ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ: ಸಿಗ್ನಲ್ ಸಮೀಪವಿರುವ ಬಸ್ ನಿಲ್ದಾಣಗಳ ತೆರವಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ – Kannada News | Bengaluru Traffic: BMTC Bus Stops Within 75 Meters of Signals to be Shifted to Ease Congestion
ಬೆಂಗಳೂರು, ಜುಲೈ 15: ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದಲ್ಲಿನ ಪ್ರಮುಖ ಸಮಸ್ಯೆಗಳ ನಿವಾರಣೆಗೆ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಫುಟ್ಪಾತ್ ಒತ್ತುವರಿ ತೆರವು, ಬಿಡಾಡಿ ವಾಹನಗಳ ಎತ್ತಂಗಡಿ ಸೇರಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇವುಗಳ ಜೊತೆಗೀಗ ನಗರದಲ್ಲಿನ ಟ್ರಾಫಿಕ್ ಸಮಸ್ಯೆ ನಿವಾರಣೆ ನಿಟ್ಟಿನಲ್ಲೂ ಸಚಿವರು ಕಾರ್ಯಪ್ರವತ್ತರಾಗಿದ್ದು, ಸಿಗ್ನಲ್ಗಳಿಂದ 75 ಮೀಟರ್ ಒಳಗಿರುವ ಬಸ್ ನಿಲ್ದಾಣಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಇತ್ತೀಚೆಗೆ ಸಚಿವ ಕೃಷ್ಣಭೈರೇಗೌಡ ಅವರ…