Headlines

Independence Day Wishes: ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ; ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಅತ್ಯುತ್ತಮ ಕನ್ನಡ ಶುಭಾಶಯಗಳು ಹಾಗೂ ಸ್ಟೇಟಸ್‌ಗಳು – Kannada News | Independence Day Wishes, Quotes, Images, Messages, WhatsApp and Facebook Status in Kannada

ಆಗಸ್ಟ್ 15ರಂದು ಭಾರತವು ತನ್ನ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತಿದೆ. ಈ ಶುಭ ಸಂದರ್ಭದಲ್ಲಿ ನಿಮ್ಮ ಸ್ನೇಹಿತರು, ಬಂಧು-ಮಿತ್ರರು ಹಾಗೂ ಕುಟುಂಬದವರಿಗೆ ಶುಭಾಶಯ ಕೋರಲು, ವಾಟ್ಸಪ್, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಸ್ಟೇಟಸ್ ಹಾಕಿಕೊಳ್ಳಲು ಇಲ್ಲಿದೆ ಆಕರ್ಷಕ ಮೆಸೇಜ್‌ಗಳು, ಶುಭಾಶಯಗಳು ಹಾಗೂ ಸ್ಪೂರ್ತಿದಾಯಕ ನುಡಿಗಳು ಇಲ್ಲಿವೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು “ತ್ಯಾಗ, ಬಲಿದಾನ ಮತ್ತು ದೇಶಪ್ರೇಮದ ಸಂಕೇತವಾದ 79ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು! ಜೈ ಹಿಂದ್!” “ನಮ್ಮ ದೇಶದ ಹೆಮ್ಮೆ, ಸಾರ್ವಭೌಮತೆ ಮತ್ತು ಏಕತೆಯನ್ನು ಎತ್ತಿಹಿಡಿಯೋಣ….

Read More

6+2+3 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ – Kannada News | India Playing XI For 1st Test Against Sri Lanka

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 15 ರಿಂದ ಶುರುವಾಗಲಿದೆ. ಶ್ರೀಲಂಕಾ ಗಾಲೆಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಬ್ಬರು ಕನ್ನಡಿಗರು ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಈ ಸರಣಿಯಿಂದ ಸಾಯಿ ಸುದರ್ಶನ್ ಹೊರಗುಳಿದಿದ್ದು ಅವರ ಬದಲಿಗೆ ದೇವದತ್ ಪಡಿಕ್ಕಲ್​ಗೆ ಸ್ಥಾನ ಸಿಗುವುದು ಬಹುತೇಕ ಕನ್ಫರ್ಮ್ ಆಗಿದೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್​ ಇಲೆವೆನ್​ನಲ್ಲಿ ಕನ್ನಡಿಗರಾದ ಕೆ. ಎಲ್. ರಾಹುಲ್ ಹಾಗೂ ದೇವದತ್…

Read More

Independence Day Tricolour Food: ಸ್ವಾತಂತ್ರ್ಯ ದಿನಾಚರಣೆಯಂದು ಸುಲಭವಾಗಿ ‘ತ್ರಿವರ್ಣ’ ಖಾದ್ಯ ತಯಾರಿಸಿ; ರೆಸಿಪಿ ಇಲ್ಲಿದೆ – Kannada News | 80th Independence Day: Celebrate with Healthy Tricolour Food Recipes

ಆಗಸ್ಟ್ 15ರ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಇಡೀ ಭಾರತವೇ ಸಜ್ಜಾಗಿದೆ. ಈ ರಾಷ್ಟ್ರೀಯ ಹಬ್ಬದ ದಿನದಂದು ಮನೆಯಲ್ಲಿಯೇ ರಾಷ್ಟ್ರಧ್ವಜದ ಮೂರು ಬಣ್ಣಗಳಾದ ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳನ್ನು ಪ್ರತಿನಿಧಿಸುವ ‘ತ್ರಿವರ್ಣ’ ಖಾದ್ಯಗಳನ್ನು ತಯಾರಿಸಿ ಕುಟುಂಬದವರೊಂದಿಗೆ ಸವಿಯುವುದು ಸಂಭ್ರಮವನ್ನು ಇಮ್ಮಡಿಗೊಳಿಸುತ್ತದೆ. ಯಾವುದೇ ಕೃತಕ ಬಣ್ಣಗಳನ್ನು ಬಳಸದೆ, ಸಂಪೂರ್ಣ ಸ್ವಾಭಾವಿಕ ಹಾಗೂ ಆರೋಗ್ಯಕರ ಪದಾರ್ಥಗಳಿಂದ ಮನೆಯಲ್ಲೇ ಸುಲಭವಾಗಿ ಮಾಡಬಹುದಾದ ವಿಶಿಷ್ಟ ತ್ರಿರಂಗ ಖಾದ್ಯಗಳ ವಿವರ ಇಲ್ಲಿದೆ. ತ್ರಿವರ್ಣ ಇಡ್ಲಿ (Tricolour Idli): ಬೆಳಗಿನ ಉಪಹಾರಕ್ಕೆ ಸೌಮ್ಯ…

Read More

ಮದುವೆಗೆ ಬರುವಂತೆ ಯಶ್-ರಾಧಿಕಾ ದಂಪತಿಗೆ ಆಹ್ವಾನ ನೀಡಿದ ಚಿಕ್ಕಣ್ಣ – Kannada News | Actor Chikkanna Invites Rocking Star Yash and Radhika Pandit for His Wedding with Pavana

ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಹಾಗೂ ಹೀರೋ ಚಿಕ್ಕಣ್ಣ ಅವರು ತಮ್ಮ ಬ್ಯಾಚುಲರ್ ಲೈಫ್‌ಗೆ ಗುಡ್‌ಬೈ ಹೇಳಲು ಸಜ್ಜಾಗಿದ್ದಾರೆ. ಅವರು ಶೀಘ್ರವೇ ವಿವಾಹ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿಯನ್ನು ಭೇಟಿಯಾಗಿ ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿದ್ದಾರೆ. ಬಹಳ ಕಷ್ಟಪಟ್ಟು ಚಿತ್ರರಂಗಕ್ಕೆ ಬಂದು ತಮ್ಮದೇ ಆದ ಪ್ರೇಕ್ಷಕ ವರ್ಗವನ್ನು ಸಂಪಾದಿಸಿರುವ ಚಿಕ್ಕಣ್ಣ, ‘ರಾಜಾಹುಲಿ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಯಶ್ ಜೊತೆ ಒಟ್ಟಾಗಿ ಅಭಿನಯಿಸಿದ್ದರು. ಇಬ್ಬರ ನಡುವಿನ ಆತ್ಮೀಯತೆ ಮತ್ತು ಸ್ನೇಹ…

Read More

ಏರ್​ಟೆಲ್​ನ ಜನಪ್ರಿಯ 299 ರೂ ಪ್ಲಾನ್ ರದ್ದು; ಕನಿಷ್ಠ ಅನ್​ಲಿಮಿಟೆಡ್ ಡೇಟಾ ಪ್ಲಾನ್ ಈಗ 349 ರೂ – Kannada News | Bharti Airtel scraps few pre paid plans, including the popular Rs 299 plan

ನವದೆಹಲಿ, ಆಗಸ್ಟ್ 13: ಭಾರ್ತಿ ಏರ್‌ಟೆಲ್ (Bharti Airtel) ತನ್ನ ಗ್ರಾಹಕರಿಗೆ ನೀಡುತ್ತಿದ್ದ ಅತ್ಯಂತ ಜನಪ್ರಿಯ ₹299 ರ ಅನ್‌ಲಿಮಿಟೆಡ್ ಬೇಸ್ ಪ್ರಿಪೇಡ್ ಪ್ಲಾನ್ ಅನ್ನು ರದ್ದುಗೊಳಿಸಿದೆ. ಇದರೊಂದಿಗೆ ಕಂಪನಿಯ ಕನಿಷ್ಠ ಅನ್‌ಲಿಮಿಟೆಡ್ ಪ್ರಿಪೇಡ್ ಪ್ಲಾನ್ ಆರಂಭಿಕ ಬೆಲೆ ಈಗ ₹349 ಕ್ಕೆ ಏರಿಕೆಯಾಗಿದೆ. ಈ ಬದಲಾವಣೆಯು ಕಂಪನಿಯ ಬೇಸ್ ಎಆರ್‌ಪಿಯು (ARPU) ದರದಲ್ಲಿ 16.7% ನಷ್ಟು ಏರಿಕೆಗೆ ಕಾರಣವಾಗಿದೆ. ಎಆರ್​ಪಿಯು ಎಂದರೆ ಪ್ರತಿ ಬಳಕೆದಾರರಿಂದ ಬರುವ ಸರಾಸರಿ ಆದಾಯ. ಏರ್​ಟೆಲ್ ದರ ಬದಲಾವಣೆಗಳು ₹299 ಪ್ಲಾನ್…

Read More

ವಿಧಾನಪರಿಷತ್​ ಸಭಾಪತಿ ಸ್ಥಾನಕ್ಕೆ ಚುನಾವಣೆ: ಕಾಂಗ್ರಸ್​​, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ – Kannada News | Karnataka Council Chairman Election: Congress’s Saleem Ahmed and BJP’s P.H. Poojar File Nominations

ಕಾಂಗ್ರೆಸ್​​ನಿಂದ ಸಲೀಂ ಅಹ್ಮದ್ ಉಮೇದುವಾರಿಕೆ ಸಲ್ಲಿಕೆImage Credit source: Tv9 Kannada ಬೆಂಗಳೂರು, ಆಗಸ್ಟ್​ 13: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕ ವಿಧಾನ ಪರಿಷತ್​​ ಸಭಾಪತಿ ಸ್ಥಾನಕ್ಕೆ ನಾಳೆ (ಆಗಸ್ಟ್​​ 14) ಚುನಾವಣೆ ನಡೆಯಲಿದ್ದು, ಕಾಂಗ್ರೆಸ್​​ ಮತ್ತು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್​​ನಿಂದ ಸಲೀಂ ಅಹ್ಮದ್ ಉಮೇದುವಾರಿಕೆ ಸಲ್ಲಿಸಿದ್ದು, ವಿಧಾನಪರಿಷತ್ ಕಾರ್ಯದರ್ಶಿ ಜ್ಯೋತಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಪರಿಷತ್​​ ಸದಸ್ಯರಾಗಿರುವ ಬಿ.ಕೆ.ಹರಿಪ್ರಸಾದ್​…

Read More

‘ರಾಮಾಯಣ’ವನ್ನು ವಿಶ್ವಕ್ಕೆ ಪರಿಚಯಿಸುತ್ತಿರುವ ಆಗರ್ಭ ಶ್ರೀಮಂತ ನಮಿತ್ ಮಲ್ಹೋತ್ರಾ ಯಾರು? – Kannada News | Who is Namit Malhotra the man behind Ramayana movie

‘ರಾಮಾಯಣ’ ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಭಾರತೀಯ ಸಿನಿಮಾಗಳಲ್ಲಿ ಹಿಂದೆಂದೂ ನೋಡಿರದ ರೀತಿಯ ವಿಎಫ್​​ಎಕ್ಸ್, ಸ್ಪೆಷಲ್ ಎಫೆಕ್ಸ್​​ಗಳನ್ನು ಸಿನಿಮಾ ಹೊಂದಿದೆ. ‘ರಾಮಾಯಣ’ ಸಿನಿಮಾದ ಎರಡು ಭಾಗಕ್ಕಾಗಿ ಸುಮಾರು 4000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎನ್ನಲಾಗುತ್ತಿದೆ. ‘ಇದು ವಿಶ್ವಕ್ಕಾಗಿ ನಿರ್ಮಿಸಲಾಗಿರುವ ಭಾರತೀಯ ಸಿನಿಮಾ’ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಹೇಳಿದ್ದಾರೆ. ಅದರಂತೆಯೇ ಸಿನಿಮಾದ ಪ್ರಚಾರವನ್ನು ಪ್ರತಿಷ್ಠಿತ ಹಾಲಿವುಡ್ ವೇದಿಕೆಗಳಲ್ಲಿ, ಟಾಪ್ ಹಾಲಿವುಡ್​ ಸಿನಿಮಾಗಳ ಜೊತೆಯಲ್ಲಿಯೇ ಮಾಡಲಾಗುತ್ತಿದೆ. ‘ರಾಮಾಯಣ’ದಂತಹಾ ಅಪ್ಪಟ ಭಾರತೀಯ ಕತೆಯನ್ನು ವಿಶ್ವಕ್ಕೆ ಪರಿಚಯಿಸಲು ಊಹಿಸಲಾಗದ ಬಜೆಟ್​​…

Read More

ಗಂಭೀರ್ ಪಡೆಗೆ ಸುನಿಲ್ ಗಾವಾಸ್ಕರ್ ಖಡಕ್ ಎಚ್ಚರಿಕೆ! – Kannada News | No Stardom, Only Results: Sunil Gavaskar Warns Gautam Gambhir

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ತಂಡದ ಆಡಳಿತ ಮಂಡಳಿಗೆ ಲಿಟಲ್ ಮಾಸ್ಟರ್ ಸುನಿಲ್ ಗಾವಾಸ್ಕರ್ ಅತ್ಯಂತ ಮಹತ್ವದ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ರೇಸ್‌ನಲ್ಲಿ ಮುನ್ನಡೆಯಲು ಮುಂಬರುವ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ ‘ಸೂಪರ್‌ಸ್ಟಾರ್ ಸಂಸ್ಕೃತಿ’ಗಿಂತ ತಂಡದ ಸಾಮೂಹಿಕ ಪ್ರದರ್ಶನ ಮುಖ್ಯ ಎಂದು ಗಾವಾಸ್ಕರ್ ನೆನಪಿಸಿದ್ದಾರೆ. ವ್ಯಕ್ತಿಗಿಂತ ದೇಶವೇ ಮೊದಲು:…

Read More

ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಕಿಚ್ಚು: ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ – Kannada News | Cauvery Water Dispute: Students Join Farmers Protest in Mandyas Pandavapura

ಬೆಂಗಳೂರು, ಆ.13: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ವಿದ್ಯಾರ್ಥಿಗಳು ಸಹ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಮಂಡ್ಯದ ಪಾಂಡವಪುರದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಪಾಂಡವಪುರ ಬಸ್ ನಿಲ್ದಾಣದ ಸರ್ಕಲ್ ಬಳಿ ರೈತರ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳು ಈ ಹೋರಾಟದಲ್ಲಿ ಭಾಗಿಯಾಗಬೇಕೆಂದು ಕರೆ ನೀಡಿದ್ದರು. ಅವರ ಕರೆಗೆ ಓಗೊಟ್ಟಿರುವ ಮಂಡ್ಯದ ವಿದ್ಯಾರ್ಥಿಗಳು,…

Read More

‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್ – Kannada News | Big Boss Agniparikshe: 72 Year Old Ratna and 20 Year Old Kumari Selected as Star Contestants

ಬಿಗ್ ಬಾಸ್​​ನಲ್ಲಿ 60 ಸ್ಪರ್ಧಿಗಳ ಮಧ್ಯೆ ಅಗ್ನಿಪರೀಕ್ಷೆ ನಡೆಯುತ್ತಿದೆ. ಈ ಶೋನಲ್ಲಿ 72 ವರ್ಷದ ರತ್ನ ಹಾಗೂ 20 ವರ್ಷದ ಕುಮಾರಿ ಎಂಬಿಬ್ಬರು ಸ್ಪರ್ಧಿಗಳು ತಮ್ಮ ವಿಶಿಷ್ಟ ಆಕರ್ಷಣೆ ಹಾಗೂ ವ್ಯಕ್ತಿತ್ವದ ಮೂಲಕ ಗಮನ ಸೆಳೆದಿದ್ದಾರೆ. 72 ವರ್ಷದ ರತ್ನ ಅವರು ತಮ್ಮ ವಯಸ್ಸನ್ನೂ ಲೆಕ್ಕಿಸದೆ ಪೂರ್ಣ ಉತ್ಸಾಹದಿಂದ ವೇದಿಕೆಯಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಜಡ್ಜ್‌ಗಳ ಮೆಚ್ಚುಗೆಗೆ ಪಾತ್ರರಾದರು. ಮತ್ತೊಂದೆಡೆ 20 ವರ್ಷದ ಕುಮಾರಿ ತಮ್ಮ ಮುಗ್ಧತೆ ಹಾಗೂ ತೀಕ್ಷ್ಣ ಮಾತುಗಳಿಂದ ತೀರ್ಪುಗಾರರ ಮನಗೆದ್ದು ‘ಸ್ಟಾರ್ ಕಂಟೆಸ್ಟೆಂಟ್’…

Read More