Headlines

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ? ಇಲ್ಲಿದೆ ಇಟ್ರೆಸ್ಟಿಂಗ್ ಮಾಹಿತಿ

ಬೆಂಗಳೂರು, ಮೇ 30): ಸಿದ್ದರಾಮಯ್ಯನವರು ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಇದೇ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ ಅದಕ್ಕೂ ಮುನ್ನವೇ ನಿಯಮಗಳಂತೆ ಶಾಸಕಾಂಗ ಸಭೆ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಇದರಲ್ಲಿ ಡಿಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಸಭೆಯ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. ಹಾಗಾದ್ರೆ, ಆಯ್ಕೆ ಪ್ರತಿಕ್ರಿಯೆ ಹೇಗಿರುತ್ತೆ ಎನ್ನುವುದನ್ನು ನೋಡುವುದಾದರೆ, ಸಭೆ ಆರಂಭದಲ್ಲಿ ಶಾಸಕರ ಹಾಜರಾತಿ ಪಡೆದುಕೊಳ್ಳುವ ಪ್ರಕ್ರಿಯೆ…

Read More

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು, ಮೇ 30: ನಾಳೆ ಆರ್​​ಸಿಬಿ (RCB) VS ಜಿಟಿ ತಂಡಗಳ ಮಧ್ಯೆ ಹೈವೋಲ್ಟೇಜ್​​ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಇತ್ತ ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಅತ್ಯಂತ ಕಠಿಣ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​, ನಾಳೆ ಐಪಿಎಲ್ ಫೈನಲ್ ಮ್ಯಾಚ್ ನಡೆಯಲಿದೆ. ಬೆಂಗಳೂರು ಪೊಲೀಸರಿಗೆ ಸಲಹೆ, ಸೂಚನೆ ನೀಡಿದ್ದೇನೆ. ಅಭಿಮಾನಿಗಳ ಸೆಲೆಬ್ರೇಷನ್​​ನಿಂದ ಬೇರೆ ಅವರಿಗೆ ತೊಂದರೆ ಆಗಬಾರದು. ಎಲ್ಲರೂ ತಮ್ಮ ತಮ್ಮ ಮನೆ, ಕ್ಲಬ್​​ಗಳಲ್ಲಿ…

Read More

ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ, ಮೇ 30: ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ವಚಾರವೂ ತನಿಖೆಯ ವೇಳೆ ಬಯಲಿಗೆ ಬಂದಿದೆ. ತನಿಖಾಧಿಕಾರಿಗಳ ಪ್ರಕಾರ, ಈ ಗುಂಪು ಗಡಿಯಲ್ಲಿರುವ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಆತಂಕ ಸೃಷ್ಟಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದಾಳಿಗಳನ್ನು ನಡೆಸುವ ಜವಾಬ್ದಾರಿ…

Read More

Video: ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!

ಟರ್ಕಿಯ ಇಸ್ತಾನ್‌ಬುಲ್ ನಗರದ ಬೀದಿಗಳಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಬಲಿ ಕೊಡಲು ತಂದಿದ್ದ ಹೋರಿಯೊಂದು ತನ್ನ ಮಾಲೀಕನಿಂದ ತಪ್ಪಿಸಿಕೊಂಡು ಓಡಿ ಬಂದು, ನೇರವಾಗಿ ರಸ್ತೆಯ ಪಕ್ಕದಲ್ಲಿದ್ದ ಕ್ಷೌರದ ಅಂಗಡಿಯೊಂದರ (Barber Shop) ಒಳಗೆ ನುಗ್ಗಿ ತೀವ್ರ ಆತಂಕ ಹಾಗೂ ಗೊಂದಲದ ವಾತಾವರಣವನ್ನು ಸೃಷ್ಟಿಸಿದೆ. ಅಂಗಡಿಯ ಒಳಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಇದ್ದಕ್ಕಿದ್ದಂತೆ ಬೃಹತ್ ಹೋರಿ ಒಳಗೆ ನುಗ್ಗುವುದನ್ನು ಕಂಡು, ಅಲ್ಲಿದ್ದವರೆಲ್ಲರೂ ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿಹೋಗುವುದನ್ನು ಕಾಣಬಹುದು. ಅಂಗಡಿಯ ಒಳಗಿದ್ದ ಗಾಜಿನ ಬಾಗಿಲು ಮತ್ತು ಪೀಠೋಪಕರಣಗಳನ್ನು…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾ: ಪಟ್ಟಿ ಇಲ್ಲಿದೆ

‘ರೂಮ್​​ಮೇಟ್ಸ್’ ಕನ್ನಡದ ವೆಬ್ ಸರಣಿ. ಹೆಸರೇ ಸೂಚಿಸುತ್ತಿರುವಂತೆ ಒಂದೇ ರೂಮಿನಲ್ಲಿ ಬದುಕುತ್ತಿರುವ ಕೆಲ ಗೆಳೆಯರ ಆತ್ಮೀಯತೆಯ ಕತೆಯನ್ನು ಈ ವೆಬ್ ಸರಣಿ ಒಳಗೊಂಡಿದೆ. ರೂಮ್​​ಮೇಟ್ಸ್​​ಗಳ ನಡುವಿನ ತಮಾಷೆ, ಓನರ್ ಕಾಟ, ಗೆಳೆತಿಯರು, ಗೆಳೆಯರ ಸಹವಾಸ ಇನ್ನೂ ಹಲವು ವಿಷಯಗಳನ್ನು ಒಳಗೊಂಡ ಈ ವೆಬ್ ಸರಣಿ ಜೀ5 ನಲ್ಲಿ ಬಿಡುಗಡೆ ಆಗಿದೆ. ತಮಿಳಿನ ಸ್ಟಾರ್ ನಟ ಧನುಶ್ ನಟಿಸಿರುವ ‘ಕಾರಾ’ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತು. ದರೋಡೆಕೋರನೊಬ್ಬನ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದ್ದು, ಧನುಶ್…

Read More

IPL ಫೈನಲ್​​​ ದಿನದಂದು ಆರ್‌ಸಿಬಿ ಫ್ಯಾನ್ಸ್​​​ಗೆ ಉಚಿತ ಮೆಟ್ರೋ ಪ್ರಯಾಣ: ಅಂತೆಕಂತೆಗಳಿಗೆ BMRCL ಸ್ಪಷ್ಟನೆ

ಬೆಂಗಳೂರು, ಮೇ 30: ಅಹಮದಾಬಾದ್‌ನಲ್ಲಿ ಮೇ 31ರಂದು ನಡೆಯಲಿರುವ ಐಪಿಎಲ್ (IPL) ಫೈನಲ್ ಪಂದ್ಯ ಹಿನ್ನೆಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ನಮ್ಮ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸ್ಪಷ್ಟಪಡಿಸಿದೆ. ಯಾರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಎಲ್ಲರೂ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಬೇಕೆಂದು ಮನವಿ ಮಾಡಲಾಗಿದೆ. ಮುಖ್ಯಾಂಶಗಳು ನಾಳೆ ಅಹಮದಾಬಾದ್​​ನಲ್ಲಿ ಐಪಿಎಲ್​ ಫೈನಲ್ ಪಂದ್ಯ ಮೆಟ್ರೋದಲ್ಲಿ…

Read More

National Teacher Award 2026: ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ; ಕೇಂದ್ರ ಶಿಕ್ಷಣ ಸಚಿವಾಲಯದಿಂದ ನಾಮನಿರ್ದೇಶನಕ್ಕೆ ಮುಕ್ತ ಅವಕಾಶ!

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿImage Credit source: Pinterest ದೇಶದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಪ್ರಾಧ್ಯಾಪಕರು ಮತ್ತು ಬೋಧಕರನ್ನು ಗೌರವಿಸಲು ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯು ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026’ ಕ್ಕಾಗಿ ಆನ್‌ಲೈನ್ ಮೂಲಕ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶೈಕ್ಷಣಿಕ ನಾಯಕತ್ವ, ನಾವೀನ್ಯತೆ ಹಾಗೂ ವಿದ್ಯಾರ್ಥಿಗಳ ಪ್ರಗತಿಗೆ ಶ್ರಮಿಸಿದ ಆದರ್ಶ ಶಿಕ್ಷಕರನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತದೆ. ಈ…

Read More

ಒಬ್ಬರಿಗೆ ಕೊಟ್ಟರೆ ಮತ್ತೊಬ್ಬರಿಗೆ ಬೇಸರ: ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು

ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸಂಖ್ಯೆ ಮತ್ತು ಅವುಗಳ ಹಂಚಿಕೆ ಕುರಿತು ತೀವ್ರ ಗೊಂದಲದಲ್ಲಿದೆ. ಎರಡರಿಂದ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಅಥವಾ ಯಾವುದೇ ಹುದ್ದೆಯನ್ನು ರಚಿಸದೆ ಇರುವ ಆಯ್ಕೆಗಳ ಕುರಿತು ಚರ್ಚೆ ನಡೆದಿದೆ. ವಿವಿಧ ಜಾತಿ, ಸಮುದಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಸಾಧಿಸುವುದು ಪಕ್ಷಕ್ಕೆ ದೊಡ್ಡ ತಲೆನೋವಾಗಿದೆ. ಒಬಿಸಿ, ಲಿಂಗಾಯತ, ಮುಸ್ಲಿಂ ಮತ್ತು ದಲಿತ ಸಮುದಾಯಗಳಿಂದ ಪ್ರಮುಖ ನಾಯಕರು ಡಿಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಯತೀಂದ್ರ, ಈಶ್ವರ ಖಂಡ್ರೆ, ಎಂ.ಬಿ….

Read More

ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ! ವಿಧಾನಸಭೆ ನೂತನ ಸ್ಪೀಕರ್ ಯಾರಾಗ್ತಾರೆ ಗೊತ್ತಾ?

ಬೆಂಗಳೂರು, ಮೇ.30: ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. ಈ ಸಂಭಾವ್ಯ ಸಚಿವರ ಪಟ್ಟಿ ಟಿವಿ9 ವಾಹಿನಿಗೆ ಲಭ್ಯವಾಗಿದೆ. ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್, ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ,…

Read More

ಸಿಂಧೂ ನದಿ ಒಪ್ಪಂದದ ಬಿಕ್ಕಟ್ಟು: ಪಾಕಿಸ್ತಾನದ ಕರಾಚಿಯಲ್ಲಿ ತೀವ್ರ ಜಲಕ್ಷಾಮ, ರಾಜಕೀಯ ಕೆಸರೆರಚಾಟ

ಕರಾಚಿ, ಮೇ 30: ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ನದಿ(Indus River) ನೀರು ಒಪ್ಪಂದವು ಸ್ಥಗಿತಗೊಂಡಿರುವುದು ಪಾಕಿಸ್ತಾನದ ಜಲ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿ ಬೇಸಿಗೆಯ ಉತ್ತುಂಗದ ನಡುವೆ ತೀವ್ರ ನೀರಿನ ಕೊರತೆ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಕೈಗೊಂಡಿರುವ ದಂಡನಾತ್ಮಕ ಕ್ರಮಗಳಿಂದ ಪಾಕಿಸ್ತಾನ ಈಗಾಗಲೇ ತೀವ್ರ ರಾಜತಾಂತ್ರಿಕ ಮತ್ತು ಆರ್ಥಿಕ ಒತ್ತಡ ಎದುರಿಸುತ್ತಿದೆ. ಶೇ. 70 ರಷ್ಟು ನಗರಕ್ಕೆ ನೀರಿಲ್ಲ:…

Read More