Karnataka Weather Forecast: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ, ಭಾರೀ ಗಾಳಿ – Kannada News | Karnataka Weather Forecast: IMD Predicts slight Rain and Strong Winds Across Several Districts on July 15 and 16

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದರೂ, ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಜಿಲ್ಲೆಗಳ ಮುನ್ಸೂಚನೆ ಏನು?

ಜುಲೈ 15ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮಳೆಯಾಗುತ್ತಾ?

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಿದ್ದರೂ ಗಾಳಿಯ ವೇಗ ಹೆಚ್ಚಿರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ ಕಡಿಮೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಜುಲೈ 16ರ ಮುನ್ಸೂಚನೆಯೂ ಬಹುತೇಕ ಇದೇ ರೀತಿಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ ಮುಂದುವರಿಯಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಿಗೆ ಭಾರೀ ಗಾಳಿಯ ಮುನ್ಸೂಚನೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯ ಸಾಧ್ಯತೆ ಇದ್ದರೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳ ಸಿನಿಮೀಯ ಎಸ್ಕೇಪ್: ಇಲ್ಲಿದೆ ನೋಡಿ ಸಿಸಿಟಿವಿ ದೃಶ್ಯ! – Kannada News | Kalaburagi Central Jail 3 inmates escape: CCTV footage

ಕಲಬುರಗಿ, ಜುಲೈ 15: ಜಿಲ್ಲೆಯ ಕೇಂದ್ರ ಕಾರಾಗೃಹದ ಬ್ಯಾರಕ್ ಕಂಬಿಗಳನ್ನು ಕಟ್ ಮಾಡಿ, ಮೂವರು ಸಜಾ ಕೈದಿಗಳು ಮಂಗಳವಾರ (ಜು 14) ಮುಂಜಾನೆ ಸುಮಾರು 3 ಗಂಟೆಗೆ ಜೈಲಿನ ಕಾಂಪೌಂಡ್ ಗೋಡೆ ಹಾರಿ ಸಿನಿಮೀಯ ಶೈಲಿಯಲ್ಲಿ ಪರಾರಿಯಾಗಿದ್ದಾರೆ. ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಖತರ್ನಾಕ್ ಕೈದಿಗಳಾಗಿದ್ದು, ಇವರು ಬೀದರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದರು.

ಕೈದಿಗಳು ಜೈಲಿನಿಂದ ಹೊರಬಂದು ಬಿಂದಾಸ್ ಆಗಿ ನಡೆದುಕೊಂಡು ಹೋಗಿ ಕಾರ್ ಹತ್ತಿ ಬೀದರ್ ಕಡೆಗೆ ಎಸ್ಕೇಪ್ ಆಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಪ್ಪಿಸಿಕೊಂಡ ಆರೋಪಿಗಳು ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದರು. ಘಟನೆ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಲಬುರಗಿಯ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ಒರ್ವ ಆರೋಪಿಯ ಕಾಲಿಗೆ ಗುಂಡು ಹೊಡೆದು ಖೆಡ್ಡಾಗೆ ಕೆಡವಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ‌ ಸದ್ದು: ಜೈಲಿನಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡು ಹಾರಿಸಿ ಬಂಧನ – Kannada News | Kalaburagi Jail Escape Update: Police Shoot Escaped Convict in Leg During Arrest Attempt, One Held

ಜೈಲಿನಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡು ಹಾರಿಸಿ ಬಂಧನImage Credit source: tv9

ಕಲಬುರಗಿ, ಜುಲೈ 15: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಸಜಾ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಸಿನಿಮೀಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೂ ಗಾಯಗಳಾಗಿದ್ದು, ಗಾಯಾಳು ಕೈದಿಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ತಡರಾತ್ರಿ ಕಲಬುರಗಿ ಕೇಂದ್ರ ಕಾರಾಗೃಹದ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಿದ್ದ ಸಜಾ ಕೈದಿಗಳಾದ ಸಂತೋಷ್, ಮಸ್ತಾನ್ ಮತ್ತು ಸಾಗರ್ ಬಂಧನಕ್ಕಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ವಿವಿಧ ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು.

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ

ಶೋಧ ಕಾರ್ಯಾಚರಣೆ ವೇಳೆ ಕಲಬುರಗಿಯ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಆರೋಪಿ ಸಂತೋಷ್ ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಆರೋಪಿಯನ್ನು ಬಂಧಿಸಲು ಪೊಲೀಸರು ತೆರಳಿದಾಗ, ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಹಾಗೂ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ಗಾಯ

ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಕೈದಿ ಸಂತೋಷ್‌ನನ್ನೂ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಕಲಬುರಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದರು.

ಮಂಗಳವಾರ ನಡೆದ ಕೈದಿಗಳ ಪರಾರಿ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸುಮಾರು 15ರಿಂದ 20 ಅಡಿ ಎತ್ತರದ ಕಾರಾಗೃಹದ ಕಾಂಪೌಂಡ್ ಗೋಡೆ ಹಾರಿ, ಟವೆಲ್ ಮತ್ತು ಹಾಸಿಗೆಗಳನ್ನು ಬಳಸಿ ಮೂವರು ಕೈದಿಗಳು ಪರಾರಿಯಾಗಿದ್ದರು. ಬಳಿಕ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಈ ಘಟನೆ ಕಾರಾಗೃಹದ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿತ್ತು.

ಇದನ್ನೂ ಓದಿ: ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್

ಇದೀಗ ಪರಾರಿಯಾಗಿದ್ದ ಮೂವರ ಪೈಕಿ ಸಂತೋಷ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಉಳಿದ ಇಬ್ಬರು ಕೈದಿಗಳಾದ ಮಸ್ತಾನ್ ಮತ್ತು ಸಾಗರ್ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಬೆಂಗಳೂರು, ಮಂಗಳೂರು ಸೇರಿದಂತೆ ಈ ಎಲ್ಲಾ ಪ್ರದೇಶಗಳ ವಾಯುಗುಣಮಟ್ಟ ಇಂದು ಸೂಪರ್ – Kannada News | Bengaluru and Karnataka AQI Today: Check July 15 Air Quality Index

ಬೆಂಗಳೂರು, ಮಂಗಳೂರು ಸೇರಿದಂತೆ ಈ ಎಲ್ಲಾ ಪ್ರದೇಶಗಳ ವಾಯುಗುಣಮಟ್ಟ ಇಂದು ಸೂಪರ್

ಬೆಂಗಳೂರು, ಜುಲೈ 15: ಮಳೆಯ ಪ್ರಭಾವದಿಂದ ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಉತ್ತಮವಾಗಿದೆ. ಇಂದೂ ಸಹ ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಮಂಗಳೂರಿನ ವಾಯು ಗುಣಮಟ್ಟವೂ ಉತ್ತಮವಾಗಿದ್ದು, ಉಸಿರಾಡಲಯ ಯೋಗ್ಯವಾಗಿದೆ. ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (AQI) 62 ರಿಂದ 67ರ ಆಸುಪಾಸಿನಲ್ಲಿದೆ. ಇದನ್ನು ವಾಯು ಗುಣಮಟ್ಟದ ಮಾನದಂಡಗಳ ಪ್ರಕಾರ ತೃಪ್ತಿಕರ ಮಟ್ಟ ಎಂದು ಪರಿಗಣಿಸಲಾಗುತ್ತದೆ.

ನಗರದ ವಿವಿಧ ಭಾಗಗಳಲ್ಲಿನ ಪರಿಸ್ಥಿತಿ ಹೀಗಿದೆ

  • ಹೆಬ್ಬಾಳ ಮತ್ತು ಪೀಣ್ಯ: ಕೈಗಾರಿಕಾ ಮತ್ತು ವಾಹನ ದಟ್ಟಣೆಯ ಹೊರತಾಗಿಯೂ ಇಲ್ಲಿ ವಾಯು ಗುಣಮಟ್ಟವು 60ರ ಒಳಗಿದ್ದು ಉತ್ತಮ ಸ್ಥಿತಿಯಲ್ಲಿದೆ.
  • ಬಿಟಿಎಂ ಲೇಔಟ್ ಮತ್ತು ಸಿಲ್ಕ್ ಬೋರ್ಡ್: ವಾಹನಗಳ ದಟ್ಟಣೆ ಹೆಚ್ಚಿರುವ ಈ ಪ್ರದೇಶಗಳಲ್ಲಿ ಸೂಚ್ಯಂಕವು 63 ರಿಂದ 67ರಷ್ಟು ದಾಖಲಾಗಿದೆ.

ಪ್ರಸ್ತುತ ವಾತಾವರಣದಲ್ಲಿ ಹಾನಿಕಾರಕ ಸೂಕ್ಷ್ಮ ಕಣಗಳಾದ PM2.5 ಮತ್ತು PM10 ಮಟ್ಟ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಮುಕ್ತವಾಗಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು. ಆದರೆ ತೀವ್ರ ಉಸಿರಾಟದ ತೊಂದರೆ ಅಥವಾ ಆಸ್ತಮಾ ಇರುವವರು ಹೆಚ್ಚಿನ ದಟ್ಟಣೆಯ ಪ್ರದೇಶಗಳಲ್ಲಿ ಸ್ವಲ್ಪ ಎಚ್ಚರ ವಹಿಸುವುದು ಸೂಕ್ತ.

ಕರ್ನಾಟಕದ ಪ್ರಮುಖ ನಗರಗಳ ವಾಯು ಪರಿಸ್ಥಿತಿ

ಮೈಸೂರು ಮತ್ತು ಮಂಗಳೂರುಗಳಂತಹ ಕರಾವಳಿ ಮತ್ತು ಸಾಂಸ್ಕೃತಿಕ ನಗರಿಗಳಲ್ಲಿ ಇಂದಿನ AQI 40 ರಿಂದ 50ರ ಒಳಗಿದ್ದು, ಅತ್ಯುತ್ತಮ ದರ್ಜೆಯಲ್ಲಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಂತಹ ಉತ್ತರ ಕರ್ನಾಟಕದ ಈ ವಾಣಿಜ್ಯ ನಗರಿಗಳಲ್ಲಿ ಸೂಚ್ಯಂಕವು 55 ರಿಂದ 65ರ ಆಸುಪಾಸಿನಲ್ಲಿದ್ದು, ‘ಮಧ್ಯಮ’ ಮಟ್ಟವನ್ನು ಕಾಯ್ದುಕೊಂಡಿದೆ. ಬಳ್ಳಾರಿ ಮತ್ತು ರಾಯಚೂರು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಧೂಳಿನ ಪ್ರಮಾಣ ಹೆಚ್ಚಿರುವ ಈ ಭಾಗಗಳಲ್ಲೂ ಇಂದಿನ ಗಾಳಿಯ ಗುಣಮಟ್ಟ ತೃಪ್ತಿಕರವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಜನ ನಾಯಗನ್’ ಚಿತ್ರದಿಂದ ದಳಪತಿ ವಿಜಯ್ ಮಗ ಜೇಸನ್ ಸಿನಿಮಾಗೆ ಸಂಕಷ್ಟ – Kannada News | Thalapathy Vijay Jana Nayagan Release Date Leaked May Clash With Son Jason Sanjay Sigma

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸೂಪರ್‌ಸ್ಟಾರ್ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರದ ಬಿಡುಗಡೆ ದಿನಾಂಕ ಬಹುತೇಕ ನಿಗದಿಯಾಗಿದೆ. ಚಿತ್ರತಂಡ ಅಧಿಕೃತವಾಗಿ ಇನ್ನು ದಿನಾಂಕ ಪ್ರಕಟಿಸಿಲ್ಲ. ಆದರೆ ಬುಕಿಂಗ್ ಪ್ಲಾಟ್‌ಫಾರ್ಮ್ ‘ಡಿಸ್ಟ್ರಿಕ್ಟ್’ ಹಾಗೂ ಹಲವು ಚಿತ್ರಮಂದಿರಗಳ ಮಾಲೀಕರು ಜುಲೈ 24ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಿದ್ದಾರೆ. ಈಗಾಗಲೇ ವಿದೇಶಗಳಲ್ಲಿ ಅಡ್ವಾನ್ಸ್ ಬುಕಿಂಗ್ ಕೂಡ ಆರಂಭವಾಗಿದೆ.

ಎಚ್. ವಿನೋದ್ ನಿರ್ದೇಶನದ ಈ ಸಿನಿಮಾ ಮೊದಲು ಜನವರಿಯಲ್ಲಿ ಪೊಂಗಲ್ ಹಬ್ಬಕ್ಕೆ ಬಿಡುಗಡೆಯಾಗಬೇಕಿತ್ತು. ಸೆನ್ಸಾರ್ ಮಂಡಳಿಯಿಂದ (CBFC) ಪ್ರಮಾಣಪತ್ರ ಸಿಗುವುದು ತಡವಾದ ಕಾರಣ ಸಿನಿಮಾ ವಿಳಂಬವಾಗಿತ್ತು. ಈಗ ಚಿತ್ರಕ್ಕೆ ‘A’ ಸರ್ಟಿಫಿಕೇಟ್ ಸಿಕ್ಕಿದ್ದು, ಬಿಡುಗಡೆಗೆ ದಿನಗಣನೆ ಆರಂಭವಾಗಿದೆ.

ಮಗ ಜೇಸನ್ ಸಂಜಯ್ ಸಿನಿಮಾಗೆ ಬಿಡುಗಡೆ ಭೀತಿ!

‘ಜನ ನಾಯಗನ್’ ಸಿನಿಮಾ ಜುಲೈ 24ಕ್ಕೆ ಬಂದರೆ, ವಿಜಯ್ ಮಗ ಜೇಸನ್ ಸಂಜಯ್‌ಗೆ ಸಂಕಷ್ಟ ಎದುರಾಗಲಿದೆ. ಜೇಸನ್ ನಿರ್ದೇಶಕನಾಗಿ ಪದಾರ್ಪಣೆ ಮಾಡುತ್ತಿರುವ ‘ಸಿಗ್ಮಾ’ ಸಿನಿಮಾ ಜುಲೈ 31ಕ್ಕೆ ರಿಲೀಸ್ ಆಗಬೇಕಿದೆ. ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಸಂದೀಪ್ ಕಿಶನ್ ಮತ್ತು ಫರಿಯಾ ಅಬ್ದುಲ್ಲಾ ನಟಿಸಿದ್ದಾರೆ. ವರದಿಗಳ ಪ್ರಕಾರ, ತಂದೆಯ ಚಿತ್ರದ ಜೊತೆ ಪೈಪೋಟಿ ತಪ್ಪಿಸಲು ಜೇಸನ್ ಸಿನಿಮಾ ಆಗಸ್ಟ್‌ಗೆ ಮುಂದೂಡಲ್ಪಡುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಚಿತ್ರತಂಡ ಇನ್ನು ಯಾವುದೇ ಅಧಿಕೃತ ನಿರ್ಧಾರ ಪ್ರಕಟಿಸಿಲ್ಲ.

ಬುಕಿಂಗ್ ಜೋರ್, ಕಥೆ ಏನು?

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜುಲೈ 24ರ ರಿಲೀಸ್ ಡೇಟ್ ನೋಡಿ ಅಭಿಮಾನಿಗಳು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಕೇವಲ ಕೆಲವೇ ನಿಮಿಷಗಳಲ್ಲಿ ಸಾವಿರಾರು ಟಿಕೆಟ್‌ಗಳು ಮಾರಾಟವಾಗಿವೆ. ಇನ್ನು ಕೆಲವರು ಸಿನಿಮಾ ಜುಲೈ 23ಕ್ಕೇ ರಿಲೀಸ್ ಆಗಬಹುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುತ್ತಿದ್ದಾರೆ.

ಇದನ್ನೂ ಓದಿ: ಸೆನ್ಸಾರ್ ಕಟ್ ಇಲ್ಲದೆ ಜನ ನಾಯಗನ್ ಸಿನಿಮಾ ನೋಡಲು ವಿಜಯ್ ಅಭಿಮಾನಿಗಳಿಗೆ ಸುವರ್ಣಾವಕಾಶ

ಈ ಚಿತ್ರದಲ್ಲಿ ವಿಜಯ್ ಜೊತೆಗೆ ಮಮಿತಾ ಬೈಜು, ಬಾಬಿ ಡಿಯೋಲ್ ಮತ್ತು ಪೂಜಾ ಹೆಗ್ಡೆ ನಟಿಸಿದ್ದಾರೆ. ಇದು ತೆಲುಗಿನ ‘ಭಗವಂತ್ ಕೇಸರಿ’ ಚಿತ್ರದ ರಿಮೇಕ್ ಎನ್ನಲಾಗಿದೆ. ಸಾಮಾನ್ಯ ವ್ಯಕ್ತಿಯೊಬ್ಬ ಅನ್ಯಾಯದ ವಿರುದ್ಧ ಹೋರಾಡಿ ಹೇಗೆ ನಾಯಕನಾಗುತ್ತಾನೆ ಎಂಬುದೇ ಈ ಚಿತ್ರದ ಕಥಾಹಂದರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 6:45 am, Wed, 15 July 26

Source link

ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Masam Begins Today: Gajakesari Yoga, 12 Zodiac Predictions for 15 July 2026

ಇಂದು 2026ರ ಜುಲೈ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇಂದು ಪರಾಭವನಾಮ ಸಂವತ್ಸರ, ಆಷಾಢ ಮಾಸದ ಶುಕ್ಲ ಪಕ್ಷದ ಪಾಡ್ಯ ತಿಥಿ ಇದ್ದು, ಪುಷ್ಯಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿದೆ. ಈ ದಿನ ಗಜಕೇಸರಿ ಯೋಗವಿದ್ದು, ಶುಭ ಕಾಲವು ಬೆಳಗ್ಗೆ 10:49 ರಿಂದ 12:23 ರವರೆಗೆ ಇರುತ್ತದೆ. ಅಲ್ಲದೆ, ಇಂದಿನಿಂದ ಆಷಾಢ ಮಾಸವು ಪ್ರಾರಂಭವಾಗಲಿದ್ದು ಆಗಸ್ಟ್ 12ರ ತನಕ ಇರುತ್ತದೆ.

Source link

IND vs ENG: ಮಿಂಚಿದ ಅಕ್ಷರ್, ಗಿಲ್; ಇಂಗ್ಲೆಂಡ್‌ ವಿರುದ್ಧ ಗೆದ್ದ ಟೀಂ ಇಂಡಿಯಾ – Kannada News | India Dominates England 1st ODI: Gill and Axar Shine in Series Opening Victory

ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಇಂದು ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ಮಣಿಸಿದ ಟೀಂ ಇಂಡಿಯಾ (Team India) ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡವು 47.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 258 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಅವರ ಅರ್ಧಶತಕದ ನೆರವಿನಿಂದ ಗೆಲುವಿನ ಗುರಿ ಮುಟ್ಟಿತು.

ಇಂಗ್ಲೆಂಡ್​ಗೆ ಉತ್ತಮ ಆರಂಭ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ 47.5 ಓವರ್‌ಗಳಲ್ಲಿ 258 ರನ್‌ಗಳಿಗೆ ಆಲೌಟ್ ಆಯಿತು. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಬೆನ್ ಡಕೆಟ್ ಮತ್ತು ಜಾಕೋಬ್ ಬೆಥೆಲ್ ಮೊದಲ ವಿಕೆಟ್‌ಗೆ 61 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಆದರೆ ಇವರಿಬ್ಬರು ಔಟಾದ ಬಳಿಕ ಇಂಗ್ಲೆಂಡ್ ಮಧ್ಯಮ ಕ್ರಮಾಂಕ ಕೂಡ ಬೇಗನೇ ಪೆವಿಲಿಯನ್ ಸೇರಿಕೊಂಡಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರೆ, ಬೆನ್ ಡಕೆಟ್ 45 ಎಸೆತಗಳಲ್ಲಿ 46 ರನ್‌ಗಳಿಗೆ ಔಟಾದರು. ಅದರ ನಂತರ ನಾಲ್ಕು ವಿಕೆಟ್‌ಗಳು ಬೇಗನೇ ಪತನಗೊಂಡವು.

7ನೇ ವಿಕೆಟ್​ಗೆ ಶತಕದ ಜೊತೆಯಾಟ

ಆದರೆ 7ನೇ ವಿಕೆಟ್​ಗೆ ಜೊತೆಯಾದ ಲಿಯಾಮ್ ಡಾಸನ್ ಮತ್ತು ಜೋ ರೂಟ್ ತಂಡವನ್ನು ಸಂಕಷ್ಟದಿಂದ ಹೊರತಂದರು. ಇವರಿಬ್ಬರು ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹಾಗೆಯೇ ಇಬ್ಬರ ನಡುವೆ 134 ಎಸೆತಗಳಲ್ಲಿ 121 ರನ್‌ಗಳ ಪಾಲುದಾರಿಕೆ ಇತ್ತು. ಒಂದು ಹಂತದಲ್ಲಿ ಇಂಗ್ಲೆಂಡ್ 107 ರನ್​ಗಳಿಗೆ 6 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಅಲ್ಲಿಂದ ಇವರಿಬ್ಬರು ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಲಿಯಾಮ್ ಡಾಸನ್ 68 ರನ್ ಬಾರಿಸಿದರೆ, ಜೋ ರೂಟ್ 76 ರನ್ ಬಾರಿಸಿ ಅಜೇಯರಾಗಿ ಉಳಿದರು. ಭಾರತದ ಪರ ಅಕ್ಷರ್ ಪಟೇಲ್ 4 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ ಮತ್ತು ಗುರ್ನೂರ್ ಬ್ರಾರ್ ತಲಾ 2 ವಿಕೆಟ್ ಪಡೆದರು. ಜಸ್ಪ್ರಿತ್ ಬುಮ್ರಾ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.

ಬೇಗನೇ ಔಟಾದ ರೋಹಿತ್ ಕೊಹ್ಲಿ

ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅನುಭವಿ ರೋಹಿತ್ ಶರ್ಮಾ 11 ರನ್​ಗಳಿಗೆ ಔಟಾದರೆ, ಆ ನಂತರ ಬಂದ ವಿರಾಟ್ ಕೊಹ್ಲಿ ಕೂಡ ಕೇವಲ 5 ರನ್​ಗಳಿಗೆ ಔಟಾದರು. ಇಲ್ಲಿಂದ ಜೊತೆಯಾದ ನಾಯಕ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಮೂರನೇ ವಿಕೆಟ್​ಗೆ ಶತಕದ ಜೊತೆಯಾಟ ಕಟ್ಟಿದರು. ಇದೇ ವೇಳೆ ನಾಯಕ ಗಿಲ್ ಅರ್ಧಶತಕದ ಗಡಿ ಕೂಡ ದಾಟಿದರು. ಅದ್ಭುತ ಇನ್ನಿಂಗ್ಸ್ ಕಟ್ಟುತ್ತಾ ಶತಕದಗತ್ತ ಸಾಗುತ್ತಿದ್ದ ಗಿಲ್ ಗಾಯದಿಂದಾಗಿ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ರಿಟೈಡ್ ಹರ್ಟ್​ ಆಗಿ ಡಗೌಟ್ ಸೇರಿಕೊಂಡರು. ಈ ಹಂತದಲ್ಲಿ ಗಿಲ್ 80 ರನ್​ ಬಾರಿಸಿದ್ದರು.

IND vs ENG: ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್

ಗಿಲ್, ಅಕ್ಷರ್ ಅರ್ಧಶತಕ

ಗಿಲ್ ನಿರ್ಗಮನದ ನಂತರ ಶ್ರೇಯಸ್ ಅಯ್ಯರ್ ರನೌಟ್​ಗೆ ಬಲಿಯಾದರು. ಆ ನಂತರ ಬಂದ ರಾಹುಲ್ ಅವರ ಇನ್ನಿಂಗ್ಸ್ ಕೂಡ ಕೇವಲ 1 ರನ್​ಗೆ ಅಂತ್ಯವಾಯಿತು. 5ನೇ ವಿಕೆಟ್​ಗೆ ಜೊತೆಯಾದ ಸುಂದರ್ ಹಾಗೂ ಅಕ್ಷರ್ ಪಟೇಲ್ ತಂಡದ ಇನ್ನಿಂಗ್ಸ್ ಕಟ್ಟಿದರು. ಇದೇ ವೇಳೆ ಇಬ್ಬರು ಕೂಡ ತಮ್ಮ ಅರ್ಧಶತಕವನ್ನು ಪೂರೈಸಿದರು. ಇವರಿಬ್ಬರು ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಸುಂದರ್ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಡುವುದರ ಜೊತೆಗೆ ತಮ್ಮ ಅರ್ಧಶತಕವನ್ನು ಪೂರೈಸಿದರು. ಇತ್ತ ಅಕ್ಷರ್ 57 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಹ್ಯಾಕಾಶಕ್ಕೆ ಹಾರಿದ ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್; 8 ತಿಂಗಳ ಮಹತ್ವದ ಮಿಷನ್ ಆರಂಭ – Kannada News | Indian origin NASA astronaut Anil Menon launched into space today

ವಾಷಿಂಗ್ಟನ್, ಜುಲೈ 14: ಭಾರತೀಯ ಮೂಲದ ಗಗನಯಾತ್ರಿ ಹಾಗೂ ಯುಎಸ್‌ ಏರ್‌ಫೋರ್ಸ್‌ನ ಲೆಫ್ಟಿನೆಂಟ್ ಕರ್ನಲ್ ಆಗಿರುವ ಅನಿಲ್ ಮೆನನ್ (Anil Menon) ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಪ್ರಯಾಣಕ್ಕಾಗಿ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಜಿಗಿದಿದ್ದಾರೆ. ಈ ಮೂಲಕ ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಹಾಗೂ ಶುಭಾಂಶು ಶುಕ್ಲಾ ಅವರ ನಂತರ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ ಭಾರತೀಯ ಮೂಲದ ಹೆಮ್ಮೆಯ ಗಗನಯಾತ್ರಿಗಳ ಸಾಲಿಗೆ ಅನಿಲ್ ಮೆನನ್ ಸೇರ್ಪಡೆಯಾಗಿದ್ದಾರೆ.

ಅನಿಲ್ ಮೆನನ್ ಮತ್ತು ಇತರೆ ಗಗನಯಾತ್ರಿಗಳನ್ನೊಳಗೊಂಡ ತಂಡವನ್ನು ಹೊತ್ತ ಸ್ಪೇಸ್‌ಎಕ್ಸ್ (SpaceX) ರಾಕೆಟ್, ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ (NASA) ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 8 ತಿಂಗಳು ತಂಗಲಿರುವ ಈ ತಂಡವು ಅಲ್ಲಿ ವಿವಿಧ ವೈಜ್ಞಾನಿಕ ಪ್ರಯೋಗಗಳು ಹಾಗೂ ಸಂಶೋಧನೆಗಳನ್ನು ನಡೆಸಲಿದೆ.

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಅನಿಲ್ ಮೆನನ್ ಇಂದು ರಾತ್ರಿ ಇಬ್ಬರು ರಷ್ಯಾದ ಗಗನಯಾತ್ರಿಗಳೊಂದಿಗೆ ಕಜಕಿಸ್ತಾನ್‌ನ ಬೈಕನೂರ್ ಕಾಸ್ಮೋಡ್ರೋಮ್‌ನಿಂದ ಸೊಯುಜ್ ನೌಕೆಯ ಮೂಲಕ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದಾರೆ.

ಇದನ್ನೂ ಓದಿ: ಬಾಹ್ಯಾಕಾಶದಲ್ಲೊಂದು ಮಿನಿ ಉದ್ಯಾನ, ವಿಡಿಯೋ ಹಂಚಿಕೊಂಡ ಗಗನಯಾತ್ರಿ

ಅನಿಲ್ ಮೆನನ್ ಜವಾಬ್ದಾರಿ ಏನು?:

ತುರ್ತು ಚಿಕಿತ್ಸಾ ವೈದ್ಯಕೀಯ ಮತ್ತು ಏರೋಸ್ಪೇಸ್ ವೈದ್ಯಕೀಯ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಅನಿಲ್ ಮೆನನ್ ಅವರು, ಈ ದೀರ್ಘಾವಧಿಯ ಮಿಷನ್‌ನಲ್ಲಿ ಕೇವಲ ಸಂಶೋಧಕರಾಗಿ ಮಾತ್ರವಲ್ಲದೆ, ತಾವೇ ಸ್ವತಃ ಒಂದು ಸಂಶೋಧನಾ ವಸ್ತುವಾಗಿ ಭಾಗವಹಿಸಲಿದ್ದಾರೆ. ಶೂನ್ಯ ಗುರುತ್ವಾಕರ್ಷಣೆಯ ವಾತಾವರಣವು ಸುದೀರ್ಘ ಅವಧಿಯಲ್ಲಿ ಮಾನವನ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಅಮೂಲ್ಯವಾದ ಡೇಟಾವನ್ನು ಇವರ ಮೂಲಕ ಸಂಗ್ರಹಿಸಲಾಗುತ್ತದೆ.

ಮಿಷನ್‌ನ ಪ್ರಮುಖ ಪ್ರಯೋಗಗಳು:

ಅನಿಲ್ ಮೆನನ್ ಅವರು ಬಾಹ್ಯಾಕಾಶದಲ್ಲಿ ನಡೆಸಲಿರುವ ಕೆಲವು ಪ್ರಮುಖ ಸಂಶೋಧನೆಗಳೆಂದರೆ, ಎಐ (AI) ಆಧಾರಿತ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮೂಲಕ ಭೂಮಿಯ ಮೇಲಿರುವ ವೈದ್ಯರ ನೇರ ಸಂಪರ್ಕವಿಲ್ಲದೆಯೂ ಗಗನಯಾತ್ರಿಗಳು ಬಾಹ್ಯಾಕಾಶದಲ್ಲೇ ಸಂಕೀರ್ಣ ವೈದ್ಯಕೀಯ ತಪಾಸಣೆಗಳನ್ನು ಮಾಡಿಕೊಳ್ಳಲು ನೆರವಾಗುವ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ಅವರು ಪರೀಕ್ಷಿಸಲಿದ್ದಾರೆ. ಶೂನ್ಯ ಗುರುತ್ವಾಕರ್ಷಣೆಯ ವಾತಾವರಣದಲ್ಲಿ ಯಾವುದೇ ದೋಷಗಳಿಲ್ಲದ ಉತ್ತಮ ಗುಣಮಟ್ಟದ ಸೆಮಿಕಂಡಕ್ಟರ್ ಹರಳುಗಳನ್ನು ಉತ್ಪಾದಿಸಲು ಸಾಧ್ಯವೇ ಎಂಬ ಪ್ರಯೋಗವನ್ನು ಅವರು ನಡೆಸಲಿದ್ದಾರೆ. ಇದು ಯಶಸ್ವಿಯಾದರೆ ಭೂಮಿಯ ಮೇಲಿನ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟರ್ ಹಾಗೂ ಸುಧಾರಿತ ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲಿ ಕ್ರಾಂತಿ ಸೃಷ್ಟಿಸಲಿದೆ.

ಇದನ್ನೂ ಓದಿ: ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ಗಗನಯಾತ್ರಿಗಳ ತಂಡ: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು

ದೀರ್ಘಕಾಲದ ತೂಕ ರಹಿತ ಸ್ಥಿತಿಯಿಂದಾಗಿ ಮಾನವನ ರಕ್ತದ ಹರಿವು ಹಾಗೂ ಹೃದಯದ ಕಾರ್ಯಕ್ಷಮತೆ ಹೇಗೆ ಬದಲಾಗುತ್ತದೆ ಎಂಬುದರ ಕುರಿತು ಅನಿಲ್ ಮೆನನ್ ಹಲವು ಅಧ್ಯಯನಗಳಲ್ಲಿ ಭಾಗಿಯಾಗಲಿದ್ದಾರೆ.

ಅನಿಲ್ ಮೆನನ್ ಯಾರು?:

ಅನಿಲ್ ಮೆನನ್ ಅವರು ನಾಸಾದ ಗಗನಯಾತ್ರಿಗಳ ತಂಡವನ್ನು ಸೇರುವ ಮುನ್ನ, ಬಾಹ್ಯಾಕಾಶ ಯಾತ್ರಿಗಳ ಆರೋಗ್ಯದ ಉಸ್ತುವಾರಿ ನೋಡಿಕೊಳ್ಳುವ ‘ಫ್ಲೈಟ್ ಸರ್ಜನ್’ ಆಗಿ ಕಾರ್ಯನಿರ್ವಹಿಸಿದ್ದರು. ಎಲಾನ್ ಮಾಸ್ಕ್ ಅವರ ಸ್ಪೇಸ್‌ಎಕ್ಸ್ (SpaceX) ಸಂಸ್ಥೆಯ ಮೊದಲ ಫ್ಲೈಟ್ ಸರ್ಜನ್ ಕೂಡ ಇವರೇ ಆಗಿದ್ದರು. ಅನಿಲ್ ಮೆನನ್ ಅವರ ತಂದೆ ಭಾರತದ ಮೂಲದವರಾಗಿದ್ದು, ತಾಯಿ ಉಕ್ರೇನ್ ಮೂಲದವರಾಗಿದ್ದಾರೆ. ಇವರು ಅಮೆರಿಕದ ಮಿನ್ನೇಸೋಟದಲ್ಲಿ ಹುಟ್ಟಿ, ಬೆಳೆದರು. ಅನಿಲ್ ಮೆನನ್ ಅವರು ಕೇವಲ ಗಗನಯಾತ್ರಿಯಷ್ಟೇ ಅಲ್ಲದೆ, ವೃತ್ತಿಯಿಂದ ತುರ್ತು ಚಿಕಿತ್ಸಾ ವೈದ್ಯರಾಗಿದ್ದಾರೆ. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನ್ಯೂರೋಬಯಾಲಜಿಯಲ್ಲಿ ಪದವಿ ಪಡೆದಿರುವ ಇವರು, ಸ್ಟ್ಯಾನ್‌ಫೋರ್ಡ್ ವೈದ್ಯಕೀಯ ಶಾಲೆಯಿಂದ ವೈದ್ಯಕೀಯ ಪದವಿ (MD) ಪಡೆದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಮನ ಸೆಳೆದ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ – Kannada News | Director Chayan Shetty Marriage Party Kannada and Malayalam Movie First Look Poster Released

ಕರಾವಳಿ ಭಾಗದ ಕಥೆಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿವೆ. ಅಂಥ ಸಿನಿಮಾಗಳತ್ತ ಜನರು ಆಸಕ್ತಿ ತೋರಿಸುತ್ತಿದ್ದಾರೆ. ‘ಸು ಫ್ರಂ ಸೋ’ (Su From So), ‘ಕಾಂತಾರ’ ಮುಂತಾದ ಸಿನಿಮಾಗಳೇ ಈ ಮಾತಿಗೆ ಸಾಕ್ಷಿ. ಈಗ ಅದೇ ರೀತಿ ಕರಾವಳಿ ಭಾಗದ ಕಥೆಯನ್ನು ಹೊಂದಿರುವ ಇನ್ನೊಂದು ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ಯುವ ನಿರ್ದೇಶಕ ಚಯನ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಶ್ರೀ ವಾರಾಹಿ ಫಿಲ್ಮ್ಸ್’ ಬ್ಯಾನರ್ ಮೂಲಕ ಸಂತೋಷ್ ವಿ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರವೀಗ ಪ್ರೇಕ್ಷಕರ ಎದುರು ಬರಲು ಸಜ್ಜಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ.

ಚಯನ್ ಶೆಟ್ಟಿ ನಿರ್ದೇಶನದ ಎರಡನೇ ಸಿನಿಮಾ:

ಈ ಹಿಂದೆ ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಹೀರೋ ಆಗಿ ನಟಿಸಿದ್ದ ‘ಅಧಿಪತ್ರ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಚಯನ್ ಶೆಟ್ಟಿ ಅವರಿಗೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ತಮ್ಮ ನಿರ್ದೇಶನದಲ್ಲಿ ಬರುತ್ತಿರುವ ‘ಮ್ಯಾರೇಜ್ ಪಾರ್ಟಿ’ ಸಿನಿಮಾಗಾಗಿ ಅವರು ಡಿಫರೆಂಟ್ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾಮಿಡಿ ಕಹಾನಿಯನ್ನು ಜನರ ಎದುರು ಅವರು ತರುತ್ತಿದ್ದಾರೆ.

ಹೀರೋ ಆಗಿ ಬಡ್ತಿ ಪಡೆದ ವಿನೀತ್ ಕುಮಾರ್:

ಹಾಸ್ಯಪ್ರಧಾನವಾಗಿ ‘ಮ್ಯಾರೇಜ್ ಪಾರ್ಟಿ’ ಸಿನಿಮಾ ರೂಪುಗೊಂಡಿದೆ ಎಂದು ಚಿತ್ರತಂಡ ತಿಳಿಸಿದೆ. ಈಗಾಗಲೇ ಕೆಲವು ತುಳು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಗಮನ ಸೆಳೆದಿರುವ ವಿನೀತ್ ಕುಮಾರ್ ಅವರು ‘ಮ್ಯಾರೇಜ್ ಪಾರ್ಟಿ’ ಮೂಲಕ ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ಕರಾವಳಿ ಭಾಗದಲ್ಲಿ ಘಟಿಸುವ ರಸವತ್ತಾದ ಕಥೆಯೊಂದನ್ನು ಈ ಸಿನಿಮಾ ತೆರೆದಿಡಲಿದೆ.

ಇದನ್ನೂ ಓದಿ: ‘ಸು ಫ್ರಂ ಸೋ’ ಸಿನಿಮಾ ನೋಡಿ ಮೆಚ್ಚಿದ ಬಾಲಿವುಡ್ ಸ್ಟಾರ್: ರೀಮೇಕ್​ ಬಗ್ಗೆ ಚರ್ಚೆ?

ಪಾತ್ರವರ್ಗ ಮತ್ತು ತಾಂತ್ರಿಕ ಬಳಗ:

ಈ ಸಿನಿಮಾಗೆ ಶ್ರೀಕಾಂತ್ ಅವರು ಛಾಯಾಗ್ರಹಣ ಮಾಡಿದ್ದಾರೆ. ರಿತ್ವಿಕ್ ಮುರಳೀಧರ್ ಅವರು ಸಂಗೀತ ನೀಡಿದ್ದಾರೆ. ‘ಸು ಫ್ರಂ ಸೋ’ ಖ್ಯಾತಿಯ ನಿತಿನ್ ಶೆಟ್ಟಿ ಅವರು ಸಂಕಲನ ಮಾಡುತ್ತಿದ್ದಾರೆ. ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ಸಾಹಿತ್ಯ ಬರೆದಿದ್ದಾರೆ. ಪ್ರಕಾಶ್ ತುಮಿನಾಡು, ನವೀನ್ ಡಿ. ಪಡೀಲ್, ದೀಪಕ್ ರೈ, ರಕ್ಷಿತಾ, ನಮಿತಾ ಕಿರಣ್, ರಾಮ್‌ದಾಸ್, ಪುಷ್ಪರಾಜ್ ಬೋಳಾರ್, ರಘು ಪಾಂಡೇಶ್ವರ, ಜ್ಯೋತಿಷ್ ಶೆಟ್ಟಿ, ಪಿಡಿ ಸತೀಶ್, ರಾಧಾಕೃಷ್ಣ, ಭೀಮ್ ರಾವ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ENG: ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ – Kannada News | Shubman Gill Sets New ODI World Record: First Batter with 60+ Average and 100+ SR

ಇಂದಿನ ಪಂದ್ಯಕ್ಕೂ ಮೊದಲು ಶುಭ್​ಮನ್ ಗಿಲ್ ಅವರ ಏಕದಿನ ಸರಾಸರಿ 59 ಆಗಿತ್ತು. ಇದೀಗ ಇಂಗ್ಲೆಂಡ್‌ ವಿರುದ್ಧ ಗಿಲ್ ಅರ್ಧಶತಕ ಗಳಿಸಿದ ನಂತರ, ಅವರ ಸರಾಸರಿ 60 ಕ್ಕಿಂತ ಹೆಚ್ಚಾಗಿದೆ. ವಿರಾಟ್ ಕೊಹ್ಲಿ (58.5) ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ (58) ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮೈಕೆಲ್ ಬೆವನ್ 53.6 ಸರಾಸರಿಯೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಎಬಿ ಡಿವಿಲಿಯರ್ಸ್ 53.5 ಸರಾಸರಿಯೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ(PC-PTI).

Source link

Exit mobile version