‘ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ’ ಎಂದ ರಾಮಲಿಂಗಾ ರೆಡ್ಡಿ!
ಬೆಂಗಳೂರು, ಮೇ 30: ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲು ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ಈಗಾಗಲೇ ಪ್ರಪೋಸ್ ಮಾಡಿರುವ ಕಾರಣ ನಾಯಕನ ಆಯ್ಕೆಯಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ರಾಜ್ಯಪಾಲರಿಗೆ ಮಾಹಿತಿ ನೀಡುವ ಔಪಚಾರಿಕ ಸಭೆಯಾಗಿದೆ ಎಂದರು. ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳ ಕುರಿತ ಚರ್ಚೆಗಳ…