Headlines

ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ: ಸ್ಥಳೀಯ ನಿವಾಸಿಗಳಿಗೆ ತಪ್ಪದ ತೊಂದರೆ – Kannada News | Abandoned Vehicles and Public Nuisance Plague Kumaraswamy Layout Residents

ಬೆಂಗಳೂರು, ಜು.14: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆಯು ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಗಳನ್ನು ಉಂಟುಮಾಡುತ್ತಿದೆ. ಮನೆ ಗೇಟ್‌ಗಳ ಮುಂದೆ ಮತ್ತು ರಸ್ತೆ ಬದಿಗಳಲ್ಲಿ ಅನಿಯಂತ್ರಿತವಾಗಿ ನಿಲ್ಲಿಸಲಾದ ವಾಹನಗಳು, ಕೆಲವು ತಿಂಗಳುಗಟ್ಟಲೆ ತೆರವುಗೊಳ್ಳದೆ ಉಳಿದಿವೆ. ಈ ವಾಹನಗಳ ಹಿಂದೆ ರಾತ್ರಿ ವೇಳೆ ಕುಡುಕರು ಸೇರಿಕೊಂಡು ಬಾಟಲಿಗಳನ್ನು ಬಿಸಾಡುತ್ತಾರೆ ಮತ್ತು ಸಾರ್ವಜನಿಕ ಅಸ್ವಚ್ಛತೆಗೆ ಕಾರಣರಾಗುತ್ತಾರೆ. ಕತ್ತಲಾದ ನಂತರ ಮಹಿಳೆಯರು ಮತ್ತು ಮಕ್ಕಳಿಗೆ ಈ ರಸ್ತೆಗಳಲ್ಲಿ ಓಡಾಡುವುದು ಕಷ್ಟಕರವಾಗಿದ್ದು, ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ. ಕಳಪೆ ರಸ್ತೆ…

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ: ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ – Kannada News | Karnataka Drought Crisis: CM DK Shivakumar Writes to PM Modi; Seeks Central Team to Assess Rain Deficit Across 18 Districts

ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ ಬೆಂಗಳೂರು, ಜುಲೈ 14: ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ನೆರವಿಗೆ ಕ್ರಮಕೈಗೊಳ್ಳುವಂತೆಯೂ ಸಿಎಂ ಆಗ್ರಹಿಸಿದ್ದು, ರಾಜ್ಯದಲ್ಲಿ ಮಳೆಗಾಲದ ಮಳೆ ತೀವ್ರ ಕೊರತೆಯಾಗಿದೆ. ವಾಡಿಕೆ ಮಳೆಗಿಂತ ಶೇ. 30ರಷ್ಟು…

Read More

ಹಾರ್ಮುಜ್ ಜಲಸಂಧಿಯ ಹಡಗುಗಳ ಮೇಲಿನ ಶೇ. 20ರಷ್ಟು ಶುಲ್ಕ ಹಿಂಪಡೆದ ಟ್ರಂಪ್; ಹೊಸ ಘೋಷಣೆಯೇನು? – Kannada News | Donald Trump Makes A U Turn On 20 Percent Hormuz Toll announces Gulf States Investment In US

ವಾಷಿಂಗ್ಟನ್, ಜುಲೈ 14: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಹಾದುಹೋಗುವ ವಾಣಿಜ್ಯ ಹಡಗುಗಳ ಮೇಲೆ ಶೇ. 20ರಷ್ಟು ಶುಲ್ಕ ವಿಧಿಸುವ ತಮ್ಮದೇ ಪ್ರಸ್ತಾಪವನ್ನು ಇಂದು ಹಿಂಪಡೆದಿದ್ದಾರೆ. ಈ ಶುಲ್ಕದ ಬದಲಾಗಿ ಗಲ್ಫ್ ರಾಷ್ಟ್ರಗಳೊಂದಿಗೆ ಹೊಸ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗುವುದು ಎಂದು ಅವರು ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಟ್ರುತ್ ಸೋಶಿಯಲ್’ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಮಧ್ಯಪ್ರಾಚ್ಯದ ನಾಯಕರೊಂದಿಗೆ ನಡೆದ ಮಾತುಕತೆಗಳ ನಂತರ…

Read More

ಪ್ರಧಾನಿ ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು? – Kannada News | Slovak Leader Richard Tastes Thekua Gifted By PM Narendra Modi watch his Reaction

ಬ್ರಾಟಿಸ್ಲಾವಾ, ಜುಲೈ 14: ಸ್ಲೋವಾಕಿಯಾ ಗಣರಾಜ್ಯದ ರಾಷ್ಟ್ರೀಯ ಮಂಡಳಿಯ ಸ್ಪೀಕರ್ ರಿಚರ್ಡ್ ರಾಶಿ ಇಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಭಾರಿ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜೂನ್ ತಿಂಗಳಲ್ಲಿ ಸ್ಲೋವಾಕಿಯಾ ಪ್ರವಾಸಕ್ಕೆ ತೆರಳಿದ್ದಾಗ ರಿಚರ್ಡ್ ಅವರಿಗೆ ಬಿಹಾರದ ಸಾಂಪ್ರದಾಯಿಕ ಸಿಹಿ ತಿಂಡಿಯಾದ ‘ಠೇಕುವಾ’ (Thekua) ಅನ್ನು ಉಡುಗೊರೆಯಾಗಿ ನೀಡಿದ್ದರು. ಆ ಸುಂದರ ಉಡುಗೊರೆಯ ಬಾಕ್ಸ್ ಅನ್ನು ಓಪನ್ ಮಾಡಿದ ರಿಚರ್ಡ್ ಆ ಸಿಹಿಯನ್ನು ಸವಿದು ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು…

Read More

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ – Kannada News | Chinnaswamy Stampede Case: Karnataka Govt Drops Departmental Inquiry Against IPS Officer B Dayananda, Clears All Charges

ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ ಬೆಂಗಳೂರು, ಜುಲೈ 14: ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ತಂಡದ ಐಪಿಎಲ್​​ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರ ವಿರುದ್ಧ ಹೊರಿಸಲಾಗಿದ್ದ ಆರೋಪಗಳಿಂದ ಅವರನ್ನು ಖುಲಾಸೆಗೊಳಿಸಲಾಗಿದೆ. ಈ ಹಿಂದೆ ಸರ್ಕಾರದ ಆದೇಶದಂತೆ, ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು…

Read More

ಶಾರುಖ್ ಖಾನ್‌ ಒಡೆತನದ ಮನ್ನತ್ ಬಂಗಲೆಯ ನವೀಕರಣ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court dismisses petition against Shah Rukh Khan Mannat renovation

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಹಾಗೂ ಪತ್ನಿ ಗೌರಿ ಖಾನ್ ಅವರಿಗೆ ಸೇರಿದ ಮುಂಬೈನ ಬಾಂದ್ರಾದಲ್ಲಿರುವ ಪ್ರಸಿದ್ಧ ‘ಮನ್ನತ್’ (Mannat) ಬಂಗಲೆಯ ನವೀಕರಣಕ್ಕೆ ಎದುರಾಗಿದ್ದ ಕಾನೂನು ಸಂಕಷ್ಟ ದೂರಾಗಿದೆ. ಬಂಗಲೆಯ ನವೀಕರಣ ಮತ್ತು ವಿಸ್ತರಣೆಗೆ ನೀಡಲಾದ ಅನುಮತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕಾನೂನಿನ ಚೌಕಟ್ಟಿನಲ್ಲಿದ್ದುಕೊಂಡು ತಮ್ಮ ಮನೆಗಳನ್ನು ನವೀಕರಿಸುವ ಸಂಪೂರ್ಣ ಸ್ವಾತಂತ್ರ್ಯವು ಮನೆಯ ಮಾಲೀಕರಿಗೆ ಇರುತ್ತದೆ ಎಂದು ಕೋರ್ಟ್ ಈ…

Read More

ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ – Kannada News | Lokayuktas Plea Rejected: Governor Refuses Sanction for Zameer Ahmeds Prosecution

ಬೆಂಗಳೂರು, ಜು.14: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ನಿರಾಳತೆ ದೊರೆತಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಸಂಬಂಧಿ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮೀರ್ ಅಹ್ಮದ್ ಖಾನ್ ವಿರುದ್ಧದ ಐಎಂಎ ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಲೋಕಾಯುಕ್ತ ರಾಜ್ಯಪಾಲರಿಗೆ…

Read More

IND vs ENG: 12 ಎಸೆತಗಳಲ್ಲಿ 13 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಿದ ಅಕ್ಷರ್ ಪಟೇಲ್

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲಿಂಗ್ ಅದ್ಭುತವಾಗಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಅಮೋಘ ಆರಂಭ ಪಡೆದುಕೊಂಡರೂ ಅದಾದ ಬಳಿಕ ಟೀಂ ಇಂಡಿಯಾ ಬೌಲರ್​ಗಳು ನಿಯಮಿತ ಅಂತರದಲ್ಲಿ ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್‌ ಬ್ಯಾಟಿಂಗ್‌ ವಿಭಾಗವನ್ನು ಕಟ್ಟಿಹಾಕಿದರು(PC-BCCI X). ಈ ಪಂದ್ಯದಲ್ಲಿ ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಸ್ಪಿನ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ 10 ಓವರ್​ಗಳ ಖೋಟಾದಲ್ಲಿ ಪ್ರಮುಖ 4 ವಿಕೆಟ್​ಗಳನ್ನು ಕಬಳಿಸಿದರು. ಅದರಲ್ಲೂ ಶತಕದ ಜೊತೆಯಾಟ ನಡೆಸಿದ್ದ ಲಿಯಾಮ್ ಡಾಸನ್…

Read More

‘ನ್ಯಾಯಾಲಯದ ದಾರಿ ತಪ್ಪಿಸಬೇಡಿ’; ಕಾಮಿಡಿಯನ್ ಸಮಯ್ ರೈನಾಗೆ 3 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್! – Kannada News | Supreme Court Imposes Rs 3 Lakh fine On Samay Raina Over False Statements India’s Got Latent controversy

ನವದೆಹಲಿ, ಜುಲೈ 14: ತಮ್ಮ ಜನಪ್ರಿಯ ಯೂಟ್ಯೂಬ್ ಶೋ ‘ಇಂಡಿಯಾಸ್ ಗಾಟ್ ಲೇಟೆಂಟ್’ ವಿವಾದಕ್ಕೆ (India’s Got Latent controversy) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ ಹಾಗೂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಪ್ರಸಿದ್ಧ ಕಾಮಿಡಿಯನ್ ಸಮಯ್ ರೈನಾ (Samay Raina) ಅವರಿಗೆ ಸುಪ್ರೀಂ ಕೋರ್ಟ್ 3 ಲಕ್ಷ ರೂ. ದಂಡ ವಿಧಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ಜೆ.ವಿ. ಮೋಹನಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ಹೊರಡಿಸಿದೆ….

Read More

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ಕನಸಿಗೆ ರೆಕ್ಕೆ: 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಯಾಗಲಿವೆ 2 ಪ್ರಮುಖ ರೈಲು ಮಾರ್ಗಗಳು – Kannada News | Tumakuru Rail Boost: Madhugiri, Sira, Pavagada Connectivity by 2027

ತುಮಕೂರು, ಜು.14: ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ ಮತ್ತು ಪಾವಗಡ ಭಾಗದ ಜನರ ದಶಕಗಳ ಕಾಲದ ರೈಲು ಸಂಪರ್ಕದ ಕನಸು ಕೊನೆಗೂ ನನಸಾಗುವ ಹಂತಕ್ಕೆ ತಲುಪಿದೆ. ಒಂದೆಡೆ ದಾವಣಗೆರೆ-ತುಮಕೂರು ರೈಲು ಮಾರ್ಗ ಹಾಗೂ ಮತ್ತೊಂದೆಡೆ ತುಮಕೂರು-ಕಲ್ಯಾಣದುರ್ಗ ನಡುವಿನ ನೂತನ ರೈಲು ಮಾರ್ಗದ ಕಾಮಗಾರಿಗಳು ಅತ್ಯಂತ ಭರದಿಂದ ಸಾಗುತ್ತಿವೆ. ಈ ಎರಡೂ ಮಹತ್ವಾಕಾಂಕ್ಷೆಯ ಯೋಜನೆಗಳನ್ನು 2027ರ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವ ಮಹತ್ತರ ಗುರಿಯನ್ನು ಹೊಂದಲಾಗಿದೆ. ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಹೊಸ ಭರವಸೆಯ…

Read More