Headlines

Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 31, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತುವಿನಲ್ಲಿ ಬರುವ ಈ ದಿನ ಹುಣ್ಣಿಮೆ ಹಾಗೂ ಅನುರಾಧ ನಕ್ಷತ್ರವನ್ನು ಒಳಗೊಂಡಿದೆ. ಇಂದು ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಈ ದಿನದ ರಾಹುಕಾಲ ಸಂಜೆ 5:04 ರಿಂದ 6:40 ರವರೆಗೆ…

Read More

Horoscope Today 31 May: ಇಂದು ಈ ರಾಶಿಯವರಿಂದ ಬಾರದ ಸಮಯಕ್ಕೆ ವ್ಯಥೆ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಪರಿಘ, ಕರಣ : ಬವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ನಟ ಶಿವರಾಜ್ ಕುಮಾರ್ ಸಹ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ರಾಮ್ ಚರಣ್ ಪಾತ್ರಕ್ಕೆ ಕುಸ್ತಿ ಕಲಿಸುವ ಗುರುವಿನ ಪಾತ್ರ ಶಿವರಾಜ್ ಕುಮಾರ್ ಅವರದ್ದು. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ರಾಮ್ ಚರಣ್, ಶಿವರಾಜ್ ಕುಮಾರ್ ಅವರೊಟ್ಟಿಗೆ ಸೇರಿ ಸಿನಿಮಾ ಪ್ರಚಾರ ಮಾಡಿದರು. ಈ ವೇಳೆ ಅನುಶ್ರೀ ಎದುರು ಸಂದರ್ಶನದಲ್ಲಿ ರಾಮ್ ಚರಣ್ ಅವರು, ಶಿವಣ್ಣನ ರೀತಿ ಮಚ್ಚು ಹಿಡಿದು ಶಿವಣ್ಣನ…

Read More

IPL 2026 Final: ಫೈನಲ್ ಪಂದ್ಯ ರದ್ದಾದರೆ ಯಾರಿಗೆ ಸಿಗಲಿದೆ ಟ್ರೋಫಿ?

ಐಪಿಎಲ್ 2026 (IPL 2026) ರ ಚಾಂಪಿಯನ್‌ ಪಟ್ಟಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳು ಸೆಣಸಲಿವೆ. ಮೇ 31 ರ ಭಾನುವಾರದಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಈ ಫೈನಲ್ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಎರಡೂ ತಂಡಗಳು ಸೀಸನ್ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿ, ಚಾಂಪಿಯನ್ ಆಗುವತ್ತ ಅಂತಿಮ ಹೆಜ್ಜೆ ಇಟ್ಟಿವೆ. ಆದರೆ ಫೈನಲ್ ಪಂದ್ಯದ ದಿನದಂದು ಮಳೆ ಬಂದು ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಅಥವಾ ಇತರೆ ಕಾರಣದಿಂದಾಗಿ ಪಂದ್ಯ…

Read More

ಪ್ರಿಯ ಶಿವಕುಮಾರ್..ಚುನಾವಣೆಯಲ್ಲಿ ಸೋಲಬಹುದು, ಸೈದ್ಧಾಂತಿಕವಾಗಿ ಸೋಲಬೇಡಿ: ಡಿಕೆಶಿಗೆ ಸಿದ್ದರಾಮಯ್ಯ ಭಾವುಕ ಪತ್ರ

ಬೆಂಗಳೂರು, (ಮೇ 30): ಡಿಕೆ ಶಿವಕುಮಾರ್ (dk shivakumar) ಅವರು ಇಂದು (ಮೇ 30) ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಜೂನ್ 3 ಸಂಜೆ 4.5ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಸಿದ್ದರಾಮಯ್ಯ (siddaramaiah), ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು ತಿಳಿಸುತ್ತಾ ಭಾವನಾತ್ಮಕ ಪತ್ರವೊಂದು ಬರೆದಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು 2ನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ…

Read More

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್​ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್​ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ. ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್​ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು…

Read More

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಬೆಂಗಳೂರು, (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ…

Read More

ಇಂಧನ ದರ ಏರಿಕೆ ಎಫೆಕ್ಟ್​​: ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ‘ಇವಿ’ ವಾಹನಗಳ ಧಮಾಕಾ!

ಬೆಂಗಳೂರು, ಮೇ 30: ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಮತ್ತು ಎಲ್‌ಪಿಜಿ ದರಗಳು ನಿರಂತರವಾಗಿ ಏರಿಕೆ ಆಗುತ್ತಿರುವುದರಿಂದ ಕಂಗೆಟ್ಟಿರುವ ಬೆಂಗಳೂರಿಗರು (Bangaluru) ಈಗ ಇವಿ ಅಂದರೆ ಎಲೆಕ್ಟ್ರಿಕ್ ವಾಹನಗಳ (Electric Vehicles) ಮೊರೆ ಹೋಗುತ್ತಿದ್ದಾರೆ. ನಗರದಲ್ಲಿ ಇವಿ ವಾಹನಗಳಿಗೆ ಭರ್ಜರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಪ್ರತಿ ತಿಂಗಳು ನೂರಾರು ವಾಹನಗಳು ಮಾರಾಟವಾಗುತ್ತಿವೆ. ಇತ್ತ ವಾಹನ ಮಾಲೀಕರು ಮತ್ತೆ ಡೀಸೆಲ್ ದರ ಹೆಚ್ಚಾಗುತ್ತದೆ, ಹಾಗಾಗಿ ಇವಿ ಮೊರೆ ಹೋಗುತ್ತಿದ್ದೇವೆ ಎನ್ನುತ್ತಿದ್ದಾರೆ. ಮುಖ್ಯಾಂಶಗಳು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕಂಗೆಟ್ಟು ಇವಿ…

Read More

ಕಾಲಿಗೆ ಬಿದ್ದ ಧೋನಿ ಪತ್ನಿ, ಗಾಬರಿಯಾದ ನಟ, ನಿಜಕ್ಕೂ ಆಗಿದ್ದೇನು?

ಎಂಎಸ್ ಧೋನಿ (MS Dhoni), ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗ. ಐಪಿಎಲ್ ಸಮಯದಲ್ಲಿ ಧೋನಿಯ ಪತ್ನಿ ಮತ್ತು ಮಗಳು ಸಹ ಕ್ರೀಡಾಂಗಣಕ್ಕೆ ಬಂದು ಧೋನಿಯ ಬೆಂಬಲಿಸುತ್ತಾರೆ. ಐಪಿಎಲ್ ವೇಳೆ ಸಾಕಷ್ಟು ಸಿನಿಮಾ ಸೆಲೆಬ್ರಿಟಿಗಳು ಸಹ ಕ್ರೀಡಾಂಗಣಕ್ಕೆ ಬಂದಿರುತ್ತಾರೆ. ಈ ವೇಳೆ ಕ್ರಿಕೆಟಿಗರು ಮತ್ತು ಸಿನಿಮಾ ತಾರೆಯರ ನಡುವೆ ಮಾತುಕತೆ, ಭೇಟಿ, ಪರಿಚಯಗಳು ಆಗುತ್ತವೆ. ಹಾಗೆಯೇ ಇತ್ತೀಚೆಗೆ ಒಬ್ಬ ದಕ್ಷಿಣ ಭಾರತದ ಹಿರಿಯ ನಟ ಹೇಳಿಕೊಂಡಿರುವಂತೆ, ಅವರು ಐಪಿಎಲ್ ನೋಡಲು ಹೋಗಿದ್ದಾಗ ಇದ್ದಕ್ಕಿದ್ದಂತೆ ಧೋನಿಯ ಪತ್ನಿ ಸಾಕ್ಷಿ ಬಂದು…

Read More

IPL 2026 Final: ಅಹಮದಾಬಾದ್‌ ಪಿಚ್ ಯಾರಿಗೆ ಸಹಕಾರಿ? ಫೈನಲ್ ದಿನದಂದು ಹವಾಮಾನ ಹೇಗಿರಲಿದೆ?

ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ಇದೇ ಭಾನುವಾರ ಸಂಜೆ 7:30 ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು…

Read More