Headlines

96 ರನ್​ಗಳಿಸಿ ಬಂದ ವೈಭವ್​ನ ಗದರಿಸಿದ ರಿಯಾನ್ ಪರಾಗ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-19 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್ ಪ್ರವೇಶಿಸಲು ಮುಖ್ಯ ಕಾರಣ ವೈಭವ್ ಸೂರ್ಯವಂಶಿಯ ಪ್ರಚಂಡ ಬ್ಯಾಟಿಂಗ್ ಹಾಗೂ ಜೋಫ್ರಾ ಆರ್ಚರ್ ಅವರ ನಿಖರ ದಾಳಿ. ಈ ಇಬ್ಬರ ಅತ್ಯುತ್ತಮ ಪ್ರದರ್ಶನದ ಫಲವಾಗಿ ಆರ್​ಆರ್​ ತಂಡವು ಈ ಬಾರಿ ಕ್ವಾಲಿಫೈಯರ್-2 ಪಂದ್ಯವಾಡಿತ್ತು. ಆದರೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಎಲ್ಲರೂ ವಿಫಲರಾದರೂ ವೈಭವ್ ಸೂರ್ಯವಂಶಿ ಮಾತ್ರ ತಮ್ಮ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಮುಲ್ಲನ್​ಪುರ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಈ ನಿರ್ಣಾಯಕ ಪಂದ್ಯದಲ್ಲಿ…

Read More

ಭೀಮಾ ನದಿ ತೀರದಲ್ಲಿ ಮತ್ತೆ ರಕ್ತಚರಿತ್ರೆ: 6 ಜನರ ಭೀಕರ ಕೊಲೆ!

ವಿಜಯಪುರ, ಮೇ,30: ಜಿಲ್ಲೆಯ ಚಡಚನ ತಾಲೂಕಿನ ಗೋವಿಂದಪುರ ಗ್ರಾಮದ ಬಳಿ ಭೀಮಾ ನದಿ ತಟದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಹಾಗೂ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರು ದಾರುಣವಾಗಿ ಹತ್ಯೆಯಾಗಿದ್ದಾರೆ. ನಿರಾಳೆ ಕುಟುಂಬದ ದುಂಡಪ್ಪ ಶಿವಪುತ್ರ, ಚಂದ್ರಕಾಂತ್, ರಾಹುಲ್, ಸಮರ್ಥ್ ಹಾಗೂ ಅವರ ಜೊತೆಗಿದ್ದ ಶಬ್ಬೀರ್ ಅತ್ತಾರ್ ಎಂಬುವರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಜಮೀನನ್ನು ನಿರಾಳೆ ಕುಟುಂಬದವರು ಇತ್ತೀಚೆಗೆ ಖರೀದಿಸಿದ್ದರು. 15ರಿಂದ 20 ಮಂದಿ…

Read More

ಈ ವ್ಯಕ್ತಿಯ ಡ್ಯಾನ್ಸ್​ಗೆ ಮನಸೋತ ಆನೆ ಮಾಡಿದ್ದೇನು ನೋಡಿ

ಸಂತೋಷ ಎಂಬುದು ಕೇವಲ ನಮ್ಮೊಂದಿಗೆ ಇಟ್ಟುಕೊಳ್ಳುವ ಭಾವವಲ್ಲ, ಅದು ಹಂಚಿದರೆ ಮಾತ್ರ ದುಪ್ಪಟ್ಟಾಗುತ್ತದೆ.ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿ ಮತ್ತು ಮನುಷ್ಯನ ನಡುವಿನ ಅಪರೂಪದ ಬಾಂಧವ್ಯದ ವಿಡಿಯೋವೊಂದು ಭಾರಿ ಸದ್ದು ಮಾಡುತ್ತಿದೆ. ವ್ಯಕ್ತಿಯೊಬ್ಬರು ಆನೆಯೊಂದರ ಮುಂದೆ ನಿಂತು ಅತ್ಯಂತ ಉತ್ಸಾಹದಿಂದ ನೃತ್ಯ (Dance) ಮಾಡಲು ಪ್ರಾರಂಭಿಸುತ್ತಾರೆ. ಮೊದಲ ಕೆಲವು ಸೆಕೆಂಡುಗಳ ಕಾಲ ಆ ಆನೆಯು ಆ ವ್ಯಕ್ತಿಯ ನೃತ್ಯವನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತದೆ. ತಕ್ಷಣವೇ ಆನೆಯು ಕೂಡ ತನ್ನ ಸೊಂಡಿಲು ಮತ್ತು ಕಾಲುಗಳನ್ನು ಆಡಿಸುತ್ತಾ, ಪೂರ್ಣ ಮನಸ್ಸಿನಿಂದ ಆತನೊಂದಿಗೆ ಹೆಜ್ಜೆ…

Read More

Operation Sindoor 2.0: ಭಾರತ ಆಪರೇಷನ್ ಸಿಂಧೂರ್ 2.0ಗೆ ತಯಾರಿ ನಡೆಸುತ್ತಿದೆ:ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ನವದೆಹಲಿ, ಮೇ 30: ಭಾರತೀಯ ಸೇನೆ(Indian Army)ಯು ಯಾವುದೇ ಕ್ಷಣದಲ್ಲೂ ಎದುರಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ‘ಆಪರೇಷನ್ ಸಿಂಧೂರ್ 2.0’ ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಕುತಂತ್ರಗಳ ವಿರುದ್ಧ ಭಾರತೀಯ ಸೇನೆ ತಳೆದಿದ್ದ ಕಠಿಣ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್​ಐ ಜೊತೆ ಮಾತನಾಡಿದ ಸೇನಾ ಮುಖ್ಯಸ್ಥರು, ಆಪರೇಷನ್ ಸಿಂಧೂರ್ ಇನ್ನೂ ಕೊನೆಗೊಂಡಿಲ್ಲ, ಅದು…

Read More

ಮಳೆ ಅಬ್ಬರಕ್ಕೆ ಕೆಜಿಎಫ್​​ನಲ್ಲಿ ಕುಸಿದ ಕಟ್ಟಡದ ಗೋಡೆ: 7 ಮಂದಿ ಬದುಕಿದ್ದೇ ಪವಾಡ!

ಕೋಲಾರ, ಮೇ 30: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಸಾಲು ಸಾಲು ಅವಾಂತರಗಳಿಗೆ ಕಾರಣವಾಗಿದ್ದು, ಕೆಜಿಎಫ್ ನಗರದಲ್ಲಿ ವರುಣಾರ್ಭಟಕ್ಕೆ ಕಟ್ಟಡವೊಂದು ಕುಸಿದಿರುವ ಘಟನೆ ನಡೆದಿದೆ. ಈ ವೇಳೆ ಅಲ್ಲೇ ಇದ್ದ 7 ಜನರು ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದರೆ. ಮಾರಿಕುಪ್ಪಂನ ಕೃಷ್ಣಮೂರ್ತಿ ಎಂಬುವರ ಮನೆ ಕುಸಿದಿದ್ದು, ಮನೆಯ ಒಂದು ಬದಿಯ ಗೋಡೆ ಸಂಪೂರ್ಣವಾಗಿ ನಾಶವಾಗಿದೆ. ಅತ್ತ ರಾಬರ್ಟ್ ಸನ್ ಪೇಟೆಯಲ್ಲಿ ಬೃಹತ್ ಮರಗಳು ಧರೆಗುರುಳಿದ್ದರೂ ತಹಶೀಲ್ದಾರ್ ಹಾಗೂ ನಗರಸಭೆ ಆಯುಕ್ತರು ಸ್ಥಳಗಳಿಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರಿರುವ ಆರೋಪ…

Read More

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು, ಮೇ 30: ಸಿಎಲ್​​ಪಿ ಸಭೆ ಮುನ್ನವೇ ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್‌ ಅವರನ್ನು ಡಿಕೆ ಸಹೋದರರು ಭೇಟಿಯಾಗಿದ್ದಾರೆ. ಗವರ್ನರ್​​ ಜೊತೆ ಡಿ.ಕೆ.ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದು, ಪ್ರಮಾಣವಚನದ ದಿನಾಂಕಗಳ ಬಗ್ಗೆ ಹಾಗೂ ರಾಜ್ಯಪಾಲರ ಲಭ್ಯತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ರಾಜ್ಯಪಾಲರ ಬಳಿ ಡಿಕೆಶಿ ಪ್ರಸ್ತಾಪ ಮಾಡಿದ್ದು, ಎರಡು, ಮೂರು ದಿನಾಂಕಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದ ಬಳಿಕ ಧರ್ಮಸ್ಥಳಕ್ಕೆ ರಾಜ್ಯಪಾಲರು ತೆರಳುತ್ತಿದ್ದು, ಇಂದು ಲೋಕಭವನದಿಂದ ರಾಜ್ಯಪಾಲರು ಹೊರಟರೆ ನಾಳೆ ಸಂಜೆ ಬೆಂಗಳೂರಿಗೆ ವಾಪಸ್…

Read More

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಟ್ಟದಲ್ಲಿ ಮೊದಲ ಹಿನ್ನಡೆಯಾಗಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರವಾಗಿ ಗರಿಗೆದರಿವೆ. ಹೊಸ ಸರ್ಕಾರ ರಚನೆಗೂ ಮುನ್ನ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯಕ್ಕಾಗಿ ‘ಸಮನ್ವಯ ಸಮಿತಿ (Coordination Committee)’ ರಚನೆ ಮಾಡಬೇಕು ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ ಪ್ರಸ್ತಾವನೆಯನ್ನು ಕಾಂಗ್ರೆಸ್ ನಾಯಕತ್ವ ನಿರಸ್ಕರಿಸಿದೆ. ಈ ಬೆಳವಣಿಗೆಯು ಸದ್ಯ ಕಾಂಗ್ರೆಸ್…

Read More

ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ: ಕೊನೆಯ ಮಾತನ್ನು ಕೇಳಲು ಆಗಲೇ ಇಲ್ಲ

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ (Ajith Kumar) ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೂರು ವರ್ಷಗಳ ಹಿಂದೆ (ಮಾರ್ಚ್ 24, 2023) ಅಜಿತ್ ಅವರ ತಂದೆ ಪಿ. ಸುಬ್ರಮಣ್ಯಂ ಅವರು ತಮ್ಮ 85ನೇ ವಯಸ್ಸಿನಲ್ಲಿಯೇ ನಿಧನರಾಗಿದ್ದರು. ಕಾರ್​ ರೇಸ್ ಹಿನ್ನೆಲೆಯಲ್ಲಿ ದುಬೈನಲ್ಲಿದ್ದ ನಟ ಅಜಿತ್ ಕುಮಾರ್ ಅವರು ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚೆನ್ನೈಗೆ ಹಿಂತಿರುಗುತ್ತಿದ್ದಾರೆ ಎಂದು…

Read More

SSB Recruitment 2026: ಸಶಸ್ತ್ರ ಸೀಮಾ ಬಲದಲ್ಲಿ 404 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; ಕ್ರೀಡಾಪಟುಗಳಿಗೆ ಸುವರ್ಣಾವಕಾಶ!

ಪೊಲೀಸ್ ಮತ್ತು ರಕ್ಷಣಾ ಇಲಾಖೆಯ ಉದ್ಯೋಗಗಳಿಗಾಗಿ ಕಾಯುತ್ತಿರುವ ದೇಶದ ಯುವಕ-ಯುವತಿಯರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಶಸ್ತ್ರ ಸೀಮಾ ಬಲ್ (SSB), ಕ್ರೀಡಾ ಕೋಟಾದಡಿಯಲ್ಲಿ (Sports Quota) ಹೆಚ್ಚಿನ ಸಂಖ್ಯೆಯ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 404 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ ಅರ್ಹ ಕ್ರೀಡಾಪಟುಗಳು ಈ ಉತ್ತಮ ಅವಕಾಶವನ್ನು…

Read More

ಟ್ರಾಫಿಕ್ ಕಿರಿಕಿರಿ, ದುಬಾರಿ ಬಾಡಿಗೆ ಇದ್ರೂ ಬೆಂಗಳೂರು ಬಿಡಲ್ಲ ಜನ! ಬಿಹಾರಿ ಯುವಕನ ವಿಡಿಯೋ ವೈರಲ್

ಬೆಂಗಳೂರು, ಮೇ 30: ಟ್ರಾಫಿಕ್ ಕಿರಿಕಿರಿ, ದುಬಾರಿ ಮನೆ ಬಾಡಿಗೆ ಹಾಗೂ ಒಂಟಿತನ ಕಾಡುತ್ತಿದ್ದರೂ ಸಹ ಜನ ಯಾಕೆ ಬೆಂಗಳೂರು (Bengaluru) ಬಿಟ್ಟು ಹೋಗಲು ಇಷ್ಟಪಡುವುದಿಲ್ಲ ಎಂಬುದನ್ನು ಬಿಹಾರ ಮೂಲದ ಯುವಕನೊಬ್ಬ ವಿವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಮುಖ್ಯಾಂಶಗಳು ಟ್ರಾಫಿಕ್ ಹಾಗೂ ದುಬಾರಿ ಬಾಡಿಗೆ ಇದ್ದರೂ ಬೆಂಗಳೂರು ಬಿಡಲು ಜನ ಒಪ್ಪುತ್ತಿಲ್ಲ. ಸಿಲಿಕಾನ್ ಸಿಟಿಯ ಅದ್ಭುತ ಹವಾಮಾನವೇ ವಲಸಿಗರನ್ನು ಸೆಳೆಯಲು ಮುಖ್ಯ ಕಾರಣವಾಗಿದೆ. ವರ್ಕ್ ಫ್ರಮ್ ಹೋಮ್ ನೀಡಿದರೆ…

Read More