ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎಂದು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.

‘ನೋ ವರ್ಕ್ ನೋ ಪೇ’ ಆದೇಶ

ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಜನವರಿ 29ರಂದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ಆದ್ರೆ, ಇದಕ್ಕೆ ಒಂದು ದಿನ ಮೊದಲೇ ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎನ್ನುವ ಆದೇಶವನ್ನು ಜಾರಿ ಮಾಡಿದೆ.

ಇದನ್ನೂ ಓದಿ: ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ!

ಅಧಿಕಾರಿಗಳಿಗೆ ಖಡಕ್ ಸೂಚನೆ

01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ
01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದಕ್ಕೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿಯು ಜನವರಿ 29ರ ಗುರುವಾರ ಬೆಂಗಳೂರು ಚಲೋಗೆ ಕರೆ ನೀಡಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಿನಾಂಕ.29.01.2026 ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು. ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಬೇಕು.
ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜ.29ರಂದು ಬಸ್ ಸಂಚಾರ ಇರುತ್ತಾ ಇಲ್ಲಾ?

ಇದರೊಂದಿಗೆ ಕೆಎಸ್​​​ಆರ್​​ಟಿಸಿ ತನ್ನ ನೌಕರರ ಪ್ರತಿಭಟನೆಗೆ ಬ್ರೇಕ್ ಹಾಕಲು ಮುಂದಾಗಿದೆ. ಹೀಗಾಗಿ ಬೆಂಗಳೂರು ಚಲೋ, ಸಾರಿಗೆ ನೌಕರರ ಮುಂದಿನ ನಡೆ ಮೇಲೆ ನಿಂತಿದೆ.  ಒಂದು ವೇಳೆ ಈ ಆದೇಶಕ್ಕೆ ಹೆದರಿ ಪ್ರತಿಭಟನೆಯಿಂದ ಹಿಂದೆ ಸರಿದರೆ ಎಂದಿನಂತೆ ಬಸ್ ಸಂಚಾರ ಇರಲಿದೆ. ಇನ್ನು ಆದೇಶಕ್ಕೆ ಡೋಟ್​ ಕೇರ್ ಎಂದು ಬೆಂಗಳೂರು ಚಲೋಗೆ ತೆರಳಿದರೆ ಕೆಎಸ್​​ಆರ್​​​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದು ಗ್ಯಾರಂಟಿ. ಹೀಗಾಗಿ ಪ್ರಯಾಣಿಕರು ಜನವರಿ 29ರಂದು ಬಸ್ ಪ್ರಯಾಣ ಕೈಬಿಡುವುದು ಒಳಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:42 pm, Tue, 27 January 26

Source link

ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ – Kannada News | Karnataka Stray Dog Attacks: More Than 36 People Injured in Single Day

ಬೀದಿ ನಾಯಿಗಳ ಹಾವಳಿ (ಸಾಂದರ್ಭಿಕ ಚಿತ್ರ)

ಶಿವಮೊಗ್ಗ/ ಧಾರವಾಡ, ಜನವರಿ 27: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು ಶಿವಮೊಗ್ಗದ ಭದ್ರವಾತಿ, ಧಾರವಾಡ ಮತ್ತು ಬಾಗಲಕೋಟೆ ಸೇರಿ ವಿವಿಧೆಡೆ ನಿನ್ನೆ ಒಂದೇ ದಿನ 36ಕ್ಕೂ ಹೆಚ್ಚು ಮಂದಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ 11 ಜನರಿಗೆ ಹುಚ್ಚು ನಾಯಿ ಕಡಿದಿದ್ದರೆ, ಧಾರವಾಡದಲ್ಲಿ 15ಕ್ಕೂ ಅಧಿಕ ಮಂದಿ ಇಂತಹುದ್ದೇ ಪ್ರಕರಣದಲ್ಲಿ ಗಾಯಗೊಂಡಿದ್ದಾರೆ. ಅತ್ತ ಬಾಗಲಕೋಟೆಯಲ್ಲಿಯೂ 10ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿ ಅಟ್ಯಾಕ್​​ ಮಾಡಿದೆ.

ಹೊಳೆಹೊನ್ನೂರಲ್ಲಿ ಹುಚ್ಚುನಾಯಿ ಅಟ್ಟಹಾಸ

ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ನಿನ್ನೆ ಒಂದೇ ದಿನ ಮಕ್ಕಳೂ ಸೇರಿದಂತೆ ಒಟ್ಟು 11 ಮಂದಿಗೆ ಹುಚ್ಚು ನಾಯಿ ಕಡಿದಿದೆ. ಗಾಯಗೊಂಡಿರುವ ಎಲ್ಲರಿಗೂ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಕುರಿತಂತೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ಪಟ್ಟಣ ಪಂಚಾಯತ್​ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದ್ದು, ತಕ್ಷಣವೇ ಬೀದಿ ನಾಯಿಗಳನ್ನು ಸೆರೆ ಹಿಡಿಯುವಂತೆ ಆಗ್ರಹಿಸಲಾಗಿದೆ. ಹೊಳೆಹೊನ್ನೂರು ಪಟ್ಟಣ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರೂ ದೂರಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಶ್ವಾನಗಳ ಅಟ್ಟಹಾಸ; ಒಂದೇ ವರ್ಷದಲ್ಲಿ 10 ಜನರನ್ನು ಬಲಿ ಪಡೆದ ಬೀದಿನಾಯಿಗಳು

ರಸ್ತೆಯಲ್ಲಿ ತಿರುಗಾಡುತ್ತಿದ್ದವರ ಮೇಲೆ ಅಟ್ಯಾಕ್​​

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿಯೂ ರಾತ್ರಿ ವೇಳೆ ರಸ್ತೆಯಲ್ಲಿ ತಿರುಗಾಡುತ್ತಿದ್ದವರ ಮೇಲೆ ಹುಚ್ಚುನಾಯಿ ದಾಳಿ ನಡೆಸಿದೆ. ಘಟನೆಯಲ್ಲಿ 15ಕ್ಕೂ ಅಧಿಕ ಜನರಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕೆಲವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೂ ದಾಖಲಿಸಲಾಗಿದೆ. ಇನ್ನು ಘಟನೆ ಬಳಿಕ ರೊಚ್ಚಿಗೆದ್ದ ಗ್ರಾಮಸ್ಥರು ದಾಳಿ ಮಾಡಿದ ಹುಚ್ಚುನಾಯಿ ಹಿಡಿದು ಕೊಂದಿದ್ದು, ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರವಚನ ಮುಗಿಸಿ ತೆರಳುತ್ತಿದ್ದವರ ಮೇಲೆ ದಾಳಿ

ಪ್ರವಚನ ಮುಗಿಸಿ ರಾತ್ರಿ ವೇಳೆ ಮನೆಗೆ ತೆರಳುತ್ತಿದ್ದ 10ಕ್ಕೂ ಅಧಿಕ ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಹಳೆ ಬಾಗಲಕೋಟೆಯ ತೆಂಗಿನಮಠ ಓಣಿಯಲ್ಲಿ ನಡೆದಿದೆ. ಗಾಯಾಳುಗಳು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆ ಪೈಕಿ ಪುಟ್ಟ ಮಕ್ಕಳೂ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಪದೇ ಪದೇ ಅವುಗಳು ದಾಳಿ ನಡೆಸುತ್ತಿದ್ದರೂ ಸ್ಥಳೀಯ ಅಧಿಕಾರಿಗಳು ಕೈ ಕಟ್ಟಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ – Kannada News | Masked Man snatches chain from woman employee inside Bhopal AIIMS Hospital lift Video goes viral

ಭೋಪಾಲ್‌, ಜನವರಿ 27: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯು ಭದ್ರತಾ ಲೋಪವನ್ನು ಎತ್ತಿ ತೋರಿಸಿದೆ. ಭೋಪಾಲ್‌ನ (Bhopal) ಏಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಲಿಫ್ಟ್‌ನಿಂದ ಇಳಿಯುತ್ತಿದ್ದಾಗ, ಮಾಸ್ಕ್ ಧರಿಸಿದ್ದ ಕಳ್ಳನೊಬ್ಬ ಆಕೆಯ ಕುತ್ತಿಗೆಯಿಂದ ಮಂಗಳಸೂತ್ರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಆಸ್ಪತ್ರೆಯೊಳಗಿನ ಲಿಫ್ಟ್‌ನ ಒಳಗೆ ನಡೆದಿರುವುದು ಆತಂಕಕಾರಿ ಸಂಗತಿ. ಸಿಸಿಟಿವಿ ದೃಶ್ಯಗಳ ಪ್ರಕಾರ, ಆರೋಪಿ ಆ ಮಹಿಳೆಯೊಂದಿಗೆ ಲಿಫ್ಟ್‌ನಲ್ಲಿಯೇ ಬಂದಿದ್ದಾನೆ. ಆಕೆ ಹೊರಗೆ ಹೋಗಲು ಲಿಫ್ಟ್ ಬಾಗಿಲು ತೆರೆದ ತಕ್ಷಣ ಅವನು ಆಕೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದುಕೊಂಡು ಓಡಿಹೋದನು. ಆಕೆ ಕಿರುಚುತ್ತಾ ಓಡಿದರೂ ಆತ ಪರಾರಿಯಾಗಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ ತೋರಿಸಿದ ಪೊಲೀಸ್ರು – Kannada News | Sidlaghatta Civic Official Threat Case: lathi charge On Rajeev Gowda Fans for Tries To Stop Police vehicle

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ ಆದೇಶ ಹೊರಡಿಸಿದೆ. ಇನ್ನು ಆರೋಪಿ ರಾಜೀವ್ ಗೌಡನನ್ನು ಕೋರ್ಟ್ ನಿಂದ ಜೈಲಿಗೆ ಕರೆದೊಯ್ಯುವ ಸಂದರ್ಭದಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಹೌದು…ರಾಜೀವ್ ಗೌಡನನ್ನ ಜೈಲಿಗೆ ಕರೆದೊಯ್ಯುತ್ತಿದ್ದ ವಾಹನವನ್ನು ಕೋರ್ಟ್​​ ಬಳಿ ಅಡ್ಡಹಾಕಿ ಜೈಕಾರಕ್ಕೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ರಾಜೀವ್ ಗೌಡನ ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದರು. ಬಳಿಕ ಜೈಲಿಗೆ ಕರೆದೊಯ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪದೇ ಪದೇ ಶೀತವಾಗುವುದು ಈ ಕಾಯಿಲೆಯ ಆರಂಭಿಕ ಲಕ್ಷಣವಾಗಿರಬಹುದು ಎಚ್ಚರ! – Kannada News | Sore Throat & Cough Keep Coming Back: What To Do

ಎಲ್ಲರಿಗೂ ಒಂದಲ್ಲ ಒಂದು ಹಂತದಲ್ಲಿ ಶೀತವಾಗುವುದು (Cold) ಬಹಳ ಸಾಮಾನ್ಯ. ಅದರಲ್ಲಿಯೂ ಹವಾಮಾನ ಬದಲಾವಣೆಯ ಸಮಯದಲ್ಲಿ ಈ ಅಪಾಯ ಹೆಚ್ಚಾಗಿರುತ್ತದೆ, ಆದರೆ ಈ ಸಮಸ್ಯೆ ಪ್ರತಿ ತಿಂಗಳು ಕಾಣಿಸಿಕೊಂಡರೆ, ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಏಕೆಂದರೆ ಇದು ಗಂಭೀರ ಅನಾರೋಗ್ಯದ ಆರಂಭಿಕ ಲಕ್ಷಣವಾಗಿರಬಹುದು. ಹೌದು, ಪುನರಾವರ್ತಿತವಾಗಿ ನೆಗಡಿಯಾಗುವುದು ಕೆಲವು ರೋಗ ಬರುವ ಮುನ್ಸೂಚನೆಯಾಗಿರುತ್ತದೆ. ಹಾಗಾದರೆ ಈ ರೀತಿ ಆಗುತ್ತಿದ್ದರೆ ಏನು ಮಾಡಬೇಕು, ಯಾವ ಸಮಯದಲ್ಲಿ ವೈದ್ಯರನ್ನು ಭೇಟಿ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಗಳ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ. ರವಿ ಮೆಹ್ರಾ ಹೇಳುವ ಪ್ರಕಾರ, ಆಗಾಗ ಶೀತವಾಗುವುದು ಸಾಮಾನ್ಯವಲ್ಲ. ಈ ರೀತಿಯಾಗುವುದಕ್ಕೆ ಹಲವಾರು ಕಾರಣಗಳಿರಬಹುದು, ಅವುಗಳಲ್ಲಿ ಅಲರ್ಜಿಕ್ ರಿನಿಟಿಸ್ ಕೂಡ ಒಂದು. ಈ ಸ್ಥಿತಿಯು ನಿರಂತರ ಸೀನುವಿಕೆ, ಮೂಗು ಸೋರುವಿಕೆ ಮತ್ತು ಮೂಗಿನಲ್ಲಿ ತುರಿಕೆಗೆ ಕಾರಣವಾಗುತ್ತದೆ. ಹವಾಮಾನ ಬದಲಾವಣೆಗಳಿಂದಾಗಿ ವಿವಿಧ ವೈರಸ್‌ಗಳು ಸಕ್ರಿಯವಾಗಿ ದೇಹದ ಮೇಲೆ ದಾಳಿ ಮಾಡಿದಾಗ ಈ ರೀತಿಯಾಗುತ್ತದೆ. ಹವಾಮಾನ ಸಂಬಂಧಿತ ಅಲರ್ಜಿಗಳಿಂದ ಉಂಟಾಗುವ ಶೀತಗಳು ಆಗಾಗ ಕಂಡುಬರುತ್ತವೆ. ಈ ಸಮಸ್ಯೆ ಮುಂದುವರಿದರೆ, ವೈದ್ಯರನ್ನು ಭೇಟಿ ಮಾಡುವುದು ಬಹಳ ಮುಖ್ಯ.

ಸೈನಸ್ ಸಮಸ್ಯೆಗಳು ಸಹ ಇದಕ್ಕೆ ಪ್ರಮುಖ ಕಾರಣ. ಸೈನಸ್ ಇದ್ದಾಗಲೂ ಆಗಾಗ ನೆಗಡಿಯಾಗುತ್ತದೆ. ಈ ರೀತಿಯಾದಾಗಲೂ ಕೂಡ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ. ಆ ಮೂಲಕ ಈ ರೀತಿಯ ಸಮಸ್ಯೆಗಳನ್ನು ಔಷಧಿ ಅಥವಾ ಶಸ್ತ್ರಚಿಕಿತ್ಸೆಯ ಮೂಲಕ ಸರಿಪಡಿಸಿಕೊಳ್ಳಬಹುದು. ಇದರ ಜೊತೆಗೆ ದುರ್ಬಲ ರೋಗನಿರೋಧಕ ಶಕ್ತಿ ಕೂಡ ಆಗಾಗ ಶೀತವಾಗುವುದಕ್ಕೆ ಕಾರಣವಾಗುತ್ತದೆ. ನಿಮಗೂ ಪದೇ ಪದೇ ನೆಗಡಿಯಾಗುತ್ತಿದ್ದರೆ ನಿಮ್ಮ ರೋಗನಿರೋಧಕ ಶಕ್ತಿ ದುರ್ಬಲಗೊಂಡಿದೆ ಎಂದರ್ಥ. ಅದರಿಂದಾಗಿ ವೈರಸ್‌ ದೇಹವನ್ನು ಸುಲಭವಾಗಿ ಆಕ್ರಮಿಸಿಕೊಳ್ಳುತ್ತದೆ, ಜೊತೆಗೆ ಮತ್ತೆ ಮತ್ತೆ ಶೀತಕ್ಕೆ ಕಾರಣವಾಗುತ್ತದೆ. ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ನಿಮ್ಮ ಆಹಾರಕ್ರಮದ ಬಗ್ಗೆ ಗಮನ ಹರಿಸಬೇಕು. ಸಮತೋಲಿತ ಆಹಾರ ಸೇವನೆ ಮಾಡಬೇಕು.

ಇದನ್ನೂ ಓದಿ: ಚಳಿಗಾಲದಲ್ಲಿ ಸೈನಸ್ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ತಡೆಯಲು ಈ ರೀತಿ ಮಾಡಿ

ಈ ಸಮಸ್ಯೆ ಯಾವಾಗ ಗಂಭೀರವಾಗುತ್ತದೆ?

  • 23 ವಾರಗಳಿಗಿಂತ ಹೆಚ್ಚು ಕಾಲ ಶೀತ ಇದ್ದಲ್ಲಿ.
  • ಶೀತದ ಜೊತೆಗೆ ಉಸಿರಾಟದ ತೊಂದರೆ.
  • ನಿರಂತರ ಬದಲಾವಣೆಗಳು ಅಥವಾ ಧ್ವನಿ ಚೇಂಜ್ ಆಗುವುದು.
  • ಆಗಾಗ ಜ್ವರ ಬರುವುದು

ಪದೇ ಪದೇ ಶೀತವಾಗುವುನ್ನು ತಡೆಯಲು ಸಲಹೆಗಳು:

  • ಧೂಳು ಮತ್ತು ಹೊಗೆಯಿಂದ ಆದಷ್ಟು ದೂರವಿರಿ.
  • ತಣ್ಣೀರು ಕುಡಿಯಬೇಡಿ.
  • ಹವಾಮಾನ ಬದಲಾವಣೆಯ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
  • ಧೂಮಪಾನದಿಂದ ದೂರವಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

12 ಕೋಟಿ ರೂ. ಕಾರು ಖರೀದಿಸಿ, 10 ನಿಮಿಷದಲ್ಲಿ ಬೋರ್ ಆಯ್ತು ಎಂದ ಗಾಯಕ ಬಾದ್​ಷಾ – Kannada News | Singer Badshah talks about Rolls Royce Cullinan Series 2

ಗಾಯಕ ಬಾದ್​ಷಾ (Singer Badshah) ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಆ ಬೇಡಿಕೆಗೆ ತಕ್ಕಂತೆ ಅವರಿಗೆ ಸಂಭಾವನೆ ಸಿಗುತ್ತದೆ. ಪ್ರತಿ ಹಾಡಿಗೆ ಅಂದಾಜು 20 ಲಕ್ಷ ರೂಪಾಯಿ ಸಂಭಾವನೆ ಪಡೆಯುವ ಅವರ ಲೈಫ್ ಸ್ಟೈಲ್ ಕೂಡ ಐಷಾರಾಮಿ ಆಗಿದೆ. ದುಬಾರಿ ವಸ್ತುಗಳ ಬಗ್ಗೆ ಅವರು ಸಖತ್ ಕ್ರೇಜ್ ಇದೆ. ಜಗತ್ತಿನ ಅತಿ ದುಬಾರಿ ಜಾಕೆಟ್, ಶೂ, ಕಾರುಗಳು ಬಾದ್​ಚಾ ಅವರ ಬಳಿ ಇವೆ. ಅಚ್ಚರಿ ಏನೆಂದರೆ, 12 ಕೋಟಿ ರೂಪಾಯಿ ಬೆಲೆ ಬಾಳುವ ರೋಲ್ಸ್ ರಾಯ್ಸ್ (Rolls Royce Cullinan Series II) ಕಾರನ್ನು ಖರೀದಿಸಿದ ನಂತರ 10 ನಿಮಿಷದಲ್ಲೇ ಬೋರ್ ಆಯ್ತು ಎಂದು ಅವರು ಹೇಳಿದ್ದಾರೆ!

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಾದ್​ಷಾ ಅವರು ಈ ಬಗ್ಗೆ ಮಾತನಾಡಿದ್ದಾರೆ. ಜಗತ್ತಿನ ಅತಿ ದುಬಾರಿ ಕಾರುಗಳ ಪೈಕಿ ರೋಲ್ಸ್ ರಾಯ್ಸ್ ಮುಂಚೂಣಿಯಲ್ಲಿದೆ. ಆಯ್ದ ಕೆಲವು ಮಂದಿ ಮಾತ್ರ ಇದನ್ನು ಖರೀದಿಸುತ್ತಾರೆ. 2024ರಲ್ಲಿ ಇದರ ಹೊಸ ಆವೃತ್ತಿ ‘ರೋಲ್ಸ್ ರಾಯ್ಸ್ ಕಲಿನನ್ ಸೀರಿಸ್ 2’ ಲಾಂಚ್ ಆಯಿತು. ಅದನ್ನು ಬಾದ್​ಚಾ ಅವರು ಖರೀದಿಸಿದರು.

ಅಚ್ಚರಿ ಎಂದರೆ, ಬಾದ್​ಷಾ ಅವರು ‘ರೋಲ್ಸ್ ರಾಯ್ಸ್ ಕಲಿನನ್ ಸೀರಿಸ್ 2’ ಕಾರನ್ನು ಖರೀದಿಸುವಾಗಿ ಹೆಚ್ಚೇನೂ ಯೋಚಿಸಲಿಲ್ಲ. ‘ಖರೀದಿಸಬೇಕು ಎನಿಸಿತು ಅಷ್ಟೇ. ಇವತ್ತು ಆ ಕಾರು ಬೇಕು ಅಂತ ತಕ್ಷಣಕ್ಕೆ ನಿರ್ಧಾರ ಮಾಡಿದೆ. ಇದು ನನ್ನ ರೀತಿಯ ಫೀಲಿಂಗ್ಸ್. ಅದು ಒಳ್ಳೆಯ ಕಾರ್ ಹೌದು. ಆದರೆ, 10-15 ನಿಮಿಷ ಮಾತ್ರ ಅದರ ಮಜಾ ಇತ್ತು. ನಂತರ ಮತ್ತೆ ಹೊಸದು ಏನು ಖರೀದಿಸೋದು ಎನಿಸಿತು’ ಎಂದು ಬಾದ್​ಷಾ ಅವರು ಹೇಳಿದ್ದಾರೆ.

ಬಾದ್​ಷಾ ಖರೀದಿಸಿದ ‘ರೋಲ್ಸ್ ರಾಯ್ಸ್ ಕಲಿನನ್ ಸೀರಿಸ್ 2’ ಕಾರಿನ ಬೆಲೆ ಬರೋಬ್ಬರಿ 12 ಕೋಟಿ ರೂಪಾಯಿ. ಭಾರತದಲ್ಲಿ ಶಾರುಖ್ ಖಾನ್, ಮುಕೇಶ್ ಅಂಬಾನಿ ಮುಂತಾದವರ ಬಳಿ ಮಾತ್ರ ಈ ಕಾರು ಇದೆ. ಬಾದ್​ಷಾ ಅವರಿಗೆ ಈ ರೀತಿಯ ಐಷಾರಾಮಿ ವಸ್ತುಗಳ ಬಗ್ಗೆ ಕ್ರೇಜ್ ಇದೆ. ಆ ಕಾರಣದಿಂದಲೇ ಅವರು ಇದನ್ನೆಲ್ಲ ಖರೀದಿ ಮಾಡುತ್ತಾರೆ.

ಇದನ್ನೂ ಓದಿ: ಯುವ ದಸರಾದಲ್ಲಿ ಕನ್ನಡ ಮಾತಾಡಿ ಜನರ ಮನಗೆದ್ದ ಬಾಲಿವುಡ್ ಗಾಯಕ ಬಾದ್​ಷಾ

ಈಗ ಬಾದ್​ಷಾ ಅವರಿಗೆ 41 ವರ್ಷ ವಯಸ್ಸು. ಬಾಲಿವುಡ್​​ನಲ್ಲಿ ಅವರು ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಅವರ ಒಟ್ಟು ಆಸ್ತಿ 124 ಕೋಟಿ ರೂಪಾಯಿ ಎನ್ನಲಾಗಿದೆ. ಒಂದು ಲೈವ್ ಸಂಗೀತ ಕಾರ್ಯಕ್ರಮ ನೀಡಲು ಬಾದ್​ಷಾ ಅವರು ಅಂದಾಜು 1 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ. ಅಷ್ಟರಮಟ್ಟಿಗೆ ಅವರಿಗೆ ಬೇಡಿಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೊಡಗಿನಲ್ಲಿ ಲವ್ ಜಿಹಾದ್ ನಡೆಯುತ್ತಿದೆಯಾ? ಹಿಂದೂ ಪರಸಂಘಟನೆಗಳಿಂದ ಬೀದಿಗಿಳಿದು ಹೋರಾಟ – Kannada News | Siddapur Love Jihad: Kodagu Hindu Girls Marrying Outside Faith, Locals Protest

ಕೊಡಗು, ಜನವರಿ 27: ಜಿಲ್ಲೆಯಲ್ಲಿ ಲವ್ ಜಿಹಾದ್ (Love Jihad) ನಡೆಯುತ್ತಿದೆಯಾ? ಎಂಬ ಗಂಭೀರ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಲವ್ ಜಿಹಾದ್ ವಿರುದ್ಧ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ (protest) ಕೂಡ ನಡೆದಿದೆ. ಪ್ರತಿಭಟನಾಕಾರರ ಪ್ರಕಾರ ಜಿಲ್ಲೆಯಲ್ಲಿ ಕಳೆದೊಂದು ವರ್ಷದಲ್ಲಿ 10ಕ್ಕೂ ಹೆಚ್ಚು ಹಿಂದೂ ಯುವತಿಯರು ಅನ್ಯಧರ್ಮೀಯರನ್ನ ವಿವಾಹ ಆಗಿದ್ದಾರಂತೆ. ಹೀಗಾಗಿ ಇದನ್ನು ಖಂಡಿಸಿ ಹಿಂದೂ ಸುರಕ್ಷಾ‌ ಸಮಿತಿಯಿಂದ ಇಂದು ಪ್ರತಿಭಟನೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ

ಮತೀಯ ಸೂಕ್ಷ್ಮ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಲವ್ ಜಿಹಾದ್ ನಡೆಯುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ಜಿಲ್ಲೆಯ ಹೆಣ್ಣು ಮಕ್ಕಳ ಬಾಳು ಹಾಳಾಗುತ್ತಿದ್ದು, ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂದು ಅರಿವು ಮೂಡಿಸಲು ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 6ಕ್ಕೂ ಅಧಿಕ ಲವ್ ಜಿಹಾದ್ ಪ್ರಕರಣಗಳು ನಡೆದಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊಡಗು ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ: ಕಾರಣ ಇಲ್ಲಿದೆ

ಹಿಂದಿನ ಪ್ರಕರಣಗಳನ್ನ ಸೇರಿಸಿದರೆ ಈ ಭಾಗದಲ್ಲಿ 18ಕ್ಕೂ ಅಧಿಕ ಹಿಂದೂ ಹೆಣ್ಣು ಮಕ್ಕಳು ಅನ್ಯ ಧರ್ಮೀಯರನ್ನ ಪ್ರೀತಿ-ಪ್ರೇಮದ ಹೆಸರಲ್ಲಿ ವರಿಸಿದ್ದಾರಂತೆ. ಹಾಗಾಗಿ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಇಂದು ನಾನಾ ಹಿಂದೂ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದವು.

ಹಿಂದೂ ಸಂಘಟನೆ ಮುಖಂಡ ಗಣರಾಜ್ ಹೇಳಿದ್ದಿಷ್ಟು 

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಪಟ್ಟಣದಲ್ಲಿ ಹಿಂದೂ ಸಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿ ನಡೆಸಿ ಸಮಾವೇಶ ಮಾಡಿದರು. ಈ ವೇಳೆ ಮಾತನಾಡಿದ ಹಿಂದೂ ಸಂಘಟನೆ ಮುಖಂಡ ಗಣರಾಜ್​​, ಜಿಹಾದಿ ಶಕ್ತಿಗಳು ಭಾರತವನ್ನ ಹಂತ ಹಂತವಾಗಿ ಇಸ್ಲಾಮೀಕರಣ ಮಾಡಲು ಹೊರಟಿವೆ ಎಂದು ಆರೋಪಿಸಿದರು.

ಗೋಣಿಕೊಪ್ಪ ಮೂಲದ ಕಾಲೇಜು ಯುವತಿಯೊಬ್ಬಳು ಸಿದ್ದಾಪುರದ ಅನ್ಯಕೋಮಿನ ಯುವಕನೊಬ್ಬನ ಜೊತೆ ಪರಾರಿಯಾಗಿದ್ದಳು. ಬಳಿಕ ವಿವಾಹವಾಗುವುದಾಗಿ ಹಠ ಹಿಡಿದಿದ್ದಳು. ಎಳೆ ವಯಸ್ಸಿನ ಹುಡುಗಿಯರ ತಲೆ ಕೆಡಿಸಿ ಈ ರೀತಿ ಮಾಡುತ್ತಿರುವುದು ಲವ್ ಜಿಹಾದ್ ಆಗಿದ್ದು, ಇದು ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿದೆ ಎಂದು ಹಿಂದೂ ಮುಖಂಡರುಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಕ್ಕಳನ್ನ ಹೂವಿನಂತೆ ಸಾಕಿ ಇದೀಗ ಕಡುಕರ ಕೈಗೆ ಕೊಟ್ಟಂತಾಗಿದೆ ಎಂದು ವಿಷಾದಿಸಿದರು. ಈ ಬಗ್ಗೆ ಕಾನೂನಿನಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಬದಲಿಗೆ ಪೋಷಕರೇ ಎಚ್ಚೆತ್ತುಕೊಂಡು ತಮ್ಮ ಮಕ್ಕಳು ದಾರಿ ತಪ್ಪದಂತೆ ನೋಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಚೆಂದುಳ್ಳಿ ಚೆಲುವೆಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ: ಆಗಿದ್ದೇನು?

ಸಿದ್ದಾಪುರ ಸೇರಿದಂತೆ ಕೊಡಗಿನ ಹಲವೆಡೆ ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವ ಅನ್ಯಧರ್ಮೀಯರ ವಿವಾಹ ಸಂಪ್ರದಾಯವಾದಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ವಿವಾಹವಾಗಿ ಹೋದ ಯುವತಿಯರು ಮಾತೃಧರ್ಮ ತ್ಯಜಿಸಿ ಮತ್ತೊಂದು ಧರ್ಮವನ್ನ ಸ್ವೀಕರಿಸಿ ಪರದೆಯ ಹಿಂದೆ ಸರಿಯುತ್ತಿರುವುದು ಜಿಲ್ಲೆಯಲ್ಲಿ ನಿಜಕ್ಕೂ ಚಿಂತೆಗೀಡು ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಜನರನ್ನ ಬಲಿ ಪಡೆಯುತ್ತಿದ್ದ ಹುಲಿಗಳ ಸೆರೆ: ಆಪರೇಷನ್​ T2 ಆಲ್ಫಾ 5ನೇ ಹಂತದ ಕಾರ್ಯಾಚರಣೆಯೂ ಯಶಸ್ವಿ – Kannada News | Chamarajanagar: Operation T2 Alpha Phase 5 Succeeds; Another Female Tiger Cub Captured

ಚಾಮರಾಜನಗರ, ಜನವರಿ 27: ಆಪರೇಷನ್ ಟಿ2 ಆಲ್ಫಾ ಐದನೇ ಹಂತ ಯಶಸ್ವಿಯಾಗಿದೆ. 6 ಹುಲಿಗಳ ಪೈಕಿ ಈಗಾಗಲೇ 5 ಹುಲಿ (Tigers) ಸೆರೆಯಾಗಿದ್ದು, ಇನ್ನು ಕೇವಲ 1 ಹುಲಿ ಮಾತ್ರ ಬಾಕಿ ಇದೆ. ಥರ್ಮಲ್ ಡ್ರೋನ್ ಕ್ಯಾಮರಾ ಮೂಲಕ ಕೂಂಬಿಂಗ್ ನಡೆಸಿದ್ದ ಸಿಬ್ಬಂದಿ 10 ತಿಂಗಳ ಹೆಣ್ಣು ಹುಲಿ ಮರಿ ಸೆರೆ ಹಿಡಿಯುವಲ್ಲಿ ಸಿಬ್ಬಂದಿ ಯಶಸ್ವಿ ಆಗಿದ್ದಾರೆ.

ಮತ್ತೊಂದು ಹೆಣ್ಣು ಹುಲಿ ಮರಿ ಸೆರೆ

ಕಳೆದೊಂದು ತಿಂಗಳಿನಿಂದ ಬಿಟ್ಟು ಬಿಡದೆ ಮೂರ್ನಾಲ್ಕು ಗ್ರಾಮಸ್ಥರ ನಿದ್ದೆಗೆಡಿಸಿದ್ದ 5 ಹುಲಿಗಳ ಪೈಕಿ ಇಂದು ಮತ್ತೊಂದು ಹೆಣ್ಣು ಹುಲಿ ಮರಿ ಸೆರೆಯಾಗಿದೆ. ಆದರೆ ಈಗ ಸೆರೆ ಸಿಕ್ಕಿದ್ದು ಕೇವಲ 3 ಮರಿ ಮಾತ್ರ. ಇನ್ನು ಒಂದು ಮರಿ ಹುಲಿಗಳು ಸೆರೆಗಾಗಿ ಆಪರೇಷನ್ ಟಿ2 ಆಲ್ಫಾ ಚಾಲ್ತಿಯಲ್ಲಿದೆ. ನಾಳೆಯೂ ಇನ್ನುಳಿದ ಹುಲಿಗಾಗಿ ಶೋಧಕಾರ್ಯ ಮುಂದುವರೆಯಲಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ

ಈಗಾಗಲೇ ಸೆರೆ ಸಿಕ್ಕ ತಾಯಿ ಹುಲಿಗೆ ಹಾಗೂ 3 ಮರಿ ಹುಲಿಗಳಿಗೂ ಪಶು ವೈದ್ಯರಿಂದ ಅರವಳಿಕೆ ಮದ್ದು ನೀಡಿ ಅದರ ಆರೋಗ್ಯದ ಸ್ಥಿತಿ ಗತಿಯನ್ನ ಪರಿಶೀಲನೆ ಮಾಡಲಾಗಿದೆ. ಮೈಸೂರು ಕೇಜ್​ನಿಂದ ನಾರ್ಮಲ್ ಕೇಜ್​ಗೆ ಹುಲಿಯನ್ನ ಸ್ಥಳಾಂತರಿಸಲಾಗಿದೆ. ಇನ್ನು ಸೆರೆ ಸಿಕ್ಕ ಹೆಣ್ಣು ಹುಲಿ ಮರಿಯ ಆರೋಗ್ಯ ತಪಾಸಣೆ ಮಾಡಿರುವ ಪಶು ವೈದ್ಯರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಅದೇ ಬೋನಿನಲ್ಲಿ ಹುಲಿಯನ್ನ ಇರಿಸಿ ಉಳಿದ ಒಂದು ಮರಿ ಹುಲಿಗಾಗಿ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಕಾರ್ಯಾಚರಣೆ ನಡೆಸಲಿದ್ದಾರೆ. ಈಗಾಗಲೇ ಥರ್ಮಲ್ ಡ್ರೋನ್ ಕ್ಯಾಮರಾ ತರೆಸಿಕೊಂಡಿರುವ ಅರಣ್ಯ ಸಿಬ್ಬಂದಿ ರಾತ್ರಿಯಿಡಿ 1 ಮರಿ ಹುಲಿಗಳಿಗಾಗಿ ಆಪರೇಷನ್ ಟಿ2 ಆಲ್ಫಾ ನಡೆಸಲಿದ್ದಾರೆ.

ಇದನ್ನೂ ಓದಿ: ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು

ಅದೇನೆ ಹೇಳಿ ಸದ್ಯ ತಾಯಿ ಹುಲಿ ಸೇರಿ ಒಟ್ಟು 5 ಹುಲಿ ಕ್ಯಾಪ್ಚರ್ ಆಗಿದ್ದು ನಂಜೆದೇವನಪುರ ವೀರನಪುರ ಹಾಗೂ ಉಡೀಗಾಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಇನ್ನು 1 ಹುಲಿ ಸೆರೆಗಾಗಿ ಶತಾಯಗತಾಯ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Patanjali Model: ಜಾಗತಿಕ ಬ್ರ್ಯಾಂಡ್​ಗಳಿಗೆ ಪೈಪೋಟಿ ನೀಡುತ್ತಿರುವ ಪತಂಜಲಿಯ ಯಶಸ್ಸಿನ ಗುಟ್ಟೇನು? – Kannada News | Baba Ramdev’s Patanjali business model, know how it became successful in competing against MNC giants

ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ

ಭಾರತದಲ್ಲಿ ಪ್ರಮುಖ ಬ್ರ್ಯಾಂಡ್ ಅಥವಾ ಕಂಪನಿಯ ಬಗ್ಗೆ ಮಾತನಾಡುವಾಗಲೆಲ್ಲಾ ನಮ್ಮ ಗಮನ ಹೆಚ್ಚಾಗಿ ವಿದೇಶಿ ಬಹುರಾಷ್ಟ್ರೀಯ ಕಂಪನಿಗಳತ್ತ ತಿರುಗುತ್ತದೆ. ಆದಾಗ್ಯೂ, ಕಳೆದ ಕೆಲವು ವರ್ಷಗಳಲ್ಲಿ, ಜಾಗತಿಕ ಬ್ರ್ಯಾಂಡ್‌ಗಳ ಪ್ರಾಬಲ್ಯಕ್ಕೆ ಸವಾಲೊಡ್ಡುವ ರೀತಿಯಲ್ಲಿ ಸ್ಥಳೀಯ ಬ್ರ್ಯಾಂಡ್​ವೊಂದು ಮಿಂಚತೊಡಗಿದೆ, ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚೆಚ್ಚು ಬೆಳೆಯತೊಡಗಿದೆ. ಅದುವೇ ಪತಂಜಲಿ. ಪತಂಜಲಿ ಯೋಗಪೀಠ ನಿರ್ವಹಿಸುವ ಎಮರ್ಜೆನ್ಸಿ ಮತ್ತು ಕ್ರಿಟಿಕಲ್ ಕೇರ್ ಆಸ್ಪತ್ರೆಯನ್ನು (Patanjali Speciality Hospital) ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದರು. ಇದು ಕೇವಲ ಆಸ್ಪತ್ರೆಯಲ್ಲ, ಯೋಗ, ಆಯುರ್ವೇದ ಮತ್ತು ಆಧುನಿಕ ಔಷಧದ ವಿಶಿಷ್ಟ ಸಂಗಮ ಎನಿಸುವ ವಿಶ್ವದ ಮೊದಲ ಕೇಂದ್ರವಾಗಿದೆ. ಇದು ಆರೋಗ್ಯ ಕೇಂದ್ರದ ಉದ್ಘಾಟನೆ ಮಾತ್ರವಲ್ಲ, ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ವರ್ಷಗಳ ಹಿಂದಿನ ಕನಸು ಸಾಕಾರಗೊಂಡ ಸಂದರ್ಭ. ಒಂದು ಸಣ್ಣ ಆರಂಭವು ಈಗ ಆರ್ಥಿಕ ಮತ್ತು ಸಾಂಸ್ಕೃತಿಕ ಚಳುವಳಿಯಾಗಿದೆ.

ವಿದೇಶಿ ಹೊಳಪಿನ ನಡುವೆ ಸ್ವದೇಶಿಯ ಪ್ರಾಬಲ್ಯ

ಇವತ್ತಿನ ಕಾಲದಲ್ಲಿ, ಮಾರುಕಟ್ಟೆಯು ಪಾಶ್ಚಿಮಾತ್ಯ ವಿಧಾನಗಳು ಮತ್ತು ಉತ್ಪನ್ನಗಳಿಂದ ತುಂಬಿ ತುಳುಕುತ್ತಿದೆ. ಇಂಥ ಸಂದರ್ಭದಲ್ಲಿ, ಮೂಲ ಬೇರಿನೊಂದಿಗೆ ಸಂಪರ್ಕದಲ್ಲಿರುವುದು ಯಶಸ್ಸಿಗೆ ಖಚಿತ ಮಾರ್ಗ ಎಂಬುದನ್ನು ಪತಂಜಲಿ ಸಾಬೀತುಪಡಿಸಿದೆ. ರಿಸರ್ಚ್‌ಗೇಟ್‌ನಲ್ಲಿ (ResearchGate) ಪ್ರಕಟವಾದ ಅಧ್ಯಯನವು ಪತಂಜಲಿಯ ಯಶಸ್ಸಿನ ರಹಸ್ಯವು ಅದರ ವಿಶಿಷ್ಟ ತಂತ್ರದಲ್ಲಿದೆ ಎಂದು ಬಹಿರಂಗಪಡಿಸುತ್ತದೆ. ದೊಡ್ಡ ವಿದೇಶಿ ಕಂಪನಿಗಳು ಲಾಭ ಮತ್ತು ಮಾರುಕಟ್ಟೆ ಪ್ರವೃತ್ತಿಗಳ ಮೇಲೆ ಮಾತ್ರ ಗಮನಹರಿಸಿದರೆ, ಪತಂಜಲಿಯು ಭಾರತೀಯ ಗ್ರಾಹಕರ ನಾಡಿಮಿಡಿತವನ್ನು ಸೆರೆಹಿಡಿದಿದೆ.

ಭಾರತೀಯ ಮನಸ್ಸು ಇನ್ನೂ ತನ್ನ ಸಂಪ್ರದಾಯಗಳ ಮೇಲೆ ವಿಶ್ವಾಸ ಹೊಂದಿದೆ ಎಂಬುದನ್ನು ಪತಂಜಲಿ ಸಂಸಂಸ್ಥಾಪಕರು ಅರಿತಿದ್ದಾರೆ. ಪತಂಜಲಿಯು ಹರ್ಬಲ್ ಟೂತ್‌ಪೇಸ್ಟ್, ತುಪ್ಪ ಮತ್ತು ಸ್ಕಿನ್ ಕೇರ್ ಉತ್ಪನ್ನಗಳ ಮೂಲಕ ಆಧುನಿಕ ಪ್ಯಾಕೇಜಿಂಗ್‌ನಲ್ಲಿ ಪ್ರಾಚೀನ ಜ್ಞಾನವನ್ನು ಅನಾವರಣಗೊಳಿಸಿದೆ. ಇದು ಹಳೆಯ ಪೀಳಿಗೆಗೆ ಮಾತ್ರವಲ್ಲದೆ ಯುವ ಪೀಳಿಗೆಗೂ ಇಷ್ಟವಾಗಿದೆ. ಆಧುನಿಕ ಮತ್ತು ಸಂಪ್ರದಾಯ ಎರಡೂ ಕೂಡ ವಿರೋಧಾಭಾಸ ಎನಿಸಿದೆ ಪರಸ್ಪರ ಪೂರಕವಾಗಿರಬಹುದು ಎಂಬುದನ್ನು ಪತಂಜಲಿಯಿಂದ ಕಾಣಬಹುದು.

ಇದನ್ನೂ ಓದಿ: ನರನೋವು ಶಮನ ಮಾಡಬಲ್ಲ ‘ಪೀಡಾನಿಲ್ ಗೋಲ್ಡ್’; ಇದು ಪತಂಜಲಿ ಆಯುರ್ವೇದದ ಕೊಡುಗೆ

ಸ್ವಾವಲಂಬನೆ ಕೇವಲ ಘೋಷಣೆಯಲ್ಲ

“ಸ್ವಾವಲಂಬಿ ಭಾರತ”ದ ಬಗ್ಗೆ ನಾವು ಆಗಾಗ್ಗೆ ಮಾತನಾಡುವುದನ್ನು ಕೇಳುತ್ತೇವೆ. ಆದರೆ ಪತಂಜಲಿ ಅದನ್ನು ತನ್ನ ಬ್ಯುಸಿನೆಸ್ ಮಾಡಲ್​ನ ಅಡಿಪಾಯವನ್ನಾಗಿ ಮಾಡಿಕೊಂಡಿದೆ. ಇಂಟರ್ನ್ಯಾಷನಲ್ ಜರ್ನಲ್ ಆಫ್ ಮಲ್ಟಿಡಿಸಿಪ್ಲಿನರಿ ರಿಸರ್ಚ್ ಅಂಡ್ ಡೆವಲಪ್‌ಮೆಂಟ್‌ನಲ್ಲಿನ ಕೇಸ್ ಸ್ಟಡಿಯೊಂದರ ಪ್ರಕಾರ, ಪತಂಜಲಿಯ ಸಂಪೂರ್ಣ ರಚನೆಯು ಸ್ವದೇಶಿ ತತ್ವವನ್ನು ಆಧರಿಸಿದೆ. ಕಂಪನಿಯು ತನ್ನ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದಿಲ್ಲ, ಬದಲಿಗೆ ಸ್ಥಳೀಯ ರೈತರಿಂದ ನೇರವಾಗಿ ಖರೀದಿಸುತ್ತದೆ.

ಇದು ನಿಮ್ಮ ಮತ್ತು ನಮ್ಮ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಮಧ್ಯವರ್ತಿಗಳನ್ನು ತೊಡೆದುಹಾಕಿ ಸರಕುಗಳನ್ನು ಖರೀದಿಸಿ ಸ್ಥಳೀಯವಾಗಿಯೇ ಸಂಸ್ಕರಿಸಿದಾಗ, ವೆಚ್ಚಗಳು ಕಡಿಮೆಯಾಗುತ್ತವೆ. ಈ ಮಾದರಿಯನ್ನು ಅನುಸರಿಸುವುದರಿಂದ ಪತಂಜಲಿ ಉತ್ಪನ್ನಗಳು ಇತರ ಬಹುರಾಷ್ಟ್ರೀಯ ಬ್ರ್ಯಾಂಡ್‌ಗಳಿಗಿಂತ ಅಗ್ಗದ ಬೆಲೆಗೆ ಸಿಗುತ್ತವೆ. ವಿದೇಶೀ ಆಮದು ಮೇಲೆ ಅವಲಂಬನೆ ಕಡಿಮೆ ಮಾಡುವುದಲ್ಲದೆ, ಗ್ರಾಮೀಣ ಆರ್ಥಿಕತೆಗೆ ಹೊಸ ಜೀವ ಕೊಡುತ್ತದೆ. ಉದ್ಯೋಗಾವಕಾಶಗಳು ಹೆಚ್ಚುತ್ತವೆ. ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆಗಳನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಟೈಪ್-1 ಡಯಾಬಿಟಿಸ್ ಏನು? ಇದನ್ನು ನಿಯಂತ್ರಿಸುವ ಆಹಾರಕ್ರಮ ಮತ್ತು ಯೋಗಕ್ರಮಗಳೇನು? ಇಲ್ಲಿದೆ ಬಾಬಾ ರಾಮದೇವ್ ಸಲಹೆ

ರಾಷ್ಟ್ರ ನಿರ್ಮಾಣದ ಉದ್ದೇಶ

ಪತಂಜಲಿ ತನ್ನ ಪೂರೈಕೆ ಸರಪಳಿಯಿಂದ ಹಿಡಿದು ಮಾರ್ಕೆಟಿಂಗ್‌ವರೆಗೆ ಎಲ್ಲೆಡೆ ನಾವೀನ್ಯತೆಯನ್ನು ಅನ್ವಯಿಸಿದೆ. ಅದು ಆಹಾರ ಸಂಸ್ಕರಣೆಯಾಗಿರಲಿ, ಶಿಕ್ಷಣವಾಗಲಿ ಅಥವಾ ಈಗ ಈ ಹೊಸ ವಿಶ್ವ ದರ್ಜೆಯ ಆಸ್ಪತ್ರೆಯಾಗಿರಲಿ, ಸಮಗ್ರ ವಿಧಾನವು ಎಲ್ಲೆಡೆ ಸ್ಪಷ್ಟವಾಗಿದೆ.

ರಿಸರ್ಚ್ ಕಾಮನ್ಸ್‌ನಲ್ಲಿ ಪ್ರಕಟವಾದ ಇತ್ತೀಚಿನ ವರದಿಯು, ಒಂದು ವ್ಯವಹಾರವು ಅದರ ಸಾಂಸ್ಕೃತಿಕ ಗುರುತು ಮತ್ತು ರಾಷ್ಟ್ರೀಯ ಮನೋಭಾವದೊಂದಿಗೆ ಸಂಪರ್ಕಗೊಂಡಾಗ, ಅದು ಹೆಚ್ಚು ಸುಸ್ಥಿರವಾಗುತ್ತದೆ ಎಂದು ದೃಢಪಡಿಸುತ್ತದೆ. ಪತಂಜಲಿ ಎಮರ್ಜೆನ್ಸಿ ಮತ್ತು ಕ್ರಿಟಿಕಲ್ ಕೇರ್ ಆಸ್ಪತ್ರೆಯ ಉದ್ಘಾಟನೆಯು ಈ ದಿಕ್ಕಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಶಿಡ್ಲಘಟ್ಟ ಬೆದರಿಕೆ ಪ್ರಕರಣ: ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್, ರಾಜೀವ್ ಗೌಡನಿಗೆ ಶಾಕ್ – Kannada News | Accused Rajeev Gowda sent to judicial custody in Sidlaghatta official threat case

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ಧಗಳ ನಿಂದನೆ ಹಾಗೂ ಬೆದರಿಕೆ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನಿಗೆ (Rajeev Gowda) ಕೋರ್ಟ್​ ಶಾಕ್ ಕೊಟ್ಟಿದೆ. ರಾಜೀವ್ ಗೌಡಗೆ ಮಧ್ಯಂತರ ಜಾಮೀನು ನೀಡಲು ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್ ನಿರಾಕರಿಸಿದೆ. ಬದಲಿಗೆ 14 ದಿನ ಅಂದರೆ ಫೆಬ್ರವರಿ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಇನ್ನೊಂದೆಡೆ ಆರೋಪಿ ರಾಜೀವ್​​ ಗೌಡನಿಗೆ ಆಶ್ರಯ ನೀಡಿ ಪೊಲೀಸರ ಬಂಧನಕ್ಕೊಳಗಾಗಿದ್ದ ಮಂಗಳೂರಿನ ಉದ್ಯಮಿಗೆ ಜಾಮೀನು ಸಿಕ್ಕಿದೆ.

ಕಳೆದ 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನಿ (ಜನವರಿ 26) ಕೇರಳದ ಗಡಿಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇನ್ನು ಇದೇ ವೇಳೆ ಜೊತೆಗಿದ್ದ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್​​ನನ್ನು ಸಹ ಫೊಲೀಸರು ಬಂಧಿಸಿ ಶಿಡ್ಗಘಟ್​ಟಕ್ಕೆ ಕರೆತಂದಿದ್ದರು. ಬಳಿಕ ಆರೋಪಿಗಳಿಗೆ ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್​​ಗೆ ಹಾಜರುಡಿಸಲಾಯ್ತು. ಈ ವೇಳೆ ರಾಜೀವ್ ಗೌಡ ಪರ ವಕೀಲರು ಸಹ ಮಧ್ಯಂತರ ಜಾಮೀನಿಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​ ಜಾಮೀನು ಅರ್ಜಿಯನ್ನು ವಜಾಗೊಳಿಸಿ ರಾಜೀವ್​​ ಗೌಡನಿಗೆ ಫೆಬ್ರವರಿ 9ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇನ್ನು ರಾಜೀವ್ ಗೌಡನ ಆಶ್ರಯದಾಯ ಮೈಕಲ್​​​ಗೆ ಕೋರ್ಟ್ ಜಾಮೀನು ನೀಡಿದೆ.

Source link

Exit mobile version