Headlines

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್​ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್​ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ. ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್​ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು…

Read More

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಬೆಂಗಳೂರು, (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ…

Read More

ಇಂಧನ ದರ ಏರಿಕೆ ಎಫೆಕ್ಟ್​​: ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ‘ಇವಿ’ ವಾಹನಗಳ ಧಮಾಕಾ!

ಬೆಂಗಳೂರು, ಮೇ 30: ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಮತ್ತು ಎಲ್‌ಪಿಜಿ ದರಗಳು ನಿರಂತರವಾಗಿ ಏರಿಕೆ ಆಗುತ್ತಿರುವುದರಿಂದ ಕಂಗೆಟ್ಟಿರುವ ಬೆಂಗಳೂರಿಗರು (Bangaluru) ಈಗ ಇವಿ ಅಂದರೆ ಎಲೆಕ್ಟ್ರಿಕ್ ವಾಹನಗಳ (Electric Vehicles) ಮೊರೆ ಹೋಗುತ್ತಿದ್ದಾರೆ. ನಗರದಲ್ಲಿ ಇವಿ ವಾಹನಗಳಿಗೆ ಭರ್ಜರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಪ್ರತಿ ತಿಂಗಳು ನೂರಾರು ವಾಹನಗಳು ಮಾರಾಟವಾಗುತ್ತಿವೆ. ಇತ್ತ ವಾಹನ ಮಾಲೀಕರು ಮತ್ತೆ ಡೀಸೆಲ್ ದರ ಹೆಚ್ಚಾಗುತ್ತದೆ, ಹಾಗಾಗಿ ಇವಿ ಮೊರೆ ಹೋಗುತ್ತಿದ್ದೇವೆ ಎನ್ನುತ್ತಿದ್ದಾರೆ. ಮುಖ್ಯಾಂಶಗಳು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕಂಗೆಟ್ಟು ಇವಿ…

Read More

ಕಾಲಿಗೆ ಬಿದ್ದ ಧೋನಿ ಪತ್ನಿ, ಗಾಬರಿಯಾದ ನಟ, ನಿಜಕ್ಕೂ ಆಗಿದ್ದೇನು?

ಎಂಎಸ್ ಧೋನಿ (MS Dhoni), ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗ. ಐಪಿಎಲ್ ಸಮಯದಲ್ಲಿ ಧೋನಿಯ ಪತ್ನಿ ಮತ್ತು ಮಗಳು ಸಹ ಕ್ರೀಡಾಂಗಣಕ್ಕೆ ಬಂದು ಧೋನಿಯ ಬೆಂಬಲಿಸುತ್ತಾರೆ. ಐಪಿಎಲ್ ವೇಳೆ ಸಾಕಷ್ಟು ಸಿನಿಮಾ ಸೆಲೆಬ್ರಿಟಿಗಳು ಸಹ ಕ್ರೀಡಾಂಗಣಕ್ಕೆ ಬಂದಿರುತ್ತಾರೆ. ಈ ವೇಳೆ ಕ್ರಿಕೆಟಿಗರು ಮತ್ತು ಸಿನಿಮಾ ತಾರೆಯರ ನಡುವೆ ಮಾತುಕತೆ, ಭೇಟಿ, ಪರಿಚಯಗಳು ಆಗುತ್ತವೆ. ಹಾಗೆಯೇ ಇತ್ತೀಚೆಗೆ ಒಬ್ಬ ದಕ್ಷಿಣ ಭಾರತದ ಹಿರಿಯ ನಟ ಹೇಳಿಕೊಂಡಿರುವಂತೆ, ಅವರು ಐಪಿಎಲ್ ನೋಡಲು ಹೋಗಿದ್ದಾಗ ಇದ್ದಕ್ಕಿದ್ದಂತೆ ಧೋನಿಯ ಪತ್ನಿ ಸಾಕ್ಷಿ ಬಂದು…

Read More

IPL 2026 Final: ಅಹಮದಾಬಾದ್‌ ಪಿಚ್ ಯಾರಿಗೆ ಸಹಕಾರಿ? ಫೈನಲ್ ದಿನದಂದು ಹವಾಮಾನ ಹೇಗಿರಲಿದೆ?

ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ಇದೇ ಭಾನುವಾರ ಸಂಜೆ 7:30 ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು…

Read More

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಮೇ 30): ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ನಾಟಕದ ಮುಂದಿನ ಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ರಾಹುಲ್ ಗಾಂಧಿ ನೀಡಿದ ಒಂದೇ ಒಂದು ಸೂಚನೆ ಯಾವುದೇ ತಂಟೆ ತಗಾದೆ ತಗೆಯದೇ ಸಿದ್ದರಾಂಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾದರಿಯಾಗಿದ್ದಾರೆ. ಇನ್ನು ಹೈಕಮಾಂಡ್ ಸಹ ಸಿದ್ದರಾಮಯ್ಯನವರ ನಡೆಗೆ ಶ್ಲಾಘಿಸಿದ್ದು, ಖುದ್ದು ರಾಹುಲ್ ಗಾಂಧಿಯವರೇ ಸಿದ್ದರಾಮಯ್ಯನವರನ್ನ ದೆಹಲಿಗೆ ಕರೆಯಿಸಿಕೊಂಡು ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದೇ ವೇಳೆ ನಿಮ್ಮ ತ್ಯಾಗಕ್ಕೆ…

Read More

ಗೃಹಲಕ್ಷ್ಮಿ- ವಿಧವಾ ವೇತನದ ಹಣ ಸಾಲದ ಖಾತೆಗೆ ಜಮೆ: ಬಡ ಮಹಿಳೆಯ ಹೊಟ್ಟೆ ಮೇಲೆ ಹೊಡೆದ ಬ್ಯಾಂಕ್

ಬ್ಯಾಂಕ್​​ ಎಡವಟ್ಟಿಗೆ ತಾಯಿ-ಮಗ ಪರದಾಟImage Credit source: tv9 kannada ಹಾವೇರಿ, ಮೇ 30: ಬಡವರಿಗೆ ಮತ್ತು ಮಹಿಳೆಯರಿಗೆ ಆಸರೆಯಾಗಲಿ ಎಂದು ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಹಾಗೂ ವಿಧವಾ ವೇತನದ ಹಣಕ್ಕೆ ಬ್ಯಾಂಕೊಂದು ಕೈ ಹಾಕಿದೆ. ಹಾವೇರಿಯಲ್ಲಿ (haveri) ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ ದರ್ಪಕ್ಕೆ ತಾಯಿ ಮತ್ತು ಮಗ ಬೀದಿಗೆ ಬೀಳುವಂತಾಗಿದೆ. ನಿಯಮಗಳನ್ನು ಗಾಳಿಗೆ ತೂರಿ, ಮಹಿಳೆಯ ಖಾತೆಯಲ್ಲಿದ್ದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡಿರುವ ಕೆವಿಜಿ ಬ್ಯಾಂಕ್ ಸಿಬ್ಬಂದಿ…

Read More

ತಮಿಳುನಾಡು ಸಿಎಂ ವಿಜಯ್​ ಸಾಧನೆ ಕೊಂಡಾಡಿದ ರಾಮ್ ಚರಣ್: ಹೇಳಿದ್ದೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಭರ್ಜರಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ರಾಮ್ ಚರಣ್. ದೇಶದ ಪ್ರಮುಖ ನಗರಗಳಲ್ಲಿ ಸುತ್ತಾಡಿ ಪ್ರಚಾರ ಮಾಡುತ್ತಿರುವ ರಾಮ್ ಚರಣ್ ಇಂದು (ಮೇ 30) ಚೆನ್ನೈಗೆ ಭೇಟಿ ನೀಡಿದ್ದರು. ಚೆನ್ನೈನಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಮಾತನಾಡಿದ ನಟ ರಾಮ್ ಚರಣ್, ತಮ್ಮ ‘ಪೆದ್ದಿ’ ಸಿನಿಮಾದ ಬಗ್ಗೆ ಮಾತನಾಡುವ ಜೊತೆಗೆ ಸಿನಿಮಾರಂಗದಿಂದ ರಾಜಕೀಯಕ್ಕೆ ಪ್ರವೇಶಿಸಿ ಇತ್ತೀಚೆಗಷ್ಟೆ ತಮಿಳುನಾಡಿನ ಸಿಎಂ ಸಹ ಆಗಿರುವ ವಿಜಯ್ ಅವರ ಸಾಧನೆಯನ್ನು…

Read More

IPL 2026 Final: ಸತತ 2ನೇ ಬಾರಿಗೆ ಚಾಂಪಿಯನ್; ಮತ್ತೊಂದು ದಾಖಲೆ ಸೃಷ್ಟಿಸುವ ಸನಿಹದಲ್ಲಿ ಆರ್​ಸಿಬಿ

ಐಪಿಎಲ್ 2026 (IPL 2026) ರ 74ನೇ ಮತ್ತು ಕೊನೆಯ ಪಂದ್ಯ ಮೇ 31 ರಂದು ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಈ ಹಿಂದೆ ಟೂರ್ನಿಯಲ್ಲಿ ತಲಾ ಒಂದೊಂದು ಪ್ರಶಸ್ತಿಯನ್ನು ಗೆದ್ದಿವೆ. ಆದ್ದರಿಂದ, ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಅವಕಾಶ ಉಭಯ ತಂಡಗಳಿಗಿದೆ. ಇತ್ತ ರಜತ್ ಪಾಟಿದಾರ್ ನೇತೃತ್ವದಲ್ಲಿ, ಆರ್‌ಸಿಬಿ ತಂಡವು ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ. ಕಳೆದ…

Read More

ದೇಹದಲ್ಲಿ ಹೆಚ್ಚುತ್ತಿದೆ ಒಬೆಸಿಟಿ ಮತ್ತು ಡಯಾಬಿಟಿಸ್ ಸಮಸ್ಯೆ: ಹೊಸ ಸಮೀಕ್ಷೆಯಿಂದ ಹೆಚ್ಚಾಗಿದೆ ಆತಂಕ

ದೇಶದಲ್ಲಿ ಸ್ಥೂಲಕಾಯತೆ (Obesity) ಮತ್ತು ಮಧುಮೇಹ (Diabetes) ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಆರೋಗ್ಯ ಸಮೀಕ್ಷೆಯ ವರದಿ ತಜ್ಞರಲ್ಲಿ ಆತಂಕ ಮೂಡಿಸಿದೆ. 2019ರ ನಂತರ ಈ ಎರಡೂ ಆರೋಗ್ಯ ಸಮಸ್ಯೆಗಳ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6 (NFHS-6) ವರದಿ ಪ್ರಕಾರ, 15 ರಿಂದ 49 ವರ್ಷದೊಳಗಿನ ಪುರುಷರು ಮತ್ತು ಮಹಿಳೆಯರಲ್ಲಿ ಅಧಿಕ ತೂಕ ಹಾಗೂ ಸ್ಥೂಲಕಾಯದ ಪ್ರಮಾಣ ಕಳೆದ…

Read More