ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಭೀತಿ, ವೈದ್ಯರ ಎಚ್ಚರಿಕೆ!
ಬೆಂಗಳೂರು, ಮೇ 31: ನಗರದಲ್ಲಿ ಇತ್ತೀಚೆಗೆ ಕ್ಯಾನ್ಸರ್ (Cancer) ಕೇಸ್ಗಳು ಹೆಚ್ಚಾಗಿದ್ದು, ಬಹುತೇಕ ಕ್ಯಾನ್ಸರ್ ರೋಗಿಗಳಲ್ಲಿ ತಂಬಾಕು ಸೇವನೆ ಕಂಡುಬಂದಿದೆ. ಧೂಮಪಾನ ಹಾಗೂ ತಂಬಾಕು ಸೇವನೆಯು ಕೇವಲ ಶ್ವಾಸಕೋಶದ ಕ್ಯಾನ್ಸರ್ಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಇದು ಜಠರ, ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ), ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಹಾಗೂ ರಕ್ತದ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಬೆಂಗಳೂರಿನ ಹಿರಿಯ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ಒಟ್ಟು…