Hubli: ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನ – Kannada News | Union Minister Pralhad Joshi Honors Padma Shri Prabhakar Kore in Hubli

ಪ್ರಭಾಕರ್ ಕೋರೆ ಅವರಿಗೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಂದ ಸನ್ಮಾನ

ಹುಬ್ಬಳ್ಳಿ, ಜನವರಿ 27: 2026ನೇ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಕೆಎಲ್ಇ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರಭಾಕರ್ ಕೋರೆ ಅವರನ್ನು ಕುಟುಂಬದ ಸದಸ್ಯರೊಡಗೂಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ  ಸನ್ಮಾನಿಸಿ, ಅಭಿನಂದಿಸಿದ್ದಾರೆ. ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿನ ಕೋರೆ ಅವರ ಅಭೂತಪೂರ್ವ ಸೇವೆ ಗುರುತಿಸಿ ಅತ್ಯುನ್ನತ ಪ್ರಶಸ್ತಿಗೆ ಕೆಂದ್ರ ಸರ್ಕಾರ ಅವರನ್ನು ಆಯ್ಕೆ ಮಾಡಿದ್ದು, ಗಣರಾಜ್ಯೋತ್ಸವದ ಹಿಂದಿನ ದಿನ ಈ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು.

ಇನ್ನು ಸನ್ಮಾನ ನೆರವೇರಿಸಿದ ಬಳಿಕ  ಕೋರೆ ಅವರನ್ನು ಕೊಂಡಾಡಿರುವ ಜೋಶಿ, ಕೆಎಲ್​​ಇ ಶಿಕ್ಷಣ ಸಂಸ್ಥೆ ಕಟ್ಟಿ ಪ್ರಾಥಮಿಕ ಶಿಕ್ಷಣದಿಂದ ತಾಂತ್ರಿಕ, ವೈದ್ಯಕೀಯದಂತಹ ಉನ್ನತ ಶಿಕ್ಷಣ ಕ್ಷೇತ್ರದಲ್ಲಿನ ಅವರ ನಿಸ್ವಾರ್ಥ ಸೇವೆಯನ್ನು ಹಾಡಿ ಹೊಗಳಿದ್ದಾರೆ. ಸಮಾಜಕ್ಕೆ ಉತ್ತಮ ಶಿಕ್ಷಣ, ಆರೋಗ್ಯ ಕಲ್ಪಿಸುವಲ್ಲಿ ದಶಕದಿಂದಲೂ ನಿರತರಾಗಿರುವ ಇವರು, ಅನೇಕ ಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿ ಹಳ್ಳಿಗರ ಆರೋಗ್ಯ ರಕ್ಷಣೆಗೆ ಒತ್ತು ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಮತ್ತು ಜೋಶಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಪದ್ಮ ಪ್ರಶಸ್ತಿ ಪ್ರಕಟ; ರಾಜ್ಯದ ಶತಾವಧಾನಿ ಆರ್​​. ಗಣೇಶ್​​ಗೆ​​ ಪದ್ಮ ಭೂಷಣ, 7 ಮಂದಿಗೆ ಪದ್ಮಶ್ರೀ ಅವಾರ್ಡ್​​

ಪ್ರತಿ ವರ್ಷ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಇಂಜಿನಿಯರಿಂಗ್, ವ್ಯಾಪಾರ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಭಾರತೀಯ ನಾಗರಿಕರಿಗೆ ಭಾರತ ಸರ್ಕಾರದಿಂದ ನೀಡಲ್ಪಡುವ ಪದ್ಮ ಪ್ರಶಸ್ತಿಗೆ ಪ್ರಭಾಕರ ಕೋರೆ ಸೇರಿ ರಾಜ್ಯದ 8 ಮಂದಿ ಭಾಜನರಾಗಿದ್ದಾರೆ. ಅಂಕೇಗೌಡ ಎಂ., ಎಸ್​​.ಜಿ. ಸುಶೀಲಮ್ಮ, ಶಶಿಶೇಖರ್​​ ವೆಂಪತಿ, ಶುಭಾ ವೇಂಕಟೇಶ್​​ ಐಯ್ಯಂಗಾರ್​, ಡಾ.ಸುರೇಶ್ ಹನಗವಾಡಿ, ಟಿ.ಟಿ. ಜಗನ್ನಾಥನ್​​ ಕೂಡ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಇನ್ನು ಶತಾವಧಾನಿ ಆರ್​. ಗಣೇಶ್ ಅವರಿಗೆ ಪ್ರಸಕ್ತ ಸಾಲಿನ ಪದ್ಮ ಭೂಷಣ ಪ್ರಶಸ್ತಿ ಒಲಿದು ಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಇಬ್ಬರೂ ಸಾಯೋಣ ಎಂದು ಯುವತಿಯನ್ನು ನಂಬಿಸಿ ಕೊಂದ ಹಂತಕ! – Kannada News | Kerala Man murders relative after faking suicide pact

ಕೋಝಿಕೋಡ್, ಜನವರಿ 27: ಕೇರಳದಲ್ಲಿ ಆರಂಭದಲ್ಲಿ ಆತ್ಮಹತ್ಯೆ ಎಂದು ಭಾವಿಸಲಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇಂದು ಪೊಲೀಸರು 36 ವರ್ಷದ ವ್ಯಕ್ತಿಯನ್ನು ತನ್ನ ಸಂಬಂಧಿಯ ಕೊಲೆಗೆ (Murder) ಸಂಬಂಧಿಸಿದಂತೆ ಬಂಧಿಸಿದ್ದಾರೆ. ಜನವರಿ 24ರಂದು ಯುವತಿಯ ಸಾವು ಸಂಭವಿಸಿದಾಗ ಅದನ್ನು ಆತ್ಮಹತ್ಯೆ ಎಂದು ಭಾವಿಸಲಾಗಿತ್ತು. ಆದರೆ, ತನ್ನ ಅಕ್ರಮ ಸಂಬಂಧವನ್ನು ಮರೆಮಾಡಲು ವ್ಯಕ್ತಿಯೊಬ್ಬ ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ನಂಬಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಶನಿವಾರ ಎಲತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರೋಪಿಯ ಒಡೆತನದ ಕೈಗಾರಿಕಾ ಘಟಕದಲ್ಲಿ 26 ವರ್ಷದ ಯುವತಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆ ಯುವತಿಯ ಸಂಬಂಧಿಯಾಗಿರುವ ವೈಶಾಖ್, ಆಕೆ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿ ನನ್ನ ಪತ್ನಿಯ ಸಹಾಯದಿಂದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದೆ ಎಂದು ಹೇಳಿಕೊಂಡಿದ್ದ. ಆದರೆ, ತನಿಖೆಯ ವೇಳೆ ಭಯಾನಕ ಸಂಗತಿಗಳು ಬಯಲಾಯಿತು.

ಇದನ್ನೂ ಓದಿ: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ: ಮಹಿಳೆ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ವೈಶಾಖ್ ಆ ಯುವತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಆದರೆ, ತಮ್ಮ ಸಂಬಂಧವನ್ನು ಯಾರೂ ಒಪ್ಪದ ಕಾರಣದಿಂದ ಆಕೆಯ ಮನವೊಲಿಸಿ ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಒಪ್ಪಿಸಿದ್ದ. ಆತನ ಮಾತು ನಂಬಿ ಆಕೆ ನೇಣು ಹಾಕಿಕೊಂಡಿದ್ದಳು. ಆಕೆಯನ್ನು ನಂಬಿಸಲು ಆತ ಆಕೆಯ ಪಕ್ಕದಲ್ಲೇ ಇನ್ನೊಂದು ಕುಣಿಕೆಯನ್ನು ಕೂಡ ಹಾಕಿದ್ದ. ನಂತರ ತಾನೇ ಆಕೆಯ ಸ್ಟೂಲ್ ಒದ್ದು ಆಕೆಯನ್ನು ಸಾಯಿಸಿದ್ದ. ನಂತರ ಆತ ಆಕೆ ಸತ್ತಿರುವುದನ್ನು ಕನ್ಫರ್ಮ್ ಮಾಡಿಕೊಂಡು ಆಸ್ಪತ್ರೆಗೆ ಸೇರಿಸುವ ನಾಟಕವಾಡಿದ್ದ.

ವೈಶಾಖ್‌ ತನ್ನ ಪ್ಲಾನ್ ಪೊಲೀಸರಿಗೆ ಗೊತ್ತಾಗುವುದಿಲ್ಲ ಎಂದುಕೊಂಡಿದ್ದ. ಆದರೆ, ವಿಧಿವಿಜ್ಞಾನ ವರದಿಗಳು ಆ ಯುವತಿ ನೇಣು ಹಾಕಿಕೊಳ್ಳುವಾಗ ಮತ್ತು ಅವಳನ್ನು ಕೆಳಗೆ ಇಳಿಸಿದ ನಂತರವೂ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾಳೆ ಎಂದು ಸೂಚಿಸಿದಾಗ ಪೊಲೀಸರು ತನಿಖೆಯನ್ನು ಹೆಚ್ಚಿಸಿದರು.

ಇದನ್ನೂ ಓದಿ: ನಂಬಿಕೆ ಉಳಿಸಿಕೊಂಡ ಪೊಲೀಸರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ

ಆ ರಾತ್ರಿ ಅಲ್ಲಿಂದ ಹಿಂತಿರುಗಿ ಸಿಸಿಟಿವಿ ಹಾರ್ಡ್ ಡ್ರೈವ್ ಅನ್ನು ನಾಶಮಾಡಿ ಸಾಕ್ಷ್ಯವನ್ನು ಅಳಿಸಿಹಾಕುವುದು ಅವನ ಕೊನೆಯ ಪ್ಲಾನ್ ಆಗಿತ್ತು. ಆದರೆ, ಪೊಲೀಸರಿಗೆ ವೈಶಾಖ್ ನಡವಳಿಕೆಯಲ್ಲಿ ಅನುಮಾನ ಬಂದ ಕಾರಣದಿಂದ ಆತನ ಬಗ್ಗೆ ಒಂದು ಕಣ್ಣಿಟ್ಟಿದ್ದರು. ಪೊಲೀಸರ ವಿಚಾರಣೆಯಲ್ಲಿ, ವೈಶಾಖ್ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ.

ತಾನು ಹಾಗೂ ಆ ಯುವತಿ ಅಕ್ರಮ ಸಂಬಂಧದಲ್ಲಿದ್ದಾಗಿಯೂ, ಆಕೆ ನಿರಂತರವಾಗಿ ತನ್ನನ್ನು ಮದುವೆಯಾಗಬೇಕೆಂದು ಒತ್ತಾಯಿಸುತ್ತಿದ್ದರಿಂದ ತಾನು ಒತ್ತಡಕ್ಕೊಳಗಾಗಿದ್ದೆ. ಹೀಗಾಗಿ, ಆಕೆಯನ್ನು ಕೊಲ್ಲಲು ಪ್ಲಾನ್ ಮಾಡಿದ್ದಾಗಿ ಹೇಳಿದ್ದಾನೆ. ಇದರಿಂದಾಗಿ ಆತ್ಮಹತ್ಯೆಯ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಂದ ರಕ್ಕಸ ಮಗ: ಕಾರಣ ಕೇಳಿದ್ರೆ ಎಂತವರಿಗೂ ಪಿತ್ತ ನೆತ್ತಿಗೇರುತ್ತೆ! – Kannada News | For Money, Son Murders Mother in Lingasugur, Raichur

ಹತ್ಯೆಯಾದ ಚಂದವ್ವ ಮತ್ತು ಆರೋಪಿ ಕುಮಾರ್​​.

ರಾಯಚೂರು, ಜನವರಿ 27: ರಕ್ಕಸ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ, ಆಕೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಜಕ್ಕೇರು ತಾಂಡಾದಲ್ಲಿ ನಡೆದಿದೆ. ಚಂದವ್ವ (45) ಮೃತ ಮಹಿಳೆಯಾಗಿದ್ದು, ಆಕೆಯ ಮೊದಲ ಪುತ್ರ ಕುಮಾರನೇ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಮಗನಿಂದಲೇ ಕೊಲೆಯಾದ ಚಂದವ್ವಗೆ ಒಟ್ಟು 6 ಜನ ಮಕ್ಕಳು. ಆ ಪೈಕಿ 4 ಜನ ಹೆಣ್ಣು ಮಕ್ಕಳು ಮತ್ತು ಓರ್ವ ಮಗನಿಗೆ ಮದುವೆಯಾಗಿದೆ. ಮತ್ತೋರ್ವ ಪುತ್ರ ಸಂತೋಷ್​​ ಎಂಬಾಂತ ಇದೇ ಜಕ್ಕೇರು ತಾಂಡಾದಲ್ಲಿ ಜೆಸಿಬಿ ಆಪರೇಟರ್ ಆಗಿದ್ದರೆ, ಮೊದಲ ಮಗ ಕುಮಾರ್​​ ಹೆಂಡತಿ ಮತ್ತು ಮಕ್ಕಳ ಜೊತೆ ಬೆಂಗಳೂರಲ್ಲಿ ನೆಲೆಸಿದ್ದ. ಆದರೆ ಈತ ಸ್ವಲ್ಪ ಕಿರಿಕ್​​ ಪಾರ್ಟಿಯಾಗಿದ್ದು, ಕುಡಿದು ಗಲಾಟೆ ಮಾಡೋದು ಈತನ ಕೆಟ್ಟ ಚಾಳಿಯಾಗಿ ಮಾರ್ಪಟ್ಟಿತ್ತು. ಈ ಮಧ್ಯೆ ಇತ್ತೀಚೆಗೆ ಬೆಂಗಳೂರಿನಿಂದ ಜಕ್ಕೇರು ತಾಂಡಾ ಗ್ರಾಮಕ್ಕೆ ಬಂದಿದ್ದ ಕುಮಾರ್, ತಾಯಿ ಚಂದವ್ವ ಜೊತೆ ಗಲಾಟೆ ಮಾಡಿದ್ದ. ನಿನ್ನೆ ಸಂಜೆ ತಾಯಿ ಜೊತೆ ವಾಗ್ವಾದವಾಗಿ ಆಕೆಯನ್ನ ಎಳೆದಾಡಿ ಹೊಡೆದಿದ್ದ. ಬಳಿಕ ತಾಯಿ ಕೂದಲು ಹಿಡಿದು ಎಳೆದೊಯ್ದು ಮನೆ ಪಕ್ಕದ ಸೇವಾಲಾಲ್ ಭವನದ ಕಟ್ಟಡದ ಬಳಿ ಬಿಸಾಡಿದ್ದ. ಈ ವೇಳೆ ತಲೆಗೆ ಗಂಭೀರ ಪೆಟ್ಟಾಗಿ ಚಂದವ್ವ ಕುಸಿದಿದ್ದು, ಆಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪಾಪಿ ಮಗ ಕುಮಾರ್ ಹತ್ಯೆಗೈದಿದ್ದಾನೆ.

ಇದನ್ನೂ ಓದಿ: ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​; ಪತಿ, ಸೋದರ ಮಾವ ಸೂಸೈಡ್​​

ಇನ್ನು ಮಗ ಕುಮಾರ್​​, ತಾಯಿ ಚಂದವ್ವಳ ಹತ್ಯೆ ಮಾಡಲು ಕಾರಣ ಕೇಳಿದ್ರೆ ಕೋಪ ನೆತ್ತಿಗೇರತ್ತೆ. ದುಡಿದು ತಾಯಿ ಸಾಕಬೇಕಿದ್ದ ಮಗ ಕುಮಾರ್, 2 ಲಕ್ಷ ಹಣ ಕೊಡು ಎಂದು ಅಮ್ಮನನ್ನೇ ಪೀಡಿಸುತ್ತಿದ್ದ. ಆಕೆ ಕೊಡದೇ ಇದ್ದಾಗ ಮನೆ ಮಾಳಿಗೆಯ ಶೀಟ್ ಒಡೆದು ಹಾಕಿ ದೊಡ್ಡ ಗಲಾಟೆ ಮಾಡಿದ್ದ. ಜಮೀನು ಮಾರಿಯಾದರೂ ಹಣ ಕೊಡು ಎಂದು ಹೇಳಿದ್ದ ಆತ, ನಿನ್ನೆವರೆಗೆ ಆಕೆಗೆ ಡೆಡ್ ಲೈನ್ ಕೂಡ ಕೊಟ್ಟಿದ್ದ. ಆದ್ರೆ ನಿನ್ನೆ ತಾಯಿ ಚಂದವ್ವ, ನಿನ್ನ ತಮ್ಮ ಸಂತೋಷ್ ಮದುವೆ ಮಾಡಬೇಕಿದೆ. ಅದಕ್ಕೇ ಹಣ ಇಲ್ಲ, ನಿಂಗೆಲ್ಲಿ ಕೊಡಲಿ ಎಂದು ಬುದ್ದಿವಾದ ಹೇಳಿದ್ದಳು. ಇದೇ ವಿಚಾರಕ್ಕೆ ಕೆರಳಿದ ಪಾಪಿ ಕುಮಾರ್​, ತಾಯಿಯನ್ನ ಎಳೆದಾಡಿ ಅಟ್ಟಾಡಿಸಿ ರಸ್ತೆಯಲ್ಲೇ ಹೊಡೆದಿದ್ದಾನೆ. ಈ ವೇಳೆ ಬಿಡಿಸಲು ಹೋದ ಸ್ಥಳೀಯರ ಬಳಿ ನಿಮ್ಮನ್ನೂ ಮುಗಿಸ್ತಿನಿ ಅಂತ ಕಿರುಚಾಡಿದ್ದ ಎನ್ನಲಾಗಿದೆ. ಘಟನೆ ಬೆನ್ನಲ್ಲೇ ಮುದಗಲ್ ಪೊಲೀಸರು ಆರೋಪಿ ಕುಮಾರ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಹೆತ್ತ ತಾಯಿಯನ್ನೇ ಕೊಲೆಗೈದಿರೊ ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಕುಟುಂಬಸ್ಥರು ಕಣ್ಣೀರು ಹಾಕಿ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗಂಡನ ಅನುಮಾನದ ಭೂತಕ್ಕೆ ಬಲಿಯಾದ ಹೆಂಡ್ತಿ: ಪೊಲೀಸ್​​ ಮುಂದೆ ಪತ್ನಿಯ ಲವ್ವಿಡವ್ವಿ ಬಿಚ್ಚಿಟ್ಟ ಪತಿ – Kannada News | Chitradurga: Husband kills wife over Illicit Affair Suspected

ಚಿತ್ರದುರ್ಗ, ಜನವರಿ 27: ಆ ಕುಟುಂಬಕ್ಕೆ ಪತ್ನಿಯೇ ಆಧಾರ ಸ್ತಂಭವಾಗಿದ್ದರು. ಕ್ಯಾನ್ಸರ್ ಪೀಡಿತ ಪತಿಯ ಆರೈಕೆ ಜತೆಗೆ ಮನೆಯ ಜವಾಬ್ದಾರಿ ಕೂಡ ಹೊತ್ತಿದ್ದರು. ಆದರೆ ಪತಿಯ ತಲೆಗೆ ಹೊಕ್ಕ ಅನುಮಾನದ ಶಂಕೆಯೊಂದು ಪತ್ನಿಯ ಕೊಲೆ (murder) ಮಾಡಿಸಿದೆ. ಕೋಲಿನಿಂದ ತಲೆಗೆ ಹೊಡೆದು ಪತಿ (Husband)  ರವಿಕುಮಾರ್​​ ಪತ್ನಿ ಮಮತಾ(45)ರನ್ನು ಹತ್ಯೆಗೈದಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಡೆದದ್ದೇನು? 

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹಿರೇ ಎಮ್ಮಿಗನೂರು ಗ್ರಾಮ ಇಂದು ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದಿತ್ತು. ಬೆಳಗ್ಗೆ 6:30ರ ಸುಮಾರಿಗೆ ಮಮತಾ(45) ಹೆಣವಾಗಿದ್ದರು. ಮನೆಯಲ್ಲಿ ಯಾವುದೇ ಫೈಲ್ ಹುಡುಕುವ ವೇಳೆ ಏಣಿಯಿಂದ ಬಿದ್ದು ತೆಲೆಗೆ ಪೆಟ್ಟಾಗಿ, ರಕ್ತಸ್ರಾವದಿಂದ ಸಿರುಚೆಲ್ಲಿದ್ದಾರೆ ಎಂದು ಪತಿ ಕಥೆ ಕಟ್ಟಿದ್ದ.

ಇದನ್ನೂ ಓದಿ: ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಂದ ರಕ್ಕಸ ಮಗ: ಕಾರಣ ಕೇಳಿದ್ರೆ ಎಂತವರಿಗೂ ಪಿತ್ತ ನೆತ್ತಿಗೇರುತ್ತೆ!

ಮನೆಯ ಜವಾಬ್ದಾರಿ ಹೊತ್ತಿದ್ದ ಮಮತಾ ಕ್ಯಾನ್ಸರ್ ಪೀಡಿತ ಪತಿ ರವಿಕುಮಾರ್ (52)ನನ್ನು ಆರೈಕೆ ಮಾಡುತ್ತಿದ್ದರು. ಹೀಗಾಗಿ ಗ್ರಾಮಸ್ಥರು ಸಹ ಸಹಜವಾಗಿಯೇ ನಂಬಿದ್ದರು. ಜೊತೆಗೆ ಅನ್ಯೋನ್ಯವಾಗಿದ್ದ ದಂಪತಿ ಗಲಾಟೆ ಮಾಡಿದ್ದು, ಯಾರೂ ಕಂಡಿರಲಿಲ್ಲ. ಆದರೆ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದಾಗ ಅಸಲಿಯತ್ತು ಬಯಲಾಗಿತ್ತು.

ಅಕ್ರಮ ಸಂಬಂಧ ಹಿನ್ನೆಲೆ ಹತ್ಯೆ

ಚಿತ್ರದುರ್ಗ ಎಸ್​ಪಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್​​ಪಿ ಪಿ. ದಿನಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿಕ್ಕಜಾಜೂರು ಠಾಣೆ ಪೊಲೀಸರು ಆರೋಪಿ ರವಿಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮನೆಯ ಖರ್ಚು, ವೆಚ್ಚ, ಸಾಲ-ಸೋಲ ಮತ್ತು ಆಸ್ತಿ ಮಾರಾಟದ ಬಗ್ಗೆ ಪತಿ-ಪತ್ನಿ ನಡುವೆ ವಾಗ್ವಾದ ನಡೆದಿತ್ತು. ಅದೇ ಕಾರಣಕ್ಕೆ ಮನೆಯಲ್ಲಿದ್ದ ಕೋಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವುದಾಗಿ ಆರೋಪ ಕೇಳಿ ಬರುತ್ತಿದೆ. ಆದರೆ ಆರೋಪಿ ರವಿ ಮಾತ್ರ ಪತ್ನಿಗೆ ಅಕ್ರಮ ಸಂಬಂಧ ಇತ್ತು. ಹೀಗಾಗಿ, ಕೊಲೆ ಮಾಡಿದ್ದೇನೆಂದು ಪೊಲೀಸರೆದುರು ಒಪ್ಪಿಕೊಂಡಿರುವುದು ತಿಳಿದು ಬಂದಿದೆ.

ಇದನ್ನೂ ಓದಿ: ದೇವನಹಳ್ಳಿ: ಸಿಗರೇಟ್ ಸೇದಲು ಮ್ಯಾಚ್ ಬಾಕ್ಸ್ ಕೊಡದ್ದಕ್ಕೆ ಜೀವವೇ ಹೋಯ್ತು!

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಹಿರೇ ಎಮ್ಮಿಗನೂರು ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಕೊಂದು ಹಾಕಿದ ದಾರುಣ ಘಟನೆ ನಡೆದಿದೆ. ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ಸಂಪೂರ್ಣ ತನಿಖೆ ನಡೆಸಿ ಅಸಲಿಗೆ ಕೊಲೆಗೆ ಕಾರಣವೇನು ಎಂಬುದು ಪತ್ತೆ ಹಚ್ಚಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ISRO SAC Recruitment 2026: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | ISRO SAC Recruitment 2026: 49 Scientist/Engineer Vacancies Apply Now!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ಅಹಮದಾಬಾದ್‌ನ ಬಾಹ್ಯಾಕಾಶ ಕೇಂದ್ರ (Space Applications Centre – SAC) ನಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ (SD/SC) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ವಿಭಾಗಗಳಲ್ಲಿ ಒಟ್ಟು 49 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹೀಗಿವೆ.

ಶೈಕ್ಷಣಿಕ ಅರ್ಹತೆ:

ವಿಜ್ಞಾನಿ/ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಯ ಸ್ವಭಾವಕ್ಕೆ ಅನುಗುಣವಾಗಿ ಸಂಬಂಧಿತ ವಿಭಾಗದಲ್ಲಿ ಪಿಎಚ್‌ಡಿ / ಎಂಇ / ಎಂಟೆಕ್ / ಎಂಎಸ್‌ಸಿ / ಬಿಇ / ಬಿಟೆಕ್ / ಬಿಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ, ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿರುವಂತೆ ಸಂಬಂಧಿತ ಕ್ಷೇತ್ರದ ಕೆಲಸದ ಅನುಭವ ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿ:

ಫೆಬ್ರವರಿ 12, 2026ರ ಸ್ಥಿತಿಗೆ ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷಗಳ ನಡುವೆ ಇರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ದಿವ್ಯಾಂಗ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳವರೆಗೆ ಸಡಿಲಿಕೆಯಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 12 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು.

ಇದನ್ನೂ ಓದಿ: ಸುಪ್ರೀಂ ಕೋರ್ಟ್​​ನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಅಂತಿಮ ಆಯ್ಕೆಯು ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ISROನ ಅಹಮದಾಬಾದ್‌ನ ಬಾಹ್ಯಾಕಾಶ ಅನ್ವಯಿಕ ಕೇಂದ್ರದಲ್ಲಿ ನೇಮಕ ಮಾಡಲಾಗುತ್ತದೆ.

ವೇತನ ಮತ್ತು ಸೌಲಭ್ಯಗಳು:

ಆಯ್ಕೆಯಾದ ವಿಜ್ಞಾನಿ/ಇಂಜಿನಿಯರ್‌ಗಳಿಗೆ ತಿಂಗಳಿಗೆ 56,100 ರಿಂದ 2,08,700 ರೂ. ವರೆಗೆ ವೇತನ ನೀಡಲಾಗುತ್ತದೆ. ಇದಲ್ಲದೆ, ಕೇಂದ್ರ ಸರ್ಕಾರದ ನಿಯಮಗಳಂತೆ ಭತ್ಯೆಗಳು ಮತ್ತು ಇತರ ಸೌಲಭ್ಯಗಳೂ ಲಭ್ಯವಿರುತ್ತವೆ.

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಉನ್ನತ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ISRO SAC ನೇಮಕಾತಿ ಅತ್ಯುತ್ತಮ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಗಮನವಾಗಿ ಓದುವಂತೆ ಸಲಹೆ ನೀಡಲಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಧವೆಯರಿಗೆ ಗುಡ್​​​ ನ್ಯೂಸ್ ನೀಡಿದ ರಾಜ್ಯ ಸರ್ಕಾರ​​​: ಈಗಲೇ ಅರ್ಜಿ ಸಲ್ಲಿಸಿ, 3 ಲಕ್ಷ ರೂ. ವರೆಗೆ ಹಣ ಪಡೆಯಿರಿ – Kannada News | Karnataka Government Boosts SC Widow Remarriage for Empowerment

ಸಾಮಾಜಿಕ ವ್ಯವಸ್ಥೆಯಲ್ಲಿ ಒಂದು ಹೆಣ್ಣಿಗೆ ಒಂದು ಗಂಡು ಬೇಕು. ಒಂದು ಗಂಡಿಗೆ ಒಂದು ಹೆಣ್ಣು ಬೇಕು. ಇದು ಈ ಪ್ರಕೃತಿಯ ನಿಯಮ ಹಾಗೂ ಕಾನೂನು ಕೂಡ ಅದನ್ನೇ ಹೇಳುವುದು. ಅದೂ ಕೂಡ ಕಾನೂನಿನ ಪ್ರಕಾರ ಮದುವೆಯಾದರೆ ಮಾತ್ರ ಈ ಸಮಾಜದಲ್ಲಿ ಅವರಿಗೆ ಗಂಡ – ಹೆಂಡತಿ ಸ್ಥಾನ ನೀಡುತ್ತಾರೆ. ಈ ಸಮಾಜ ಕೂಡ ಆ ಸಂಬಂಧವನ್ನೇ ಒಪ್ಪಿಕೊಳ್ಳುವುದು. ಅದರಲ್ಲೂ ಈ ಸಮಾಜದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದರೆ ಬೇರೆ ಸಂಬಂಧ ಕಟ್ಟಿಕೊಡುತ್ತಾರೆ. ಅದರಲ್ಲೂ ಮಹಿಳೆ ಮದುವೆಯಾಗಿ ಗಂಡನನ್ನು ಕಳೆದುಕೊಂಡರೆ, ಅದಕ್ಕೆ ಬೇರೆಯೇ ಕಲ್ಪನೆಗಳನ್ನು ಸೃಷ್ಟಿಸುತ್ತಾರೆ. ಅದಕ್ಕಾಗಿ ಅಂತಹ ಮಹಿಳೆಯ ಅಭಿವೃದ್ಧಿಗಾಗಿ ಹಾಗೂ ಅವರನ್ನು ಮದುವೆಯಾಗಲು ಪ್ರೋತ್ಸಾಹಧನವನ್ನು (Karnataka SC Widow Remarriage Scheme) ನೀಡಲು ರಾಜ್ಯ ಸರ್ಕಾರಗಳು ಹೊಸ ಯೋಜನೆಯನ್ನು ತಂದಿದೆ. ಕರ್ನಾಟಕ ಸರ್ಕಾರವು ವಿಧವಾ ಮರು ವಿವಾಹವನ್ನು ಉತ್ತೇಜಿಸಲು ನೀಡುವ ಪ್ರೋತ್ಸಾಹಧನವನ್ನು ಇತ್ತೀಚೆಗೆ ಪರಿಷ್ಕರಿಸಲಾಗಿದೆ. ಪ್ರಸ್ತುತ ಈ ಯೋಜನೆಯ ಅಡಿಯಲ್ಲಿ ಮೊತ್ತವನ್ನು 3 ಲಕ್ಷ ರೂ.ವರೆಗೂ ಹೆಚ್ಚಿಸಲಾಗಿದೆ. ಈ ಹಿಂದೆ ಯೋಜನೆಯಡಿ ವಿಧವೆಯನ್ನು ವಿವಾಹವಾಗುವ ವ್ಯಕ್ತಿಗೆ ಸರ್ಕಾರವು 2,00,000 (ಎರಡು ಲಕ್ಷ ರೂಪಾಯಿ) ಪ್ರೋತ್ಸಾಹಧನವನ್ನು ನೀಡಲಾಗುತ್ತಿತ್ತು. ಇದೀಗ ಈ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲಾಗಿದೆ.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು (Social Welfare Department) ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಪ್ರೋತ್ಸಾಹಿಸಲು ಈ ವಿಶೇಷ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಪರಿಶಿಷ್ಟ ಜಾತಿಯ ವಿಧವೆಯನ್ನು ವಿವಾಹವಾಗುವ ದಂಪತಿಗೆ ಸರ್ಕಾರವು 3,00,000 (ಮೂರು ಲಕ್ಷ ರೂಪಾಯಿ) ಪ್ರೋತ್ಸಾಹಧನವನ್ನು ನೀಡುತ್ತದೆ ಎಂದು ಹೇಳಿದೆ.

ಯೋಜನೆಯ ಮುಖ್ಯ ಉದ್ದೇಶ:

ಪರಿಶಿಷ್ಟ ಜಾತಿಯ ವಿಧವೆಯರಿಗೆ ಸಮಾಜದಲ್ಲಿ ಗೌರವಯುತ ಸ್ಥಾನಮಾನ ನೀಡುವುದು, ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಮತ್ತು ಮರು ವಿವಾಹದ ಮೂಲಕ ಅವರ ಜೀವನವನ್ನು ಮರುರೂಪಿಸಲು ಸಹಾಯ ಮಾಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಅರ್ಹತಾ ಮಾನದಂಡಗಳು

ಜಾತಿ: ಮಹಿಳೆಯು ಕಡ್ಡಾಯವಾಗಿ ಪರಿಶಿಷ್ಟ ಜಾತಿ (Scheduled Caste) ವರ್ಗಕ್ಕೆ ಸೇರಿದವರಾಗಿರಬೇಕು.

ವಿವಾಹದ ಸ್ಥಿತಿ: ಇದು ಮಹಿಳೆಯ ಪಾಲಿಗೆ ಮರು ವಿವಾಹವಾಗಿರಬೇಕು (ಮೊದಲ ಪತಿ ಮರಣ ಹೊಂದಿರಬೇಕು).

ಪುರುಷನ ಅರ್ಹತೆ: ಮಹಿಳೆಯನ್ನು ಮದುವೆಯಾಗುವ ಪುರುಷನಿಗೆ ಇದು ಮೊದಲ ವಿವಾಹವಾಗಿರಬೇಕು.

ವಯೋಮಿತಿ: ಸರ್ಕಾರಿ ನಿಯಮದಂತೆ ಮಹಿಳೆಗೆ 18 ವರ್ಷ ಮತ್ತು ಪುರುಷನಿಗೆ 21 ವರ್ಷ ತುಂಬಿರಬೇಕು.

ಸಮಯದ ಮಿತಿ: ವಿವಾಹವಾದ ಒಂದು ವರ್ಷದೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಅವಧಿ: ಮದುವೆಯಾದ 1 ವರ್ಷದೊಳಗೆ ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯ.

ಇದನ್ನೂ ಓದಿ: ಈ ಬಾರಿಯ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮ ಹೊಸ ಮೈಲಿಗಲ್ಲು, 6.76 ಕೋಟಿ ಜನ ಭಾಗಿ

ಅಗತ್ಯ ದಾಖಲೆಗಳು :

ಜಾತಿ ಪ್ರಮಾಣಪತ್ರ: ದಂಪತಿಗಳಿಬ್ಬರ ಜಾತಿ ಪ್ರಮಾಣಪತ್ರ (ಮಹಿಳೆಯು SC ಎಂದು ದೃಢೀಕರಿಸಲು).

ಮರಣ ಪ್ರಮಾಣಪತ್ರ: ಮಹಿಳೆಯ ಮೊದಲ ಪತಿಯ ಮರಣ ಪ್ರಮಾಣಪತ್ರ.

ವಿವಾಹ ನೋಂದಣಿ ಪತ್ರ: ಮ್ಯಾರೇಜ್ ರಿಜಿಸ್ಟ್ರಾರ್ ಅವರಿಂದ ಪಡೆದ ಅಧಿಕೃತ ಪ್ರಮಾಣಪತ್ರ.

ಆಧಾರ್ ಕಾರ್ಡ್: ದಂಪತಿಗಳಿಬ್ಬರ ಆಧಾರ್ ಪ್ರತಿ.

ಬ್ಯಾಂಕ್ ವಿವರ: ದಂಪತಿಗಳ ಹೆಸರಿನಲ್ಲಿರುವ ಜಂಟಿ ಬ್ಯಾಂಕ್ ಖಾತೆ (Joint Account) ವಿವರ.

ಭಾವಚಿತ್ರ: ವಿವಾಹದ ಸಂಭ್ರಮದ ಫೋಟೋಗಳು.

ಅರ್ಜಿ ಸಲ್ಲಿಸುವ ವಿಧಾನ

ಈ ಯೋಜನೆಯು ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವುದರಿಂದ, ನೀವು ಈ ಕೆಳಗಿನ ಮೂಲಕ ಅರ್ಜಿ ಸಲ್ಲಿಸಬಹುದು:

ಆನ್‌ಲೈನ್: ಸೇವಾ ಸಿಂಧು ಪೋರ್ಟಲ್‌ನಲ್ಲಿ ‘ಸಮಾಜ ಕಲ್ಯಾಣ ಇಲಾಖೆ’ಯ ಅಡಿಯಲ್ಲಿರುವ ಈ ಯೋಜನೆಯನ್ನು ಆಯ್ಕೆ ಮಾಡಿ ಅರ್ಜಿ ಸಲ್ಲಿಸಿ.

ಕಚೇರಿ: ನಿಮ್ಮ ಜಿಲ್ಲೆಯ ಅಥವಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ (Assistant Director of Social Welfare) ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸುಲಭವಾಗಿ ಎದುರಿಸಲು ಈ ತತ್ವಗಳನ್ನು ಅನುಸರಿಸಿ – Kannada News | Chanakya Niti: If you follow these tips from Chanakya, you can easily overcome difficulties

ಪ್ರತಿಯೊಬ್ಬರ ಜೀವನದಲ್ಲೂ ಸುಖ-ದುಃಖ, ನೋವು ನಲಿವು ಎಲ್ಲವೂ ಇದ್ದೇ ಇರುತ್ತದೆ. ಈ ಎಲ್ಲಾ ಕಷ್ಟಗಳನ್ನು (difficulties) ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ. ಹೆಚ್ಚಿನವರು ಕಷ್ಟ ಎದುರಾಯಿತೆಂದು ಭಯಪಟ್ಟು, ಬರೀ ಕಷ್ಟವೇ ಎಂದು ತಾಳ್ಮೆಯನ್ನು ಕಳೆದುಕೊಂಡು ಎಲ್ಲವನ್ನೂ ಕಳೆದುಕೊಂಡು ಬಿಡುತ್ತಾರೆ. ಆದ್ರೆ ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಪಾಲಿಸುವ ಮೂಲಕ ಜೀವನದಲ್ಲಿ ಎದುರಾಗವು ಯಾವುದೇ ಕಷ್ಟವನ್ನೂ ಸುಲಭವಾಗಿ ಎದುರಿಸಬಹುದು, ಜೊತೆಗೆ ಇದು ಕಠಿಣ ಸಂದರ್ಭಗಳನ್ನು ಎದುರಿಸಿಕೊಂಡು ಮುಂದಕ್ಕೆ ಸಾಗುವ ಧೈರ್ಯವನ್ನು ನೀಡುತ್ತದೆ. ಆ ಸಲಹೆಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸುಲಭವಾಗಿ ಎದುರಿಸಲು ಈ ಸಲಹೆ ಪಾಲಿಸಿ:

ಚಿಂತನಶೀಲವಾಗಿ ಕೆಲಸ ಮಾಡಿ: ಒಬ್ಬ ವ್ಯಕ್ತಿಯು ಕಷ್ಟದ ಸಮಯವನ್ನು ಎದುರಿಸುತ್ತಿದ್ದರೆ, ಮೊದಲು ಹಣವನ್ನು ಉಳಿಸಿ ಅದನ್ನು ಬುದ್ಧಿವಂತಿಕೆಯಿಂದ ಬಳಸಬೇಕು ಎಂದು ಆಚಾರ್ಯ ಚಾಣಕ್ಯ ಸಲಹೆ ನೀಡುತ್ತಾರೆ. ಏಕೆಂದರೆ ಹಣವು ಕಷ್ಟದ ಸಮಯವನ್ನು ಸಾಧ್ಯವಾದಷ್ಟು ಬೇಗ ಜಯಿಸಲು ನಿಮಗೆ ಸಹಾಯ ಮಾಡುತ್ತದೆ. ಕಷ್ಟದ ಸಮಯದಲ್ಲಿ ಹಣವು ವ್ಯಕ್ತಿಯ ಮೊದಲ ಸ್ನೇಹಿತ, ಆದ್ದರಿಂದ ಅವರು ಎಂದಿಗೂ ಅನಗತ್ಯ ವಸ್ತುಗಳಿಗೆ ಹಣವನ್ನು ಖರ್ಚು ಮಾಡಬಾರದು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ.

ಯಾವುದೇ ಕೆಲಸವನ್ನು ಮುಂದೂಡಬೇಡಿ: ಯಾರಾದರೂ ಕೆಟ್ಟ ಸಮಯವನ್ನು ಎದುರಿಸುತ್ತಿದ್ದರೆ, ಅವರು ಯಾವುದೇ ಕೆಲಸವನ್ನು ನಾಳೆಗೆಮುಂದೂಡಬಾರದು, ಏಕೆಂದರೆ ಇದು ಅವರ ಸಮಸ್ಯೆಗಳನ್ನು ಇನ್ನಷ್ಟು ಹದಗೆಡಿಸಬಹುದು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಆದ್ದರಿಂದ, ಪರಿಸ್ಥಿತಿ ಹದಗೆಡುವುದನ್ನು ತಪ್ಪಿಸಲು ನೀವು ಬಯಸಿದರೆ, ನಿಮ್ಮ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ. ಇದು ಕಷ್ಟದ ಸಮಯವನ್ನು ತ್ವರಿತವಾಗಿ ದಾಟಲು ನಿಮಗೆ ಸಹಾಯ ಮಾಡುತ್ತದೆ.

ಸಕಾರಾತ್ಮಕ ಚಿಂತನೆ: ಕಷ್ಟದ ಸಮಯದಲ್ಲಿ ಸಕಾರಾತ್ಮಕ ದೃಷ್ಟಿಕೋನವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಂಡಾಗ ಜೀವನದಲ್ಲಿ ಎದುರಾಗುವ ಯಾವುದೇ ಸುಲಭವಾಗಿ ಎದುರಿಸಲು ಸಹಾಯ ಮಾಡುತ್ತದೆ. ಒಳ್ಳೆಯ ಸಮಯಗಳು ಮರಳುತ್ತವೆ ಎಂದು ನಂಬಲು ವ್ಯಕ್ತಿಗೆ ಧೈರ್ಯವನ್ನು ನೀಡುತ್ತದೆ. ಹಾಗಾಗಿ ಯಾವಾಗಲೂ ಸಕಾರಾತ್ಮಕವಾಗಿರಿ.

ಇದನ್ನೂ ಓದಿ: ಈ ರಹಸ್ಯಗಳನ್ನು ತಿಳಿದರೆ ನೀವು ಜೀವನದಲ್ಲಿ ಎಂದಿಗೂ ಸೋಲಲು ಸಾಧ್ಯವೇ ಇಲ್ಲ

ಸರಿ-ತಪ್ಪುಗಳ ನಡುವಿನ ವ್ಯತ್ಯಾಸ ತಿಳಿಯಿರಿ: ಸರಿ ಮತ್ತು ತಪ್ಪುಗಳ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಬೇಕು. ಈ ತಿಳುವಳಿಕೆಯನ್ನು ಬೆಳೆಸಿಕೊಂಡರೆ, ಭವಿಷ್ಯದಲ್ಲಿ ಬರುವ ಎಲ್ಲಾ ಸಮಸ್ಯೆಗಳು ಉದ್ಭವಿಸುವ ಮೊದಲೇ ಅವುಗಳನ್ನು ಸಮರ್ಥವಾಗಿ ಎದುರಿಸಲು ಸಹಾಯ ಮಾಡುತ್ತದೆ.

ತಾಳ್ಮೆ ಅತ್ಯಗತ್ಯ: ತಾಳ್ಮೆಯು ಒಬ್ಬ ವ್ಯಕ್ತಿಯನ್ನು ಅತ್ಯಂತ ಕೆಟ್ಟ ಸಮಯದಿಂದ ಕೂಡ ಹೊರಗೆ ಕರೆದೊಯ್ಯುವ ಅದ್ಭುತ ಗುಣ. ಹಾಗಾಗಿ ತಾಳ್ಮೆಯನ್ನು ಬೆಳೆಸಿಕೊಳ್ಳಿ. ಇದು ಜೀವನದ ಪ್ರತಿ ಹೆಜ್ಜೆಯನ್ನೂ ಚಿಂತನಶೀಲವಾಗಿ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

ಆಚಾರ್ಯ ಚಾಣಕ್ಯರ ಈ ಸಲಹೆಗಳನ್ನು ಪಾಲಿಸುವ ಮೂಲಕ ನೀವು ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸುಲಭವಾಗಿ ಎದುರಿಸಿ ಜಯಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದುವೆಗೂ ಮುನ್ನ ಗುಡ್ ನ್ಯೂಸ್ ನೀಡಿದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ – Kannada News | Rashmika Mandanna and Vijay Deverakonda announce new movie Ranabaali ahead of marriage

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ. ಪರಸ್ಪರ ಪ್ರೀತಿಸುತ್ತಿರುವ ಅವರು ಈ ವಿಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡಿಲ್ಲ. ಅವರ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಅದರ ನಡುವೆಯೇ ಅವರಿಬ್ಬರು ಒಂದು ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದರೆ, ಮತ್ತೊಮ್ಮೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಜೊತೆಯಾಗಿ ನಟಿಸಲಿದ್ದಾರೆ. ಈಗಾಗಲೇ ‘ಡಿಯರ್ ಕಾಮ್ರೇಡ್’, ‘ಗೀತ ಗೋವಿಂದಂ’ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ಅವರು ಈಗ ಹೊಸ ಸಿನಿಮಾದಲ್ಲಿ ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ‘ರಣಬಾಲಿ’ (Ranabaali) ಎಂದು ಶೀರ್ಷಿಕೆ ಇಡಲಾಗಿದೆ.

ವಿಜಯ್ ದೇವರಕೊಂಡ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದಿದ್ದಾರೆ. ಕಳೆದ ವರ್ಷ ಅವರು ನಟಿಸಿದ ‘ಕಿಂಗ್​ಡಮ್’ ಸಿನಿಮಾ ಬಿಡುಗಡೆ ಆಗಿತ್ತು. ಅಂದುಕೊಂಡ ಮಟ್ಟಕ್ಕೆ ಆ ಸಿನಿಮಾ ಕಲೆಕ್ಷನ್ ಮಾಡಲಿಲ್ಲ. ಈಗ ಅವರ ಹೊಸ ಸಿನಿಮಾ ‘ರಣಬಾಲಿ’ ಅನೌನ್ಸ್ ಆಗಿದೆ. ಇದು ಅವರ 14ನೇ ಸಿನಿಮಾ ಆಗಿದ್ದು, ಗಣರಾಜ್ಯೋತ್ಸವದ ಪ್ರಯುಕ್ತ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿದೆ.

‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆಯು ರಣಬಾಲಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿಯಲ್ಲಿ ಮೂಡಿಬರಲಿದೆ. ವಿಜಯ್ ದೇವರಕೊಂಡ ಅವರು ರಣಬಾಲಿ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಜಯಮ್ಮ ಎಂಬ ಪಾತ್ರವನ್ನು ನೀಡಲಾಗಿದೆ.

ಅಂದಹಾಗೆ, ‘ರಣಬಾಲಿ’ ಸಿನಿಮಾದಲ್ಲಿ ಐತಿಹಾಸಿಕ ಕಥಾಹಂದರ ಇದೆ. ಸ್ವಾತಂತ್ರ್ಯ ಸಿಗುವುದಕ್ಕೂ ಮುನ್ನ ಭಾರತದಲ್ಲಿ ಬ್ರಿಟಿಷರು ನಡೆಸಿದ ಹತ್ಯಾಕಾಂಡದ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗುವುದು. ಬ್ರಿಟಿಷರ ವಿರುದ್ಧ ತಿರುಗಿಬಿದ್ದ ಯುವಕನಾಗಿ ವಿಜಯ್ ದೇವರಕೊಂಡ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ಅಜಯ್-ಅತುಲ್ ಅವರು ‘ರಣಬಾಲಿ’ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ರಾಹುಲ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರನ್ನು ಜೋಡಿಯಾಗಿ ನೋಡಿ ಎಂಜಾಯ್ ಮಾಡಿದ್ದ ಅಭಿಮಾನಿಗಳು ಈಗ ‘ರಣಬಾಲಿ’ ಸಿನಿಮಾಗಾಗಿ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಸಿಡಿದೆದ್ದ ಹಿಂದೂ ಸಂಘಟನೆಗಳು – Kannada News | Chikkamagaluru: Hindu organizations Erupt Over Alleged Insult to Religious Sentiments by Tourists

ಪ್ರವಾಸಿಗರು, ಹಿಂದೂ ಸಂಘಟನೆಗಳಿಂದ ಡಿಸಿಗೆ ಮನವಿ

ಚಿಕ್ಕಮಗಳೂರು, ಜನವರಿ 27: ಕಾಫಿನಾಡು ಚಿಕ್ಕಮಗಳೂರು (Chikkamagaluru) ಪ್ರವಾಸಿಗರ ಪ್ರಮುಖ ತಾಣಗಳಲ್ಲಿ ಒಂದು. ಅಚ್ಚ ಹಸಿರಿನಿಂದ ಕಂಗೊಳಿಸುವ ಪಶ್ಚಿಮ ಘಟ್ಟವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಹರಿದುಬರುತ್ತಾರೆ. ಸದ್ಯ ಇದೇ ಪ್ರವಾಸಿಗರಿಂದ (Tourists) ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಪ್ರವಾಸಿಗರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್​ಗೆ  ಮನವಿ ಮಾಡಿದ್ದಾರೆ.

ನೈತಿಕ ಪೊಲೀಸ್ ಗಿರಿಯ ಎಚ್ಚರಿಕೆ

ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಕ್ಷೇತ್ರದಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪ ಕೇಳಿಬಂದಿದೆ. ನಮ್ಮ ಪುಣ್ಯಕ್ಷೇತ್ರಗಳು ಪ್ರವಾಸೋದ್ಯಮಕ್ಕೆ ಹಣ ಮಾಡುವ ಜಾಗವಾಗಿದೆ. ಶೂ ,ಚಪ್ಪಲಿ ಹಾಕಿ ಮುಳ್ಳಯ್ಯನಗಿರಿಯ ಮುಳ್ಳಪ್ಪ ಗದ್ದುಗೆ ಮೇಲೆ ಪ್ರವಾಸಿಗರು ಓಡಾಡುತ್ತಿದ್ದಾರೆ. ಪವಿತ್ರ ಸ್ಥಳದಲ್ಲೇ ಅನೈತಿಕ ಚಟುವಟಿಕೆ ನಡೆಯುತ್ತಿದೆ. ಪ್ರಶ್ನೆ ಮಾಡಿದ ಸ್ಥಳೀಯರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಇದೆ‌ ರೀತಿ ಮುಂದುವರೆದರೆ ನಾವೇ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹಿಂದೂ ಸಂಘಟನೆಗಳು ನೈತಿಕ ಪೊಲೀಸ್ ಗಿರಿಯ ಎಚ್ಚರಿಕೆ ನೀಡಿವೆ.

ಮನವಿ ಪತ್ರದಲ್ಲೇನಿದೆ?

ಚಿಕ್ಕಮಗಳೂರಿನ ಪವಿತ್ರ ಧಾರ್ಮಿಕ ತೀರ್ಥ ಕ್ಷೇತ್ರಗಳಿಗೆ ಪ್ರವಾಸಿಗರು ಆಗಮಿಸಿ ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವುದು ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ದತ್ತಪೀಠ, ಗಾಳಿಕೆರೆ, ಕಲ್ಲತ್ತಿಗಿರಿಗಳಂತಹ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸಿಗರು ಆಗಮಿಸಿ ಮೋಜು-ಮಸ್ತಿ ಮಾಡುತ್ತಾ ಮದ್ಯಪಾನ, ಧೂಮಪಾನ ಮತ್ತು ಅಸಭ್ಯ ರೀತಿಯಲ್ಲಿ ವರ್ತಿಸುವುದರ ಜೊತೆಗೆ ಪ್ಲಾಸ್ಟಿಕ್ ಬಳಕೆ ಮಾಡಿ ಪರಿಸರ ಹಾನಿ ಉಂಟು ಮಾಡುತ್ತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​​ ಮುಖಂಡನ ಪವರ್ ಮುಂದೆ ಡಮ್ಮಿಯಾದ ಅರಣ್ಯಾಧಿಕಾರಿಗಳು: ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ

ಮುಳ್ಳಯ್ಯನಗಿರಿಯ ದೇವಸ್ಥಾನದ ಆವರಣದೊಳಗೆ ಚಪ್ಪಲಿ ಧರಿಸಿ ಓಡಾಡುತ್ತಿರುವುದು ಅಲ್ಲದೇ ಅಲ್ಲಿನ ಪಾವಿತ್ರ್ಯತೆಗೆ ಧಕ್ಕೆ ತರುತ್ತಿದ್ದಾರೆ. ಇದರಿಂದ ಹಿಂದೂಗಳ ಭಾವನೆ ಕೆರಳಿಸುವಂತಾಗಿದೆ. ಆದ್ದರಿಂದ ಧಾರ್ಮಿಕ ಕ್ಷೇತ್ರಗಳಿಗೆ ಬರುವ ಪ್ರವಾಸಿಗರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರದಂತೆ ಕಾಪಾಡುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿ ಹಿಂದೂ ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಯನ್ನು ಕಾಪಾಡುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:46 pm, Tue, 27 January 26

Source link

‘ಕೈದಿ 2’, ‘ವಿಕ್ರಂ 2’, ‘ರೋಲೆಕ್ಸ್’ ಸಿನಿಮಾಗಳು ನಿಂತು ಹೋದವೆ? – Kannada News | Lokesh Kanagaraj talks about his LCU movies

ಲೋಕೇಶ್ ಕನಗರಾಜ್ (Lokesh Kangaraj) ತಮಿಳಿನ ಸ್ಟಾರ್ ನಿರ್ದೇಶಕ. ಆದರೆ ಇತ್ತೀಚೆಗೆ ಅವರು ತೆಗೆದುಕೊಳ್ಳುತ್ತಿರುವ ಕೆಲವು ನಿರ್ಧಾರಗಳಿಂದಾಗಿ ಅವರ ಅಭಿಮಾನಿಗಳು ಮಾತ್ರವಲ್ಲದೆ, ತಮಿಳು ಚಿತ್ರರಂಗದ ಕೆಲ ಸ್ಟಾರ್ ನಟರ ಅಭಿಮಾನಿಗಳು ಸಹ ಸಖತ್ ಟ್ರೋಲ್ ಮಾಡುತ್ತಿದ್ದಾರೆ. ಟೀಕೆ, ನಿಂದನೆಗೆ ಗುರಿ ಆಗುತ್ತಿದ್ದಾರೆ. ‘ಕೈದಿ’, ‘ವಿಕ್ರಂ’ ಸಿನಿಮಾಗಳಿಂದ ಭಾರಿ ಜನಪ್ರಿಯತೆ ಪಡೆದ ಲೋಕೇಶ್ ಕನಗರಾಜ್, ಅದೇ ಕತೆಗಳನ್ನು ಮುಂದುವರೆಸಿ ಅವುಗಳ ಸೀಕ್ವೆಲ್ ಮಾಡುವುದಾಗಿ ಹೇಳಿದ್ದರು. ಆದರೆ ಯಶಸ್ಸು ಸಿಗುತ್ತಲೇ ತಮಿಳು ಹೀರೋಗಳ ಕೈಬಿಟ್ಟು ಬಾಲಿವುಡ್​​ ನಟರು, ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟ ಅಲ್ಲು ಅರ್ಜುನ್ ಅವರ ಹಿಂದೆ ಹೋಗಿದ್ದಾರೆ. ಇದೇ ಕಾರಣಕ್ಕೆ ತಮಿಳು ಸಿನಿಮಾ ಪ್ರೇಮಿಗಳು ಲೋಕೇಶ್ ಅವರನ್ನು ಟೀಕಿಸುತ್ತಿದ್ದಾರೆ.

ಲೋಕೇಶ್ ಅವರು ಪ್ರಾರಂಭ ಮಾಡಿದ ‘ಎಲ್​​ಸಿಯು’ (ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್) ನಿಂತು ಹೋಗಿದೆ. ಲೋಕೇಶ್ ಅವರು ‘ಕೈದಿ 2’, ‘ವಿಕ್ರಂ 2’, ‘ರೋಲೆಕ್ಸ್’, ‘ಬೆಂಜ್’ ಸಿನಿಮಾಗಳನ್ನು ನಿರ್ದೇಶಿಸುವುದಿಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಹರಿದಾಡುತ್ತಿದೆ. ಲೋಕೇಶ್ ಕನಗರಾಜ್ ಇತ್ತೀಚೆಗೆ ಸಿನಿಮಾ ಒಂದರಲ್ಲಿ ನಾಯಕನಾಗಿ ಸಹ ನಟಿಸಲು ಆರಂಭಿಸಿದ್ದು, ಲೋಕೇಶ್ ಅವರು ನಿರ್ದೇಶನದಿಂದಲೇ ದೂರ ಉಳಿಯಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಲೋಕೇಶ್ ಕನಗರಾಜ್, ‘ಎಲ್​​ಸಿಯು’ ಅನ್ನು ನಾನು ಪ್ರಾರಂಭಿಸಿದ್ದಲ್ಲ, ಕೆಲ ಅಭಿಮಾನಿಗಳು ನನ್ನ ಸಿನಿಮಾಗಳ ಕತೆಗಳು ಒಂದಕ್ಕೊಂದು ಲಿಂಕ್ ಇರುವುದು ನೋಡಿ ‘ಎಲ್​​ಸಿಯು’ ಎಂದು ಕರೆದರು, ನಾನು ಅದನ್ನೇ ಮುಂದುವರೆಸಿದೆ. ಇನ್ನು ಕೆಲವರು ‘ಕೈದಿ 2’, ‘ವಿಕ್ರಂ 2’ ಇನ್ನೂ ಕೆಲವು ಎಲ್​​ಸಿಯು ಸಿನಿಮಾಗಳು ನಿಂತು ಹೋಗಿವೆ, ಲೋಕೇಶ್ ಅವರು ಆ ಸಿನಿಮಾಗಳನ್ನು ನಿರ್ದೇಶಿಸುವುದಿಲ್ಲ ಎನ್ನುತ್ತಿದ್ದಾರೆ. ಆದರೆ ಅದು ಸುಳ್ಳು. ಖಂಡಿತ ನಾನು ಆ ಸಿನಿಮಾಗಳನ್ನು ನಿರ್ದೇಶಿಸುತ್ತೇನೆ. ‘ಕೈದಿ 2’, ‘ವಿಕ್ರಂ 2’, ರೋಲೆಕ್ಸ್ ಪಾತ್ರದ ಬಗ್ಗೆ ಒಂದು ಸ್ಟಾಂಡ್ ಅಲೋನ್ ಸಿನಿಮಾ ಮತ್ತು ಅದೇ ಕತೆಯ ಒಳಗೆ ಬರುವ ‘ಬೆಂಜ್’ ಸಿನಿಮಾವನ್ನು ನಾನು ನಿರ್ದೇಶಿಸುತ್ತೇನೆ. ಅದು ನನ್ನ ಕಮಿಟ್​​ಮೆಂಟ್ ಎಂದಿದ್ದಾರೆ ಲೋಕೇಶ್.

ಇದನ್ನೂ ಓದಿ:‘ಕೂಲಿ’ ಚಿತ್ರದ ನಿರ್ಮಾಪಕರಿಗೆ 5 ಕೋಟಿ ರೂ. ಉಳಿಸಿದ ನಿರ್ದೇಶಕ ಲೋಕೇಶ್ ಕನಗರಾಜ್

ಪ್ರಸ್ತುತ ಲೋಕೇಶ್ ಸಿನಿಮಾ ಒಂದರಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಅದರ ಬಳಿಕ ಅಲ್ಲು ಅರ್ಜುನ್ ನಟಿಸಲಿರುವ ಹೊಸ ಸಿನಿಮಾವನ್ನು ಲೋಕೇಶ್ ನಿರ್ದೇಶನ ಮಾಡಲಿದ್ದಾರೆ. ಅದಾದ ಬಳಿಕ ಆಮಿರ್ ಖಾನ್ ನಟನೆಯ ಸೂಪರ್ ಹೀರೋ ಸಿನಿಮಾನಲ್ಲಿ ನಟಿಸಲಿದ್ದಾರೆ. ಅಸಲಿಗೆ ಆ ಕತೆಯನ್ನು ಲೋಕೇಶ್ ಸೂರ್ಯಗಾಗಿ ಮಾಡಿದ್ದರು. ಆದರೆ ಈಗ ಆ ಕತೆಯನ್ನು ಆಮಿರ್ ಖಾನ್​​ ಅವರಿಗಾಗಿ ನಿರ್ದೇಶಿಸುತ್ತಿದ್ದಾರೆ. ಲೋಕೇಶ್ ಅವರು ಜನಪ್ರಿಯತೆ ಮತ್ತು ಹಣದ ಹಿಂದೆ ಹೋಗಿ ತಮಿಳಿನ ಸ್ಟಾರ್ ನಟರ ಕೈ ಬಿಡುತ್ತಿದ್ದಾರೆ ಎಂದು ಸಿನಿಮಾ ಪ್ರೇಮಿಗಳು ಟೀಕೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version