ತನ್ನ ಜೀವದ ಹಂಗು ತೊರೆದು ಕಿಟಕಿಯಿಂದ ಪಕ್ಕದ ಮನೆಯ ಜಗಳ ರೆಕಾರ್ಡ್​ ಮಾಡಿದ ವ್ಯಕ್ತಿ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದೆ. ಪಕ್ಕದ ಮನೆಯಲ್ಲಿ ಗಂಡ-ಹೆಂಡತಿ ನಡುವೆ ಜೋರಾಗಿ ಜಗಳ ನಡೆಯುತ್ತಿತ್ತು. ಆದರೆ ಗೋಡೆಗಳ ಕಾರಣದಿಂದ ಜಗಳದ ಸ್ಪಷ್ಟವಾಗಿ ಕೇಳುತ್ತಿರಲಿಲ್ಲ. ತನ್ನ ತಡೆಯಲಾಗದ ಕುತೂಹಲದಿಂದಾಗಿ, ಈ ವ್ಯಕ್ತಿ ತನ್ನ ಪ್ರಾಣದ ಹಂಗನ್ನು ತೊರೆದು ಬಹುಮಹಡಿ ಕಟ್ಟಡದ ಕಿಟಕಿಯಿಂದ ಹೊರಗೆ ನೇತಾಡಿದ್ದಾರೆ. ಅಪಾಯಕಾರಿ ರೀತಿಯಲ್ಲಿ ತೂಗಾಡುತ್ತಾ, ಪಕ್ಕದ ಮನೆಯ ಕಿಟಕಿಯ ಕಡೆಗೆ ಮೊಬೈಲ್ ಹಿಡಿದು ಜಗಳದ ದೃಶ್ಯವನ್ನು ರೆಕಾರ್ಡ್ ಮಾಡಿದ್ದಾರೆ. ಸ್ವಲ್ಪ ಆಯತಪ್ಪಿದರೂ ಪ್ರಾಣಕ್ಕೇ ಕುತ್ತು ಬರುತ್ತಿದ್ದ ಈ ಸಾಹಸವನ್ನು ಕಂಡ ನೆಟ್ಟಿಗರು, ಜಗಳ ನೋಡುವ ಇವರ ಕುತೂಹಲಕ್ಕೆ ಆಸ್ಕರ್ ಪ್ರಶಸ್ತಿಯೇ ಕೊಡಬೇಕು ಎಂದು ತಮಾಷೆ ಮಾಡುತ್ತಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Swapna Shastra: ಕನಸಿನಲ್ಲಿ ಹನುಮಂತ ಕಾಣಿಸಿಕೊಂಡರೆ ಏನರ್ಥ? ಸ್ವಪ್ನಶಾಸ್ತ್ರ ಹೇಳುವುದೇನು?

ಹಿಂದೂ ಧರ್ಮದ ಎಲ್ಲಾ ದೇವರುಗಳಲ್ಲಿ ಹನುಮಂತನಿಗೆ ಅತ್ಯಂತ ವಿಶೇಷವಾದ ಸ್ಥಾನವಿದೆ. ಕಲಿಯುಗದಲ್ಲಿ ಭಕ್ತರ ಕರೆಗೆ ತಕ್ಷಣ ಓಗೊಡುವ ‘ಜಾಗೃತ ದೇವರು’ ಎಂದೇ ಬಜರಂಗಬಲಿಯನ್ನು ಆರಾಧಿಸಲಾಗುತ್ತದೆ. ನಿಜವಾದ ಭಕ್ತಿ ಮತ್ತು ನಿರ್ಮಲ ಹೃದಯದಿಂದ ಹನುಮನನ್ನು ಸ್ಮರಿಸುವ ಭಕ್ತರ ಎಲ್ಲಾ ಇಷ್ಟಾರ್ಥಗಳು ಸಾಧ್ಯವಾದಷ್ಟು ಬೇಗ ಈಡೇರುತ್ತವೆ ಎಂಬ ದೃಢವಾದ ನಂಬಿಕೆ ಜನರಲ್ಲಿದೆ. ಹನುಮಂತನನ್ನು ‘ಸಂಕಷ್ಟಮೋಚಕ’ ಎಂದು ಕರೆಯಲಾಗುತ್ತದೆ, ಅವನು ತನ್ನ ಭಕ್ತರ ಹಾದಿಯಲ್ಲಿ ಬರುವ ಎಲ್ಲಾ ರೀತಿಯ ಅಡೆತಡೆಗಳನ್ನು ಮತ್ತು ಕಷ್ಟಗಳನ್ನು ತಕ್ಷಣವೇ ನಿವಾರಿಸಿ ಅಭಯ ನೀಡುತ್ತಾನೆ.

ಕನಸಿನಲ್ಲಿ ಹನುಮಂತ ಕಂಡರೆ ಏನರ್ಥ?

ವಿಶೇಷವೆಂದರೆ, ಹನುಮಂತನು ತನ್ನ ಭಕ್ತರ ಮೇಲಿರುವ ಅನುಗ್ರಹವನ್ನು ಹಲವು ಬಾರಿ ಕನಸುಗಳ ಮೂಲಕ ವಿಶೇಷ ಚಿಹ್ನೆಗಳ ರೂಪದಲ್ಲಿ ದರ್ಶನ ನೀಡುತ್ತಾನೆ ಎಂದು ಹೇಳಲಾಗುತ್ತದೆ. ಸ್ವಪ್ನ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ತನ್ನ ಕನಸಿನಲ್ಲಿ ಹನುಮಾನ್ ಜಿಯ ದೇವಸ್ಥಾನವನ್ನು ಅಥವಾ ಅವರ ಭವ್ಯ ವಿಗ್ರಹವನ್ನು ಕಂಡರೆ, ಆಂಜನೇಯನು ಅವರ ಭಕ್ತಿಯಿಂದ ಪ್ರಸನ್ನನಾಗಿದ್ದಾನೆ ಮತ್ತು ಆತನ ಆಶೀರ್ವಾದ ಸದಾ ಅವರ ಮೇಲಿರುತ್ತದೆ ಎಂದರ್ಥ. ಅದೇ ರೀತಿ, ಕನಸಿನಲ್ಲಿ ಪದೇ ಪದೇ ಕೋತಿಗಳು ಕಾಣಿಸಿಕೊಂಡರೆ ಅದನ್ನು ಅತ್ಯಂತ ಶುಭ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅಂತಹ ಕನಸು ಬೀಳುವ ವ್ಯಕ್ತಿಯು ತಾನು ಕೈಕೊಳ್ಳುವ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ವಿಯಾಗುತ್ತಾನೆ ಹಾಗೂ ಆತನ ಜೀವನವು ಸಂತೋಷ ಮತ್ತು ಶಾಂತಿಯಿಂದ ಸಾಗುತ್ತದೆ ಎಂಬುದು ಇದರ ಸಂಕೇತವಾಗಿದೆ.

ಹನುಮಂತನ ಕೃಪಾಕಟಾಕ್ಷ ನಿರಂತರ:

ಅನೇಕ ಜನರಿಗೆ ರಾತ್ರಿಯ ಸಮಯದಲ್ಲಿ ಭಯಾನಕ ಕನಸುಗಳು ಬೀಳುವುದು ಸಹಜ. ಒಂದು ವೇಳೆ ಇಂತಹ ಕನಸುಗಳಲ್ಲಿ ದೆವ್ವ-ಭೂತಗಳು ಕಂಡರೂ, ಮನಸ್ಸಿಗೆ ಯಾವುದೇ ಭಯವಾಗದಿದ್ದರೆ, ನಿಮ್ಮ ಜೀವನದಲ್ಲಿ ಹನುಮಂತನ ಕೃಪಾಕಟಾಕ್ಷ ನಿರಂತರವಾಗಿದೆ ಎಂದು ತಿಳಿಯಬೇಕು. ನಿಮ್ಮ ಆರಾಧನೆಯಿಂದ ಹನುಮಂತನು ತೃಪ್ತನಾಗಿದ್ದಾನೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಇದರೊಂದಿಗೆ, ಎಲ್ಲೇ ಆದರೂ ರಾಮನ ಕಥೆ ಅಥವಾ ಕೀರ್ತನೆ ನಡೆಯುತ್ತಿರುವಾಗ ನೀವು ಅದರಲ್ಲಿ ಭಕ್ತಿಯಿಂದ ಭಾಗವಹಿಸಿದರೆ ಮತ್ತು ಅಲ್ಲಿ ಸಿಗುವ ಪ್ರಸಾದವನ್ನು ಸ್ವೀಕರಿಸಿದರೆ, ಅದು ಹನುಮಂತನ ವಿಶೇಷ ಅನುಗ್ರಹವೇ ಸರಿ. ಅಷ್ಟೇ ಅಲ್ಲದೆ, ಕನಸಿನಲ್ಲಿ ರಾಮಾಯಣಕ್ಕೆ ಸಂಬಂಧಿಸಿದ ಪ್ರಸಂಗಗಳಾಗಲಿ ಅಥವಾ ಶ್ರೀರಾಮ, ಸೀತಾ ಮಾತೆ ಮತ್ತು ಲಕ್ಷ್ಮಣರಂತಹ ದೈವೀ ಪಾತ್ರಗಳು ಕಂಡರೆ, ನಿಮಗೆ ಹನುಮನ ಪೂರ್ಣ ಆಶೀರ್ವಾದ ಲಭಿಸಿದೆ ಎಂದು ನಂಬಲಾಗುತ್ತದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಮಂಗಳವಾರವನ್ನು ಅತ್ಯಂತ ಶ್ರೇಷ್ಠ ದಿನ:

ಶಾಸ್ತ್ರಗಳ ಪ್ರಕಾರ, ಹನುಮಂತನನ್ನು ಪೂಜಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಮಂಗಳವಾರವನ್ನು ಅತ್ಯಂತ ಶ್ರೇಷ್ಠ ದಿನವೆಂದು ಪರಿಗಣಿಸಲಾಗಿದೆ. ಮಂಗಳವಾರದಂದು ಹನುಮನ ದರ್ಶನ ಮತ್ತು ಆರಾಧನೆ ಮಾಡುವುದರಿಂದ ಜೀವನದ ಸರ್ವ ವಿಘ್ನಗಳೂ ನಿವಾರಣೆಯಾಗಿ ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸುತ್ತದೆ. ಆಂಜನೇಯನನ್ನು ಪ್ರಸನ್ನಗೊಳಿಸಲು ಪ್ರತಿ ಮಂಗಳವಾರ ಮತ್ತು ಶನಿವಾರದಂದು ದೇವಸ್ಥಾನಕ್ಕೆ ಭೇಟಿ ನೀಡಿ ಮಲ್ಲಿಗೆ ಎಣ್ಣೆ ಹಾಗೂ ಸಿಂಧೂರವನ್ನು ಭಕ್ತಿಯಿಂದ ಅರ್ಪಿಸಬೇಕು. ಹನುಮಂತನಿಗೆ ಚೋಳವನ್ನು (ಸಿಂಧೂರದ ಲೇಪನ) ಅರ್ಪಿಸುವ ಭಕ್ತನು ತನ್ನ ಜೀವನದಲ್ಲಿ ಎಂದಿಗೂ ದೆವ್ವ-ರಾಕ್ಷಸರ ಬಾಧೆ, ಶನಿದೋಷ, ರೋಗ-ರುಜಿನಗಳು, ಕೋರ್ಟ್ ಕಚೇರಿ ವಿವಾದಗಳು, ಅಪಘಾತಗಳು ಅಥವಾ ಸಾಲದ ಬಾಧೆಗಳ ಬಗ್ಗೆ ಚಿಂತಿಸಬೇಕಾಗಿ ಬರುವುದಿಲ್ಲ.

ಮಾರುತಿಗೆ ನೈವೇದ್ಯವನ್ನು ಅರ್ಪಿಸುವಾಗ ತುಳಸಿ ದಳವನ್ನು ಸಮರ್ಪಿಸುವುದು ಅತ್ಯಂತ ಮುಖ್ಯ, ಏಕೆಂದರೆ ಹನುಮನಿಗೆ ತುಳಸಿ ಎಂದರೆ ಅತ್ಯಂತ ಪ್ರೀತಿ. ಆಂಜನೇಯನ ವಿಗ್ರಹದ ಮುಂದೆ ಶುದ್ಧ ತುಪ್ಪದ ದೀಪವನ್ನು ಹಚ್ಚಿ, ತುಳಸಿ ಮಾಲೆಯನ್ನು ಅರ್ಪಿಸುವುದರಿಂದ ಭಕ್ತರ ಎಲ್ಲಾ ತೊಂದರೆಗಳು ಕ್ಷಣಾರ್ಧದಲ್ಲಿ ದೂರವಾಗುತ್ತವೆ. ಎಲ್ಲಕ್ಕಿಂತ ಹೆಚ್ಚಾಗಿ, ಯಾರು ಪ್ರತಿದಿನ ನಿಯಮಿತವಾಗಿ ಭಕ್ತಿಯಿಂದ ‘ಹನುಮಾನ್ ಚಾಲೀಸಾ’ ಪಠಿಸುತ್ತಾರೋ, ಅವರ ಜೀವನದುದ್ದಕ್ಕೂ ಬಜರಂಗಬಲಿಯ ವಿಶೇಷ ರಕ್ಷಣಾ ಕವಚ ಇರುತ್ತದೆ. ಹನುಮನನ್ನು ನಂಬಿದ ಕೈ ಎಂದಿಗೂ ಕೈಬಿಡುವುದಿಲ್ಲ ಎಂಬುದೇ ಸನಾತನ ಧರ್ಮದ ಭಕ್ತರ ಅಚಲ ನಂಬಿಕೆಯಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:35 am, Sat, 30 May 26

Source link

ಸ್ಟಿಕ್ಕರ್ ಹಾಕಿದ್ರೂ ಕಷ್ಟ, ಹಾಕದಿದ್ರೂ ಫೈನ್! ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು!

ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು!

ಬೆಂಗಳೂರು, ಮೇ 30: ನಗರದಲ್ಲಿ ಪೋರ್ಟರ್, ಅಂಕಲ್ ಸೇರಿದಂತೆ ವಿವಿಧ ಅಗ್ರಿಗೇಟರ್ ಆಪ್‌ಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಖಾಸಗಿ ಗೂಡ್ಸ್ ವಾಹನ (Goods Vehicle) ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಚಾಲಕರಿಗೆ ಸ್ಟಿಕ್ಕರ್ ಹಾಕಿದರೂ ಕಷ್ಟ, ಹಾಕದೇ ಇದ್ದರೂ ಕಷ್ಟ ಎಂಬ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ.

ಮುಖ್ಯಾಂಶಗಳು

  • ಅಗ್ರಿಗೇಟರ್ ಆಪ್ ಕಂಪನಿಗಳು ಚಾಲಕರ ಮೇಲೆ ಸ್ಟಿಕ್ಕರ್ ಹಾಕಲು ಒತ್ತಡ ಹೇರುತ್ತಿವೆ.
  • ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸಂಚಾರಿ ಪೊಲೀಸರು ಭಾರಿ ದಂಡ ವಿಧಿಸುತ್ತಿದ್ದಾರೆ.
  • ನಿಯಮಾವಳಿ ರೂಪಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಚಾಲಕರ ಸಂಘಟನೆಗಳು ಎಚ್ಚರಿಸಿವೆ.

ವಾಹನಗಳ ಮೇಲೆ ಸ್ಟಿಕ್ಕರ್ ಕಡ್ಡಾಯ: ಚಾಲಕರಿಗೆ ಕಂಪನಿಗಳ ಒತ್ತಡ!

ನಗರದಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ ಗೂಡ್ಸ್ ವಾಹನಗಳ ಮಾಲೀಕರು ಬಾಡಿಗೆಗಾಗಿ ಈ ಆಪ್‌ಗಳನ್ನು ಅವಲಂಬಿಸಿದ್ದಾರೆ. ಆದರೆ, ಈಗ ಈ ಕಂಪನಿಗಳು ಚಾಲಕರ ಸ್ವಂತ ವಾಹನಗಳ ಮೇಲೆ ತಮ್ಮ ಬ್ರ್ಯಾಂಡ್‌ನ ದೊಡ್ಡ ಗಾತ್ರದ ಸ್ಟಿಕ್ಕರ್‌ಗಳನ್ನು ಅಂಟಿಸುವಂತೆ ತೀವ್ರ ಒತ್ತಡ ಹೇರುತ್ತಿವೆ. ಒಂದು ವೇಳೆ ಸ್ಟಿಕ್ಕರ್ ಅಂಟಿಸದಿದ್ದರೆ ಆಪ್‌ನಲ್ಲಿ ಬಾಡಿಗೆ ಸಿಗದಂತೆ ಮಾಡಲಾಗುತ್ತಿದೆ ಮತ್ತು ಚಾಲಕರ ಐಡಿಗಳನ್ನು ಏಕಾಏಕಿ ಬ್ಲಾಕ್ ಮಾಡಲಾಗುತ್ತಿದೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಲಿಖಿತ ಆದೇಶ ಅಥವಾ ಸರ್ಕಾರದ ಅನುಮತಿ ಇಲ್ಲದೆ ಕಂಪನಿಗಳು ಇಂತಹ ನಿಯಮಗಳನ್ನು ಜಾರಿಗೊಳಿಸುತ್ತಿರುವುದರಿಂದ, ದಿನನಿತ್ಯದ ಬಾಡಿಗೆಯನ್ನೇ ನಂಬಿಕೊಂಡಿರುವ ನೂರಾರು ಚಾಲಕರ ಕುಟುಂಬ ನಿರ್ವಹಣೆ ಸದ್ಯ ಕಂಗಾಲಾಗಿದೆ.

ಟ್ರಾಫಿಕ್ ಪೊಲೀಸ್ ದಂಡದ ಭೀತಿ

ಕಂಪನಿಗಳ ಒತ್ತಡಕ್ಕೆ ಮಣಿದು ವಾಹನಗಳ ಮೇಲೆ ಸ್ಟಿಕ್ಕರ್ ಅಂಟಿಸಿಕೊಂಡರೆ, ಇತ್ತ ಸಂಚಾರಿ ಪೊಲೀಸರು ನಿಯಮ ಉಲ್ಲಂಘನೆ ಎಂದು ವಾಹನಗಳನ್ನು ತಡೆದು ಭಾರಿ ದಂಡ ವಿಧಿಸುತ್ತಿದ್ದಾರೆ. ಇದರಿಂದಾಗಿ ಒಂದು ಕಡೆ ಬಾಡಿಗೆ ಕಳೆದುಕೊಳ್ಳುವ ಭಯ, ಮತ್ತೊಂದು ಕಡೆ ಪೊಲೀಸರ ದಂಡದ ಆತಂಕದ ಮಧ್ಯೆ ಚಾಲಕರು ನಲುಗುತ್ತಿದ್ದಾರೆ.

ಈ ದಬ್ಬಾಳಿಕೆಯ ವಿರುದ್ಧ ತಿರುಗಿಬಿದ್ದಿರುವ ಚಾಲಕರ ಸಂಘಟನೆಗಳು ಈಗಾಗಲೇ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಿವೆ. ಖಾಸಗಿ ವಾಹನದ ಮೇಲೆ ಯಾವ ಸ್ಟಿಕ್ಕರ್ ಇರಬೇಕು ಎಂಬುದನ್ನು ನಿರ್ಧರಿಸಲು ಆಪ್ ಕಂಪನಿಗಳಿಗೆ ಯಾವುದೇ ಹಕ್ಕಿಲ್ಲ ಎಂದು ನೊಂದ ಚಾಲಕರ ವೇದಿಕೆಯ ರಾಜ್ಯಾಧ್ಯಕ್ಷ ರಾಜು ಹಾಗೂ ಚಾಲಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ 4 ಡಿಸಿಎಂ ಹುದ್ದೆಗಳ ಸೃಷ್ಟಿ ಹೊರಟ ಕಾಂಗ್ರೆಸ್ ಹೈಕಮಾಂಡ್​ಗೆ ಈಗ ಭಾರಿ ಇಕ್ಕಟ್ಟು!

ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹ

ಯಾವುದೇ ಮಾರ್ಗಸೂಚಿ ಇಲ್ಲದೆ ಆಪ್ ಕಂಪನಿಗಳು ನಡೆಸುತ್ತಿರುವ ಈ ದಂದೆಗೆ ಬ್ರೇಕ್ ಹಾಕಲು ಸರ್ಕಾರ ಹಾಗೂ ಸಾರಿಗೆ ಇಲಾಖೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಚಾಲಕರು ಆಗ್ರಹಿಸಿದ್ದಾರೆ. ಅಗ್ರಿಗೇಟರ್ ಆಪ್‌ಗಳ ನಿಯಮಗಳು ಹಾಗೂ ವಾಹನಗಳ ಮೇಲೆ ಸ್ಟಿಕ್ಕರ್ ಅಂಟಿಸುವ ವಿಚಾರದಲ್ಲಿ ಸರ್ಕಾರ ಶೀಘ್ರವೇ ಸ್ಪಷ್ಟ ನಿಯಮಾವಳಿ ಪ್ರಕಟಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಚಾಲಕರ ಸಂಘಟನೆಗಳು ಎಚ್ಚರಿಕೆ ನೀಡಿವೆ.

ವರದಿ: ನಟರಾಜ್ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vaibhav Sooryavanshi: 440 ಎಸೆತಗಳಲ್ಲಿ ಸಾರ್ವಕಾಲಿಕ ದಾಖಲೆ ಧೂಳೀಪಟ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1000 ರನ್​ ಪೂರೈಸಿದ ಬ್ಯಾಟರ್ ಯಾರು? ಈ ಪ್ರಶ್ನೆಗೆ ಇನ್ಮುಂದೆ ಒಂದೇ ಉತ್ತರ ವೈಭವ್ ಸೂರ್ಯವಂಶಿ. ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ವೈಭವ್ 96 ರನ್ ಸಿಡಿಸಿದ್ದರು.

ಈ 97 ರನ್​ಗಳೊಂದಿಗೆ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ 1000 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ  ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅತೀ ಕಡಿಮೆ ಎಸೆತಗಳಲ್ಲಿ ಸಾವಿರ ರನ್​ ಕಲೆಹಾಕಿದ ಸಾರ್ವಕಾಲಿಕ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆ್ಯಂಡ್ರೆ ರಸೆಲ್ ಹೆಸರಿನಲ್ಲಿತ್ತು.

  • ಆ್ಯಂಡ್ರೆ ರಸೆಲ್ 545 ಎಸೆತಗಳಲ್ಲಿ 1000 ರನ್ ಪೂರೈಸಿ ಭರ್ಜರಿ ದಾಖಲೆ ನಿರ್ಮಿಸಿದ್ದರು.
  • ರಸೆಲ್ ಬಳಿಕ ಟಿಮ್ ಡೇವಿಡ್ 560 ಎಸೆತಗಳ ಮೂಲಕ ಸಾವಿರ ರನ್​ಗಳ ಗಡಿದಾಟಿದ್ದರು.

ಇದೀಗ ಇವರಿಬ್ಬರನ್ಣೂ ಹಿಂದಿಕ್ಕಿ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೇವಲ 440 ಎಸೆತಗಳಲ್ಲಿ. ಅಂದರೆ ಐಪಿಎಲ್ ಇತಿಹಾಸದಲ್ಲಿ 500 ಕ್ಕಿಂತ ಕಡಿಮೆ ಎಸೆತಗಳಲ್ಲಿ 1000 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ ಅತೀ ಕಡಿಮೆ ಎಸೆತಗಳ ಮೂಲಕ 1000 ರನ್​ ಪೂರೈಸಿದ ಐತಿಹಾಸಿಕ ಸಾಧನೆ ಮಾಡಿದ್ದಾರೆ.

  • ವೈಭವ್ ಸೂರ್ಯವಂಶಿ ಐಪಿಎಲ್ 2025 ರಲ್ಲಿ 7 ಇನಿಂಗ್ಸ್​ಗಳ ಮೂಲಕ 252 ರನ್ ಕಲೆಹಾಕಿದ್ದರು.
  • ಈ ಬಾರಿಯ ಟೂರ್ನಿಯಲ್ಲಿ 16 ಇನಿಂಗ್ಸ್ ಆಡಿರುವ ವೈಭವ್ ಕಲೆಹಾಕಿರುವುದು ಬರೋಬ್ಬರಿ 776 ರನ್​​ಗಳು.

ಈ ಮೂಲಕ ಕೇವಲ 23 ಇನಿಂಗ್ಸ್​ಗಳಲ್ಲಿ 1029 ರನ್ ಕಲೆಹಾಕಿದ್ದಾರೆ. ಇನ್ನು 1029 ರನ್​ ಕಲೆಹಾಕಲು ವೈಭವ್ ಸೂರ್ಯವಂಶಿ ತೆಗೆದುಕೊಂಡಿರುವುದು ಕೇವಲ 449 ಎಸೆತಗಳನ್ನು ಮಾತ್ರ. ಅಂದರೆ 228.95ರ ಸ್ಟ್ರೈಕ್ ರೇಟ್​ನಲ್ಲಿ ಯುವ ಎಡಗೈ ದಾಂಡಿಗ ಈ ಸಾಧನೆ ಮಾಡಿದ್ದಾರೆ.

ಇದರ ಜೊತೆಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ 200+ ಸ್ಟ್ರೈಕ್ ರೇಟ್​ನಲ್ಲಿ 700+ ರನ್ ಕಲೆಹಾಕಿದ ವಿಶೇಷ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಟಿ20 ಟೂರ್ನಿಯಲ್ಲಿ ಯಾವುದೇ ಬ್ಯಾಟರ್ 200+ ಸ್ಟ್ರೈಕ್ ರೇಟ್​ನಲ್ಲಿ ಈವರೆಗೆ 700 ರನ್​ಗಳ ಗಡಿ ದಾಟಿರಲಿಲ್ಲ.

  • ಈ ಹಿಂದೆ ಟಿ20 ಕ್ರಿಕೆಟ್​ನಲ್ಲಿ​ ಅತ್ಯಧಿಕ ಸ್ಟ್ರೈಕ್ ರೇಟ್​ನಲ್ಲಿ, ಅತೀ ಹೆಚ್ಚು ರನ್ ಕಲೆಹಾಕಿದ ಭರ್ಜರಿ ದಾಖಲೆ ಸೌತ್ ಆಫ್ರಿಕಾದ ರೈಲಿ ರೊಸ್ಸೊವ್ ಹೆಸರಿನಲ್ಲಿತ್ತು.
  • 2022ರ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ರೈಲಿ ರೊಸ್ಸೊವ್ 192.28 ಸ್ಟ್ರೈಕ್ ರೇಟ್​ನಲ್ಲಿ 623 ರನ್​ಗಳಿಸಿದ್ದು ಟಿ20 ಕ್ರಿಕೆಟ್​ನ ಸರ್ವಶ್ರೇಷ್ಠ ದಾಖಲೆಯಾಗಿತ್ತು.

ಇದನ್ನೂ ಓದಿ: ಫೈನಲ್ ಪಂದ್ಯದಲ್ಲಿ ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ?

ಈ ದಾಖಲೆಯನ್ನು ಮುರಿದು ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ಈ ಬಾರಿ ಐಪಿಎಲ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ವೈಭವ್ 237.31ರ ಸ್ಟ್ರೈಕ್ ರೇಟ್​ನಲ್ಲಿ 776 ರನ್​ ಬಾರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

Source link

ಡಿಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷದಿಂದ ಗಡ್ಡ-ಕೂದಲು ಬಿಟ್ಟು ಹರಕೆ ಹೊತ್ತಿದ್ದ ಅಪ್ಪಟ ಅಭಿಮಾನಿ!

ರಾಮನಗರ, ಮೇ 30: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ‘ಕನಕಪುರ ಬಂಡೆ’ ಖ್ಯಾತಿಯ ಡಿಕೆ ಶಿವಕುಮಾರ್ ಆಯ್ಕೆ ಹಾಗೂ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಅವರ ಅಪ್ಪಟ ಅಭಿಮಾನಿಯೊಬ್ಬರ ಅಪರೂಪದ ಹರಕೆಯ ಕಥೆ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬ ಅಭಿಮಾನಿ, ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿ ಗಾದಿ ಏರಲಿ ಎಂದು ಕಳೆದ ಮೂರು ವರ್ಷಗಳಿಂದ ವಿಶಿಷ್ಟ ಹರಕೆಯೊಂದನ್ನು ಹೊತ್ತಿದ್ದರು.

ಆಸ್ತಿ, ಅಂತಸ್ತಿಗಿಂತಲೂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯನ್ನೇ ತನ್ನ ಧ್ಯೇಯವಾಗಿಸಿಕೊಂಡಿದ್ದ ಈಶ್ವರಪ್ಪ, ‘ಡಿಕೆಶಿ ರಾಜ್ಯದ ಮುಖ್ಯಮಂತ್ರಿಯಾಗುವವರೆಗೂ ನಾನು ತಲೆಗೂದಲು ಹಾಗೂ ಗಡ್ಡವನ್ನು ಕತ್ತರಿಸುವುದಿಲ್ಲ (ಕ್ಷೌರ ಮಾಡಿಸುವುದಿಲ್ಲ)’ ಎಂದು ಪ್ರತಿಜ್ಞೆ ಮಾಡಿದ್ದರು. ಅಷ್ಟೇ ಅಲ್ಲದೆ, ಉತ್ತರ ಪ್ರದೇಶದ ಪ್ರಯಾಗ್ ರಾಜ್‌ಗೆ (ಅಲಹಾಬಾದ್) ತೆರಳಿದ್ದ ಈಶ್ವರಪ್ಪ, ಪವಿತ್ರ ಕುಂಭಮೇಳದ ಸಂದರ್ಭದಲ್ಲಿ ಅಲ್ಲಿನ ತ್ರಿವೇಣಿ ಸಂಗಮದಲ್ಲಿ ಡಿಕೆ ಶಿವಕುಮಾರ್ ಅವರ ಭಾವಚಿತ್ರವನ್ನು ಕೈಯಲ್ಲಿ ಹಿಡಿದು, ಅವರು ಶೀಘ್ರದಲ್ಲೇ ಕರುನಾಡಿನ ಸಿಎಂ ಆಗಲಿ ಎಂದು ವಿಶೇಷ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸಿ ಗಮನ ಸೆಳೆದಿದ್ದರು.

ಕಳೆದ ಮೂರು ವರ್ಷಗಳಿಂದ ಗಡ್ಡ ಮತ್ತು ದಟ್ಟವಾದ ತಲೆಗೂದಲು ಬಿಟ್ಟು ತಪಸ್ವಿಯಂತೆ ತಿರುಗುತ್ತಿದ್ದ ಈಶ್ವರಪ್ಪ ಅವರ ಸುದೀರ್ಘ ಪ್ರಾರ್ಥನೆಗೆ ಕೊನೆಗೂ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳು ಹಾಗೂ ಕಾಲಭೈರವೇಶ್ವರ ಅನುಗ್ರಹ ನೀಡಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಡಿಕೆಶಿ ಹೆಸರು ಸಿಎಂ ಹುದ್ದೆಗೆ ಫೈನಲ್ ಆಗುತ್ತಿದ್ದಂತೆಯೇ ಈಶ್ವರಪ್ಪ ಅವರ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ಬೆಂಗಳೂರಿಗೆ ಬಂದು ಅವರನ್ನು ಖುದ್ದಾಗಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ. ಅದಾದ ಬಳಿಕ ನೇರವಾಗಿ ಮಂತ್ರಾಲಯ ಪುಣ್ಯಕ್ಷೇತ್ರಕ್ಕೆ ತೆರಳಿ ಶ್ರೀ ಗುರು ರಾಯರ ಸನ್ನಿಧಿಯಲ್ಲಿ ತಮ್ಮ ತಲೆಗೂದಲು ಹಾಗೂ ಗಡ್ಡವನ್ನು ಒಪ್ಪಿಸಿ (ಮುಡಿ ಕೊಟ್ಟು) ಹರಕೆ ತೀರಿಸುವುದಾಗಿ ಭಾವುಕರಾಗಿ ತಿಳಿಸಿದ್ದಾರೆ. ನಾಯಕನ ಮೇಲಿನ ಈ ಅಪ್ರತಿಮ ಅಭಿಮಾನದ ವಿಡಿಯೋ ಈಗ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

4 ಡಿಸಿಎಂ ಹುದ್ದೆಗಳ ಸೃಷ್ಟಿ ಹೊರಟ ಕಾಂಗ್ರೆಸ್ ಹೈಕಮಾಂಡ್​ಗೆ ಈಗ ಭಾರಿ ಇಕ್ಕಟ್ಟು!

4 ಡಿಸಿಎಂ ಹುದ್ದೆಗಳ ಸೃಷ್ಟಿ ಹೊರಟ ಕಾಂಗ್ರೆಸ್ ಹೈಕಮಾಂಡ್​ಗೆ ಈಗ ಇಕ್ಕಟ್ಟು!Image Credit source: tv9

ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಮುಖ್ಯಮಂತ್ರಿ ಬದಲಾವಣೆಯ ಬೆನ್ನಲ್ಲೇ ಇದೀಗ ನೂತನ ಸಚಿವ ಸಂಪುಟ ರಚನೆ ಹಾಗೂ ಉಪಮುಖ್ಯಮಂತ್ರಿ (DCM) ಹುದ್ದೆಗಳ ಸೃಷ್ಟಿಯ ವಿಚಾರ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎಂಬುದು ತಿಳಿದುಬಂದಿದೆ. ರಾಜ್ಯದಲ್ಲಿ ಆಡಳಿತ ಸಮತೋಲನ ಕಾಯ್ದುಕೊಳ್ಳಲು ಹಾಗೂ ಮುಂಬರುವ ಲೋಕಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬರೋಬ್ಬರಿ 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಎಐಸಿಸಿ (AICC) ಗಂಭೀರ ಚಿಂತನೆ ನಡೆಸಿದೆ. ಆದರೆ, ಪ್ರಮುಖ ಸಮುದಾಯಗಳ ಪ್ರಭಾವಿ ನಾಯಕರುಗಳು ಡಿಸಿಎಂ ಹುದ್ದೆಗಾಗಿ ದೆಹಲಿ ಮಟ್ಟದಲ್ಲಿ ತೀವ್ರ ಲಾಬಿ ನಡೆಸುತ್ತಿರುವುದರಿಂದ, ಯಾರಿಗೆ ಸ್ಥಾನ ನೀಡಿದರೂ ಅಸಮಾಧಾನ ಸ್ಫೋಟಗೊಳ್ಳುವ ಭೀತಿಯಲ್ಲಿ ಹೈಕಮಾಂಡ್ ಸಂದಿಗ್ಧ ಸ್ಥಿತಿಗೆ ತಲುಪಿದೆ.

ಮುಖ್ಯಾಂಶಗಳು

  • ಜಾತಿಸೂತ್ರದ ಆಧಾರದ ಮೇಲೆ 4 ಹೊಸ ಡಿಸಿಎಂ ಹುದ್ದೆಗಳ ಸೃಷ್ಟಿಗೆ ಚಿಂತನೆ ನಡೆಸಿದ್ದರೂ ನಾಯಕರ ತೀವ್ರ ಪೈಪೋಟಿಯಿಂದಾಗಿ ಹೈಕಮಾಂಡ್ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.
  • ಲಿಂಗಾಯತ, ಮುಸ್ಲಿಂ, ದಲಿತ ಹಾಗೂ ಒಬಿಸಿ ಕೋಟಾಗಳ ಅಡಿಯಲ್ಲಿ ಹಿರಿಯ ಮತ್ತು ಕಿರಿಯ ನಾಯಕರ ನಡುವೆ ಸೃಷ್ಟಿಯಾಗಿರುವ ಭಾರಿ ಪೈಪೋಟಿ.
  • ಮುಸ್ಲಿಂ ಕೋಟಾದಲ್ಲೂ ಹೆಚ್ಚಾದ ಪೈಪೋಟಿ.

ಕಾಂಗ್ರೆಸ್ ಮೂಲಗಳ ಪ್ರಕಾರ, ಒಬಿಸಿ, ಲಿಂಗಾಯತ, ಮುಸ್ಲಿಂ ಹಾಗೂ ದಲಿತ ಸಮುದಾಯಗಳಿಗೆ ತಲಾ ಒಂದು ಡಿಸಿಎಂ ಹುದ್ದೆ ನೀಡಲು ಹೈಕಮಾಂಡ್ ಪ್ಲಾನ್ ಮಾಡಿತ್ತು. ಆದರೆ ಪ್ರತಿಯೊಂದು ಕೋಟಾದಲ್ಲೂ ನಾಯಕರ ನಡುವೆ ದೊಡ್ಡ ಜಿದ್ದಾಜಿದ್ದಿ ಶುರುವಾಗಿದೆ.

ಒಬಿಸಿ ಕೋಟಾ

ಈ ಕೋಟಾದಡಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲು ಆಲೋಚಿಸಲಾಗಿದೆ. ಆದರೆ, ಇವರಿಗೆ ನೀಡಿದರೆ ಪಕ್ಷದಲ್ಲಿ ಭಿನ್ನ ಸಂದೇಶ ರವಾನೆಯಾಗಬಹುದು ಎಂಬ ಆತಂಕ ಹೈಕಮಾಂಡ್ ಅನ್ನು ಕಾಡುತ್ತಿದೆ.

ಲಿಂಗಾಯತ ಕೋಟಾ

ಹಿರಿಯ ನಾಯಕರಾದ ಎಂ.ಬಿ. ಪಾಟೀಲ್ ಮತ್ತು ಈಶ್ವರ ಖಂಡ್ರೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮುಸ್ಲಿಂ ಕೋಟಾ

ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬೆಂಬಲವಿದ್ದರೆ, ಮತ್ತೊಂದೆಡೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಕೇರಳದ ಪ್ರಭಾವಿ ಧಾರ್ಮಿಕ ಗುರುಗಳ ಬೆಂಬಲವಿದ್ದು, ಇಬ್ಬರ ನಡುವೆ ಭಾರಿ ಪೈಪೋಟಿ ನಡೆದಿದೆ.

ದಲಿತ ಕೋಟಾ

ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಜಟಾಪಟಿ ಆರಂಭವಾಗಿದೆ. ಯುವ ನಾಯಕ ಪ್ರಿಯಾಂಕ್‌ಗೆ ಸ್ಥಾನ ನೀಡಿದರೆ ಪರಮೇಶ್ವರ್ ಅಸಮಾಧಾನಗೊಳ್ಳುವ ಸಾಧ್ಯತೆಯಿದೆ. ಅಲ್ಲದೆ ದಲಿತ ಸಮುದಾಯದಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳ ಸಮೀಕರಣದ ಪ್ರಶ್ನೆಯೂ ಉದ್ಭವಿಸಿದೆ. ಹೀಗಾಗಿ ಇಂದು ನಡೆಯಲಿರುವ ಶಾಸಕಾಂಗ ಪಕ್ಷದ (CLP) ಸಭೆಯ ಬಳಿಕವೇ ಎಲ್ಲಾ ಆಯಾಮಗಳನ್ನು ಅಳೆದು ತೂಗಿ ಹೈಕಮಾಂಡ್ ಅಂತಿಮ ನಿರ್ಧಾರ ಪ್ರಕಟಿಸಲಿದೆ.

ಕೆಪಿಸಿಸಿ ಅಧ್ಯಕ್ಷ ರೇಸ್‌ಗೆ ಬಿ.ಕೆ. ಹರಿಪ್ರಸಾದ್ ಸರ್ಪ್ರೈಸ್ ಎಂಟ್ರಿ!

ಇನ್ನೊಂದೆಡೆ, ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಗಾದಿಯ ರೇಸ್‌ನಲ್ಲಿ ದೊಡ್ಡ ರಾಜಕೀಯ ಹಲ್ಚಲ್ ಸೃಷ್ಟಿಯಾಗಿದೆ. ಈ ಮುಂಚೆ ಸತೀಶ್ ಜಾರಕಿಹೊಳಿ ಅವರ ಹೆಸರು ಮುಂಚೂಣಿಯಲ್ಲಿದ್ದರೂ, ಅವರು ಸಂಪುಟದಲ್ಲಿ ಸಚಿವ ಸ್ಥಾನದ ಜೊತೆಗೇ ಅಧ್ಯಕ್ಷ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಅಧಿಕಾರವಿಲ್ಲದ ಬರಿ ಅಧ್ಯಕ್ಷ ಸ್ಥಾನ ಒಪ್ಪಲು ಅವರು ನಿರಾಕರಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಒಬಿಸಿ ಕೋಟಾದಡಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಅನಿರೀಕ್ಷಿತವಾಗಿ ಮುನ್ನೆಲೆಗೆ ಬಂದಿದೆ. ಹರಿಪ್ರಸಾದ್ ಅವರಿಗೆ ಕೆ.ಸಿ. ವೇಣುಗೋಪಾಲ್ ಅವರ ಸಂಪೂರ್ಣ ಬೆಂಬಲವಿದ್ದು, ಹೈಕಮಾಂಡ್ ಎದುರು ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದ ನೂತನ ಸಿಎಂ ಆಯ್ಕೆಗೆ ಕ್ಷಣಗಣನೆ: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

ಇಂದು ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಹಿರಿಯ ಶಾಸಕರ ಮೂಲಕ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಅಧಿಕೃತವಾಗಿ ಪ್ರಸ್ತಾಪಿಸಿ ಒಮ್ಮತ ಮೂಡಿಸಲು ಹೈಕಮಾಂಡ್ ತೆರೆಮರೆಯ ತಂತ್ರ ರೂಪಿಸಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನನ್ನ ನೆನಪಿದೆಯಾ? ಹಳೆಯ ಸ್ನೇಹಿತರನ್ನು ಹುಡುಕಿ ಶಾಲೆಗೆ ಬಂದ ಬಾಲಕ

ಸ್ಥಳ ಬದಲಾವಣೆ, ಜೀವನದ ಜಂಜಾಟದಲ್ಲಿ ಗೆಳೆಯರು ದೂರವಾಗುವುದು ಸಹಜ. ಆದರೆ, ನಿಜವಾದ ಸ್ನೇಹಕ್ಕೆ ಸಮಯ ಮತ್ತು ದೂರ ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಈ ಹೃದಯಸ್ಪರ್ಶಿ ಘಟನೆ ಸಾಕ್ಷಿಯಾಗಿದೆ. ವರ್ಷದ ಹಿಂದೆ ಕುಟುಂಬದೊಂದಿಗೆ ಬೇರೆ ಊರಿಗೆ ವಲಸೆ ಹೋಗಿದ್ದ ಬಾಲಕ, ತನ್ನ ಹಳೆಯ ಶಾಲಾ ದಿನಗಳನ್ನು ಮತ್ತು ಗೆಳೆಯರನ್ನು ಎಂದಿಗೂ ಮರೆತಿರಲಿಲ್ಲ. ನೆನಪುಗಳು ಆತನನ್ನು ಸದಾ ಕಾಡುತ್ತಿದ್ದವು. ಹೀಗಾಗಿ, ಆತ ಹಳೆಯ ನೆನಪುಗಳನ್ನು ಮರುಕಳಿಸಲು ಮತ್ತು ತನ್ನ ಶಾಲಾ ಸಹಪಾಠಿಗಳನ್ನು ಭೇಟಿಯಾಗಲು ಮತ್ತೆ ತನ್ನ ಹಳೆಯ ಶಾಲೆಗೆ ಮರಳಿದ್ದಾನೆ.
ಹಳೆಯ ಗೆಳೆಯನನ್ನು ಒಟ್ಟಿಗೆ ಕಂಡ ಸಹಪಾಠಿಗಳ ಕಣ್ಣುಗಳಲ್ಲಿ ಆನಂದ ಭಾಷ್ಪ ಉಕ್ಕಿ ಹರಿಯಿತು. ಎಲ್ಲರೂ ಒಂದೆಡೆ ಕುಳಿತು ವರ್ಷಗಳ ಹಿಂದಿನ ತುಂಟಾಟಗಳು, ಶಾಲೆಯ ದಿನಗಳ ಸವಿ ನೆನಪುಗಳನ್ನು ಹಂಚಿಕೊಂಡರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಪ್ರೇಮಲು’ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್; ಆ ಒಂದು ಕಾರಣಕ್ಕೆ ಸೀಕ್ವೆಲ್ ಕೈ ಬಿಟ್ಟ ಚಿತ್ರತಂಡ

2024ರಲ್ಲಿ ತೆರೆಕಂಡ ‘ಪ್ರೇಮಲು’ ಸಿನಿಮಾ (Premalu) ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. ನಸ್ಲೆನ್ ಮತ್ತು ಮಮಿತಾ ಬೈಜು ಮುಖ್ಯ ಪಾತ್ರದಲ್ಲಿ ನಟಿಸಿದ್ದ ಈ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಯುವ ಪ್ರೇಕ್ಷಕರ ಮನಗೆದ್ದು, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಕೇವಲ ಮಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತಾದ್ಯಂತ ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಹೀಗಾಗಿ, ‘ಪ್ರೇಮುಲು’ ಚಿತ್ರಕ್ಕೆ ಸೀಕ್ವೆಲ್ ಮಾಡಲು ತಂಡ ಪ್ಲ್ಯಾನ್ ಮಾಡಿತ್ತು. ಆದರೆ, ಈಗ ಅದನ್ನು ಕೈ ಬಿಟ್ಟಿದೆ.

ಮೊದಲ ಭಾಗದ ಭರ್ಜರಿ ಯಶಸ್ಸಿನ ಬೆನ್ನಲ್ಲೇ, ಅದೇ ನಟರು ಹಾಗೂ ತಾಂತ್ರಿಕ ವರ್ಗದೊಂದಿಗೆ ‘ಪ್ರೇಮಲು 2’ ಮಾಡಲು ಚಿತ್ರತಂಡ ಯೋಜನೆ ರೂಪಿಸಿತ್ತು. 2026ರ ಮಧ್ಯಭಾಗದಲ್ಲಿ ಈ ಸಿನಿಮಾದ ಶೂಟಿಂಗ್ ಆರಂಭವಾಗಬೇಕಿತ್ತು. ಆದರೆ, ಈಗ ಈ ಸೀಕ್ವೆಲ್‌ಗಾಗಿ ಕಾಯುತ್ತಿದ್ದ ಸಿನಿಪ್ರೇಮಿಗಳಿಗೆ ಒಂದು ನಿರಾಶಾದಾಯಕ ಸುದ್ದಿ ಹೊರಬಿದ್ದಿದೆ.

ಇತ್ತೀಚಿನ ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿದ ನಟ ನಸ್ಲೆನ್, ‘ಪ್ರೇಮಲು 2′ ಸದ್ಯಕ್ಕೆ ಸೆಟ್ಟೇರುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಕಥೆ ಅಂದುಕೊಂಡಷ್ಟು ಚೆನ್ನಾಗಿ ಮೂಡಿಬರದ ಕಾರಣ, ಸೀಕ್ವೆಲ್ ಮಾಡುವ ಆಲೋಚನೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಸಿನಿಪ್ರೇಮಿಗಳಿಗೆ ಬೇಸರ ತಂದಿರುವುದು ನಿಜವಾದರೂ, ಚಿತ್ರತಂಡ ತೆಗೆದುಕೊಂಡಿರುವ ಈ ನಿರ್ಧಾರ ತುಂಬಾನೇ ಬುದ್ಧಿವಂತಿಕೆಯಿಂದ ಕೂಡಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಇತ್ತೀಚಿನ ದಿನಗಳಲ್ಲಿ ಕೇವಲ ಹೈಪ್ ಕ್ರಿಯೇಟ್ ಮಾಡಲು, ಸರಿಯಾದ ಕಥೆ ಇಲ್ಲದಿದ್ದರೂ ಸೀಕ್ವೆಲ್‌ಗಳನ್ನು ಅನೌನ್ಸ್ ಮಾಡುವ ಟ್ರೆಂಡ್ ಹೆಚ್ಚಾಗಿದೆ. ಆದರೆ ನಂತರ ಅವು ಅರ್ಧಕ್ಕೆ ನಿಲ್ಲುತ್ತವೆ ಅಥವಾ ವಿಳಂಬವಾಗುತ್ತವೆ.’ಪ್ರೇಮಲು’ ಮೊದಲ ಭಾಗ ದೊಡ್ಡ ಮಟ್ಟದ ಕ್ಲಾಸಿಕ್ ಹಿಟ್ ಆಗಿರುವುದರಿಂದ, ಎರಡನೇ ಭಾಗದ ಮೇಲೆ ಸಹಜವಾಗಿಯೇ ಬೆಟ್ಟದಷ್ಟು ನಿರೀಕ್ಷೆ ಇತ್ತು. ಒಂದು ವೇಳೆ ಕೇವಲ ಹೆಸರಿಗಾಗಿ ಕಳಪೆ ಕಥೆಯೊಂದಿಗೆ ಸಿನಿಮಾ ಮಾಡಿದ್ದರೆ, ಅದು ಮೊದಲ ಭಾಗದ ಹೆಸರನ್ನೂ ಕೆಡಿಸುವ ಸಾಧ್ಯತೆ ಇರುತ್ತಿತ್ತು ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ಸಿನಿಮಾದಿಂದ ಅದೃಷ್ಟ ಬದಲು, ಮಮಿತಾ ಬೈಜು ಈಗ ಸ್ಟಾರ್ ನಟಿ 

ಕಥೆ ಸರಿಯಾಗಿ ಬಾರದಿದ್ದಾಗ ಹಠಕ್ಕೆ ಬಿದ್ದು ಸಿನಿಮಾ ಮಾಡುವ ಬದಲು, ಆ ಯೋಜನೆಯನ್ನೇ ಕೈಬಿಟ್ಟು ‘ಪ್ರೇಮಲು’ ತಂಡ ಒಳ್ಳೆಯ ಕೆಲಸ ಮಾಡಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

International Day Of Potato: ಆಲೂಗಡ್ಡೆ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು?

ಅಂತಾರಾಷ್ಟ್ರೀಯ ಆಲೂಗಡ್ಡೆ ದಿನImage Credit source: vecteezy

ಆಲೂಗಡ್ಡೆಯನ್ನು (Potato) ತಿನ್ನಲು ಬಹುತೇಕ ಎಲ್ಲರೂ ಇಷ್ಟಪಡುತ್ತಾರೆ. ಆಲೂ ಟಿಕ್ಕಿ, ಆಲೂಗಡ್ಡೆ ಚಾಟ್‌, ಸಾಂಬರ್‌, ಕಟ್ಲೆಟ್‌, ಆಲೂ ಪರೋಠಾ ಸೇರಿದಂತೆ ಆಲೂಗಡ್ಡೆಯಿಂದ ಬಗೆ ಬಗೆಯ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಬಹುತೇಕರ ನೆಚ್ಚಿನ ತರಕಾರಿಯಾಗಿರುವ ಆಲೂಗಡ್ಡೆಯನ್ನು ಮೊದಲು ದಕ್ಷಿಣ ಪೆರು ಮತ್ತು ಬೊಲಿವಿಯಾದ ವಾಯುವ್ಯ ಪ್ರದೇಶಗಳಲ್ಲಿ ಸಾವಿರಾರು ವರ್ಷಗಳ ಹಿಂದೆ ಬೆಳೆಸಲಾಯಿತು ಎಂದು ನಂಬಲಾಗಿದೆ. ಇಂದು ಈ ತರಕಾರಿಯನ್ನು ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಹೇರಳವಾಗಿ ಬೆಳೆಯಲಾಗುತ್ತದೆ. ಈ ಆಲೂಗಡ್ಡೆ ಕೃಷಿ ಆರ್ಥಿಕತೆಯಲ್ಲಿ ವಹಿಸುವ ಪಾತ್ರದ ಬಗ್ಗೆ ಹಾಗೂ ಆಲೂಗಡ್ಡೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಪ್ರತಿವರ್ಷ ಮೇ 30 ರಂದು ಅಂತಾರಾಷ್ಟ್ರೀಯ ಆಲೂಗಡ್ಡೆ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀ ಆಲೂಗಡ್ಡೆ ದಿನದ ಇತಿಹಾಸವೇನು?

ಡಿಸೆಂಬರ್ 2023 ರಲ್ಲಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಆಲೂಗಡ್ಡೆಯ ಬಹು ಪೌಷ್ಟಿಕಾಂಶ, ಆರ್ಥಿಕ, ಪರಿಸರ ಮತ್ತು ಸಾಂಸ್ಕೃತಿಕ ಮೌಲ್ಯಗಳು ಹಾಗೂ  ಗ್ರಾಮೀಣ ಕುಟುಂಬಗಳು ಮತ್ತು ಉತ್ಪಾದಕರಿಗೆ ಅಮೂಲ್ಯವಾದ ಆಹಾರ ಸಂಪನ್ಮೂಲ ಮತ್ತು ಆದಾಯದ ಮೂಲವಾಗಿರುವ  ಆಲೂಗಡ್ಡೆಯ  ಕೊಡುಗೆ ಮತ್ತು ಮಹತ್ವದ  ಬಗ್ಗೆ ಜಾಗೃತಿ ಮೂಡಿಸಲು, ಮೇ 30 ರಂದು ಅಂತಾರಾರಾಷ್ಟ್ರೀಯ ಆಲೂಗಡ್ಡೆ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿತು. ಅಂದಿನಿಂದ ಪ್ರತಿವರ್ಷ ಮೇ 30 ರಂದು ಅಂತಾರಾಷ್ಟ್ರೀಯ ಆಲೂಗಡ್ಡೆ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ಆಲೂಗಡ್ಡೆ ದಿನದ ಮಹತ್ವವೇನು?

  • ಆಲೂಗಡ್ಡೆಯ ಆರ್ಥಿಕ, ಸಾಮಾಜಿಕ ಪ್ರಾಮುಖ್ಯತೆ ಮತ್ತು ಆಹಾರ ಭದ್ರತೆ, ಪೋಷಣೆಯಲ್ಲಿ ಅದರ ಕೊಡುಗೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂತಾರಾಷ್ಟ್ರೀಯ ಆಲೂಗಡ್ಡೆ ದಿನವನ್ನು ಆಚರಿಸಲಾಗುತ್ತದೆ.
  • ಈ ದಿನವು ಆಹಾರ ಅಭದ್ರತೆಯನ್ನು ನಿಭಾಯಿಸುವಲ್ಲಿ, ಪೌಷ್ಟಿಕಾಂಶವನ್ನು ಸುಧಾರಿಸುವಲ್ಲಿ ಮತ್ತು ಜಗತ್ತಿನಾದ್ಯಂತ ಜೀವನೋಪಾಯವನ್ನು ಬೆಂಬಲಿಸುವಲ್ಲಿ ಆಲೂಗಡ್ಡೆಯ ಅಗತ್ಯ ಪಾತ್ರವನ್ನು ಎತ್ತಿ ತೋರಿಸುತ್ತದೆ.
  • ಆಲೂಗಡ್ಡೆಯ ಪೌಷ್ಟಿಕಾಂಶದ ಮೌಲ್ಯದಿಂದ ಹಿಡಿದು ಅದರ ಆರ್ಥಿಕ, ಪರಿಸರ ಮತ್ತು ಸಾಂಸ್ಕೃತಿಕ ಮಹತ್ವದವರೆಗೆ ಅದರ ಪ್ರಯೋಜನಗಳ ಬಗ್ಗೆ ಜನರಿಗೆ ಈ ದಿನ ತಿಳಿಸಲಾಗುತ್ತದೆ.

ಇದನ್ನೂ ಓದಿ: ಜೂನ್‌ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ

ಆಲೂಗಡ್ಡೆಯ ಆರೋಗ್ಯ ಪ್ರಯೋಜನಗಳೇನು?

  • ಆಲೂಗಡ್ಡೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಆಲೂಗಡ್ಡೆ ಫೈಬರ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಸಹ ಹೊಂದಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
  • ಆಲೂಗಡ್ಡೆ ವಿಟಮಿನ್ ಬಿ ಮತ್ತು ನಿಯಾಸಿನ್ (ವಿಟಮಿನ್ ಬಿ-3) ಅನ್ನು ಹೊಂದಿದ್ದು, ಇದು ಗ್ಯಾಸ್ ಅನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ಆಲೂಗಡ್ಡೆ ಫೈಬರ್‌ನಲ್ಲಿ ಸಮೃದ್ಧವಾಗಿದೆ, ಇದು ನಿಮಗೆ ಹೆಚ್ಚು ಸಮಯದವರೆಗೆ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದು ಆಗಾಗ್ಗೆ ಆಹಾರ ಸೇವನೆ ಮಾಡುವುದನ್ನು ಮತ್ತು ಹೆಚ್ಚುವರಿ ಕ್ಯಾಲೋರಿ ಸೇವನೆಯನ್ನು ತಡೆಯಲು ಸಹಾಯ ಮಾಡುತ್ತದೆ.
  • ಆಲೂಗಡ್ಡೆ ಕ್ಯಾಲ್ಸಿಯಂ, ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿದ್ದು, ಇದು ಮೂಳೆಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
  • ಆಲೂಗಡ್ಡೆಯನ್ನು ಮಿತವಾಗಿ ತಿನ್ನುವುದರಿಂದ ಜೀರ್ಣಕ್ರಿಯೆಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಆಲೂಗಡ್ಡೆಯಲ್ಲಿ ಕಾರ್ಬೋಹೈಡ್ರೇಟ್‌ಗಳಿದ್ದು, ಇದು ಶಕ್ತಿಯನ್ನು ನೀಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
  • ಆಲೂಗಡ್ಡೆಯಲ್ಲಿ ಫೈಬರ್ ಮತ್ತು ವಿಟಮಿನ್ ಸಿ ಕೂಡ ಇದ್ದು, ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ಆಲೂಗಡ್ಡೆ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುವ ಹಲವಾರು ಪ್ರಮುಖ ಪೋಷಕಾಂಶಗಳನ್ನು ಹೊಂದಿದೆ. ಆಲೂಗಡ್ಡೆ ಪೊಟ್ಯಾಸಿಯಮ್‌ನಲ್ಲಿ ಸಮೃದ್ಧವಾಗಿದೆ, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ಹೃದಯ ಕಾರ್ಯವನ್ನು ಖಚಿತಪಡಿಸುತ್ತದೆ.
  • ಆಲೂಗಡ್ಡೆಯಲ್ಲಿ ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ಜೀವಕೋಶಗಳಿಗೆ ಹಾನಿ ಮಾಡುವ ಹಾನಿಕಾರಕ ಸ್ವತಂತ್ರ ರಾಡಿಕಲ್‌ಗಳಿಂದ ದೇಹವನ್ನು ರಕ್ಷಿಸುತ್ತದೆ. ಇದು ಹೃದಯಾಘಾತ ಮತ್ತು ಕ್ಯಾನ್ಸರ್‌ನಂತಹ ವಿವಿಧ ದೀರ್ಘಕಾಲದ ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತೋಳಲ್ಲೊಂದು ಮಗು, ಕೈಯಲ್ಲೊಂದು ಪುಸ್ತಕ, 9ನೇ ತರಗತಿ ಬಾಲಕಿ ಹೆಗಲ ಮೇಲಿರುವ ಜವಾಬ್ದಾರಿ ನೋಡಿ

ಕಠ್ಮಂಡು, ಮೇ 30: ಸಣ್ಣ ವಯಸ್ಸಿನಲ್ಲಿಯೇ ಕುಟುಂಬದ ಜವಾಬ್ದಾರಿ ಹೊತ್ತಿರುವ 9ನೇ ತರಗತಿ ಬಾಲಕಿಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತರಗತಿಯಲ್ಲಿ ಮಗುವನ್ನು ತೊಡೆಯ ಮೇಲೆ ಕೂರಿಸಿಕೊಂಡು ಬಾಲಕಿ ಪಾಠ ಕೇಳುತ್ತಿದ್ದಳು. ಪರಿಸ್ಥಿತಿಯ ಒತ್ತಡಕ್ಕೆ ಸಿಲುಕಿ ಇಡೀ ಕುಟುಂಬದ ಜವಾಬ್ದಾರಿಯನ್ನು ತನ್ನ ಪುಟ್ಟ ಹೆಗಲ ಮೇಲೆ ಹೊತ್ತುಕೊಂಡಿರುವ ಘಟನೆ ನೇಪಾಳದಲ್ಲಿ ನಡೆದಿದೆ.

ಮನೆಯಲ್ಲಿ ತನ್ನ ಮೂವರು ಕಿರಿಯ ಒಡಹುಟ್ಟಿದವರನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿ ಈಕೆಯ ಮೇಲಿದೆ. ತಾಯಿ ಕೂಲಿ ಕೆಲಸಕ್ಕೆ ಹೋಗದಿದ್ದರೆ ಸಂಸಾರ ಸಾಗುವುದಿಲ್ಲ. ಹೀಗಾಗಿ, ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ, ಈ ಬಾಲಕಿ ತನ್ನ ಅತಿ ಕಿರಿಯ ಮಗುವನ್ನು ಎತ್ತಿಕೊಂಡು ಶಾಲೆಗೆ ಬರಲು ಆರಂಭಿಸಿದ್ದಾಳೆ. ಒಂದು ಕೈಯಲ್ಲಿ ಮಗುವನ್ನು ಸಮಾಧಾನಪಡಿಸುತ್ತಾ, ಮತ್ತೊಂದು ಕೈಯಲ್ಲಿ ಪುಸ್ತಕ ಹಿಡಿದು ಪಾಠ ಕೇಳುವ ಈಕೆಯ ಸ್ಥಿತಿ ಎಲ್ಲರ ಕಣ್ಣನ್ನು ತೇವಗೊಳಿಸುವಂತಿದೆ.

ಇತ್ತೀಚೆಗೆ ಶಾಲೆಯಲ್ಲಿ ಅತಿಯಾದ ಆಯಾಸ ಮತ್ತು ಜವಾಬ್ದಾರಿಗಳ ಭಾರವನ್ನು ತಾಳಲಾರದೆ ಆಕೆ ತರಗತಿಯಲ್ಲೇ ಕಣ್ಣೀರು ಹಾಕಿದ್ದಾಳೆ. ಕೇವಲ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯೊಬ್ಬಳು ಶಿಕ್ಷಣದ ಆಸೆಯೊಂದಿಗೆ, ಕೌಟುಂಬಿಕ ಪರಿಸ್ಥಿತಿಯ ಅಡಿಯಲ್ಲಿ ನಲುಗುತ್ತಿರುವ ಈ ಚಿತ್ರ ಇಡೀ ಸಾಮಾಜಿಕ ಜಾಲತಾಣಗಳಲ್ಲಿ ಜನರ ಹೃದಯವನ್ನು ಕಲಕಿದೆ. ಬಾಲಕಿಯ ಈ ಪರಿಸ್ಥಿತಿಯನ್ನು ಕಂಡು ನೆಟ್ಟಿಗರು ಆಕೆಗೆ ಸಹಾಯ ಹಸ್ತ ಚಾಚುವಂತೆ ಸ್ಥಳೀಯ ಸಂಸ್ಥೆಗಳಿಗೆ ಮನವಿ ಮಾಡುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version