Optical Illusion: ನೀವು ಜಾಣರೇ, ಈ ಚಿತ್ರದಲ್ಲಿರುವ HOG ಪದವನ್ನು 10 ಸೆಕೆಂಡುಗಳಲ್ಲಿ ಕಂಡು ಹಿಡಿಯುವಿರಾ?

ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತವೆ. ಈ ಟ್ರಿಕ್ಕಿ ಇಂತಹ ಟ್ರಿಕ್ಕಿ ಒಗಟನ್ನು ಬಿಡಿಸುವುದು ಕಷ್ಟಕರ. ನಿಮ್ಮ ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸುವ ಈ ಒಗಟನ್ನು ಈ ಹಿಂದೆ ಬಿಡಿಸಿ ವಿಫಲವಾಗಿರಬಹುದು. ಆದರೆ ಇದೀಗ ಇಲ್ಲಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಇಲ್ಲಿ G, H, O ಇಂಗ್ಲಿಷ್ ಅಕ್ಷರಗಳ ನಡುವೆ HOG ಪದವಿದೆ. ಈ ಪದವನ್ನು ನೀವು ಹತ್ತು ಸೆಕೆಂಡುಗಳಲ್ಲಿ ಗುರುತಿಸುವ ಸವಾಲು ನೀಡಲಾಗಿದೆ.

ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಏನು ಕಾಣಿಸಿತು?

ಈ ಇಲ್ಯೂಷನ್ ಚಿತ್ರದಲ್ಲಿ ಇಂಗ್ಲಿಷ್ ವರ್ಣಮಾಲೆಯ G, H, O ಇಂಗ್ಲಿಷ್ ಅಕ್ಷರಗಳಿವೆ. ಸಾಲಾಗಿರುವ ಈ ಅಕ್ಷರಗಳನ್ನು ನೀವು ನೋಡಿದಾಗ ನಿಮ್ಮ ಮೋಸ ಹೋಗುತ್ತೀರಿ. ಈ ಅಕ್ಷರಗಳ ನಡುವೆ HOG ಎಂಬ ಇಂಗ್ಲಿಷ್ ಪದವಿದೆ. ನೀವು ಈ ಪದವನ್ನು ಹತ್ತು ಸೆಕೆಂಡುಗಳನ್ನು ಗುರುತಿಸಲು ಸಾಧ್ಯವೇ. ನೀವು ಈ ಸವಾಲನ್ನು ಸ್ವೀಕರಿಸಲು ಮುಂದಾಗಿದ್ದೀರಾ ಎಂದು ಭಾವಿಸುತ್ತೇವೆ.

ಇದನ್ನೂ ಓದಿ: ಈ ಚಿತ್ರದಲ್ಲಿ o ಅಕ್ಷರಗಳ ನಡುವೆ ಇರುವ ಸೊನ್ನೆಯನ್ನು ಗುರುತಿಸಬಲ್ಲಿರಾ

ಇಂಗ್ಲಿಷ್ ಪದವನ್ನು ಹುಡುಕಲು ಸಾಧ್ಯವಾಯಿತೇ?

ಕಣ್ಣು ಅಗಲಿಸಿ ನೋಡಿದರೂ HOG ಇಂಗ್ಲಿಷ್ ಪದ ನಿಮ್ಮ ಕಣ್ಣಿಗೆ ಕಾಣಿಸಿಲ್ಲವೇ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಈ ಪದ ಗುರುತಿಸಲು ಸಾಧ್ಯ. ಸಾಲಾಗಿರುವ ಇರುವ ಇಂಗ್ಲಿಷ್ ಅಕ್ಷರಗಳು ನಿಮ್ಮ ಕಣ್ಣನ್ನು ಮೋಸಗೊಳಿಸುತ್ತವೆ. ಈ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯವಾಗಿಲ್ಲ ಹೆಚ್ಚಿ ತಲೆಕೆಡಿಸಿ ಕೊಳ್ಳುವ ಅವಶ್ಯಕತೆ ಇಲ್ಲ. ಉತ್ತರ ನಾವೇ ನಿಮಗೆ ಹೇಳುತ್ತೇವೆ. ಕೆಳಗಿನಿಂದ ಮೂರನೇ ಸಾಲಿನಲ್ಲಿ ಕೊನೆಯ ಮೂರು ಅಕ್ಷರಗಳನ್ನು ನೋಡಿ. HOG ಪದ ನಿಮ್ಮ ಕಣ್ಣಿಗೆ ಕಾಣಿಸಿತು ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:43 am, Sun, 31 May 26

Source link

ಐಪಿಎಲ್​ನಲ್ಲಿ ಈ 3 ನಿಯಮ ಬದಲಿಸಿ: ಸಚಿನ್ ತೆಂಡೂಲ್ಕರ್ ಸಲಹೆ!

ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಟಿ20 ಕ್ರಿಕೆಟ್ ಇತ್ತೀಚಿನ ವರ್ಷಗಳಲ್ಲಿ ಸಂಪೂರ್ಣವಾಗಿ ಬ್ಯಾಟರ್​ಗಳ ಆಟವಾಗಿ ಬದಲಾಗಿದೆ. ಈ ಬದಲಾವಣೆಯೊಂದಿಗೆ ಬೌಲರ್​ಗಳು ಕೇವಲ ರನ್ ನೀಡಲು ಸೀಮತವಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಈ ಅಸಮತೋಲನವನ್ನು ಸರಿಪಡಿಸಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮೂರು ನಿಯಮಗಳ ಬದಲಾವಣೆಗೆ ಸಲಹೆ ನೀಡಿದ್ದಾರೆ. ಆ ನಿಯಮಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

  1. ಇಂಪ್ಯಾಕ್ಟ್ ಪ್ಲೇಯರ್ ನಿಯಮ: ಐಪಿಎಲ್​ನಿಂದ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ತೆಗೆದು ಹಾಕಬೇಕು ಎಂದು ಸಚಿನ್ ಸಲಹೆ ನೀಡಿದ್ದಾರೆ. ಈ ನಿಯಮದಿಂದಾಗಿ ಎಲ್ಲಾ ತಂಡಗಳು 8 ಅಥವಾ 9ನೇ ಕ್ರಮಾಂಕದವರೆಗೆ ಬ್ಯಾಟರ್​ಗಳನ್ನು ಕಣಕ್ಕಿಳಿಸುತ್ತಿದೆ. ಇದರಿಂದ ಆಲ್​ರೌಂಡರ್​ಗಳ ಪ್ರಾಮುಖ್ಯತೆ ಕುಸಿದಿದ್ದು, ಹೀಗಾಗಿ ಈ ನಿಯಮ ತೆಗೆದು ಹಾಕಿ 11 ಆಟಗಾರರ ತಂಡವನ್ನು ಕಣಕ್ಕಿಸುವುದು ಸೂಕ್ತ ಎಂದು ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ.
  2. 5 ಓವರ್​ಗಳ ಅವಕಾಶ: ಟಿ20 ಕ್ರಿಕೆಟ್​ನಲ್ಲಿ ಒಬ್ಬ ಬೌಲರ್​ಗಳಿಗೆ 4 ಓವರ್​ಗಳನ್ನು ಮಾತ್ರ ಬೌಲ್ ಮಾಡಲು ಅವಕಾಶವಿದೆ. ಆದರೆ ಈ ನಿಯಮವನ್ನು ಬದಲಿಸಿ ಒಬ್ಬ ಬೌಲರ್​ಗೆ 5 ಓವರ್​ಗಳನ್ನು ಎಸೆಯತಲು ಅವಕಾಶ ನೀಡಬೇಕೆಂದು ಸಚಿನ್ ಆಗ್ರಹಿಸಿದ್ದಾರೆ. ಇದರಿಂದ  ಅತ್ಯುತ್ತಮವಾಗಿ ಬೌಲಿಂಗ್ ಮಾಡಿರುವ ಬೌಲರ್ ಆ ಪಂದ್ಯದಲ್ಲಿ​ ಹೆಚ್ಚಿನ ಪ್ರಭಾವ ಬೀರಲು ಸಹಕಾರಿಯಾಗಲಿದೆ. ಅಲ್ಲದೆ ಹೀಗೆ ಯಶಸ್ವಿಯಾದ ಬೌಲರ್​ ಮೂಲಕ ಬ್ಯಾಟರ್​ಗಳ ರನ್ ವೇಗಕ್ಕೆ ಕಡಿವಾಣ ಹಾಕಬಹುದು ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ.
  3. 4 + 2 ಪವರ್​ಪ್ಲೇ: ಟಿ20 ಕ್ರಿಕೆಟ್​ನಲ್ಲಿ ಮೊದಲ 6 ಓವರ್​ಗಳು ಪವರ್​ಪ್ಲೇ ಆಗಿದೆ. ಈ ವೇಳೆ ಕೇವಲ ಇಬ್ಬರು ಫೀಲ್ಡರ್​ಗಳಿಗೆ ಮಾತ್ರ ಬೌಂಡರಿ ಲೈನ್​ ಬಳಿ ಫೀಲ್ಡಿಂಗ್ ಮಾಡಲು ಅವಕಾಶ ನೀಡಲಾಗುತ್ತಿದೆ. ಈ ನಿಯಮದಲ್ಲೂ ಬದಲಾವಣೆ ತರುವುದು ಅತ್ಯವಶ್ಯಕ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ. ಪ್ರಸ್ತುತ ಇರುವ ನಿಯಮದ ಬದಲಿಗೆ 4 ಓವರ್​ ಬ್ಯಾಟಿಂಗ್ ಪವರ್​ಪ್ಲೇ, 2 ಓವರ್​ ಬೌಲಿಂಗ್ ಪವರ್​ಪ್ಲೇ ಮಾಡಬೇಕೆಂದು ಸಚಿನ್ ಸಲಹೆ ನೀಡಿದ್ದಾರೆ. ಅಂದರೆ ಬೌಲಿಂಗ್ ಪವರ್​ಪ್ಲೇ ವೇಳೆ ಬೌಂಡರಿ ಲೈನ್ ಬಳಿ ಮೂವರು ಆಟಗಾರರಿಗೆ ಫೀಲ್ಡಿಂಗ್ ನಿಲ್ಲಲು ಅವಕಾಶ ನೀಡಬೇಕು. ಅಲ್ಲದೆ ಈ ಎರಡು ಓವರ್ ಪವರ್​ಪ್ಲೇ ಅನ್ನು ಬೌಲಿಂಗ್ ತಂಡವು ಮೊದಲ 6 ಓವರ್​ಗಳಲ್ಲಿ ಯಾವಾಗ ಬೇಕಾದರೂ ಬಳಸಲು ಅವಕಾಶ ಕಲ್ಪಿಸಬೇಕು. ಇದರಿಂದ ರನ್ ವೇಗಕ್ಕೆ ಕಡಿವಾಣ ಹಾಕುವುದರ ಜೊತೆಗೆ, ನಾಯಕರಿಗೆ ಹೊಸ ತಂತ್ರ ರೂಪಿಸಲು ಸಹಕಾರಿಯಾಗಲಿದೆ ಎಂದು ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಈ ನಿಯಮಗಳನ್ನು ಜಾರಿಗೊಳಿಸಿದರೆ, ಟಿ20 ಕ್ರಿಕೆಟ್​ನಲ್ಲಿ ಸಮತೋಲನವನ್ನು ತರಬಹುದು. ಬ್ಯಾಟಿಂಗ್ ಮತ್ತು ಬೌಲಿಂಗ್ ನಡುವೆ ಸಮಾನ ಪೈಪೋಟಿ ಇದ್ದರೆ ಮಾತ್ರ ಕ್ರಿಕೆಟ್ ನೋಡಲು ಮಜಾ ಇರಲಿದೆ. ಹೀಗಾಗಿ ಟಿ20 ಹಾಗೂ ಐಪಿಎಲ್​ನಲ್ಲಿ ಈ ನಿಯಮಗಳನ್ನು ಜಾರಿಗೊಳಿಸುವುದು ಉತ್ತಮ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

ಇದನ್ನೂ ಓದಿ: IPL 2026: ಆರೆಂಜ್ ಕ್ಯಾಪ್ ರೇಸ್​ನಿಂದ ವಿರಾಟ್ ಕೊಹ್ಲಿ ಔಟ್!

ಬೌಲರ್​ಗಳ ಹಿತರಕ್ಷಣೆಯನ್ನು ಮುಂದಿಟ್ಟು ಸಚಿನ್ ನೀಡಿರುವ ಈ ಸಲಹೆಗಳನ್ನು ಬಿಸಿಸಿಐ ಮತ್ತು ಐಸಿಸಿ ಮುಂಬರುವ ದಿನಗಳಲ್ಲಿ ಜಾರಿಗೆ ತರಲಿದೆಯಾ ಕಾದು ನೋಡಬೇಕಿದೆ.

Source link

ರಣವೀರ್ ಸಿಂಗ್ ಬ್ಯಾನ್ ಮಾಡಿದ್ದಕ್ಕೆ ಗರಂ ಆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

‘ಡಾನ್ 3′ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ (Ranveer Singh) ಹೊರಬಂದ ವಿಚಾರ ಈಗ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ನೌಕರರ ಒಕ್ಕೂಟವು (FWICE) ನಟ ರಣವೀರ್ ಸಿಂಗ್ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ನಡೆಯನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ತೀವ್ರವಾಗಿ ಖಂಡಿಸಿದ್ದು, ರಣವೀರ್ ಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಆರ್‌ಜಿವಿ, ಫೆಡರೇಶನ್‌ನ ಹಸ್ತಕ್ಷೇಪವನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ‘ರಣವೀರ್ ಸಿಂಗ್ ಬದಲಿಗೆ FWICE ಒಕ್ಕೂಟವನ್ನೇ ಬ್ಯಾನ್ ಮಾಡಿ’ ಎಂದು ಆಕ್ರೋಶ ಹೊರಹಾಕಿದ್ದಾರೆ.

‘ಡಾನ್ 3’ ವಿವಾದ: ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ‘ಎಕ್ಸೆಲ್ ಎಂಟರ್ಟೈನ್‌ಮೆಂಟ್’ ನಿರ್ಮಾಣದ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಕೊನೆ ಕ್ಷಣದಲ್ಲಿ ಹೊರನಡೆದಿದ್ದಾರೆ ಎಂದು ವರದಿಯಾಗಿದೆ. ನಟನ ಈ ಹಠಾತ್ ನಿರ್ಧಾರದಿಂದಾಗಿ ಪ್ರಿ-ಪ್ರೊಡಕ್ಷನ್ ಕೆಲಸ, ಲೊಕೇಶನ್ ಹುಡುಕಾಟ ಸೇರಿದಂತೆ ಸಿನಿಮಾ ಸಿದ್ಧತೆಗಾಗಿ ಖರ್ಚಾಗಿದ್ದ ಬರೋಬ್ಬರಿ 45 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ನಿರ್ಮಾಣ ಸಂಸ್ಥೆ ಆರೋಪಿಸಿದೆ.

ಈ ಭಿನ್ನಾಭಿಪ್ರಾಯದ ಬಳಿಕ FWICE ಒಕ್ಕೂಟವು ರಣವೀರ್ ಸಿಂಗ್‌ಗೆ ತನ್ನ ವಾದ ಮಂಡಿಸುವಂತೆ ಹಲವು ನೋಟಿಸ್‌ಗಳನ್ನು ನೀಡಿತ್ತು. ಆದರೆ, ರಣವೀರ್ ಅವರ ಕಾನೂನು ತಂಡವು ‘ಇದು ಖಾಸಗಿ ವಾಣಿಜ್ಯ ಒಪ್ಪಂದವಾಗಿದ್ದು, ಇದರ ಮೇಲೆ ಹಸ್ತಕ್ಷೇಪ ಮಾಡಲು ಒಕ್ಕೂಟಕ್ಕೆ ಯಾವುದೇ ಅಧಿಕಾರ ಇಲ್ಲ’ ಎಂದು ಪ್ರಶ್ನಿಸಿತ್ತು. ಇದರಿಂದ ಕೆರಳಿದ ಒಕ್ಕೂಟವು, ರಣವೀರ್ ವಿರುದ್ಧ ಅಸಹಕಾರ ತೋರಲು ಕರೆ ನೀಡಿ, ಚಿತ್ರರಂಗದ ಯಾವುದೇ ಸಿಬ್ಬಂದಿ ಅವರಿಗೆ ಸಹಕರಿಸದಂತೆ ಸೂಚನೆ ನೀಡಿದೆ.

ಒಕ್ಕೂಟದ ಈ ನಡೆಯನ್ನು ಟೀಕಿಸಿರುವ ರಾಮ್ ಗೋಪಾಲ್ ವರ್ಮಾ, ಇದು ಇಡೀ ಚಿತ್ರರಂಗಕ್ಕೆ ಸಂಬಂಧಿಸಿದ ವಿಷಯವಲ್ಲ, ಕೇವಲ ಇಬ್ಬರ ನಡುವಿನ ಒಪ್ಪಂದದ ಸಮಸ್ಯೆ ಎಂದಿದ್ದಾರೆ. ‘ಇಲ್ಲಿ ನಿರ್ಮಾಪಕರು ತಮಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಇಬ್ಬರ ನಡುವಿನ ಖಾಸಗಿ ಒಪ್ಪಂದದ ವಿವಾದ. ಭಾರತದಲ್ಲಿ ಪ್ರತಿದಿನ ಎಲ್ಲಾ ಉದ್ಯಮಗಳಲ್ಲೂ ಇಂತಹ ಲಕ್ಷಾಂತರ ಪ್ರಕರಣಗಳು ನಡೆಯುತ್ತಿರುತ್ತವೆ. FWICE ಒಕ್ಕೂಟವು ಯಾವುದೇ ನ್ಯಾಯಾಲಯವಾಗಲಿ ಅಥವಾ ಸರ್ಕಾರದ ಅನುಮತಿ ಪಡೆದ ಸಂಸ್ಥೆಯಲ್ಲ’ ಎಂದು ವರ್ಮಾ ಬರೆದುಕೊಂಡಿದ್ದಾರೆ.

‘ಅಲ್ಲಿ ಏನಾಯಿತು ಎಂಬ ಸೂಕ್ಷ್ಮ ವಿಷಯಗಳು ಕೇವಲ ವಿವಾದದಲ್ಲಿರುವ ಇಬ್ಬರಿಗೆ ಮಾತ್ರ ತಿಳಿದಿರುತ್ತದೆ. ಆದ್ದರಿಂದ ಇದನ್ನು ಇತರ ಸಿವಿಲ್ ಪ್ರಕರಣಗಳಂತೆ ಅವರ ನಡುವೆಯೇ ಬಿಡಬೇಕು. ಒಂದು ವೇಳೆ ನ್ಯಾಯಾಲಯಕ್ಕೆ ಹೋದರೆ ನ್ಯಾಯಾಧೀಶರು ತೀರ್ಮಾನಿಸುತ್ತಾರೆ. ಅದನ್ನು ಬಿಟ್ಟು ಅನಗತ್ಯವಾಗಿ ಮೂಗು ತೂರಿಸಬಾರದು’ ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ‘ಡಾನ್ 3’ ವಿವಾದ: ಚಿತ್ರರಂಗದಿಂದ ಬ್ಯಾನ್ ಆದ ಬಳಿಕ ಮೌನ ಮುರಿದ ರಣವೀರ್ ಸಿಂಗ್‌

ರಣವೀರ್ ಸಿಂಗ್ ಅವರ ಸ್ಟಾರ್‌ಡಮ್ ಬಗ್ಗೆಯೂ ಮಾತನಾಡಿರುವ ಆರ್‌ಜಿವಿ, ‘ಒಂದು ವೇಳೆ ರಣವೀರ್ ಸಿಂಗ್ ಇಂದು ಒಂದು ಸಿನಿಮಾಗೆ ಒಪ್ಪಿಗೆ ನೀಡಿದರೆ ಸಾಕು, ನಾಳೆ ಬೆಳಗ್ಗೆ ಅವರ ಮನೆಯ ಮುಂದೆ ಚೆಕ್ ಬುಕ್ ಹಿಡಿದು ಸಾಲಾಗಿ ನಿಲ್ಲುವ ನಿರ್ಮಾಪಕರ ಸಾಲು ಒಂದು ಕಿಲೋಮೀಟರ್ ಉದ್ದ ಇರುತ್ತದೆ ಎಂಬುದು ವಿವಾದ ಮಾಡುತ್ತಿರುವ ಎಲ್ಲರಿಗೂ ಗೊತ್ತು’ ಎಂದು ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸರಳವಾಗಿ ಡಿ.ಕೆ. ಶಿವಕುಮಾರ್​​ ಪ್ರಮಾಣವಚನ ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ

ಡಿ.ಕೆ. ಶಿವಕುಮಾರ್​​Image Credit source: PTI

ಬೆಂಗಳೂರು, ಮೇ 31: ಯಾವುದೇ ಅಡೆತಡೆ ಇಲ್ಲದೆ ಸಿದ್ದರಾಮಯ್ಯನವರಿಂದ ಡಿ.ಕೆ. ಶಿವಕುಮಾರ್ (DK Shivakumar)​​ ಅವರಿಗೆ ಅಧಿಕಾರ ಹಸ್ತಾಂತರ ನಡೆದಿದೆ. ಸಿಎಲ್ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಡಿಕೆಶಿ, ಜೂನ್​​ 3ರ ಬುಧವಾರ ಸಿಎಂ ಆಗಿ ಪ್ರಮಾಣವಚನವನ್ನೂ ಸ್ವೀಕರಿಸಲಿದ್ದಾರೆ. ಆರಂಭದಲ್ಲಿ ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿತ್ತಾದರೂ ಅದೀಗ ಲೋಕಭವನಕ್ಕೆ ಶಿಫ್ಟ್ ಆಗಿದೆ. ಅದರಲ್ಲೂ ಬಹಳ ಸರಳವಾಗಿ ಶಿವಕುಮಾರ್​​ ಪದಗ್ರಹಣ ಮಾಡಲು ನಿರ್ಧರಿಸಿದ್ದಾರೆ. ಅಷ್ಟಕ್ಕೂ ಅವರ ಈ ತೀರ್ಮಾನದ ಹಿಂದಿರೋದು ಹೈಕಮಾಂಡ್​​ನ ಕಟ್ಟಾಜ್ಞೆ ಎಂಬ ವಿಚಾರವೀಗ ಬಹಿರಂಗಗೊಂಡಿದೆ.

ಹೌದು, ಸಿಎಂ ಸ್ಥಾನದಿಂದ ಇಳಿದಿರುವ ಸಿದ್ದರಾಮಯ್ಯನವರಿಗೆ ದೊಡ್ಡ ಬೆಂಬಲಿಗ ವರ್ಗವಿದೆ. ಅದರಲ್ಲೂ ಅಹಿಂದ ಮತಗಳನ್ನು ಅವರು ಹಿಡಿದಿಟ್ಟುಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆಯೂ ಇದೇ ಮತಗಳು ರಾಜ್ಯದಲ್ಲಿ ಕಾಂಗ್ರೆಸ್​​ಗೆ ದೊಡ್ಡ ಮಟ್ಟದ ವಿಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು. ಹೀಗಾಗಿ ಅಧಿಕಾರ ಹಸ್ತಾಂತರದಿಂದ ಯಾವುದೇ ಕಾರಣಕ್ಕೂ ಜನರಿಗೆ ತಪ್ಪು ಸಂದೇಶ ಹೋಗಬಾರದೆಂಬ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಒಂದಿಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಿದ್ದಾರೆ. ಅದರ ಭಾಗವಾಗಿಯೇ ಡಿಕೆಶಿ ಪ್ರಮಾಣವಚನ ಸರಳವಾಗಿರಬೇಕೆಂದು ಸೂಚಿಸಲಾಗಿದೆಯಂತೆ.

ಇದನ್ನೂ ಓದಿ: ಪ್ರಿಯ ಶಿವಕುಮಾರ್.. ಚುನಾವಣೆಯಲ್ಲಿ ಸೋಲಬಹುದು, ಸೈದ್ಧಾಂತಿಕವಾಗಿ ಸೋಲಬೇಡಿ: ಡಿಕೆಶಿಗೆ ಸಿದ್ದರಾಮಯ್ಯ ಭಾವುಕ ಪತ್ರ

ಹೈಕಮಾಂಡ್​​ ಸೂಚನೆಯೇನು?

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಇಳಿಸಿ ಡಿ.ಕೆ.ಶಿವಕುಮಾರ್​ಗೆ ಪಟ್ಟಕಟ್ತಿರುವ ಕಾರ್ಯಕ್ರಮ ಇದಾಗಿದ್ದು, ನಮ್ಮವರನ್ನೇ ಇಳಿಸಿ ಮತ್ತೊಬ್ಬರನ್ನು ಮುಖ್ಯಮಂತ್ರಿ ಮಾಡಲಾಗುತ್ತಿದೆ. ಇದು ಸಂಭ್ರಮ ಪಡುವ ವಿಚಾರ ಅಲ್ಲ ಎಂದು ಹೈಕಮಾಂಡ್ ಸೂಚಿಸಿದೆ. ಜೊತೆಗೆ ಜನರ ವಿಶ್ವಾಸ ಗಳಿಸಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಂಟಿ ಯಾತ್ರೆ ಕೈಗೊಳ್ಳಬೇಕೆಂದೂ ತಿಳಿಸಿದೆ. ಕನಿಷ್ಠ 8ರಿಂದ 10 ಜನಾಶೀರ್ವಾದ ಯಾತ್ರೆಯನ್ನು ನಡೆಸುವಂತೆ ಸೂಚಿಸಲಾಗಿದ್ದು, ನಾನೇ ಒಪ್ಪಿ ಡಿಕೆಶಿಗೆ ಪಟ್ಟ ಕಟ್ಟಿದ್ದೇನೆ ಎಂದು ಯಾತ್ರೆಯಲ್ಲಿ ಸಿದ್ದರಾಮಯ್ಯ ಜನರಿಗೆ ತಿಳಿಸಲಿದ್ದಾರೆ. ಮುಂದೆ ಗೊಂದಲ ಆಗಬಾರದೆಂಬ ಕಾರಣಕ್ಕೆ ಹೈಕಮಾಂಡ್​​ ಈ ನಿರ್ಧಾರ ಮಾಡಿದೆ ಎನ್ನಲಾಗಿದ್ದು, 2-3 ಜಿಲ್ಲೆ ಅಥವಾ ಪ್ರಾದೇಶಿಕವಾರು ಜನಾಶೀರ್ವಾದ ಯಾತ್ರೆ ನಡೆಯುವ ಮಾಹಿತಿ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಭೀತಿ, ವೈದ್ಯರ ಎಚ್ಚರಿಕೆ!

ಬೆಂಗಳೂರು, ಮೇ 31: ನಗರದಲ್ಲಿ ಇತ್ತೀಚೆಗೆ ಕ್ಯಾನ್ಸರ್ (Cancer) ಕೇಸ್​ಗಳು ಹೆಚ್ಚಾಗಿದ್ದು, ಬಹುತೇಕ ಕ್ಯಾನ್ಸರ್ ರೋಗಿಗಳಲ್ಲಿ ತಂಬಾಕು ಸೇವನೆ ಕಂಡುಬಂದಿದೆ. ಧೂಮಪಾನ ಹಾಗೂ ತಂಬಾಕು ಸೇವನೆಯು ಕೇವಲ ಶ್ವಾಸಕೋಶದ ಕ್ಯಾನ್ಸರ್‌ಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಇದು ಜಠರ, ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ), ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಹಾಗೂ ರಕ್ತದ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಬೆಂಗಳೂರಿನ ಹಿರಿಯ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕದ ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 40.4ರಷ್ಟು ತಂಬಾಕಿನಿಂದ ಉಂಟಾಗುತ್ತಿವೆ.
  • ಬೆಂಗಳೂರಿನಲ್ಲಿ ಪುರುಷರಲ್ಲಿ ನಾಲಿಗೆ ಮತ್ತು ಬಾಯಿ ಕ್ಯಾನ್ಸರ್ ಗಣನೀಯವಾಗಿ ಹೆಚ್ಚಾಗಿದೆ.
  • ಇ-ಸಿಗರೇಟ್ ಸುರಕ್ಷಿತವಲ್ಲ, ಅದು ಶ್ವಾಸಕೋಶದ ಗಂಭೀರ ಕಾಯಿಲೆಗೆ ಕಾರಣವಾಗಬಹುದು.

ಕಿಡ್ವಾಯಿ ಸ್ಮಾರಕ ಸರಣಿ ಸಂಸ್ಥೆಯ (KMIO) ನಿರ್ದೇಶಕರಾದ ಡಾ. ನವೀನ್ ಟಿ ಹೇಳುವಂತೆ ಭಾರತೀಯ ಪುರುಷರಲ್ಲಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಶೇ 62ರಷ್ಟು ಮತ್ತು ಮಹಿಳೆಯರಲ್ಲಿ ಶೇ 33.2ರಷ್ಟು ಕ್ಯಾನ್ಸರ್‌ಗಳು ತಂಬಾಕು ಬಳಕೆಯಿಂದಲೇ ಉಂಟಾಗುತ್ತಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಪತ್ತೆಯಾಗುತ್ತಿರುವ ಹೊಸ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 40.4ರಷ್ಟು ತಂಬಾಕು ಸಂಬಂಧಿತವಾಗಿವೆ. ಇನ್ನು ಕಿಡ್ವಾಯಿ ಆಸ್ಪತ್ರೆಯೊಂದರಲ್ಲೇ ಚಿಕಿತ್ಸೆ ಪಡೆಯುತ್ತಿರುವ ಒಟ್ಟು ರೋಗಿಗಳಲ್ಲಿ ಶೇ 50.3ರಷ್ಟು ಪ್ರಕರಣಗಳು ತಂಬಾಕಿನಿಂದಲೇ ಉಂಟಾಗಿವೆ ಎಂದು ಅವರು ಕಳವಳಕಾರಿ ಅಂಕಿ-ಅಂಶಗಳನ್ನು ಹಂಚಿಕೊಂಡಿದ್ದಾರೆ.

ಯುವ ಪೀಳಿಗೆಗೆ ಹೆಚ್ಚಿದ ಅಪಾಯ

ಸಾಮಾನ್ಯವಾಗಿ ತಂಬಾಕು ಸಂಬಂಧಿತ ಕ್ಯಾನ್ಸರ್‌ಗಳು 15 ರಿಂದ 20 ವರ್ಷಗಳ ನಿರಂತರ ಬಳಕೆಯ ನಂತರ, ಅಂದರೆ 54 ವರ್ಷ ದಾಟಿದವರಲ್ಲಿ ಕಾಣಿಸಿಕೊಳ್ಳುತ್ತಿದ್ದವು. ಆದರೆ, ಪ್ರಸ್ತುತ ದಿನಗಳಲ್ಲಿ ಯುವಕ-ಯುವತಿಯರು ಹದಿಹರೆಯದಲ್ಲೇ ಈ ವ್ಯಸನಗಳಿಗೆ ದಾಸರಾಗುತ್ತಿರುವುದರಿಂದ, 20 ಮತ್ತು 30 ರ ಹರೆಯದ ಯುವಜನರಲ್ಲೂ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿವೆ.

ಸಿಗರೇಟ್ ವ್ಯಸನದಿಂದ ಮುಕ್ತಿ ಪಡೆಯಲು ಅನೇಕರು ‘ವೇಪಿಂಗ್’ (Vaping) ಅಥವಾ ‘ಇ-ಸಿಗರೇಟ್’ ಮೊರೆ ಹೋಗುತ್ತಿದ್ದಾರೆ. ಆದರೆ ಇದು ಮತ್ತಷ್ಟು ಅಪಾಯಕಾರಿ ಎನ್ನುತ್ತಾರೆ ಮಣಿಪಾಲ್ ಆಸ್ಪತ್ರೆಯ ಸರ್ಜಿಕಲ್ ಆಂಕಾಲಜಿಸ್ಟ್ ಡಾ. ಮಾಧವಿ ನಾಯರ್. ಇ-ಸಿಗರೇಟ್‌ಗಳು ಸುರಕ್ಷಿತ ಎಂಬ ತಪ್ಪು ಕಲ್ಪನೆ ಯುವಕರಲ್ಲಿದೆ. ಆದರೆ ಇದು ದೇಹಕ್ಕೆ ಅತಿ ಹೆಚ್ಚು ನಿಕೋಟಿನ್ ಒದಗಿಸಿ ವ್ಯಸನವನ್ನು ಹೆಚ್ಚಿಸುವುದಲ್ಲದೆ, ಶ್ವಾಸಕೋಶದ ಗಂಭೀರ ಕಾಯಿಲೆಗಳಿಗೆ (EVALI) ಕಾರಣವಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್

ಬೆಂಗಳೂರು, ಮೇ 31: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ  ರಾಜ್ಯದ ಹಿರಿಯ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಮತ್ತು ಎಡಿಜಿಪಿ ಡಿ.ರೂಪಾ ಮೌದ್ಗಿಲ್ ಡಿಕೆಶಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಕೂಡ ಉಪಸ್ಥಿತರಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, ಮೃತರ ಪೈಕಿ ಬೆಂಗಳೂರು ಮೂಲದ ಪ್ರವಾಸಿಗರೂ ಇರುವ ಶಂಕೆ

ಕಂದಕಕ್ಕೆ ಉರುಳಿರುವ ಕಾರುImage Credit source: ABP News

ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಚುರಾಹ್ ಉಪವಿಭಾಗದ ಬೈರಗಢ್–ಸಚ್ ಪಾಸ್–ಕಿಲ್ಲರ್ ಮಾರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ದುರಂತದಲ್ಲಿ ಕಾರಲ್ಲಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಹಿಮದಿಂದ ಆವೃತವಾಗಿರುವ ಸಚ್ ಪಾಸ್ ಪ್ರದೇಶದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮುಖ್ಯಾಂಶಗಳು

  • ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ಅಪಘಾತ
  • 500 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರವಾಸಿಗರಿದ್ದ ಕಾರು
  • ದುರಂತದಲ್ಲಿ ಮಕ್ಕಳೂ ಸೇರಿ 8 ಮಂದಿ ಸ್ಥಳದಲ್ಲೇ ಸಾವು

ಪ್ರಾಥಮಿಕ ಮಾಹಿತಿಯಂತೆ, ಬೆಂಗಳೂರಿನಿಂದ ಬಂದಿದ್ದ ಒಂದು ಪ್ರವಾಸಿ ಕುಟುಂಬ ಡಲ್‌ಹೌಸಿ ಪ್ರವಾಸಕ್ಕಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ಪಡೆದಿತ್ತು. ಈ ಕುಟುಂಬವು ಡಲ್‌ಹೌಸಿಯಲ್ಲಿ ತಂಗಿದ್ದ ಮತ್ತೊಂದು ಪ್ರವಾಸಿ ಕುಟುಂಬದೊಂದಿಗೆ ವಾಹನವನ್ನು ಹಂಚಿಕೊಂಡು ಸಚ್ ಪಾಸ್‌ನ ಹಿಮಾಚ್ಛಾದಿತ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳಿತ್ತು. ಚಾಲಕ ಸೇರಿದಂತೆ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರಲ್ಲಿ ಇಬ್ಬರು ಮಕ್ಕಳು ಕೂಡ ಸೇರಿದ್ದರು.

ಇದನ್ನೂ ಓದಿ: ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಭವಿಸಿದ ಸ್ಥಳ ದುರ್ಗಮ ಪ್ರದೇಶವಾಗಿದ್ದು, ಕಡಿದಾದ ಇಳಿಜಾರುಗಳಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ. ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಚಂಬಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಜಯ್ ಕುಮಾರ್ ಸಕ್ಲಾನಿ ಅಪಘಾತವನ್ನು ದೃಢಪಡಿಸಿದ್ದು, ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 9:36 am, Sun, 31 May 26

Source link

ರಾಜ್ ಬಿ. ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾ ಮಹಿಳಾ ವಿರೋಧಿ ಚಿತ್ರ ಅಲ್ಲ; ಸಿಕ್ತು ಸ್ಪಷ್ಟನೆ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಬಂದರ್’ (Bandar) ಕ್ರೈಮ್ ಥ್ರಿಲ್ಲರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಾಬಿ ಡಿಯೋಲ್ ಹಾಗೂ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ (Raj B Shetty) ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಿಲುಕುವ ಖ್ಯಾತ ಸೆಲೆಬ್ರಿಟಿಯೊಬ್ಬನ ಜೀವನದ ಏರುಪೇರುಗಳನ್ನು ಹಾಗೂ ಡಿಜಿಟಲ್ ಯುಗದಲ್ಲಿ ಸತ್ಯ ಮತ್ತು ನ್ಯಾಯದ ಸುತ್ತ ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಈ ಸಿನಿಮಾ ಬಿಂಬಿಸುತ್ತದೆ. ಆದರೆ ಈ ಚಿತ್ರವು ಮಹಿಳಾ ವಿರೋಧಿ ಅಲ್ಲ ಎಂದು ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ.

ಚಿತ್ರದ ಬಿಡುಗಡೆಗೆ ಮುನ್ನ ನಟ ಬಾಬಿ ಡಿಯೋಲ್ ಮತ್ತು ನಿರ್ಮಾಪಕ ನಿಖಿಲ್ ದ್ವಿವೇದಿ ಅವರು ‘ಟೈಮ್ಸ್ ನೌ’ ವಾಹಿನಿಯ ‘ದಿ ನ್ಯೂಸ್‌ಅವರ್ ಅಟ್ 9’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಸಂವಾದವು ಚಿತ್ರದ ಕಥೆಯನ್ನು ಮೀರಿ, ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಲಿಂಗ ಸಮಾನತೆ, ಸಮಾನ ಹಕ್ಕುಗಳು ಮತ್ತು ಕಾನೂನು ಹೊಣೆಗಾರಿಕೆಯಂತಹ ಗಂಭೀರ ವಿಷಯಗಳತ್ತ ಹೊರಳಿತು.

ಸಂದರ್ಶನದಲ್ಲಿ ಮಾತನಾಡಿದ ನಿರ್ಮಾಪಕ ನಿಖಿಲ್ ದ್ವಿವೇದಿ, ಈ ಚಿತ್ರದ ಕಥೆಯು ತಮಗೆ ಭಾವನಾತ್ಮಕವಾಗಿ ತುಂಬಾ ಹತ್ತಿರವಾಗಿದ್ದನ್ನು ಹಂಚಿಕೊಂಡರು. ಅಲ್ಲದೆ, ಈ ಸಿನಿಮಾ ಯಾವುದೇ ಕಾರಣಕ್ಕೂ ಮಹಿಳೆಯರ ವಿರುದ್ಧವಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ನಟಿ-ಮಾಡೆಲ್ ಟ್ವಿಶಾ ಶರ್ಮಾ ಸಾವಿನ ಪ್ರಕರಣವನ್ನು ಉಲ್ಲೇಖಿಸಿ, ‘ಈ ಚಿತ್ರವು ಪುರುಷರನ್ನು ಬಲಿಪಶುಗಳನ್ನಾಗಿ ತೋರಿಸುತ್ತಾ?’ ಎಂದು ಪ್ರಶ್ನಿಸಿದಾಗ ನಿಖಿಲ್ ದ್ವಿವೇದಿ ಸ್ಪಷ್ಟವಾಗಿ ಉತ್ತರಿಸಿದರು.

‘ನಮ್ಮ ಚಿತ್ರ ಮಹಿಳೆಯರ ವಿರುದ್ಧವಾಗಿಲ್ಲ. ಸದ್ಯ ದೇಶಾದ್ಯಂತ ಚರ್ಚೆಯಲ್ಲಿರುವ ಟ್ವಿಶಾ ಶರ್ಮಾ ಪ್ರಕರಣವನ್ನು ನಾವೂ ಗಮನಿಸುತ್ತಿದ್ದೇವೆ. ಅದು ನಿಜಕ್ಕೂ ದುರದೃಷ್ಟಕರ ಮತ್ತು ಆ ಬಗ್ಗೆ ಸೂಕ್ತ ತನಿಖೆಯಾಗಬೇಕು. ಅಲ್ಲಿ ಅಪರಾಧ ನಡೆದಿದ್ದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ನಮ್ಮದು ಮಹಿಳಾ ವಿರೋಧಿ ಚಿತ್ರವಲ್ಲ, ಇದು ನ್ಯಾಯದ ಪರವಾದ ಸಿನಿಮಾ. ಮಹಿಳೆಗೆ ಅನ್ಯಾಯವಾದಾಗ ಅವಳನ್ನು ನಂಬಬೇಡಿ ಎಂದು ಯಾರೂ ಹೇಳುತ್ತಿಲ್ಲ’ ಎಂದು ಅವರು ಹೇಳಿದರು.

‘ಬಂದರ್’ ಸಿನಿಮಾದ ಹಾಡು:

ಮುಂದುವರಿದು ಮಾತನಾಡಿದ ಅವರು, ‘ಆದರೆ ನಾವು ನ್ಯಾಯದ ಮೇಲೂ ನಂಬಿಕೆ ಇಡಬೇಕಾಗುತ್ತದೆ. ನಮಗೆ ಒಂದು ನಿರ್ದಿಷ್ಟ ಲಿಂಗಕ್ಕಿಂತ ಹೆಚ್ಚಾಗಿ ನ್ಯಾಯದ ಮೇಲೆ ನಂಬಿಕೆ ಇರಬೇಕು. ಅದೇ ನಮ್ಮ ಸಂವಿಧಾನ, ನಮ್ಮ ಕಾನೂನು ಮತ್ತು ಪ್ರಜಾಪ್ರಭುತ್ವದ ಮೂಲ ತತ್ವವಾಗಿದೆ. ಕೊನೆಗೆ ನ್ಯಾಯವೇ ಗೆಲ್ಲಬೇಕು’ ಎಂದು ನಿರ್ಮಾಪಕ ನಿಖಿಲ್ ದ್ವಿವೇದಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಗೆ ಹಾರಿದ ರಾಜ್ ಬಿ ಶೆಟ್ಟಿ, ಮೊದಲ ಬಾಲಿವುಡ್ ಸಿನಿಮಾದ ಟ್ರೈಲರ್ ಬಿಡುಗಡೆ

‘ಬಂದರ್’ ಚಿತ್ರದ ಮೂಲಕ ನಟ ಬಾಬಿ ಡಿಯೋಲ್ ಮತ್ತು ನಿರ್ದೇಶಕ ಅನುರಾಗ್ ಕಶ್ಯಪ್ ಮೊದಲ ಬಾರಿಗೆ ಒಟ್ಟಿಗೆ ಕೆಲಸ ಮಾಡಿದ್ದಾರೆ. ‘ಪಾತಾಳ್ ಲೋಕ್’, ‘ಕೊಹ್ರಾ’ ಮತ್ತು ‘ಉಡ್ತಾ ಪಂಜಾಬ್’ ಖ್ಯಾತಿಯ ಸುದೀಪ್ ಶರ್ಮಾ ಮತ್ತು ಅಭಿಷೇಕ್ ಬ್ಯಾನರ್ಜಿ ಅವರು ಈ ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ರಾಜ್ ಬಿ. ಶೆಟ್ಟಿ, ನಟೇಶ್ ಹೆಗಡೆ ಮಂತಾದವರು ನಟಿಸಿರುವುದರಿಂದ ಕನ್ನಡಿಗರಿಗೂ ಈ ಸಿನಿಮಾ ಮೇಲೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಂತ್ರಾಲಯದ ಬಳಿ ಘೋರ ದುರಂತ: ತುಂಗಭದ್ರಾ ನದಿಗೆ ಈಜಲು ಹೋದ ಐವರು ನೀರುಪಾಲು

ಮೃತದೇಹಗಳಿಗಾಗಿ ಶೋಧImage Credit source: Tv9 Kannada

ರಾಯಚೂರು, ಮೇ 31: ರಾಜ್ಯದಲ್ಲಿ ಜಲ ದುರಂತಗಳು ಮುಂದುವರಿದಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಖ್ಯಾಂಶಗಳು

  • ಮಂತ್ರಾಲಯ ಬಳಿಯ ನದಿಯಲ್ಲಿ ಘೋರ ದುರಂತ
  • ಈಜಲು ತೆರಳಿದ್ದ ಐವರು ತುಂಗಭದ್ರಾ ನದಿ ಪಾಲು
  • ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾದ ಯುವತಿ

ಮಂತ್ರಾಲಯದ ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದವರು, ಕಾರ್ಯಕ್ರಮದ ಬಳಿಕ ಈಜಲೆಂದು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ನದಿಯ ನೀರಿನ ಆ ತಿಳಿಯದೆ ಈಜಲು ಹೋಗಿ ಐವರು ಜಲ ಸಮಾಧಿಯಾಗಿದ್ದಾರೆ. ಮೃತರ ಪೈಕಿ ಧನುಷ್​​ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಸ್ಥಳದಲ್ಲಿ ಶೋಧ ಮುಂದುವರಿದಿದೆ. ನಾಲ್ವರ ಮೃತದೇಹಗಳಿಗಾಗಿ ಮೀನುಗಾರರು ಹುಡುಕಾಟ ನಡೆಸುತ್ತಿದ್ದು ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಘೋರ ದುರಂತ; ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

ಸಾಲು ಸಾಲು ದುರಂತ

ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಮೀಪ ಮೊನ್ನೆ ಮೊನ್ನೆಯಷ್ಟೇ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಹೆಚ್ಚಾದ ಪರಿಣಾಮ ಮಹಿಳೆಯರೂ ಸೇರಿ ಹಲವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ದುರಂತ ಸಂಭವಿಸಿತ್ತು. ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಲ್ಲಿ ಮುಳುಗಿ ನಿನ್ನೆಯಷ್ಟೇ ಪ್ರಾಣ ಬಿಟ್ಟಿದ್ದರು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಫೈನಲ್​ ಮ್ಯಾಚ್​ಗೂ ಮುನ್ನವೇ ಆರೆಂಜ್ ಕ್ಯಾಪ್ ರೇಸ್​ನಿಂದ ವಿರಾಟ್ ಕೊಹ್ಲಿ ಔಟ್!

Source link

Exit mobile version