Headlines

ಹಫ್ತಾ ವಸೂಲಿ ಮಾಡುತ್ತ ಏರಿಯಾದಲ್ಲಿ ಹವಾ, ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ – Kannada News | Rowdy sheeter shabbir Hacked to death In Bengaluru For Land Near mosque

ಬೆಂಗಳೂರು, (ಜನವರಿ 26): ಹಫ್ತಾ ವಸೂಲಿ ಮಾಡುತ್ತಿದ್ದ ಏರಿಯಾದಲ್ಲಿ ಹವಾ ಮಾಡಿದ್ದ ನಟೋರಿಯಸ್ ರೌಡಿಶೀಟರ್ ನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಮಂಗಮ್ಮನಪಾಳ್ಯದ ನಿವಾಸಿ ಮೊಹಮ್ಮದ್ ಶಬ್ಬೀರ್ ಕೊಲೆಯಾದ ರೌಡಿಶೀಟರ್. ಪ್ರತಿನಿತ್ಯ ಹಫ್ತಾ ವಸೂಲಿ ಮಾಡುತ್ತಿದ್ದ ಕಿರುಕುಳ ನೀಡುತ್ತಿದ್ದ. ಸಾಲದಕ್ಕೆ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಾ ಮಸೀದಿ ಪಕ್ಕದ ಜಾಗದ ಮೇಲೆ ಕಣ್ಣು ಹಾಕಿದ್ದ. ಇದರಿಂದ ರೋಸಿ ಹೋಗಿದ್ದ ಏರಿಯಾದ ಯುವ ಪಡೆಯೊಂದು ರೌಡಿಶೀಟರ್​ ಮೊಹಮ್ಮದ್ ಶಬ್ಬೀರ್ ನನ್ನು ಹತ್ಯೆ ಮಾಡಿದೆ. ಹೇಳಿ ಕೇಳಿ ರೌಡಿಶೀಟರ್…

Read More

ಬದರಿನಾಥ-ಕೇದಾರನಾಥ ದೇವಾಲಯಕ್ಕೆ ಹಿಂದೂಗಳಲ್ಲದವರಿಗೆ ಪ್ರವೇಶ ನಿಷೇಧ – Kannada News | Badrinath and Kedarnath To Ban Non Hindus from entering dham Temple Panel To Pass Proposal Soon

ಉತ್ತರಕಾಶಿ, ಜನವರಿ 26: ಉತ್ತರಾಖಂಡದ ಹಿಮಾಲಯ ಪರ್ವತದಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ (Badrinath) ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಹಿಂದೂಗಳನ್ನು ಹೊರತುಪಡಿಸಿ ಬೇರೆ ಧರ್ಮದವರಿಗೆ ಈ ದೇವಾಲಯಗಳಿಗೆ ಪ್ರವೇಶ ನಿಷೇಧಿಸಲು ತೀರ್ಮಾನಿಸಲಾಗಿದೆ. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಈ 2 ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು ಎಂದು ಈ ದೇವಾಲಯಗಳನ್ನು ನಿರ್ವಹಿಸುವ ದೇವಾಲಯ ಸಂಸ್ಥೆ ಘೋಷಿಸಿದೆ. ಬದರಿನಾಥ-ಕೇದಾರನಾಥ ಧಾಮ ಸೇರಿದಂತೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ನಿಯಂತ್ರಿಸುವ…

Read More

ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ – Kannada News | Operation Sindoor Dominates Republic Day Parade showcasing the unified strength of the Indian Army Air Force and Navy

ನವದೆಹಲಿ, ಜನವರಿ 26: ಇಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆಪರೇಷನ್ ಸಿಂಧೂರ್ (Operation Sindoor) ಕುರಿತಾದ ಟ್ಯಾಬ್ಲೋ ಬಹಳ ಗಮನ ಸೆಳೆಯಿತು. ಇದು ಬ್ರಹ್ಮೋಸ್, S-400 ವಾಯು ರಕ್ಷಣಾ ಮತ್ತು ಡ್ರೋನ್ ಮಾಡೆಲ್​ಗಳನ್ನು ಒಳಗೊಂಡಿತ್ತು. ಹಾಗೇ, ವಾಯುಸೇನೆ, ನೌಕಾಪಡೆ, ಭೂ ಸೇನೆಯ ಒಗ್ಗಟ್ಟನ್ನು ಇದು ಪ್ರದರ್ಶಿಸಿತು. ಭಾರತದ 77ನೇ ಗಣರಾಜ್ಯೋತ್ಸವದ ಮೆರವಣಿಗೆಯು ಈ ವರ್ಷ ರಕ್ಷಣಾ ಸನ್ನದ್ಧತೆ, ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಜಂಟಿ ಕಾರ್ಯಾಚರಣೆಯ ಬಲದ ಮೇಲೆ ಪ್ರಬಲ ಒತ್ತು ನೀಡುವ ಮೂಲಕ ಜಾಗತಿಕ ಗಮನ…

Read More

T20 World Cup 2026: ಟಿ20 ವಿಶ್ವಕಪ್​ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ – Kannada News | West Indies Squad for 2026 T20 World Cup Revealed

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026 ರ ಟಿ20 ವಿಶ್ವಕಪ್ (2026 T20 World Cup) ಫೆಬ್ರವರಿ 7 ರಿಂದ ಆರಂಭವಾಗಲಿದೆ. ಒಟ್ಟು 20 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ 17ನೇ ತಂಡವಾಗಿ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ( West Indies squad) ಘೋಷಿಸಿದೆ. ವೆಸ್ಟ್ ಇಂಡೀಸ್ ಈ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್…

Read More

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್ – Kannada News | Mallamma gets movie offers after Bigg Boss Kannada Season 12

ಮಾತಿನ ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಹೆಚ್ಚು ಖ್ಯಾತಿ ಪಡೆದುಕೊಂಡರು. ಈಗ ಅವರಿಗೆ ಸಿನಿಮಾಗಳಿಂದ ಅವಕಾಶಗಳು ಸಿಗುತ್ತಿವೆ. ಅಲ್ಲದೇ, ಧಾರಾವಾಹಿಗಳಲ್ಲಿ ನಟಿಸುವ ಆಫರ್ ಸಹ ಬಂದಿದೆ. ಆ ಬಗ್ಗೆ ಮಲ್ಲಮ್ಮ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘ವಿನಾಶಕಾಲೇ’ ಸಿನಿಮಾದಲ್ಲಿ ಮಲ್ಲಮ್ಮ ಅವರು ನಟಿಸುತ್ತಿದ್ದಾರೆ. ತಾಯಿಯ ಪಾತ್ರ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಬಿಗ್ ಬಾಸ್ ಶೋನಿಂದ ತಮ್ಮ ಬದುಕು ಬದಲಾಗಿದೆ ಎಂದು ಮಲ್ಲಮ್ಮ (Mallamma) ಹೇಳಿದ್ದಾರೆ….

Read More

WPL 2026: ಡಬ್ಲ್ಯುಪಿಎಲ್​ನಲ್ಲಿ ಮೊಟ್ಟ ಮೊದಲ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್ – Kannada News | WPL First Century: Nat Sciver Brunt’s Historic 100 for MI vs RCB

ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಕೊನೆಗೂ ಮೊದಲ ಶತಕ ದಾಖಲಾಗಿದೆ. ಈ ಲೀಗ್​ನ ನಾಲ್ಕನೇ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಲೆಜೆಂಡರಿ ಆಲ್​ರೌಂಡರ್ ನ್ಯಾಟ್ ಸಿವರ್-ಬ್ರಂಟ್ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯದಲ್ಲಿ, ನ್ಯಾಟ್ ಸಿವರ್-ಬ್ರಂಟ್ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿ, ಡಬ್ಲ್ಯುಪಿಎಲ್​ನಲ್ಲಿ ತನ್ನ ಹೆಸರನ್ನು ಶಾಶ್ವತಗೊಳಿಸಿದರು. ಸತತ ನಾಲ್ಕು ಆವೃತ್ತಿಗಳಲ್ಲಿ ಅನೇಕ ಆಟಗಾರ್ತಿಯರು ಶತಕದಂಚಿಗೆ ಬಂದು ಎಡವುತ್ತಿದ್ದರು. ಇದರಿಂದಾಗಿ ಮೊದಲ ಶತಕಕ್ಕಾಗಿ ಇಷ್ಟು…

Read More

ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ, ಆಗಿದ್ದೇನು? – Kannada News | A 24 Year Woman Commits Suicide In Bengaluru Over harassed By Husband Family For dowry

ಬೆಂಗಳೂರು, (ಜನವರಿ 26): ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿಯೊಬ್ಬರು (Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಯಡಿಯೂರಿನಲ್ಲಿ ನಡೆದಿದೆ. ಕೀರ್ತಿ ಶ್ರೀ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗಂಡನ ಹಾಗೂ ಅವರ ಕುಟುಂಬಸ್ಥರ ವರದಕ್ಷಣಿ ಕಿರುಕುಳದಿಂದ ಕೀರ್ತಿ ಸಾವಿಗೆ ಶರಣಾಗಿದ್ದಾಳೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಕೀರ್ತಿ ಕುಟುಂಬಸ್ಥರು ನೀಡಿದ ದೂರನ್ನು ಬನಶಂಕರಿ ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೂಲತಃ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೀರ್ತಿ, 2023ರ ನವೆಂಬರ್‌ನಲ್ಲಿ ಗುರುಪ್ರಸಾದ್‌ ಎಂಬುವರನ್ನು…

Read More

ಸರಿಯಾಗಿ ನಿದ್ರೆ ಮಾಡಿ ಎದ್ದ ಮೇಲೂ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ಆಗುವುದಕ್ಕೆ ಕಾರಣವೇನು ಗೊತ್ತಾ? – Kannada News | Headache Like Feeling After Sleep: What’s Wrong?

ರಾತ್ರಿ ಪೂರ್ತಿ ನಿದ್ರೆ ಚೆನ್ನಾಗಿ ಆದಾಗ ಮಾತ್ರ ದೇಹ ಮತ್ತು ಮನಸ್ಸು ಎರಡೂ ಉಲ್ಲಾಸದಿಂದ ಕೂಡಿರುತ್ತೆ ಎಂದು ಸಾಮಾನ್ಯವಾಗಿ ಎಲ್ಲರೂ ನಂಬುತ್ತಾರೆ, ಆದರೆ ಕೆಲವೊಮ್ಮೆ ಇದಕ್ಕೆ ವಿರುದ್ಧವಾಗಿ ನಮ್ಮ ದೇಹ ಸ್ಪಂದಿಸುತ್ತದೆ. ಅಂದರೆ ಚೆನ್ನಾಗಿ ನಿದ್ರೆ (Sleep) ಮಾಡಿ ಎದ್ದಾಗಲೂ ಕೂಡ ಆಲಸ್ಯ, ತಲೆ ಭಾರವಾದಂತಹ ಅನುಭವವಾಗುತ್ತದೆ. ಈ ಸ್ಥಿತಿ ಏಕಾಗ್ರತೆಯ ಕೊರತೆ, ಕಿರಿಕಿರಿ ಅಥವಾ ಕೆಲಸದ ಮೇಲೆ ಗಮನಹರಿಸಲು ತೊಂದರೆಯಾಗುವಂತೆ ಮಾಡುತ್ತದೆ. ಅನೇಕರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷಿಸುತ್ತಾರೆ, ಆದರೆ ಇದು ನಿಮ್ಮ ದೇಹದೊಳಗೆ…

Read More

ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ – Kannada News | Indias Air Superiority Forced Pakistan To Seek Ceasefire During Operation Sindoor Europian Think Tank

ನವದೆಹಲಿ, ಜನವರಿ 26: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ಸ್ಥಳವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಆಪರೇಷನ್ ಸಿಂಧೂರ್ (Operation Sindoor) ಪ್ರಾರಂಭಿಸಿತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಿಗೂ ಈ ದಾಳಿಗೂ ಸಂಬಂಧವಿದೆ ಎಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದಕ್ಷಿಣ ಏಷ್ಯಾದಲ್ಲಿ ವಾಯು ಶಕ್ತಿಯಲ್ಲಿ ನಿರ್ಣಾಯಕ ಬದಲಾವಣೆಯನ್ನು ಗುರುತಿಸಿತು. ಈ ಕಾರ್ಯಾಚರಣೆಯ…

Read More

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ – Kannada News | Mohsin Naqvi Blunder and Pakistan’s T20 World Cup Drama: India Match Risk?

2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು…

Read More