ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಯಾವಾಗ?: ಆಕಾಂಕ್ಷಿಗಳದ್ದೂ ಇದೇ ಪ್ರಶ್ನೆ! – Kannada News | Karnataka Cabinet Expansion: Delay Triggers Intense Lobbying Among Aspirants

ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಯಾವಾಗ?Image Credit source: Tv9 Kannada

ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದು ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಇನ್ನೂ ಕೂಡಿಬಂದಿಲ್ಲ. ರಾಜ್ಯದಲ್ಲಿ ಉಳಿದಿರುವ 20 ಸಚಿವ ಸ್ಥಾನಗಳಿಗೆ 60ಕ್ಕೂ ಹೆಚ್ಚು ಶಾಸಕರು ತೀವ್ರವಾಗಿ ಲಾಬಿ ನಡೆಸುತ್ತಿದ್ದು, ಇದು ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಚಿವರ ಮೊದಲ ಪಟ್ಟಿ ರಿಲೀಸ್ ಆಗಿ ಅವರ ಪ್ರಮಾಣವಚನ ನಡೆದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಪೈಪೋಟಿ ಜೋರಾಗಿದ್ದು, ಎರಡನೇ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಹಿರಿಯ ಮತ್ತು ಕಿರಿಯ ಶಾಸಕರು ಸತತ ಪ್ರಯತ್ನ ಪಡುತ್ತಿದ್ದಾರೆ.

ಪ್ರಾದೇಶಿಕ ಮತ್ತು ಸಮುದಾಯವಾರು ಪೈಪೋಟಿ

ಬೆಳಗಾವಿ ಭಾಗದಿಂದ ಆರು ಶಾಸಕರು ಸಚಿವ ಸ್ಥಾನಕ್ಕಾಗಿ ಟವೆಲ್ ಹಾಕಿದ್ದಾರೆ. ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಲಕ್ಷ್ಮಣ್ ಸವದಿ, ಅಶೋಕ್ ಪಟ್ಟಣ್, ಆಸಿಫ್ ಸೇಠ್ ಸೇರಿದಂತೆ ಪ್ರಮುಖರು ನೇರವಾಗಿ ಮಂತ್ರಿಗಿರಿಗೆ ಬೇಡಿಕೆ ಇಟ್ಟಿದ್ದಾರೆ. ಶಾಸಕ ಆಸಿಫ್ ಸೇಠ್ ಅವರು ಟಿವಿ9 ಜೊತೆ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ತಾನೊಬ್ಬನೇ ಅಲ್ಪಸಂಖ್ಯಾತ ಶಾಸಕನಾಗಿದ್ದು, ತನಗೆ ಅವಕಾಶ ನೀಡಿದರೆ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ; ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಡಿಕೆ ಸಂಪುಟ ಸೇರೋಕೆ ಹಲವರಿಂದ ಲಾಬಿ ಜೋರಾಗಿಯೇ ನಡೀತಿದೆ. ಯಾವ ಕ್ಷಣದಲ್ಲಿ ಬೇಕಾದರೂ ದೆಹಲಿಯಿಂದ ಕರೆ ಬರಬಹುದು ಎಂಬುದು ಹಲವರ ನಿರೀಕ್ಷೆ, ಅಪೇಕ್ಷೆ. ಆದ್ರೆ ಸಂಪುಟ ವಿಸ್ತರಣೆ ಯಾವಾಗ ಎಂಬುದಕ್ಕೆ ದೆಹಲಿಯಲ್ಲೂ ಉತ್ತರ ಸಿಕ್ತಿಲ್ಲ, ಬೆಂಗಳೂರಲ್ಲೂ ಆ ವಾತಾವರಣದ ಮುನ್ಸೂಚನೆ ಇಲ್ಲ. ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ವಾಪಸ್ಸಾಗಿದ್ದಾರೆ. ವಿದೇಶದಿಂದ ರಾಹುಲ್ ಗಾಂಧಿ ಕೂಡ ಬಂದಾಗಿದೆ. ಇವರಿಬ್ಬರೂ ಕೂತು ಚರ್ಚೆ ಮಾಡಿದರೆ ಕ್ಯಾಬಿನೆಟ್ ವಿಸ್ತರಣೆ ಫಿಕ್ಸ್. ಆದರೆ ಕ್ಯಾಬಿನೆಟ್ ವಿಸ್ತರಣೆಗೆ ಯಾವ ಶಕ್ತಿಗಳು ಅಡ್ಡಿಪಡಿಸುತ್ತಿವೆ? ಎಂಬುದೇ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತಿಳಿಯುತ್ತಿಲ್ಲ. ನಾಯಕತ್ವ ಬದಲಾವಣೆಗೆ ಹೈಕಮಾಂಡ್ ತೋರಿಸಿದ ಆತುರವನ್ನು ಈಗ ಯಾಕೆ ತೋರಿಸುತ್ತಿಲ್ಲ ಎಂಬುದು ಯಕ್ಷ ಪ್ರಶ್ನೆಯಾಗಿ ಉಳಿದಿದೆ.

ಸರ್ಕಾರದ ಮೇಲೆ ಮುಗಿಬಿದ್ದಿರುವ ವಿಪಕ್ಷ

ಮತ್ತೊಂದೆಡೆ ಸಚಿವರಿಲ್ಲದೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿದೆ. ಬರ ಇರೋದ್ರಿಂದ ಕನಿಷ್ಠ ಆದ್ರೂ ಕೃಷಿ ಸಚಿವರನ್ನ ನೇಮಕ ಮಾಡಿ ಅಂತಾ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ಒತ್ತಾಯ ಮಾಡಿದ್ದರೆ. ಮತ್ತೊಂದೆಡೆ ಕಾಂಗ್ರೆಸ್​​ ವಿರುದ್ಧ ಕಿಡಿ ಕಾರಿರುವ ವಿಪಕ್ಷ ನಾಯಕ ಆರ್​​. ಅಶೋಕ್​​, ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ಇದ್ದು, ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ಭವಿಷ್ಯವನ್ನೂ ನುಡಿದಿರುವ ಅವರು, ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್ – Kannada News | Yogaraj Bhat talks about Yash and Toxic movie Kannada team in Tabaahi song work experience

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ಅವರು ವಿವರಿಸಿದ್ದಾರೆ. ‘ಕೆಜಿಎಫ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋದವರು ಯಶ್. ಈಗ ಅವರು ‘ಟಾಕ್ಸಿಕ್’ ಮೂಲಕ ಅನೇಕ ಕನ್ನಡಿಗರಿಗೆ ಕೆಲಸ ಕೊಟ್ಟಿದ್ದಾರೆ. ಅದನ್ನು ಕಂಡು ಹೊಗಳಿರುವ ಯೋಗರಾಜ್ ಭಟ್ ಅವರು, ‘ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ. ದೊಡ್ಡ ಸ್ಟುಡಿಯೋದಲ್ಲಿ ಕನ್ನಡಿಗರನ್ನು ನೋಡಿ ನನಗೆ ಸಂತೋಷ ಆಯಿತು. ಇಡೀ ಕರ್ನಾಟಕವನ್ನು ಇಲ್ಲಿಗೆ ಶಿಫ್ಟ್ ಮಾಡಿಕೊಂಡಿದ್ದಾನೆ. ನಾನು ನೋಡಿರುವ ಆತನ ಹಠ ಇಂದು-ನಿನ್ನೆಯದಲ್ಲ’ ಎಂದು ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉಕ್ರೇನ್ ಮೇಲೆ ರಷ್ಯಾ ಪರಮಾಣು ಬಾಂಬ್ ಹಾಕದಂತೆ ಮೋದಿ ತಡೆದಿದ್ದರು; ಪೋಲೆಂಡ್ ಸಚಿವರಿಂದ ಮಹತ್ವದ ಬಹಿರಂಗ – Kannada News | PM Narendra Modi Stopped Putin From attacking Ukraine with nuclear bomb In 2022 Polish Minister said

ನವದೆಹಲಿ, ಜುಲೈ 14: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಮಾತುಗಳಿಗೆ ಬಹಳ ಗೌರವ ನೀಡುತ್ತಾರೆ. ಅಲ್ಲದೆ, ರಷ್ಯಾದ ಮೇಲೆ ಪ್ರಭಾವ ಬೀರಬಲ್ಲ ವಿಶ್ವದ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಪ್ರಮುಖವಾದುದಾಗಿದೆ ಎಂದು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಶೆವ್ಸ್ಕಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತದ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ ಎಂದ ಪೋಲೆಂಡ್ ಸಚಿವ, 2022ರ ಕೊನೆಯಲ್ಲಿ ನಡೆದ ಒಂದು ಪ್ರಮುಖ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಉಕ್ರೇನ್ ವಿರುದ್ಧ ‘ಟ್ಯಾಕ್ಟಿಕಲ್’ ಪರಮಾಣು ಅಸ್ತ್ರಗಳನ್ನು ಬಳಸದಂತೆ ರಷ್ಯಾವನ್ನು ಒಪ್ಪಿಸುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದರು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಅತ್ಯಂತ ಗೌರವಾನ್ವಿತ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ ಬಾರ್ಟೋಶೆವ್ಸ್ಕಿ, “ಪ್ರಧಾನಿ ನರೇಂದ್ರ ಮೋದಿ ಜಗತ್ತಿಗೆ ಪರಿಚಿತವಿರುವ ಅತ್ಯಂತ ಪ್ರಭಾವಿ ರಾಜತಾಂತ್ರಿಕರಾಗಿದ್ದಾರೆ. ಭಾರತವು ರಷ್ಯಾದೊಂದಿಗೆ ಸುದೀರ್ಘ ಮತ್ತು ಐತಿಹಾಸಿಕ ಸಂಬಂಧವನ್ನು ಹೊಂದಿದೆ. ರಷ್ಯಾದ ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿ ತಮಗೆ ಹೇಳುವ ಮಾತುಗಳನ್ನು ಅತ್ಯಂತ ಸೂಕ್ಷ್ಮವಾಗಿ ಆಲಿಸುತ್ತಾರೆ ಮತ್ತು ಅದಕ್ಕೆ ಮನ್ನಣೆ ನೀಡುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: ರಷ್ಯಾಗೆ ಭಾರತವೇ ಆಸರೆ, ಡ್ರೋನ್ ದಾಳಿಯಿಂದ ತತ್ತರಿಸಿ ಪೆಟ್ರೋಲ್ ಖರೀದಿಗೆ ಮುಂದಾದ ಪುಟಿನ್ ಸರ್ಕಾರ

ರಷ್ಯಾ ಅಧ್ಯಕ್ಷ ಪುಟಿನ್ ಅವರ ಮೇಲೆ ನಿಜವಾದ ಪ್ರಭಾವ ಬೀರಬಲ್ಲ ಮತ್ತು ಒತ್ತಡ ಹೇರಬಲ್ಲ ವಿಶ್ವದ ಕೆಲವೇ ಕೆಲವು ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರಾಗಿದ್ದಾರೆ. ಉಕ್ರೇನ್ ಮೇಲಿನ ಯುದ್ಧ ನಿಲ್ಲಿಸುವಂತೆ ಅಮೆರಿಕ ಅಥವಾ ಯುರೋಪಿಯನ್ ಒಕ್ಕೂಟ ಹೇಳುವುದಕ್ಕಿಂತಲೂ ರಷ್ಯಾವನ್ನು ವಿರೋಧಿಸದ ದೇಶಗಳು ಹೇಳುವ ಮಾತುಗಳಿಗೆ ಮಾಸ್ಕೋದಲ್ಲಿ ಹೆಚ್ಚಿನ ತೂಕ ಇರುತ್ತದೆ ಎಂದು ಬಾರ್ಟೋಶೆವ್ಸ್ಕಿ ಅಭಿಪ್ರಾಯಪಟ್ಟಿದ್ದಾರೆ.

“ಯುದ್ಧದ ಉಲ್ಬಣವನ್ನು ತಡೆಯಲು ಕೇವಲ ಭಾರತದ ಪ್ರಧಾನಿ ಮೋದಿ ಮಾತ್ರವಲ್ಲದೆ, ಚೀನಾದ ಕ್ಸಿ ಜಿನ್‌ಪಿಂಗ್ ಕೂಡ ಬಯಸುತ್ತಿದ್ದಾರೆ. ರಷ್ಯಾಗೆ ಶತ್ರುಗಳಂತೆ ಕಾಣದ ದೇಶಗಳಿಂದ ಇಂತಹ ಶಾಂತಿಯ ಕರೆಗಳು ಬಂದಾಗ ಅದರ ಪ್ರಭಾವ ಹೆಚ್ಚಿರುತ್ತದೆ. ಈ ವಿಷಯದಲ್ಲಿ ಭಾರತದ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದಿದ್ದಾರೆ.

“ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲು ಯಾವುದೇ ದೇಶ ಪ್ರಯತ್ನಿಸಿದರೂ ಅದು ವ್ಯರ್ಥ ಎಂಬುದನ್ನು ಜಗತ್ತು ಈಗಾಗಲೇ ಅರ್ಥಮಾಡಿಕೊಂಡಿದೆ. ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗಾಗಿ ಎಲ್ಲಾ ದೇಶಗಳೊಂದಿಗೆ ಸಂಬಂಧವನ್ನು ವೃದ್ಧಿಸಿಕೊಳ್ಳುತ್ತಿರುವುದಕ್ಕೆ ನಮಗೆ ಸಂತೋಷವಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಷ್ಯಾಗೆ ಭಾರತವೇ ಆಸರೆ, ಡ್ರೋನ್ ದಾಳಿಯಿಂದ ತತ್ತರಿಸಿ ಪೆಟ್ರೋಲ್ ಖರೀದಿಗೆ ಮುಂದಾದ ಪುಟಿನ್ ಸರ್ಕಾರ

“ಆರಂಭದಲ್ಲಿ ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಾವು ಟೀಕಿಸಿದ್ದೆವು. ಮಾರುಕಟ್ಟೆ ಬೆಲೆಗಿಂತ ಶೇ. 40ರಷ್ಟು ರಿಯಾಯಿತಿಯಲ್ಲಿ ತೈಲ ಸಿಗುತ್ತಿರುವುದರಿಂದ ಭಾರತ ಅದನ್ನು ಖರೀದಿಸುತ್ತಿದೆ ಎಂಬ ಆರ್ಥಿಕ ಕಾರಣ ನಮಗೆ ಅರ್ಥವಾಗಿತ್ತು. ಆದರೆ, ಆ ಹಣವು ರಷ್ಯಾದ ಯುದ್ಧದ ಆರ್ಥಿಕತೆಗೆ ನೆರವಾಗುತ್ತಿದೆ ಎಂಬ ಆತಂಕ ನಮಗಿತ್ತು. ಈಗ ಎರಡೂ ದೇಶಗಳು ಪರಸ್ಪರರ ಪರಿಸ್ಥಿತಿ ಮತ್ತು ನಿಲುವುಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿವೆ. ಹಾಗಾಗಿ ಈ ವಿಷಯವು ಈಗ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಮೂಡಿಸಿಲ್ಲ” ಎಂದು ಪೋಲೆಂಡ್ ನಾಯಕ ತಿಳಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 8:48 pm, Tue, 14 July 26

Source link

IND vs ENG: 5 ರನ್​​ಗಳ ಅಂತರದಲ್ಲಿ ಪೆವಿಲಿಯನ್‌ ಸೇರಿಕೊಂಡ ರೋಹಿತ್, ಕೊಹ್ಲಿ

Source link

ಮಳೆ ವೇಳೆ ಗೋಕರ್ಣ ದೇಗುಲದ ಗರ್ಭಗುಡಿಗೆ ನುಗ್ಗುತ್ತಿರುವ ಕೊಳಚೆ ನೀರು: ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್​​ ಸೂಚನೆ – Kannada News | Sewage Water Enters Gokarna Mahabaleshwara Temple Sanctum; CM DK Shivakumar Orders Immediate Action

ಬೆಂಗಳೂರು/ಕುಮಟಾ, ಜುಲೈ 14: ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ ಇಲಾಖೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ದೇವಾಲಯದ ಅಭಿಷೇಕದ ತೀರ್ಥ ಹೊರಹೋಗುವ ಸೋಮಸೂತ್ರವು ಸಂಗಮ ನಾಲೆಗೆ ಸೇರುವ ಸ್ಥಳದಲ್ಲಿ ಗೇಟ್ ವಾಲ್ವ್ ಅಳವಡಿಸಿ, ಮಳೆಗಾಲದಲ್ಲಿ ಹೊರಗಿನ ಕೊಳಚೆ ನೀರು ದೇವಾಲಯದ ಒಳಭಾಗಕ್ಕೆ ಪ್ರವೇಶಿಸದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.

‘ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ’

ಈ ಸಂಬಂಧ ಪರಿವರ್ತನ ಗೋಕರ್ಣ ಸಂಸ್ಥೆ ಸಲ್ಲಿಸಿದ್ದ ಮನವಿ ಪತ್ರ ಹಾಗೂ ದೇವಾಲಯದೊಳಗೆ ಕೊಳಚೆ ನೀರು ನಿಂತಿರುವ ಚಿತ್ರಗಳನ್ನು ಪರಿಶೀಲಿಸಿರುವ ಸಿಎಂ, ಈ ಕಾಮಗಾರಿಯನ್ನು ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ ಕೂಡಲೇ ಕೈಗೆತ್ತಿಕೊಳ್ಳಿ ಎಂದು ಮನವಿ ಪತ್ರದ ಮೇಲೆಯೇ ಸೂಚನೆ ಬರೆದಿದ್ದಾರೆ. ಮಳೆಗಾಲ ಆರಂಭವಾದ ಬಳಿಕ ಎರಡು ಬಾರಿ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ನೀರು ನುಗ್ಗಿ ಭಕ್ತರು ಹಾಗೂ ದೇವಾಲಯ ಆಡಳಿತಕ್ಕೆ ತೊಂದರೆಯಾದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮಳೆ ಆರ್ಭ; ಗೋಕರ್ಣ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನುಗ್ಗಿದ ನೀರು, ಹಲವೆಡೆ ಸಂಚಾರ ವ್ಯತ್ಯಯ

ಈ ವೇಳೆ ಉಪಸ್ಥಿತರಿದ್ದ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ನಿವೇದಿತ್ ಆಳ್ವಾ, ದೇವಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದ್ದಾರೆ. ಇದೇ ವೇಳೆ ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ, ಗೋಕರ್ಣದ ರಸ್ತೆ ಅಭಿವೃದ್ಧಿ ಹಾಗೂ ಕೋಟಿತೀರ್ಥ ಅಭಿವೃದ್ಧಿ ಯೋಜನೆಗಳ ವಿಷಯವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನಿವೇದಿತ್ ಆಳ್ವಾ, ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆರಂಭದಿಂದಲೂ ವಿಶೇಷ ಕಾಳಜಿ ಇದ್ದು, ಮೊದಲ ಹಂತವಾಗಿ ದೇವಾಲಯಕ್ಕೆ ಎದುರಾಗಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ ಮಾತನಾಡಿ, ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಲಿದ್ದು, ಮುಂದಿನ ದಿನಗಳಲ್ಲಿ ಗೋಕರ್ಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ಈ ಅಭಿವೃದ್ಧಿ ಕಾರ್ಯಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಮಿಸ್ಟರ್ ಆ್ಯಂಡ್ ಮಿಸಸ್ ರಾಜಾಹುಲಿ’ ಸಿನಿಮಾ ತಂಡಕ್ಕೆ ಸಾಥ್ ನೀಡಿದ ರಾಮಲಿಂಗಾ ರೆಡ್ಡಿ – Kannada News | Minister Ramalinga Reddy graces Mr And Mrs Rajahuli Kannada movie Audio launch

ಯಶ್ ನಟನೆಯ ‘ರಾಜಾಹುಲಿ’ (Rajahuli) ಸಿನಿಮಾ ಬಗ್ಗೆ ಎಲ್ಲರಿಗೂ ಗೊತ್ತು. ಈಗ ಅದೇ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ‘ರಾಜಾಹುಲಿ’ ಸಿನಿಮಾಗೆ ಅಸಿಸ್ಟೆಂಟ್ ಆಗಿ ಕೆಲಸ ಮಾಡಿದ್ದ ಹೊನ್ನರಾಜ್ ಅವರು ಈಗ ‘ಮಿಸ್ಟರ್ ಆ್ಯಂಡ್ ಮಿಸಸ್ ರಾಜಾಹುಲಿ’ (Mr And Mrs Rajahuli) ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ಮೂಲಕ ಅವರು ಹೀರೋ ಹಾಗೂ ನಿರ್ದೇಶಕನಾಗಿದ್ದಾರೆ. ಅಲ್ಲದೇ, ಅವರೇ ನಿರ್ಮಾಣ ಕೂಡ ಮಾಡಿದ್ದಾರೆ. ರಾಮಲಿಂಗಾ ರೆಡ್ಡಿ (Ramalinga Reddy) ಅವರು ಈ ಸಿನಿಮಾಗೆ ಸಾಥ್ ನೀಡಿದ್ದಾರೆ.

‘ಮಿಸ್ಟರ್ ಆ್ಯಂಡ್ ಮಿಸಸ್ ರಾಜಾಹುಲಿ’ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ನೆನಪಿರಲಿ’ ಪ್ರೇಮ್ ಅವರು ಹಾಡು ಬಿಡುಗಡೆ ಮಾಡಿದರು. ಎಂ.ಜಿ. ರಾಮಮೂರ್ತಿ, ಸಾರಾ ಗೋವಿಂದು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಚಿತ್ರತಂಡಕ್ಕೆ ಶುಭ ಕೋರಿದ ರಾಮಲಿಂಗಾ ರೆಡ್ಡಿ:

ಈ ವೇಳೆ ವೇದಿಕೆಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು ಚಿತ್ರತಂಡಕ್ಕೆ ಶುಭ ಕೋರಿದರು. ‘ಹೊನ್ನರಾಜ್ ಅವರು ಈ ಸಿನಿಮಾದಲ್ಲಿ ನಟನೆ, ನಿರ್ದೇಶನದ ಜತೆಗೆ ಚಿತ್ರದ ನಿರ್ಮಾಣ ಕೂಡ ಮಾಡಿದ್ದಾರೆ. ಸಿನಿಮಾ ಚೆನ್ನಾಗಿ ಪ್ರದರ್ಶನಗೊಂಡು ಹಾಕಿದ ಹಣದ ನಾಲ್ಕು ಪಟ್ಟು ವಾಪಸ್ ಬರಲಿ’ ಎಂದು ಅವರು ವಿಶ್ ಮಾಡಿದರು. ಪ್ರೇಮ್ ಮಾತನಾಡಿ, ‘ಹೊನ್ನರಾಜ್ ನನಗೆ ಜೂನಿಯರ್. ಅವರಿಗೆ ಒಳ್ಳೆಯ ಫಲ ಸಿಗಲಿ’ ಎಂದರು.

ಬೆಂಬಲ ಸೂಚಿಸಿದ ಸಾರಾ ಗೋವಿಂದು:

ಸಾರಾ ಗೋವಿಂದು ಅವರು ಮಾತನಾಡಿ, ‘ಸಿರಿವಂತ ರಾಜಕಾರಣಿಯ ಕೈಯಲಿ ಆಡಿಯೋ ಬಿಡುಗಡೆ ಮಾಡಿಸಿದ್ದೀರಿ. ಸಚಿವರ ಕೈಗುಣ ಚೆನ್ನಾಗಿದೆ. ನಾವೆಲ್ಲ ನಿಮ್ಮ ಬೆನ್ನೆಲುಬಾಗಿರುತ್ತೇವೆ. ರಿಲೀಸ್ ಸಮಯದಲ್ಲಿ ನಿಮ್ಮ ಜತೆ ಇರುತ್ತೇವೆ’ ಎಂದರು. ‘ಶ್ರೀ ಸತ್ಯಲಕ್ಷ್ಮಿ ಕ್ರಿಯೇಶನ್ಸ್’ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ಹಾಡುಗಳಿಗೆ ವಿನು ಮನಸು ಸಂಗೀತ ನೀಡಿದ್ದಾರೆ. ಶಿವಪುತ್ರ ಅವರು ಛಾಯಾಗ್ರಹಣ ಮಾಡಿದ್ದಾರೆ. ಶೃತಿ ಬಬಿತಾ, ರೂಪಾ, ಮೈಸೂರು ಮಂಜುಳಾ , ರೇಖಾದಾಸ್, ಮಂಜಣ್ಣ, ಗಿರೀಶ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಜಾಹುಲಿ’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಿದ ವೀರೇಂದ್ರ ಹೆಗ್ಗಡೆ

ಸಿನಿಮಾ ಕಥೆ ಬಗ್ಗೆ ನಿರ್ದೇಶಕ ಮಾಹಿತಿ:

ಸಿನಿಮಾ ಬಗ್ಗೆ ನಿರ್ದೇಶಕ ಹೊನ್ನರಾಜ್ ಅವರು ಮಾಹಿತಿ ಹಂಚಿಕೊಂಡರು. ‘ಇದು ಹಳ್ಳಿ ಸೊಗಡಿನ ಸಿನಿಮಾ. ಯಶ್ ಅಭಿಮಾನಿಯಾದ ನಾಯಕ ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುತ್ತಾನೆ. ಹಳ್ಳಿಗೆ ಒಳ್ಳೆಯದನ್ನು ಮಾಡಲು ಹೋಗಿ ಆತ ಏನೆಲ್ಲ ತೊಂದರೆ ಅನುಭವಿಸುತ್ತಾನೆ ಎಂಬುದನ್ನು ಕೌಟುಂಬಿಕ ಕಥೆಯೊಂದಿಗೆ ಹೇಳಲು ಪ್ರಯತ್ನಿಸಿದ್ದೇನೆ. ಮದ್ದೂರು, ಹುಳಿಯಾರು, ಚಿಕ್ಕನಾಯಕನಾಹಳ್ಳಿ, ಶ್ರೀರಂಗಪಟ್ಟಣದ ಸುತ್ತಮುತ್ತ 65 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರೈತರೇ ಗಮನಸಿ: ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ – Kannada News | Monsoon Crisis: Weather Experts Warn of Dry Spell for Another Week; Advise Karnataka Farmers to Delay Sowing

ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರ ಹಿನ್ನಡೆ ನಡುವೆ ತಜ್ಞರು ಮತ್ತೊಂದು ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನೂ ‌ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗೋದಿಲ್ಲ. ಜುಲೈ ಕೊನೆಯ ವಾರದಲ್ಲಿ ಮಳೆಯಾದರೂ ಕೂಡ ಅದು ಸಾಧಾರಣವಾಗಿ ಆಗಲಿದೆ. ಹೀಗಾಗಿ ಮಳೆ ನಂಬಿ ಬಿತ್ತನೆ ಬೀಜ ಹಾಕುವ ಅನ್ನದಾತರು ಕಾಯಬೇಕಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬೆಂಗಳೂರು ಸೇರಿ ಸುತ್ತಮುತ್ತ ಜಿಲ್ಲೆಗಳಾದ‌ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಶೇ. 50ಕ್ಕಿಂತ ಹೆಚ್ಚು ಮಳೆ ಕೊರತೆ ಉಂಟಾಗಿದೆ. ಕರಾವಳಿಯಲ್ಲಿ ಶೇ. 15-30, ಉತ್ತರ ಒಳನಾಡಿನಲ್ಲಿ ಶೇ. 15-20ರಷ್ಟು ಕಡಿಮೆ ವರ್ಷಧಾರೆಯಾಗಿದೆ ಎಂದವರು ತಿಳಿಸಿದ್ದಾರೆ.

ಪ್ರಾದೇಶಿಕವಾರು ಮಳೆ ಕೊರತೆ ಎಷ್ಟು?

ಪ್ರದೇಶ ಮಳೆ ಕೊರತೆ
ಕರಾವಳಿ 15-30%
ಉತ್ತರ ಒಳನಾಡು 15-20%
ದಕ್ಷಿಣ ಒಳನಾಡು 40-50%

ಇದನ್ನೂ ಓದಿ: ಕರ್ನಾಟಕದಲ್ಲಿ ದುರ್ಬಲಗೊಂಡ ಮುಂಗಾರು; ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ, ರಾಯಚೂರಲ್ಲಿ ದಾಖಲೆ

ಈ ನಡುವೆ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದ್ದು, ‌ಜುಲೈ ಕೊನೆಯಲ್ಲಿ ಮಳೆಯಾಗಬಹುದಾದರೂ ಅದು ಸಾಧಾರಣವಾಗಿರಲಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳ ಶೇ. 25ಕ್ಕಿಂತ ಕಡಿಮೆ ಪ್ರದೇಶದಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಇದನ್ನು ಬಿಟ್ಟರೆ ರಾಜ್ಯದ ಉಳಿದೆಡೆ ಮಳೆ ಸಾಧ್ಯತೆ ಇಲ್ಲ. ಇನ್ನೂ ಒಂದು ವಾರ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್​​ನಲ್ಲಿ ಮಳೆ ಚೇತರಿಕೆ ಆಗಬಹುದು. ಹೀಗಿದ್ದರೂ ನಿರೀಕ್ಷೆಯಷ್ಟು ವರ್ಷಧಾರೆ ಆಗಲ್ಲ. ಹೀಗಾಗಿ ಮಳೆ ಆಧಾರಿತ ಬೇಸಾಯ ಮಾಡುವ ರೈತರು ತಮ್ಮ ಹೊಲದ ಮಣ್ಣಿನ ತೇವವನ್ನು ನೋಡಿಕೊಂಡು ಬಿತ್ತನೆ ಮಾಡಬಹುದು. ಇಲ್ಲವೇ ಕಾಯುವುದು ಒಳ್ಳೆಯದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಜೂನ್​​ ತಿಂಗಳಲ್ಲಿಯಂತೂ ಉತ್ತಮ ಮಳೆಯಾಗಿಲ್ಲ. ಹೀಗಾಗಿ ಜುಲೈನಲ್ಲಾದರೂ ವರುಣ ಕೃಪೆ ತೋರಿದರೆ ಬಿತ್ತನೆ ಮಾಡಬಹುದು ಎಂಬ ನಿರೀಕ್ಷೇಯಲ್ಲಿದ್ದ ರೈತರಿಗೆ ತಜ್ಞರ ಈ ಎಚ್ಚರಿಕೆ ಮತ್ತಷ್ಟು ನಿರಾಸೆ ಮೂಡಿಸಿದೆ. ಮಳೆ ಕೊರತೆ ಕಾರಣ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ನಡುವೆ ಬೆಳೆಗೆ ನೀರು ತರೋದು ಎಲ್ಲಿಂದ? ಪರಿಸ್ಥಿತಿ ಹೀಗೇ ಮುಂದುವರಿದಲ್ಲಿ ಮುಂದಿನ ಬದುಕು ಹೇಗೆ ಎಂಬ ಚಿಂತೆ ಅನ್ನದಾತರನ್ನು ಕಾಡತೊಡಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪದೇ ಪದೇ ತುಟಿ ಒಡೆಯುವುದು ಕೇವಲ ಹವಾಮಾನದಿಂದಲ್ಲ ಇದಕ್ಕೆ ಈ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು – Kannada News | Cracked Lips Beyond Weather: When It’s Time to Check Your Nutrition

ತುಟಿಗಳು ಒಣಗಿ, ಪದೇ ಪದೇ ಒಡೆಯುವುದು ಸಾಮಾನ್ಯವಾಗಿ ಮಳೆಗಾಲ ಮತ್ತು ಚಳಿಗಾಲದಲ್ಲಿ ಕಂಡುಬರುವ ಸಮಸ್ಯೆ ಎಂದು ಹಲವರು ಭಾವಿಸುತ್ತಾರೆ. ಆದರೆ ಲಿಪ್‌ಬಾಮ್ ಹಚ್ಚಿದರೂ ಸಮಸ್ಯೆ ಮತ್ತೆ ಮತ್ತೆ ಕಂಡುಬರುತ್ತಿದ್ದರೆ ಅಥವಾ ತುಟಿಗಳಲ್ಲಿ ನೋವು, ಉರಿ, ರಕ್ತಸ್ರಾವ ಕಾಣಿಸಿಕೊಳ್ಳುತ್ತಿದ್ದರೆ ಅದನ್ನು ನಿರ್ಲಕ್ಷಿಸಬಾರದು. ಆರೋಗ್ಯ ತಜ್ಞರ ಪ್ರಕಾರ, ಇದು ದೇಹದಲ್ಲಿ ವಿಟಮಿನ್ ಬಿ ಸಮೂಹ, ಕಬ್ಬಿಣ (Iron), ಜಿಂಕ್ ಅಥವಾ ನೀರಿನ ಕೊರತೆಯ ಸೂಚನೆಯಾಗಿರಬಹುದು. ಕೆಲವು ಸಂದರ್ಭಗಳಲ್ಲಿ ಅಲರ್ಜಿ, ಚರ್ಮದ ಸಮಸ್ಯೆಗಳು ಅಥವಾ ಇತರ ಆರೋಗ್ಯ ತೊಂದರೆಗಳೂ ಕಾರಣವಾಗಬಹುದು.

ತುಟಿಗಳು ಪದೇ ಪದೇ ಒಡೆಯಲು ಕಾರಣವೇನು?

ತುಟಿಗಳ ಮೇಲ್ಭಾಗದಲ್ಲಿ ಎಣ್ಣೆ ಗ್ರಂಥಿಗಳು (Oil Glands) ಇಲ್ಲದಿರುವುದರಿಂದ ಅವು ಬೇಗ ಒಣಗುತ್ತವೆ. ಕಡಿಮೆ ನೀರು ಕುಡಿಯುವುದು, ಆಗಾಗ ತುಟಿಯನ್ನು ನಾಲಿಗೆಯಿಂದ ನೆಕ್ಕುವುದು, ತೀವ್ರ ಬಿಸಿಲು, ತಂಪಾದ ಗಾಳಿ, ಏರ್‌ಕಂಡೀಷನರ್ ವಾತಾವರಣ ಹಾಗೂ ಕೆಲವು ಔಷಧಿಗಳ ಬಳಕೆಯಿಂದ ಸಮಸ್ಯೆ ಹೆಚ್ಚಾಗಬಹುದು. ಇದರ ಜೊತೆಗೆ ವಿಟಮಿನ್ ಬಿ2 (ರಿಬೋಫ್ಲೇವಿನ್), ಬಿ6, ಬಿ12, ಫೋಲೇಟ್ ಹಾಗೂ ಕಬ್ಬಿಣದ ಕೊರತೆ ಇದ್ದರೆ ತುಟಿಗಳಲ್ಲಿ ಬಿರುಕು, ಉರಿ ಮತ್ತು ನೋವು ಕಾಣಿಸಬಹುದು.

ತುಟಿಗಳು ಒಡೆಯುವುದನ್ನು ತಡೆಯಲು ಯಾವ ರೀತಿಯ ಆಹಾರ ಸೇವಿಸಬೇಕು?

ಸಾಮಾನ್ಯವಾಗಿ ತುಟಿಗಳ ಆರೋಗ್ಯ ಕಾಪಾಡಲು ಪೌಷ್ಟಿಕ ಆಹಾರ ಬಹಳ ಮುಖ್ಯ. ಹಸಿರು ಸೊಪ್ಪು, ಬೇಳೆಕಾಳುಗಳು, ಮೊಟ್ಟೆ, ಹಾಲು, ಮೊಸರು, ಸಂಪೂರ್ಣ ಧಾನ್ಯಗಳು, ಮೀನು, ಕೋಳಿ, ಒಣಹಣ್ಣುಗಳು ಹಾಗೂ ಬೀಜಗಳನ್ನು ಆಹಾರದಲ್ಲಿ ಸೇರಿಸಬಹುದು. ಸಾಕಷ್ಟು ನೀರು ಕುಡಿಯುವುದು ದೇಹವನ್ನು ಹೈಡ್ರೇಟ್ ಆಗಿರಿಸಿ ತುಟಿಗಳ ಒಣಗುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ

ಕೆಲವರು ತುಟಿ ಒಣಗಿದಾಗ ಪದೇ ಪದೇ ನಾಲಿಗೆಯಿಂದ ನೆಕ್ಕುತ್ತಾರೆ. ಆದರೆ ಈ ಅಭ್ಯಾಸ ತುಟಿಗಳು ಇನ್ನಷ್ಟು ಒಣಗಿಸುವ ಸಾಧ್ಯತೆ ಇರುತ್ತದೆ. ಜೊತೆಗೆ ಮೆಂಥಾಲ್, ಕರ್ಪೂರ ಅಥವಾ ಹೆಚ್ಚು ಸುಗಂಧ ಹೊಂದಿರುವ ಲಿಪ್‌ಪ್ರಾಡಕ್ಟ್‌ಗಳು ಕೆಲವರಲ್ಲಿ ಅಲರ್ಜಿ ಉಂಟುಮಾಡಬಹುದು. ಆದ್ದರಿಂದ SPF ಹೊಂದಿರುವ ಅಥವಾ ಪೆಟ್ರೋಲಿಯಂ ಜೆಲ್ಲಿ ಆಧಾರಿತ ಲಿಪ್‌ಬಾಮ್ ಬಳಸುವುದು ಉತ್ತಮ ಆಯ್ಕೆಯಾಗಿದೆ.

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ತುಟಿಗಳ ಬಿರುಕುಗಳು ಹಲವು ವಾರಗಳಾದರೂ ಗುಣವಾಗದಿದ್ದರೆ, ಪದೇ ಪದೇ ರಕ್ತಸ್ರಾವವಾಗುತ್ತಿದ್ದರೆ, ಸೋಂಕಿನ ಲಕ್ಷಣಗಳು ಕಂಡುಬಂದರೆ ಅಥವಾ ಬಾಯಿಯ ಮೂಲೆಗಳಲ್ಲಿ ನಿರಂತರ ಗಾಯಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಇಲ್ಲವಾದಲ್ಲಿ ರಕ್ತ ಪರೀಕ್ಷೆ ಮೂಲಕ ಪೌಷ್ಟಿಕಾಂಶಗಳ ಕೊರತೆ ಅಥವಾ ಇತರ ಆರೋಗ್ಯ ಸಮಸ್ಯೆಗಳಿರುವುದನ್ನು ವೈದ್ಯರು ಪರಿಶೀಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಾರೆ.

ಗಮನಿಸಿ: ತುಟಿಗಳು ಒಡೆಯುವುದು ಸಾಮಾನ್ಯ ಸಮಸ್ಯೆಯಾಗಿದ್ದರೂ, ಅದು ದೇಹದೊಳಗಿನ ಪೌಷ್ಟಿಕಾಂಶ ಕೊರತೆಯ ಸಂಕೇತವೂ ಆಗಿರಬಹುದು. ಆದ್ದರಿಂದ ಕೇವಲ ಲಿಪ್‌ಬಾಮ್ ಬಳಕೆಗೆ ಸೀಮಿತವಾಗದೆ, ಸಮತೋಲನ ಆಹಾರ ಮತ್ತು ಉತ್ತಮ ಜೀವನಶೈಲಿಯತ್ತ ಗಮನ ಹರಿಸುವುದು ಆರೋಗ್ಯಕರ ಮಾರ್ಗವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಿಒಕೆಯಲ್ಲಿ ತೀವ್ರಗೊಂಡ ಹಿಂಸಾಚಾರ; ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿಗೆ 6 ಜನ ಬಲಿ – Kannada News | 6 people Killed After Pakistan army Open Fire During Clashes In PoK

ಮುಜಾಫರಾಬಾದ್, ಜುಲೈ 14: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ದಿನೇದಿನೇ ಹೆಚ್ಚುತ್ತಿರುವ ಜನಾಕ್ರೋಶವನ್ನು ಹತ್ತಿಕ್ಕಲು ಪಾಕಿಸ್ತಾನಿ ಭದ್ರತಾ ಪಡೆಗಳು ನಡೆಸಿದ ಭೀಕರ ದಾಳಿಯಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ರಾವಲಕೋಟ್‌ ನಗರದ ಹೊಸ ಬಸ್ ಟರ್ಮಿನಲ್ ಬಳಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ನಾಗರಿಕರ ನಡುವೆ ತೀವ್ರ ಘರ್ಷಣೆ ನಡೆದಿದೆ. ಈ ವೇಳೆ ಪಾಕ್ ಪಡೆಗಳು ನಡೆಸಿದ ಗುಂಡಿನ ದಾಳಿಗೆ 6 ಜನ ಬಲಿಯಾಗಿದ್ದಾರೆ.

ಮುಜಾಫರಾಬಾದ್ ಸೇರಿದಂತೆ ಪಿಒಕೆಯ ಹಲವು ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಬೃಹತ್ ರ‍್ಯಾಲಿ ಹಮ್ಮಿಕೊಂಡಿದ್ದರು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಮೊದಲು ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗಿಸಿದವು. ಆಕ್ರೋಶಗೊಂಡ ಜನ ಕಲ್ಲು ತೂರಾಟ ನಡೆಸಿದಾಗ, ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನೇರ ಗುಂಡಿನ ದಾಳಿ ಆರಂಭಿಸಿದವು.

ಈ ಘರ್ಷಣೆಯಲ್ಲಿ ಸಾವನ್ನಪ್ಪಿದವರ ಪೈಕಿ ಜಹೀದ್ ಮುಘಲ್, ಜಾಫರ್ ಮುಘಲ್, ಅರ್ಸಲಾನ್ ಅಕ್ಬರ್ ಮತ್ತು ರಾವಲಕೋಟ್‌ನ ಮಟಿಯಾಲ್ ಮೀರಾ ಬಸ್ ಟರ್ಮಿನಲ್ ಬಳಿ ಮೃತಪಟ್ಟ ವಾಜಿದ್ ಹಯಾತ್ ಅವರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: 38 ಬೇಡಿಕೆ, 48 ಗಂಟೆಯ ಗಡುವು; ಪಿಒಕೆಯಲ್ಲಿ ಮತ್ತೆ ಸಂಘರ್ಷದ ಭೀತಿ

ವೈಟ್ ಹೌಸ್ ಮುಂಭಾಗ ಪ್ರತಿಭಟನೆ:

ಈ ರಕ್ತಪಾತ ನಡೆಯುವ ಕೇವಲ ಒಂದು ದಿನದ ಮುಂಚೆ, ಅಮೆರಿಕದಲ್ಲಿ ವಾಸಿಸುತ್ತಿರುವ ಪಿಒಕೆ (PoK) ಮೂಲದ ನೂರಾರು ನಾಗರಿಕರು ವಾಷಿಂಗ್ಟನ್‌ನ ಶ್ವೇತಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದರು. ಪಿಒಕೆಯಲ್ಲಿ ಮಾನವೀಯ ಬಿಕ್ಕಟ್ಟು ತೀವ್ರಗೊಂಡಿದ್ದು, ನಾಗರಿಕ ಪ್ರದೇಶಗಳಿಂದ ಪಾಕ್ ಮಿಲಿಟರಿಯನ್ನು ತಕ್ಷಣ ಹಿಂಪಡೆಯಬೇಕು ಮತ್ತು ನಿಶ್ಯಸ್ತ್ರ ನಾಗರಿಕರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು.

ಭಾರತಕ್ಕೆ ಮನವಿ:

ಪಿಒಕೆಯಲ್ಲಿ ಸುಮಾರು 40 ಲಕ್ಷ ಜನರನ್ನು ಇಂಟರ್ನೆಟ್ ಸ್ಥಗಿತಗೊಳಿಸುವ ಮೂಲಕ ಜಗತ್ತಿನ ಸಂಪರ್ಕದಿಂದ ದೂರ ಇಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ತಮಗೆ ಸಹಾಯ ಮಾಡಲು ಮತ್ತು ಮಾನವೀಯ ನೆರವು ನೀಡಲು ಮುಂದೆ ಬರುವಂತೆ ಭಾರತಕ್ಕೆ ಮನವಿ ಮಾಡಿದ್ದಾರೆ. ಮಾನವೀಯ ನೆರವು ತಲುಪಿಸಲು ಪೂಂಚ್ ಮತ್ತು ದೋಡಾ ಸೆಕ್ಟರ್‌ಗಳ ಮೂಲಕ ‘ಲೈನ್ ಆಫ್ ಕಂಟ್ರೋಲ್’ (LoC) ಅನ್ನು ಮುಕ್ತಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದರಿಂದ ಪಾಕಿಸ್ತಾನ ಇನ್ನಷ್ಟು ಕೋಪಗೊಂಡಿದೆ.

ಇದನ್ನೂ ಓದಿ: ನಾವು ಪಾಕಿಸ್ತಾನಕ್ಕೆ ಸೇರಿದವರಲ್ಲ; ಇಸ್ಲಾಮಾಬಾದ್ ವಿರುದ್ಧ ಪಿಒಕೆ ಜನರ ಪ್ರತಿಭಟನೆ

ಪಿಒಕೆಯಲ್ಲಿ ಕೇವಲ ಮಿಲಿಟರಿ ದೌರ್ಜನ್ಯವಷ್ಟೇ ಅಲ್ಲದೆ, ಆಹಾರದ ತೀವ್ರ ಬಿಕ್ಕಟ್ಟು ಕೂಡ ಜನರನ್ನು ಕಂಗಾಲು ಮಾಡಿದೆ. ಇತ್ತೀಚಿನ ಅಧ್ಯಯನಗಳ ಪ್ರಕಾರ, ಇಲ್ಲಿನ ಶೇ. 66ರಷ್ಟು ಜನಸಂಖ್ಯೆಯು ಕೃಷಿ ಮತ್ತು ಜಾನುವಾರುಗಳನ್ನು ನಂಬಿ ಬದುಕುತ್ತಿದ್ದರೂ, ಶೇ. 57ಕ್ಕೂ ಹೆಚ್ಚು ಕುಟುಂಬಗಳು ತೀವ್ರ ಆಹಾರ ಅಭದ್ರತೆಯನ್ನು ಎದುರಿಸುತ್ತಿವೆ. ಕಣಿವೆಯ ಪರ್ವತ ಪ್ರದೇಶಗಳಲ್ಲಿ ಈ ಸಮಸ್ಯೆ ಭೀಕರವಾಗಿದ್ದು, ಸುಮಾರು ಶೇ. 90ರಷ್ಟು ಕುಟುಂಬಗಳು ಹಸಿವಿನಿಂದ ಬಳಲುತ್ತಿವೆ. 5 ವರ್ಷದೊಳಗಿನ ಶೇ. 39ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಕುಂಠಿತ ಬೆಳವಣಿಗೆಗೆ ಒಳಗಾಗಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತ ಆಕ್ರೋಶ:

ಪಿಒಕೆಯಲ್ಲಿ ನಡೆಯುತ್ತಿರುವ ಘರ್ಷಣೆ ಮತ್ತು ಪಾಕಿಸ್ತಾನದ ದಮನಕಾರಿ ನೀತಿಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತೀವ್ರವಾಗಿ ಖಂಡಿಸಿದೆ. ಇದು ಪಾಕಿಸ್ತಾನ ನಡೆಸುತ್ತಿರುವ ದಶಕಗಳ ಕಾಲದ ವ್ಯವಸ್ಥಿತ ಶೋಷಣೆಯ ಪ್ರತಿಫಲ ಎಂದು ಭಾರತ ಹೇಳಿದೆ. ಜನರ ಅಹವಾಲುಗಳನ್ನು ಆಲಿಸುವ ಬದಲು ಪಾಕಿಸ್ತಾನ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ಮೇಲೂ ತೀವ್ರ ಪೊಲೀಸ್ ದೌರ್ಜನ್ಯ ಎಸಗುತ್ತಿದೆ. ಆಹಾರ ಮತ್ತು ಔಷಧಿಗಳಂತಹ ಅಗತ್ಯ ವಸ್ತುಗಳ ಪೂರೈಕೆಯನ್ನು ತಡೆದು, ಇಂಟರ್ನೆಟ್ ಸಂಪೂರ್ಣ ಸ್ಥಗಿತಗೊಳಿಸಿದೆ. ನಿಶ್ಯಸ್ತ್ರ ನಾಗರಿಕರ ಮೇಲೆ ಪ್ರಾಣಾಂತಿಕ ದಾಳಿ ನಡೆಸುತ್ತಿದ್ದು, ಇದು ಅತ್ಯಂತ ದುರದೃಷ್ಟಕರ ಎಂದು ಭಾರತ ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IND vs ENG: ಒಂದೇ ಕೈನಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದ ಕೆಎಲ್ ರಾಹುಲ್; ವಿಡಿಯೋ – Kannada News | IND vs ENG 1st ODI: KL Rahul’s Stunning Catch and India’s Bowling Dominate England

ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್‌ ತಂಡವನ್ನು 258 ರನ್​ಗಳಿಗೆ ಆಲೌಟ್ ಮಾಡಿದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲ್ಲೂ ಅದ್ಭುತ ಪ್ರದರ್ಶನ ನೀಡಿತು. ಅದರಲ್ಲೂ ಕಳೆದ ಕೆಲವು ದಿನಗಳಿಂದ ಫಿಲ್ಡಿಂಗ್ ವಿಚಾರದಲ್ಲಿ ಟೀಂ ಇಂಡಿಯಾ ಸಾಕಷ್ಟು ತಪ್ಪುಗಳನ್ನು ಮಾಡಿತ್ತು. ಇದರಿಂದಾಗಿ ಸೋಲಿನ ಬೆಲೆಯನ್ನು ತೆತ್ತಿತ್ತು. ಆದರೆ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಫಿಲ್ಡಿಂಗ್ ಎಲ್ಲರ ಗಮನ ಸೆಳೆಯಿತು. ಮೂರು ಅದ್ಭುತ ಕ್ಯಾಚ್​ಗಳನ್ನು ಫಿಲ್ಡರ್​ಗಳು ಹಿಡಿದರು. ಅದರಲ್ಲೂ ವಿಕೆಟ್ ಕೀಪರ್ ರಾಹುಲ್ (KL Rahul) ಹಿಡಿದ ಕ್ಯಾಚ್ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಅದ್ಭುತ ಕ್ಯಾಚ್ ಹಿಡಿದ ರಾಹುಲ್‌

ಸುಮಾರು 706 ದಿನಗಳ ನಂತರ ಭಾರತ ಏಕದಿನ ತಂಡದಲ್ಲಿ ಆಡುವ ಅವಕಾಶ ಪಡೆದಿದ್ದ ಆಲ್‌ರೌಂಡರ್ ಶಿವಂ ದುಬೆ ಅವರ ಬೌಲಿಂಗ್​ನಲ್ಲಿ ವಿಲ್ ಜ್ಯಾಕ್ಸ್ ನೀಡಿದ ಕ್ಯಾಚ್ ಅನ್ನು ವಿಕೆಟ್‌ ಕೀಪರ್ ಕೆಎಲ್ ರಾಹುಲ್ ತಮ್ಮ ಬಲಕ್ಕೆ ಜಿಗಿದ್ದು ಒಂದೇ ಕೈನಲ್ಲಿ ಹಿಡಿದುಕೊಂಡರು. ಈ ಪಂದ್ಯದಲ್ಲಿ ಶಿವಂ ದುಬೆ 6 ಓವರ್‌ಗಳನ್ನು ಬೌಲ್ ಮಾಡಿ 27 ರನ್‌ಗಳನ್ನು ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆದರು. ಅಪಾಯಕಾರಿಯಾಗಿ ಕಾಣುತ್ತಿದ್ದ ವಿಲ್ ಜ್ಯಾಕ್ಸ್ ಅವರನ್ನು ಔಟ್ ಮಾಡಿದರು. ಜ್ಯಾಕ್ಸ್ 19 ಎಸೆತಗಳಲ್ಲಿ 20 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಈ ಪಂದ್ಯಕ್ಕೂ ಮೊದಲು ಶಿವಂ ದುಬೆ ಕೇವಲ ಒಂದು ಏಕದಿನ ವಿಕೆಟ್ ಮಾತ್ರ ಪಡೆದಿದ್ದರು. ವಿಲ್ ಜ್ಯಾಕ್ಸ್ ಅವರ ಎರಡನೇ ಬಲಿಯಾದರು.

ಇಂಗ್ಲೆಂಡ್ ಇನ್ನಿಂಗ್ಸ್ ಹೀಗಿತ್ತು

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ 47.5 ಓವರ್‌ಗಳಲ್ಲಿ 258 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಲಿಯಾಮ್ ಡಾಸನ್ ಮತ್ತು ಜೋ ರೂಟ್ ಅರ್ಧಶತಕಗಳನ್ನು ಗಳಿಸಿದರು. ಇಬ್ಬರೂ ಶತಕದ ಪಾಲುದಾರಿಕೆಯನ್ನು ಗಳಿಸಿ ಇಂಗ್ಲೆಂಡ್ ತಂಡವನ್ನು ಗೌರವಾನ್ವಿತ ಸ್ಕೋರ್‌ಗೆ ಕೊಂಡೊಯ್ದರು. ಇಬ್ಬರ ನಡುವೆ 134 ಎಸೆತಗಳಲ್ಲಿ 121 ರನ್‌ಗಳ ಪಾಲುದಾರಿಕೆ ಇತ್ತು. ಒಂದು ಹಂತದಲ್ಲಿ ಇಂಗ್ಲೆಂಡ್ 107 ರನ್​ಗಳಿಗೆ 6 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಅಲ್ಲಿಂದ ಇವರಿಬ್ಬರು ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಲಿಯಾಮ್ ಡಾಸನ್ 68 ರನ್ ಬಾರಿಸಿದರೆ, ಜೋ ರೂಟ್ 76 ರನ್ ಬಾರಿಸಿ ಅಜೇಯರಾಗಿ ಉಳಿದರು. ಭಾರತದ ಪರ ಅಕ್ಷರ್ ಪಟೇಲ್ 4 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ ಮತ್ತು ಗುರ್ನೂರ್ ಬ್ರಾರ್ ತಲಾ 2 ವಿಕೆಟ್ ಪಡೆದರು. ಜಸ್ಪ್ರಿತ್ ಬುಮ್ರಾ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:33 pm, Tue, 14 July 26

Source link

Exit mobile version