IPL 2026: ಫೈನಲ್​ಗೂ ಮುನ್ನ ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ನೋಡಿ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More

Source link

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ? ಇಲ್ಲಿದೆ ಇಟ್ರೆಸ್ಟಿಂಗ್ ಮಾಹಿತಿ

ಬೆಂಗಳೂರು, ಮೇ 30): ಸಿದ್ದರಾಮಯ್ಯನವರು ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಇದೇ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ ಅದಕ್ಕೂ ಮುನ್ನವೇ ನಿಯಮಗಳಂತೆ ಶಾಸಕಾಂಗ ಸಭೆ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಇದರಲ್ಲಿ ಡಿಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಸಭೆಯ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. ಹಾಗಾದ್ರೆ, ಆಯ್ಕೆ ಪ್ರತಿಕ್ರಿಯೆ ಹೇಗಿರುತ್ತೆ ಎನ್ನುವುದನ್ನು ನೋಡುವುದಾದರೆ, ಸಭೆ ಆರಂಭದಲ್ಲಿ ಶಾಸಕರ ಹಾಜರಾತಿ ಪಡೆದುಕೊಳ್ಳುವ ಪ್ರಕ್ರಿಯೆ ಇರಲಿದೆ. ಬಳಿಕ ಸಿಎಲ್ಪಿ ಕಾರ್ಯದರ್ಶಿ ಅಲ್ಲಮ್ ಪ್ರಭು ಪಾಟೀಲ್‌ ಅವರು ಸ್ವಾಗತ ಭಾಷಣ ಮಾಡಲಿದ್ದು, ನಂತರ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾತನಾಡಲಿದ್ದಾರೆ. ತದನಂತರ ಸಿದ್ದರಾಮಯ್ಯ ಅವರಿಂದ ನೂತನ ಸಿಎಲ್ಪಿ ನಾಯಕನ ಹೆಸರು ಪ್ರಸ್ತಾವ ಮಂಡನೆಯಾಗಲಿದ್ದು, ಅದಕ್ಕೆ ಇಬ್ಬರು ಶಾಸಕರು ಅನುಮೋದನೆ ನೀಡಲಿದ್ದಾರೆ. ಕೊನೆಗೆ ಸಿಎಲ್ಪಿ ನಾಯಕನ ಘೋಷಣೆ ಬಳಿಕ ಡಿಕೆಶಿವಕುಮಾರ್ ಅವರು ಧನ್ಯವಾದ ತಿಳಿಸಲಿದ್ದಾರೆ.

Source link

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು, ಮೇ 30: ನಾಳೆ ಆರ್​​ಸಿಬಿ (RCB) VS ಜಿಟಿ ತಂಡಗಳ ಮಧ್ಯೆ ಹೈವೋಲ್ಟೇಜ್​​ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಇತ್ತ ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಅತ್ಯಂತ ಕಠಿಣ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​, ನಾಳೆ ಐಪಿಎಲ್ ಫೈನಲ್ ಮ್ಯಾಚ್ ನಡೆಯಲಿದೆ. ಬೆಂಗಳೂರು ಪೊಲೀಸರಿಗೆ ಸಲಹೆ, ಸೂಚನೆ ನೀಡಿದ್ದೇನೆ. ಅಭಿಮಾನಿಗಳ ಸೆಲೆಬ್ರೇಷನ್​​ನಿಂದ ಬೇರೆ ಅವರಿಗೆ ತೊಂದರೆ ಆಗಬಾರದು. ಎಲ್ಲರೂ ತಮ್ಮ ತಮ್ಮ ಮನೆ, ಕ್ಲಬ್​​ಗಳಲ್ಲಿ ಮಾಡಿಕೊಳ್ಳಿ. ರಸ್ತೆಯಲ್ಲಿ ಸೆಲೆಬ್ರೇಷನ್​ಗೆ ಅವಕಾಶವಿಲ್ಲ. ಒಂದು ವೇಳೆ ಹಾಗೇನಾದರೂ ಕಂಡುಬಂದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಡಿಡಿ ಚೆಕ್ಕಿಂಗ್ ಕಠಿಣವಾಗಿ ಮಾಡುತ್ತೇವೆ. ಜನ ಸೇರಿದರೆ ಕಂಟ್ರೋಲ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ವರದಿ: ವಿಕಾಸ್ ಟಿವಿ9 ಕ್ರೈಂ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ, ಮೇ 30: ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ವಚಾರವೂ ತನಿಖೆಯ ವೇಳೆ ಬಯಲಿಗೆ ಬಂದಿದೆ. ತನಿಖಾಧಿಕಾರಿಗಳ ಪ್ರಕಾರ, ಈ ಗುಂಪು ಗಡಿಯಲ್ಲಿರುವ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಆತಂಕ ಸೃಷ್ಟಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದಾಳಿಗಳನ್ನು ನಡೆಸುವ ಜವಾಬ್ದಾರಿ ಅವರಿಗೆ ನೀಡಲಾಗಿತ್ತು. ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ವಿಶೇಷ ಘಟಕವು ಆರೋಪಿಗಳನ್ನು ಬಂಧಿಸಿದೆ.

ಬಂಧಿತರಿಂದ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ವಸ್ತುಗಳಲ್ಲಿ ಅತ್ಯಾಧುನಿಕ ಪಿಸ್ತೂಲ್‌ಗಳು, ಗ್ರೆನೇಡ್‌ಗಳು ಸೇರಿ ಉಗ್ರ ಚಟುವಟಿಕೆಗಳಿಗೆ ಬಳಸುವ ಇತರ ಸಾಮಗ್ರಿಗಳೂ ಸೇರಿವೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದು, ಸಂಭಾವ್ಯ ದಾಳಿ ಬಗ್ಗೆ ನಿರ್ದೇಶನಗಳನ್ನು ಪಡೆಯುತ್ತಿದ್ದರು ಎಂಬುದು ಗೊತ್ತಾಗಿದೆ. ಮೂಲಗಳ ಪ್ರಕಾರ, ಬಂಧಿತರಲ್ಲಿ ದೆಹಲಿ, ಮಹಾರಾಷ್ಟ್ರ ಹಾಗೂ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ನಿವಾಸಿಗಳು ಸೇರಿದ್ದಾರೆ. ಕೆಲ ವಿದೇಶಿ ಪ್ರಜೆಗಳೂ ಇದ್ದಾರೆ ಎನ್ನಲಾಗಿದ್ದು, ಅವರ ಗುರುತು ಹಾಗೂ ರಾಷ್ಟ್ರೀಯತೆಯನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ಭಾರತ ಆಪರೇಷನ್ ಸಿಂಧೂರ್ 2.0ಗೆ ತಯಾರಿ ನಡೆಸುತ್ತಿದೆ; ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ಆರೋಪಿಗಳು ಮತ್ತು ಮುಂಬೈ ಭೂಗತ ಜಗತ್ತಿನ ನಡುವಿನ ಸಂಬಂಧಗಳ ಕುರಿತೂ ತನಿಖೆ ನಡೆಸಲಾಗುತ್ತಿದೆ. ಶಂಕಿತ ಉಗ್ರರ ಹಣಕಾಸಿನ ವ್ಯವಹಾರ, ಸಂವಹನ ದಾಖಲೆಗಳು ಹಾಗೂಇವರ ಸಂಪರ್ಕಗಳನ್ನು ಪರಿಶೀಲಿಸಲಾಗುತ್ತಿದೆ. ದೇಶದ ಇತರೆ ಭಾಗಗಳಲ್ಲಿಯೂ ಇನ್ನಷ್ಟು ಕಾರ್ಯಕರ್ತರು ಸಕ್ರಿಯರಾಗಿದ್ದಾರೆಯೇ ಹಾಗೂ ಸಂಭಾವ್ಯ ಗುರಿಗಳ ಕುರಿತು ಪೂರ್ವ ಪರಿಶೀಲನೆ ನಡೆಸಲಾಗಿದೆಯೇ ಎಂಬುದನ್ನೂ ಪತ್ತೆಹಚ್ಚಲು ತನಿಖಾ ಸಂಸ್ಥೆಗಳು ಪ್ರಯತ್ನಿಸುತ್ತಿವೆ. ಘಟನೆ ಬೆನ್ನಲ್ಲೇ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಜಾಲದ ವ್ಯಾಪ್ತಿ ಹಾಗೂ ಸಂಪರ್ಕಗಳ ಕುರಿತು ಗುಪ್ತಚರ ಸಂಸ್ಥೆಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಬಂಧಿತರ ವಿಚಾರಣೆ ಮತ್ತು ವಶಪಡಿಸಿಕೊಂಡಿರುವ ವಸ್ತುಗಳ ವಿಶ್ಲೇಷಣೆ ಬಳಿಕ ಇನ್ನಷ್ಟು ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!

ಟರ್ಕಿಯ ಇಸ್ತಾನ್‌ಬುಲ್ ನಗರದ ಬೀದಿಗಳಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಬಲಿ ಕೊಡಲು ತಂದಿದ್ದ ಹೋರಿಯೊಂದು ತನ್ನ ಮಾಲೀಕನಿಂದ ತಪ್ಪಿಸಿಕೊಂಡು ಓಡಿ ಬಂದು, ನೇರವಾಗಿ ರಸ್ತೆಯ ಪಕ್ಕದಲ್ಲಿದ್ದ ಕ್ಷೌರದ ಅಂಗಡಿಯೊಂದರ (Barber Shop) ಒಳಗೆ ನುಗ್ಗಿ ತೀವ್ರ ಆತಂಕ ಹಾಗೂ ಗೊಂದಲದ ವಾತಾವರಣವನ್ನು ಸೃಷ್ಟಿಸಿದೆ. ಅಂಗಡಿಯ ಒಳಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಇದ್ದಕ್ಕಿದ್ದಂತೆ ಬೃಹತ್ ಹೋರಿ ಒಳಗೆ ನುಗ್ಗುವುದನ್ನು ಕಂಡು, ಅಲ್ಲಿದ್ದವರೆಲ್ಲರೂ ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿಹೋಗುವುದನ್ನು ಕಾಣಬಹುದು. ಅಂಗಡಿಯ ಒಳಗಿದ್ದ ಗಾಜಿನ ಬಾಗಿಲು ಮತ್ತು ಪೀಠೋಪಕರಣಗಳನ್ನು ಮುರಿದು ರಂಪಾಟ ಮಾಡಿದ ಈ ಹೋರಿಯನ್ನು ಹಿಡಿಯಲು ಮಾಲೀಕ ಹಾಗೂ ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾ: ಪಟ್ಟಿ ಇಲ್ಲಿದೆ

Source link

IPL ಫೈನಲ್​​​ ದಿನದಂದು ಆರ್‌ಸಿಬಿ ಫ್ಯಾನ್ಸ್​​​ಗೆ ಉಚಿತ ಮೆಟ್ರೋ ಪ್ರಯಾಣ: ಅಂತೆಕಂತೆಗಳಿಗೆ BMRCL ಸ್ಪಷ್ಟನೆ

ಬೆಂಗಳೂರು, ಮೇ 30: ಅಹಮದಾಬಾದ್‌ನಲ್ಲಿ ಮೇ 31ರಂದು ನಡೆಯಲಿರುವ ಐಪಿಎಲ್ (IPL) ಫೈನಲ್ ಪಂದ್ಯ ಹಿನ್ನೆಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ನಮ್ಮ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸ್ಪಷ್ಟಪಡಿಸಿದೆ. ಯಾರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಎಲ್ಲರೂ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಬೇಕೆಂದು ಮನವಿ ಮಾಡಲಾಗಿದೆ.

ಮುಖ್ಯಾಂಶಗಳು

  • ನಾಳೆ ಅಹಮದಾಬಾದ್​​ನಲ್ಲಿ ಐಪಿಎಲ್​ ಫೈನಲ್ ಪಂದ್ಯ
  • ಮೆಟ್ರೋದಲ್ಲಿ RCB ಅಭಿಮಾನಿಗಳಿಗೆ ಉಚಿತ ಪ್ರಯಾಣ ವದಂತಿ
  • ಉಚಿತ ಪ್ರಯಾಣ ಇಲ್ಲ ಎಂದು ಬಿಎಂಆರ್​ಸಿಎಲ್​​​​

ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಬಿಎಂಆರ್​ಸಿಎಲ್

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಎಂಆರ್​ಸಿಎಲ್, ಬಿಎಂಆರ್‌ಸಿಎಲ್​​ ಗಮನಕ್ಕೆ ಬಂದಿರುವಂತೆ ಕೆಲವು ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಸಂದೇಶಗಳು ಹಾಗೂ ಜಾಹೀರಾತುಗಳಲ್ಲಿ, 2026ರ ಮೇ 31ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಾವಳಿಯ ಪ್ರಯುಕ್ತ ಆರ್‌ಸಿಬಿ ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ ಎಂದು ತಪ್ಪಾಗಿ ಪ್ರಚಾರ ಮಾಡಲಾಗಿದೆ.

ಬಿಎಂಆರ್​ಸಿಎಲ್ ಟ್ವೀಟ್​

ಇದನ್ನೂ ಓದಿ: ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!

2026ರ ಮೇ 31ರಂದು ಆರ್‌ಸಿಬಿ ಅಭಿಮಾನಿಗಳಿಗೆ ಅಥವಾ ಯಾವುದೇ ಇತರ ಪ್ರಯಾಣಿಕ ವರ್ಗಕ್ಕೆ ಉಚಿತ ಮೆಟ್ರೋ ಪ್ರಯಾಣ ಸೌಲಭ್ಯ ಒದಗಿಸುವ ಯಾವುದೇ ಯೋಜನೆಯನ್ನು ಬಿಎಂಆರ್‌ಸಿಎಲ್ ಘೋಷಿಸಿಲ್ಲ ಹಾಗೂ ಅನುಮೋದಿಸಿಲ್ಲ. ಉಚಿತ ಮೆಟ್ರೋ ಪ್ರಯಾಣ ಎಂದು ಜಾಹೀರಾತು ನೀಡಲು, ಪ್ರಚಾರ ಮಾಡಲು ಅಥವಾ ಪ್ರತಿನಿಧಿಸಲು ಯಾವುದೇ ವ್ಯಕ್ತಿ, ಸಂಸ್ಥೆ ಅಥವಾ ಸಂಘಟನೆಗೆ ಬಿಎಂಆರ್‌ಸಿಎಲ್ ಅನುಮತಿ ಅಥವಾ ಅಧಿಕೃತ ಮಾನ್ಯತೆ ನೀಡಿಲ್ಲ ಎಂದು ತಿಳಿಸಿದೆ.

ಪ್ರಯಾಣಿಕರು ಟಿಕೆಟ್ ಖರೀದಿಸಿ ಪ್ರಯಾಣಿಸಬೇಕು

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಎಲ್ಲಾ ಪ್ರಯಾಣಿಕರು ಟಿಕೆಟ್ ಖರೀದಿಸಬೇಕು ಅಥವಾ ಸ್ಮಾರ್ಟ್ ಕಾರ್ಡ್, ಕ್ಯೂಆರ್ ಟಿಕೆಟ್, ಎನ್‌ಸಿಎಂಸಿ ಕಾರ್ಡ್ ಅಥವಾ ಬಿಎಂಆರ್‌ಸಿಎಲ್ ಅನುಮೋದಿಸಿರುವ ಇತರೆ ಪ್ರಯಾಣ ಮಾಧ್ಯಮಗಳನ್ನು ಬಳಸಬೇಕು. ಪ್ರಯಾಣವು ಬಿಎಂಆರ್‌ಸಿಎಲ್‌ನ ಪ್ರಚಲಿತ ದರ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ: BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ಸಾರ್ವಜನಿಕರು ಅನಧಿಕೃತ ಸಾಮಾಜಿಕ ಜಾಲತಾಣದ ಪೋಸ್ಟ್​ಗಳು, ಜಾಹೀರಾತುಗಳು ಅಥವಾ ಸಂದೇಶಗಳನ್ನು ನಂಬಬಾರದು ಹಾಗೂ ಮಾಹಿತಿಗಾಗಿ ಬಿಎಂಆರ್‌ಸಿಎಲ್‌ ಅಧಿಕೃತ ಪ್ರಕಟಣೆಗಳು ಮತ್ತು ಅಧಿಕೃತ ಮಾಧ್ಯಮಗಳನ್ನು ಮಾತ್ರ ಅವಲಂಬಿಸುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:02 pm, Sat, 30 May 26

Source link

National Teacher Award 2026: ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ; ಕೇಂದ್ರ ಶಿಕ್ಷಣ ಸಚಿವಾಲಯದಿಂದ ನಾಮನಿರ್ದೇಶನಕ್ಕೆ ಮುಕ್ತ ಅವಕಾಶ!

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿImage Credit source: Pinterest

ದೇಶದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಪ್ರಾಧ್ಯಾಪಕರು ಮತ್ತು ಬೋಧಕರನ್ನು ಗೌರವಿಸಲು ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯು ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026’ ಕ್ಕಾಗಿ ಆನ್‌ಲೈನ್ ಮೂಲಕ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶೈಕ್ಷಣಿಕ ನಾಯಕತ್ವ, ನಾವೀನ್ಯತೆ ಹಾಗೂ ವಿದ್ಯಾರ್ಥಿಗಳ ಪ್ರಗತಿಗೆ ಶ್ರಮಿಸಿದ ಆದರ್ಶ ಶಿಕ್ಷಕರನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತದೆ. ಈ ಪ್ರಶಸ್ತಿ ಪ್ರಕ್ರಿಯೆಗೆ ‘ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು’ (AICTE) ಸಾಂಸ್ಥಿಕ ಪಾಲುದಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಅರ್ಹ ಶಿಕ್ಷಕರು ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ ಆದ awards.gov.in ಮೂಲಕ ತಮ್ಮ ನಾಮನಿರ್ದೇಶನಗಳನ್ನು ಸಲ್ಲಿಸಬಹುದಾಗಿದೆ.

ಪ್ರಶಸ್ತಿಯ ಪ್ರಮುಖ ವಿಭಾಗಗಳು (Categories):

ಈ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ಪ್ರಮುಖವಾಗಿ ಎರಡು ವಿಭಾಗಗಳ ಅಡಿಯಲ್ಲಿ ನೀಡಲಾಗುತ್ತದೆ:

  • ವಿಭಾಗ 1 (ಉನ್ನತ ಶಿಕ್ಷಣ ಸಂಸ್ಥೆಗಳು): ಈ ವಿಭಾಗದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಶಿಕ್ಷಕರನ್ನು ಮೂರು ಉಪ-ವಿಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲನೆಯದಾಗಿ ಇಂಜಿನಿಯರಿಂಗ್, ತಂತ್ರಜ್ಞಾನ ಮತ್ತು ಆರ್ಕಿಟೆಕ್ಚರ್; ಎರಡನೆಯದಾಗಿ ಗಣಿತ, ಭೌತಶಾಸ್ತ್ರ, ಜೀವವಿಜ್ಞಾನ, ರಸಾಯನಶಾಸ್ತ್ರ, ವೈದ್ಯಕೀಯ ಮತ್ತು ಫಾರ್ಮಸಿ ಸೇರಿದಂತೆ ಶುದ್ಧ ವಿಜ್ಞಾನಗಳು (Pure Sciences); ಮೂರನೆಯದಾಗಿ ಕಲೆ, ಸಮಾಜ ವಿಜ್ಞಾನ, ಮಾನವಿಕ ವಿಷಯಗಳು, ಭಾಷೆಗಳು, ಕಾನೂನು ಅಧ್ಯಯನ, ವಾಣಿಜ್ಯ ಮತ್ತು ನಿರ್ವಹಣೆ (Management) ವಿಭಾಗಗಳು ಸೇರಿವೆ.
  • ವಿಭಾಗ 2 (ಪಾಲಿಟೆಕ್ನಿಕ್ ಸಂಸ್ಥೆಗಳು): ಈ ವಿಭಾಗವನ್ನು ದೇಶಾದ್ಯಂತ ಇರುವ ಪಾಲಿಟೆಕ್ನಿಕ್ ಕಾಲೇಜುಗಳ ಶಿಕ್ಷಕರು ಮತ್ತು ಅಧ್ಯಾಪಕ ಸಿಬ್ಬಂದಿಗಾಗಿ ಪ್ರತ್ಯೇಕವಾಗಿ ಮೀಸಲಿಡಲಾಗಿದೆ.

ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತಾ ಮಾನದಂಡಗಳು:

ಭಾರತದ ಕಾಲೇಜುಗಳು, ವಿಶ್ವವಿದ್ಯಾಲಯಗಳು, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ (Regular) ಅಧ್ಯಾಪಕರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿದಾರರು ಪದವಿ (Undergraduate) ಮತ್ತು/ಅಥವಾ ಸ್ನಾತಕೋತ್ತರ (Postgraduate) ಮಟ್ಟದಲ್ಲಿ ಕನಿಷ್ಠ 5 ವರ್ಷಗಳ ಪೂರ್ಣಾವಧಿ ಬೋಧನಾ ಅನುಭವವನ್ನು ಹೊಂದಿರಬೇಕು. ಜೊತೆಗೆ, ನಾಮನಿರ್ದೇಶನವನ್ನು ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಅಭ್ಯರ್ಥಿಗಳ ವಯಸ್ಸು 55 ವರ್ಷ ಮೀರಿರಬಾರದು. ಪ್ರಸ್ತುತ ಸೇವೆಯಲ್ಲಿರುವ ಉಪಕುಲಪತಿಗಳು (Vice-Chancellors), ನಿರ್ದೇಶಕರು (Directors) ಮತ್ತು ಪ್ರಾಂಶುಪಾಲರು (Principals) ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ. ಆದರೆ, ಹಿಂದೆ ಇಂತಹ ಹುದ್ದೆಗಳನ್ನು ನಿರ್ವಹಿಸಿ ಈಗ ಸಕ್ರಿಯ ಬೋಧನೆಯಲ್ಲಿದ್ದು, 55 ವರ್ಷದೊಳಗಿನ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ನಾಮನಿರ್ದೇಶನ ಪ್ರಕ್ರಿಯೆ ಮತ್ತು ಕೊನೆಯ ದಿನಾಂಕ:

ಸಾರ್ವಜನಿಕ ಸಹಭಾಗಿತ್ವದ (Janbhagidari) ಆಧಾರದ ಮೇಲೆ ಈ ನಾಮನಿರ್ದೇಶನ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಆನ್‌ಲೈನ್ ಮೂಲಕ ನಡೆಸಲಾಗುತ್ತದೆ. ಇದಕ್ಕಾಗಿ ಮೂರು ವಿಧದ ಆಯ್ಕೆಗಳನ್ನು ನೀಡಲಾಗಿದೆ:

  • ಸ್ವಯಂ ನಾಮನಿರ್ದೇಶನ (Self-Nomination): ಅರ್ಹ ಶಿಕ್ಷಕರು ತಾವೇ ನೇರವಾಗಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.
  • ಸಾಂಸ್ಥಿಕ ನಾಮನಿರ್ದೇಶನ (Institutional Nomination): ಸಂಸ್ಥೆಯ ಮುಖ್ಯಸ್ಥರು (ಪ್ರಾಂಶುಪಾಲರು/ನಿರ್ದೇಶಕರು) ಅರ್ಹ ಶಿಕ್ಷಕರ ಹೆಸರನ್ನು ಶಿಫಾರಸು ಮಾಡಬಹುದು.
  • ಸಹೋದ್ಯೋಗಿಗಳ ನಾಮನಿರ್ದೇಶನ (Peer Nomination): ಅದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಸಹೋದ್ಯೋಗಿ ಶಿಕ್ಷಕರು ಮತ್ತೊಬ್ಬ ಪ್ರತಿಭಾವಂತ ಶಿಕ್ಷಕನನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು.

ಈ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿದ್ದಲ್ಲಿ, ಅಭ್ಯರ್ಥಿಗಳು AICTE ಇಲಾಖೆಯನ್ನು ಇಮೇಲ್ (helpdesknataward26@aicte-india.org) ಮೂಲಕ ಅಥವಾ ಕಚೇರಿ ಅವಧಿಯಲ್ಲಿ ದೂರವಾಣಿ ಸಂಖ್ಯೆ (011-29581051 / 011-295811236) ಮೂಲಕ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದಾಗಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಬ್ಬರಿಗೆ ಕೊಟ್ಟರೆ ಮತ್ತೊಬ್ಬರಿಗೆ ಬೇಸರ: ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು

ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸಂಖ್ಯೆ ಮತ್ತು ಅವುಗಳ ಹಂಚಿಕೆ ಕುರಿತು ತೀವ್ರ ಗೊಂದಲದಲ್ಲಿದೆ. ಎರಡರಿಂದ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಅಥವಾ ಯಾವುದೇ ಹುದ್ದೆಯನ್ನು ರಚಿಸದೆ ಇರುವ ಆಯ್ಕೆಗಳ ಕುರಿತು ಚರ್ಚೆ ನಡೆದಿದೆ. ವಿವಿಧ ಜಾತಿ, ಸಮುದಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಸಾಧಿಸುವುದು ಪಕ್ಷಕ್ಕೆ ದೊಡ್ಡ ತಲೆನೋವಾಗಿದೆ. ಒಬಿಸಿ, ಲಿಂಗಾಯತ, ಮುಸ್ಲಿಂ ಮತ್ತು ದಲಿತ ಸಮುದಾಯಗಳಿಂದ ಪ್ರಮುಖ ನಾಯಕರು ಡಿಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಯತೀಂದ್ರ, ಈಶ್ವರ ಖಂಡ್ರೆ, ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಖಾನ್, ಯು.ಟಿ. ಖಾದರ್, ಜಿ. ಪರಮೇಶ್ವರ ಮತ್ತು ಪ್ರಿಯಾಂಕ್ ಖರ್ಗೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಇವರಲ್ಲಿ ಕೆಲವರನ್ನು ಆಯ್ಕೆ ಮಾಡುವುದು ಉಳಿದವರಿಗೆ ಅಸಮಾಧಾನಕ್ಕೆ ಕಾರಣವಾಗಬಹುದು ಎಂಬ ಆತಂಕ ಪಕ್ಷಕ್ಕಿದೆ. ಹೀಗಾಗಿ ಶಾಸಕರ ಅರ್ಹತೆ, ಜಾತಿ ಮತ್ತು ಸಮುದಾಯವಾರು ಪ್ರಾತಿನಿಧ್ಯವನ್ನು ಪರಿಗಣಿಸಿ ಹೊಸ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸರ್ಕಸ್ ನಡೆಸುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ! ವಿಧಾನಸಭೆ ನೂತನ ಸ್ಪೀಕರ್ ಯಾರಾಗ್ತಾರೆ ಗೊತ್ತಾ?

ಬೆಂಗಳೂರು, ಮೇ.30: ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. ಈ ಸಂಭಾವ್ಯ ಸಚಿವರ ಪಟ್ಟಿ ಟಿವಿ9 ವಾಹಿನಿಗೆ ಲಭ್ಯವಾಗಿದೆ. ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್, ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡು ರಾವ್ ಮತ್ತು ಎನ್.ಎ. ಹ್ಯಾರಿಸ್ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೆಲ ಹಿರಿಯರನ್ನು ಮುಂದುವರಿಸುವ ಜೊತೆಗೆ ಹೊಸ ಮುಖಗಳಿಗೂ ಅವಕಾಶ ನೀಡುವ ಸಾಧ್ಯತೆ ಇದೆ. ಹೊಸ ಸರ್ಕಾರ ರಚನೆಯ ಸಂದರ್ಭದಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ನಡೆದಿದ್ದು, ಎಚ್.ಕೆ. ಪಾಟೀಲ್ ಮತ್ತು ಮಹದೇವಪ್ಪ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಅನುಭವದ ಆಧಾರದ ಮೇಲೆ ಮಹದೇವಪ್ಪ ಅವರ ಹೆಸರು ಪ್ರಬಲವಾಗಿದೆ. ಪ್ರಮಾಣ ವಚನ ಸ್ವೀಕಾರದ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ನಿಂದ ಬರಬೇಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version