುತ್ತದೆ.

ಇದನ್ನೂ ಓದಿ: ಮೆಸ್ಸಿ ಪಡೆಯ ಮಿಂಚಿನಾಟ: ಫೈನಲ್​ಗೆ ಅರ್ಜೆಂಟೀನಾ

ಒಟ್ಟಾರೆಯಾಗಿ ಹೇಳುವುದಾದರೆ, 2027ರ ಏಕದಿನ ವಿಶ್ವಕಪ್‌ನ ಈ ಹೊಸ ಸ್ವರೂಪವು ಕ್ರಿಕೆಟ್ ಜಗತ್ತನ್ನು ಮತ್ತೊಂದು ರೋಮಾಂಚಕ ಹಂತಕ್ಕೆ ಕೊಂಡೊಯ್ಯುವುದರಲ್ಲಿ ಯಾವುದೇ ಸಂಶಯವಿಲ್ಲ. ಐಸಿಸಿ ರೂಪಿಸಿರುವ ಈ ‘ಸೂಪರ್-7’ ಮಾಸ್ಟರ್ ಪ್ಲಾನ್ ಕೇವಲ ವಾಣಿಜ್ಯ ಲಾಭ ಮತ್ತು ಪ್ರಸಾರಕರ ಆದಾಯವನ್ನು ಹೆಚ್ಚಿಸುವುದಷ್ಟೇ ಅಲ್ಲದೆ, ಕ್ರಿಕೆಟ್ ಅಭಿಮಾನಿಗಳಿಗೆ ಆರಂಭದಿಂದ ಕೊನೆಯವರೆಗೂ ಹೈ-ವೋಲ್ಟೇಜ್ ಪಂದ್ಯಗಳ ಮನರಂಜನೆಯ ರಸದೌತಣ ನೀಡಲಿದೆ.

Published On – 8:12 am, Thu, 16 July 26

Source link

ಮತ್ತೊಂದು ಸಿನಿಮಾ ಅವಕಾಶ ಕಳೆದುಕೊಂಡ ನಟಿ ಶ್ರೀಲೀಲಾ – Kannada News | Sreeleela out from Thala Ajith’s next movie

ಶ್ರೀಲೀಲಾ (Sreeleela), ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗುವ ಹಾದಿಯಲ್ಲಿದ್ದಾರೆ. ಈಗಾಗಲೇ ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿರುವ ಶ್ರೀಲೀಲಾ, ತೆಲುಗಿನ ಸ್ಟಾರ್ ನಟರುಗಳೊಟ್ಟಿಗೆ ನಟಿಸಿ, ಚಿತ್ರರಂಗದ ನಂಬರ್ 1 ನಟಿ ಎನಿಸಿಕೊಂಡಿದ್ದರು. ಅದಾದ ಬಳಿಕ ತಮಿಳಿಗೂ ಎಂಟ್ರಿ ಕೊಟ್ಟು, ಅಲ್ಲಿಯೂ ಈಗ ಸತತ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಬಾಲಿವುಡ್​​ನಲ್ಲೂ ಸಹ ಶ್ರೀಲೀಲಾ ಬ್ಯುಸಿ, ಆದರೆ ಕೆಲ ಒಳ್ಳೆಯ ಅವಕಾಶಗಳನ್ನು ಶ್ರೀಲೀಲಾ ಕಳೆದುಕೊಳ್ಳುತ್ತಿದ್ದಾರೆ ಸಹ. ಈ ಹಿಂದೆ ಎರಡು ಒಳ್ಳೆ ತೆಲುಗು ಸಿನಿಮಾ ಅವಕಾಶ ಕಳೆದುಕೊಂಡಿದ್ದ ನಟಿ ಶ್ರೀಲೀಲಾ, ಈಗ ತಮಿಳಿನ ಸ್ಟಾರ್ ನಟನೊಟ್ಟಿಗೆ ನಟಿಸುವ ಅವಕಾಶವನ್ನು ಕಳೆದುಕೊಂಡಿದ್ದಾರೆ.

ಈ ಹಿಂದೆ ಶ್ರೀಲೀಲಾ, ವಿಜಯ್ ದೆವರಕೊಂಡ ಜೊತೆಗೆ ಶ್ರೀಲೀಲಾ ಸಿನಿಮಾ ಒಪ್ಪಿಕೊಂಡಿದ್ದರು. ಸಿನಿಮಾಕ್ಕೆ ಆಗ ವಿಡಿ 12 ಎಂದು ಕರೆಯಲಾಗಿತ್ತು. ಫೋಟೊಶೂಟ್ ಸಹ ಆಗಿತ್ತು. ಆದರೆ ಬಳಿಕ ಆ ಸಿನಿಮಾ ಅವಕಾಶ ಭಾಗ್ಯಶ್ರೀ ಭೋರ್ಸೆ ಪಾಲಾಯ್ತು. ‘ಕಿಂಗ್​​ಡಮ್’ ಹೆಸರಿನ ಆ ಸಿನಿಮಾ ಬಿಡುಗಡೆ ಆಗಿ, ಸಾಧಾರಣ ಯಶಸ್ಸನ್ನಷ್ಟೆ ಗಳಿಸಿತು. ಬಳಿಕ, ಶ್ರೀಲೀಲಾ, ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿ ನಟನೆಯ ‘ಲೆನಿನ್’ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಆದರು. ಆದರೆ ಆ ಸಿನಿಮಾದಿಂದಲೂ ಹೊರಬಂದರು ನಟಿ. ಆ ಸಿನಿಮಾ ಸಹ ಭಾಗ್ಯಶ್ರೀ ಭೋರ್ಸೆ ಅವರ ಕೈಸೇರಿತು. ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ, ಬ್ಲಾಕ್ ಬಸ್ಟರ್ ಆಗಿದೆ.

ಇದನ್ನೂ ಓದಿ:ಮಿಶ್ರ ಪ್ರತಿಕ್ರಿಯೆ ನಡುವೆಯೂ ಒಟಿಟಿಯಲ್ಲಿ ಟ್ರೆಂಡ್ ಆಗುತ್ತಿರುವ ‘ಪೆದ್ದಿ’ ಸಿನಿಮಾ

ಇನ್ನು ಈಗ ತಮಿಳಿನ ಸೂಪರ್ ಸ್ಟಾರ್ ನಟರೊಬ್ಬರ ಜೊತೆಗೆ ನಟಿಸುವ ಅವಕಾಶವನ್ನು ಶ್ರೀಲೀಲಾ ಕಳೆದುಕೊಂಡಿದ್ದಾರೆ. ಶ್ರೀಲೀಲಾ ಅವರು, ತಮಿಳಿನ ಸ್ಟಾರ್ ನಟ ಅಜಿತ್ ಅವರ ನಟನೆಯ ಹೊಸ ಸಿನಿಮಾನಲ್ಲಿ ನಟಿಸಲಿದ್ದರು. ಸಿನಿಮಾದ ಕುರಿತು ಮಾತುಕತೆ ಸಹ ನಡೆದಿತ್ತು. ಆದರೆ ಇದೀಗ ಹಠಾತ್ತನೆ ಅಜಿತ್ ಅವರ ಸಿನಿಮಾಕ್ಕೆ ನಾಯಕಿ ಬದಲಾವಣೆ ಆಗಿದೆ. ಅಜಿತ್ ಅವರ ಸಿನಿಮಾದಿಂದ ಶ್ರೀಲೀಲಾ ಹೊರನಡೆದಿದ್ದು, ಅವರ ಜಾಗವನ್ನು ಖಯಾದು ಲೋಹರ್ ತುಂಬಲಿದ್ದಾರೆ. ಕನ್ನಡದ ‘ಮುಗಿಲ್ ಪೇಟೆ’ ಸಿನಿಮಾ ಮೂಲಕ ನಟನೆ ಆರಂಭಿಸಿದ್ದ ಖಯಾದು ಲೋಹರ್, ಈಗ ಅಜಿತ್ ಸಿನಿಮಾದ ಹೊಸ ನಾಯಕಿ.

ಶ್ರೀಲೀಲಾಗೆ ಅವಕಾಶ ತಪ್ಪಿದೆ ಆದರೂ ಅವರ ಕೈಯಲ್ಲಿ ಹಲವಾರು ಹೊಸ ಸಿನಿಮಾ ಅವಕಾಶಗಳು ಇವೆ. ಧನುಶ್ ನಟನೆಯ ಹೊಸ ಸಿನಿಮಾನಲ್ಲಿ ಅವರು ನಟಿಸುತ್ತಿದ್ದಾರೆ. ತೆಲುಗಿನ ಎರಡು ಹೊಸ ಸಿನಿಮಾ ಕೈಯಲ್ಲಿವೆ. ಹಿಂದಿಯಲ್ಲಿ ಕಾರ್ತಿಕ್ ಆರ್ಯನ್ ಜೊತೆಗೆ ಒಂದು ಸಿನಿಮಾನಲ್ಲಿ ನಟಿಸುತ್ತಿದ್ದು, ಭರ್ಜರಿಯಾಗಿ ಸಿನಿಮಾ ನಿರ್ಮಾಣ ಆಗುತ್ತಿದೆ. ಹಿಂದಿಯ ಇನ್ನೂ ಎರಡು ಸಿನಿಮಾಗಳನ್ನು ಈಗಾಗಲೇ ಶ್ರೀಲೀಲಾ ಒಪ್ಪಿಕೊಂಡಿದ್ದಾರೆ. ಒಟ್ಟಾರೆ ಶ್ರೀಲೀಲಾ ಬಹಳ ಬ್ಯುಸಿ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಹಾಯುದ್ಧದ ಭೀತಿ: ಇರಾನ್‌ನ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ದಾಳಿ, MQ-9 ಡ್ರೋನ್ ಹೊಡೆದುರುಳಿಸಿದ ಇರಾನ್ – Kannada News | US Iran War Escalates: Children’s Cancer Hospital Bombed, MQ 9 Drone Downed by Iran

ಟೆಹ್ರಾನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವು ರಕ್ತಸಿಕ್ತ ಕ್ರಾಂತಿಗೆ ಕಾರಣವಾಗಿದೆ. ಕೇವಲ 24 ಗಂಟೆಗಳಲ್ಲಿ ಇರಾನ್ ಮೇಲೆ 3ನೇ ಬಾರಿಗೆ ಭೀಕರ ವಾಯುದಾಳಿ ನಡೆಸಿರುವ ಅಮೆರಿಕ ಪಡೆಗಳು, ಇರಾನ್ ಬಂದರುಗಳಿಗೆ ಕಠಿಣ ನೌಕಾ ದಿಗ್ಬಂಧನ ವಿಧಿಸಿವೆ. ಇದಕ್ಕೆ ಅತ್ಯಂತ ಕ್ರೂರವಾಗಿ ಪ್ರತಿಕ್ರಿಯಿಸಿರುವ ಇರಾನ್, ಜಾಗತಿಕ ತೈಲ ಮಾರುಕಟ್ಟೆಯ ಜೀವಾಳವಾಗಿರುವ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಬಿಡುವುದಾಗಿ ಪಣತೊಟ್ಟಿದೆ. ಈ ಬೆನ್ನಲ್ಲೇ ಕಚ್ಚಾ ತೈಲ ಬೆಲೆಗಳು ಜಾಗತಿಕವಾಗಿ ಗಗನಕ್ಕೇರಿವೆ.

ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಧ್ವಂಸ: ರೋಗಿಗಳ ಕಣ್ಣೀರು

ಇರಾನ್‌ನ ಅಹ್ವಾಜ್ ನಗರದ ಮೇಲೆ ಅಮೆರಿಕ ನಡೆಸಿದ ವಾಯುದಾಳಿಯು ಇಡೀ ಮಾನವಕುಲವೇ ತಲೆತಗ್ಗಿಸುವಂತಹ ದುರಂತಕ್ಕೆ ಕಾರಣವಾಗಿದೆ. ಅಲ್ಲಿನ ಪ್ರಸಿದ್ಧ ‘ಶಾಹಿದ್ ಬಘೈ’ ಆಸ್ಪತ್ರೆಯ ಮೇಲೆ ಅಮೆರಿಕದ ಬಾಂಬ್‌ಗಳು ಬಿದ್ದಿದ್ದು, ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ಚಿಕಿತ್ಸಾ ವಿಭಾಗ ಸಂಪೂರ್ಣ ಧ್ವಂಸಗೊಂಡಿದೆ. ಕೀಮೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಹಾಗೂ ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳನ್ನು ಜೀವಭಯದಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಈ ಸರಣಿ ದಾಳಿಗಳಲ್ಲಿ ಇರಾನ್‌ನ ಇಡೀ ಸೇನಾ ಬ್ಯಾರಕ್‌ಗಳು ಧೂಳೀಪಟವಾಗಿದ್ದು, ಕನಿಷ್ಠ 7 ಸೈನಿಕರು ಸೇರಿ ಇದುವರೆಗೆ 35 ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಅಧಿಕ ಜನ ರಕ್ತಸಿಕ್ತವಾಗಿ ಗಾಯಗೊಂಡಿದ್ದಾರೆ. ಇರಾನ್‌ನ ಏಕೈಕ ನಾಗರಿಕ ಪರಮಾಣು ಸ್ಥಾವರವಿರುವ ಬುಶೆಹರ್ ಮೇಲೂ ಅಮೆರಿಕ ದಾಳಿ ನಡೆಸಿದೆ ಎಂದು ಇರಾನ್ ರಾಜ್ಯ ಮಾಧ್ಯಮಗಳು ಆಕ್ರೋಶ ವ್ಯಕ್ತಪಡಿಸಿವೆ.

ಅಮೆರಿಕದ 250 ಕೋಟಿ ರೂ. ಮೌಲ್ಯದ ‘MQ-9’ ಡ್ರೋನ್ ಧೂಳೀಪಟ

ಅಮೆರಿಕದ ವಾಯುದಾಳಿಗೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಅತ್ಯಂತ ಭೀಕರ ತಿರುಗೇಟು ನೀಡಿದೆ. ಅಮೆರಿಕ ಸೇನೆಯ ಹೆಮ್ಮೆಯ, ಜಗತ್ತಿನ ಅತ್ಯಂತ ಸುಧಾರಿತ ಹಾಗೂ ದುಬಾರಿ ಬೇಹುಗಾರಿಕಾ ಯುದ್ಧ ವಿಮಾನವಾದ MQ-9 ರೀಪರ್ ಡ್ರೋನ್ ಅನ್ನು ಇರಾನ್‌ನ ನೈಋತ್ಯ ನಗರವಾದ ಆಂಡಿಮೆಶ್ಕ್ ಆಕಾಶದಲ್ಲಿ ತನ್ನ ಹೊಸ ವಾಯು ರಕ್ಷಣಾ ವ್ಯವಸ್ಥೆಯ ಮೂಲಕ ಹೊಡೆದುರುಳಿಸಿದೆ. ಅಮೆರಿಕದ ಅತ್ಯಾಧುನಿಕ ಡ್ರೋನ್ ಅನ್ನು ನಾವೇ ಹೊಡೆದುರುಳಿಸಿದ್ದು ಎಂದು ಇರಾನ್ ಹೆಮ್ಮೆಯಿಂದ ಜಗತ್ತಿನೆದುರು ಘೋಷಿಸಿಕೊಂಡಿದೆ.

ಮತ್ತಷ್ಟು ಓದಿ: ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ

ಅಲ್ಲದೆ, ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ 5ನೇ ಫ್ಲೀಟ್ ಬೇಸ್ ಅನ್ನು ಗುರಿಯಾಗಿಸಿ ಇರಾನ್ ಸರಣಿ ಕ್ಷಿಪಣಿಗಳನ್ನು ಹಾರಿಸಿದ್ದು, ಅಲ್ಲಿ ಯುದ್ಧದ ಸೈರನ್‌ಗಳು ನಿರಂತರವಾಗಿ ಮೊಳಗುತ್ತಿವೆ.

ಸೌದಿ ಅರೇಬಿಯಾಕ್ಕೆ ಭಾರಿ ಆಫರ್: ಸೌದಿ ಅರೇಬಿಯಾಕ್ಕೆ ಬರೋಬ್ಬರಿ ಸುಮಾರು 16,000 ಕೋಟಿ ರೂ. ಕ್ಷಿಪಣಿ ವ್ಯವಸ್ಥೆಗಳು, ಸಿಡಿತಲೆಗಳು ಮತ್ತು ಲಾಂಚರ್‌ಗಳ ಮಾರಾಟಕ್ಕೆ ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್ ತಕ್ಷಣದ ಅನುಮೋದನೆ ನೀಡಿದೆ.

ಕುವೈತ್‌ಗೆ ವಿಮಾನ ರಕ್ಷಣೆ: ಕುವೈತ್ ದೇಶಕ್ಕೆ ತನ್ನ C-17 ದೈತ್ಯ ಮಿಲಿಟರಿ ಸರಕು ಸಾಗಣೆ ವಿಮಾನಗಳ ಸುಸ್ಥಿರತೆಗಾಗಿ 484 ಮಿಲಿಯನ್ ಡಾಲರ್ಪ್ಯಾಕೇಜ್ ಅನ್ನು ಘೋಷಿಸಿದೆ.

ತೈಲ ಹಡಗಿನ ಮೇಲೆ ಹೆಲ್‌ಫೈರ್ ಕ್ಷಿಪಣಿ ದಾಳಿ

ಅಮೆರಿಕದ ಸೆಂಟ್ರಲ್ ಕಮಾಂಡ್ ಇರಾನ್‌ನ ಬಂದರುಗಳ ದಿಗ್ಬಂಧನವನ್ನು ಮುರಿಯಲು ಯತ್ನಿಸುತ್ತಿದ್ದ ‘ಎಂ/ಟಿ ಬೆಲ್ಮಾ’ ಎಂಬ ದೈತ್ಯ ತೈಲ ಟ್ಯಾಂಕರ್ ಹಡಗಿನ ಮೇಲೆ ಯುದ್ಧವಿಮಾನದ ಮೂಲಕ ಭೀಕರ ‘ಹೆಲ್‌ಫೈರ್’ ಕ್ಷಿಪಣಿಗಳನ್ನು ಹಾರಿಸಿ ಅದನ್ನು ಜಲಮಾರ್ಗದ ನಡುವೆಯೇ ನಿಷ್ಕ್ರಿಯಗೊಳಿಸಿದೆ.

ಇದರ ನಡುವೆಯೂ ಪೆನ್ಸಿಲ್ವೇನಿಯಾದ ರಕ್ಷಣಾ ಶೃಂಗಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಮ್ಮ ದಾಳಿಗಳು ಇರಾನ್‌ಗೆ ಇಷ್ಟವಾಗುತ್ತಿಲ್ಲ, ಅವರು ಒಪ್ಪಂದಕ್ಕೆ ಬರಲು ಬಯಸುತ್ತಿದ್ದಾರೆ. ಅವರು ಮಾತುಕತೆಗೆ ಬರದಿದ್ದರೆ ಮುಂದಿನ ವಾರ ಅವರ ಇಡೀ ದೇಶದ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಸಂಪೂರ್ಣವಾಗಿ ಕೆಡವಿಹಾಕಲಿದ್ದೇವೆ ಎಂದು ಮತ್ತೊಮ್ಮೆ ಎಚ್ಚರಿಸಿದ್ದಾರೆ.

ಸದ್ಯ ಜಾಗತಿಕ ತೈಲ ಸಾಗಣೆಯ ಶೇ. 20 ರಷ್ಟು ಭಾಗ ಹಾದುಹೋಗುವ ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್ ಆಗಿರುವುದರಿಂದ ಭಾರತ ಸೇರಿದಂತೆ ಇಡೀ ವಿಶ್ವದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ತೀವ್ರವಾಗಿ ಏರಿಕೆಯಾಗುವ ಆತಂಕ ಎದುರಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | Icc odi world cup 2027 format explained in kannada

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ.

ಹಂತ 1: ಸೂಪರ್ ಸೀರೀಸ್ 

  • ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ. ಅಂದರೆ 11 ತಂಡಗಳು ನೇರ ಅರ್ಹತೆ ಪಡೆದರೆ, 3 ತಂಡಗಳು ಟೂರ್ನಿ ಆರಂಭಕ್ಕೂ ಮುನ್ನ ಸೂಪರ್ ಸಿರೀಸ್ ಆಡಿ ಅರ್ಹತೆ ಪಡೆಯಬೇಕಿದೆ.
  • ಮಾದರಿ: ಈ ಮೂರು ತಂಡಗಳು ಪರಸ್ಪರ ತಲಾ ಒಂದು ಪಂದ್ಯವನ್ನು ಆಡಲಿವೆ (ಮಿನಿ ಲೀಗ್).
  • ಫಲಿತಾಂಶ: ಈ ಮೂರು ತಂಡಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಕೇವಲ 1 ತಂಡ ಮಾತ್ರ ಮುಂದಿನ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಉಳಿದ 2 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಹಂತ 2: ಗುಂಪು ಹಂತ:

  • ಯಾರ ನಡುವೆ?: ಸೂಪರ್ ಸೀರೀಸ್‌ನಿಂದ ಗೆದ್ದು ಬಂದ 1 ತಂಡವು, ಉಳಿದ 11 ಉನ್ನತ ಶ್ರೇಯಾಂಕದ ತಂಡಗಳನ್ನು ಸೇರಿಕೊಳ್ಳುತ್ತದೆ. ಅದರಂತೆ ದ್ವಿತೀಯ ಹಂತದಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ.
  • ಮಾದರಿ: ಈ 12 ತಂಡಗಳನ್ನು ತಲಾ 6 ತಂಡಗಳಂತೆ ಎರಡು ಗುಂಪುಗಳಾಗಿ (ಗ್ರೂಪ್ A ಮತ್ತು ಗ್ರೂಪ್ B) ವಿಂಗಡಿಸಲಾಗುತ್ತದೆ. ಪ್ರತಿಯೊಂದು ತಂಡವು ತನ್ನ ಗುಂಪಿನಲ್ಲಿರುವ ಉಳಿದ ಐದು ತಂಡಗಳೊಂದಿಗೆ ತಲಾ ಒಂದು ಪಂದ್ಯವನ್ನು (ಒಟ್ಟು 5 ಪಂದ್ಯಗಳು) ಆಡಲಿವೆ.
  • ಫಲಿತಾಂಶ: ಪ್ರತಿ ಗುಂಪಿನಿಂದ ಅಗ್ರ 3 ತಂಡಗಳು ನೇರವಾಗಿ ಮುಂದಿನ ಹಂತಕ್ಕೆ ಹೋಗುತ್ತವೆ (ಒಟ್ಟು 6 ತಂಡಗಳು). ಇದರೊಂದಿಗೆ, ಎರಡೂ ಗುಂಪುಗಳಲ್ಲಿ ಉಳಿದ ತಂಡಗಳ ಪೈಕಿ ಅತ್ಯುತ್ತಮ ಪ್ರದರ್ಶನ ನೀಡಿದ ಮತ್ತೊಂದು ಹೆಚ್ಚುವರಿ ತಂಡಕ್ಕೆ ಅವಕಾಶ ಸಿಗುತ್ತದೆ. ಹೀಗೆ ಒಟ್ಟು 7 ತಂಡಗಳು ಮುಂದಿನ ಹಂತಕ್ಕೆ ಲಗ್ಗೆ ಇಡುತ್ತವೆ.
  • 7ನೇ ತಂಡದ ಆಯ್ಕೆ ಹೇಗೆ?: ಗ್ರೂಪ್ ಹಂತದ 5 ಪಂದ್ಯಗಳ ಮುಕ್ತಾಯದ ನಂತರ, ಎರಡೂ ಗ್ರೂಪ್‌ಗಳ 4ನೇ ಸ್ಥಾನದಲ್ಲಿರುವ ತಂಡಗಳ ಪೈಕಿ ಯಾವ ತಂಡ ಅತಿ ಹೆಚ್ಚು ಅಂಕಗಳನ್ನು ಹೊಂದಿದೆಯೋ ಆ ತಂಡವು 7ನೇ ತಂಡವು ಮೂರನೇ ಹಂತಕ್ಕೆ ಪ್ರವೇಶಿಸುತ್ತದೆ.

ಹಂತ 3: ಸೂಪರ್ 7:

  • ಮಾದರಿ: ಅರ್ಹತೆ ಪಡೆದ 7 ತಂಡಗಳು ಸಿಂಗಲ್ ರೌಂಡ್-ರಾಬಿನ್ ಮಾದರಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತವೆ. ಅಂದರೆ ಇಲ್ಲಿ ಯಾವುದೇ ಗುಂಪುಗಳಿರುವುದಿಲ್ಲ, ಪ್ರತಿ ತಂಡವೂ ಉಳಿದ 6 ತಂಡಗಳ ವಿರುದ್ಧ ಆಡಲೇಬೇಕು (ಒಟ್ಟು 21 ಪಂದ್ಯಗಳು ನಡೆಯಲಿವೆ).
  • ನಾಕೌಟ್ ಹಂತ: ಸೂಪರ್ 7 ಹಂತದ ಅಂತ್ಯದಲ್ಲಿ ಅಂಕಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ತದನಂತರ ಸೆಮಿಫೈನಲ್ ಪಂದ್ಯಗಳು ಮತ್ತು ಫೂನಲ್​ ಪಂದ್ಯ ನಡೆಯಲಿದೆ.

ಏಕದಿನ ವಿಶ್ವಕಪ್ ಯಾವಾಗ ಶುರು?

2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು 2027ರ ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯಲಿದೆ. ಮುಂಬರುವ ಟೂರ್ನಿಗೆ ಆಫ್ರಿಕಾ ಖಂಡದ ಪ್ರಮುಖ ಮೂರು ದೇಶಗಳಾದ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸಲಿದೆ.

ಸ್ವರೂಪ ಬದಲಾವಣೆಗೆ ಕಾರಣವೇನು?

ಟೂರ್ನಿಯ ಆರಂಭಿಕ ಹಂತದಲ್ಲೇ ನೀರಸ ಪಂದ್ಯಗಳು ನಡೆಯುವುದನ್ನು ತಡೆಯಲು ಮತ್ತು ಬಲಿಷ್ಠ ತಂಡಗಳ ನಡುವೆ ಹೆಚ್ಚು ಹೈ-ವೋಲ್ಟೇಜ್ ಪಂದ್ಯಗಳು ಜರುಗುವಂತೆ ಮಾಡಲು ಐಸಿಸಿ ಈ ಕಠಿಣ ಸ್ವರೂಪವನ್ನು ಜಾರಿಗೆ ತಂದಿದೆ. ಇದಕ್ಕಾಗಿಯೇ ಈ ಹಿಂದೆ ಉದ್ದೇಶಿಸಲಾಗಿದ್ದ ಸಾಂಪ್ರದಾಯಿಕ ‘ಸೂಪರ್-6’ ಮಾದರಿಯನ್ನು ಸಂಪೂರ್ಣವಾಗಿ ಕೈಬಿಟ್ಟು, ಅದರ ಬದಲಿಗೆ ಕ್ರಾಂತಿಕಾರಕ ‘ಸೂಪರ್-7’ ಫಾರ್ಮ್ಯಾಟ್ ಪರಿಚಯಿಸಲಾಗಿದೆ.

ಈ ಹೊಸ ನಿಯಮದಿಂದಾಗಿ, ಬಲಿಷ್ಠ ತಂಡಗಳು ಕೇವಲ ಒಂದು ಪಂದ್ಯದ ಅದೃಷ್ಟದ ಆಧಾರದ ಮೇಲೆ ನಾಕೌಟ್ ತಲುಪಲು ಸಾಧ್ಯವಿಲ್ಲ. ಬದಲಿಗೆ, ಪ್ರತಿ ಪಂದ್ಯದಲ್ಲೂ ಉನ್ನತ ಮಟ್ಟದ ಸ್ಥಿರ ಪ್ರದರ್ಶನ ನೀಡುವ ಜಾಗತಿಕ ಕ್ರಿಕೆಟ್‌ನ ನೈಜ ಶಕ್ತಿಗಳು ಮಾತ್ರ ಸೆಮಿಫೈನಲ್ ತಲುಪಲು ಈ ಸ್ವರೂಪವು ದಾರಿ ಮಾಡಿಕೊಡುತ್ತದೆ.

ಇದನ್ನೂ ಓದಿ: ಮೆಸ್ಸಿ ಪಡೆಯ ಮಿಂಚಿನಾಟ: ಫೈನಲ್​ಗೆ ಅರ್ಜೆಂಟೀನಾ

ಒಟ್ಟಾರೆಯಾಗಿ ಹೇಳುವುದಾದರೆ, 2027ರ ಏಕದಿನ ವಿಶ್ವಕಪ್‌ನ ಈ ಹೊಸ ಸ್ವರೂಪವು ಕ್ರಿಕೆಟ್ ಜಗತ್ತನ್ನು ಮತ್ತೊಂದು ರೋಮಾಂಚಕ ಹಂತಕ್ಕೆ ಕೊಂಡೊಯ್ಯುವುದರಲ್ಲಿ ಯಾವುದೇ ಸಂಶಯವಿಲ್ಲ. ಐಸಿಸಿ ರೂಪಿಸಿರುವ ಈ ‘ಸೂಪರ್-7’ ಮಾಸ್ಟರ್ ಪ್ಲಾನ್ ಕೇವಲ ವಾಣಿಜ್ಯ ಲಾಭ ಮತ್ತು ಪ್ರಸಾರಕರ ಆದಾಯವನ್ನು ಹೆಚ್ಚಿಸುವುದಷ್ಟೇ ಅಲ್ಲದೆ, ಕ್ರಿಕೆಟ್ ಅಭಿಮಾನಿಗಳಿಗೆ ಆರಂಭದಿಂದ ಕೊನೆಯವರೆಗೂ ಹೈ-ವೋಲ್ಟೇಜ್ ಪಂದ್ಯಗಳ ಮನರಂಜನೆಯ ರಸದೌತಣ ನೀಡಲಿದೆ.

Source link

ಶಂಕರ್​ ನಾಗ್ ಕನಸಿನ ಕೂಸು ‘ಮಾಲ್ಗುಡಿ ಡೇಸ್’ ಸರಣಿಗೆ 40 ವರ್ಷ – Kannada News | Celebrating 40 Years of Malgudi Days How Shankar Nag directorial magic brought RK Narayan world to life in Agumbe

ಆರ್‌ಕೆ ನಾರಾಯಣ್ ಅವರ ಕಲ್ಪನೆಯ ಕಥಾಲೋಕ, ಶಂಕರ್ ನಾಗ್ ಅವರ ಅದ್ಭುತ ದೃಶ್ಯಾವಳಿ ಹಾಗೂ ಎಲ್.ವೈದ್ಯನಾಥನ್ ಅವರ ಹಿನ್ನೆಲೆ ಸಂಗೀತದ ಮೂಲಕ ‘ಮಾಲ್ಗುಡಿ ಡೇಸ್’ ಸರಣಿ ಮೂಡಿ ಬಂದಿತ್ತು. ಕಥಾಸರಣಿ ಬಿಡುಗಡೆಯಾಗಿ ಈಗ ಭರ್ತಿ 40 ವರ್ಷಗಳು ತುಂಬುತ್ತಾ ಬಂದಿವೆ. 1986ರಲ್ಲಿ ದೂರದರ್ಶನದಲ್ಲಿ ಮೊದಲ ಬಾರಿಗೆ ಪ್ರಸಾರವಾಗಿದ್ದ ಈ ಸರಣಿ, ಇಂದಿಗೂ ಕೋಟ್ಯಂತರ ಭಾರತೀಯರ ಬಾಲ್ಯದ ಮಧುರ ನೆನಪಾಗಿದೆ.

ಶಂಕರ್ ನಾಗ್ ಅವರ ದೃಶ್ಯ ಮ್ಯಾಜಿಕ್

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ, ನಿರ್ದೇಶಕ ಶಂಕರ್ ನಾಗ್ ಅವರು ಅತ್ಯಂತ ಕಾಳಜಿ ಮತ್ತು ಶ್ರದ್ಧೆಯಿಂದ ಈ ಸರಣಿಯನ್ನು ನಿರ್ದೇಶಿಸಿದ್ದರು. ಆರ್.ಕೆ. ನಾರಾಯಣ್ ಅವರ ಸಣ್ಣ ಕಥೆಗಳನ್ನು ದೃಶ್ಯ ರೂಪಕ್ಕೆ ತರುವಾಗ ಅವರು ಅಳವಡಿಸಿಕೊಂಡ ತಂತ್ರಜ್ಞಾನ ಹಾಗೂ ಮೇಕಿಂಗ್ ಶೈಲಿ ಇಂದಿಗೂ ಮಾದರಿಯಾಗಿದೆ. ಶಂಕರ್ ನಾಗ್ ಅವರ ವಿಷನ್ ಎಷ್ಟು ಅದ್ಭುತವಾಗಿತ್ತೆಂದರೆ, ಇಡೀ ಭಾರತವೇ ಈ ಸರಣಿಗೆ ಮನಸೋತಿತ್ತು.

ಆಗುಂಬೆಯಲ್ಲೇ ಸೃಷ್ಟಿಯಾಗಿತ್ತು ‘ಮಾಲ್ಗುಡಿ’ ಲೋಕ

ಕಥೆಯಲ್ಲಿ ಬರುವ ಕಾಲ್ಪನಿಕ ತಾಣ ‘ಮಾಲ್ಗುಡಿ’ಯನ್ನು ಕಣ್ಣಿಗೆ ಕಟ್ಟುವಂತೆ ಮಾಡಲು ಶಂಕರ್ ನಾಗ್ ಆರಿಸಿಕೊಂಡಿದ್ದು ಶಿವಮೊಗ್ಗ ಜಿಲ್ಲೆಯ ಆಗುಂಬೆಯನ್ನು. ಅಲ್ಲಿನ ಹಳೆಯ ಮನೆಗಳು, ಮಲೆನಾಡಿನ ಹಸಿರು, ಮಳೆ ಹಾಗೂ ಪ್ರಕೃತಿ ಸೌಂದರ್ಯ ಇಡೀ ಸರಣಿಗೆ ಜೀವ ತುಂಬಿದ್ದವು. ಇಂದಿಗೂ ಆಗುಂಬೆಗೆ ಹೋದರೆ ‘ಮಾಲ್ಗುಡಿ ಡೇಸ್’ ಶೂಟಿಂಗ್ ನಡೆದ ಮನೆಗಳನ್ನು ಪ್ರವಾಸಿಗರು ಆಸಕ್ತಿಯಿಂದ ನೋಡುತ್ತಾರೆ.ಈ ಜಾಗವನ್ನು ಸೂಚಿಸಿದ್ದರು ಅವರೇ ಅನ್ನೋದು ವಿಶೇಷ.

ಸ್ವಾಮಿ ಮತ್ತು ಆತನ ಗೆಳೆಯರ ಬಳಗ

ಮಾಲ್ಗುಡಿ ಡೇಸ್ ಎಂದ ತಕ್ಷಣ ನೆನಪಿಗೆ ಬರುವುದು ಕಲಾವಿದರ ಬಳಗ. ಮಾಸ್ಟರ್ ಮಂಜುನಾಥ್, ಅನಂತ್ ನಾಗ್, ಗಿರೀಶ್ ಕಾರ್ನಾಡ್, ವೈಶಾಲಿ ಕಾಸರವಳ್ಳಿ ಸೇರಿದಂತೆ ಶ್ರೇಷ್ಠ ಕಲಾವಿದರ ದಂಡೇ ಈ ಸರಣಿಯಲ್ಲಿ ನಟಿಸಿತ್ತು.

‘ತಾನಾ ನಾನಾ ತಾನಾನಾನಾ’ ಸಾರ್ವಕಾಲಿಕ ರಾಗ

ಎಲ್.ವೈದ್ಯನಾಥನ್ ಸಂಯೋಜಿಸಿದ ಮಾಲ್ಗುಡಿ ಡೇಸ್ ಶೀರ್ಷಿಕೆ ಗೀತೆ ಕೇಳದ ಭಾರತೀಯನೇ ಇಲ್ಲ ಎನ್ನಬಹುದು. ಕೇವಲ ಒಂದು ಸರಳ ರಾಗ ಇಡೀ ಸರಣಿಯ ಆತ್ಮವಾಗಿ ಮೂಡಿಬಂದಿತ್ತು. ಇಂದಿಗೂ ಆ ಟ್ಯೂನ್ ಕೇಳಿದರೆ ಸಾಕು, ನಾವೆಲ್ಲರೂ ನಮ್ಮ ಬಾಲ್ಯದ ದಿನಗಳಿಗೆ ಜಾರಿಬಿಡುತ್ತೇವೆ.

ಇದನ್ನೂ ಓದಿ: ನಿಧನ ಹೊಂದುವ ಹಿಂದಿನ ದಿನ ಸಾಯುವ ದೃಶ್ಯವನ್ನೇ ಶೂಟ್ ಮಾಡಿದ್ದ ಶಂಕರ್ ನಾಗ್

ಸ್ಮರಣೀಯ ಮೈಲಿಗಲ್ಲು

ದೂರದರ್ಶನದ ಸುವರ್ಣ ಯುಗಕ್ಕೆ ಸಾಕ್ಷಿಯಾಗಿದ್ದ ‘ಮಾಲ್ಗುಡಿ ಡೇಸ್’ ಕೇವಲ ಒಂದು ಸರಣಿಯಾಗಿ ಉಳಿಯದೆ ಭಾರತೀಯ ಸಾಂಸ್ಕೃತಿಕ ಪರಂಪರೆಯ ಭಾಗವಾಗಿದೆ. 40 ವರ್ಷಗಳು ಕಳೆದರೂ ಇದರ ಜನಪ್ರಿಯತೆ ಹಾಗೂ ಪ್ರಸ್ತುತತೆ ಕಿಂಚಿತ್ತೂ ಕಡಿಮೆಯಾಗಿಲ್ಲ ಎನ್ನುವುದೇ ಶಂಕರ್ ನಾಗ್ ಹಾಗೂ ಅವರ ಇಡೀ ತಂಡದ ಪ್ರತಿಭೆಗೆ ಹಿಡಿದ ಕೈಗನ್ನಡಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸೈಬರ್ ಅಕ್ರಮ ತಡೆ, ಡಿಜಿಟಲ್ ಭದ್ರತೆ ಬಲಪಡಿಸಲು DRDO ಕ್ವಾಂಟಮ್ ಕೀ ಡಿಸ್ಟ್ರಿಬ್ಯೂಷನ್ ಪ್ರಯೋಗ ಯಶಸ್ವಿ: ಬೆಂಗಳೂರಿನ ಕಂಪನಿ ಸಾಥ್! – Kannada News | DRDO Quantum Key Distribution Success: Bengaluru Based Taqbit Labs Powers India’s Next Generation Cyber Security

ಬೆಂಗಳೂರು, ಜುಲೈ 16: ಭಾರತದ ಡಿಜಿಟಲ್ ಭದ್ರತೆ ಮತ್ತು ಕಾರ್ಯತಂತ್ರದ ಸಂವಹನ ಜಾಲಗಳನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮಹತ್ವದ ಸಾಧನೆ ಮಾಡಿದೆ. ಫೈಬರ್ ಆಧಾರಿತ ಕ್ವಾಂಟಂ ಕೀ ಡಿಸ್ಟ್ರಿಬ್ಯೂಷನ್ (Quantum Key Distribution – QKD) ವ್ಯವಸ್ಥೆಯ ಸೇನಾ ಕ್ಷೇತ್ರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಡಿಆರ್‌ಡಿಒ, ಈ ಯೋಜನೆಯಲ್ಲಿ ಬೆಂಗಳೂರು ಮೂಲದ ಟ್ಯಾಕ್‌ಬಿಟ್ ಲ್ಯಾಬ್ಸ್ (Taqbit Labs) ಸಂಸ್ಥೆಯ ಸಹಯೋಗವನ್ನು ಪಡೆದುಕೊಂಡಿದೆ. ದೇಶೀಯ ತಂತ್ರಜ್ಞಾನವನ್ನು ಆಧರಿಸಿ ಅಭಿವೃದ್ಧಿಪಡಿಸಿರುವ ಈ ವ್ಯವಸ್ಥೆಯು ಭವಿಷ್ಯದ ಸೈಬರ್ ದಾಳಿಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿರುವ ಸುರಕ್ಷಿತ ಸಂವಹನ ವ್ಯವಸ್ಥೆಯಾಗಿ ಗುರುತಿಸಿಕೊಂಡಿದೆ.

ಪ್ರಯೋಗಾಲಯ ಮಟ್ಟದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲ್ಪಟ್ಟ ಪರಿಕಲ್ಪನೆಯನ್ನು ಆಧರಿಸಿ, ಡಿಆರ್‌ಡಿಒ ತನ್ನ ಕೈಗಾರಿಕಾ ಪಾಲುದಾರರಾದ ಬೆಂಗಳೂರು ಮೂಲದ ಟ್ಯಾಕ್‌ಬಿಟ್ ಲ್ಯಾಬ್ಸ್ ಜೊತೆಗೂಡಿ ಈ ಸುಧಾರಿತ ಕ್ವಾಂಟಂ ಕೀ ಡಿಸ್ಟ್ರಿಬ್ಯೂಷನ್ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿ ಕಾರ್ಯರೂಪಕ್ಕೆ ತಂದಿದೆ. ಸೇನಾ ಕ್ಷೇತ್ರದಲ್ಲಿ ನಡೆಸಿದ ಪರೀಕ್ಷೆಗಳು ಯಶಸ್ವಿಯಾಗಿದ್ದು, ದೇಶದ ಅತ್ಯಂತ ಪ್ರಮುಖ ಕಾರ್ಯತಂತ್ರದ ಸಂವಹನ ಜಾಲಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ.

ರಕ್ಷಣಾ ಸಂವಹನ, ರಾಷ್ಟ್ರೀಯ ಭದ್ರತೆಗೆ ಹೆಚ್ಚುವರಿ ಸುರಕ್ಷತೆ

ಕ್ವಾಂಟಂ ಕಂಪ್ಯೂಟಿಂಗ್ ಯುಗದಲ್ಲಿ ಸೈಬರ್ ಬೆದರಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಾಂಪ್ರದಾಯಿಕ ಎನ್‌ಕ್ರಿಪ್ಷನ್ ವ್ಯವಸ್ಥೆಗಳಿಗೆ ಪರ್ಯಾಯವಾಗಿ ಕ್ವಾಂಟಂ ಕೀ ಡಿಸ್ಟ್ರಿಬ್ಯೂಷನ್ ತಂತ್ರಜ್ಞಾನವನ್ನು ಅತ್ಯಂತ ಸುರಕ್ಷಿತ ಸಂವಹನ ವ್ಯವಸ್ಥೆಯಾಗಿ ಪರಿಗಣಿಸಲಾಗುತ್ತಿದೆ. ಈ ತಂತ್ರಜ್ಞಾನವು ಮಾಹಿತಿಯ ವಿನಿಮಯವನ್ನು ಹೆಚ್ಚಿನ ಭದ್ರತೆಯೊಂದಿಗೆ ನಡೆಸಲು ನೆರವಾಗಲಿದ್ದು, ರಕ್ಷಣಾ ಸಂವಹನ ಸೇರಿದಂತೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಜಾಲಗಳಿಗೆ ಹೆಚ್ಚುವರಿ ಸುರಕ್ಷತೆ ಒದಗಿಸಲಿದೆ.

ಆತ್ಮನಿರ್ಭರ ಭಾರತದ ಪರಿಕಲ್ಪನೆಗೆ ಪೂರಕ

ಈ ಸಾಧನೆಯು ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಮಲ್ಟಿ-ಹಾಪ್ (Multi-hop) ಕ್ವಾಂಟಂ ಸಂವಹನ ಜಾಲಗಳ ನಿರ್ಮಾಣಕ್ಕೂ ಬಲವಾದ ಅಡಿಪಾಯ ಹಾಕಿದೆ. ಆತ್ಮನಿರ್ಭರ ಭಾರತದ ಪರಿಕಲ್ಪನೆಗೆ ಅನುಗುಣವಾಗಿ ಭಾರತೀಯ ತಂತ್ರಜ್ಞಾನ ಮತ್ತು ಕೈಗಾರಿಕಾ ಸಹಭಾಗಿತ್ವದ ಮೂಲಕ ಈ ವ್ಯವಸ್ಥೆ ರೂಪುಗೊಂಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ದೇಶದ ಭದ್ರತೆಗೆ ಕ್ವಾಂಟಮ್ ಕವಚ; ಡಿಆರ್​ಡಿಒದಿಂದ ಕ್ವಾಂಟಮ್ ಕೀ ಡಿಸ್ಟ್ರಿಬ್ಯೂಶನ್ ಸಿಸ್ಟಂನ ಪ್ರಯೋಗ ಯಶಸ್ವಿ; ಏನಿದು QKD?

ಒಟ್ಟಿನಲ್ಲಿ, ಡಿಆರ್‌ಡಿಒ ಮತ್ತು ಬೆಂಗಳೂರು ಮೂಲದ ಸಂಸ್ಥೆಯ ಸಹಯೋಗದಲ್ಲಿ ಸಾಧಿಸಲಾದ ಈ ಯಶಸ್ಸು, ಭಾರತದ ಡಿಜಿಟಲ್ ಭದ್ರತೆ, ಸೈಬರ್ ಸುರಕ್ಷತೆ ಹಾಗೂ ರಕ್ಷಣಾ ಸಂವಹನ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬುವ ನಿರೀಕ್ಷೆ ಮೂಡಿಸಿದೆ. ಜಾಗತಿಕ ಮಟ್ಟದಲ್ಲಿ ಕ್ವಾಂಟಂ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯವನ್ನು ಪ್ರದರ್ಶಿಸುವ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version