Headlines

ಕಾವೇರಿ ಪುನರುಜ್ಜೀವನಕ್ಕೆ ‘ಕಾವೇರಿ ಕೂಗು’ ಮಹಾ ಸಂಕಲ್ಪ: 1.2 ಕೋಟಿ ಹೊಸ ಸಸಿ ನೆಡಲು ಸಜ್ಜಾದ 2.6 ಲಕ್ಷ ರೈತರು

ಚೆನ್ನೈ, ಮೇ 30: ಕಾವೇರಿ(Cauvery) ನದಿಯ ನೀರಿನ ಮಟ್ಟ ವೇಗವಾಗಿ ಕುಸಿಯುತ್ತಿರುವ ಆತಂಕದ ನಡುವೆ, ನದಿಗೆ ಮರುಜೀವ ನೀಡಲು ಮತ್ತು ಕೃಷಿ ಸಂಕಷ್ಟಕ್ಕೆ ಮುಕ್ತಿ ಹಾಡಲು ಸದ್ಗುರುಗಳು ಕಲ್ಪಿಸಿದ “ ಸೇವ್ ಸಾಯಿಲ್- ಕಾವೇರಿ ಕಾಲಿಂಗ್’’ ಪರಿಸರ ಆಂದೋಲನವು ಹೊಸ ಮೈಲಿಗಲ್ಲನ್ನು ತಲುಪಿದೆ. ನದಿ ಜಲಾನಯನ ಪ್ರದೇಶದ ಪರಿಸರ ವ್ಯವಸ್ಥೆಯನ್ನು ಪುನಃಸ್ಥಾಪಿಸುವ ನಿರಂತರ ಪ್ರಯತ್ನದ ಭಾಗವಾಗಿ, ಮುಂಬರುವ 2026–27ರ ಸಾಲಿನಲ್ಲಿ ಬರೋಬ್ಬರಿ 1.2 ಕೋಟಿ ಹೊಸ ಸಸಿಗಳನ್ನು ನೆಡುವ ಬೃಹತ್ ಗುರಿಯನ್ನು ಈ ಆಂದೋಲನ ಹೊಂದಿದೆ. ಕೋಟಿ…

Read More

IPL 2026: ಫೈನಲ್ ಪ್ಲೇಯಿಂಗ್ ಇಲೆವೆನ್: RCB ಮುಂದಿದೆ 2 ಆಯ್ಕೆ

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಮೇ.31) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಹೇಗೆ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ ಎಂಬುದೇ ಈಗ ಕುತೂಹಲ. ಏಕೆಂದರೆ ಈ ಬಾರಿ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಮೂರು ಪಂದ್ಯಗಳನ್ನಾಡಿದೆ. ಈ ಮೂರು…

Read More

IPL 2026: ಐವರು ರಣಬೇಟೆಗಾರರು RCB ಪಾಲಿಗೆ ಡೇಂಜರಸ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 15 ಪಂದ್ಯಗಳನ್ನಾಡಿದೆ. ಈ ಹದಿನೈದು ಪಂದ್ಯಗಳಲ್ಲಿ ಆರ್​ಸಿಬಿ ತಂಡ ಆಲೌಟ್ ಆಗಿರುವುದು ಏಕೈಕ ಮ್ಯಾಚ್​ನಲ್ಲಿ. ಅಂದರೆ 8 ತಂಡಗಳ ಬೌಲರ್​ಗಳಿಗೆ ಆರ್​ಸಿಬಿ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಲು ಸಾಧ್ಯವಾಗಿಲ್ಲ. ಇನ್ನು ರಾಯಲ್​ ಚಾಲೆಂಜರ್ಸ್ ಬೆಂಗಳೂರು ಪಡೆಯನ್ನು ಆಲೌಟ್ ಮಾಡಿದ ತಂಡ ಮತ್ಯಾವುದೂ ಅಲ್ಲ, ಅದು ಗುಜರಾತ್ ಟೈಟಾನ್ಸ್​. ಅದು ಕೂಡ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ. ಅಂದರೆ ಈ ಬಾರಿಯ…

Read More

ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಫರ್ನಿಚರ್ ಅಂಗಡಿ: ಕೋಟ್ಯಾಂತರ ರೂ. ಮೌಲ್ಯದ ಪೀಠೋಪಕರಣಗಳು ಅಗ್ನಿಗಾಹುತಿ

ಬೆಳಗಾವಿ, ಮೇ 30: ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೆರೆ ಕ್ರಾಸ್ ಬಳಿ ಇರುವ ಎಸ್‌ಎಂಕೆ ಫರ್ನಿಚರ್ ಅಂಗಡಿಯಲ್ಲಿ ಮಧ್ಯರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಮತ್ತು ಇತರೆ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಬೆಂಕಿ ಸ್ಫೋಟದ ಮಾದರಿಯಲ್ಲಿ ಹರಡಿರುವುದು ಕಂಡುಬಂದಿದೆ. ಅದೃಷ್ಟವಶಾತ್, ಮಧ್ಯರಾತ್ರಿ ಘಟನೆ ನಡೆದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಂಗಡಿಗೆ ಕಾವಲಿದ್ದ ಸೆಕ್ಯೂರಿಟಿ ಗಾರ್ಡ್ ಹೊರಗಡೆ ಮಲಗಿದ್ದರಿಂದ ಆತ ಸುರಕ್ಷಿತವಾಗಿ ಪಾರಾಗಿದ್ದಾನೆ. ಬೆಂಕಿ…

Read More

ಕರ್ನಾಟಕ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಮುಹೂರ್ತ ಬಹುತೇಕ ಫಿಕ್ಸ್

ಬೆಂಗಳೂರು, ಮೇ 30: ಡಿಕೆ ಶಿವಕುಮಾರ್ ಜೂನ್ 3 ರಂದು ಲೋಕಭವನದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ ಎಂಬುದು ತಿಳಿದುಬಂದಿದೆ. ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ ಆಧಾರದ ಮೇಲೆ ಈ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸುವುದರಿಂದ ಜನಸಂದಣಿ ಮತ್ತು ಸಂಭಾವ್ಯ ಅಹಿತಕರ ಘಟನೆಗಳನ್ನು ತಪ್ಪಿಸಲು ಲೋಕಭವನವನ್ನು ಆಯ್ಕೆ ಮಾಡಲಾಗಿದೆ. ರಾಜ್ಯಪಾಲರನ್ನು ಬೆಳಗ್ಗೆ ಭೇಟಿ ಮಾಡಿದ ನಂತರ, ಡಿ ಕೆ ಶಿವಕುಮಾರ್ ಅವರು ನಾಗರಭಾವಿಯಲ್ಲಿರುವ…

Read More

ಸಿದ್ದರಾಮಯ್ಯಗೆ ಪಕ್ಷದಲ್ಲಿ ಮಹತ್ವದ ಹುದ್ದೆ? ಹೈಕಮಾಂಡ್ ಸೀಕ್ರೆಟ್ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಬೆಂಗಳೂರು, ಮೇ,30: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯ ಬಗ್ಗೆ ಸತೀಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ. “ಇವತ್ತಿನ ಸಿಎಲ್‌ಪಿ ಸಭೆಯದ್ದು ಕೇವಲ ಒನ್‌ಲೈನ್ ಅಜೆಂಡಾ (One-line Agenda), ಅದರಲ್ಲಿ ಎರಡನೇ ಮಾತಿಲ್ಲ. ಡಿ.ಕೆ. ಶಿವಕುಮಾರ್ ಅವರೇ ನೂತನ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ಪಕ್ಕಾ ಆಗಿದೆ” ಎಂದು ಪ್ರಭಾವಿ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಒಳಗಿನ ಪ್ರಮುಖ ಬೆಳವಣಿಗೆಗಳ ಸುಳಿವು ನೀಡಿದರು. ರಾಜಭವನಕ್ಕೆ…

Read More

ಸಿಎಂ ಆಗುತ್ತಿರುವ ಡಿ.ಕೆ ಶಿವಕುಮಾರ್​ಗೆ ಒಳ್ಳೆಯದಾಗಲಿ ಎಂದು ದರ್ಗಾದಲ್ಲಿ ಪ್ರಾರ್ಥನೆ

ಬೆಂಗಳೂರು, ಮೇ 30: ಚನ್ನಪಟ್ಟಣದ ಆಖೀಲ್ ಶಾ ಖಾದ್ರಿ ದರ್ಗಾದಲ್ಲಿ ಚನ್ನಪಟ್ಟಣ ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕರ್ನಾಟಕದಲ್ಲಿ ನಡೆಯಲಿರುವ ಸಚಿವ ಸಂಪುಟ ರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ಈ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವ ಡಿಕೆ ಶಿವಕುಮಾರ್‌ಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರಕಲಿ ಹಾಗೂ ಚನ್ನಪಟ್ಟಣ ಶಾಸಕರಾದ ಸಿ.ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಸಿಗಲಿ…

Read More

‘ಆ ವಯಸ್ಸಲ್ಲಿ ಗೋಲಿ ಆಡೋಕೂ ಬರ್ತಾ ಇರಲಿಲ್ಲ’; ಸೂರ್ಯವಂಶಿ ಬಗ್ಗೆ ಅಮಿತಾಭ್ ಮೆಚ್ಚುಗೆ

15 ವರ್ಷದ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರ ಅಬ್ಬರದ ಆಟಕ್ಕೆ ಇಡೀ ದೇಶವೇ ಫಿದಾ ಆಗಿದೆ. ಐಪಿಎಲ್​​ನಲ್ಲಿ ಆರ್​​ಆರ್ ಪರ ಆಡಿದ ಅವರು, ದಾಖಲೆಯ ಮೇಲೆ ದಾಖಲೆ ಬರೆದಿದ್ದಾರೆ. ಬಾಲಿವುಡ್‌ನ ನಟ ಅಮಿತಾಭ್ ಬಚ್ಚನ್ ಅವರು (Amitabh Bachchan) ವೈಭವ್ ಆಟವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇದು ವೈಭವ್ ಅವರ ಖುಷಿಯನ್ನು ಹೆಚ್ಚಿಸಿದೆ. ಅಮಿತಾಭ್ ಬಚ್ಚನ್ ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರಿಂದ ಆಶೀರ್ವಾದ ಸಿಕ್ಕರೆ ಸಾಕು ಎಂದು ಅನೇಕರು ಬಯಸುತ್ತಾ ಇರುತ್ತಾರೆ. ಈಗ…

Read More

ಡಿಕೆ ಶಿವಕುಮಾರ್​​ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!: ಜಾತಕದ ಆಧಾರದ ಮೇಲೆ ದಿನಾಂಕ ನಿಗದಿ

ಬೆಂಗಳೂರು, ಮೇ.30 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ದಿನಾಂಕ ಮತ್ತು ಶುಭ ಮುಹೂರ್ತ ನಿಗದಿಯಾಗಿದೆ. ತಮ್ಮ ಪ್ರತಿಯೊಂದು ರಾಜಕೀಯ ಹೆಜ್ಜೆಯಲ್ಲೂ ಆರಾಧ್ಯ ದೈವವಾಗಿ ನಂಬಿರುವ ತುಮಕೂರು ಜಿಲ್ಲೆಯ ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಜೂನ್ 3ರಂದು (ಬುಧವಾರ) ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಪಕ್ಕಾ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಜಕೀಯ ವಲಯದಲ್ಲಿ…

Read More

International Potato Day 2026: ಅಂತರರಾಷ್ಟ್ರೀಯ ಆಲೂಗಡ್ಡೆ ದಿನ; ಆರೋಗ್ಯದ ರಹಸ್ಯ ಮತ್ತು ಆಯುರ್ವೇದದ ಮಹಿಮೆ!

ಅಂತರರಾಷ್ಟ್ರೀಯ ಆಲೂಗಡ್ಡೆ ದಿನImage Credit source: Pinterest ಜಗತ್ತಿನ ಅರ್ಧಕ್ಕಿಂತ ಹೆಚ್ಚು ಮನೆಗಳ ಅಡುಗೆಮನೆಯಲ್ಲಿ ಒಂದಲ್ಲ ಒಂದು ರೂಪದಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ತರಕಾರಿ ಎಂದರೆ ಅದು ಆಲೂಗಡ್ಡೆ. ಆದರೆ ಇದು ಕೇವಲ ಒಂದು ಸಾಧಾರಣ ತರಕಾರಿ ಮಾತ್ರವಲ್ಲ; ಕೋಟ್ಯಂತರ ಜನರ ಹೊಟ್ಟೆ ತುಂಬಿಸುವ, ಲಕ್ಷಾಂತರ ರೈತರ ಜೀವನಾಧಾರವಾಗಿದೆ. ಈ ಮಹತ್ವದ ಬೆಳೆಯನ್ನು ಗೌರವಿಸಲು ಮತ್ತು ಜಾಗತಿಕ ಆಹಾರ ಭದ್ರತೆಯಲ್ಲಿ ಇದರ ಪಾತ್ರವನ್ನು ಸ್ಮರಿಸಲು ವಿಶ್ವಸಂಸ್ಥೆಯು ಪ್ರತಿ ವರ್ಷ ಮೇ 30ರಂದು ‘ಅಂತರರಾಷ್ಟ್ರೀಯ ಆಲೂಗಡ್ಡೆ ದಿನ’ ಎಂದು ಆಚರಿಸುತ್ತದೆ….

Read More