ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಭೀತಿ, ವೈದ್ಯರ ಎಚ್ಚರಿಕೆ!

ಬೆಂಗಳೂರು, ಮೇ 31: ನಗರದಲ್ಲಿ ಇತ್ತೀಚೆಗೆ ಕ್ಯಾನ್ಸರ್ (Cancer) ಕೇಸ್​ಗಳು ಹೆಚ್ಚಾಗಿದ್ದು, ಬಹುತೇಕ ಕ್ಯಾನ್ಸರ್ ರೋಗಿಗಳಲ್ಲಿ ತಂಬಾಕು ಸೇವನೆ ಕಂಡುಬಂದಿದೆ. ಧೂಮಪಾನ ಹಾಗೂ ತಂಬಾಕು ಸೇವನೆಯು ಕೇವಲ ಶ್ವಾಸಕೋಶದ ಕ್ಯಾನ್ಸರ್‌ಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಇದು ಜಠರ, ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ), ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಹಾಗೂ ರಕ್ತದ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಬೆಂಗಳೂರಿನ ಹಿರಿಯ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕದ ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 40.4ರಷ್ಟು ತಂಬಾಕಿನಿಂದ ಉಂಟಾಗುತ್ತಿವೆ.
  • ಬೆಂಗಳೂರಿನಲ್ಲಿ ಪುರುಷರಲ್ಲಿ ನಾಲಿಗೆ ಮತ್ತು ಬಾಯಿ ಕ್ಯಾನ್ಸರ್ ಗಣನೀಯವಾಗಿ ಹೆಚ್ಚಾಗಿದೆ.
  • ಇ-ಸಿಗರೇಟ್ ಸುರಕ್ಷಿತವಲ್ಲ, ಅದು ಶ್ವಾಸಕೋಶದ ಗಂಭೀರ ಕಾಯಿಲೆಗೆ ಕಾರಣವಾಗಬಹುದು.

ಕಿಡ್ವಾಯಿ ಸ್ಮಾರಕ ಸರಣಿ ಸಂಸ್ಥೆಯ (KMIO) ನಿರ್ದೇಶಕರಾದ ಡಾ. ನವೀನ್ ಟಿ ಹೇಳುವಂತೆ ಭಾರತೀಯ ಪುರುಷರಲ್ಲಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಶೇ 62ರಷ್ಟು ಮತ್ತು ಮಹಿಳೆಯರಲ್ಲಿ ಶೇ 33.2ರಷ್ಟು ಕ್ಯಾನ್ಸರ್‌ಗಳು ತಂಬಾಕು ಬಳಕೆಯಿಂದಲೇ ಉಂಟಾಗುತ್ತಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಪತ್ತೆಯಾಗುತ್ತಿರುವ ಹೊಸ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 40.4ರಷ್ಟು ತಂಬಾಕು ಸಂಬಂಧಿತವಾಗಿವೆ. ಇನ್ನು ಕಿಡ್ವಾಯಿ ಆಸ್ಪತ್ರೆಯೊಂದರಲ್ಲೇ ಚಿಕಿತ್ಸೆ ಪಡೆಯುತ್ತಿರುವ ಒಟ್ಟು ರೋಗಿಗಳಲ್ಲಿ ಶೇ 50.3ರಷ್ಟು ಪ್ರಕರಣಗಳು ತಂಬಾಕಿನಿಂದಲೇ ಉಂಟಾಗಿವೆ ಎಂದು ಅವರು ಕಳವಳಕಾರಿ ಅಂಕಿ-ಅಂಶಗಳನ್ನು ಹಂಚಿಕೊಂಡಿದ್ದಾರೆ.

ಯುವ ಪೀಳಿಗೆಗೆ ಹೆಚ್ಚಿದ ಅಪಾಯ

ಸಾಮಾನ್ಯವಾಗಿ ತಂಬಾಕು ಸಂಬಂಧಿತ ಕ್ಯಾನ್ಸರ್‌ಗಳು 15 ರಿಂದ 20 ವರ್ಷಗಳ ನಿರಂತರ ಬಳಕೆಯ ನಂತರ, ಅಂದರೆ 54 ವರ್ಷ ದಾಟಿದವರಲ್ಲಿ ಕಾಣಿಸಿಕೊಳ್ಳುತ್ತಿದ್ದವು. ಆದರೆ, ಪ್ರಸ್ತುತ ದಿನಗಳಲ್ಲಿ ಯುವಕ-ಯುವತಿಯರು ಹದಿಹರೆಯದಲ್ಲೇ ಈ ವ್ಯಸನಗಳಿಗೆ ದಾಸರಾಗುತ್ತಿರುವುದರಿಂದ, 20 ಮತ್ತು 30 ರ ಹರೆಯದ ಯುವಜನರಲ್ಲೂ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿವೆ.

ಸಿಗರೇಟ್ ವ್ಯಸನದಿಂದ ಮುಕ್ತಿ ಪಡೆಯಲು ಅನೇಕರು ‘ವೇಪಿಂಗ್’ (Vaping) ಅಥವಾ ‘ಇ-ಸಿಗರೇಟ್’ ಮೊರೆ ಹೋಗುತ್ತಿದ್ದಾರೆ. ಆದರೆ ಇದು ಮತ್ತಷ್ಟು ಅಪಾಯಕಾರಿ ಎನ್ನುತ್ತಾರೆ ಮಣಿಪಾಲ್ ಆಸ್ಪತ್ರೆಯ ಸರ್ಜಿಕಲ್ ಆಂಕಾಲಜಿಸ್ಟ್ ಡಾ. ಮಾಧವಿ ನಾಯರ್. ಇ-ಸಿಗರೇಟ್‌ಗಳು ಸುರಕ್ಷಿತ ಎಂಬ ತಪ್ಪು ಕಲ್ಪನೆ ಯುವಕರಲ್ಲಿದೆ. ಆದರೆ ಇದು ದೇಹಕ್ಕೆ ಅತಿ ಹೆಚ್ಚು ನಿಕೋಟಿನ್ ಒದಗಿಸಿ ವ್ಯಸನವನ್ನು ಹೆಚ್ಚಿಸುವುದಲ್ಲದೆ, ಶ್ವಾಸಕೋಶದ ಗಂಭೀರ ಕಾಯಿಲೆಗಳಿಗೆ (EVALI) ಕಾರಣವಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್

ಬೆಂಗಳೂರು, ಮೇ 31: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ  ರಾಜ್ಯದ ಹಿರಿಯ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಮತ್ತು ಎಡಿಜಿಪಿ ಡಿ.ರೂಪಾ ಮೌದ್ಗಿಲ್ ಡಿಕೆಶಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಕೂಡ ಉಪಸ್ಥಿತರಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, ಮೃತರ ಪೈಕಿ ಬೆಂಗಳೂರು ಮೂಲದ ಪ್ರವಾಸಿಗರೂ ಇರುವ ಶಂಕೆ

ಕಂದಕಕ್ಕೆ ಉರುಳಿರುವ ಕಾರುImage Credit source: ABP News

ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಚುರಾಹ್ ಉಪವಿಭಾಗದ ಬೈರಗಢ್–ಸಚ್ ಪಾಸ್–ಕಿಲ್ಲರ್ ಮಾರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ದುರಂತದಲ್ಲಿ ಕಾರಲ್ಲಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಹಿಮದಿಂದ ಆವೃತವಾಗಿರುವ ಸಚ್ ಪಾಸ್ ಪ್ರದೇಶದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮುಖ್ಯಾಂಶಗಳು

  • ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ಅಪಘಾತ
  • 500 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರವಾಸಿಗರಿದ್ದ ಕಾರು
  • ದುರಂತದಲ್ಲಿ ಮಕ್ಕಳೂ ಸೇರಿ 8 ಮಂದಿ ಸ್ಥಳದಲ್ಲೇ ಸಾವು

ಪ್ರಾಥಮಿಕ ಮಾಹಿತಿಯಂತೆ, ಬೆಂಗಳೂರಿನಿಂದ ಬಂದಿದ್ದ ಒಂದು ಪ್ರವಾಸಿ ಕುಟುಂಬ ಡಲ್‌ಹೌಸಿ ಪ್ರವಾಸಕ್ಕಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ಪಡೆದಿತ್ತು. ಈ ಕುಟುಂಬವು ಡಲ್‌ಹೌಸಿಯಲ್ಲಿ ತಂಗಿದ್ದ ಮತ್ತೊಂದು ಪ್ರವಾಸಿ ಕುಟುಂಬದೊಂದಿಗೆ ವಾಹನವನ್ನು ಹಂಚಿಕೊಂಡು ಸಚ್ ಪಾಸ್‌ನ ಹಿಮಾಚ್ಛಾದಿತ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳಿತ್ತು. ಚಾಲಕ ಸೇರಿದಂತೆ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರಲ್ಲಿ ಇಬ್ಬರು ಮಕ್ಕಳು ಕೂಡ ಸೇರಿದ್ದರು.

ಇದನ್ನೂ ಓದಿ: ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಭವಿಸಿದ ಸ್ಥಳ ದುರ್ಗಮ ಪ್ರದೇಶವಾಗಿದ್ದು, ಕಡಿದಾದ ಇಳಿಜಾರುಗಳಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ. ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಚಂಬಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಜಯ್ ಕುಮಾರ್ ಸಕ್ಲಾನಿ ಅಪಘಾತವನ್ನು ದೃಢಪಡಿಸಿದ್ದು, ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 9:36 am, Sun, 31 May 26

Source link

ರಾಜ್ ಬಿ. ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾ ಮಹಿಳಾ ವಿರೋಧಿ ಚಿತ್ರ ಅಲ್ಲ; ಸಿಕ್ತು ಸ್ಪಷ್ಟನೆ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಬಂದರ್’ (Bandar) ಕ್ರೈಮ್ ಥ್ರಿಲ್ಲರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಾಬಿ ಡಿಯೋಲ್ ಹಾಗೂ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ (Raj B Shetty) ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಿಲುಕುವ ಖ್ಯಾತ ಸೆಲೆಬ್ರಿಟಿಯೊಬ್ಬನ ಜೀವನದ ಏರುಪೇರುಗಳನ್ನು ಹಾಗೂ ಡಿಜಿಟಲ್ ಯುಗದಲ್ಲಿ ಸತ್ಯ ಮತ್ತು ನ್ಯಾಯದ ಸುತ್ತ ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಈ ಸಿನಿಮಾ ಬಿಂಬಿಸುತ್ತದೆ. ಆದರೆ ಈ ಚಿತ್ರವು ಮಹಿಳಾ ವಿರೋಧಿ ಅಲ್ಲ ಎಂದು ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ.

ಚಿತ್ರದ ಬಿಡುಗಡೆಗೆ ಮುನ್ನ ನಟ ಬಾಬಿ ಡಿಯೋಲ್ ಮತ್ತು ನಿರ್ಮಾಪಕ ನಿಖಿಲ್ ದ್ವಿವೇದಿ ಅವರು ‘ಟೈಮ್ಸ್ ನೌ’ ವಾಹಿನಿಯ ‘ದಿ ನ್ಯೂಸ್‌ಅವರ್ ಅಟ್ 9’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಸಂವಾದವು ಚಿತ್ರದ ಕಥೆಯನ್ನು ಮೀರಿ, ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಲಿಂಗ ಸಮಾನತೆ, ಸಮಾನ ಹಕ್ಕುಗಳು ಮತ್ತು ಕಾನೂನು ಹೊಣೆಗಾರಿಕೆಯಂತಹ ಗಂಭೀರ ವಿಷಯಗಳತ್ತ ಹೊರಳಿತು.

ಸಂದರ್ಶನದಲ್ಲಿ ಮಾತನಾಡಿದ ನಿರ್ಮಾಪಕ ನಿಖಿಲ್ ದ್ವಿವೇದಿ, ಈ ಚಿತ್ರದ ಕಥೆಯು ತಮಗೆ ಭಾವನಾತ್ಮಕವಾಗಿ ತುಂಬಾ ಹತ್ತಿರವಾಗಿದ್ದನ್ನು ಹಂಚಿಕೊಂಡರು. ಅಲ್ಲದೆ, ಈ ಸಿನಿಮಾ ಯಾವುದೇ ಕಾರಣಕ್ಕೂ ಮಹಿಳೆಯರ ವಿರುದ್ಧವಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ನಟಿ-ಮಾಡೆಲ್ ಟ್ವಿಶಾ ಶರ್ಮಾ ಸಾವಿನ ಪ್ರಕರಣವನ್ನು ಉಲ್ಲೇಖಿಸಿ, ‘ಈ ಚಿತ್ರವು ಪುರುಷರನ್ನು ಬಲಿಪಶುಗಳನ್ನಾಗಿ ತೋರಿಸುತ್ತಾ?’ ಎಂದು ಪ್ರಶ್ನಿಸಿದಾಗ ನಿಖಿಲ್ ದ್ವಿವೇದಿ ಸ್ಪಷ್ಟವಾಗಿ ಉತ್ತರಿಸಿದರು.

‘ನಮ್ಮ ಚಿತ್ರ ಮಹಿಳೆಯರ ವಿರುದ್ಧವಾಗಿಲ್ಲ. ಸದ್ಯ ದೇಶಾದ್ಯಂತ ಚರ್ಚೆಯಲ್ಲಿರುವ ಟ್ವಿಶಾ ಶರ್ಮಾ ಪ್ರಕರಣವನ್ನು ನಾವೂ ಗಮನಿಸುತ್ತಿದ್ದೇವೆ. ಅದು ನಿಜಕ್ಕೂ ದುರದೃಷ್ಟಕರ ಮತ್ತು ಆ ಬಗ್ಗೆ ಸೂಕ್ತ ತನಿಖೆಯಾಗಬೇಕು. ಅಲ್ಲಿ ಅಪರಾಧ ನಡೆದಿದ್ದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ನಮ್ಮದು ಮಹಿಳಾ ವಿರೋಧಿ ಚಿತ್ರವಲ್ಲ, ಇದು ನ್ಯಾಯದ ಪರವಾದ ಸಿನಿಮಾ. ಮಹಿಳೆಗೆ ಅನ್ಯಾಯವಾದಾಗ ಅವಳನ್ನು ನಂಬಬೇಡಿ ಎಂದು ಯಾರೂ ಹೇಳುತ್ತಿಲ್ಲ’ ಎಂದು ಅವರು ಹೇಳಿದರು.

‘ಬಂದರ್’ ಸಿನಿಮಾದ ಹಾಡು:

ಮುಂದುವರಿದು ಮಾತನಾಡಿದ ಅವರು, ‘ಆದರೆ ನಾವು ನ್ಯಾಯದ ಮೇಲೂ ನಂಬಿಕೆ ಇಡಬೇಕಾಗುತ್ತದೆ. ನಮಗೆ ಒಂದು ನಿರ್ದಿಷ್ಟ ಲಿಂಗಕ್ಕಿಂತ ಹೆಚ್ಚಾಗಿ ನ್ಯಾಯದ ಮೇಲೆ ನಂಬಿಕೆ ಇರಬೇಕು. ಅದೇ ನಮ್ಮ ಸಂವಿಧಾನ, ನಮ್ಮ ಕಾನೂನು ಮತ್ತು ಪ್ರಜಾಪ್ರಭುತ್ವದ ಮೂಲ ತತ್ವವಾಗಿದೆ. ಕೊನೆಗೆ ನ್ಯಾಯವೇ ಗೆಲ್ಲಬೇಕು’ ಎಂದು ನಿರ್ಮಾಪಕ ನಿಖಿಲ್ ದ್ವಿವೇದಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಗೆ ಹಾರಿದ ರಾಜ್ ಬಿ ಶೆಟ್ಟಿ, ಮೊದಲ ಬಾಲಿವುಡ್ ಸಿನಿಮಾದ ಟ್ರೈಲರ್ ಬಿಡುಗಡೆ

‘ಬಂದರ್’ ಚಿತ್ರದ ಮೂಲಕ ನಟ ಬಾಬಿ ಡಿಯೋಲ್ ಮತ್ತು ನಿರ್ದೇಶಕ ಅನುರಾಗ್ ಕಶ್ಯಪ್ ಮೊದಲ ಬಾರಿಗೆ ಒಟ್ಟಿಗೆ ಕೆಲಸ ಮಾಡಿದ್ದಾರೆ. ‘ಪಾತಾಳ್ ಲೋಕ್’, ‘ಕೊಹ್ರಾ’ ಮತ್ತು ‘ಉಡ್ತಾ ಪಂಜಾಬ್’ ಖ್ಯಾತಿಯ ಸುದೀಪ್ ಶರ್ಮಾ ಮತ್ತು ಅಭಿಷೇಕ್ ಬ್ಯಾನರ್ಜಿ ಅವರು ಈ ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ರಾಜ್ ಬಿ. ಶೆಟ್ಟಿ, ನಟೇಶ್ ಹೆಗಡೆ ಮಂತಾದವರು ನಟಿಸಿರುವುದರಿಂದ ಕನ್ನಡಿಗರಿಗೂ ಈ ಸಿನಿಮಾ ಮೇಲೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಂತ್ರಾಲಯದ ಬಳಿ ಘೋರ ದುರಂತ: ತುಂಗಭದ್ರಾ ನದಿಗೆ ಈಜಲು ಹೋದ ಐವರು ನೀರುಪಾಲು

ಮೃತದೇಹಗಳಿಗಾಗಿ ಶೋಧImage Credit source: Tv9 Kannada

ರಾಯಚೂರು, ಮೇ 31: ರಾಜ್ಯದಲ್ಲಿ ಜಲ ದುರಂತಗಳು ಮುಂದುವರಿದಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಖ್ಯಾಂಶಗಳು

  • ಮಂತ್ರಾಲಯ ಬಳಿಯ ನದಿಯಲ್ಲಿ ಘೋರ ದುರಂತ
  • ಈಜಲು ತೆರಳಿದ್ದ ಐವರು ತುಂಗಭದ್ರಾ ನದಿ ಪಾಲು
  • ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾದ ಯುವತಿ

ಮಂತ್ರಾಲಯದ ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದವರು, ಕಾರ್ಯಕ್ರಮದ ಬಳಿಕ ಈಜಲೆಂದು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ನದಿಯ ನೀರಿನ ಆ ತಿಳಿಯದೆ ಈಜಲು ಹೋಗಿ ಐವರು ಜಲ ಸಮಾಧಿಯಾಗಿದ್ದಾರೆ. ಮೃತರ ಪೈಕಿ ಧನುಷ್​​ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಸ್ಥಳದಲ್ಲಿ ಶೋಧ ಮುಂದುವರಿದಿದೆ. ನಾಲ್ವರ ಮೃತದೇಹಗಳಿಗಾಗಿ ಮೀನುಗಾರರು ಹುಡುಕಾಟ ನಡೆಸುತ್ತಿದ್ದು ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಘೋರ ದುರಂತ; ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

ಸಾಲು ಸಾಲು ದುರಂತ

ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಮೀಪ ಮೊನ್ನೆ ಮೊನ್ನೆಯಷ್ಟೇ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಹೆಚ್ಚಾದ ಪರಿಣಾಮ ಮಹಿಳೆಯರೂ ಸೇರಿ ಹಲವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ದುರಂತ ಸಂಭವಿಸಿತ್ತು. ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಲ್ಲಿ ಮುಳುಗಿ ನಿನ್ನೆಯಷ್ಟೇ ಪ್ರಾಣ ಬಿಟ್ಟಿದ್ದರು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಫೈನಲ್​ ಮ್ಯಾಚ್​ಗೂ ಮುನ್ನವೇ ಆರೆಂಜ್ ಕ್ಯಾಪ್ ರೇಸ್​ನಿಂದ ವಿರಾಟ್ ಕೊಹ್ಲಿ ಔಟ್!

Source link

Weekly Horoscope: ನಿಮ್ಮ ರಾಶಿಗನುಗುಣವಾಗಿ ಜೂನ್ 1 ರಿಂದ 7ರ ವರೆಗಿನ ವಾರ ಭವಿಷ್ಯ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಜೂನ್ 1 ರಿಂದ ಜೂನ್ 7, 2026 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ತಿಥಿಗಳ ಮಹತ್ವ, ಮತ್ತು ದಿನಗಳ ವಿಶೇಷಗಳ ಕುರಿತು ವಿವರಣೆ ನೀಡಲಾಗಿದೆ. ಈ ವಾರದಲ್ಲಿ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಗ್ರೀಷ್ಮ ಋತು ಇರಲಿದ್ದು, ಪಾಡ್ಯದಿಂದ ಸಪ್ತಮಿ ತಿಥಿಗಳ ಮಹತ್ವವನ್ನು ಹೇಳಲಾಗಿದೆ. ಸಂಕಷ್ಟ ಚತುರ್ಥಿ, ಕಾಂಚಿ ವರದರಾಜ ಸ್ವಾಮಿಗಳ ರಥೋತ್ಸವ, ಮಾರೇನಹಳ್ಳಿಯಲ್ಲಿ ನರಸಿಂಹ ಜಾತ್ರಾ ಮಹೋತ್ಸವಗಳು ಈ ವಾರದಲ್ಲಿ ನಡೆಯಲಿವೆ. ವಿಶ್ವ ಪರಿಸರ ದಿನ, ವಿಶ್ವ ಆಹಾರ ಸಂರಕ್ಷಣಾ ದಿನ, ಪೋಷಕರ ಜಾಗತಿಕ ದಿನ ಮತ್ತು ವಿಶ್ವ ಹಾಲಿನ ದಿನವೂ ಸಹ ಈ ವಾರದಲ್ಲಿ ಬರುತ್ತದೆ. ಗುರು ಗ್ರಹದ ಬದಲಾವಣೆಯು ಈ ವಾರದ ಪ್ರಮುಖ ಆಕರ್ಷಣೆಯಾಗಿದೆ. ಶನಿ ಮೀನ ರಾಶಿಯಲ್ಲಿ, ಕುಜ ಮೇಷದಲ್ಲಿ, ರವಿ ವೃಷಭದಲ್ಲಿ, ಬುಧ, ಶುಕ್ರ, ಗುರು ಮಿಥುನ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಕೇತು ಸಿಂಹದಲ್ಲಿ ಮತ್ತು ರಾಹು ಕುಂಭದಲ್ಲಿ ಸಂಚರಿಸುತ್ತಾನೆ.

ಪ್ರತಿಯೊಂದು ರಾಶಿಗೂ ಅನುಗುಣವಾಗಿ ಶುಭಫಲಗಳು, ಆರ್ಥಿಕ ಪ್ರಗತಿ, ವೈವಾಹಿಕ ವಿಷಯಗಳು, ಆರೋಗ್ಯದ ಬಗ್ಗೆ ಎಚ್ಚರಿಕೆ, ವೃತ್ತಿಜೀವನದ ಬದಲಾವಣೆಗಳು ಮತ್ತು ಇಷ್ಟದೇವತಾ ಆರಾಧನೆಯ ಬಗ್ಗೆ ಗುರೂಜಿ ಅವರು ಮಾರ್ಗದರ್ಶನ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Hindu Rituals: ಅಧಿಕ ಮಾಸದ ಹುಣ್ಣಿಮೆ; ಆರ್ಥಿಕ ಸಮೃದ್ಧಿ ಮತ್ತು ಯಶಸ್ಸಿಗಾಗಿ ವಿಶೇಷ ಆಚರಣೆ ಇಲ್ಲಿದೆ

ಹಿಂದೂ ಸಂಪ್ರದಾಯದಲ್ಲಿ ಅಧಿಕ ಮಾಸಕ್ಕೆ ಅತ್ಯಂತ ವಿಶೇಷವಾದ ಆಧ್ಯಾತ್ಮಿಕ ಮಹತ್ವವಿದೆ. ಈ ಮಾಸವನ್ನು ವಿಷ್ಣುವಿಗೆ ಸಮರ್ಪಿತವಾದ ‘ಪುರುಷೋತ್ತಮ ಮಾಸ’ ಎಂದೂ ಕರೆಯಲಾಗುತ್ತದೆ. ಭಕ್ತರ ನಂಬಿಕೆಯ ಪ್ರಕಾರ, ಅಧಿಕ ಮಾಸದಲ್ಲಿ ಮಾಡುವ ಪೂಜೆ, ಜಪ ಮತ್ತು ದಾನಗಳು ಸಾಮಾನ್ಯ ದಿನಗಳಿಗಿಂತ ನೂರು ಪಟ್ಟು ಹೆಚ್ಚು ಪುಣ್ಯ ಫಲಗಳನ್ನು ನೀಡುತ್ತವೆ ಎಂಬ ನಂಬಿಕೆಯಿದೆ.

ವಿಶೇಷವಾಗಿ, ಈ ಮಾಸದ ಹುಣ್ಣಿಮೆಯ ದಿನದಂದು ಲಕ್ಷ್ಮಿ-ನಾರಾಯಣರನ್ನು ಪೂಜಿಸುವುದರಿಂದ ಆರ್ಥಿಕ ಸ್ಥಿರತೆ ಮತ್ತು ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ಲಕ್ಷ್ಮಿ ದೇವಿಯೊಂದಿಗೆ ಸಮುದ್ರದ ಚಿಪ್ಪುಗಳು (ಕವಡೆಗಳು) ಸಹ ಜನಿಸಿದವು ಎಂಬ ಪೌರಾಣಿಕ ಹಿನ್ನೆಲೆ ಇರುವುದರಿಂದ, ಲಕ್ಷ್ಮಿ ಪೂಜೆಯಲ್ಲಿ ಚಿಪ್ಪುಗಳಿಗೆ ವಿಶೇಷ ಸ್ಥಾನವಿದೆ.

ನಿಮ್ಮ ಜೀವನದಲ್ಲಿ ಆರ್ಥಿಕ ಪ್ರಗತಿ, ಉದ್ಯೋಗ ಯಶಸ್ಸು ಮತ್ತು ಧನಾತ್ಮಕ ಶಕ್ತಿಯನ್ನು ಆಕರ್ಷಿಸಲು ಈ ಹುಣ್ಣಿಮೆಯಂದು ಮಾಡಬಹುದಾದ ಕೆಲವು ಸರಳ ಮತ್ತು ಪರಿಣಾಮಕಾರಿ ಆಚರಣೆಗಳು ಇಲ್ಲಿವೆ:

ಧನ ಲಾಭಕ್ಕಾಗಿ 11 ಕವಡೆಗಳ ಪೂಜೆ:

ಮನೆಯಲ್ಲಿ ಆರ್ಥಿಕ ಸಮಸ್ಯೆಗಳು ದೂರವಾಗಿ, ಲಕ್ಷ್ಮಿ ದೇವಿಯ ಕೃಪೆ ಸದಾ ಇರಲು ಈ ಕ್ರಮವನ್ನು ಅನುಸರಿಸಿ. ಹುಣ್ಣಿಮೆಯ ದಿನದಂದು ಮಹಾಲಕ್ಷ್ಮಿ ಪೂಜೆಯ ಸಮಯದಲ್ಲಿ 11 ಕವಡೆಗಳನ್ನು ದೇವಿಯ ಪಾದಗಳ ಬಳಿ ಇಟ್ಟು ಭಕ್ತಿಯಿಂದ ಪೂಜಿಸಿ. ಪೂಜೆಯ ನಂತರ ಅವುಗಳನ್ನು ಒಂದು ಕೆಂಪು ಅಥವಾ ಹಳದಿ ಬಟ್ಟೆಯಲ್ಲಿ ಕಟ್ಟಿ, ರಾತ್ರಿಯಿಡೀ ಪೂಜಾ ಮಂಟಪದಲ್ಲೇ ಇರಲು ಬಿಡಿ. ಮರುದಿನ ಬೆಳಗ್ಗೆ ಆ ಬಟ್ಟೆಯ ಗಂಟನ್ನು ನಿಮ್ಮ ಮನೆಯ ತಜೋರಿ (ಬೀರು) ಅಥವಾ ಹಣ ಇಡುವ ಸ್ಥಳದಲ್ಲಿ ಸುರಕ್ಷಿತವಾಗಿ ಇಡಿ.

ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಗೆ 7 ಕವಡೆ ರಹಸ್ಯ:

ನಿಮ್ಮ ವೃತ್ತಿಜೀವನ ಅಥವಾ ವ್ಯಾಪಾರದಲ್ಲಿ ಅಡೆತಡೆಗಳಿದ್ದರೆ ಮತ್ತು ನಿರೀಕ್ಷಿತ ಲಾಭ ಸಿಗುತ್ತಿಲ್ಲವೆಂದಾದರೆ ಈ ಆಚರಣೆ ಮಾಡಿ. ಹುಣ್ಣಿಮೆಯಂದು 7 ಕವಡೆಗಳನ್ನು ತೆಗೆದುಕೊಂಡು, ಕೆಳಗಿನ ಮಹಾಲಕ್ಷ್ಮಿ ಮಂತ್ರವನ್ನು ಪಠಿಸುತ್ತಾ ಪೂಜಿಸಿ. “ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ ಸಿದ್ಧ ಲಕ್ಷ್ಮ್ಯೈ ನಮಃ”. ಪೂಜೆಯ ನಂತರ, ವ್ಯಾಪಾರಿಗಳು ಈ ಕವಡೆಗಳನ್ನು ತಮ್ಮ ಗಲ್ಲಾಪೆಟ್ಟಿಗೆ (ಕ್ಯಾಶ್ ಬಾಕ್ಸ್) ಅಥವಾ ಲಾಕರ್‌ನಲ್ಲಿ ಇಡಬಹುದು. ಉದ್ಯೋಗಸ್ಥರು ಇವುಗಳನ್ನು ಹಳದಿ ಬಟ್ಟೆಯಲ್ಲಿ ಕಟ್ಟಿ ತಮ್ಮ ಆಫೀಸ್ ಟೇಬಲ್‌ನ ಡ್ರಾಯರ್‌ನಲ್ಲಿ ಇಟ್ಟುಕೊಳ್ಳಬಹುದು. ಇದು ಉದ್ಯೋಗದಲ್ಲಿ ಬಡ್ತಿ ಮತ್ತು ಯಶಸ್ಸಿನ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.

ನಕಾರಾತ್ಮಕತೆ ದೂರ ಮಾಡಲು ಮುಖ್ಯ ದ್ವಾರದಲ್ಲಿ 9 ಕವಡೆಗಳು:

ಮನೆಯಲ್ಲಿ ಸದಾ ಜಗಳ, ಅಶಾಂತಿ ಅಥವಾ ನಕಾರಾತ್ಮಕ ವಾತಾವರಣ ಇದೆ ಅನಿಸಿದರೆ ಈ ವಾಸ್ತು ಪರಿಹಾರವನ್ನು ಪ್ರಯತ್ನಿಸಿ. 9 ಕವಡೆಗಳನ್ನು ಅರಿಶಿನ ಮತ್ತು ಕುಂಕುಮ ಬೆರೆಸಿದ ನೀರಿನಲ್ಲಿ ಸ್ವಲ್ಪ ಸಮಯ ನೆನೆಸಿಡಿ. ನಂತರ ಅವುಗಳನ್ನು ಒಂದು ಶುದ್ಧವಾದ ಬಿಳಿ ಬಟ್ಟೆಯಲ್ಲಿ ಕಟ್ಟಿ, ಮನೆಯ ಮುಖ್ಯ ಪ್ರವೇಶದ್ವಾರದ (Main Door) ಮೇಲೆ ನೇತುಹಾಕಿ. ಇದು ಮನೆಗೆ ಬರುವ ನಕಾರಾತ್ಮಕ ಶಕ್ತಿಯನ್ನು ತಡೆದು, ಕುಟುಂಬ ಸದಸ್ಯರ ನಡುವೆ ಪ್ರೀತಿ ಮತ್ತು ಬಾಂಧವ್ಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಸಂಪತ್ತನ್ನು ಆಕರ್ಷಿಸಲು ‘ಕಲಶ ಪೂಜೆ’:

ಹುಣ್ಣಿಮೆಯ ಸಂಜೆ, ಮನೆಯ ಈಶಾನ್ಯ (North-East) ದಿಕ್ಕಿನಲ್ಲಿ ಒಂದು ಸಣ್ಣ ಮಣ್ಣಿನ ಪಾತ್ರೆ ಅಥವಾ ಕಲಶವನ್ನು ಇರಿಸಿ. ಅದರಲ್ಲಿ 11 ಕವಡೆಗಳು, ಸ್ವಲ್ಪ ಅಕ್ಕಿ (ಅಕ್ಷತೆ), ಒಂದು ಅರಿಶಿನದ ಕೊಂಬು ಇದನ್ನು ಶುದ್ಧವಾದ ಜಾಗದಲ್ಲಿ ಇಡುವುದರಿಂದ, ಅದು ಮನೆಯಲ್ಲಿ ಧನಾತ್ಮಕ ಶಕ್ತಿ, ಸಂಪತ್ತು ಮತ್ತು ಸಮೃದ್ಧಿಯನ್ನು ಆಕರ್ಷಿಸುವ ಪ್ರಬಲ ಸಂಕೇತವಾಗಿ ಕೆಲಸ ಮಾಡುತ್ತದೆ.

ಲಕ್ಷ್ಮಿ-ನಾರಾಯಣರ ಜಂಟಿ ಆರಾಧನೆ:

ಹುಣ್ಣಿಮೆಯ ದಿನದಂದು ಲಕ್ಷ್ಮಿ ಮತ್ತು ನಾರಾಯಣ ದೇವರಿಗೆ ಬಿಳಿ ಬಣ್ಣದ ಹೂವುಗಳನ್ನು ಅರ್ಪಿಸಿ ಪೂಜಿಸುವುದು ಅತ್ಯಂತ ಶ್ರೇಷ್ಠ. ಪೂಜೆಯ ನಂತರ ದೇವರಿಗೆ ಬಿಳಿ ಬಣ್ಣದ ಸಿಹಿ ಪದಾರ್ಥಗಳನ್ನು (ಖೀರ್ ಅಥವಾ ಹಾಲಿನ ಸಿಹಿ ತಿಂಡಿ) ನೈವೇದ್ಯವಾಗಿ ಅರ್ಪಿಸಿ. ಈ ಪ್ರಸಾದವನ್ನು ಕುಟುಂಬದವರೆಲ್ಲರೂ ಒಟ್ಟಿಗೆ ಹಂಚಿಕೊಂಡು ಸೇವಿಸುವುದರಿಂದ ಮನೆಯಲ್ಲಿ ಏಕತೆ, ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ.

ಗಮನಿಸಿ: ಯಾವುದೇ ಆಚರಣೆಯನ್ನು ಮಾಡುವಾಗ ಧನಲಾಭದ ಆಸೆಗಿಂತಲೂ, ದೇವಿಯ ಮೇಲಿನ ಸಂಪೂರ್ಣ ಭಕ್ತಿ ಮತ್ತು ಸಕಾರಾತ್ಮಕ ನಂಬಿಕೆ ಮುಖ್ಯವಾಗಿರುತ್ತದೆ. ನಿಮ್ಮ ನಂಬಿಕೆಯೇ ನಿಮ್ಮ ಯಶಸ್ಸಿನ ಮೊದಲ ಹೆಜ್ಜೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಕನಸಿನ ಮನೆ ಮತ್ತು ವಾಹನ ಖರೀದಿಗೆ ಅಡೆತಡೆಯೇ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕಾರಣ ತಿಳಿಯಿರಿ

ಮನೆ ಮತ್ತು ಕಾರು ಹೊಂದುವ ಯೋಗImage Credit source: Pinterest

ಪ್ರತಿಯೊಬ್ಬರಿಗೂ ಇರುವ ಪ್ರಮುಖ ಆಸೆಗಳಲ್ಲಿ ಒಂದು ಮನೆಯನ್ನು ಹೊಂದುವುದು ಮತ್ತು ಒಂದು ಕಾರನ್ನು ಹೊಂದುವುದು. ಅನೇಕ ಜನರು ಈ ಕನಸನ್ನು ನನಸು ಮಾಡಲು ಕಠಿಣ ಪರಿಶ್ರಮ ಪಡುತ್ತಾರೆ. ಆದರೂ ಸಹ, ಕೆಲವೊಮ್ಮೆ ಅವರು ತಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುವುದಿಲ್ಲ. ಇದಕ್ಕೆ ಕಾರಣಗಳು ಮತ್ತು ಪರಿಹಾರಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಜ್ಯೋತಿಷ್ಯದ ಪ್ರಕಾರ, ಮನುಷ್ಯ ಆಶಾಜೀವಿ. “ಋಣಾನುಬಂಧ ರೂಪೇಣ ಪಶು ಪತ್ನಿ ಸುತ ಆಲಯಹ” ಎಂಬುದು ಪ್ರಚಲಿತ ವಾಕ್ಯ. ಮನೆ ಮತ್ತು ಕಾರು ಹೊಂದುವ ಯೋಗವು ರಾಶಿ ಚಕ್ರದಲ್ಲಿ ನಾಲ್ಕನೇ ಮನೆಯ ಸ್ಥಿತಿಗತಿಗಳ ಮೇಲೆ ಅವಲಂಬಿತವಾಗಿರುತ್ತದೆ. ಮನೆ ಮತ್ತು ವಾಹನಕ್ಕೆ ಸಂಬಂಧಿಸಿದಂತೆ ನಾಲ್ಕನೇ ಮನೆಯನ್ನು ಪರಿಗಣಿಸಲಾಗುತ್ತದೆ. ಈ ಮನೆಯಲ್ಲಿರುವ ಗ್ರಹಗಳು, ಅದರ ದೃಷ್ಟಿ, ಅಧಿಪತಿ ಮತ್ತು ಕಾರಕತ್ವ ಹೊಂದಿರುವ ಗ್ರಹಗಳು ವ್ಯಕ್ತಿಯ ಅದೃಷ್ಟದ ಮೇಲೆ ಪ್ರಭಾವ ಬೀರುತ್ತವೆ. ಮಂಗಳ ಗ್ರಹವು ಭೂಮಿ, ಆಸ್ತಿ ಮತ್ತು ಸ್ಥಿರಾಸ್ತಿಗಳಿಗೆ ಕಾರಕವಾಗಿದ್ದರೆ, ಶುಕ್ರ ಗ್ರಹವು ವಾಹನ, ಐಷಾರಾಮಿ ಜೀವನ, ವಸ್ತ್ರಗಳು ಮತ್ತು ಆಭರಣಗಳಿಗೆ ಕಾರಕವಾಗಿದೆ.

ಕೆಲವರಿಗೆ ಮನೆ ಮತ್ತು ಕಾರು ಎರಡೂ ಇದ್ದರೂ, ಕೆಲವೇ ದಿನಗಳಲ್ಲಿ ಅವು ಕೈ ತಪ್ಪಿ ಹೋಗುವ ಅನುಭವ ಆಗಿರುತ್ತದೆ. ಇನ್ನು ಕೆಲವರಿಗೆ ಎಷ್ಟೇ ದುಡಿದರೂ ಮನೆ ಕಟ್ಟಿಸಿಕೊಳ್ಳಲು ಅಥವಾ ಕಾರು ಖರೀದಿಸಲು ಸಾಧ್ಯವಾಗುವುದಿಲ್ಲ. ಇದಕ್ಕೆ ಒಂದು ಪ್ರಮುಖ ಕಾರಣವೆಂದರೆ ನಾಲ್ಕನೇ ಮನೆಯ ಅಧಿಪತಿ (ಚತುರ್ಥೇಶ) ದುರ್ಬಲನಾಗಿರುವುದು, ನೀಚ ಸ್ಥಿತಿಯಲ್ಲಿ ಇರುವುದು, ದುಷ್ಟ ಸ್ಥಾನಗಳಲ್ಲಿರುವುದು ಅಥವಾ ದುಷ್ಟ ಗ್ರಹಗಳ ಜೊತೆ ಸೇರಿಕೊಂಡಿರುವುದು. ಇಂತಹ ಗ್ರಹಗತಿಗಳು ಮನೆ-ಕಾರು ಯೋಗಕ್ಕೆ ಅಡ್ಡಿಯಾಗುತ್ತವೆ.

ಇದನ್ನೂ ಓದಿ: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ!

ಆದರೆ ಇದಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರಗಳು ಸೂಚಿಸಲ್ಪಟ್ಟಿವೆ. ಈ ಸುಖಸ್ಥಾನದಲ್ಲಿರುವ ಗ್ರಹಗಳು ಮತ್ತು ಅದರ ದೃಷ್ಟಿಯನ್ನು ಗಮನಿಸಿ, ಕೆಲವು ಪರಿಹಾರಗಳನ್ನು ಅನುಸರಿಸಬಹುದು. ಅವುಗಳಲ್ಲಿ ಪ್ರಮುಖವಾದವುಗಳು:

  • ಹಿರಿಯರಿಗೆ ಗೌರವ: ತಾಯಿ ಅಥವಾ ತಾಯಿಗೆ ಸಮಾನರಾದ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವುದು, ವಿಶೇಷವಾಗಿ ಪ್ರತಿ ಮಂಗಳವಾರದಂದು ಹಿರಿಯರಿಗೆ ಸಹಾಯ ಮಾಡುವುದು ಸ್ಥಿರತೆಗೆ ಕಾರಣವಾಗುತ್ತದೆ.
  • ಗಣಪತಿ ಆರಾಧನೆ: ಬುಧವಾರದಂದು ತಪ್ಪದೆ ಗಣಪತಿಗೆ ದುರ್ವೆಯನ್ನು ಅರ್ಪಿಸುವುದು. ಐದು ಬುಧವಾರಗಳ ಕಾಲ ಗಣಪತಿಗೆ ಬೆಲ್ಲ ಮತ್ತು ತುಪ್ಪವನ್ನು ನೈವೇದ್ಯವಾಗಿ ಅರ್ಪಿಸುವುದರಿಂದ ಮನೆ ಯೋಗ ಪ್ರಾಪ್ತಿಯಾಗುವ ಸಾಧ್ಯತೆ ಇರುತ್ತದೆ.
  • ಮಂಗಳವಾರದ ದರ್ಶನ: ಮಂಗಳವಾರದಂದು ಹನುಮಂತ ಅಥವಾ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಮಾಡುವುದು ಶುಭ ಫಲಗಳನ್ನು ನೀಡುತ್ತದೆ.
  • ಮಾನಸಿಕ ಸ್ಥಿರತೆ ಮತ್ತು ಸದ್ಗುಣ: ಮನಸ್ಸಿನಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಮತ್ತು “ಆಚಾರವೇ ಸ್ವರ್ಗ, ಅನಾಚಾರವೇ ನರಕ”, “ಧರ್ಮೋ ರಕ್ಷತಿ ರಕ್ಷಿತಹ” ಎಂಬ ತತ್ವದಂತೆ ಧರ್ಮ ಮಾರ್ಗದಲ್ಲಿ ನಡೆದುಕೊಳ್ಳುವುದು ಮನೆ ಮತ್ತು ಕಾರು ಹೊಂದುವ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫೈನಲ್ ಪಂದ್ಯಕ್ಕೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಗುಜರಾತ್ ಟೈಟಾನ್ಸ್​!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್​ ತಂಡವು ಭಾರೀ ಸಂಕಷ್ಟಕ್ಕೆ ಸಿಲುಕಿದೆ. ವಾಯುವ್ಯ ಭಾರತದಲ್ಲಿ ಎದ್ದಿರುವ ಧೂಳಿನ ಬಿರುಗಾಗಿ ಹಾಗೂ ಭಾರೀ ಮಳೆಯಿಂದಾಗಿ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆಯ ವಿಮಾನ ಪ್ರಯಾಣ ಗಂಟೆಗಟ್ಟಲೆ ವಿಳಂಬವಾಗಿದೆ. ಇದರಿಂದ ಶನಿವಾರದ ಅಭ್ಯಾಸವನ್ನು ತಪ್ಪಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯಕ್ಕೆ 24 ಗಂಟೆಗಳಿಗಿಂತ ಕಡಿಮೆ ಸಮಯ ಬಾಕಿ ಇರುವಾಗ ಗುಜರಾತ್ ಟೈಟಾನ್ಸ್ ಅಹಮದಾಬಾದ್​ಗೆ ಬಂದಿಳಿದಿದೆ.

ಎಷ್ಟು ಗಂಟೆಗೆ ಬರಬೇಕಿತ್ತು?

ಶುಕ್ರವಾರ ನಡೆದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ನ್ಯೂ ಚಂಡೀಗಢ್​ನಿಂದ ಶನಿವಾರ ಮಧ್ಯಾಹ್ನದೊಳಗೆ ಅಹಮದಾಬಾದ್​ಗೆ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಬಂದಿಳಿಯಬೇಕಿತ್ತು. ಆದರೆ ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಆವರಿಸಿದ ಭೀಕರ ಚಂಡಮಾರುತ ಮತ್ತು ಮಳೆಯಿಂದಾಗಿ ವಿಮಾನದ ಟೇಕ್ ಆಫ್​ ಅನುಮತಿಯನ್ನು ನಿರಾಕರಿಸಲಾಯಿತು.

ಹೀಗಾಗಿ ಗುಜರಾತ್ ಟೈಟಾನ್ಸ್ ಆಟಗಾರರು ನ್ಯೂ ಚಂಡೀಗಢ್​ನಲ್ಲೇ ಉಳಿದಿದ್ದರು. ಅಲ್ಲದೆ ಸುದೀರ್ಘ ಕಾಯುವಿಕೆಯ ನಂತರ ಶನಿವಾರ ತಡರಾತ್ರಿ (10 ಗಂಟೆಯ ನಂತರ) ಗುಜರಾತ್ ಟೈಟಾನ್ಸ್ ಆಟಗಾರರು ಅಹಮದಾಬಾದ್​ಗೆ ಬಂದಿಳಿದಿದ್ದಾರೆ. ಅಲ್ಲದೆ ಅಲ್ಲಿಂದ ಟೀಮ್ ಹೊಟೇಲ್ ತಲುಪುವಷ್ಟರಲ್ಲಿ ಮಧ್ಯ ರಾತ್ರಿಯಾಗಿತ್ತು ಎಂದು ತಿಳಿದು ಬಂದಿದೆ.

ತಂಡದ ಮೇಲೆ ಪರಿಣಾಮ:

ಗುಜರಾತ್ ಟೈಟಾನ್ಸ್ ತಂಡವು ಶನಿವಾರ ಮಧ್ಯರಾತ್ರಿ ಅಹಮದಾಬಾದ್​ ತಲುಪಿದ ಕಾರಣ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ. ಇದು ತಂಡದ ಸಿದ್ಧತೆಯ ಮೇಲೆ ಪರಿಣಾಮ ಬೀರಲಿದೆ. ಏಕೆಂದರೆ ಕಳೆದ ಮಧ್ಯ ರಾತ್ರಿ ಅಹಮದಾಬಾದ್​ಗೆ ತಲುಪಿರುವ ಆಟಗಾರರು ಹೆಚ್ಚಿನ ಸಮಯ ವಿಶ್ರಾಂತಿ ಪಡೆಯಲಿದ್ದಾರೆ.

ಅಲ್ಲದೆ ಇಂದು ಹೊಟೇಲ್ ರೂಮ್​ನಿಂದ ಪಂದ್ಯದ ಆರಂಭಕ್ಕೂ ಮುನ್ನ ಮೈದಾನಕ್ಕೆ ಬರಲಿದ್ದಾರೆ. ಅಂದರೆ ಫೈನಲ್ ಪಂದ್ಯಕ್ಕಾಗಿ ಹೆಚ್ಚಿನ ಅಭ್ಯಾಸ ನಡೆಸಲು ಗುಜರಾತ್ ಟೈಟಾನ್ಸ್ ತಂಡಕ್ಕೆ ಸಮಯ ಸಿಗಲ್ಲ ಎಂದೇ ಹೇಳಬಹುದು.

ಆರ್​ಸಿಬಿ ನಿರಾಳ:

ಇತ್ತ ಗುಜರಾತ್ ಟೈಟಾನ್ಸ್ ತಂಡವು ವಿಮಾನ ಪ್ರಯಾಣ ವಿಳಂಬ, ದಣಿವು ಹಾಗೂ ಅಭ್ಯಾಸ ಕೈ ತಪ್ಪಿದ ಚಿಂತೆಯಲ್ಲಿದ್ದರೆ ಅತ್ತ ಆರ್​ಸಿಬಿ ತಂಡವು ನಿರಾಳವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಕ್ವಾಲಿಫೈಯರ್ ಪಂದ್ಯ ಗೆದ್ದ ಬೆನ್ನಲ್ಲೇ ಅಹಮದಾಬಾದ್​ಗೆ ಆಗಮಿಸಿದ್ದರು.

ಆರ್​ಸಿಬಿ ತಂಡಕ್ಕೆ ಎರಡು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಸಿಕ್ಕಿದ್ದು, ಇದರ ಜೊತೆಗೆ ತಾಲೀಮು ನಡೆಸಲು ಸಾಕಷ್ಟು ಸಮಯ ಕೂಡ ದಕ್ಕಿದೆ. ಹೀಗಾಗಿ ಫೈನಲ್ ಪಂದ್ಯಕ್ಕಾಗಿ ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ.

ಇದನ್ನೂ ಓದಿ: RCB vs GT: ಯಾರೇ ಗೆದ್ದರೂ 2ನೇ ಬಾರಿ ಚಾಂಪಿಯನ್!

ಅತ್ತ ಫ್ಲೈಟ್ ಡಿಲೇಯಿಂದಾಗಿ ಗುಜರಾತ್ ಟೈಟಾನ್ಸ್ ತಂಡವು ಸಂಕಷ್ಟಕ್ಕೆ ಸಿಲುಕಿದ್ದು, ಇದಾಗ್ಯೂ ಭಾನುವಾರ ಸಂಜೆ ಮೈದಾನಕ್ಕಿಳಿಯುವ ಮೂಲಕ ಶುಭ್​ಮನ್ ಗಿಲ್ ಪಡೆ ಫೈನಲ್ ಪಂದ್ಯಕ್ಕಾಗಿ ಬೇಕಾದ ಸಿದ್ಧತೆಗಳನ್ನು ನಡೆಸುವ ನಿರೀಕ್ಷೆಯಿದೆ. ಈ ಅಲ್ಪಾವಧಿಯ ಸಿದ್ಧತೆಗಳೊಂದಿಗೆ ಗುಜರಾತ್ ಟೈಟಾನ್ಸ್ ಆರ್​ಸಿಬಿ ವಿರುದ್ಧ ಹೇಗೆ ಹೋರಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Source link

Exit mobile version