Headlines

GT vs RR: 47 ಎಸೆತಗಳಲ್ಲಿ 5ನೇ ಐಪಿಎಲ್ ಶತಕ ಬಾರಿಸಿದ ಶುಭ್​ಮನ್ ಗಿಲ್

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ಸನಿಹಕ್ಕೆ ತಂದಿದ್ದಾರೆ. ಗೆಲುವಿಗೆ ರಾಜಸ್ಥಾನ್ ನೀಡಿದ 215 ರನ್​ಗಳ ಗುರಿ ಬೆನ್ನಟ್ಟಿದ ಗುಜರಾತ್ ಪರ ಅಬ್ಬರದ ಇನ್ನಿಂಗ್ಸ್ ಆಡಿದ ಶುಭ್​ಮನ್ 15 ಬೌಂಡರಿ ಹಾಗೂ 3 ಬೌಂಡರಿ ಸಹಿತ ತಮ್ಮ ಐದನೇ ಐಪಿಎಲ್ ಶತಕವನ್ನು ಪೂರೈಸಿದರು. ಮಾತ್ರವಲ್ಲದೆ ಸಾಯಿ ಸುದರ್ಶನ್ ಅವರೊಂದಿಗೆ 150…

Read More

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ ಸಂಜಯ್ ಮಿಶ್ರಾ

ಬಾಲಿವುಡ್​ನ (Bollywood) ಖ್ಯಾತ ನಟ ಸಂಜಯ್ ಮಿಶ್ರಾ (Sanjay Mishra) ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಹಾಗಿದ್ದರೂ ಕೂಡ ಅವರು ಸರಳ ಜೀವನವನ್ನು ಮರೆತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಹಂಚಿಕೊಂಡ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಮಳೆಗಾಲ ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಿನಿಮಾ ಕೆಲಸಗಳಿಂದ ಬಿಡುವು ಪಡೆದಾಗ ಅವರು ತೋಟದ ಮನೆಯಲ್ಲಿ ಕಾಲ ಕಳೆಯುತ್ತಾರೆ. ಅಲ್ಲಿರುವ ಶಿವನ ದೇವಸ್ಥಾನದ ಕೆಲಸಗಳನ್ನು ಅವರು ಮಾಡಿದ್ದಾರೆ….

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

ಡಿಕೆಶಿಗೆ ಸಿಎಂ ಯೋಗ: ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಅಂದು ಸ್ವಾಮೀಜಿ ಹೇಳಿದ್ದೇನು?

ಬೆಂಗಳೂರು , (ಮೇ 29): “ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಅಧಿಕಾರ” ಎನ್ನುವ ಮೂಲಕ‌ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ  (Siddaramaiah) ಬಿಟ್ಟು ಕೊಡುವವರೆಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಹಿಂದೆ ಭವಿಷ್ಯ (Kodi Shree Predication) ನುಡಿದಿದ್ದರು. ಈಗ ಕೋಡಿಶ್ರೀಗಳ ಭವಿಷ್ಯ ಅಕ್ಷರಶಃ ನಿಜವಾಗಿದೆ. ಹೈಕಮಾಂಡ್ ಸೂಚಿಸಿದಂತೆ ಸಿದ್ದರಾಮಯ್ಯ, ಯಾವುದೇ ತಂಟೆ ತಗಾದೇ…

Read More

GT vs RR: ಸತತ 2ನೇ ಪಂದ್ಯದಲ್ಲಿ ಶತಕ ವಂಚಿತರಾದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲಿಮಿನೆಟರ್ ಪಂದ್ಯದಲ್ಲಿ 97 ರನ್‌ಗಳಿಗೆ ಔಟಾಗಿ ಕೇವಲ 3 ರನ್​ಗಳಿಂದ ಶತಕ ವಂಚಿತರಾಗಿದ್ದ ವೈಭವ್ ಸೂರ್ಯವಂಶಿ, ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್‌ನಲ್ಲಿ 96 ರನ್‌ಗಳಿಗೆ ಔಟಾಗಿದ್ದಾರೆ. ಬೇಸರದ ಸಂಗತಿಯೆಂದರೆ ಸನ್‌ರೈಸರ್ಸ್ ವಿರುದ್ಧ ವೈಭವ್ ಯಾವ ರೀತಿಯಾಗಿ ಔಟಾಗಿದ್ದರೋ, ಇದೀಗ ಗುಜರಾತ್ ವಿರುದ್ಧ ಅದೇ ರೀತಿಯಾಗಿ ವಿಕೆಟ್ ಒಪ್ಪಿಸಿದರು (PC- PTI). ಮತ್ತೊಂದು ಗಮನಿಸಬೇಕಾದ ಸಂಗತಿಯೆಂದರೆ, ವೈಭವ್ ಅವರ ಈ ಎರಡು ಬಾರಿಯೂ ಶತಕ ವಂಚಿತರಾಗಲು ಕನ್ನಡಿಗರು ಕಾರಣರಾಗಿದ್ದಾರೆ. ಸನ್‌ರೈಸರ್ಸ್ ವಿರುದ್ಧದ…

Read More

ಸಮಂತಾಗೆ ಮೋಸ ಮಾಡಿದ್ರಿ ಎಂದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ನಾಗ ಚೈತನ್ಯ

ಟಾಲಿವುಡ್ ಖ್ಯಾತ ನಟ ನಾಗ ಚೈತನ್ಯ (Naga Chaitanya) ಅವರು ತಮ್ಮ ವ್ಯಕ್ತಿತ್ವದ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಹೆಸರು, ಫೋಟೋಗಳು, ಕೃತಕ ಬುದ್ಧಿಮತ್ತೆ (ಎಐ) ಬಳಸಿ ಸೃಷ್ಟಿಸಲಾದ ಡೀಪ್‌ಫೇಕ್ ಹಾಗೂ ಅಶ್ಲೀಲ ಕಂಟೆಂಟ್‌ಗಳ ಅನಧಿಕೃತ ಬಳಕೆಯನ್ನು ತಡೆಯಲು ಅವರು ಮೊಕದ್ದಮೆ ಹೂಡಿದ್ದಾರೆ. ಪ್ರಮುಖವಾಗಿ, ಅವರು ಮಾಜಿ ಪತ್ನಿ ಸಮಂತಾ (Samantha) ರುತ್ ಪ್ರಭುಗೆ ವಂಚಿಸಿ, ಆಕೆಯ ವೃತ್ತಿಜೀವನವನ್ನು ಹಾಳು ಮಾಡಿದ್ದಾರೆ ಎಂಬ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಮತ್ತು ನಿಂದನಾತ್ಮಕ…

Read More

ಹೃದಯಸ್ಪರ್ಶಿ ಘಟನೆ: ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಬೆಂಗಳೂರು, ಮೇ 29: ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆ ಒಂದೆಡೆ ಅವಾಂತರ ಸೃಷ್ಟಿಸುತ್ತಿದ್ದರೆ, ಮತ್ತೊಂದೆಡೆ ಇದೇ ಮಳೆಯ ನಡುವೆ ಬೆಂಗಳೂರು ಪೊಲೀಸರ ಮಾನವೀಯತೆಯ ದರ್ಶನವಾಗಿದೆ. ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನನ್ನು ಪೊಲೀಸ್ ಕಾನ್ಸ್ಟೇಬಲ್​​ ಅನಿಲ್​​ ಹೆಗಲ ಮೇಲೆ ಹೊತ್ತು ರಸ್ತೆ ದಾಟಿಸಿದ್ದಾರೆ. ಆ ಮೂಲಕ ಕರ್ತವ್ಯದ ವೇಳೆ ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗೆ…

Read More

ಸಂಗೀತಾ ಮೊಬೈಲ್ಸ್​ನ 52ನೇ ವಾರ್ಷಿಕೋತ್ಸವ ಮಾರಾಟ ಮೇಳ: ದಕ್ಷಿಣ ಭಾರತೀಯರಿಗೆ ಭರ್ಜರಿ ಬಹುಮಾನಗಳ ಸುರಿಮಳೆ, ಸಾಟಿ ಇಲ್ಲದ ಆಫರ್ಸ್

ಭಾರತದ ಪ್ರಮುಖ ಎಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್ ರಿಟೇಲ್ ಚೇನ್ ಆದ ‘ಸಂಗೀತಾ’ (sangeetha mobiles), ಮೇ 31 ರಿಂದ ತನ್ನ ಭವ್ಯವಾದ 52ನೇ ವರ್ಷದ ವಾರ್ಷಿಕೋತ್ಸವದ (52 years anniversary) ಮಾರಾಟ ಮೇಳವನ್ನು (52nd Anniversary Sale) ಘೋಷಿಸಿದೆ. ಇದನ್ನು ತನ್ನ “ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಹೆಚ್ಚು ಕೊಡುಗೆಗಳಿರುವ ಮಾರಾಟ ಮೇಳ” ಎಂದು ಈ ಸಂಸ್ಥೆ ಬಣ್ಣಿಸಿದೆ. ಕೇವಲ ಸ್ಟೋರ್‌ಗೆ ಭೇಟಿ ನೀಡಿದರೂ ಸಾಕು, ಗ್ರಾಹಕರು 6,000 ರೂವರೆಗೆ ಪ್ರಯೋಜನಗಳನ್ನು ಪಡೆಯಬಹುದು. ಅಷ್ಟು ಮಾತ್ರವಲ್ಲ, ಡ್ಯಾಮೇಜ್…

Read More

ಹಿಜಾಬ್ ಧರಿಸಿದ್ದಕ್ಕೆ ಸಿಕ್ಕಾಪಟ್ಟೆ ಟ್ರೋಲ್ ಆದ ಖ್ಯಾತ ನಟಿ ಅಂಕಿತಾ ಲೋಖಂಡೆ

ಕಿರುತೆರೆ ಹಾಗೂ ಬಾಲಿವುಡ್ ನಟಿ ಅಂಕಿತಾ ಲೋಖಂಡೆ (Ankita Lokhande) ಅವರು ಅಬುಧಾಬಿ ಪ್ರವಾಸದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಬೆನ್ನಲ್ಲೇ ಭಾರಿ ಟ್ರೋಲಿಂಗ್‌ಗೆ ಒಳಗಾಗಿದ್ದಾರೆ. ಪತಿ ವಿಕ್ಕಿ ಜೈನ್ ಜೊತೆ ದುಬೈ ಪ್ರವಾಸದಲ್ಲಿರುವ ಅಂಕಿತಾ, ಅಲ್ಲಿನ ಕೆಲವು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸುವಾಗ ಹಿಜಾಬ್ (Hijab) ಧರಿಸಿದ್ದ ಫೋಟೋಗಳನ್ನು ಪೋಸ್ಟ್ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆದರೆ, ನಟಿಯ ಬೆಂಬಲಕ್ಕೆ ನಿಂತಿರುವ ಅವರ ಅಭಿಮಾನಿಗಳು ಟ್ರೋಲರ್‌ಗಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ. ಗುರುವಾರ (ಮೇ…

Read More

GT vs RR: ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ

ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಎರಡೆರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್, ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ 700 ರನ್‌ಗಳ ಗಡಿ ದಾಟಿದರು. ಇದರ ಜೊತೆಗೆ ಪ್ಲೇಆಫ್‌ನಲ್ಲಿ 500 ರನ್‌ ಪೂರೈಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ 500…

Read More