ಕಾಂಗ್ರೆಸ್ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು
ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಮೀಟಿಂಗ್ನಿಂದ ದೂರವೇ ಉಳಿದಿದ್ದು, ಅವರ ಈ ನಿರ್ಧಾರದ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬಂದಿವೆ. ಭೈರತಿ ಸುರೇಶ್ ಕೂಡ ಸಭೆಗೆ ಗೈರು ಹಾಜರಾಗಿದ್ದಾರೆಯಾದರೂ ಅವರು ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ರಾಜ್ಯದಲ್ಲಿಲ್ಲ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ…