ಇನ್ಫೋಸಿಸ್​ನ ಹಿರಿಯ ಅಧಿಕಾರಿಗಳಂತೆ ನಟಿಸಿ 6 ಕೋಟಿ ರೂ. ಪಂಗನಾಮ! ನಾಲ್ವರ ಮೇಲೆ ಎಫ್ಐಆರ್

ಇನ್ಫೋಸಿಸ್​ನ ಹಿರಿಯ ಅಧಿಕಾರಿಗಳಂತೆ ನಟಿಸಿ 6 ಕೋಟಿ ರೂ. ಪಂಗನಾಮ! ನಾಲ್ವರ ಮೇಲೆ ಎಫ್ಐಆರ್

ಬೆಂಗಳೂರು, ಏಪ್ರಿಲ್ 03: ಇನ್ಫೋಸಿಸ್ (Infosys) ಸಂಸ್ಥೆಯ ಹಿರಿಯ ಅಧಿಕಾರಿಗಳಂತೆ ನಟನೆ ಮಾಡಿ 6.3 ಕೋಟಿ ರೂ. ವಂಚನೆ ನಡೆಸಿದ ಆರೋಪ ಕೇಳಿ ಬಂದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರು ಮರ್ಕಂಟೈಲ್ ಕಂಪನಿ ನೀಡಿದ ದೂರಿನ ಪ್ರಕಾರ, ಗಗನ್ ಎಂಬಾತ ಇನ್ಫೋಸಿಸ್ ಸಂಸ್ಥೆಯ CSR ಪ್ರಾದೇಶಿಕ ಮುಖ್ಯಸ್ಥನಾಗಿ ತಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ನಂಬಿಕೆ ಗಳಿಸಲು ನಕಲಿ ತಂಡ ರಚಿಸಿ ಪರಿಶೀಲನೆ!

ತಾನು ಹಿರಿಯ ಅಧಿಕಾರಿಗಳಾದ ನಿಲಾದ್ರಿ ಪ್ರಸಾದ್ ಮಿಶ್ರಾ ಹಾಗೂ ಹರ್ಷ್ ಜೆ ಅವರಿಗೆ ನೇರವಾಗಿ ವರದಿ ಮಾಡುತ್ತೇನೆ ಎಂದು ನಂಬಿಕೆ ಮೂಡಿಸಿದ್ದ ಆರೋಪಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ಗೆ ಭಾರೀ ಅನುದಾನ ನೀಡುವುದಾಗಿ ಹೇಳಿ ವಿಶ್ವಾಸ ಗಳಿಸಿದ್ದ.

ಈ ನಂಬಿಕೆಯನ್ನು ಮತ್ತಷ್ಟು ಬಲಪಡಿಸಲು ಆರೋಪಿಗಳು ಉಡುಪಿ ಮತ್ತು ಮಂಗಳೂರು ಭಾಗಗಳಿಗೆ ನಕಲಿ ಪರಿಶೀಲನಾ ತಂಡವನ್ನು ಕಳುಹಿಸಿ, ಟ್ರಸ್ಟ್ ಚಟುವಟಿಕೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಅನುದಾನ ಬಿಡುಗಡೆಗಿಂತ ಮೊದಲು ಅರ್ನೆಸ್ಟ್ ಮನಿ ಡೆಪಾಸಿಟ್ (EMD) ಪಾವತಿಸಬೇಕೆಂದು ಒತ್ತಾಯಿಸಿದ್ದಾರೆ.

ಒಟ್ಟೂ 6 ಕೋಟಿ ವಂಚನೆ

ಇದನ್ನು ನಂಬಿದ ಕಂಪನಿ 1.75 ಕೋಟಿ ರೂ. ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅನಿತಾ ವೆಂಚರ್ಸ್‌ಗೆ, 3.75 ಕೋಟಿ ರೂ. ANS ಎಂಜಿನಿಯರಿಂಗ್ಸ್‌ಗೆ ಪಾವತಿಸಿದೆ. ಅಲ್ಲದೆ ದೇವನಹಳ್ಳಿಯ ನಂದಿ ಉಪಚಾರ ಹೋಟೆಲ್ ಸಮೀಪ ಆರೋಪಿಯ ಚಾಲಕನಿಗೆ 30 ಲಕ್ಷ ರೂ ನಗದನ್ನೂ ನೀಡಲಾಗಿದೆ. ಇನ್ನೂ 50 ಲಕ್ಷ ರೂ. ಹಣವನ್ನು ಬ್ಯಾಂಕ್ ಮುಖಾಂತರ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ! ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ವಂಚನೆಯನ್ನು ಮುಂದುವರೆಸಲು ಆರೋಪಿಗಳು ಕಳೆದ ಅಕ್ಟೋಬರ್ 21ರಂದು ಇನ್ಫೋಸಿಸ್ ಹಿರಿಯ ಉಪಾಧ್ಯಕ್ಷರ ಸಹಿಯನ್ನು ಹೊಂದಿರುವ ನಕಲಿ ಮಂಜೂರಾತಿ ಪತ್ರವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕರ್ನಾಟಕದಾದ್ಯಂತ ವಸತಿ ಯೋಜನೆಗಳಿಗೆ 179 ಕೋಟಿ ರೂ. ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 178 ಕೋಟಿ ರೂ. ನೀಡುವ ಭರವಸೆ ನೀಡಿದ್ದರು. ಆದರೆ ಅನುದಾನ ಹಣ ಬರದೇ ಹೋದಾಗ ಹಾಗೂ ಗಗನ್ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ವಂಚನೆ ಬೆಳಕಿಗೆ ಬಂದಿದೆ. ನಂತರ ಕಂಪನಿ ಪೊಲೀಸರಿಗೆ ದೂರು ನೀಡಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಹಾಗೂ ಹಣದ ಹರಿವು ಕುರಿತು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತೀಯ ವಿವಾಹಗಳಲ್ಲಿ ಹೊಸ ಟ್ರೆಂಡ್: 13 ರಿಂದ 25 ಸಾವಿರ ರೂ. ಬೆಲೆಯ ಇಂಜೆಕ್ಷನ್ ತಗೊಳ್ತಿದ್ದಾರೆ ವಧುಗಳು!

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ಬಹಳ ಕಷ್ಟ, ಅದಕ್ಕೆ ಆಹಾರ ಪದ್ಧತಿಯಲ್ಲಿ ಬದಲಾವಣೆ, ವ್ಯಾಯಾಮ ಇನ್ನು ಅನೇಕ ಕಸರತ್ತುಗಳನ್ನು ಮಾಡಬೇಕು, ಸಾಮಾನ್ಯವಾಗಿ ಜನ ಡಯಟ್ ಮಾಡುತ್ತಾರೆ. ಈ ಕ್ರಮವು ಅನೇಕರಿಗೆ ಒಳ್ಳೆಯ ಫಲಿತಾಂಶವನ್ನು ನೀಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತಕ್ಷಣಕ್ಕೆ ತೂಕ ಇಳಿಸಿಕೊಳ್ಳಲು ಔಷಧಿಗಳ ಕಡೆ ಹೋಗುತ್ತಿದ್ದಾರೆ. ಇಂಜೆಕ್ಷನ್​​ಗಳನ್ನು ತೆಗೆದುಕೊಂಡು ತೂಕ ಇಳಿಸಿಕೊಳ್ಳುತ್ತಾರೆ. ಅದರಲ್ಲೂ ಇದೀಗ ಮದುವೆ ಆಗುತ್ತಿರುವ ನೂತನ ಜೋಡಿಗಳು ಕೂಡ ಹಾದಿಯಲ್ಲೇ ಸಾಗುತ್ತಿದ್ದಾರೆ. ಈ ಬಗ್ಗೆ ಇಲ್ಲೊಂದು ವರದಿಯನ್ನು ನೀಡಲಾಗಿದೆ.

ಮದುವೆ ಕಡಿಮೆ ಸಮಯ ಇರುವಾಗ ಈ ಯೋಜನೆಗಳನ್ನು ಅಥವಾ ಚಿಕಿತ್ಸೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ನವದೆಹಲಿಯ ಕ್ಷೇಮ ಚಿಕಿತ್ಸಾಲಯವಾದ ಕ್ಲಾರಿಟಿ ಸ್ಕಿನ್ ಕ್ಲಿನಿಕ್ “ಮೌಂಜಾರೋ ವಧು” ಈ ಬಗ್ಗೆ ಒಂದು ಮಾಹಿತಿಯನ್ನು ನೀಡಿದೆ. ಆದರೆ ಇತರ ಚಿಕಿತ್ಸಾಲಯಗಳು ತೂಕ ಇಳಿಸುವ ಇಂಜೆಕ್ಷನ್‌ಗಳನ್ನು “ವಿವಾಹಪೂರ್ವ” ರೂಪಾಂತರ ಪ್ಯಾಕೇಜ್‌ಗಳಾಗಿ ಹೆಣೆದಿದ್ದು, ಇದು ಸಾಮಾನ್ಯವಾಗಿ ಚರ್ಮದ ಚಿಕಿತ್ಸೆಗಳು ಮತ್ತು ಕೇಶವಿನ್ಯಾಸದ ಮೇಕ್ ಓವರ್‌ಗಳ ಮೇಲೆ ಕೇಂದ್ರೀಕರಿಸುತ್ತವೆ.

ಭಾರತೀಯ ವಿವಾಹ ಮಾರುಕಟ್ಟೆಯಲ್ಲಿ ಈಗ ‘ತೂಕ ಇಳಿಸುವ ಔಷಧಿಗಳ’ (Weight-loss drugs) ಹವಾ ಶುರುವಾಗಿದೆ. ಮದುವೆಯ ದಿನ ಅಂದವಾಗಿ ಕಾಣಿಸಿಕೊಳ್ಳಬೇಕೆಂಬ ಸಾಮಾಜಿಕ ಒತ್ತಡದಿಂದಾಗಿ ಅನೇಕ ವಧುಗಳು ಮತ್ತು ವರರು ದುಬಾರಿ ಇಂಜೆಕ್ಷನ್‌ಗಳ ಮೊರೆ ಹೋಗುತ್ತಿದ್ದಾರೆ ಎಂದು ಎನ್​​ಡಿ ಟಿವಿಯೂ ಈ ವರದಿಯನ್ನು ಮಾಡಿದೆ. ಈ ಔಷಧಿಗಳ ಒಂದು ಡೋಸ್ ಬೆಲೆ ಸುಮಾರು 13,000 ರೂ. ನಿಂದ 25,000 ರೂ. ವರೆಗೆ ಇದೆ. ಪ್ರಮುಖವಾಗಿ ‘ಮೌಂಜಾರೊ’ (Mounjaro) ಮತ್ತು ‘ವೆಗೋವಿ’ (Wegovy) ಎಂಬ ಔಷಧಿಗಳಿಗೆ ಭಾರಿ ಬೇಡಿಕೆ ಬಂದಿದೆ.

ಇದನ್ನೂ ಓದಿ: ಏರ್‌ಪೋರ್ಟ್‌ಗೆ ಬಂದ ಬಾಕ್ಸ್‌ನಲ್ಲಿತ್ತು ಕೊಳೆತ ಟೊಮೆಟೊ, ಅಶ್ಲೀಲ ಚಿತ್ರಗಳು! ಆರೋಪಿ ಕೊಟ್ಟ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಚರ್ಮದ ಆರೈಕೆ ಮತ್ತು ಹೇರ್ ಸ್ಟೈಲ್ ಪ್ಯಾಕೇಜ್‌ಗಳ ಜೊತೆಗೆ ಈಗ ಕ್ಲಿನಿಕ್‌ಗಳು “ಮೌಂಜಾರೊ ಬ್ರೈಡ್” (Mounjaro Bride) ಎಂಬ ವಿಶೇಷ ಪ್ಯಾಕೇಜ್‌ಗಳನ್ನು ನೀಡುತ್ತಿವೆ. ಈ ಔಷಧಿಗಳು ಕೇವಲ ವೈದ್ಯಕೀಯವಾಗಿ ಅರ್ಹರಾದವರಿಗೆ ಮಾತ್ರವೇ ಹೊರತು ಎಲ್ಲರಿಗೂ ಅಲ್ಲ ಎಂದು ವೈದ್ಯರು ಎಚ್ಚರಿಸಿದ್ದಾರೆ. ಕೇವಲ ಮದುವೆಗಾಗಿ ಇವುಗಳನ್ನು ಬಳಸುವುದು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಭಾರತದಲ್ಲಿ ಈ ಔಷಧಿಗಳ ಮಾರುಕಟ್ಟೆಯು 2030ರ ವೇಳೆಗೆ 8,000 ಕೋಟಿ ರೂಪಾಯಿಗಳಿಗೂ ಹೆಚ್ಚು ಬೆಳೆಯುವ ಅಂದಾಜಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಹಾಹಾಕಾರ: ಕಿಲೋಮೀಟರ್‌ಗಟ್ಟಲೆ ರಿಕ್ಷಾ ಸಾಲು! ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು, ಏಪ್ರಿಲ್ 3: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ ಗ್ಯಾಸ್ ಅಭಾವ (Auto LPG Crisis) ವಿಕೋಪಕ್ಕೆ ತಲುಪಿದ್ದು, ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಗ್ಯಾಸ್ ಕೊರತೆ ಮತ್ತು ಅನಿಯಂತ್ರಿತ ದರ ಏರಿಕೆಯಿಂದ ಚಾಲಕರು ಕಂಗಾಲಾಗಿದ್ದಾರೆ. ಏತನ್ಮಧ್ಯೆ, ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ‘ಪೀಸ್ ಆಟೋ’ ಸಂಘಟನೆ ಗಡುವು ನೀಡಿದೆ. ಇಲ್ಲದಿದ್ದರೆ ಸಚಿವರ ಮನೆಗೆ ಆಟೋ ಸಮೇತ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆಯನ್ನೂ ನೀಡಿದೆ.

ಮಧ್ಯರಾತ್ರಿಯಿಂದಲೇ ಕಿಲೋಮೀಟರ್‌ಗಟ್ಟಲೆ ಕ್ಯೂ

ನಗರದ ಉತ್ತರ ಭಾಗದ ನಾಗೇನಹಳ್ಳಿ ಮತ್ತು ಯಲಹಂಕ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾಸ್‌ಗಾಗಿ ಆಟೋಗಳ ಬೃಹತ್ ಸರದಿ ಸಾಲು ಕಂಡುಬರುತ್ತಿದೆ. ಪ್ರೊಪೆಲ್ ಆಟೋ ಗ್ಯಾಸ್ ಬಂಕ್ ಬಳಿ ಸುಮಾರು 2 ಕಿಲೋಮೀಟರ್‌ವರೆಗೂ ಆಟೋಗಳು ಸಾಲುಗಟ್ಟಿ ನಿಂತಿವೆ.

ಚಾಲಕರು ರಾತ್ರಿ 11 ಗಂಟೆಯಿಂದಲೇ ತಿಂಡಿ-ತೀರ್ಥವಿಲ್ಲದೆ ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ. ದಿನವಿಡೀ ಕ್ಯೂ ನಿಂತರೆ ದುಡಿಯುವುದು ಯಾವಾಗ? ಮಕ್ಕಳ ಶಾಲಾ ಫೀಸು, ಸಾಲದ ಕಂತು ಕಟ್ಟುವುದು ಹೇಗೆ? ಎಂದು ಚಾಲಕರು ಕಣ್ಣೀರಿಡುತ್ತಿದ್ದಾರೆ.

ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಆರೋಪ

ಪೀಸ್ ಆಟೋ ಸಂಘಟನೆಯ ಅಧ್ಯಕ್ಷ ರಘು ಮಾತನಾಡಿ, ‘ಹಿಂದೆ 55 ರೂ. ಇದ್ದ ಗ್ಯಾಸ್ ದರ ಈಗ ಕಾಳಸಂತೆಯಲ್ಲಿ 135 ರೂ. ವರೆಗೆ ಏರಿಕೆಯಾಗಿದೆ. ಸರ್ಕಾರ ಹೋಟೆಲ್‌ಗಳಿಗೆ ಸಬ್ಸಿಡಿ ಹೆಚ್ಚಿಸಿ, ಆಟೋ ಚಾಲಕರ ಹೊಟ್ಟೆಗೆ ಹೊಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಚಾಲಕರು 10-20 ರೂಪಾಯಿ ಹೆಚ್ಚುವರಿ ಬಾಡಿಗೆ ಕೇಳಿದರೆ, ಗ್ರಾಹಕರು ಟ್ವಿಟರ್‌ನಲ್ಲಿ ದೂರು ನೀಡುತ್ತಾರೆ. ಇದರಿಂದ ಬೆಂಗಳೂರು ಪೊಲೀಸ್ ಆಯುಕ್ತರು ಚಾಲಕರ ಬಂಧನಕ್ಕೆ ಆದೇಶ ನೀಡುತ್ತಾರೆ. ಈ ಕಾರಣದಿಂದ ಚಾಲಕರು ಹೆಚ್ಚುವರಿ ದರ ಕೇಳಲು ಹಿಂಜರಿಯುತ್ತಾರೆ, ಇದು ಅವರ ನಷ್ಟವನ್ನು ಹೆಚ್ಚಿಸುತ್ತಿದೆ ಎಂದು ರಘು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ: ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ, ಚಾಲಕರ ಬದುಕು ದುಸ್ತರ

ಬಂಕ್ ವ್ಯವಸ್ಥಾಪಕರ ಪ್ರಕಾರ, ಗ್ಯಾಸ್ ಪೂರೈಕೆ ಅನಿಶ್ಚಿತವಾಗಿದ್ದು, ಸ್ಟಾಕ್ ಬಂದ ಕೂಡಲೇ ಖಾಲಿಯಾಗುತ್ತಿದೆ. ಮುಂದಿನ ಲೋಡ್ ಯಾವಾಗ ಬರುತ್ತದೆ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲದಿರುವುದು ಚಾಲಕರ ಆತಂಕವನ್ನು ಇಮ್ಮಡಿಗೊಳಿಸಿದೆ. ಸೋಮವಾರದೊಳಗೆ ಸರ್ಕಾರ ಶಾಶ್ವತ ಪರಿಹಾರ ನೀಡದಿದ್ದರೆ ವಿಧಾನಸೌಧದ ಬದಲು ನೇರವಾಗಿ ಸಚಿವರ ನಿವಾಸವೇ ನಮ್ಮ ಹೋರಾಟದ ಕೇಂದ್ರವಾಗಲಿದೆ ಎಂದು ಚಾಲಕರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಾಲಿವುಡ್​​ನಲ್ಲಿ ಕೆಟ್ಟ ಅನುಭವ, ತೆಲುಗು ಚಿತ್ರರಂಗದ ಇನ್ನೊಂದು ಮುಖ ತೆರೆದಿಟ್ಟ ಯುವತಿ

ಚಿತ್ರರಂಗದಲ್ಲಿ (Movie Industry) ಕೆಲಸ ಮಾಡಬೇಕು, ನಟಿಯಾಗ ಬೇಕು ಎಂಬುದು ಹಲವು ಯುವತಿಯರ ಆಸೆ. ಆದರೆ ಕಾಸ್ಟಿಂಗ್ ಕೌಚ್ ಎಂಬ ಪೆಡಂಭೂತ ಇಂಥಹಾ ಹಲವು ಪ್ರತಿಭಾವಂತ ಯುವತಿಯರನ್ನು ತಡೆಯುತ್ತಿದೆ. ಕಾಸ್ಟಿಂಗ್ ಕೌಚ್ ವಿರುದ್ಧ ಹೋರಾಟಗಳು ನಡೆಯುತ್ತಲೇ ಇವೆ, ಕಾನೂನು ಕಟ್ಟಳೆಗಳನ್ನು ಸಹ ಮಾಡಲಾಗಿದೆ. ಅದರೂ ಸಹ ಇದು ಸಂಪೂರ್ಣ ನಿಂತಿಲ್ಲ. ಇದೀಗ ವಿದೇಶದಲ್ಲಿ ನೆಲೆಸಿರುವ ಭಾರತೀಯ ಮೂಲದ ಯುವತಿಯೊಬ್ಬರು ತಮಗೆ ಟಾಲಿವುಡ್​​ನಲ್ಲಿ ಆದ ಕೆಟ್ಟ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ‘ಪೀಕು ನೆಮಿಲಿ’ ಹೆಸರಿನಲ್ಲಿ ಯುವತಿಯೊಬ್ಬರು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ನಟಿ ಇದೀಗ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ತೆಲುಗು ಚಿತ್ರರಂಗದಲ್ಲಿ ತಮಗೆ ಎದುರಾದ ಕಾಸ್ಟಿಂಗ್ ಕೌಚ್ ಅನುಭವದ ಬಗ್ಗೆ ಖುದ್ದು ಹೇಳಿಕೊಂಡಿದ್ದಾರೆ. ಅಲ್ಲದೆ, ಇಂಥಹಾ ಅಸುರಕ್ಷಿತ ಮತ್ತು ಭಯದ ವಾತಾವರಣ ಇರುವ ಕಾರಣಕ್ಕೆ ಎಷ್ಟೋ ಮಂದಿ ಯುವತಿಯರು ಚಿತ್ರರಂಗಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ತಮಗೆ ಇತರೆ ಕೆಲವು ಗೆಳೆಯರಿಂದ ಕೆಲವು ಸಹಾಯಕ ನಿರ್ದೇಶಕರ ನಂಬರ್ ಸಿಕ್ಕಿತು, ನಾನು ಒಬ್ಬರೊಟ್ಟಿಗೆ ಮಾತನಾಡಿದಾಗ ನಿಮ್ಮ ‘ಪೋರ್ಟ್ ಫೋಲಿಯೊ’ ಕಳಿಸಿ ಎಂದರು. ಅದರಂತೆ ನಾನು ನನ್ನ ಚಿತ್ರಗಳನ್ನು ತೆಗೆಸಿಕೊಂಡು ಅವರಿಗೆ ಕಳಿಸಿದೆ. ಬಳಿಕ ಆ ವ್ಯಕ್ತಿ ಕರೆ ಮಾಡಿ, ‘ನೀವು ‘ಕಮಿಟ್​​ಮೆಂಟ್’ ಕೊಡುತ್ತೀರ ಎಂದು ಕೇಳಿದ, ಅದಕ್ಕೆ ನಾನು ನಟನೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದುಕೊಂಡು, ‘ಹೌದು ನಾನು ಬಹಳ ಕಮಿಟ್​​ಮೆಂಟ್ ಇರುವ ಯುವತಿ, ನಾನು ಪಾತ್ರಕ್ಕಾಗಿ ಸಂಪೂರ್ಣವಾಗಿ ಸಮರ್ಪಿಸಿಕೊಳ್ಳುತ್ತೇನೆ’ ಎಂದೆಲ್ಲ ಹೇಳಿದೆ ಎಂದಿದ್ದಾರೆ ಯುವತಿ.

ಇದನ್ನೂ ಓದಿ:ತಗ್ಗದ ‘ಧುರಂಧರ್ 2’ ಚಿತ್ರದ ಅಬ್ಬರ; ಮುಂದಕ್ಕೆ ಹೋದ ದೊಡ್ಡ ಸಿನಿಮಾಗಳು

ಬಳಿಕ ಆ ವ್ಯಕ್ತಿ ಮತ್ತೆ ಕರೆ ಮಾಡಿ, ಒಬ್ಬ ಜನಪ್ರಿಯ ನಿರ್ಮಾಪಕ ನಿಮ್ಮನ್ನು ಭೇಟಿ ಮಾಡಲು ರೆಡಿ ಆಗಿದ್ದಾರೆ, ರೆಸಾರ್ಟ್ ಒಂದರಲ್ಲಿ ನಿಮ್ಮ ಮೀಟಿಂಗ್ ಫಿಕ್ಸ್ ಮಾಡಿದ್ದೇನೆ, ನೀವು ಫ್ಲೈಟ್ ಹತ್ತಿ ಬಂದುಬಿಡಿ ಎಂದನಂತೆ. ಅಲ್ಲದೆ, ಪರೋಕ್ಷವಾಗಿ ನಿರ್ಮಾಪಕನ ಜೊತೆಗೆ ಸಮಯ ಕಳೆಯಬೇಕು ಎಂದು ಸಹ ಹೇಳಿದ್ದಾಗಿ ಯುವತಿ ಹೇಳಿಕೊಂಡಿದ್ದಾರೆ.ಯುವತಿಗೆ ಆತನ ಉದ್ಧೇಶ ಅರ್ಥ ಆಗುತ್ತಿದ್ದಂತೆ ಕಾಲ್ ಕಟ್ ಮಾಡಿ, ಆ ವ್ಯಕ್ತಿಯನ್ನು ಬ್ಲಾಕ್ ಮಾಡಿದರಂತೆ. ಬೇರೆ ಬೇರೆ ಸಂಖ್ಯೆಗಳಿಂದ ಆ ವ್ಯಕ್ತಿ ಮತ್ತೆ ಕರೆ ಮಾಡಿದಾಗಲೂ ಸಹ ಯುವತಿ ಬ್ಲಾಕ್ ಮಾಡಿದ್ದಾರೆ.

ಇದೀಗ ಯುವತಿಯ ವಿಡಿಯೋ ವೈರಲ್ ಆಗಿದೆ. ತೆಲುಗು ಚಿತ್ರರಂಗದ ನಟಿ ಜಾನ್ಸಿ ಸಹ ವಿಡಿಯೋಕ್ಕೆ ಕಮೆಂಟ್ ಮಾಡಿದ್ದು, ತೆಲುಗು ಚಿತ್ರರಂಗದ ಲೈಂಗಿಕ ದೌರ್ಜನ್ಯ ತಡೆ ಸಮಿತಿಗೆ ದೂರು ದಾಖಲಿಸುವಂತೆ ಸಲಹೆ ನೀಡಿದ್ದಾರೆ. ಜಾನ್ಹವಿ ಸಹ ಈ ಸಮಿತಿಯ ಸದಸ್ಯೆ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಭರವಸೆಯನ್ನು ಯುವತಿಗೆ ನೀಡಿದ್ದಾರೆ. ಆದರೆ ಯುವತಿ ಯಾವುದೇ ದೂರು ನೀಡಿದ್ದು ವರದಿ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು: ಭೀಕರ ದೃಶ್ಯ ಸೆರೆ

ಬೀದರ್​​, ಏಪ್ರಿಲ್​​ 03: ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್​​ ಕಾನ್ಸ್​ಟೇಬಲ್​ ಕಾರು ಹರಿದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಭಾಲ್ಕಿ ಪಟ್ಟಣದ ನಿವಾಸಿ ಜ್ಞಾನಬಾಯಿ(45) ಸ್ಥಿತಿ ಗಂಭೀರವಾಗಿದ್ದು, ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಮೇಹಕರ್ ಪೊಲೀಸ್ ‌ಠಾಣೆಯ ಪಿಸಿ ಉಮಾಕಾಂತ್ ಕಾರು ಮಹಿಳೆ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಜ್ಞಾನಬಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಭಾಲ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಮತ್ತು ಸ್ಥಳದಲ್ಲಿದ್ದ ಬಾಲಕನ ಆಕ್ರಂದನದ ಕರುಳು ಹಿಂಡುವಂತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

ದಾವಣಗೆರೆ, ಏಪ್ರಿಲ್​​ 03: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭ ಶಾಮನೂರು ಶಿವಶಂಕರಪ್ಪ ಕುಟುಂಬದ ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಆಸ್ಪತ್ರೆಗಳು, ಚೌಲ್ಟ್ರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜಕ್ಕೆ ಈ ಕುಟುಂಬವು ದೊಡ್ಡ ನೆರವು ನೀಡಿದೆ. ನಗರದ ಅಭಿವೃದ್ಧಿ ಕಾರ್ಯಗಳು, ರಸ್ತೆಗಳು, ಪಾರ್ಕ್‌ಗಳ ನಿರ್ವಹಣೆ ಮತ್ತು ಬಸ್ ನಿಲ್ದಾಣಗಳು ಬೆಂಗಳೂರಿಗಿಂತಲೂ ಉತ್ತಮವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಆರ್​​ಸಿಬಿ ವಿರುದ್ಧದ ಪಂದ್ಯಕ್ಕೆ ಥಲಾ ಲಭ್ಯ? ಧೋನಿ ಫ್ಯಾನ್ಸ್​​ಗೆ ಖುಷಿ ಸುದ್ದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಿದ್ಧವಾಗುತ್ತಿದೆ. ಈ ಪಂದ್ಯ ನೋಡಲು ಅಭಿಮಾನಿಗಳು ಕಾದಿದ್ದಾರೆ. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಎರಡು ವಾರ ರೆಸ್ಟ್ ಸೂಚಿಸಲಾಗಿತ್ತು. ಆದರೆ, ಅವರು ಈಗ ಆರ್​​ಸಿಬಿ ವಿರುದ್ಧ ಪಂದ್ಯಕ್ಕೆ ಲಭ್ಯರಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಹೀನಾಯವಾಗಿ ಸೋತಿತು. ಇಂದು (ಏಪ್ರಿಲ್ 3) ಚೆನ್ನೈ ತಂಡ ಪಂಜಾಬ್ ಅನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಲಯಕ್ಕೆ ಮರಳುವ ತವಕದಲ್ಲಿ ಸಿಎಸ್​​ಕೆ ಇದೆ. ಧೋನಿ ಇದ್ದಿದ್ದರೆ ಒಂದಷ್ಟು ಮಾರ್ಗದರ್ಶನ ಸಿಗುತ್ತಿತ್ತು ಎಂಬುದು ಪ್ರೇಕ್ಷಕರ ಆಲೋಚನೆ. ಆದರೆ, ಅವರು ಇಂದಿನ ಪಂದ್ಯಕ್ಕೆ ಲಭ್ಯವಾಗೋದು ಅನುಮಾನ.

ಧೋನಿ ಅವರು ಇತ್ತೀಗೆ ಪ್ರ್ಯಾಕ್ಟಿಸ್ ಸೆಷನ್ ಅಲ್ಲಿ ಭಾಗಿ ಆಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಇಂದು ಕೂಡ ಚೆನ್ನೈ ಸೂಪರ್ ಕಿಂಗ್ಸ್ ಪರ್ಫಾರ್ಮೆನ್ಸ್ ಕಳಪೆ ಆಗಿದ್ದರೆ ತಂಡವನ್ನು ಉಳಿಸಲು ಧೋನಿ ಅವರು ಎಂಟ್ರಿ ಆಗಬಹುದು ಎಂದು ಹೇಳಲಾಗುತ್ತಾ ಇದೆ. ಹಾಗಾದಲ್ಲಿ ಬೆಂಗಳರಲ್ಲಿ ನಡೆಯುವ ಪಂದ್ಯಕ್ಕೆ ಧೋನಿ ಇರಲಿದ್ದಾರೆ.

ಇದನ್ನೂ ಓದಿ: ಆರ್​​​ಸಿಬಿ ಮಾರಾಟದಿದ ವಿಜಯ್ ಮಲ್ಯಗೆ ಸಿಕ್ಕ ಹಣ ಎಷ್ಟು?

ಆರ್​​​ಸಿಬಿ ಹಾಗೂ ಸಿಎಸ್​​ಕೆ ಮ್ಯಾಚ್ ಆದರೆ ಅಭಿಮಾನಿಗಳು ಇದನ್ನು ಬದ್ಧ ವೈರಿಗಳ ಮ್ಯಾಚ್ ಎಂಬ ರೀತಿಯಲ್ಲಿ ಪರಿಗಣಿಸುತ್ತಾರೆ. ಕಳೆದ ಸೀಸನ್​ ಅಲ್ಲಿ ಚೆನ್ನೈ ಎರಡೂ ಪಂದ್ಯಗಳನ್ನು ಆರ್​​ಸಿಬಿ ವಿರುದ್ಧ ಚೆನ್ನೈ ಸೋತಿದೆ. ಈ ಬಾರಿಯೂ ಅದೇ ಫಾರ್ಮ್ ಉಳಿಸಿಕೊಳ್ಳುವ ಆಲೋಚನೆ ಚೆನ್ನೈಗೆ ಇದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ

ಮಡಿಕೇರಿ, ಏಪ್ರಿಲ್​​ 03: ಟ್ರೆಕ್ಕಿಂಗ್​ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್. ನಿನ್ನೆ ನಾಪತ್ತೆಯಾಗಿದ್ದು, ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ‌ಕ್ಕೆ ತೆರಳಿದ್ದಾಗ ಆಕೆ ಮಿಸ್ಸಾಗಿದ್ದಾಳೆ. ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಯುವತಿ ನಿನ್ನೆ ಒಬ್ಬಳೇ ಚಾರಣಕ್ಕೆ ತೆರಳಲು ಮುಂದಾಗಿದ್ದಳು. ಆ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರುವ ಕಾರಣ ಬೇರೆಯವರ ಜತೆ ಸಿಬ್ಬಂದಿ ಕಳುಹಿಸಿದ್ದರು. ಸಂಜೆಯಾದ್ರೂ ಶರಣ್ಯ ವಾಪಸಾಗದ ಹಿನ್ನೆಲೆ ಶರಣ್ಯಗಾಗಿ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ.

50ಕ್ಕೂ ಅಧಿಕ ಸಿಬ್ಬಂದಿಯಿಂದ ಶೋಧಕಾರ್ಯ

ನಾಪತ್ತೆಯಾದ ಯುವತಿ ಶರಣ್ಯಾ ಪತ್ತೆಗಾಗಿ ಅರಣ್ಯ ಇಲಾಖೆಯ 50ಕ್ಕೂ ಅಧಿಕ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ಇವರಿಗೆ ಪೊಲೀಸ್​​ ಸಿಬ್ಬಂದಿಯೂ ಸಾಥ್​​ ನೀಡಿದ್ದು, ತಡರಾತ್ರಿ 3 ಗಂಟೆಯವರೆಗೆ ಹುಡುಕಾಡಿದರೂ ನಾಪತ್ತೆಯಾದ ಯುವತಿಯ ಸುಳಿವು ಸಿಕ್ಕಿಲ್ಲ. ನಿನ್ನೆ ತಾನು ದಾರಿ ತಪ್ಪಿರುವುದಾಗಿ ತಮ್ಮ ಹೋಂಸ್ಟೇ ಮಾಲೀಕನಿಗೆ ಕರೆ ಮಾಡಿ ಶರಣ್ಯಾ ಹೇಳಿದ್ದಳು. ಅದಾದ ಬಳಿಕ ಶರಣ್ಯ ಮೊಬೈಲ್‌ ನಾಟ್ ರೀಚೇಬಲ್ ಆಗಿದೆ. ಕೇರಳದಿಂದ ಏಕಾಂಗಿಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ, ಇತರ 9 ಜನರ ಜೊತೆ ಚಾರಣಕ್ಕೆ ತೆರಳಿದ್ದಳು. ಕೊನೆಯಲ್ಲಿ‌ನಾಯಿಗಳ‌ಜೊತೆ ಆಟವಾಡುತ್ತಾ ಹಿಂದುಳಿದ ಶರಣ್ಯ ಉಳಿದವರ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಯುವಕನ ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ? ವಿವಾದಕ್ಕೆ ಕಾರಣವಾಯ್ತು ವರನ ವೇಷ

ಯುವತಿ ಸುರಕ್ಷಿತವಾಗಿ‌ ಮರಳಲೆಂದು ಹರಕೆ

ನಾಪತ್ತೆಯಾದ ಶರಣ್ಯಾ ಸುರಕ್ಷಿತವಾಗಿ ಹಿಂದಿರುಗಲಿ ಎಂದು ಬೆಟ್ಟ ಪ್ರದೇಶದಲ್ಲಿ ವಾಸಿಸುವ ಕುಡಿಯ ಜನಾಂಗ ಮಲೆ‌ ತಮ್ಮಚ್ಚ ದೇವರಿಗೆ ಹರಕೆ ಹೊತ್ತಿದೆ. ಈ ನಡುವೆ ಅರಣ್ಯ ಮತ್ತು ಪೊಲೀಸ್ ಇಲಾಖೆಯ ನಾಲ್ಕು ತಂಡಗಳಿಂದ ಶೋಧ ಮುಂದುವರಿದಿದ್ದು, ತಡಿಯಂಡಮೋಳ್‌ ಬೆಟ್ಟದಲ್ಲಿ ದಟ್ಟ ಮಳೆ‌ಮೋಡ ಕವಿದಿರೋದು ಆತಂಕ ಹೆಚ್ಚಿಸಿದೆ. ಬೆಟ್ಟದಲ್ಲಿ ಶ್ವಾನ ದಳದಿಂದಲೂ ಶೋಧ ಕಾರ್ಯ ನಡೆಸಲಾಗ್ತಿದ್ದು, ನಿನ್ನೆ ಮಧ್ಯಾಹ್ನ 2.30ರ ವೇಳೆಗೆ ಶರಣ್ಯ ನಾಪತ್ತೆಯಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಏರ್‌ಪೋರ್ಟ್‌ಗೆ ಬಂದ ಬಾಕ್ಸ್‌ನಲ್ಲಿತ್ತು ಕೊಳೆತ ಟೊಮೆಟೊ, ಅಶ್ಲೀಲ ಚಿತ್ರಗಳು! ಆರೋಪಿ ಕೊಟ್ಟ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು, ಏ.3: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇರೆ ಬೇರೆ ಬೆದರಿಕೆ ಕರೆಗಳು ಬಂದಿರುವುದನ್ನು ನೋಡಬಹುದು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಭಾರೀ ವೈರಲ್​​ ಆಗಿದೆ. ವಿಮಾನ ನಿಲ್ದಾಣದ ಆಡಳಿತ ಕಚೇರಿಗೆ ಅಸಾಮಾನ್ಯ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್​​ವೊಂದು ಬಂದಿದೆ. ಈ ವಿಚಿತ್ರ ಪಾರ್ಸೆಲ್ ಅನ್ನು ಕಳುಹಿಸಿದ ಆರೋಪದ ಮೇಲೆ ಭಾರತೀಯ ಮೂಲದ 65 ವರ್ಷದ ಡಚ್ ಪ್ರಜೆಯನ್ನು ಬಂಧಿಸಲಾಗಿದೆ. ಸುಭಾಷ್ ಜೈ ಅಜೀಜ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬುಧವಾರ (ಏ.1) ಬಂಧಿಸಲಾಗಿದೆ. ಸುಭಾಷ್ ಜೈ ಅಜೀಜ್ ಎಂಬ ವ್ಯಕ್ತಿ ಜನವರಿಯಲ್ಲಿ ಈ ಪಾರ್ಸೆಲ್ ಕಳುಹಿಸಿದ್ದಾನೆ. ಅಷ್ಟಕ್ಕೂ ಇದರಲ್ಲಿ ಏನಿತ್ತು ಎಂಬುದು ಅನೇಕರಿಗೆ ಕೂತುಹಲವಾಗಿದೆ.

ಈ ಪಾರ್ಸೆಲ್​​ನಲ್ಲಿ, ಕೊಳೆತ ಟೊಮೆಟೊ ಮತ್ತು ಕಬ್ಬಿಣದ ತುಂಡುಗಳಂತಹ ವಿಲಕ್ಷಣ ವಸ್ತುಗಳು ಮತ್ತು ಇತರ ಕೆಲವು ವಸ್ತುಗಳು ಇದ್ದವು ಎಂದು ಹೇಳಲಾಗಿದೆ. ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಮಾರ್ಚ್ 4 ರಂದು ಔಪಚಾರಿಕ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಪೊಲೀಸರು ತನಿಖೆ ಆರಂಭಿಸಿದರು. ಆ ಪಾರ್ಸೆಲ್‌ನಲ್ಲಿ ಟೂತ್‌ಪೇಸ್ಟ್ ಕವರ್, ಕೊಳೆಯುತ್ತಿರುವ ಹೂವಿನ ಮಾಲೆಗಳು, ಕೊಳೆತ ಟೊಮೆಟೊಗಳು, ಕಬ್ಬಿಣದ ತುಂಡುಗಳು ಮತ್ತು ಅಶ್ಲೀಲ ಛಾಯಾಚಿತ್ರಗಳು ಇದ್ದವು ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಮತ್ತು ಸ್ಥಳೀಯ ಮೂಲಗಳಿಂದ ಮಾಹಿತಿಯನ್ನು ಸಂಗ್ರಹಿಸಿದ ನಂತರ, ಪೊಲೀಸರು ಮಡಿವಾಳದ ದೇವಸ್ಥಾನದ ಬಳಿ ಈ ಪಾರ್ಸೆಲ್​​ ಇಟ್ಟ ವ್ಯಕ್ತಿಯನ್ನು ಬಂಧಿಸಲಾಗಿದೆ. ಇನ್ನು ಪೊಲೀಸ್​​ ವಿಚಾರಣೆ ವೇಳೆ ಈ ವ್ಯಕ್ತಿ ಹೇಳಿರುವ ಹೇಳಿಕೆಯನ್ನು ಸಂಗ್ರಹಿಸಿದ್ದಾರೆ. ಅದರಲ್ಲಿ ಈ ವ್ಯಕ್ತಿ, ತನಗೆ ಯಾವುದೇ ದುರುದ್ದೇಶಪೂರಿತ ಉದ್ದೇಶವಿಲ್ಲ ಮತ್ತು ಪಾರ್ಸೆಲ್ “ಅಹಿತಕರ ಘಟನೆಗಳನ್ನು” ತಡೆಗಟ್ಟುವ ಉದ್ದೇಶದ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾನೆ. ತಾನು ಇತರ ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಪಾರ್ಸೆಲ್‌ಗಳನ್ನು ಕಳುಹಿಸಿದ್ದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಕೆ.ಆರ್. ಮಾರುಕಟ್ಟೆಗೆ ಸಿಗಲಿದೆ ಹೈಟೆಕ್ ಸ್ಪರ್ಶ: ಒಂದು ವಾರದೊಳಗೆ ಅಭಿವೃದ್ಧಿ ರಿಪೋರ್ಟ್ ನೀಡಲು ಮಹೇಶ್ವರ ರಾವ್ ಸೂಚನೆ

ಅವನು ಮಾನಸಿಕವಾಗಿ ಅಸ್ವಸ್ಥನಂತೆ ಕಾಣುತ್ತಿದ್ದ. ಯಾವುದೇ ರೀತಿಯ ತೊಂದರೆ ಸೃಷ್ಟಿಸುವ ದುರುದ್ದೇಶ ತನಗೆ ಇರಲಿಲ್ಲ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಹೇಳಿಕೆಯನ್ನು ಹೇಳಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದೀಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಮತ್ತು ಮುಂದಿನ ಕ್ರಮಗಳು ಅವರ ವೈದ್ಯಕೀಯ ಪರೀಕ್ಷೆಯ ವರದಿಯ ನಂತರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇಸಿಗೆ ರಜೆಯ ಹಿನ್ನೆಲೆ ರೈಲ್ವೆ ಇಲಾಖೆ ಹೊಸ ಕೊಡುಗೆ! ಬೆಂಗಳೂರು-ತಿರುಚಿರಾಪಲ್ಲಿ ನಡುವೆ ವಿಶೇಷ ರೈಲು ವ್ಯವಸ್ಥೆ

ಬೆಂಗಳೂರು, ಏಪ್ರಿಲ್ 03: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆಡೆಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಹೆಚ್ಚಿನ ಜನ ಸಂದಣಿಯನ್ನು ನಿಯಂತ್ರಿಸಲು ದಕ್ಷಿಣ ರೈಲ್ವೆ ವಿಶೇಷ ರೈಲು ಸೇವೆ ಘೋಷಿಸಿದೆ. ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್​ ಮತ್ತು ತಿರುಚಿರಾಪಲ್ಲಿ (Bengaluru- Tiruchirapalli) ನಡುವೆ ನಾಲ್ಕು ಟ್ರಿಪ್‌ಗಳ ವಿಶೇಷ ರೈಲು ಸಂಚರಿಸಲಿದೆ ಎಂದು ಇಲಾಖೆ ತಿಳಿಸಿದೆ.

ವಿಶೇಷ ರೈಲಿನ ವೇಳಾಪಟ್ಟಿ

06007 ಸಂಖ್ಯೆಯ ರೈಲು ಏಪ್ರಿಲ್ 7, 14, 21 ಮತ್ತು 28ರಂದು ಬೆಳಗ್ಗೆ 5.30ಕ್ಕೆ ತಿರುಚಿರಾಪಲ್ಲಿಯಿಂದ ಹೊರಟು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸುತ್ತದೆ. ಹಿಂತಿರುಗುವ 06008 ಸಂಖ್ಯೆಯ ರೈಲು ಮಧ್ಯಾಹ್ನ 3ಕ್ಕೆ ಹೊರಟು ರಾತ್ರಿ 10.30ಕ್ಕೆ ತಿರುಚಿರಾಪಲ್ಲಿಗೆ ತಲುಪಲಿದೆ ಎನ್ನಲಾಗಿದೆ.

ಈ ರೈಲು ಕರೂರು, ನಾಮಕ್ಕಲ್, ಸೇಲಂ, ಬಂಗಾರಪೇಟೆ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ. ಒಟ್ಟು 18 ಬೋಗಿಗಳಿದ್ದು, ಎಸಿ ಚೇರ್ ಕಾರ್, ದ್ವಿತೀಯ ದರ್ಜೆ ಚೇರ್ ಕಾರ್ ಹಾಗೂ ಅಂತ್ಯೋದಯ ಕೋಚ್‌ಗಳನ್ನು ಒಳಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Exit mobile version