ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಗೆ ಆಟೋ ಚಾಲಕ ಬಲಿ

ಬೆಂಗಳೂರು, ಮೇ 29: ಇತ್ತೀಚೆಗೆ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನರು ಸಾವನ್ನಪ್ಪಿದ್ದರು. ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ  ಕ್ಲಬ್‌ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(56) ಮೃತ ಆಟೋ ಚಾಲಕ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Published On – 8:58 pm, Fri, 29 May 26

Source link

GT vs RR: ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಯಶಸ್ವಿ ಜೈಸ್ವಾಲ್ ಅವರ ಸಾಮರ್ಥ್ಯ ಇಡೀ ಜಗತ್ತಿಗೆ ತಿಳಿದಿದೆ. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ಜೈಸ್ವಾಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಜೈಸ್ವಾಲ್ ಅವರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇತ್ತು. ಆದರೆ ಆ ಪಂದ್ಯದಲ್ಲೂ ನಿರಾಸೆ ಮೂಡಿಸಿದ ಜೈಸ್ವಾಲ್ ಕೇವಲ ಎರಡು ಎಸೆತಗಳನ್ನು ಎದುರಿಸಿ ಒಂದು ರನ್ ಗಳಿಸಿ ಔಟಾದರು. ಮೊಹಮ್ಮದ್ ಸಿರಾಜ್ ಎಸೆದ ಬೌನ್ಸರ್ ಎಸೆತವನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ಜೈಸ್ವಾಲ್ ಕ್ಯಾಚ್ ನೀಡಿದರು. ಈ ಮೂಲಕ ಪ್ಲೇಆಫ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಯಶಸ್ವಿ ಜೈಸ್ವಾಲ್ ಅವರ ಕಳಪೆ ಪ್ರದರ್ಶನ ಸತತ ಮೂರನೇ ಪಂದ್ಯದಲ್ಲೂ ಮುಂದುವರೆಯಿತು.

ಐಪಿಎಲ್ ನಾಕೌಟ್ ಪಂದ್ಯಗಳಲ್ಲಿ, ಯಶಸ್ವಿ ಜೈಸ್ವಾಲ್ ಮೂರು ಪಂದ್ಯಗಳಲ್ಲಿ ಕೇವಲ 26 ರನ್ ಗಳಿಸಿದ್ದಾರೆ. 2022 ರಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಕೇವಲ ಮೂರು ರನ್ ಗಳಿಸಿದ್ದ ಜೈಸ್ವಾಲ್, ಆ ಬಳಿಕ ನಡೆದಿದ್ದ ಫೈನಲ್ ಪಂದ್ಯದಲ್ಲಿಯೂ 22 ರನ್ ಬಾರಿಸಿದ್ದರು. ಈಗ ಕೇವಲ ಒಂದು ರನ್ ಗಳಿಸಿ ಔಟಾಗಿದ್ದಾರೆ. ಪ್ಲೇಆಫ್ ಸುತ್ತಿನಲ್ಲಿ ಜೈಸ್ವಾಲ್ ಇದುವರೆಗೆ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ.

Source link

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಬೆಂಗಳೂರು, ಮೇ 29: ರಾಜಗುರು ದ್ವಾರಕಾನಾಥ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಜೀವನದ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಗುರೂಜಿ ಪ್ರಕಾರ, ಡಿಕೆ ಶಿವಕುಮಾರ್ ಅವರ ಜಾತಕದಲ್ಲಿ ಬುಧಾದಿತ್ಯ ಯೋಗವಿದ್ದು, ಇದು ಅವರಿಗೆ ಉನ್ನತ ಸ್ಥಾನಗಳನ್ನು ತಂದುಕೊಡುತ್ತದೆ. ಬಂಗಾರಪ್ಪನವರ ಕಾಲದಿಂದಲೂ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿರುವ ಗುರೂಜಿ, 40 ವರ್ಷಗಳ ಹಿಂದೆಯೇ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾಗಿ ತಿಳಿಸಿದ್ದಾರೆ. ಡಿಕೆ ಶಿವಕುಮಾರ್​ಗೆ ಅಧಿಕಾರ ಸ್ವಲ್ಪ ತಡವಾಗಿ ಸಿಕ್ಕಿದ್ದು, ಈ ಹಾದಿಯು ಸವಾಲುಗಳಿಂದ ಕೂಡಿದೆ ಎಂದು ಗುರೂಜಿ ಹೇಳಿದ್ದಾರೆ. ಪಕ್ಷವನ್ನು ನಿರ್ವಹಿಸುವುದು, ಬೆಂಗಳೂರು ಸಮಸ್ಯೆಗಳನ್ನು ನಿಭಾಯಿಸುವುದು, ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದು ಮತ್ತು ಮಹಿಳಾ ಮೀಸಲಾತಿ ಮಸೂದೆಯಂತಹ ವಿಷಯಗಳನ್ನು ಎದುರಿಸಬೇಕಾಗಿದೆ. ಡಿಕೆ ಶಿವಕುಮಾರ್ ಚಂಡಿಹೋಮ ಮಾಡಿದ ನಂತರ ಮಂತ್ರಿಯಾದ ಘಟನೆಯನ್ನೂ ನೆನಪಿಸಿಕೊಂಡಿದ್ದಾರೆ. ತಮ್ಮ ಆರಾಧ್ಯ ದೇವರುಗಳಾದ ಸುಬ್ರಹ್ಮಣ್ಯ, ದತ್ತಾತ್ರೇಯ ಮತ್ತು ಶೃಂಗೇರಿ ಜಗದ್ಗುರು ಭಾರತೀ ಮಹಾಸ್ವಾಮಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಐಟಿ ದಾಳಿ ಕೇಸ್: ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್​​​​ಗೆ ಕೋರ್ಟ್​​​ ಬಿಗ್ ರಿಲೀಫ್

ಬೆಂಗಳೂರು, (ಮೇ 29): ತೆರಿಗೆ ವಂಚನೆ ಸಂಬಂಧ ಐಟಿ ದಾಳಿ ಪ್ರಕರಣದಲ್ಲಿ (IT Raid Case) ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)  ಅವರಿಗೆ ವಿಧಿಸಲಾಗಿದ್ದ ಜಾಮೀನು ಷರತ್ತನ್ನು ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಡಿಲಿಸಿದೆ. ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲವೆಂದು ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿದೆ. ಸಚಿವರಾಗಿ ಅಧಿಕೃತ ಕೆಲಸ ಹಾಗೂ ವೈಯಕ್ತಿಕ ಉದ್ಯಮದ ನಿಮಿತ್ತ ಮುಂದಿನ ಎರಡು ವರ್ಷಗಳ ಕಾಲ ವಿವಿಧ ದೇಶಗಳಿಗೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ, ಪ್ರತಿ ಬಾರಿಯೂ ಪ್ರವಾಸದ ಸಂಪೂರ್ಣ ವಿವರವನ್ನು ತನಿಖಾ ಸಂಸ್ಥೆಗೆ ಕಡ್ಡಾಯವಾಗಿ ಸಲ್ಲಿಸುವಂತೆ ಕೋರ್ಟ್ ಷರತ್ತು ವಿಧಿಸಿದೆ. ಈ ಮೂಲಕ ಸಿಎಂ ಆಗುತ್ತಿರುವ ಡಿಕೆ ಶಿವಕುಮಾರ್‌ ಅವರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಂತಾಗಿದೆ.

ಮುಖ್ಯಾಂಶಗಳು

  • ತೆರಿಗೆ ವಂಚನೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್
  • ತೆರಿಗೆ ವಂಚನೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಡಿಕೆಶಿ ಜಾಮೀನು ಷರತ್ತು ಸಡಿಲಿಕೆ
  • 2 ವರ್ಷ ವಿದೇಶ ಪ್ರವಾಸ ಕೈಗೊಳ್ಳಲು ಬೆಂಗಳೂರು 42ನೇ ಎಸಿಜೆಎಂ ಕೋರ್ಟ್ ಅನುಮತಿ

ಡಿಕೆ ಶಿವಕುಮಾರ್ ಮನವಿ ಪುರಸ್ಕರಿಸಿದ ಕೋರ್ಟ್

ದೆಹಲಿಯ ನಿವಾಸಗಳ ಮೇಲೆ ಐಟಿ ದಾಳಿ ಪ್ರಕರಣ ಸಂಬಂಧ ಕೋರ್ಟ್ ಅನುಮತಿ ಇಲ್ಲದೇ ದೇಶಬಿಟ್ಟು ತೆರಳದಂತೆ ಕೋರ್ಟ್ ಷರತ್ತು ವಿಧಿಸಿ ಜಾಮೀನು ನೀಡಿತ್ತು. ಬಳಿಕ ಡಿಕೆ ಶಿವಕುಮಾರ್, ಜಾಮೀನು ಷರತ್ತು ಸಡಿಲಿಕೆ ಕೋರಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ವ್ಯವಹಾರ, ಅಧಿಕೃತ ಕೆಲಸಗಳ ಹಿನ್ನೆಲೆಯಲ್ಲಿ ವಿದೇಶ ಪ್ರಯಾಣಿಸಬೇಕಿದೆ. ಅಮೆರಿಕ ಸಂಯುಕ್ತ ಸಂಸ್ಥಾನ, ಯುರೋಪ್, ಇಂಗ್ಲೆಂಡ್, ಆಸ್ಟ್ರೇಲಿಯಾ, ರಷ್ಯಾ, ಅರಬ್ ದೇಶಗಳಿಗೆ ಕಾರ್ಯಕ್ರಮ ನಿಮಿತ್ತ ಪ್ರಯಾಣಿಸಬೇಕಿದೆ. ಪ್ರತಿ ಬಾರಿ ವಿದೇಶಕ್ಕೆ ತೆರಳುವಾಗ ಕೋರ್ಟ್​ಗೆ ಈ ಬಗ್ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಬೇಕಿದೆ. ಹೀಗಾಗಿ 2 ವರ್ಷಗಳ ಅವಧಿಗೆ ಜಾಮೀನು ಷರತ್ತು ಸಡಿಲಿಸುವಂತೆ ಕೋರಿದ್ದರು. ಇದನ್ನು ವಿಚಾರಣೆ ನಡೆಸಿದ ಕೋರ್ಟ್, ಡಿಕೆ ಶಿವಕುಮಾರ್ ಮನವಿಯನ್ನು ಪುರಸ್ಕರಿಸಿದ್ದು, ವಿದೇಶ ಪ್ರವಾಸ ಷರತ್ತನ್ನು ಸಡಿಲಗೊಳಿಸಿ ಆದೇಶಿಸಿದೆ. ಆದ್ರೆ, ವಿದೇಶಕ್ಕೆ ತೆರಳುವಾಗ ತನಿಖಾಧಿಕಾರಿಗೆ ಮಾಹಿತಿ ನೀಡಲು ಸೂಚಿಸಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ 3 ದಿನಾಂಕ ನೀಡಿದ ದ್ವಾರಕನಾಥ್ ಗುರೂಜಿ

ಪ್ರಕರಣದ ಹಿನ್ನೆಲೆ

ತೆರಿಗೆ ವಂಚನೆ ಆರೋಪದ ಮೇಲೆ ನವದೆಹಲಿಯ ವಿವಿಧ ನಿವಾಸ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಏಕಾಏಕಿ ಬೃಹತ್ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಈಗಲ್ಟನ್‌ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾಗ ಶಿವಕುಮಾರ್‌ ಅವರು ಪ್ರಮುಖ ಸಾಕ್ಷಿಯನ್ನು ನಾಶಪಡಿಸಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ತೆರಿಗೆ ವಂಚನೆ ಆರೋಪದ ಮೇಲೆ ಡಿ.ಕೆ. ಶಿವಕುಮಾರ್‌ (A1), ಶರ್ಮಾ ಟ್ರಾನ್ಸ್‌ಪೋರ್ಟ್‌ನ ಸುನೀಲ್‌ ಕುಮಾರ್‌ ಶರ್ಮಾ, ಅವರ ಸಹೋದರ ಸಚಿನ್‌ ನಾರಾಯಣ್‌, ಆಂಜನೇಯ ಹನುಮಂತಯ್ಯ ಮತ್ತು ಎನ್‌ ರಾಜೇಂದ್ರ ವಿರುದ್ಧ ಆದಾಯ ತೆರಿಗೆ ಕಾಯಿದೆ ಸೆಕ್ಷನ್‌ಗಳಾದ 276C(1), 277, 278 ಹಾಗೂ ಐಪಿಸಿ ಸೆಕ್ಷನ್‌ಗಳಾದ 193, 199 ಮತ್ತು 120ಬಿ ಅಡಿ ಪ್ರಕರಣ ದಾಖಲಾಗಿತ್ತು. ಬಳಿಕ ಡಿಕೆ ಶಿವಕುಮಾರ್ ಮನವಿ ಮೇರೆಗೆ ಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಆದ್ರೆ, ನ್ಯಾಯಾಲಯದ ಪೂರ್ವಾನುಮತಿ ಇಲ್ಲದೇ ದೇಶ ತೊರೆಯುವಂತಿಲ್ಲ ಎಂಬ ಕಠಿಣ ಷರತ್ತು ವಿಧಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

ಬೆಂಗಳೂರು, ಮೇ 29: ಕೇವಲ ಅರ್ಧ ಗಂಟೆ ಸುರಿದ ಮಳೆಗೆ ನಗರದ ಹಲವೆಡೆ ರಸ್ತೆಗಳು ಕೆರೆಯಂತಾಗಿವೆ. ಶಿವಾನಂದ ವೃತ್ತದ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತಿವೆ. ಈ ವೇಳೆ ಕಾರು ಒಂದು ಅಂಡರ್​ಪಾಸ್​ನಲ್ಲಿ ಸಿಲುಕಿಕೊಂಡಿದೆ. ಕಾರು ತೆಗೆಯಲು ಚಾಲಕ ಪರದಾಡಿದ್ದಾರೆ. ಇನ್ನು ಯುಬಿ ಸಿಟಿ ಮುಂದಿನ ರಸ್ತೆಯಲ್ಲಿ 2 ಅಡಿಯಷ್ಟು ನೀರು ನಿಂತಿದೆ. ನೀರು ನುಗಿದ್ದ ಪರಿಣಾಮ ಬೈಕ್ ಕೈಕೊಟ್ಟಿದ್ದು, ಫುಡ್ ಡೆಲಿವರಿ ಬಾಯ್ ಪರದಾಡಿದ್ದಾರೆ. ಇನ್ನು ರಿಚ್ಮಂಡ್ ವೃತ್ತ, ಶಾಂತಿನಗರದಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಕೆ.ಆರ್.ಪುರಂನಲ್ಲಿ ಆಲಿಕಲ್ಲು ಸಹಿತ ಸುರಿದ ಮಳೆಗೆ ಜನರ ಪರದಾಡಿದರು. ಮಹಾಲಕ್ಷ್ಮೀ ಲೇಔಟ್, ಯಶವಂತಪುರದಲ್ಲಿ ರಸ್ತೆ ಮೇಲೆ ನೀರು ನಿಂತಿದೆ. ಇನ್ನು ಇತ್ತ ಕೋರಮಂಗಲದ ಸೋನಿ ಸಿಗ್ನಲ್, ಕನ್ನಿಂಗ್​ಹ್ಯಾಮ್ ರಸ್ತೆಗಳು ಹೊಳೆಯಂತಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Source link

ಹೈ ಬಿಪಿಯಿಂದ ಮರೆವು ಹೆಚ್ಚಾಗುತ್ತಾ? ಮೆದುಳಿನ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ?

ಇತ್ತೀಚಿನ ದಿನಗಳಲ್ಲಿ ಹೈ ಬಿಪಿ (High BP) ಸಮಸ್ಯೆ ಯುವಕರಲ್ಲೂ ಹೆಚ್ಚಾಗಿ ಕಾಣಿಸುತ್ತಿದೆ. ಇದನ್ನು ಹಲವರು ಹೃದಯ ಸಂಬಂಧಿತ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಹೈ ಬಿಪಿ ದೇಹದ ಹಲವು ಅಂಗಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಶೇಷವಾಗಿ, ಇದು ಮೆದುಳಿನ ಆರೋಗ್ಯ ಮತ್ತು ನೆನಪಿನ ಶಕ್ತಿಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ದೀರ್ಘಕಾಲ ಹೈ ಬಿಪಿ ಇದ್ದವರಿಗೆ ಮೆದುಳಿಗೆ ರಕ್ತವನ್ನು ಸಾಗಿಸುವ ರಕ್ತನಾಳಗಳು ಹಾನಿಗೊಳಗಾಗಬಹುದು. ಇದರಿಂದ ಗಮನ ಕೇಂದ್ರೀಕರಿಸುವುದು, ವಿಚಾರಗಳನ್ನು ನೆನಪಿಟ್ಟುಕೊಳ್ಳುವುದು ಮತ್ತು ಯೋಚನೆ ಮಾಡುವ ಸಾಮರ್ಥ್ಯ ಕುಗ್ಗುವ ಸಾಧ್ಯತೆ ಇದೆ. ಕೆಲವರಲ್ಲಿ ಮರೆವು, ಮಾನಸಿಕ ದೌರ್ಬಲ್ಯ ಮತ್ತು ಏಕಾಗ್ರತೆ ಸಮಸ್ಯೆಗಳು ಕಾಣಿಸಬಹುದು. ಆದರೆ ಜನ ಇವುಗಳನ್ನು ತಲೆನೋವು, ದಣಿವು ಅಥವಾ ಒತ್ತಡ ಎಂದು ಭಾವಿಸಿ ಈ ರೀತಿಯ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ದೀರ್ಘಕಾಲ ಬಿಪಿ ನಿಯಂತ್ರಣದಲ್ಲಿಲ್ಲದಿದ್ದರೆ ಅದು ಬ್ರೇನ್ ಹೆಲ್ತ್ ಮೇಲೆ ನಿಧಾನವಾಗಿ ಪರಿಣಾಮ ಬೀರುತ್ತದೆ ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ಯಾವ ರೀತಿಯ ಲಕ್ಷಣಗಳನ್ನು ನಿರ್ಲಕ್ಷಿಸಬಾರದು, ಈ ಸಮಸ್ಯೆಯನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಲಕ್ಷಣಗಳನ್ನು ನಿರ್ಲಕ್ಷಿಸಬಾರದು?

  • ಪದೇಪದೇ ಮರೆತು ಹೋಗುವುದು
  • ಗಮನ ಕೇಂದ್ರೀಕರಿಸಲು ಕಷ್ಟವಾಗುವುದು
  • ತಲೆ ಸುತ್ತುವುದು
  • ನಿರಂತರ ತಲೆನೋವು
  • ಗೊಂದಲ ಅಥವಾ ಮಾನಸಿಕ ದಣಿವು

ಈ ರೀತಿಯ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಬಿಪಿ ಮತ್ತು ಮೆದುಳಿನ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಇದನ್ನೂ ಓದಿ: ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಹೈ ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು?

ತಜ್ಞರ ಸಲಹೆಯಂತೆ ನಿಯಮಿತವಾಗಿ ಬಿಪಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಉಪ್ಪಿನ ಸೇವನೆಯನ್ನು ಕಡಿಮೆ ಮಾಡುವುದು, ಪೌಷ್ಟಿಕ ಆಹಾರ ಸೇವಿಸುವುದು ಮತ್ತು ಪ್ರತಿದಿನ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ಸಹಕಾರಿ. ಜೊತೆಗೆ ಉತ್ತಮ ನಿದ್ರೆ, ಒತ್ತಡ ನಿಯಂತ್ರಣ ಮತ್ತು ಧೂಮಪಾನ- ಮದ್ಯಪಾನದಿಂದ ದೂರ ಇರುವುದು ಕೂಡ ಮೆದುಳಿನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಹೈ ಬಿಪಿಯನ್ನು ನಿರ್ಲಕ್ಷಿಸದೆ ಆರಂಭದಲ್ಲೇ ನಿಯಂತ್ರಣದಲ್ಲಿಟ್ಟರೆ ಹೃದಯ ಮತ್ತು ಮೆದುಳಿನ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

GT vs RR: ಟಾಸ್ ವೇಳೆ ಗೊಂದಲ; ಟಾಸ್ ಗೆದ್ದ ಗಿಲ್, ಬ್ಯಾಟಿಂಗ್‌ ಆಯ್ದುಕೊಂಡ ಪರಾಗ್

ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯ ಆರಂಭಕ್ಕೂ ಮುನ್ನವೇ ವಿವಾದವೊಂದು ಹುಟ್ಟಿಕೊಂಡಿದೆ. ವಾಸ್ತವವಾಗಿ ಈ ಪಂದ್ಯದ ಟಾಸ್ ಅನ್ನು ಎರಡು ಬಾರಿ ನಡೆಸಬೇಕಾಯಿತು. ಮ್ಯಾಚ್ ರೆಫರಿ ಪ್ರಕಾಶ್ ಭಟ್ ಅವರ ಈ ನಿರ್ಧಾರ ಶುಭ್​ಮನ್ ಗಿಲ್ ಅವರ ಅಸಮಾಧಾನಕ್ಕೆ ಕಾರಣವಾಯಿತು. ಏಕೆಂದರೆ ಮೊದಲ ಬಾರಿಗೆ ನಡೆದ ಟಾಸ್‌ನಲ್ಲಿ ಶುಭಮನ್ ಗಿಲ್ ಟಾಸ್ ಗೆದ್ದಿದ್ದರು. ಆದರೆ ಮ್ಯಾಚ್ ರೆಫರಿ ಈ ಟಾಸ್ ಪ್ರಕ್ರಿಯೆಯನ್ನು ತಿರಸ್ಕರಿಸಿದರು. ಇದರಿಂದಾಗಿ ಎರಡನೇ ಬಾರಿಗೆ ನಡೆದ ಟಾಸ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡರು. ಅಷ್ಟಕ್ಕೂ ಈ ಪಂದ್ಯದಲ್ಲಿ ಎರಡೆರಡು ಬಾರಿ ಟಾಸ್ ನಡೆಯಲು ಕಾರಣವೇನು ಎಂಬುದನ್ನು ನೋಡುವುದಾದರೆ..

ಈ ಪಂದ್ಯಕ್ಕೆ ಪ್ರಕಾಶ್ ಭಟ್ ಮ್ಯಾಚ್ ರೆಫರಿ ಆಗಿದ್ದರು. ಇತ್ತ ಶುಭ್​ಮನ್ ಗಿಲ್ ನಾಣ್ಯ ಚಿಮ್ಮಿಸಿದರೆ, ರಿಯಾನ್ ಪರಾಗ್ ತಮ್ಮ ನಿರ್ಧಾರ ಹೇಳಿದರು. ಆದರೆ ಪರಾಗ್ ಯಾವ ನಿರ್ಧಾರ ಹೇಳಿದರು ಎಂಬುದು ಮ್ಯಾಚ್ ರೆಫರಿಗೆ ಸರಿಯಾಗಿ ಕೇಳಿಸಲಿಲ್ಲ. ಹೀಗಾಗಿ ರೆಫರಿ ಮೊದಲ ಟಾಸ್ ಅನ್ನು ರದ್ದುಗೊಳಿಸಿದರು. ಆದಾಗ್ಯೂ ಟಾಸ್ ಶುಭ್​ಮನ್ ಗಿಲ್ ಪರವಾಗಿ ಹೋಗಿತ್ತಾದರೂ ರೆಫರಿ ಅದನ್ನು ರದ್ದುಗೊಳಿಸಿದರು. ಹೀಗಾಗಿ ಎರಡನೇ ಬಾರಿಗೆ ಟಾಸ್ ನಡೆಸಬೇಕಾಯಿತು. ಎರಡನೇ ಬಾರಿಗೆ ನಡೆದ ಟಾಸ್​ನಲ್ಲಿ ರಿಯಾನ್ ಪರಾಗ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಈ ವೇಳೆ ಗಿಲ್ ಸ್ವಲ್ಪ ಅಸಮಾಧಾನಗೊಂಡವರಂತೆ ಕಾಣುತ್ತಿದ್ದರು. ಇದೀಗ ಅದರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಪಡೆದ ಕ್ರೈಂ ಥ್ರಿಲ್ಲರ್ ಸಿನಿಮಾ ‘ಚಾರ್ಜ್‌ಶೀಟ್ 03-08’

ಕನ್ನಡದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ಸಿನಿಮಾ ‘ಚಾರ್ಜ್‌ಶೀಟ್ 03-08’ (Chargesheet 03-08) ಈಗ ಸೆನ್ಸಾರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸೆನ್ಸಾರ್ ಮಂಡಳಿಯಿಂದ ಯಾವುದೇ ವಿಡಿಯೋ ಕಟ್ ಇಲ್ಲದೆ U/A ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಚಿತ್ರದ ನಿರೂಪಣೆ ಹಾಗೂ ಕಥೆಯ ನಿರ್ವಹಣೆಯನ್ನು ನೋಡಿ ಸೆನ್ಸಾರ್ ಮಂಡಳಿ (CBFC) ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಚಿತ್ರತಂಡ ಹೇಳಿದೆ. ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಸಿಕ್ಕಿರುವುದರಿಂದ ಚಿತ್ರತಂಡಕ್ಕೆ ಸಂತಸ ಆಗಿದೆ.

‘ಎಂ.ಎಸ್ ಅರ್ಜುನ್ ಫಿಲ್ಮ್ಸ್’ ಬ್ಯಾನರ್ ಮೂಲಕ ನಿರ್ಮಾಣ ಆಗಿರುವ ಈ ಸಿನಿಮಾಗೆ ದಿನೇಶ್ ಮತ್ತು ಲಕ್ಷ್ಮಣ್ ಅವರು ನಿರ್ಮಾಪಕರು. ‘ಚಾರ್ಜ್‌ಶೀಟ್ 03-08’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಸಿಕ್ಕಿರುವ ಮೆಚ್ಚುಗೆ ಬಗ್ಗೆ ಅವರು ಅಪಾರ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಚಿತ್ರವನ್ನು ಅಧಿಕೃತವಾಗಿ ‘ಕ್ರೈಂ ಥ್ರಿಲ್ಲರ್’ ಶೈಲಿಯ ಅಡಿಯಲ್ಲಿ ಪ್ರಮಾಣೀಕರಿಸಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಅವರ ಮೂಲ ಕಥಾಹಂದರವನ್ನು ಇಟ್ಟುಕೊಂಡು ಈ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶಿಸಿದ್ದಾರೆ. ಅವರೇ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ನೈಜವಾಗಿ ಸಾಗುವ ತನಿಖಾ ಶೈಲಿಯ ಕಥಾಹಂದರವು ಪ್ರೇಕ್ಷಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ಈ ತಂಡಕ್ಕಿದೆ.

ಅಲ್ಲದೇ, ಸಿನಿಮಾದ ಆಡಿಯೋ ಹಕ್ಕುಗಳನ್ನು ‘A2 ಮ್ಯೂಸಿಕ್’ ಸಂಸ್ಥೆ ಪಡೆದುಕೊಂಡಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಚಿತ್ರದ ಪ್ರಚಾರ ಕಾರ್ಯಗಳನ್ನು ಈಗಾಗಲೇ ಆರಂಭಿಸಲಾಗಿದೆ. ಮೊದಲಿಗೆ ಟೀಸರ್, ನಂತರ 2 ಹಾಡುಗಳು ಮತ್ತು ಕೊನೆಯಲ್ಲಿ ಟ್ರೇಲರ್ ಬಿಡುಗಡೆ ಮಾಡುವ ಯೋಜನೆಯನ್ನು ಚಿತ್ರತಂಡ ರೂಪಿಸಿಕೊಂಡಿದೆ. ಚಿತ್ರದ ಪ್ರಚಾರವನ್ನು ಕರ್ನಾಟಕದಲ್ಲಿ ಮಾತ್ರವಲ್ಲದೆ ವಿಶ್ವದ ಕನ್ನಡಿಗರಿಗೂ ತಲುಪಿಸುವ ಉದ್ದೇಶ ಇದೆ. ಚೆನ್ನೈ, ಮುಂಬೈ ಸೇರಿದಂತೆ ಭಾರತದ ಪ್ರಮುಖ ಮೆಟ್ರೋ ನಗರಗಳಲ್ಲಿಯೂ ಪ್ರಚಾರ ಮಾಡಲು ತಂಡ ಸಜ್ಜಾಗಿದೆ.

ಇದನ್ನೂ ಓದಿ: ಎಸ್.ಕೆ. ಉಮೇಶ್ ಬರೆದ ‘ಐ ವಿಟ್ನೆಸ್’ ಕೃತಿ ಆಧಾರಿತ ಸಿನಿಮಾ ‘ಚಾರ್ಜ್‌ಶೀಟ್ 03-08’

ಈ ಸಿನಿಮಾದಲ್ಲಿ ಸುಂದರ್ ರಾಜ್, ಹರ್ಷ್ ಅರ್ಜುನ್, ಅಮರ್, ಸತ್ಯಶ್ರೀ, ರೂಪೇಶ್, ಡಾ. ಸುಧಾಕರ್ ಶೆಟ್ಟಿ, ಡಾ. ಪ್ರಮೋದ್, ಚೇತನ ಖೋಟ್, ವೆಂಕಟ್ ಭಾರದ್ವಾಜ್ ಮುಂತಾದವರು ಈ ನಟಿಸಿದ್ದಾರೆ. ಸಮೀರ್ ಕುಲಕರ್ಣಿ ಅವರು ಸಂಗೀತ ಮತ್ತು ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರಮೋದ್ ಭಾರತೀಯ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಮೀಕ್ ವಿ. ಭರದ್ವಾಜ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ: BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುImage Credit source: wikipedia

ಬೆಂಗಳೂರು, ಮೇ 29: ರಾಜಧಾನಿ ಬೆಂಗಳೂರಿನ (Bengaluru) ಟ್ರಾಫಿಕ್​ ಸಮಸ್ಯೆ ನಿವಾರಸುವ ನಿಟ್ಟಿನಲ್ಲಿನ ಪ್ರಮುಖ ಯೋಜನೆಗಳ ಪೈಕಿ ನಮ್ಮ ಮೆಟ್ರೋ ಕೂಡ ಒಂದು. ಹಸಿರು, ನೇರಳೆ ಮತ್ತು ಹಳದಿ  ಸೇರಿ ಒಟ್ಟು ಮೂರು ಮಾರ್ಗಗಳಲ್ಲಿ ಈಗಾಗಲೇ ಮೆಟ್ರೋ ರೈಲುಗಳು ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿವೆ. ಹೀಗಿದ್ದರೂ ಪ್ರಯಾಣಿಕರು ಮಾತ್ರ ಬಿಎಂಆರ್​​ಸಿಎಲ್​​ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆ ಕಾರಣವಾಗಿರೋದು ಹಳದಿ ಮಾರ್ಗದಲ್ಲಿ ಸಂಚರಿಸುವ ರೈಲುಗಳ ನಡುವೆ ಇರುವ ಸಮಯದ ಅಂತರ.

ಮುಖ್ಯಾಂಶಗಳು

  • ಹಳದಿ ಮಾರ್ಗದಲ್ಲಿ ರೈಲುಗಳ ಕೊರತೆ ಹಿನ್ನೆಲೆ ಪರದಾಟ
  • BMRCL ವಿರುದ್ಧ ನಮ್ಮ ಮೆಟ್ರೋ ಪ್ರಯಾಣಿಕರ ಆಕ್ರೊಶ
  • ಪ್ರಯಾಣಿಕರ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮಕ್ಕೆ ಆಗ್ರಹ

ಹೌದು, ಪ್ರಧಾನಿ ನರೇಂದ್ರ ಮೋದಿ ಅವರಿಂದ 2025ರ ಆಗಸ್ಟ್​​ 10ರಂದು ನಮ್ಮ ಮೆಟ್ರೋದ ಯೆಲ್ಲೋ ಮಾರ್ಗಕ್ಕೆ ಚಾಲನೆ ಸಿಕ್ಕಿದ್ದು, ಆಗಸ್ಟ್​​ 11ರಿಂದ ವಾಣಿಜ್ಯ ಕಾರ್ಯಾಚರಣೆ ಆರಂಭವಾಗಿತ್ತು. ಆದರೆ ಈ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಶುರುವಾಗಿ 9 ತಿಂಗಳುಗಳೇ ಕಳೆದಿದ್ದರೂ ರೈಲುಗಳಿಗಾಗಿ ಪ್ರಯಾಣಿಕರ ಪರದಾಟ ಮಾತ್ರ ತಪ್ಪಿಲ್ಲ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚು ಜನಸಂದಣಿ ಇರುವ ಸಮಯದ ವೇಳೆ 3-4 ನಿಮಿಷಕ್ಕೊಂದರಂತೆ ರೈಲು ಸಂಚರಿಸುತ್ತವೆ. ಹಾಗೆಯೇ ಉಳಿದ ಸಮದಲ್ಲಿ 5 ನಿಮಿಷಗಳಿಗೊಂದು ಮೆಟ್ರೋ ಓಡಾಡಲಿದೆ. ಹೀಗಿರುವಾಗ ಯೆಲ್ಲೋ ಲೈನ್​​ನಲ್ಲಿ ಮಾತ್ರ ಪೀಕ್​​ ಅವರ್​​ನಲ್ಲಿ 9 ನಿಮಿಷಕ್ಕೊಂದು ಹಾಗೆಯೇ ಉಳಿದ ಸಮಯದಲ್ಲಿ 14 ನಿಮಿಷಗಳಿಗೊಂದು ರೈಲು ಸಂಚಾರ ಯಾಕೆಂದು ಪ್ರಯಾಣಿಕರು ಪ್ರಶ್ನಿಸಿದ್ದಾರೆ. ಗ್ರೀನ್ ಲೈನ್ ಮೂಲಕ ಆರ್. ವಿ. ರೋಡ್​​ಗೆ ಬರುವ ಪ್ರಯಾಣಿಕರು, ಯೆಲ್ಲೋ ಲೈನ್​​ನ ರೈಲಿಗಾಗಿ ಇಲ್ಲಿ ಸುಮಾರು 10 ರಿಂದ 14 ನಿಮಿಷಗಳ ಕಾಲ ಕಾಯಬೇಕಾದ ಸ್ಥಿತಿ ಇದೆ ಎಂದು ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರೇ ಗಮನಿಸಿ!; ಭಾನುವಾರ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!

ಹಳದಿ ಮಾರ್ಗದ ಮೆಟ್ರೋ ರೈಲುಗಳ ಕಾರ್ಯಾಚರಣೆ ಶುರುವಾಗಿ 9 ತಿಂಗಳುಗಳೇ ಕಳೆದರೂ ರೈಲುಗಳ ಸಂಖ್ಯೆ ಮಾತ್ರ ಹೆಚ್ಚಾಗಿಲ್ಲ. ಈ ಲೈನ್​​ ಆರಂಭದ ವೇಳೆ 3 ರೈಲುಗಳು ಕಾರ್ಯಾಚರಣೆ ನಡೆಸುತ್ತಿದ್ದರೆ ಈಗ ಅವುಗಳ ಸಂಖ್ಯೆ 8ಕ್ಕೆ ಏರಿವೆ. 9 ಮತ್ತು 10ನೇ ರೈಲು ಅದಾಗಲೇ ಬೆಂಗಳೂರಿಗೆ ಆಗಮಿಸಿದ್ದರೂ ಅವುಗಳಿನ್ನೂ ವಾಣಿಜ್ಯ ಸಂಚಾರಕ್ಕೆ ಲಭ್ಯವಾಗಿಲ್ಲ. ಅವುಗಳ ಪರೀಕ್ಷೆ ಇನ್ನೂ ಮುಗಿಯದ ಕಾರಣ ಮೆಟ್ರೋ ಪ್ರಯಾಣಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಹೀಗಾಗಿ ಶೀಘ್ರ ಆ ಎರಡು ರೈಲುಗಳ ಪರೀಕ್ಷೆ ಮುಗಿಸಿ ಅವುಗಳನ್ನು ವಾಣಿಜ್ಯ ಸಂಚಾರಕ್ಕೆ ಲಭ್ಯ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:58 pm, Fri, 29 May 26

Source link

Bangaluru Rain: ಬೆಂಗಳೂರಲ್ಲಿ ವರುಣಾರ್ಭಟ: ರಸ್ತೆಗಳು ಜಲಾವೃತ, ಸಂಚಾರ ವ್ಯತ್ಯಯ

ಬೆಂಗಳೂರು, ಮೇ 29: ಸಿಲಿಕಾನ್​ ಸಿಟಿ ಜನರಿಗೆ ವೀಕೆಂಡ್ ಆರಂಭದಲ್ಲೇ ಮಳೆ ಶಾಕ್ ನೀಡಿದೆ. ಮೋಡ ಕವಿದ ವಾತಾವರಣವಿದ್ದ ನಗರದಲ್ಲಿ ಸಂಜೆಯಾಗುತ್ತಿದ್ದಂತೆ ವರುಣನ ಅಬ್ಬರ ಜೋರಾಗಿದೆ. ನಗರದ ಪ್ರಮುಖ ರಸ್ತೆಗಳು ಮಳೆ ನೀರಿಂದಾಗಿ ಜಲಾವೃತಗೊಂಡಿದ್ದು, ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರಾಕಾರ ಮಳೆಗೆ ಅಂಡರ್‌ಪಾಸ್‌ಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

Exit mobile version