Headlines

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಭೀತಿ, ವೈದ್ಯರ ಎಚ್ಚರಿಕೆ!

ಬೆಂಗಳೂರು, ಮೇ 31: ನಗರದಲ್ಲಿ ಇತ್ತೀಚೆಗೆ ಕ್ಯಾನ್ಸರ್ (Cancer) ಕೇಸ್​ಗಳು ಹೆಚ್ಚಾಗಿದ್ದು, ಬಹುತೇಕ ಕ್ಯಾನ್ಸರ್ ರೋಗಿಗಳಲ್ಲಿ ತಂಬಾಕು ಸೇವನೆ ಕಂಡುಬಂದಿದೆ. ಧೂಮಪಾನ ಹಾಗೂ ತಂಬಾಕು ಸೇವನೆಯು ಕೇವಲ ಶ್ವಾಸಕೋಶದ ಕ್ಯಾನ್ಸರ್‌ಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಇದು ಜಠರ, ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ), ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಹಾಗೂ ರಕ್ತದ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಬೆಂಗಳೂರಿನ ಹಿರಿಯ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ಒಟ್ಟು…

Read More

ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್

ಬೆಂಗಳೂರು, ಮೇ 31: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ  ರಾಜ್ಯದ ಹಿರಿಯ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಮತ್ತು ಎಡಿಜಿಪಿ ಡಿ.ರೂಪಾ ಮೌದ್ಗಿಲ್ ಡಿಕೆಶಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಕೂಡ ಉಪಸ್ಥಿತರಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆದಿದೆ ಎನ್ನಲಾಗಿದೆ….

Read More

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, ಮೃತರ ಪೈಕಿ ಬೆಂಗಳೂರು ಮೂಲದ ಪ್ರವಾಸಿಗರೂ ಇರುವ ಶಂಕೆ

ಕಂದಕಕ್ಕೆ ಉರುಳಿರುವ ಕಾರುImage Credit source: ABP News ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಚುರಾಹ್ ಉಪವಿಭಾಗದ ಬೈರಗಢ್–ಸಚ್ ಪಾಸ್–ಕಿಲ್ಲರ್ ಮಾರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ದುರಂತದಲ್ಲಿ ಕಾರಲ್ಲಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಹಿಮದಿಂದ ಆವೃತವಾಗಿರುವ ಸಚ್ ಪಾಸ್ ಪ್ರದೇಶದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮುಖ್ಯಾಂಶಗಳು ಹಿಮಾಚಲ ಪ್ರದೇಶದ…

Read More

ರಾಜ್ ಬಿ. ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾ ಮಹಿಳಾ ವಿರೋಧಿ ಚಿತ್ರ ಅಲ್ಲ; ಸಿಕ್ತು ಸ್ಪಷ್ಟನೆ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಬಂದರ್’ (Bandar) ಕ್ರೈಮ್ ಥ್ರಿಲ್ಲರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಾಬಿ ಡಿಯೋಲ್ ಹಾಗೂ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ (Raj B Shetty) ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಿಲುಕುವ ಖ್ಯಾತ ಸೆಲೆಬ್ರಿಟಿಯೊಬ್ಬನ ಜೀವನದ ಏರುಪೇರುಗಳನ್ನು ಹಾಗೂ ಡಿಜಿಟಲ್ ಯುಗದಲ್ಲಿ ಸತ್ಯ ಮತ್ತು ನ್ಯಾಯದ ಸುತ್ತ ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಈ ಸಿನಿಮಾ ಬಿಂಬಿಸುತ್ತದೆ. ಆದರೆ ಈ ಚಿತ್ರವು…

Read More

ಮಂತ್ರಾಲಯದ ಬಳಿ ಘೋರ ದುರಂತ: ತುಂಗಭದ್ರಾ ನದಿಗೆ ಈಜಲು ಹೋದ ಐವರು ನೀರುಪಾಲು

ಮೃತದೇಹಗಳಿಗಾಗಿ ಶೋಧImage Credit source: Tv9 Kannada ರಾಯಚೂರು, ಮೇ 31: ರಾಜ್ಯದಲ್ಲಿ ಜಲ ದುರಂತಗಳು ಮುಂದುವರಿದಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಖ್ಯಾಂಶಗಳು ಮಂತ್ರಾಲಯ ಬಳಿಯ ನದಿಯಲ್ಲಿ ಘೋರ ದುರಂತ ಈಜಲು ತೆರಳಿದ್ದ ಐವರು ತುಂಗಭದ್ರಾ…

Read More

ಫೈನಲ್​ ಮ್ಯಾಚ್​ಗೂ ಮುನ್ನವೇ ಆರೆಂಜ್ ಕ್ಯಾಪ್ ರೇಸ್​ನಿಂದ ವಿರಾಟ್ ಕೊಹ್ಲಿ ಔಟ್!

IPL 2026: ಐಪಿಎಲ್​ 2026ರ ಆರೆಂಜ್ ಕ್ಯಾಪ್ ರೇಸ್​ನಿಂದ ವಿರಾಟ್ ಕೊಹ್ಲಿ (Virat Kohli)  ಹೊರಬಿದ್ದಿದ್ದಾರೆ. ಅದು ಕೂಡ ಫೈನಲ್ ಪಂದ್ಯಕ್ಕೂ ಮುನ್ನ!, ಅಂದರೆ ಕೊನೆಯ ಮ್ಯಾಚ್​ನಲ್ಲಿ ಕೊಹ್ಲಿ ಆರ್ಭಟಿಸಿದರೂ ಆರೆಂಜ್ ಕ್ಯಾಪ್ ದಕ್ಕಿಸಿಕೊಳ್ಳುವುದು ಕಷ್ಟಸಾಧ್ಯ. ಏಕೆಂದರೆ ವಿರಾಟ್ ಕೊಹ್ಲಿ ಬರೋಬ್ಬರಿ 176 ರನ್​ಗಳಿಂದ ಹಿಂದಿದ್ದಾರೆ.  (PC: IPL) ಈ ಬಾರಿಯ ಐಪಿಎಲ್​ನಲ್ಲಿ 15 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಈವರೆಗೆ 365 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಬರೋಬ್ಬರಿ 600 ರನ್​ಗಳು. ಇನ್ನು ಫೈನಲ್…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಜೂನ್ 1 ರಿಂದ 7ರ ವರೆಗಿನ ವಾರ ಭವಿಷ್ಯ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಜೂನ್ 1 ರಿಂದ ಜೂನ್ 7, 2026 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ತಿಥಿಗಳ ಮಹತ್ವ, ಮತ್ತು ದಿನಗಳ ವಿಶೇಷಗಳ ಕುರಿತು ವಿವರಣೆ ನೀಡಲಾಗಿದೆ. ಈ ವಾರದಲ್ಲಿ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಗ್ರೀಷ್ಮ ಋತು ಇರಲಿದ್ದು, ಪಾಡ್ಯದಿಂದ ಸಪ್ತಮಿ ತಿಥಿಗಳ ಮಹತ್ವವನ್ನು ಹೇಳಲಾಗಿದೆ. ಸಂಕಷ್ಟ ಚತುರ್ಥಿ, ಕಾಂಚಿ ವರದರಾಜ ಸ್ವಾಮಿಗಳ ರಥೋತ್ಸವ,…

Read More

Hindu Rituals: ಅಧಿಕ ಮಾಸದ ಹುಣ್ಣಿಮೆ; ಆರ್ಥಿಕ ಸಮೃದ್ಧಿ ಮತ್ತು ಯಶಸ್ಸಿಗಾಗಿ ವಿಶೇಷ ಆಚರಣೆ ಇಲ್ಲಿದೆ

ಹಿಂದೂ ಸಂಪ್ರದಾಯದಲ್ಲಿ ಅಧಿಕ ಮಾಸಕ್ಕೆ ಅತ್ಯಂತ ವಿಶೇಷವಾದ ಆಧ್ಯಾತ್ಮಿಕ ಮಹತ್ವವಿದೆ. ಈ ಮಾಸವನ್ನು ವಿಷ್ಣುವಿಗೆ ಸಮರ್ಪಿತವಾದ ‘ಪುರುಷೋತ್ತಮ ಮಾಸ’ ಎಂದೂ ಕರೆಯಲಾಗುತ್ತದೆ. ಭಕ್ತರ ನಂಬಿಕೆಯ ಪ್ರಕಾರ, ಅಧಿಕ ಮಾಸದಲ್ಲಿ ಮಾಡುವ ಪೂಜೆ, ಜಪ ಮತ್ತು ದಾನಗಳು ಸಾಮಾನ್ಯ ದಿನಗಳಿಗಿಂತ ನೂರು ಪಟ್ಟು ಹೆಚ್ಚು ಪುಣ್ಯ ಫಲಗಳನ್ನು ನೀಡುತ್ತವೆ ಎಂಬ ನಂಬಿಕೆಯಿದೆ. ವಿಶೇಷವಾಗಿ, ಈ ಮಾಸದ ಹುಣ್ಣಿಮೆಯ ದಿನದಂದು ಲಕ್ಷ್ಮಿ-ನಾರಾಯಣರನ್ನು ಪೂಜಿಸುವುದರಿಂದ ಆರ್ಥಿಕ ಸ್ಥಿರತೆ ಮತ್ತು ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ಲಕ್ಷ್ಮಿ ದೇವಿಯೊಂದಿಗೆ ಸಮುದ್ರದ…

Read More

Daily Devotional: ಕನಸಿನ ಮನೆ ಮತ್ತು ವಾಹನ ಖರೀದಿಗೆ ಅಡೆತಡೆಯೇ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕಾರಣ ತಿಳಿಯಿರಿ

ಮನೆ ಮತ್ತು ಕಾರು ಹೊಂದುವ ಯೋಗImage Credit source: Pinterest ಪ್ರತಿಯೊಬ್ಬರಿಗೂ ಇರುವ ಪ್ರಮುಖ ಆಸೆಗಳಲ್ಲಿ ಒಂದು ಮನೆಯನ್ನು ಹೊಂದುವುದು ಮತ್ತು ಒಂದು ಕಾರನ್ನು ಹೊಂದುವುದು. ಅನೇಕ ಜನರು ಈ ಕನಸನ್ನು ನನಸು ಮಾಡಲು ಕಠಿಣ ಪರಿಶ್ರಮ ಪಡುತ್ತಾರೆ. ಆದರೂ ಸಹ, ಕೆಲವೊಮ್ಮೆ ಅವರು ತಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುವುದಿಲ್ಲ. ಇದಕ್ಕೆ ಕಾರಣಗಳು ಮತ್ತು ಪರಿಹಾರಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ….

Read More

ಫೈನಲ್ ಪಂದ್ಯಕ್ಕೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಗುಜರಾತ್ ಟೈಟಾನ್ಸ್​!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್​ ತಂಡವು ಭಾರೀ ಸಂಕಷ್ಟಕ್ಕೆ ಸಿಲುಕಿದೆ. ವಾಯುವ್ಯ ಭಾರತದಲ್ಲಿ ಎದ್ದಿರುವ ಧೂಳಿನ ಬಿರುಗಾಗಿ ಹಾಗೂ ಭಾರೀ ಮಳೆಯಿಂದಾಗಿ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆಯ ವಿಮಾನ ಪ್ರಯಾಣ ಗಂಟೆಗಟ್ಟಲೆ ವಿಳಂಬವಾಗಿದೆ. ಇದರಿಂದ ಶನಿವಾರದ ಅಭ್ಯಾಸವನ್ನು ತಪ್ಪಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯಕ್ಕೆ 24 ಗಂಟೆಗಳಿಗಿಂತ ಕಡಿಮೆ ಸಮಯ ಬಾಕಿ ಇರುವಾಗ ಗುಜರಾತ್ ಟೈಟಾನ್ಸ್ ಅಹಮದಾಬಾದ್​ಗೆ ಬಂದಿಳಿದಿದೆ. ಎಷ್ಟು ಗಂಟೆಗೆ ಬರಬೇಕಿತ್ತು? ಶುಕ್ರವಾರ ನಡೆದ ದ್ವಿತೀಯ…

Read More