Headlines

ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ; ಕ್ವಿಂಟಾಲ್​​ಗೆ ರೇಟ್​​ ಎಷ್ಟು ಗೊತ್ತಾ?

ಬೆಂಗಳೂರು, ಏಪ್ರಿಲ್​​ 10: ಕೊಬ್ಬರಿ ಬೆಲೆ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದ್ದು, ಒಂದು ಕ್ವಿಂಟಾಲ್ ಕೊಬ್ಬರಿ ದರ ಸುಮಾರು 32 ಸಾವಿರ ರೂಪಾಯಿಗೆ ತಲುಪಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ಕ್ವಿಂಟಾಲ್‌ಗೆ 8 ರಿಂದ 10 ರೂಪಾಯಿ ಹೆಚ್ಚಳವಾಗಿದೆ. ನುಸಿಪೀಡೆ ಮತ್ತು ವಿವಿಧ ರೋಗಗಳಿಂದ ತೀವ್ರ ತೊಂದರೆ ಅನುಭವಿಸಿದ್ದ ರೈತರಿಗೆ ಈ ಬೆಲೆ ಏರಿಕೆ ಸಂತಸ ತಂದಿದೆ. ಪ್ರಸ್ತುತ ಕೊಬ್ಬರಿ ದಾಸ್ತಾನು ಯಾರ ಬಳಿ ಇದೆ ಎಂಬುದು ಒಂದು ಪ್ರಶ್ನೆಯಾಗಿದ್ದು, ಸಣ್ಣ ರೈತರು ತಮ್ಮ ಉತ್ಪನ್ನವನ್ನು ಬೇಗನೆ ಮಾರಾಟ…

Read More

ವಿಡಿಯೋನಲ್ಲಿರುವ ಮಹಿಳೆಯರು ಬೇರೆ-ಬೇರೆ: ಇನ್ಸ್​ಪೆಕ್ಟರ್​​ ಸಂದೇಶ ಕೇಸಿನ ತನಿಖಾ ವರದಿಯಲ್ಲಿ ಬಹಿರಂಗ

ಮಂಗಳೂರು (ಮಾರ್ಚ್ 17): ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆದು ಲೈಂಗಿಕ ಕಿರುಕುಳ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ (Moodbidri inspector Sandesh case) ನನ್ನು ಅಮಾನತು ಮಾಡಲಾಗಿದೆ. ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ (ACP) ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನ…

Read More

ಪಾತ್ರೆಯೊಳಗಿದ್ದ ಬೇಯಿಸಿದ ಮೀನು ತಿಂದಿದ್ದು ಇಲಿಗಳು, ಆದ್ರೆ ಅನುಮಾನ ಪಟ್ಟು ಸ್ನೇಹಿತನನ್ನೇ ಕೊಂದ ಯುವಕರು

ಮುಂಬೈ, ಮಾರ್ಚ್​ 14: ಪಾತ್ರೆಯೊಳಗಿದ್ದ ಬೇಯಿಸಿದ ಮೀನು(Fish) ಕಾಣೆಯಾಗಿದ್ದಕ್ಕೆ ಇಬ್ಬರು ಸ್ನೇಹಿತರು ಸೇರಿ ಮತ್ತೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಫೆಬ್ರವರಿ 24 ರಂದು ಈ ಘಟನೆ ನಡೆದಿದೆ, ಮೃತರನ್ನು ಅಫ್ಸರ್ ಎಂದು ಗುರುತಿಸಲಾಗಿದೆ, ಆತನ ಇಬ್ಬರು ಸ್ನೇಹಿತರಾದ ಸುರೇಶ್ ಮತ್ತು ರಾಜೇಶ್ ರಮೇಶ್‌ನಾಥ್ ಅಲಿಯಾಸ್ ನೇಪಾಳಿ ಮುಂಬೈನ ಗೋರೆಗಾಂವ್‌ನಲ್ಲಿರುವ ತಮ್ಮ ಮನೆಯಲ್ಲಿ ಮೀನು ಅಡುಗೆ ಮಾಡುತ್ತಿದ್ದಾಗ ಮದ್ಯ ಸೇವಿಸಿದ್ದರು. ಸ್ವಲ್ಪ ಹೊತ್ತಿನ ನಂತರ,…

Read More

ಎರಡು ಬೆಕ್ಕುಗಳ ಮಿಲನ, ನಾಲ್ಕು ಮರಿ ಜನನ: ಮಾಲೀಕರ ಕಿತ್ತಾಟ ಜೋರಾದ ಬೆನ್ನಲ್ಲೇ ಪೊಲೀಸ್ ಎಂಟ್ರಿ!

ಬೆಂಗಳೂರು, ಏಪ್ರಿಲ್ 13: ಅಕ್ಕಪಕ್ಕದ ಮನೆಗಳ ನಡುವೆ ಬೆಕ್ಕುಗಳ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಶೇಷಾದ್ರಿಪುರದಲ್ಲಿ (Bengaluru) ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಪಕ್ಕದ ಮನೆಯ ಗಂಡು ಬೆಕ್ಕಿನ ನಡುವಿನ ಸಂಪರ್ಕದಿಂದ ನಾಲ್ಕು ಮರಿಗಳು ಜನಿಸಿದ್ದು, ಈ ವಿಚಾರವೇ ಎರಡು ಕುಟುಂಬಗಳ ನಡುವೆ ವಿವಾದಕ್ಕೆ ಕಾರಣವಾಗಿದೆ. ಅತಿರೇಕಕ್ಕೆ ತಿರುಗಿದ ಗಲಾಟೆ ತಮ್ಮ ಮನೆಯ ಹೆಣ್ಣು ಬೆಕ್ಕಿನ ಜೊತೆ ನಾಲ್ಕು ಮರಿಗಳೂ ಮನೆಗೆ ಸೇರಿರುವುದನ್ನು ಕಂಡ ಮಾಲೀಕರು ಪಕ್ಕದ…

Read More

Bengaluru Air Quality: ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! – Kannada News | Bangalore Air Pollution Crisis: Mangaluru’s Air Quality got worst than Bengaluru

ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! ಬೆಂಗಳೂರು, ಜನವರಿ 19: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರ ಜೊತೆಗೆ ಮಂಗಳೂರಿನಲ್ಲೂ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಬೆಂಗಳೂರಿನ ಗಾಳಿಯ…

Read More

ಯುವಕನ ನೃತ್ಯಕ್ಕೆ ಮರುಳಾದ ಗಜರಾಜ! ಕಾಡಾನೆಯೂ ಹೆಜ್ಜೆ ಹಾಕಿದ ಅಪರೂಪದ ದೃಶ್ಯ

ಒಡಿಶಾ, ಮಾ.27: ಇತ್ತೀಚಿನ ದಿನಗಳಲ್ಲಿ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ಸುದ್ದಿಗಳೇ ಹೆಚ್ಚಾಗಿ ಕೇಳಿಬರುತ್ತಿವೆ. ಆದರೆ, ಇದರ ನಡುವೆ ಮನುಷ್ಯ ಮತ್ತು ಆನೆಯ ನಡುವಿನ ಅಚ್ಚರಿಯ ಬಾಂಧವ್ಯವನ್ನು ಸಾರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಯುವಕನೊಬ್ಬನ ನೃತ್ಯವನ್ನು ಕಂಡ ಕಾಡಾನೆಯೊಂದು, ಅಷ್ಟೇ ಪ್ರೀತಿಯಿಂದ ಪ್ರತಿಕ್ರಿಯಿಸಿ ತಾನೂ ಹೆಜ್ಜೆ ಹಾಕಿರುವ ಮನಮೋಹಕ ದೃಶ್ಯವಿದು. ಒಡಿಶಾದ ಕಿಯೋಂಜರ್ ಜಿಲ್ಲೆಯ ಚಂಪುಆ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಒಂಟಿ ಸಲಗವೊಂದರ…

Read More

‘ಸ್ಟಾಂಡ್​ಅಪ್’ ಕಾಮಿಡಿ; ಟ್ರಂಪ್ ಮುಂದೆ ಶಾಲಾ ಬಾಲಕನಾದ ಪಾಕಿಸ್ತಾನದ ಪ್ರಧಾನಿ – Kannada News | Donald Trump Asks Pakistan PM Shehbaz Sharif To Stand Up at Board of Peace meet

ವಾಷಿಂಗ್ಟನ್, ಫೆಬ್ರವರಿ 20: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶಾಂತಿ ಮಂಡಳಿ ಸಭೆಯಲ್ಲಿ ಮಾತನಾಡುವಾಗ ಭಾರತ-ಪಾಕಿಸ್ತಾನದ ಸಮಘರ್ಷವನ್ನು ಕೂಡ ಪ್ರಸ್ತಾಪಿಸಿದ್ದಾರೆ. ಈ ವೇಳೆ ಆ ಸಭೆಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನ ಪ್ರಧಾನಿಗೆ ‘ಸ್ಟಾಂಡ್​ಅಪ್’ ಎಂದು ಹೇಳಿದ್ದಾರೆ. ಟ್ರಂಪ್ ಮಾತಿನಂತೆ ಎದ್ದುನಿಂತ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್​ ನಿಂತೇ ಇರಬೇಕೋ, ಕುಳಿತುಕೊಳ್ಳಬೇಕೋ ಎಂದು ಗೊತ್ತಾಗದೆ ಮುಜುಗರಕ್ಕೀಡಾಗಿದ್ದಾರೆ. ಈ ವೇಳೆ ಟ್ರಂಪ್ ಭಾರತದ ಪ್ರಧಾನಿ ಮೋದಿಯ ಹೆಸರನ್ನು ಪ್ರಸ್ತಾಪಿಸಿ ಮೋದಿ ಅದ್ಭುತ ವ್ಯಕ್ತಿ ಎಂದು ಹೊಗಳಿದ್ದಾರೆ. ಇದರಿಂದ ಶೆಹಬಾಜ್…

Read More

ದೇಶದ ಮತದಾರರಿಗೆ ಪ್ರಧಾನಿ ಮೋದಿ ಪತ್ರ: ಮತದಾರರಾಗುವ ಕ್ಷಣವನ್ನ ಸಂಭ್ರಮಿಸುವಂತೆ ಯುವಜನತೆಗೆ ಕರೆ – Kannada News | National Voters Day: PM Modi Urges Youth to Embrace Democratic Duty in India

ದೆಹಲಿ, ಜನವರಿ 25: ರಾಷ್ಟ್ರೀಯ ಮತದಾರರ ದಿನದ (National Voters’ Day) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ನಾನಾ ಭಾಗಗಳಲ್ಲಿರುವ ಮೈ-ಭಾರತ್ ಸ್ವಯಂಸೇವಕರು ಹಾಗೂ ಯುವಜನತೆಗೆ ಪತ್ರ ಬರೆದಿದ್ದಾರೆ. ಮತದಾರರಾಗುವ ಕ್ಷಣವನ್ನು ಹಾಗೂ ತಮ್ಮ ಸುತ್ತಮುತ್ತಲಿನವರು ಮತದಾರರಾಗುವ ಸಂದರ್ಭವನ್ನು ಸಂಭ್ರಮದಿಂದ ಆಚರಿಸಬೇಕೆಂದು ಯುವಜನತೆಗೆ ಕರೆ ನೀಡಿದ್ದಾರೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾರರಾಗಿರುವುದು ಅತ್ಯಂತ ಮಹತ್ವದ ಹಕ್ಕು ಮತ್ತು ದೊಡ್ಡ ಹೊಣೆಗಾರಿಕೆಯಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ಜೊತೆಗೆ, ವಿದ್ಯಾರ್ಥಿಗಳು…

Read More

ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿ ಭಾರಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ – Kannada News | Short Circuit Sparks Deadly House Fire in Meerut, Six Killed

ಮೀರತ್, ಫೆಬ್ರವರಿ 24: ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಮನೆಯಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಐವರು ಮಕ್ಕಳು ಸೇರಿ ಆರು ಮಂದಿ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಮೃತರಲ್ಲಿ ಆರು ತಿಂಗಳಿಗಿಂತ ಕಡಿಮೆ ವಯಸ್ಸಿನ ಇಬ್ಬರು ಅವಳಿ ಶಿಶುಗಳು ಸೇರಿದ್ದಾರೆ. ಸೋಮವಾರ ಸಂಜೆ ಇಕ್ಬಾಲ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿರುಚಾಟ ಕೇಳಿ ಮತ್ತು ಜ್ವಾಲೆಯ ತೀವ್ರತೆ ನೋಡಿ ಸ್ಥಳೀಯರು ಕೂಡಲೇ ಸಹಾಯಕ್ಕೆ ಮುಂದಾದರು. ಬೆಂಕಿಯು ಕೆಳ ಮಹಡಿಯಿಂದ ಮನೆಯ ಮೇಲಿನ ಮಹಡಿಗೆ…

Read More

ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ? – Kannada News | Here Is How AI Cameras Works for Drive Away Elephants Near Nagarahole Forest

ಮೈಸೂರು, (ಡಿಸೆಂಬರ್ 23): ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯಲ್ಲಿ ಮಾವನ-ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಕಾಡಾನೆ (Wild Elephant) ಹಾವಳಿ ಹೆಚ್ಚಾಗಿದ್ದು, ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಆನೆಗಳ ಉಪಟಳ ನಿಂತಿಲ್ಲ. ಇದರಿಂದ ಜನಸಾಮಾನ್ಯರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯು, ಕಾಡಾನೆ ಹಾವಳಿ ತಡೆಯಲು ಒಂದು ವಿನೂತನ ವಿಧಾನವೊಂದನ್ನು ಕಂಡುಕೊಂಡಿದ್ದು, ಬಹುತೇಕ ಯಶಸ್ವಿಯಾಗಿದೆ. ಹೌದು.. ನಾಗರಹೊಳೆ ಅರಣ್ಯ ಗಡಿಗಳಲ್ಲಿ ಕಾಡಾನೆಗಳನ್ನು ಓಡಿಸಲು ಎಐ (ಕೃತಕ ಬುದ್ಧಿಮತ್ತೆ) ಆಧಾರಿತ…

Read More