ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Masam Begins Today: Gajakesari Yoga, 12 Zodiac Predictions for 15 July 2026

ಇಂದು 2026ರ ಜುಲೈ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇಂದು ಪರಾಭವನಾಮ ಸಂವತ್ಸರ, ಆಷಾಢ ಮಾಸದ ಶುಕ್ಲ ಪಕ್ಷದ ಪಾಡ್ಯ ತಿಥಿ ಇದ್ದು, ಪುಷ್ಯಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿದೆ. ಈ ದಿನ ಗಜಕೇಸರಿ ಯೋಗವಿದ್ದು, ಶುಭ ಕಾಲವು ಬೆಳಗ್ಗೆ 10:49 ರಿಂದ 12:23 ರವರೆಗೆ ಇರುತ್ತದೆ. ಅಲ್ಲದೆ, ಇಂದಿನಿಂದ ಆಷಾಢ ಮಾಸವು ಪ್ರಾರಂಭವಾಗಲಿದ್ದು ಆಗಸ್ಟ್ 12ರ ತನಕ ಇರುತ್ತದೆ.

Source link

IND vs ENG: ಮಿಂಚಿದ ಅಕ್ಷರ್, ಗಿಲ್; ಇಂಗ್ಲೆಂಡ್‌ ವಿರುದ್ಧ ಗೆದ್ದ ಟೀಂ ಇಂಡಿಯಾ – Kannada News | India Dominates England 1st ODI: Gill and Axar Shine in Series Opening Victory

ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಇಂದು ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ಮಣಿಸಿದ ಟೀಂ ಇಂಡಿಯಾ (Team India) ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡವು 47.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 258 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಅವರ ಅರ್ಧಶತಕದ ನೆರವಿನಿಂದ ಗೆಲುವಿನ ಗುರಿ ಮುಟ್ಟಿತು.

ಇಂಗ್ಲೆಂಡ್​ಗೆ ಉತ್ತಮ ಆರಂಭ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ 47.5 ಓವರ್‌ಗಳಲ್ಲಿ 258 ರನ್‌ಗಳಿಗೆ ಆಲೌಟ್ ಆಯಿತು. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಬೆನ್ ಡಕೆಟ್ ಮತ್ತು ಜಾಕೋಬ್ ಬೆಥೆಲ್ ಮೊದಲ ವಿಕೆಟ್‌ಗೆ 61 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಆದರೆ ಇವರಿಬ್ಬರು ಔಟಾದ ಬಳಿಕ ಇಂಗ್ಲೆಂಡ್ ಮಧ್ಯಮ ಕ್ರಮಾಂಕ ಕೂಡ ಬೇಗನೇ ಪೆವಿಲಿಯನ್ ಸೇರಿಕೊಂಡಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರೆ, ಬೆನ್ ಡಕೆಟ್ 45 ಎಸೆತಗಳಲ್ಲಿ 46 ರನ್‌ಗಳಿಗೆ ಔಟಾದರು. ಅದರ ನಂತರ ನಾಲ್ಕು ವಿಕೆಟ್‌ಗಳು ಬೇಗನೇ ಪತನಗೊಂಡವು.

7ನೇ ವಿಕೆಟ್​ಗೆ ಶತಕದ ಜೊತೆಯಾಟ

ಆದರೆ 7ನೇ ವಿಕೆಟ್​ಗೆ ಜೊತೆಯಾದ ಲಿಯಾಮ್ ಡಾಸನ್ ಮತ್ತು ಜೋ ರೂಟ್ ತಂಡವನ್ನು ಸಂಕಷ್ಟದಿಂದ ಹೊರತಂದರು. ಇವರಿಬ್ಬರು ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹಾಗೆಯೇ ಇಬ್ಬರ ನಡುವೆ 134 ಎಸೆತಗಳಲ್ಲಿ 121 ರನ್‌ಗಳ ಪಾಲುದಾರಿಕೆ ಇತ್ತು. ಒಂದು ಹಂತದಲ್ಲಿ ಇಂಗ್ಲೆಂಡ್ 107 ರನ್​ಗಳಿಗೆ 6 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಅಲ್ಲಿಂದ ಇವರಿಬ್ಬರು ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಲಿಯಾಮ್ ಡಾಸನ್ 68 ರನ್ ಬಾರಿಸಿದರೆ, ಜೋ ರೂಟ್ 76 ರನ್ ಬಾರಿಸಿ ಅಜೇಯರಾಗಿ ಉಳಿದರು. ಭಾರತದ ಪರ ಅಕ್ಷರ್ ಪಟೇಲ್ 4 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ ಮತ್ತು ಗುರ್ನೂರ್ ಬ್ರಾರ್ ತಲಾ 2 ವಿಕೆಟ್ ಪಡೆದರು. ಜಸ್ಪ್ರಿತ್ ಬುಮ್ರಾ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.

ಬೇಗನೇ ಔಟಾದ ರೋಹಿತ್ ಕೊಹ್ಲಿ

ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅನುಭವಿ ರೋಹಿತ್ ಶರ್ಮಾ 11 ರನ್​ಗಳಿಗೆ ಔಟಾದರೆ, ಆ ನಂತರ ಬಂದ ವಿರಾಟ್ ಕೊಹ್ಲಿ ಕೂಡ ಕೇವಲ 5 ರನ್​ಗಳಿಗೆ ಔಟಾದರು. ಇಲ್ಲಿಂದ ಜೊತೆಯಾದ ನಾಯಕ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಮೂರನೇ ವಿಕೆಟ್​ಗೆ ಶತಕದ ಜೊತೆಯಾಟ ಕಟ್ಟಿದರು. ಇದೇ ವೇಳೆ ನಾಯಕ ಗಿಲ್ ಅರ್ಧಶತಕದ ಗಡಿ ಕೂಡ ದಾಟಿದರು. ಅದ್ಭುತ ಇನ್ನಿಂಗ್ಸ್ ಕಟ್ಟುತ್ತಾ ಶತಕದಗತ್ತ ಸಾಗುತ್ತಿದ್ದ ಗಿಲ್ ಗಾಯದಿಂದಾಗಿ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ರಿಟೈಡ್ ಹರ್ಟ್​ ಆಗಿ ಡಗೌಟ್ ಸೇರಿಕೊಂಡರು. ಈ ಹಂತದಲ್ಲಿ ಗಿಲ್ 80 ರನ್​ ಬಾರಿಸಿದ್ದರು.

IND vs ENG: ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್

ಗಿಲ್, ಅಕ್ಷರ್ ಅರ್ಧಶತಕ

ಗಿಲ್ ನಿರ್ಗಮನದ ನಂತರ ಶ್ರೇಯಸ್ ಅಯ್ಯರ್ ರನೌಟ್​ಗೆ ಬಲಿಯಾದರು. ಆ ನಂತರ ಬಂದ ರಾಹುಲ್ ಅವರ ಇನ್ನಿಂಗ್ಸ್ ಕೂಡ ಕೇವಲ 1 ರನ್​ಗೆ ಅಂತ್ಯವಾಯಿತು. 5ನೇ ವಿಕೆಟ್​ಗೆ ಜೊತೆಯಾದ ಸುಂದರ್ ಹಾಗೂ ಅಕ್ಷರ್ ಪಟೇಲ್ ತಂಡದ ಇನ್ನಿಂಗ್ಸ್ ಕಟ್ಟಿದರು. ಇದೇ ವೇಳೆ ಇಬ್ಬರು ಕೂಡ ತಮ್ಮ ಅರ್ಧಶತಕವನ್ನು ಪೂರೈಸಿದರು. ಇವರಿಬ್ಬರು ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಸುಂದರ್ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಡುವುದರ ಜೊತೆಗೆ ತಮ್ಮ ಅರ್ಧಶತಕವನ್ನು ಪೂರೈಸಿದರು. ಇತ್ತ ಅಕ್ಷರ್ 57 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಹ್ಯಾಕಾಶಕ್ಕೆ ಹಾರಿದ ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್; 8 ತಿಂಗಳ ಮಹತ್ವದ ಮಿಷನ್ ಆರಂಭ – Kannada News | Indian origin NASA astronaut Anil Menon launched into space today

ವಾಷಿಂಗ್ಟನ್, ಜುಲೈ 14: ಭಾರತೀಯ ಮೂಲದ ಗಗನಯಾತ್ರಿ ಹಾಗೂ ಯುಎಸ್‌ ಏರ್‌ಫೋರ್ಸ್‌ನ ಲೆಫ್ಟಿನೆಂಟ್ ಕರ್ನಲ್ ಆಗಿರುವ ಅನಿಲ್ ಮೆನನ್ (Anil Menon) ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಪ್ರಯಾಣಕ್ಕಾಗಿ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಜಿಗಿದಿದ್ದಾರೆ. ಈ ಮೂಲಕ ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಹಾಗೂ ಶುಭಾಂಶು ಶುಕ್ಲಾ ಅವರ ನಂತರ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ ಭಾರತೀಯ ಮೂಲದ ಹೆಮ್ಮೆಯ ಗಗನಯಾತ್ರಿಗಳ ಸಾಲಿಗೆ ಅನಿಲ್ ಮೆನನ್ ಸೇರ್ಪಡೆಯಾಗಿದ್ದಾರೆ.

ಅನಿಲ್ ಮೆನನ್ ಮತ್ತು ಇತರೆ ಗಗನಯಾತ್ರಿಗಳನ್ನೊಳಗೊಂಡ ತಂಡವನ್ನು ಹೊತ್ತ ಸ್ಪೇಸ್‌ಎಕ್ಸ್ (SpaceX) ರಾಕೆಟ್, ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ (NASA) ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 8 ತಿಂಗಳು ತಂಗಲಿರುವ ಈ ತಂಡವು ಅಲ್ಲಿ ವಿವಿಧ ವೈಜ್ಞಾನಿಕ ಪ್ರಯೋಗಗಳು ಹಾಗೂ ಸಂಶೋಧನೆಗಳನ್ನು ನಡೆಸಲಿದೆ.

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಅನಿಲ್ ಮೆನನ್ ಇಂದು ರಾತ್ರಿ ಇಬ್ಬರು ರಷ್ಯಾದ ಗಗನಯಾತ್ರಿಗಳೊಂದಿಗೆ ಕಜಕಿಸ್ತಾನ್‌ನ ಬೈಕನೂರ್ ಕಾಸ್ಮೋಡ್ರೋಮ್‌ನಿಂದ ಸೊಯುಜ್ ನೌಕೆಯ ಮೂಲಕ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದಾರೆ.

ಇದನ್ನೂ ಓದಿ: ಬಾಹ್ಯಾಕಾಶದಲ್ಲೊಂದು ಮಿನಿ ಉದ್ಯಾನ, ವಿಡಿಯೋ ಹಂಚಿಕೊಂಡ ಗಗನಯಾತ್ರಿ

ಅನಿಲ್ ಮೆನನ್ ಜವಾಬ್ದಾರಿ ಏನು?:

ತುರ್ತು ಚಿಕಿತ್ಸಾ ವೈದ್ಯಕೀಯ ಮತ್ತು ಏರೋಸ್ಪೇಸ್ ವೈದ್ಯಕೀಯ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಅನಿಲ್ ಮೆನನ್ ಅವರು, ಈ ದೀರ್ಘಾವಧಿಯ ಮಿಷನ್‌ನಲ್ಲಿ ಕೇವಲ ಸಂಶೋಧಕರಾಗಿ ಮಾತ್ರವಲ್ಲದೆ, ತಾವೇ ಸ್ವತಃ ಒಂದು ಸಂಶೋಧನಾ ವಸ್ತುವಾಗಿ ಭಾಗವಹಿಸಲಿದ್ದಾರೆ. ಶೂನ್ಯ ಗುರುತ್ವಾಕರ್ಷಣೆಯ ವಾತಾವರಣವು ಸುದೀರ್ಘ ಅವಧಿಯಲ್ಲಿ ಮಾನವನ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಅಮೂಲ್ಯವಾದ ಡೇಟಾವನ್ನು ಇವರ ಮೂಲಕ ಸಂಗ್ರಹಿಸಲಾಗುತ್ತದೆ.

ಮಿಷನ್‌ನ ಪ್ರಮುಖ ಪ್ರಯೋಗಗಳು:

ಅನಿಲ್ ಮೆನನ್ ಅವರು ಬಾಹ್ಯಾಕಾಶದಲ್ಲಿ ನಡೆಸಲಿರುವ ಕೆಲವು ಪ್ರಮುಖ ಸಂಶೋಧನೆಗಳೆಂದರೆ, ಎಐ (AI) ಆಧಾರಿತ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮೂಲಕ ಭೂಮಿಯ ಮೇಲಿರುವ ವೈದ್ಯರ ನೇರ ಸಂಪರ್ಕವಿಲ್ಲದೆಯೂ ಗಗನಯಾತ್ರಿಗಳು ಬಾಹ್ಯಾಕಾಶದಲ್ಲೇ ಸಂಕೀರ್ಣ ವೈದ್ಯಕೀಯ ತಪಾಸಣೆಗಳನ್ನು ಮಾಡಿಕೊಳ್ಳಲು ನೆರವಾಗುವ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ಅವರು ಪರೀಕ್ಷಿಸಲಿದ್ದಾರೆ. ಶೂನ್ಯ ಗುರುತ್ವಾಕರ್ಷಣೆಯ ವಾತಾವರಣದಲ್ಲಿ ಯಾವುದೇ ದೋಷಗಳಿಲ್ಲದ ಉತ್ತಮ ಗುಣಮಟ್ಟದ ಸೆಮಿಕಂಡಕ್ಟರ್ ಹರಳುಗಳನ್ನು ಉತ್ಪಾದಿಸಲು ಸಾಧ್ಯವೇ ಎಂಬ ಪ್ರಯೋಗವನ್ನು ಅವರು ನಡೆಸಲಿದ್ದಾರೆ. ಇದು ಯಶಸ್ವಿಯಾದರೆ ಭೂಮಿಯ ಮೇಲಿನ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟರ್ ಹಾಗೂ ಸುಧಾರಿತ ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲಿ ಕ್ರಾಂತಿ ಸೃಷ್ಟಿಸಲಿದೆ.

ಇದನ್ನೂ ಓದಿ: ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ಗಗನಯಾತ್ರಿಗಳ ತಂಡ: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು

ದೀರ್ಘಕಾಲದ ತೂಕ ರಹಿತ ಸ್ಥಿತಿಯಿಂದಾಗಿ ಮಾನವನ ರಕ್ತದ ಹರಿವು ಹಾಗೂ ಹೃದಯದ ಕಾರ್ಯಕ್ಷಮತೆ ಹೇಗೆ ಬದಲಾಗುತ್ತದೆ ಎಂಬುದರ ಕುರಿತು ಅನಿಲ್ ಮೆನನ್ ಹಲವು ಅಧ್ಯಯನಗಳಲ್ಲಿ ಭಾಗಿಯಾಗಲಿದ್ದಾರೆ.

ಅನಿಲ್ ಮೆನನ್ ಯಾರು?:

ಅನಿಲ್ ಮೆನನ್ ಅವರು ನಾಸಾದ ಗಗನಯಾತ್ರಿಗಳ ತಂಡವನ್ನು ಸೇರುವ ಮುನ್ನ, ಬಾಹ್ಯಾಕಾಶ ಯಾತ್ರಿಗಳ ಆರೋಗ್ಯದ ಉಸ್ತುವಾರಿ ನೋಡಿಕೊಳ್ಳುವ ‘ಫ್ಲೈಟ್ ಸರ್ಜನ್’ ಆಗಿ ಕಾರ್ಯನಿರ್ವಹಿಸಿದ್ದರು. ಎಲಾನ್ ಮಾಸ್ಕ್ ಅವರ ಸ್ಪೇಸ್‌ಎಕ್ಸ್ (SpaceX) ಸಂಸ್ಥೆಯ ಮೊದಲ ಫ್ಲೈಟ್ ಸರ್ಜನ್ ಕೂಡ ಇವರೇ ಆಗಿದ್ದರು. ಅನಿಲ್ ಮೆನನ್ ಅವರ ತಂದೆ ಭಾರತದ ಮೂಲದವರಾಗಿದ್ದು, ತಾಯಿ ಉಕ್ರೇನ್ ಮೂಲದವರಾಗಿದ್ದಾರೆ. ಇವರು ಅಮೆರಿಕದ ಮಿನ್ನೇಸೋಟದಲ್ಲಿ ಹುಟ್ಟಿ, ಬೆಳೆದರು. ಅನಿಲ್ ಮೆನನ್ ಅವರು ಕೇವಲ ಗಗನಯಾತ್ರಿಯಷ್ಟೇ ಅಲ್ಲದೆ, ವೃತ್ತಿಯಿಂದ ತುರ್ತು ಚಿಕಿತ್ಸಾ ವೈದ್ಯರಾಗಿದ್ದಾರೆ. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನ್ಯೂರೋಬಯಾಲಜಿಯಲ್ಲಿ ಪದವಿ ಪಡೆದಿರುವ ಇವರು, ಸ್ಟ್ಯಾನ್‌ಫೋರ್ಡ್ ವೈದ್ಯಕೀಯ ಶಾಲೆಯಿಂದ ವೈದ್ಯಕೀಯ ಪದವಿ (MD) ಪಡೆದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಮನ ಸೆಳೆದ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ – Kannada News | Director Chayan Shetty Marriage Party Kannada and Malayalam Movie First Look Poster Released

ಕರಾವಳಿ ಭಾಗದ ಕಥೆಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿವೆ. ಅಂಥ ಸಿನಿಮಾಗಳತ್ತ ಜನರು ಆಸಕ್ತಿ ತೋರಿಸುತ್ತಿದ್ದಾರೆ. ‘ಸು ಫ್ರಂ ಸೋ’ (Su From So), ‘ಕಾಂತಾರ’ ಮುಂತಾದ ಸಿನಿಮಾಗಳೇ ಈ ಮಾತಿಗೆ ಸಾಕ್ಷಿ. ಈಗ ಅದೇ ರೀತಿ ಕರಾವಳಿ ಭಾಗದ ಕಥೆಯನ್ನು ಹೊಂದಿರುವ ಇನ್ನೊಂದು ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ಯುವ ನಿರ್ದೇಶಕ ಚಯನ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಶ್ರೀ ವಾರಾಹಿ ಫಿಲ್ಮ್ಸ್’ ಬ್ಯಾನರ್ ಮೂಲಕ ಸಂತೋಷ್ ವಿ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರವೀಗ ಪ್ರೇಕ್ಷಕರ ಎದುರು ಬರಲು ಸಜ್ಜಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ.

ಚಯನ್ ಶೆಟ್ಟಿ ನಿರ್ದೇಶನದ ಎರಡನೇ ಸಿನಿಮಾ:

ಈ ಹಿಂದೆ ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಹೀರೋ ಆಗಿ ನಟಿಸಿದ್ದ ‘ಅಧಿಪತ್ರ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಚಯನ್ ಶೆಟ್ಟಿ ಅವರಿಗೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ತಮ್ಮ ನಿರ್ದೇಶನದಲ್ಲಿ ಬರುತ್ತಿರುವ ‘ಮ್ಯಾರೇಜ್ ಪಾರ್ಟಿ’ ಸಿನಿಮಾಗಾಗಿ ಅವರು ಡಿಫರೆಂಟ್ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾಮಿಡಿ ಕಹಾನಿಯನ್ನು ಜನರ ಎದುರು ಅವರು ತರುತ್ತಿದ್ದಾರೆ.

ಹೀರೋ ಆಗಿ ಬಡ್ತಿ ಪಡೆದ ವಿನೀತ್ ಕುಮಾರ್:

ಹಾಸ್ಯಪ್ರಧಾನವಾಗಿ ‘ಮ್ಯಾರೇಜ್ ಪಾರ್ಟಿ’ ಸಿನಿಮಾ ರೂಪುಗೊಂಡಿದೆ ಎಂದು ಚಿತ್ರತಂಡ ತಿಳಿಸಿದೆ. ಈಗಾಗಲೇ ಕೆಲವು ತುಳು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಗಮನ ಸೆಳೆದಿರುವ ವಿನೀತ್ ಕುಮಾರ್ ಅವರು ‘ಮ್ಯಾರೇಜ್ ಪಾರ್ಟಿ’ ಮೂಲಕ ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ಕರಾವಳಿ ಭಾಗದಲ್ಲಿ ಘಟಿಸುವ ರಸವತ್ತಾದ ಕಥೆಯೊಂದನ್ನು ಈ ಸಿನಿಮಾ ತೆರೆದಿಡಲಿದೆ.

ಇದನ್ನೂ ಓದಿ: ‘ಸು ಫ್ರಂ ಸೋ’ ಸಿನಿಮಾ ನೋಡಿ ಮೆಚ್ಚಿದ ಬಾಲಿವುಡ್ ಸ್ಟಾರ್: ರೀಮೇಕ್​ ಬಗ್ಗೆ ಚರ್ಚೆ?

ಪಾತ್ರವರ್ಗ ಮತ್ತು ತಾಂತ್ರಿಕ ಬಳಗ:

ಈ ಸಿನಿಮಾಗೆ ಶ್ರೀಕಾಂತ್ ಅವರು ಛಾಯಾಗ್ರಹಣ ಮಾಡಿದ್ದಾರೆ. ರಿತ್ವಿಕ್ ಮುರಳೀಧರ್ ಅವರು ಸಂಗೀತ ನೀಡಿದ್ದಾರೆ. ‘ಸು ಫ್ರಂ ಸೋ’ ಖ್ಯಾತಿಯ ನಿತಿನ್ ಶೆಟ್ಟಿ ಅವರು ಸಂಕಲನ ಮಾಡುತ್ತಿದ್ದಾರೆ. ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ಸಾಹಿತ್ಯ ಬರೆದಿದ್ದಾರೆ. ಪ್ರಕಾಶ್ ತುಮಿನಾಡು, ನವೀನ್ ಡಿ. ಪಡೀಲ್, ದೀಪಕ್ ರೈ, ರಕ್ಷಿತಾ, ನಮಿತಾ ಕಿರಣ್, ರಾಮ್‌ದಾಸ್, ಪುಷ್ಪರಾಜ್ ಬೋಳಾರ್, ರಘು ಪಾಂಡೇಶ್ವರ, ಜ್ಯೋತಿಷ್ ಶೆಟ್ಟಿ, ಪಿಡಿ ಸತೀಶ್, ರಾಧಾಕೃಷ್ಣ, ಭೀಮ್ ರಾವ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ENG: ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ – Kannada News | Shubman Gill Sets New ODI World Record: First Batter with 60+ Average and 100+ SR

ಇಂದಿನ ಪಂದ್ಯಕ್ಕೂ ಮೊದಲು ಶುಭ್​ಮನ್ ಗಿಲ್ ಅವರ ಏಕದಿನ ಸರಾಸರಿ 59 ಆಗಿತ್ತು. ಇದೀಗ ಇಂಗ್ಲೆಂಡ್‌ ವಿರುದ್ಧ ಗಿಲ್ ಅರ್ಧಶತಕ ಗಳಿಸಿದ ನಂತರ, ಅವರ ಸರಾಸರಿ 60 ಕ್ಕಿಂತ ಹೆಚ್ಚಾಗಿದೆ. ವಿರಾಟ್ ಕೊಹ್ಲಿ (58.5) ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ (58) ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮೈಕೆಲ್ ಬೆವನ್ 53.6 ಸರಾಸರಿಯೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಎಬಿ ಡಿವಿಲಿಯರ್ಸ್ 53.5 ಸರಾಸರಿಯೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ(PC-PTI).

Source link

ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ: ಸ್ಥಳೀಯ ನಿವಾಸಿಗಳಿಗೆ ತಪ್ಪದ ತೊಂದರೆ – Kannada News | Abandoned Vehicles and Public Nuisance Plague Kumaraswamy Layout Residents

ಬೆಂಗಳೂರು, ಜು.14: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆಯು ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಗಳನ್ನು ಉಂಟುಮಾಡುತ್ತಿದೆ. ಮನೆ ಗೇಟ್‌ಗಳ ಮುಂದೆ ಮತ್ತು ರಸ್ತೆ ಬದಿಗಳಲ್ಲಿ ಅನಿಯಂತ್ರಿತವಾಗಿ ನಿಲ್ಲಿಸಲಾದ ವಾಹನಗಳು, ಕೆಲವು ತಿಂಗಳುಗಟ್ಟಲೆ ತೆರವುಗೊಳ್ಳದೆ ಉಳಿದಿವೆ. ಈ ವಾಹನಗಳ ಹಿಂದೆ ರಾತ್ರಿ ವೇಳೆ ಕುಡುಕರು ಸೇರಿಕೊಂಡು ಬಾಟಲಿಗಳನ್ನು ಬಿಸಾಡುತ್ತಾರೆ ಮತ್ತು ಸಾರ್ವಜನಿಕ ಅಸ್ವಚ್ಛತೆಗೆ ಕಾರಣರಾಗುತ್ತಾರೆ. ಕತ್ತಲಾದ ನಂತರ ಮಹಿಳೆಯರು ಮತ್ತು ಮಕ್ಕಳಿಗೆ ಈ ರಸ್ತೆಗಳಲ್ಲಿ ಓಡಾಡುವುದು ಕಷ್ಟಕರವಾಗಿದ್ದು, ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ. ಕಳಪೆ ರಸ್ತೆ ದೀಪಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿವೆ. ಕಸ ವಿಲೇವಾರಿಯೂ ಸಹ ಒಂದು ಸಮಸ್ಯೆಯಾಗಿದ್ದು, ಬಿಬಿಎಂಪಿ ಸಿಬ್ಬಂದಿ ಕಾರುಗಳ ಕೆಳಗೆ ಕಸವನ್ನು ತಳ್ಳುವುದರಿಂದ ಸಮಸ್ಯೆ ಉಲ್ಬಣಿಸಿದೆ. ನಿವಾಸಿಗಳು ಬಿಬಿಎಂಪಿ ಮತ್ತು ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಪರಿಹಾರ ದೊರೆತಿಲ್ಲ ಎಂದು ಹೇಳುತ್ತಾರೆ. ಮುಖ್ಯ ರಸ್ತೆಗಳಿಂದ ತೆರವುಗೊಂಡ ವಾಹನಗಳು ಇಲ್ಲಿಗೆ ಬಂದು ನಿಲ್ಲುವುದರಿಂದ ಸಮಸ್ಯೆಯು ಮತ್ತಷ್ಟು ಹೆಚ್ಚಿದೆ. ಈ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ: ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ – Kannada News | Karnataka Drought Crisis: CM DK Shivakumar Writes to PM Modi; Seeks Central Team to Assess Rain Deficit Across 18 Districts

ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ

ಬೆಂಗಳೂರು, ಜುಲೈ 14: ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ನೆರವಿಗೆ ಕ್ರಮಕೈಗೊಳ್ಳುವಂತೆಯೂ ಸಿಎಂ ಆಗ್ರಹಿಸಿದ್ದು, ರಾಜ್ಯದಲ್ಲಿ ಮಳೆಗಾಲದ ಮಳೆ ತೀವ್ರ ಕೊರತೆಯಾಗಿದೆ. ವಾಡಿಕೆ ಮಳೆಗಿಂತ ಶೇ. 30ರಷ್ಟು ಕಡಿಮೆ ವರ್ಷಧಾರೆಯಾಗಿದ್ದು, 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಮಳೆ ಅಭಾವ ಇದೆ ಎಂದು ತಿಳಿಸಿದ್ದಾರೆ.

ರಾಜ್ಯದ 141 ತಾಲೂಕುಗಳಲ್ಲಿ ಮಳೆ ಕೊರತೆ

ರಾಜ್ಯದ ಪೈಕಿ 141 ತಾಲೂಕುಗಳಲ್ಲಿ ಮಳೆಯ ಕೊರತೆ ಉಂಟಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆ ಕೂಡ ಕುಂಠಿತವಾಗಿದೆ. ರಾಜ್ಯದಲ್ಲಿ ಶೇ.34ರಷ್ಟು ಮಾತ್ರ ಬಿತ್ತನೆ ಕಾರ್ಯ ಆಗಿದ್ದು, 14 ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಕೇವಲ ಶೇ.34ರಷ್ಟು ಮಾತ್ರ ನೀರಿದೆ. ಹೀಗಾಗಿ ಕೇಂದ್ರ ಸರ್ಕಾರ ನಿಯೋಜಿತ ತಂಡದ ಭೇಟಿ ಉದ್ಭವಿಸುತ್ತಿರುವ ಬರ ಪರಿಸ್ಥಿತಿಯ ತೀವ್ರತೆಯನ್ನು ಪ್ರತ್ಯಕ್ಷವಾಗಿ ಮೌಲ್ಯಮಾಪನ ಮಾಡಲು ಸಹಕಾರಿಯಾಗುತ್ತದೆ. ಕಷ್ಟದ ಅವಧಿಯಲ್ಲಿ ಭಾರತ ಸರ್ಕಾರವು ತಮ್ಮೊಂದಿಗಿದೆ ಎಂಬ ಭರವಸೆಯನ್ನು ರೈತ ಸಮುದಾಯಕ್ಕೆ ನೀಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ರೈತರೇ ಗಮನಸಿ; ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ

ರಾಜ್ಯವು 10 ವಿಭಿನ್ನ ಕೃಷಿ ಹವಾಮಾನ ವಲಯಗಳನ್ನು ಹೊಂದಿದ್ದು, ಅದರ ಭೌಗೋಳಿಕ ಪ್ರದೇಶದ ಸುಮಾರು ಶೇಕಡಾ 77ರಷ್ಟು ಭಾಗವು ಶುಷ್ಕ ಮತ್ತು ಅರ-ಶುಷ್ಕ ಪ್ರದೇಶಗಳ ವ್ಯಾಪ್ತಿಗೆ ಬರುತ್ತದೆ. ರಾಜ್ಯವು ಸುಮಾರು 84.79 ಲಕ್ಷ ಹೆಕ್ಟೇರ್ ಮಳೆ ಆಶ್ರಿತ ಕೃಷಿ ಭೂಮಿ ಹೊಂದಿದ್ದು, ಇದು ರಾಜಸ್ಥಾನದ ನಂತರ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಈ ಕಾರಣದಿಂದಾಗಿ ಇಲ್ಲಿನ ಕೃಷಿ ಉತ್ಪಾದನೆಯು ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿದೆ. ಎಲ್​​ನಿನೋ ಕಾರಣದಿಂದಾಗಿ 2026ರ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (IMD) ತಿಳಿಸಿತ್ತು. ಇದಕ್ಕೆ ಅನುಗುಣವಾಗಿ, ರಾಜ್ಯದಲ್ಲಿ ಮಳೆಯ ಕೊರತೆಯು ಗಮನಾರ್ಹವಾಗಿ ಕಂಡುಬಂದಿದೆ. 11 ಜುಲೈ 2026ರ ಮಾಹಿತಿಯಂತೆ, ಕರ್ನಾಟಕದಲ್ಲಿ ವಾಡಿಕೆ ಮಳೆಯಾದ 292 ಮಿ.ಮೀ.ಗೆ ಪ್ರತಿಯಾಗಿ ಕೇವಲ 203 ಮಿ.ಮೀ. ಮಳೆಯಾಗಿದೆ ಎಂಬುದವನ್ನವರು ಪತ್ರದ ಮೂಲಕ ಪ್ರಧಾನಿ ಗಮನಕ್ಕೆ ತಂದಿದ್ದಾರೆ.

ವರದಿ: ಈರಣ್ಣಾ ಬಸವ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಾರ್ಮುಜ್ ಜಲಸಂಧಿಯ ಹಡಗುಗಳ ಮೇಲಿನ ಶೇ. 20ರಷ್ಟು ಶುಲ್ಕ ಹಿಂಪಡೆದ ಟ್ರಂಪ್; ಹೊಸ ಘೋಷಣೆಯೇನು? – Kannada News | Donald Trump Makes A U Turn On 20 Percent Hormuz Toll announces Gulf States Investment In US

ವಾಷಿಂಗ್ಟನ್, ಜುಲೈ 14: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಹಾದುಹೋಗುವ ವಾಣಿಜ್ಯ ಹಡಗುಗಳ ಮೇಲೆ ಶೇ. 20ರಷ್ಟು ಶುಲ್ಕ ವಿಧಿಸುವ ತಮ್ಮದೇ ಪ್ರಸ್ತಾಪವನ್ನು ಇಂದು ಹಿಂಪಡೆದಿದ್ದಾರೆ. ಈ ಶುಲ್ಕದ ಬದಲಾಗಿ ಗಲ್ಫ್ ರಾಷ್ಟ್ರಗಳೊಂದಿಗೆ ಹೊಸ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗುವುದು ಎಂದು ಅವರು ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಟ್ರುತ್ ಸೋಶಿಯಲ್’ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಮಧ್ಯಪ್ರಾಚ್ಯದ ನಾಯಕರೊಂದಿಗೆ ನಡೆದ ಮಾತುಕತೆಗಳ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ಇಲ್ಲಿದೆ:

“ಮಧ್ಯಪ್ರಾಚ್ಯದ ನಾಯಕರೊಂದಿಗೆ ನಡೆದ ಅತ್ಯಂತ ಯಶಸ್ವಿ ಮಾತುಕತೆಗಳ ಬಳಿಕ ನಾನು ಶೇ. 20ರಷ್ಟು ಅಮೆರಿಕ ಮರುಪಾವತಿ ಶುಲ್ಕದ ಪ್ರಸ್ತಾಪವನ್ನು ಹಿಂಪಡೆಯಲು ನಿರ್ಧರಿಸಿದ್ದೇನೆ. ಇದರ ಬದಲಿಗೆ ವಿವಿಧ ಗಲ್ಫ್ ರಾಷ್ಟ್ರಗಳು ಅಮೆರಿಕದಲ್ಲಿ ಮಾಡಲಿರುವ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳನ್ನು ಜಾರಿಗೆ ತರಲಾಗುವುದು” ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಹಾರ್ಮುಜ್ ಜಲಸಂಧಿಯ ಮೂಲಕ ಚಲಿಸುವ ಹಡಗುಗಳಿಗೆ ಶೇ. 20ರಷ್ಟು ಶುಲ್ಕ ವಿಧಿಸುವುದಾಗಿ ಘೋಷಿಸಿದ ಕೇವಲ ಒಂದೇ ದಿನದಲ್ಲಿ ಟ್ರಂಪ್ ಈ ನಿರ್ಧಾರವನ್ನು ಬದಲಾಯಿಸಿದ್ದಾರೆ.

ಈ ನಿರ್ಧಾರದ ಪರಿಣಾಮವೇನು?:

ಟ್ರಂಪ್ ಈ ಶೇ. 20ರಷ್ಟು ಶುಲ್ಕವನ್ನು ಹಿಂಪಡೆದಿರುವುದರಿಂದ, ಹಾರ್ಮುಜ್ ಜಲಸಂಧಿಯನ್ನು ಬಳಸುವ ಜಾಗತಿಕ ಹಡಗು ಸಾರಿಗೆ ಕಂಪನಿಗಳಿಗೆ ತಕ್ಷಣ ಎದುರಾಗಿದ್ದ ಹೆಚ್ಚುವರಿ ಆರ್ಥಿಕ ಹೊರೆಯ ಭೀತಿ ತಪ್ಪಿದಂತಾಗಿದೆ. ಆದರೆ, ಇರಾನ್ ದೇಶಕ್ಕೆ ಲಿಂಕ್ ಹೊಂದಿರುವ ಹಡಗುಗಳ ಮೇಲೆ ಅಮೆರಿಕ ವಿಧಿಸಿರುವ ದಿಗ್ಬಂಧನವು ಕಡಲ ವ್ಯಾಪಾರಕ್ಕೆ, ವಿಶೇಷವಾಗಿ ಇರಾನ್ ಬಂದರುಗಳು ಅಥವಾ ಸರಕುಗಳಿಗೆ ಸಂಬಂಧಿಸಿದ ಹಡಗುಗಳಿಗೆ ಅಡ್ಡಿಪಡಿಸುವುದನ್ನು ಮುಂದುವರಿಸಬಹುದು.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಮಹಾ ಸುಂಕದ ಸಮರ, ಟ್ರಂಪ್ ಅವರ ಶೇ.20 ಶುಲ್ಕದ ಬೇಡಿಕೆಗೆ ಇರಾನ್ ಕೌಂಟರ್

ಹಾರ್ಮುಜ್ ಜಲಸಂಧಿಯ ಮಹತ್ವ:

ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಗಲ್ಫ್ ಅನ್ನು ಒಮಾನ್ ಗಲ್ಫ್ ಮತ್ತು ಅರಬ್ಬೀ ಸಮುದ್ರದೊಂದಿಗೆ ಜೋಡಿಸುವ ವಿಶ್ವದ ಅತ್ಯಂತ ಪ್ರಮುಖ ಕಡಲ ಮಾರ್ಗವಾಗಿದೆ. ಜಾಗತಿಕ ತೈಲ ಪೂರೈಕೆಯ ಸುಮಾರು ಐದನೇ ಒಂದು ಭಾಗ (ಶೇ. 20ರಷ್ಟು) ಪ್ರತಿದಿನ ಇದೇ ಕಿರಿದಾದ ಮಾರ್ಗದ ಮೂಲಕ ಹಾದುಹೋಗುತ್ತದೆ. ಹಾಗಾಗಿ, ಇಲ್ಲಿ ಯಾವುದೇ ಅಡಚಣೆ ಉಂಟಾದರೂ ಜಾಗತಿಕ ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರಲಿದ್ದು, ಹಡಗು ಸಾರಿಗೆ ವೆಚ್ಚ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪ್ರಧಾನಿ ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು? – Kannada News | Slovak Leader Richard Tastes Thekua Gifted By PM Narendra Modi watch his Reaction

ಬ್ರಾಟಿಸ್ಲಾವಾ, ಜುಲೈ 14: ಸ್ಲೋವಾಕಿಯಾ ಗಣರಾಜ್ಯದ ರಾಷ್ಟ್ರೀಯ ಮಂಡಳಿಯ ಸ್ಪೀಕರ್ ರಿಚರ್ಡ್ ರಾಶಿ ಇಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಭಾರಿ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜೂನ್ ತಿಂಗಳಲ್ಲಿ ಸ್ಲೋವಾಕಿಯಾ ಪ್ರವಾಸಕ್ಕೆ ತೆರಳಿದ್ದಾಗ ರಿಚರ್ಡ್ ಅವರಿಗೆ ಬಿಹಾರದ ಸಾಂಪ್ರದಾಯಿಕ ಸಿಹಿ ತಿಂಡಿಯಾದ ‘ಠೇಕುವಾ’ (Thekua) ಅನ್ನು ಉಡುಗೊರೆಯಾಗಿ ನೀಡಿದ್ದರು. ಆ ಸುಂದರ ಉಡುಗೊರೆಯ ಬಾಕ್ಸ್ ಅನ್ನು ಓಪನ್ ಮಾಡಿದ ರಿಚರ್ಡ್ ಆ ಸಿಹಿಯನ್ನು ಸವಿದು ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆ ವಿಡಿಯೋ ಮೇಲಿದೆ ನೋಡಿ.

“ನರೇಂದ್ರ ಮೋದಿ ಸ್ಲೋವಾಕಿಯಾಗೆ ಭೇಟಿ ನೀಡಿದ್ದಾಗ, ನನಗೆ ಬಿಹಾರದ ಸಾಂಪ್ರದಾಯಿಕ ‘ಠೇಕುವಾ’ ಉಡುಗೊರೆಯಾಗಿ ನೀಡಿದ್ದರು. ಅದಕ್ಕೆ ಪ್ರತಿಯಾಗಿ ನಾನು ಅವರಿಗೆ ಹಿಂದಿ ಭಾಷೆಯಲ್ಲಿ ಬರಹಗಳನ್ನು ಕೆತ್ತಲಾದ ನಮ್ಮ ದೇಶದ ‘ಸ್ಲೋವಾಕ್ ಸ್ಪಾ ವೇಫರ್ಸ್’ (ಒಂದು ಬಗೆಯ ಬಿಸ್ಕತ್) ಅನ್ನು ಉಡುಗೊರೆಯಾಗಿ ನೀಡಿದ್ದೆ. ಇಂತಹ ಕ್ಷಣಗಳು ನಮ್ಮ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ” ಎಂದು ರಿಚರ್ಡ್ ಪೋಸ್ಟ್ ಮಾಡಿದ್ದಾರೆ.

ಠೇಕುವಾ ಎಂಬ ಸಿಹಿತಿಂಡಿಯನ್ನು ಬಿಹಾರ ಮತ್ತು ಉತ್ತರ ಭಾರತದ ಪ್ರಸಿದ್ಧ ಹಬ್ಬವಾದ ‘ಛತ್ ಪೂಜೆ’ಯ ಸಂದರ್ಭದಲ್ಲಿ ವಿಶೇಷವಾಗಿ ಪ್ರಸಾದದ ರೂಪದಲ್ಲಿ ತಯಾರಿಸಲಾಗುತ್ತದೆ. ಗೋಧಿ ಹಿಟ್ಟು, ಬೆಲ್ಲ ಅಥವಾ ಸಕ್ಕರೆ ಹಾಗೂ ತುಪ್ಪವನ್ನು ಬಳಸಿ ಇದನ್ನು ಎಣ್ಣೆಯಲ್ಲಿ ಕರಿಯಲಾಗುತ್ತದೆ. ಇದರ ಮೇಲ್ಭಾಗದಲ್ಲಿ ವಿಶೇಷವಾದ ವಿನ್ಯಾಸಗಳ ಅಚ್ಚು ಇರುತ್ತದೆ. ಮೋದಿ ಅವರು ಬಿಹಾರದಿಂದ ತಂದಿದ್ದ ಈ ವಿಶಿಷ್ಟ ಸಿಹಿಯ ತುಂಡುಗಳನ್ನು ತಿಂದ ರಿಚರ್ಡ್ “ಇದು ನಮ್ಮ ಸ್ಲೋವಾಕಿಯಾ ದೇಶದ ಸಾಂಪ್ರದಾಯಿಕ ಸಿಹಿ ತಿಂಡಿಗಳನ್ನೇ ನೆನಪಿಸುತ್ತದೆ” ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ – Kannada News | Chinnaswamy Stampede Case: Karnataka Govt Drops Departmental Inquiry Against IPS Officer B Dayananda, Clears All Charges

ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

ಬೆಂಗಳೂರು, ಜುಲೈ 14: ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ತಂಡದ ಐಪಿಎಲ್​​ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರ ವಿರುದ್ಧ ಹೊರಿಸಲಾಗಿದ್ದ ಆರೋಪಗಳಿಂದ ಅವರನ್ನು ಖುಲಾಸೆಗೊಳಿಸಲಾಗಿದೆ.

ಈ ಹಿಂದೆ ಸರ್ಕಾರದ ಆದೇಶದಂತೆ, ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ ಅವರನ್ನು ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 3(1)(a) ಅಡಿಯಲ್ಲಿ ಇಲಾಖಾ ವಿಚಾರಣೆ ಆರಂಭಿಸುವ ಉದ್ದೇಶದಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ನಿಯಮ 3(7)(c) ಅಡಿಯಲ್ಲಿ ಅಮಾನತು ಆದೇಶವನ್ನು ಹಿಂಪಡೆದು, ನಿಯಮ 8ರ ಅಡಿಯಲ್ಲಿ ಇಲಾಖಾ ವಿಚಾರಣೆ ಪ್ರಾರಂಭಿಸಲಾಗಿತ್ತು. ಈ ಸಂಬಂಧ ನಿಯಮ 8(4)ರ ಅಡಿಯಲ್ಲಿ ಆರೋಪಪಟ್ಟಿ ಮತ್ತು ಶೋಕಾಸ್ ನೋಟಿಸ್ ನೀಡಲಾಗಿತ್ತು.

ಇದನ್ನೂ ಓದಿ:  ದಯಾನಂದ್ ಮಾಡಿದ ತಪ್ಪೇನು?; ಅಮಾನತಿಗೆ ಕಾರಣ ನೀಡಿದ ಸರ್ಕಾರ

ಲಿಖಿತ ಸಮರ್ಥನೆ ಸಲ್ಲಿಸಿದ್ದ ಬಿ. ದಯಾನಂದ

ಬಿ. ದಯಾನಂದ ಅವರು 2025ರ ಸೆಪ್ಟೆಂಬರ್ 8ರಂದು ತಮ್ಮ ಲಿಖಿತ ಸಮರ್ಥನೆ ಸಲ್ಲಿಸಿ, ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿಹಾಕಿ, ಆರೋಪಗಳಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದ್ದರು. ಅವರ ಸಮರ್ಥನೆ ಹಾಗೂ ಆಡಳಿತ ಇಲಾಖೆಯ ಅಭಿಪ್ರಾಯವನ್ನು ಪರಿಶೀಲಿಸಿದ ಬಳಿಕ, ಸಮರ್ಥ ಪ್ರಾಧಿಕಾರ ಇಲಾಖಾ ವಿಚಾರಣೆಯನ್ನು ಕೈಬಿಡಲು ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ 2026ರ ಜುಲೈ 14ರಂದು ಹೊರಡಿಸಿದ ಸರ್ಕಾರದ ಆದೇಶದಲ್ಲಿ, ಬಿ. ದಯಾನಂದ ವಿರುದ್ಧ ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 8(4)ರ ಅಡಿಯಲ್ಲಿ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ಮುಕ್ತಾಯಗೊಳಿಸಲಾಗಿದ್ದು, ಅವರ ವಿರುದ್ಧದ ಎಲ್ಲ ಆರೋಪಗಳಿಂದ ಅವರನ್ನು ಸಂಪೂರ್ಣವಾಗಿ ಖುಲಾಸೆಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಈ ಸಂಬಂಧ ಆದೇಶವನ್ನು ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-4) ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಹೊರಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version