ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ; ಕೂದಲೆಳೆ ಅಂತರದಿಂದ ತೆಲಂಗಾಣ ಸಚಿವ ಪಾರು – Kannada News | Telangana minister V Srihari narrowly escapes injury after flagpole collapses during Republic Day
ಹೈದರಾಬಾದ್, ಜನವರಿ 26: ಇಂದು ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ (Republic Day) ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ಪಶುಸಂಗೋಪನಾ ಸಚಿವ ವಿ. ಶ್ರೀಹರಿ ಧ್ವಜಾರೋಹಣ ಮಾಡುತ್ತಿದ್ದಾಗ ಧ್ವಜಸ್ತಂಭ ಮುರಿದು ಬಿದ್ದಿದೆ. ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link