WPL 2026: ಆರ್​ಸಿಬಿ ಪಂದ್ಯ ಸೋತರೂ ಎಲ್ಲರ ಹೃದಯ ಗೆದ್ದ ರಿಚಾ ಘೋಷ್ – Kannada News | WPL 2026: Nat Sciver’s Century Powers MI to Victory Over RCB Despite Richa Ghosh’s 90

ಮಹಿಳಾ ಪ್ರೀಮಿಯರ್ ಲೀಗ್ ( Women’s Premier League) 2026 ರ 16 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಿತು. ವಡೋದರಾದಲ್ಲಿ ನಡೆದ ಈ ಪಂದ್ಯ ಅಭಿಮಾನಿಗಳಿಗೆ ಮನರಂಜನೆ ರಸದೌತಣ ನೀಡುವುದರಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಈ ಪಂದ್ಯವನ್ನು ಆರ್​ಸಿಬಿ ಸೋತಿತ್ತಾದರೂ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ಗೆ ಒಂದು ಕ್ಷಣ ಸೋಲಿನ ಭಯ ಹುಟ್ಟಿಸಿತು ಎಂಬುದರಲ್ಲಿ ಸುಳಿಲ್ಲ. 35 ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡಿದ್ದ ಆರ್​ಸಿಬಿ ಪರ ಏಕಾಂಗಿ ಹೋರಾಟ ನೀಡಿದ ರಿಚಾ ಘೋಷ್ (Richa Ghosh) 90 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ರಿಚಾಗೆ ಮತ್ತೊಬ್ಬ ಬ್ಯಾಟರ್​ನಿಂದ ಉತ್ತಮ ಸಾಥ್​ ಸಿಕ್ಕಿದ್ದರೆ, ಪಂದ್ಯದ ಫಲಿತಾಂಶವೇ ಬೇರೆಯದ್ದಾಗಿರುತ್ತಿತ್ತು. ಆದರೆ ಅಗ್ರಕ್ರಮಾಂಕದ ವೈಫಲ್ಯದಿಂದಾಗಿ ಆರ್​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಸೋಲನ್ನು ಎದುರಿಸಬೇಕಾಯಿತು.

131 ರನ್‌ಗಳ ಜೊತೆಯಾಟ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ್ತಿ ಸಜೀವನ ಸಜ್ನಾ ಮೂರನೇ ಓವರ್‌ನಲ್ಲಿಯೇ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಆ ಬಳಿಕ ಜೊತೆಯಾದ ನ್ಯಾಟ್ ಸಿವರ್ ಹಾಗೂ ಹೇಲಿ ಮ್ಯಾಥ್ಯೂಸ್ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ 131 ರನ್‌ಗಳ ಜೊತೆಯಾಟ ನಡೆಸಿದರು. ಈ ವೇಳೆ ಬ್ರಂಟ್ ಕೇವಲ 32 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

ನ್ಯಾಟ್ ಸಿವರ್ ಬ್ರಂಟ್ ಶತಕ

ಹೇಲಿ ಮ್ಯಾಥ್ಯೂಸ್ ಕೂಡ ಅರ್ಧಶತಕ ಬಾರಿಸಿದರಾದರೂ ಆ ಬಳಿಕ ವಿಕೆಟ್ ಒಪ್ಪಿಸಿದರು. ಆದರೆ ನ್ಯಾಟ್ ಸಿವರ್ ತಮ್ಮ ಅಬ್ಬರ ಮುಂದುವರೆಸಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಇದರ ಫಲವಾಗಿ ಬ್ರಂಟ್ 20 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳುವ ಮೂಲಕ ಶತಕ ಪೂರೈಸಿದರು. 57 ಎಸೆತಗಳಲ್ಲಿ 100 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿತ್ತು. ಬ್ರಂಟ್ ಅವರ ಈ ಸ್ಫೋಟಕ ಇನ್ನಿಂಗ್ಸ್‌ನಿಂದಾಗಿ, ಮುಂಬೈ 20 ಓವರ್‌ಗಳಲ್ಲಿ 200 ರನ್‌ಗಳ ಕಠಿಣ ಗುರಿ ನೀಡಿತು.

ಆರ್​ಸಿಬಿ ಬ್ಯಾಟಿಂಗ್ ವೈಫಲ್ಯ

ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಮೊದಲ ಎರಡು ಓವರ್ಗಳಲ್ಲಿ ಉತ್ತಮ ರನ್ ಕಲೆಹಾಕಿತು. ಆದರೆ ಸತತ 4ನೇ ಪಂದ್ಯದಲ್ಲೂ ರನ್ ಬಾರಿಸಲು ವಿಫಲರಾದ ಗ್ರೇಸ್ ಹ್ಯಾರಿಸ್ 15 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ನಾಯಕಿ ಸ್ಮೃತಿ ಆಟ ಕೂಡ 6 ರನ್​ಗಳಿಗೆ ಅಂತ್ಯವಾಯಿತು. ವಾಲ್ ಕೂಡ 9 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಗೌತಮಿ ನಾಯಕ್ 1 ರನ್​ಗಳಿಗೆ ಸುಸ್ತಾದರೆ, ರಾಧಾ ಯಾದವ್ ಖಾತೆಯನ್ನು ತೆರೆಯಲಿಲ್ಲ. ಹೀಗಾಗಿ ಆರ್​ಸಿಬಿ 35 ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು 100 ರನ್​ಗಳ ಒಳಗೆ ಆಲೌಟ್ ಆಗುವ ಸೂಚನೆ ನೀಡಿತ್ತು.

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

ರಿಚಾ ಘೋಷ್ ಏಕಾಂಗಿ ಹೋರಾಟ

ಆದರೆ ಆ ಬಳಿಕ ಜೊತೆಯಾದ ನಡಿನ್ ಡಿ ಕ್ಲರ್ಕ್​ ಹಾಗೂ ರಿಚಾ ಘೋಷ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಆದಾಗ್ಯೂ ಕ್ಲರ್ಕ್​ 28 ರನ್​ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಆರ್​ಸಿಬಿಯ ಸೋಲನ್ನು ಖಚಿತಪಡಿಸಿದರು. ಇತ್ತ ಬಾಲಂಗೋಚಿಗಳ ಜೊತೆ ಏಕಾಂಗಿ ಹೋರಾಟ ನಡೆಸಿದ ರಿಚಾ ಈ ಆವೃತ್ತಿಯ ಮೊದಲ ಅರ್ಧಶತಕ ಬಾರಿಸಿದರು. ಅರ್ಧಶತಕ ಬಳಿಕ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ರಿಚಾ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರಾದರೂ, ಗೆಲ್ಲಿಸಲು ಸಾಧ್ಯವಾಗಲಿಲ್ಲ. ರಿಚಾಗೆ ಇತರ ಬ್ಯಾಟರ್​ಗಳಿಂದ ಬೆಂಬಲ ಸಿಗಲಿಲ್ಲ. ಅಂತಿಮವಾಗಿ ಆರ್​ಸಿಬಿ 15 ರನ್​ಗಳಿಂದ ಸೋಲೊಪ್ಪಿಕೊಂಡರೆ, ರಿಚಾ ಘೋಷ್ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 90 ರನ್ ಬಾರಿಸಿ ಕೊನೆಯ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

Published On – 11:24 pm, Mon, 26 January 26

Source link

ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ; ಕೂದಲೆಳೆ ಅಂತರದಿಂದ ತೆಲಂಗಾಣ ಸಚಿವ ಪಾರು – Kannada News | Telangana minister V Srihari narrowly escapes injury after flagpole collapses during Republic Day

ಹೈದರಾಬಾದ್, ಜನವರಿ 26: ಇಂದು ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ (Republic Day) ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ಪಶುಸಂಗೋಪನಾ ಸಚಿವ ವಿ. ಶ್ರೀಹರಿ ಧ್ವಜಾರೋಹಣ ಮಾಡುತ್ತಿದ್ದಾಗ ಧ್ವಜಸ್ತಂಭ ಮುರಿದು ಬಿದ್ದಿದೆ. ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು? – Kannada News | Kamareddy District Gurukul Students Jumped from Auto one Student Died

ಕಾಮರೆಡ್ಡಿ, ಜನವರಿ 26: ತೆಲಂಗಾಣದಲ್ಲಿ ವಿಚಿತ್ರವಾದ ರೀತಿಯಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಗುರುಕುಲದ ಹಾಸ್ಟೆಲ್‌ನಲ್ಲಿ ಇರಬೇಕಾದ ನಾಲ್ವರು ವಿದ್ಯಾರ್ಥಿನಿಯರು ಆಟೋ ಹತ್ತಿದರು. ಆದರೆ, ಆಟೋದಲ್ಲಿ ಪ್ರಯಾಣ ಮಾಡುವಾಗ ಒಬ್ಬೊಬ್ಬರಾಗಿ ಕೆಳಗೆ ಬಿದ್ದರು. ಅವರಲ್ಲಿ ಮೂವರು ಬದುಕುಳಿದರು. ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ಎಂಬ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಕಾಮರೆಡ್ಡಿ ಜಿಲ್ಲೆಯ ಬೋರ್ಲಂ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಗುರುಕುಲ ಶಾಲೆಯಲ್ಲಿ ನಿಜಕ್ಕೂ ಏನಾಯಿತು? ಆ ವಿದ್ಯಾರ್ಥಿನಿಯರು ಆಟೋ ಹತ್ತಿದ್ದು ಏಕೆ? ಅವರು ಹೇಗೆ ಕೆಳಗೆ ಬಿದ್ದರು? ಅವರಾಗಿಯೇ ಹಾರಿದರಾ? ಅಥವಾ ಯಾರಾದರೂ ತಳ್ಳಿದರಾ? ಎಂಬಿತ್ಯಾದಿ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಆ ವಿದ್ಯಾರ್ಥಿನಿಯರು ಆಟೋದಿಂದ ಕೆಳಗೆ ಹಾರುವುದು, ಅವರು ಬಿದ್ದರೂ ಆಟೋ ನಿಲ್ಲದೆ ಮುಂದೆ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾನಸ, ಅಂಜಲಿ, ವೈಶಾಲಿ ಮತ್ತು ಸಂಗೀತ ಚಲಿಸುತ್ತಿದ್ದ ಆಟೋದಿಂದ ಹಾರಿದರು. ಸಂಗೀತಾಳ ತಲೆಗೆ ಗಂಭೀರ ಗಾಯಗಳಾಗಿದ್ದವು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ ಸಾವನ್ನಪ್ಪಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್ – Kannada News | Satish Cadaboms talks about Kichcha Sudeep party after Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಫಿನಾಲೆ ಬಳಿಕ ಸ್ಪರ್ಧಿಗಳೆಲ್ಲರೂ ಕಿಚ್ಚ ಸುದೀಪ್ ಜೊತೆ ಪಾರ್ಟಿ ಮಾಡಿದ್ದರು. ಅಲ್ಲಿ ನಡೆದ ಮಾತುಕಥೆ ಬಗ್ಗೆ ಸತೀಶ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಸತೀಶ್ ಧರಿಸುವ ಬಟ್ಟೆ, ಕೂಲಿಂಗ್ ಗ್ಲಾಸ್ ಇತ್ಯಾದಿ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ಆಗುತ್ತದೆ. ಅವುಗಳ ಬೆಲೆ ದುಬಾರಿ ಎಂದು ಅವರೇ ಹೇಳಿಕೊಳ್ಳುತ್ತಾರೆ. ‘18 ಸಲ ನನ್ನ ಗ್ಲಾಸ್ ಬಗ್ಗೆ ಚರ್ಚೆ ಆಯಿತು. ಈ ಕೂಲಿಂಗ್ ಗ್ಲಾಸ್ ಅನ್ನು ತುಕಾಲಿ ಸಂತುಗೆ ಗಿಫ್ಟ್ ಕೊಡು ಅಂತ ಸುದೀಪ್ ಸರ್ (Kichcha Sudeep) ಹೇಳಿದರು. ಆದರೆ ನಾನು ಕೊಡಲ್ಲ ಅಂದೆ. ಇದು ಹೊಸ ಗ್ಲಾಸ್, ಹಾಗಾಗಿ ಕೊಡಲ್ಲ ಅಂತ ಹೇಳಿದೆ’ ಎಂದಿದ್ದಾರೆ ಸತೀಶ್. ತಮ್ಮಿಂದಾಗಿ ಎಲ್ಲರೂ ಫೇಮಸ್ ಆಗುತ್ತಿದ್ದಾರೆ ಎಂಬುದು ಸತೀಶ್ (Satish Cadaboms) ಅಭಿಪ್ರಾಯ. ಆ ಬಗ್ಗೆ ಕೂಡ ಅವರು ಈ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಫ್ತಾ ವಸೂಲಿ ಮಾಡುತ್ತ ಏರಿಯಾದಲ್ಲಿ ಹವಾ, ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ – Kannada News | Rowdy sheeter shabbir Hacked to death In Bengaluru For Land Near mosque

ಬೆಂಗಳೂರು, (ಜನವರಿ 26): ಹಫ್ತಾ ವಸೂಲಿ ಮಾಡುತ್ತಿದ್ದ ಏರಿಯಾದಲ್ಲಿ ಹವಾ ಮಾಡಿದ್ದ ನಟೋರಿಯಸ್ ರೌಡಿಶೀಟರ್ ನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಮಂಗಮ್ಮನಪಾಳ್ಯದ ನಿವಾಸಿ ಮೊಹಮ್ಮದ್ ಶಬ್ಬೀರ್ ಕೊಲೆಯಾದ ರೌಡಿಶೀಟರ್. ಪ್ರತಿನಿತ್ಯ ಹಫ್ತಾ ವಸೂಲಿ ಮಾಡುತ್ತಿದ್ದ ಕಿರುಕುಳ ನೀಡುತ್ತಿದ್ದ. ಸಾಲದಕ್ಕೆ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಾ ಮಸೀದಿ ಪಕ್ಕದ ಜಾಗದ ಮೇಲೆ ಕಣ್ಣು ಹಾಕಿದ್ದ. ಇದರಿಂದ ರೋಸಿ ಹೋಗಿದ್ದ ಏರಿಯಾದ ಯುವ ಪಡೆಯೊಂದು ರೌಡಿಶೀಟರ್​ ಮೊಹಮ್ಮದ್ ಶಬ್ಬೀರ್ ನನ್ನು ಹತ್ಯೆ ಮಾಡಿದೆ. ಹೇಳಿ ಕೇಳಿ ರೌಡಿಶೀಟರ್ ಆಗಿದ್ದರಿಂದ ದಾಳಿ ಮಾಡಲಾಗದೇ ಮೊದಲು ಖಾರದ ಪುಡಿ ಎರಚಿ ಜೀವ ತೆಗೆದಿದ್ದಾರೆ.

ಜನವರಿ 12 ರಂದು ರಾತ್ರಿ ಮಂಗಮ್ಮನಪಾಳ್ಯ ನಿವಾಸಿಯಾಗಿರೊ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ ನನ್ನ 11 ಜನರ ತಂಡ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದರು. ಸ್ನೇಹಿತನನ್ನ ಮಾತಾಡಿಸಿ ಆಟೋದಲ್ಲಿ ವಾಪಸ್ ಆಗುತ್ತಿದ್ದಂತೆ ಮಂಗಮ್ಮನಪಾಳ್ಯ ಮುಖ್ಯ ರಸ್ತೆಯ ತಿರುವಿನಲ್ಲಿ ಖಾರದ ಪುಡಿ ಎರಚಿ ಮಚ್ಚು,ಲಾಂಗ್ ನಿಂದ ಹಲ್ಲೆ ನಡೆಸಿ‌ ಕೊಚ್ಚಿ ಕೊಲೆ ಮಾಡಿದ್ದರು. ಸದ್ಯ ಕೊಲೆ ಸಂಬಂಧ 11 ಜನ ಆರೋಪಿಗಳನ್ನು ಬಂಧಿಸಿರುವ ಬಂಡೆಪಾಳ್ಯ ಪೊಲೀಸರು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಹಾಕಲು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ: ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ, ಆಗಿದ್ದೇನು?

ಕೋರಮಂಗಲ ರೌಡಿ ಶೀಟರ್ ಶಬ್ಬಿರ್ ಕೊಲೆಗೆ ಸಂಬಂಧಪಟ್ಟಂತೆ ನೂರುಲ್ಲಾ ಅಲಿಯಾಸ್ ಸನ್ನಿ,ಉಮ್ರೇಜ್,ನದೀಮ್,ಸೈಯದ್ ಖಲೀಂ,ಸಲ್ಮಾನ್ ಖಾನ್,ಸೈಯದ್ ಸಿದ್ದಿಕ್,ಮೊಹಮ್ಮದ್ ಆಲಿ,ಸೈಯದ್ ಇಸ್ಮಾಯಿಲ್,ಇಮ್ರಾನ್ ,ನವಾಜ್ ಷರೀಫ್ ಮತ್ತು ಸೈಯದ್ ಮುಬಾರಕ್ ಸೇರಿದಂತೆ 11 ಜನ ಆರೋಪಿಗಳನ್ನು ಮುಂಬೈ,ರಾಜಸ್ಥಾನ್ ಮತ್ತು ಹೈದರಾಬಾದ್ ಸೇರಿದಂತೆ ಹಲವು ಕಡೆಯಿಂದ ಬಂಧಿಸಿರುವ ಬಂಡೆಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೊಲೆಗೆ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ

ರೌಡಿ ಶೀಟರ್ ಆಗಿದ್ದ ಶಬ್ಬಿರ್ ಏರಿಯಾದಲ್ಲಿ ಹವಾ ಮೇಂಟೇನ್ ಮಾಡುತ್ತಿದ್ದ.ಗುಜರಿ ಅಂಗಡಿ ಸೇರಿದಂತೆ ಕಾರ್ಪೆಂಟರ್ ಬಳಿಯೂ ಹಫ್ತಾ ವಸೂಲಿ ಮಾಡುತ್ತಿದ್ದ.ಬೇರೆ ಹುಡುಗರನ್ನ ತಾನು ಹೇಳಿದಂತೆ ಕೇಳಬೇಕು ಎಂದು ಆವಾಜ್ ಹಾಕ್ತಿದ್ದ.ಇದರಿಂದಾಗಿ ಹುಡುಗ್ರು ರೋಸಿ ಹೋಗಿದ್ರು. ಅಲ್ಲದೆ ಮಸೀದಿ ಪಕ್ಕದಲ್ಲೇ ಸನ್ನಿ ಸಹೋದರಿಯ ಜಾಗ ಇದ್ದು, ಅದರ ಮೇಲೆ ಕಣ್ಣು ಹಾಕಿದ್ದ ಶಬ್ಬಿರ್, ಆ ಜಾಗ ನನಗೆ ಕೊಡುವಂತೆ ಪೀಡಿಸ ತೊಡಗಿದ್ದ. ಅಲ್ಲದೇ ಆದಷ್ಟು ಬೇಗ ಕಾಂಪೌಂಡ್ ಹಾಕುತ್ತೇನೆಂದು ಧಮ್ಕಿ ಹಾಕಿದ್ದ‌. ಇದರಿಂದ ರೋಸಿ ಹೋಗಿದ್ದ ಹುಡುಗರು, ಇದಕ್ಕೆ ಕಡಿವಾಣ ಹಾಕಬೇಕೆಂದು ತೀರ್ಮಾನ ಮಾಡಿದ್ದರು.

ನೂರುಲ್ಲ ಅಲಿಯಾಸ್ ಸನ್ನಿ ನೇತೃತ್ವದಲ್ಲಿ 11 ಜನರ ತಂಡ ಶಬ್ಬಿರ್ ಮುಗಿಸಲು ಹೊಂಚು ಹಾಕಿದ್ದು,
ಆತನ ಚಲನವಲನದ ಮೇಲೆ‌ ಕಣ್ಣಿಟ್ಟಿದ್ದರು. ಗ್ಯಾರೆಜ್ ನಲ್ಲಿ ಮಾರಕಾಸ್ತ್ರದ ಜೊತೆಗೆ ಕೂತಿದ್ದ ಹಂತಕರು ಶಬ್ಬಿರ್ ಬರ್ತಿದ್ದಂತೆ ಕಣ್ಣಿಗೆ ಖಾರದ ಪುಡಿ ಎರಚಿ ಬರ್ಬರವಾಗಿ ಕೊಂದು ಎಸ್ಕೇಪ್ ಆಗಿದ್ದರು. ಘಟನೆ ಬಳಿ ಆಟೋ‌ ಹಿಡಿದಿದ್ದ ಆರೋಪಿಗಳು ಕೆ.ಆರ್.ಪುರಂ ರೈಲ್ವೇ ಸ್ಟೇಷನ್ ವರೆಗೂ ಹೋಗಿ ಎಸ್ಕೇಪ್ ಆಗಿದ್ದರು.

ಬಳಿಕ ಆರೋಪಿಗಳ ಪತ್ತೆಗೆ ಎಲೆಕ್ಟ್ರಾನಿಕ್ ಸಿಟಿ ವಿಭಾಗ ಪೊಲೀಸರು ವಿಶೇಷ ತಂಡ ರಚನೆ ಮಾಡಿಕೊಂಡು ಬಲೆ ಬೀಸಿ, ಬಾಂಬೆ ,ರಾಜಸ್ಥಾನ ಮತ್ತು ಹೈದರಾಬಾದ್ ಕಡೆಯಿಂದ ಆರೋಪಿಗಳನ್ನ ಬಂಧಿಸಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಹಾಕಲು ಪೊಲೀಸರು ಮುಂದಾಗಿದ್ದಾರೆ. ಇದರಿಂದ ಒಂದು ವರ್ಷಗಳ ಕಾಲ ಆರೋಪಿಗಳಿಗೆ ಜಾಮೀನು‌ ಸಿಗುವುದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬದರಿನಾಥ-ಕೇದಾರನಾಥ ದೇವಾಲಯಕ್ಕೆ ಹಿಂದೂಗಳಲ್ಲದವರಿಗೆ ಪ್ರವೇಶ ನಿಷೇಧ – Kannada News | Badrinath and Kedarnath To Ban Non Hindus from entering dham Temple Panel To Pass Proposal Soon

ಉತ್ತರಕಾಶಿ, ಜನವರಿ 26: ಉತ್ತರಾಖಂಡದ ಹಿಮಾಲಯ ಪರ್ವತದಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ (Badrinath) ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಹಿಂದೂಗಳನ್ನು ಹೊರತುಪಡಿಸಿ ಬೇರೆ ಧರ್ಮದವರಿಗೆ ಈ ದೇವಾಲಯಗಳಿಗೆ ಪ್ರವೇಶ ನಿಷೇಧಿಸಲು ತೀರ್ಮಾನಿಸಲಾಗಿದೆ. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಈ 2 ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು ಎಂದು ಈ ದೇವಾಲಯಗಳನ್ನು ನಿರ್ವಹಿಸುವ ದೇವಾಲಯ ಸಂಸ್ಥೆ ಘೋಷಿಸಿದೆ.

ಬದರಿನಾಥ-ಕೇದಾರನಾಥ ಧಾಮ ಸೇರಿದಂತೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ನಿಯಂತ್ರಿಸುವ ಎಲ್ಲಾ ದೇವಾಲಯಗಳಿಗೆ ಹಿಂದೂಯೇತರರ ನಿಷೇಧವು ಅನ್ವಯಿಸುತ್ತದೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಪ್ರಸ್ತಾವನೆಯನ್ನು ಮುಂಬರುವ ದೇವಾಲಯ ಸಮಿತಿ ಮಂಡಳಿ ಸಭೆಯಲ್ಲಿ ಅಂಗೀಕರಿಸಲಾಗುವುದು.

ಇದನ್ನೂ ಓದಿ: Kedarnath Yatra 2025: ಕೇದಾರನಾಥಕ್ಕೆ ಭೇಟಿ ನೀಡುವ ಮೊದಲು ಗೌರಿಕುಂಡದಲ್ಲಿ ಸ್ನಾನ ಮಾಡುವುದು ಏಕೆ?

ಈ ನಿರ್ಬಂಧವು ಗಂಗೋತ್ರಿ ಧಾಮಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಇದು ಮಾ ಗಂಗೆಯ ಚಳಿಗಾಲದ ವಾಸಸ್ಥಾನ ಎಂದು ಕರೆಯಲ್ಪಡುವ ಮುಖ್ಬಾಕ್ಕೂ ಅನ್ವಯಿಸುತ್ತದೆ. ಶ್ರೀ ಗಂಗೋತ್ರಿ ದೇವಾಲಯ ಸಮಿತಿಯ ಅಧ್ಯಕ್ಷ ಸುರೇಶ್ ಸೆಮ್ವಾಲ್ ಅವರು, ಹಿಂದೂಯೇತರರು ಧಾಮಕ್ಕೆ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ಸಮಿತಿ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಚಳಿಗಾಲದ ತಿಂಗಳುಗಳಲ್ಲಿ ಮುಖ್ಬಾದಲ್ಲಿ ಅದೇ ನಿಯಮ ಜಾರಿಯಲ್ಲಿರುತ್ತದೆ ಎಂದು ಅವರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಹಿಮಚ್ಛಾದಿತ ಬೆಟ್ಟಗಳ ನಡುವಿನ ಕೇದಾರನಾಥ ದೇವಾಲಯ ಹೀಗಿದೆ

ಗಂಗೋತ್ರಿ ಧಾಮದ ದ್ವಾರಗಳು ಪ್ರಸ್ತುತ ಭಕ್ತರಿಗೆ ಮುಚ್ಚಲ್ಪಟ್ಟಿವೆ. ಚಳಿಗಾಲದ ತಿಂಗಳುಗಳಲ್ಲಿ ಭಾರೀ ಹಿಮಪಾತ ಮತ್ತು ತೀವ್ರ ಶೀತದಿಂದಾಗಿ, ಎಲ್ಲಾ 4 ಚಾರ್ ಧಾಮಗಳ ದ್ವಾರಗಳನ್ನು ವಾರ್ಷಿಕವಾಗಿ ಅಕ್ಟೋಬರ್ ಮತ್ತು ನವೆಂಬರ್ ನಡುವೆ ಮುಚ್ಚಲಾಗುತ್ತದೆ. ಅವು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮತ್ತೆ ತೆರೆಯುತ್ತವೆ. ಗಂಗೋತ್ರಿ ದೇವಾಲಯವು ಪ್ರವೇಶಿಸಲಾಗದ ಚಳಿಗಾಲದ 6 ತಿಂಗಳುಗಳಲ್ಲಿ ಭಕ್ತರು ಮುಖ್ಬಾ ಗ್ರಾಮದಲ್ಲಿರುವ ಗಂಗಾ ದೇವಿಯ ಚಳಿಗಾಲದ ವಾಸಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ – Kannada News | Operation Sindoor Dominates Republic Day Parade showcasing the unified strength of the Indian Army Air Force and Navy

ನವದೆಹಲಿ, ಜನವರಿ 26: ಇಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆಪರೇಷನ್ ಸಿಂಧೂರ್ (Operation Sindoor) ಕುರಿತಾದ ಟ್ಯಾಬ್ಲೋ ಬಹಳ ಗಮನ ಸೆಳೆಯಿತು. ಇದು ಬ್ರಹ್ಮೋಸ್, S-400 ವಾಯು ರಕ್ಷಣಾ ಮತ್ತು ಡ್ರೋನ್ ಮಾಡೆಲ್​ಗಳನ್ನು ಒಳಗೊಂಡಿತ್ತು. ಹಾಗೇ, ವಾಯುಸೇನೆ, ನೌಕಾಪಡೆ, ಭೂ ಸೇನೆಯ ಒಗ್ಗಟ್ಟನ್ನು ಇದು ಪ್ರದರ್ಶಿಸಿತು. ಭಾರತದ 77ನೇ ಗಣರಾಜ್ಯೋತ್ಸವದ ಮೆರವಣಿಗೆಯು ಈ ವರ್ಷ ರಕ್ಷಣಾ ಸನ್ನದ್ಧತೆ, ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಜಂಟಿ ಕಾರ್ಯಾಚರಣೆಯ ಬಲದ ಮೇಲೆ ಪ್ರಬಲ ಒತ್ತು ನೀಡುವ ಮೂಲಕ ಜಾಗತಿಕ ಗಮನ ಸೆಳೆಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

T20 World Cup 2026: ಟಿ20 ವಿಶ್ವಕಪ್​ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ – Kannada News | West Indies Squad for 2026 T20 World Cup Revealed

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026 ರ ಟಿ20 ವಿಶ್ವಕಪ್ (2026 T20 World Cup) ಫೆಬ್ರವರಿ 7 ರಿಂದ ಆರಂಭವಾಗಲಿದೆ. ಒಟ್ಟು 20 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ 17ನೇ ತಂಡವಾಗಿ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ( West Indies squad) ಘೋಷಿಸಿದೆ. ವೆಸ್ಟ್ ಇಂಡೀಸ್ ಈ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಶೈ ಹೋಪ್ ತಂಡವನ್ನು ಮುನ್ನಡೆಸಲಿದ್ದು, ಶಿಮ್ರಾನ್ ಹೆಟ್ಮೈಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಜೇಸನ್ ಹೋಲ್ಡರ್, ಜಾನ್ಸನ್ ಚಾರ್ಲ್ಸ್, ಬ್ರಾಂಡನ್ ಕಿಂಗ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಬಲಿಷ್ಠ ವಿಂಡೀಸ್ ತಂಡ ಪ್ರಕಟ

ಏಳು ದಿನಗಳ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕ್ವೆಂಟಿನ್ ಸ್ಯಾಂಪ್ಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕ್ವೆಂಟಿನ್ ಸ್ಯಾಂಪ್ಸನ್ ಒಂಬತ್ತು ಪಂದ್ಯಗಳಲ್ಲಿ 34.43 ಸರಾಸರಿ ಮತ್ತು 151.57 ಸ್ಟ್ರೈಕ್ ರೇಟ್‌ನಲ್ಲಿ 241 ರನ್ ಗಳಿಸಿದ್ದರು. ಇದರಲ್ಲಿ ಎರಡು ಅರ್ಧಶತಕಗಳು ಸೇರಿದ್ದವು. ಜೇಸನ್ ಹೋಲ್ಡರ್, ರೋವ್‌ಮನ್ ಪೊವೆಲ್ ಮತ್ತು ರೊಮಾರಿಯೊ ಶೆಫರ್ಡ್ ಕೂಡ ತಂಡಕ್ಕೆ ಮರಳಿದ್ದಾರೆ. ಶಮರ್ ಜೋಸೆಫ್ ಅವರನ್ನು ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಹೋಲ್ಡರ್, ಮ್ಯಾಥ್ಯೂ ಫೋರ್ಡ್ ಮತ್ತು ಜೇಡನ್ ಸೀಲ್ಸ್ ವೇಗದ ಬೌಲಿಂಗ್ ವಿಭಾಗವನ್ನು ನಿರ್ವಹಿಸಲಿದ್ದಾರೆ.

ವೆಸ್ಟ್ ಇಂಡೀಸ್ ತಂಡವು ಗ್ರೂಪ್ ಸಿ ನಲ್ಲಿದ್ದು, ಫೆಬ್ರವರಿ 7 ರಂದು ಸ್ಕಾಟ್ಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯಲಿದೆ. ನಂತರ ಫೆಬ್ರವರಿ 11 ರಂದು ಇಂಗ್ಲೆಂಡ್ ವಿರುದ್ಧ, ಫೆಬ್ರವರಿ 15 ರಂದು ನೇಪಾಳ ಮತ್ತು ಫೆಬ್ರವರಿ 19 ರಂದು ಇಟಲಿ ವಿರುದ್ಧ ಆಡಲಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಈ ಗುಂಪಿನಲ್ಲಿ ಎರಡು ಬಲಿಷ್ಠ ತಂಡಗಳಾಗಿವೆ. ಆದ್ದರಿಂದ, ಈ ಎರಡು ತಂಡಗಳು ಈ ಗುಂಪಿನಿಂದ ಮುಂದಿನ ಸುತ್ತಿಗೆ ಟಿಕೆಟ್ ಪಡೆಯಬಹುದು. ಆದರೆ ಟಿ20 ಕ್ರಿಕೆಟ್​ನಲ್ಲಿ ಏನು ಬೇಕಾದರೂ ಆಗಬಹುದು.

2026 ರ ಟಿ20 ವಿಶ್ವಕಪ್‌ಗಾಗಿ ವೆಸ್ಟ್ ಇಂಡೀಸ್ ತಂಡ: ಶೈ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೈಯರ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಮ್ಯಾಥ್ಯೂಸ್ ಫೋರ್ಡ್, ಜೇಸನ್ ಹೋಲ್ಡರ್, ಅಕೀಲ್ ಹುಸೇನ್, ಶೆಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಕೇಶ್ ಮೋತಿ, ರೋವ್‌ಮನ್ ಪೊವೆಲ್, ಶೆರ್ಫೇನ್ ರುದರ್‌ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ಜೇಡೆನ್ ಸೀಲ್ಸ್, ರೊಮಾರಿಯೊ ಶೆಫರ್ಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:56 pm, Mon, 26 January 26

Source link

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್ – Kannada News | Mallamma gets movie offers after Bigg Boss Kannada Season 12

ಮಾತಿನ ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಹೆಚ್ಚು ಖ್ಯಾತಿ ಪಡೆದುಕೊಂಡರು. ಈಗ ಅವರಿಗೆ ಸಿನಿಮಾಗಳಿಂದ ಅವಕಾಶಗಳು ಸಿಗುತ್ತಿವೆ. ಅಲ್ಲದೇ, ಧಾರಾವಾಹಿಗಳಲ್ಲಿ ನಟಿಸುವ ಆಫರ್ ಸಹ ಬಂದಿದೆ. ಆ ಬಗ್ಗೆ ಮಲ್ಲಮ್ಮ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘ವಿನಾಶಕಾಲೇ’ ಸಿನಿಮಾದಲ್ಲಿ ಮಲ್ಲಮ್ಮ ಅವರು ನಟಿಸುತ್ತಿದ್ದಾರೆ. ತಾಯಿಯ ಪಾತ್ರ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಬಿಗ್ ಬಾಸ್ ಶೋನಿಂದ ತಮ್ಮ ಬದುಕು ಬದಲಾಗಿದೆ ಎಂದು ಮಲ್ಲಮ್ಮ (Mallamma) ಹೇಳಿದ್ದಾರೆ. ಈಗ ಎಲ್ಲರೂ ಅವರನ್ನು ಗುರುತಿಸುತ್ತಾರೆ. ಚಿಕ್ಕ ಮಕ್ಕಳಿಗೂ ಕೂಡ ಮಲ್ಲಮ್ಮ ಯಾರು ಎಂಬುದು ಗೊತ್ತಾಗಿದೆ. ನಟನೆಯನ್ನು ಕಲಿತು ಸಿನಿಮಾಗಳಲ್ಲಿ ನಟಿಸುವುದಾಗಿ ಮಲ್ಲಮ್ಮ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

WPL 2026: ಡಬ್ಲ್ಯುಪಿಎಲ್​ನಲ್ಲಿ ಮೊಟ್ಟ ಮೊದಲ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್ – Kannada News | WPL First Century: Nat Sciver Brunt’s Historic 100 for MI vs RCB

ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಕೊನೆಗೂ ಮೊದಲ ಶತಕ ದಾಖಲಾಗಿದೆ. ಈ ಲೀಗ್​ನ ನಾಲ್ಕನೇ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಲೆಜೆಂಡರಿ ಆಲ್​ರೌಂಡರ್ ನ್ಯಾಟ್ ಸಿವರ್-ಬ್ರಂಟ್ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯದಲ್ಲಿ, ನ್ಯಾಟ್ ಸಿವರ್-ಬ್ರಂಟ್ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿ, ಡಬ್ಲ್ಯುಪಿಎಲ್​ನಲ್ಲಿ ತನ್ನ ಹೆಸರನ್ನು ಶಾಶ್ವತಗೊಳಿಸಿದರು. ಸತತ ನಾಲ್ಕು ಆವೃತ್ತಿಗಳಲ್ಲಿ ಅನೇಕ ಆಟಗಾರ್ತಿಯರು ಶತಕದಂಚಿಗೆ ಬಂದು ಎಡವುತ್ತಿದ್ದರು. ಇದರಿಂದಾಗಿ ಮೊದಲ ಶತಕಕ್ಕಾಗಿ ಇಷ್ಟು ವರ್ಷ ಕಾಯಬೇಕಾಯಿತು. ಅಂದರೆ 1059 ದಿನಗಳು ಮತ್ತು 82 ಪಂದ್ಯಗಳ ನಂತರ, ಡಬ್ಲ್ಯುಪಿಎಲ್​ನಲ್ಲಿ ಅಂತಿಮವಾಗಿ ಮೊದಲ ಶತಕ ದಾಖಲಾಗಿದೆ.

ವಡೋದರಾದಲ್ಲಿ ನಡೆದ ಈ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿತು. ಆರಂಭಿಕ ಆಟಗಾರ್ತಿ ಸಜೀವನ ಸಜ್ನಾ ಅವರನ್ನು ಮೂರನೇ ಓವರ್‌ನಲ್ಲಿ ಕಳೆದುಕೊಂಡು ಕಳಪೆ ಆರಂಭ ಕಂಡಿತು. ಆದಾಗ್ಯೂ, ನ್ಯಾಟ್ ಸಿವರ್, ಸಹ ಆಟಗಾರ್ತಿ ಹೇಲಿ ಮ್ಯಾಥ್ಯೂಸ್ ಅವರೊಂದಿಗೆ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಗೆಯೇ ಇವರಿಬ್ಬರ ನಡುವೆ 131 ರನ್‌ಗಳ ಜೊತೆಯಾಟವೂ ಮೂಡಿಬಂತು.

ಅರ್ಧಶತಕ ಬಾರಿಸಿದ ನಂತರ ಮ್ಯಾಥ್ಯೂಸ್ ಔಟಾದರೂ ನ್ಯಾಟ್ ಸಿವರ್ ತಮ್ಮ ಅಬ್ಬರ ಮುಂದುವರೆಸಿದರು. ಆರ್‌ಸಿಬಿ ಬೌಲರ್‌ಗಳ ಮೇಲೆ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದ ಬ್ರಂಟ್ ಅಂತಿಮವಾಗಿ 20 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಸಿಂಗಲ್ ಮೂಲಕ ಶತಕ ಪೂರೈಸಿದರು. 57 ಎಸೆತಗಳಲ್ಲಿ 100 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿತ್ತು. ಬ್ರಂಟ್ ಅವರ ಈ ಸ್ಫೋಟಕ ಇನ್ನಿಂಗ್ಸ್‌ನಿಂದಾಗಿ, ಮುಂಬೈ 20 ಓವರ್‌ಗಳಲ್ಲಿ 200 ರನ್‌ಗಳ ಕಠಿಣ ಗುರಿ ನೀಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version