ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – Kannada News

ಭೋಪಾಲ್, ಜೂನ್ 9: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರಿಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ (Rajya Sabha Elections) ಸ್ಪರ್ಧಿಸಲು ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದುಗೊಂಡಿದೆ.

ಬಿಜೆಪಿ ಮೀನಾಕ್ಷಿ ನಟರಾಜನ್ ಅವರ ನಾಮನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು. ವರದಿಗಳ ಪ್ರಕಾರ, ಮೀನಾಕ್ಷಿ ನಟರಾಜನ್ ತೆಲಂಗಾಣದಲ್ಲಿ ಅವರ ವಿರುದ್ಧ ದಾಖಲಾಗಿದ್ದ ಕೇಸಿನ ಮಾಹಿತಿಯನ್ನು ಮರೆಮಾಚಿದ್ದರು, ಅದಕ್ಕಾಗಿಯೇ ಅವರ ನಾಮಪತ್ರ ರದ್ದುಗೊಂಡಿದೆ. ಈ ರದ್ದತಿಯು ರಾಜ್ಯದ ಮೂರು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿಯ ಮೇಲುಗೈಯನ್ನು ಸೂಚಿಸುತ್ತದೆ. ಇದರಿಂದಾಗಿ ಬಿಜೆಪಿಯ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಚುನಾವಣೆ ಇಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ, ಯಾರ್ಯಾರು?

ತೆಲಂಗಾಣದಲ್ಲಿ ಮೀನಾಕ್ಷಿ ನಟರಾಜನ್ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಿಜೆಪಿ ನಾಯಕರು ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಮೀನಾಕ್ಷಿ ಅವರು ಉದ್ದೇಶಪೂರ್ವಕವಾಗಿ ತಮ್ಮ ಅಫಿಡವಿಟ್‌ಗಳಲ್ಲಿ ಈ ವಿವರಗಳನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿದ್ದರು. ತಮ್ಮ ಆಸ್ತಿ ಮತ್ತು ಬ್ಯಾಂಕ್ ಬ್ಯಾಲೆನ್ಸ್‌ಗಳ ಸಂಪೂರ್ಣ ವಿವರಗಳನ್ನು ತಮ್ಮ ನಾಮಪತ್ರಗಳಲ್ಲಿ ಸ್ಪಷ್ಟವಾಗಿ ಬಹಿರಂಗಪಡಿಸಲಾಗಿಲ್ಲ ಎಂದು ಬಿಜೆಪಿ ಹೇಳಿತ್ತು. ಚುನಾವಣಾ ನಿಯಮಗಳ ಪ್ರಕಾರ ಅಭ್ಯರ್ಥಿಗಳು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳು, ಅವರ ಆಸ್ತಿಗಳು ಮತ್ತು ಸಾಲಗಳ ವಿವರಗಳನ್ನು ತಮ್ಮ ಅಫಿಡವಿಟ್‌ಗಳಲ್ಲಿ ಸಂಪೂರ್ಣ ಪಾರದರ್ಶಕತೆಯೊಂದಿಗೆ ಬಹಿರಂಗಪಡಿಸಬೇಕು.

ಈ ಘಟನೆಯಿಂದಾಗಿ ರಾಜ್ಯಸಭಾ ಚುನಾವಣೆಗೆ ಮುನ್ನ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಖಭಂಗ ಉಂಟಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವು ಪರಿಶೀಲನಾ ಪ್ರಕ್ರಿಯೆಯ ವೇಳೆ ತಿರಸ್ಕೃತಗೊಂಡಿದ್ದು, ಈ ಮೂಲಕ ರಾಜ್ಯದ ಮೂರನೇ ರಾಜ್ಯಸಭಾ ಸ್ಥಾನಕ್ಕಾಗಿ ನಡೆಯಬೇಕಿದ್ದ ಸ್ಪರ್ಧೆಗೆ ತೆರೆ ಬಿದ್ದಿದೆ. ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರದೊಂದಿಗೆ, ಬಿಜೆಪಿಯ ಮಹೇಶ್ ಕೇವತ್ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಕಾಂಗ್ರೆಸ್​​ನ 63 ಶಾಸಕರು ರೆಸಾರ್ಟ್​​ಗೆ

230 ಸದಸ್ಯರ ಮಧ್ಯಪ್ರದೇಶ ವಿಧಾನಸಭೆಯಲ್ಲಿ ತನ್ನ ಬಲದ ಆಧಾರದ ಮೇಲೆ ಎರಡು ರಾಜ್ಯಸಭಾ ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸ್ಥಿತಿಯಲ್ಲಿ ಬಿಜೆಪಿ ಇತ್ತು. ಮತ್ತೊಂದೆಡೆ ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆಯುವ ನಿರೀಕ್ಷೆಯಿತ್ತು. ಒಬ್ಬ ಅಭ್ಯರ್ಥಿ ಆಯ್ಕೆಯಾಗಲು 58 ಪ್ರಥಮ ಪ್ರಾಶಸ್ತ್ಯದ ಮತಗಳ ಅಗತ್ಯವಿರುತ್ತದೆ. 164 ಶಾಸಕರನ್ನು ಹೊಂದಿರುವ ಬಿಜೆಪಿ ಎರಡು ಸ್ಥಾನಗಳನ್ನು ಸುಲಭವಾಗಿ ಗೆಲ್ಲಲು ಸಾಕಷ್ಟು ಸಂಖ್ಯಾಬಲವನ್ನು ಹೊಂದಿತ್ತು. ಇನ್ನೂ 48 ಹೆಚ್ಚುವರಿ ಮತಗಳನ್ನು ಕೈಯಲ್ಲಿ ಉಳಿಸಿಕೊಂಡಿತ್ತು. ಆದರೆ, ಮೂರನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪಕ್ಷಕ್ಕೆ ಕ್ರಾಸ್ ವೋಟಿಂಗ್ ಅಥವಾ ಇತರ ಶಾಸಕರ ಬೆಂಬಲದ ಅಗತ್ಯವಿತ್ತು. ಹೀಗಾಗಿ ಈ ಸ್ಪರ್ಧೆಯು ರಾಜಕೀಯವಾಗಿ ಮಹತ್ವದ್ದಾಗಿತ್ತು.

ವಿಧಾನಸಭೆಯಲ್ಲಿ ಕಾಂಗ್ರೆಸ್ 63 ಶಾಸಕರನ್ನು ಹೊಂದಿದೆ. ಆದರೆ ಇಬ್ಬರು ಶಾಸಕರಾದ ರಾಜೇಂದ್ರ ಭಾರ್ತಿ ಮತ್ತು ಮುಖೇಶ್ ಮಲ್ಹೋತ್ರಾ ಅವರು ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಅನರ್ಹರಾಗಿದ್ದಾರೆ. ಇದು ಪಕ್ಷದ ಮತದಾನದ ಬಲವನ್ನು 61ಕ್ಕೆ ಇಳಿಸಿತ್ತು, ಇದರಿಂದಾಗಿ ಮೂರನೇ ಸ್ಥಾನದ ಸ್ಪರ್ಧೆಯು ಕಾಂಗ್ರೆಸ್‌ಗೆ ಮತ್ತಷ್ಟು ಸವಾಲಾಗಿ ಪರಿಣಮಿಸಿತ್ತು. ಆದರೆ ಇದೀಗ ಕಾಂಗ್ರೆಸ್​ ಅಭ್ಯರ್ಥಿಯ ನಾಮಪತ್ರವೇ ತಿರಸ್ಕೃತಗೊಂಡಿರುವುದರಿಂದ ಸ್ಪರ್ಧೆಯಿಲ್ಲದೆಯೇ ಬಿಜೆಪಿ ಆ ಸ್ಥಾನವನ್ನು ಕೂಡ ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:37 pm, Tue, 9 June 26

Source link

ಆನ್​ಲೈನ್​ನಲ್ಲಿ ಶಾಪಿಂಗ್ ಮಾಡುವ ಹೆಚ್ಚಿನವರಿಗೆ ಟೊಪ್ಪಿಹಾಕುತ್ತಿವೆ ಡಾರ್ಕ್ ಪ್ಯಾಟರ್ನ್ಸ್; ಬೆಚ್ಚಿಬೀಳಿಸುತ್ತಿದೆ ಈ ವರದಿ – Kannada News

ನವದೆಹಲಿ, ಜೂನ್ 9: ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಆಪ್‌ಗಳು ಗ್ರಾಹಕರನ್ನು ಮರುಳು ಮಾಡಲು ಬಳಸುವ ಮೋಸದ ಜಾಲಗಳಿಗೆ (Dark Patterns) ಬಹಳಷ್ಟು ಭಾರತೀಯರು ಬಲಿಯಾಗುತ್ತಿದೆ ಎನ್ನುವ ಆತಂಕಕಾರಿ ವರದಿಯೊಂದು ಬಂದಿದೆ. ಡಾರ್ಕ್ ಪ್ಯಾಟರ್ನ್ ಮಾದರಿಯ ವಂಚನೆಗಳಿಂದಾಗಿ ಶೇ. 88ರಷ್ಟು ಆನ್​ಲೈನ್ ಗ್ರಾಹಕರು ಹಣ ಕಳೆದುಕೊಳ್ಳುತ್ತಿದ್ದಾರೆನ್ನಲಾಗಿದೆ. ಅಂದರೆ, ಭಾರತದ ಒಟ್ಟು 30.4 ಕೋಟಿ ಆನ್‌ಲೈನ್ ಗ್ರಾಹಕರಲ್ಲಿ 27 ಕೋಟಿಗೂ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಮೋಸದ ಜಾಲದಿಂದಾಗಿ ಭಾರತೀಯ ಗ್ರಾಹಕರು ವಾರ್ಷಿಕವಾಗಿ ಅಂದಾಜು 25,000 ದಿಂದ 28,000 ಕೋಟಿ ರೂಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಪ್ರತಿ ಗ್ರಾಹಕರು ತಿಂಗಳಿಗೆ ಸರಾಸರಿ 78 ರಿಂದ 87 ರೂಪಾಯಿಗಳಷ್ಟು ನಷ್ಟ ಅನುಭವಿಸುತ್ತಿದ್ದಾರೆ.

ಈ ರೀತಿಯ ಮೋಸದ ತಂತ್ರಗಳಿಂದಾಗಿ ಗ್ರಾಹಕರು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಇದು ಒಟ್ಟಾರೆ ಆನ್‌ಲೈನ್ ಮಾರುಕಟ್ಟೆಯ ಸುಮಾರು 55,000 ಕೋಟಿ ರೂ ಮೌಲ್ಯದ ವ್ಯಾಪಾರವನ್ನು (GMV) ಅಪಾಯಕ್ಕೆ ದೂಡಿದೆ.

ಇದನ್ನೂ ಓದಿ: ರೈಲುಗಳಲ್ಲಿ ಇನ್ಮುಂದೆ ಮತ್ತೆ ಅಡುಗೆ ಶುರು; ಆದರೆ, ಎಲ್​ಪಿಜಿ ಬದಲು ಇಂಡಕ್ಷನ್ ಸ್ಟೌವ್ ಬಳಲು ನಿರ್ಧಾರ

‘ಡಾರ್ಕ್ ಪ್ಯಾಟರ್ನ್ಸ್’ ಹೇಗೆ ಕೆಲಸ ಮಾಡುತ್ತವೆ?

ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಆಪ್‌ಗಳು ಗ್ರಾಹಕರನ್ನು ಮರುಳು ಮಾಡಲು ಬಳಸುವ ಮೋಸದ ಜಾಲಗಳಿಗೆ ಡಾರ್ಕ್ ಪ್ಯಾಟರ್ನ್ ಎನ್ನುವುದು. ಆನ್‌ಲೈನ್ ಆಪ್‌ಗಳು ಪ್ರಮುಖವಾಗಿ ಮೂರು ರೀತಿಯ ಕುತಂತ್ರಗಳನ್ನು ಬಳಸುತ್ತವೆ:

  • ಗುಪ್ತ ಶುಲ್ಕಗಳು (Hidden Charges/Drip Pricing): ಶೇ. 63 ರಷ್ಟು ಡಿಜಿಟಲ್ ಪಾವತಿ ಬಳಕೆದಾರರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಂತಿಮವಾಗಿ ಪೇಮೆಂಟ್ ಮಾಡುವ ಹಂತದಲ್ಲಿ ಮಾತ್ರ ಹೆಚ್ಚುವರಿ ಶುಲ್ಕಗಳನ್ನು ಸೇರಿಸಲಾಗುತ್ತದೆ. ಇದು 2024 ರಲ್ಲಿ ಶೇ. 52 ರಷ್ಟಿತ್ತು.
  • ಬಲವಂತದ ಕ್ರಮಗಳು (Forced Actions): ಶೇ. 73 ರಷ್ಟು ಪ್ಲಾಟ್‌ಫಾರ್ಮ್‌ಗಳು ಗ್ರಾಹಕರಿಗೆ ಇಷ್ಟವಿಲ್ಲದಿದ್ದರೂ ಕೆಲವು ಆಯ್ಕೆಗಳನ್ನು ಒಪ್ಪಿಕೊಳ್ಳುವಂತೆ ಬಲವಂತಪಡಿಸುತ್ತವೆ (ಉದಾಹರಣೆಗೆ: ಪ್ರೀ-ಸೆಲೆಕ್ಟೆಡ್ ಇನ್ಶೂರೆನ್ಸ್ ಅಥವಾ ಆಡ್-ಆನ್ ಸೇವೆಗಳು).
  • ಬೈಟ್ ಅಂಡ್ ಸ್ವಿಚ್ (Bait-and-Switch): ಶೇ. 50 ಕ್ಕಿಂತ ಹೆಚ್ಚು ಪ್ಲಾಟ್‌ಫಾರ್ಮ್‌ಗಳು ಜಾಹೀರಾತಿನಲ್ಲಿ ಒಂದು ಬೆಲೆ ಅಥವಾ ಆಫರ್ ತೋರಿಸಿ, ಅಂತಿಮವಾಗಿ ಬೇರೆ ಉತ್ಪನ್ನ ಅಥವಾ ಹೆಚ್ಚಿನ ಬೆಲೆಯನ್ನು ವಿಧಿಸುತ್ತವೆ.

ಅಮೆಜಾನ್ ಮೇಲೆ ಹೆಚ್ಚಿನ ನಂಬುಗೆ?

ಡಾಟಮ್ ಇಂಟೆಲಿಜೆನ್ಸ್​ನ ಈ ವರದಿ ಪ್ರಕಾರ, ಇ-ಕಾಮರ್ಸ್ ವಲಯದಲ್ಲಿ ಅಮೆಜಾನ್ (Amazon) ಸಂಸ್ಥೆಯು ಗ್ರಾಹಕರಲ್ಲಿ ಅತಿ ಹೆಚ್ಚು ನಂಬಿಕೆ (50%) ಗಳಿಸಿದೆ. ಆದರೆ ಫ್ಲಿಪ್‌ಕಾರ್ಟ್, ಮಿಂತ್ರಾ ಮತ್ತು ನೈಕಾ ಕಂಪನಿಗಳ ಮೇಲೆ ಗ್ರಾಹಕರು ಹೆಚ್ಚಿನ ಅಪನಂಬಿಕೆ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ಟ್ರಾವೆಲ್ ಬುಕಿಂಗ್‌ನಲ್ಲಿ ‘ಮೇಕ್‌ಮೈಟ್ರಿಪ್’ (MakeMyTrip) ಸುರಕ್ಷಿತ ಎಂದು ಪರಿಣಾಮ ಬೀರಿದ್ದರೆ, ‘ಕ್ಲಿಯರ್‌ಟ್ರಿಪ್’ ಗ್ರಾಹಕರಿಗೆ ಹೆಚ್ಚು ಹಾನಿಕಾರಕವಾಗಿ ಕಂಡುಬಂದಿದೆ. ಕ್ವಿಕ್ ಕಾಮರ್ಸ್ (ತ್ವರಿತ ವಿತರಣೆ) ವಿಭಾಗದಲ್ಲಿ ‘ಬಿಗ್‌ಬಾಸ್ಕೆಟ್’ ಅತಿ ಹೆಚ್ಚು ಡಾರ್ಕ್ ಪ್ಯಾಟರ್ನ್ ತಂತ್ರಗಳನ್ನು ಬಳಸುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: ಹೊಸ DL, ವಾಹನ ನಿಯಮ: ಪರವಾನಗಿ ಅವಧಿ ವಿಸ್ತರಣೆ, ಆನ್​ಲೈನ್​ನಲ್ಲೇ ವಾಹನ ಮಾಲಕತ್ವ ವರ್ಗಾವಣೆ

ಜಾಗೃತಿಯಿದ್ದವರೂ ಮೋಸಕ್ಕೆ ಬಲಿ

ವರದಿಯಲ್ಲಿ ಒಂದು ವಿಚಿತ್ರ ಸಂಗತಿ ಬೆಳಕಿಗೆ ಬಂದಿದೆ — ಶೇ. 81 ರಷ್ಟು ಗ್ರಾಹಕರಿಗೆ ಈ ಚೀಟಿಂಗ್ ಪ್ಯಾಟರ್ನ್​ಗಳ ಬಗ್ಗೆ ಜಾಗೃತಿ ಇದ್ದರೂ, ಅವರಲ್ಲೇ ಶೇಕಡಾ 85 ರಷ್ಟು ಜನರು ಇವುಗಳಿಗೆ ಬಲಿಯಾಗುತ್ತಿದ್ದಾರೆ.

ಇದನ್ನು ತಡೆಯಲು ಮುಂದಿನ 36 ತಿಂಗಳುಗಳ ಕ್ರಿಯಾ ಯೋಜನೆಯನ್ನು ಈ ವರದಿ ಪ್ರಸ್ತಾಪಿಸಿದೆ. ಮೊದಲ ಹಂತವಾಗಿ, ಬುಕಿಂಗ್ ಅಥವಾ ಪಾವತಿ ಮಾಡುವಾಗ ಮೊದಲೇ ಟಿಕ್ ಆಗಿರುವ ಇನ್ಶೂರೆನ್ಸ್ ಆಪ್ಷನ್‌ಗಳನ್ನು ನಿಷೇಧಿಸುವುದು, ಸರ್ಚ್ ರಿಸಲ್ಟ್‌ನಲ್ಲೇ ಸಂಪೂರ್ಣ ಬೆಲೆಯನ್ನು ತೋರಿಸುವುದು ಮತ್ತು ದೂರುಗಳ ಶೀಘ್ರ ವಿಲೇವಾರಿಗೆ ಪ್ರತ್ಯೇಕ ಪೋರ್ಟಲ್ ಸ್ಥಾಪಿಸುವಂತೆ ಶಿಫಾರಸು ಮಾಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಳೆಯ ಟೂತ್‌ಬ್ರಷ್‌ ಎಸೆಯುವ ಬದಲು ಮನೆಯ ಈ ಎಲ್ಲಾ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳಿ – Kannada News

ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ದೃಷ್ಟಿಯಿಂದ ನಾವೆಲ್ಲರೂ ಹಳೆಯದಾದ, ಮುರಿದ ವಸ್ತುಗಳನ್ನೆಲ್ಲಾ ಮನೆಯಿಂದ ಎಸೆದು ಬಿಡುತ್ತೇವೆ. ಆದರೆ ಏನು ಗೊತ್ತಾ, ಇದರಿಂದ ಉಪಯೋಗವೇ ಇಲ್ಲ ಎಂದು ಬಿಸಾಡುವ ವಸ್ತುಗಳನ್ನು ವಿವಿಧ ರೀತಿಯಲ್ಲಿ ಬಳಸಿಕೊಳ್ಳಬಹುದು. ಅಂತಹ ವಸ್ತುಗಳಲ್ಲಿ ಟೂತ್‌ಬ್ರಷ್‌ (toothbrush) ಕೂಡ ಒಂದು. ಸಾಮಾನ್ಯವಾಗಿ ಹಳೆಯ ಟೂತ್‌ಬ್ರಷ್‌ ಅನ್ನು ಎಸೆದು ಬಿಡುತ್ತೇವೆ. ಇದನ್ನು ಎಸೆಯುವ ಬದಲು ಅನೇಕ ಮನೆ ಕೆಲಸಗಳಿಗೆ ಉಪಯೋಗಿಸಬಹುದು, ಇದರ ಸಹಾಯದಿಂದ ಅನೇಕ ಕೆಲಸಗಳನ್ನು ಸುಲಭವಾಗಿ ಮಾಡಬಹುದು. ಹಾಗಿದ್ದರೆ ಹಳೆಯ ಟೂತ್‌ಬ್ರಷ್‌ ಸಹಾಯದಿಂದ ಯಾವೆಲ್ಲಾ ಮನೆ ಕೆಲಸಗಳನ್ನು ಮಾಡಬಹುದು ಎಂಬುದನ್ನು ನೋಡೋಣ ಬನ್ನಿ.

ಹಳೆಯ ಟೂತ್‌ ಬ್ರಷ್‌ಗಳನ್ನು ಮನೆ ಕೆಲಸಕ್ಕೆ ಈ ರೀತಿಯಾಗಿ ಉಪಯೋಗಿಸಿ:

ಗ್ಯಾಸ್ ಬರ್ನರ್ ಸ್ವಚ್ಛಗೊಳಿಸಬಹುದು: ನಿಮ್ಮ ಗ್ಯಾಸ್ ಬರ್ನರ್‌ಗಳನ್ನು ಸ್ವಚ್ಛಗೊಳಿಸಲು ಹಳೆಯ ಟೂತ್ ಬ್ರಷ್ ಅನ್ನು ಬಳಸಬಹುದು. ಗ್ಯಾಸ್ ಬರ್ನರ್‌ನ ಸಣ್ಣ ರಂಧ್ರಗಳಲ್ಲಿ ಕೊಳಕು ಹೆಚ್ಚಾಗಿ ಸಂಗ್ರಹವಾಗುತ್ತದೆ, ಇದನ್ನು ಬ್ರಷ್‌ನಿಂದ ಸುಲಭವಾಗಿ ಸ್ವಚ್ಛಗೊಳಿಸಬಹುದು.

ಆಭರಣಗಳ ಶುಚಿಗೊಳಿಸುವಿಕೆ: ಹಳೆಯ ಹಲ್ಲುಜ್ಜುವ ಬ್ರಷ್ ಎಸೆಯುವ ಬದಲು ಆಭರಣಗಳನ್ನು ಸ್ವಚ್ಛಗೊಳಿಸಲು ಅವುಗಳನ್ನು ಬಳಸಬಹುದು. ಬೆಳ್ಳಿಯ ಕಾಲ್ಗೆಜ್ಜೆಗಳು ಮತ್ತು ಚಿನ್ನದ ಕಿವಿಯೋಲೆಗಳನ್ನು ಟೂತ್‌ಬ್ರಷ್‌ ಸಹಾಯದಿಂದ ಸುಲಭವಾಗಿ ಸ್ವಚ್ಛಗೊಳಿಸಬಹುದು. ಸ್ವಲ್ಪ ಸೋಪ್ ಅಥವಾ ಸೌಮ್ಯವಾದ ಕ್ಲೀನರ್ ಬಳಸಿ, ಬ್ರಷ್‌ನಿಂದ ನಿಧಾನವಾಗಿ ಉಜ್ಜುವುದರಿಂದ ಸಂಗ್ರಹವಾದ ಕೊಳೆಯನ್ನು ತೆಗೆದುಹಾಕಬಹುದು, ಮಾಸಿ ಹೋದ ಆಭರಣದ ಹೊಳಪನ್ನು ಹೆಚ್ಚಿಸಬಹುದು.

ಶೂಗಳನ್ನು ಸ್ವಚ್ಛಗೊಳಿಸಬಹುದು: ಕೆಲವೊಮ್ಮೆ ಬೂಟುಗಳಲ್ಲಿ ಕಲೆಯಾಗುತ್ತವೆ. ಅದರಲ್ಲೂ ಬಿಳಿ ಶೂಗಳ ಬದಿಗಳಲ್ಲಿ ಕೊಳಕು ಹೆಚ್ಚಾಗಿ ಗೋಚರಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ನೀವು ಅವುಗಳನ್ನು ಸ್ವಚ್ಛಗೊಳಿಸಲು ಹಲ್ಲುಜ್ಜುವ ಬ್ರಷ್ ಅನ್ನು ಬಳಸಬಹುದು. ಸ್ವಲ್ಪ ಸೋಪ್‌ ಅಥವಾ ಲಿಕ್ವಿಡ್‌ ಹಾಕಿ ಬ್ರಷ್‌ನಿಂದ ಸ್ಕ್ರಬ್‌ ಮಾಡಿದರೆ ಶೂಗಳಲ್ಲಿ ಅಂಟಿರುವ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಬಹುದು.

ಅಡುಗೆಮನೆಯನ್ನು ಸ್ವಚ್ಛಗೊಳಿಸಬಹುದು: ಅಡುಗೆಮನೆಯನ್ನು ಸ್ವಚ್ಛಗೊಳಿಸಲು ಹಳೆಯ ಟೂತ್ ಬ್ರಷ್ ಕೂಡ ತುಂಬಾ ಉಪಯುಕ್ತವಾಗಿದೆ.  ಸಿಂಕ್, ನಲ್ಲಿ, ನಲ್ಲಿಯ ಅಂಚುಗಳು ಅಥವಾ ಕೆಳಭಾಗವನ್ನು ಸುಲಭವಾಗಿ ಸ್ವಚ್ಛಗೊಳಿಸಬಹುದು.  ಅಲ್ಲದೆ ನೀರಿನ ಬಾಟಲ್‌, ಎಣ್ಣೆ ಬಾಟಲ್‌, ಡಬ್ಬಗಳನ್ನು, ಬ್ಲೆಂಡರ್‌ಗಳು, ಕಾಫಿ ಮೇಕರ್‌ಗಳನ್ನು ಸ್ವಚ್ಛಗೊಳಿಸಲು ಕೂಡ ಟೂತ್‌ ಬ್ರಷ್‌ ಉಪಯೋಗಕ್ಕೆ ಬರುತ್ತದೆ.

ಇದನ್ನೂ ಓದಿ: ಸೊಳ್ಳೆಯ ಕಾಟದಿಂದ ಪಾರಾಗಲು ಮನೆಯಲ್ಲಿ ಗಿಡಗಳನ್ನು ನೆಡುವುದು ಉತ್ತಮ

ಅಲಂಕಾರಿಕ ವಸ್ತುಗಳನ್ನು ಸ್ವಚ್ಛಗೊಳಿಸಬಹುದು: ಸಣ್ಣ ಮರದ ಅಲಂಕಾರಿಕ ವಸ್ತುಗಳನ್ನು ಸ್ವಚ್ಛಗೊಳಿಸಲು ಹಳೆಯ ಟೂತ್ ಬ್ರಷ್ ಸಹ ತುಂಬಾ ಉಪಯುಕ್ತವಾಗಿದೆ. ಈ ವಸ್ತುಗಳು ಸಾಮಾನ್ಯವಾಗಿ ಸಂಕೀರ್ಣವಾದ ಕೆತ್ತನೆಗಳು ಮತ್ತು ಸಣ್ಣ ಚಡಿಗಳನ್ನು ಹೊಂದಿರುತ್ತವೆ, ಇಂತಹ ಪ್ರದೇಶದಲ್ಲಿ ಸಂಗ್ರಹವಾಗುವ ಧೂಳು, ಕೊಳೆಯನ್ನು ತೆಗೆಯುವುದು ಕಠಿಣ ಕೆಲಸ. ಹೀಗಿರುವಾಗ ಟೂತ್‌ಬ್ರಷ್‌ ಸಹಾಯದಿಂದ ಇವುಗಳನ್ನು ಸುಲಭವಾಗಿ ಕ್ಲೀನ್‌ ಮಾಡಬಹುದು.

ಟೈಲ್ಸ್‌ ಸ್ವಚ್ಛಗೊಳಿಸಲು ಸಹಕಾರಿ: ಟೈಲ್ಸ್‌ ನಡುವೆ ಅಂಟಿಕೊಂಡಿರುವ ಕಲೆಗಳು, ಪೈಪ್‌ಗಳ ಸುತ್ತಲಿನ ಕೊಳೆಯನ್ನು ತೆಗೆದುಹಾಕಲು ಅಥವಾ ಕೀಬೋರ್ಡ್‌ಗಳಿಂದ ಧೂಳನ್ನು ತೆಗೆದುಹಾಕಲು ಟೂತ್‌ಬ್ರಷ್‌ ತುಂಬಾ ಉಪಯುಕ್ತವಾಗಿವೆ. ಸ್ವಲ್ಪ ಸೋಪ್ ಅಥವಾ ಕ್ಲೀನರ್‌ನೊಂದಿಗೆ ಇದನ್ನು ಬಳಸುವುದರಿಂದ ಮೊಂಡುತನದ ಕೊಳೆಯನ್ನು ಸಹ ಸುಲಭವಾಗಿ ತೆಗೆದುಹಾಕಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗಾವಿಯಲ್ಲಿ ವರುಣನ ಅಬ್ಬರಕ್ಕೆ ನೆಲಕ್ಕುರುಳಿದ 8 ಮನೆಗಳು, ಉಟ್ಟ ಬಟ್ಟೆ ಬಿಟ್ಟು ಎಲ್ಲಾ ನೀರುಪಾಲು

ಬೆಳಗಾವಿ, (ಜೂನ್ 09): ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ. ಉಟ್ಟ ಬಟ್ಟೆ ಬಿಟ್ಟು ಎಲ್ಲವನ್ನೂ ಕಳೆದಕೊಂಡ ಜನ ಬೀದಿಗೆ ಬಿದ್ದಿದ್ದು, ಟಿವಿ9 ಬಳಿ ತಮ್ಮ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ.

ಇದನ್ನೂ ಓದಿ: Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ?

Source link

ನಕಲಿ ಸಹಿ ಆರೋಪ; ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ – Kannada News

ಕೊಲ್ಕತ್ತಾ, ಜೂನ್ 9: ತೃಣಮೂಲ ಕಾಂಗ್ರೆಸ್ (TMC) ಶಾಸಕರ ‘ನಕಲಿ ಸಹಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಅಪರಾಧ ತನಿಖಾ ಇಲಾಖೆಯ (CID) ತಂಡವೊಂದು ಇಂದು ಟಿಎಂಸಿ ಪಕ್ಷದ ಕೇಂದ್ರ ಕಚೇರಿಗೆ ತಲುಪಿದೆ. ಈ ಕಚೇರಿಯು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾಳೀಘಾಟ್ ನಿವಾಸವೂ ಆಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ರಾಜ್ಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮಧ್ಯಾಹ್ನ 12 ಗಂಟೆ ಸುಮಾರಿಗೆ 30ಬಿ ಹರೀಶ್ ಚಟರ್ಜಿ ರಸ್ತೆಯ ನಿವಾಸಕ್ಕೆ ಆಗಮಿಸಿದ್ದಾರೆ. ಸಿಐಡಿ ತಂಡದೊಂದಿಗೆ ಕಾಳೀಘಾಟ್ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಮಹಿಳಾ ಪೊಲೀಸರ ದೊಡ್ಡ ಪಡೆಯೇ ಸ್ಥಳಕ್ಕೆ ಆಗಮಿಸಿತ್ತು. ಪಶ್ಚಿಮ ಬಂಗಾಳ ವಿಧಾನಸಭೆಯ ಸ್ಪೀಕರ್ ಅವರಿಗೆ ವಿರೋಧ ಪಕ್ಷದ ನಾಯಕರನ್ನು ನೇಮಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯಲ್ಲಿ ಹಲವು ಟಿಎಂಸಿ ಶಾಸಕರ ಸಹಿಗಳನ್ನು ನಕಲು ಮಾಡಲಾದ ಆರೋಪದ ತನಿಖೆಯ ಭಾಗವಾಗಿ ಸಿಐಡಿ ಈ ಕ್ರಮ ಕೈಗೊಂಡಿದೆ.

ಸ್ಥಳದಲ್ಲಿದ್ದ ಸಿಐಡಿ ಅಧಿಕಾರಿಗಳ ಪ್ರಕಾರ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಈ ಹಿಂದೆ ನೀಡಿದ ನೋಟಿಸ್‌ಗೆ ಸಲ್ಲಿಸಿದ ಉತ್ತರದ ಆಧಾರದ ಮೇಲೆ ಈ ಶೋಧ ಕಾರ್ಯವನ್ನು ಕೈಗೊಳ್ಳಲಾಗಿದೆ. “ಶಾಸಕರ ಸಹಿಗಳನ್ನು 30 ಬಿ ಹರೀಶ್ ಚಟರ್ಜಿ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸಂಗ್ರಹಿಸಲಾಗಿದೆ ಎಂದು ಅಭಿಷೇಕ್ ಬ್ಯಾನರ್ಜಿ ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದರು. ಆ ಹೇಳಿಕೆಯ ಆಧಾರದ ಮೇಲೆ ನಾವು ತನಿಖೆಗೆ ಇಲ್ಲಿಗೆ ಬಂದಿದ್ದೇವೆ” ಎಂದು ಸಿಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ಆದರೆ, ತನಿಖಾ ತಂಡಕ್ಕೆ ಕಚೇರಿಯ ಆವರಣದೊಳಗೆ ಪ್ರವೇಶಿಸಲು ಅನುಮತಿ ನೀಡದ ಕಾರಣ ಕಚೇರಿ ನಿರ್ವಹಣಾ ಸಿಬ್ಬಂದಿ ಮತ್ತು ಅಧಿಕಾರಿಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಅಭಿಷೇಕ್ ಬ್ಯಾನರ್ಜಿ ಅವರ ಅನುಪಸ್ಥಿತಿಯಲ್ಲಿ ಶೋಧ ನಡೆಸುವುದಕ್ಕೆ ಟಿಎಂಸಿ ಆಕ್ಷೇಪ ವ್ಯಕ್ತಪಡಿಸಿತ್ತು.

ಹಿರಿಯ ಟಿಎಂಸಿ ಶಾಸಕ ಸೋವಂದೇಬ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಗುರುತಿಸುವಂತೆ ಕೋರಿ ಸ್ಪೀಕರ್‌ಗೆ ಕಳುಹಿಸಲಾದ ಪ್ರಸ್ತಾವನೆಯಲ್ಲಿ ಹಲವು ಶಾಸಕರ ಸಹಿಗಳನ್ನು ನಕಲು ಮಾಡಲಾಗಿದೆ ಎಂಬ ಆರೋಪದ ನಂತರ ಈ ವಿವಾದ ಭುಗಿಲೆದ್ದಿತ್ತು. ಈ ಆರೋಪಗಳು ಎಫ್‌ಐಆರ್ ದಾಖಲಾತಿ ಮತ್ತು ಸಿಐಡಿ ತನಿಖೆಗೆ ಕಾರಣವಾಗಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಕಾಂಗ್ರೆಸ್​​ನ 63 ಶಾಸಕರು ರೆಸಾರ್ಟ್​​ಗೆ

ಬೆಂಗಳೂರು, ಜೂನ್​​ 09: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಭೋಪಾಲ್​ನಿಂದ ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್​ ಲಾ ರೆಸಾರ್ಟ್​​ಗೆ ತೆರಳಲಿದ್ದಾರೆ. 63 ಶಾಸಕರು ಸೇರಿದಂತೆ 75 ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೆಸಾರ್ಟ್​ನಲ್ಲಿ 54 ರೂಮ್ ಬುಕ್ಕಿಂಗ್ ಆಗಿವೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ? – Kannada News

ಬೆಂಗಳೂರು, ಜೂನ್​​ 09: ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡು ಭಾಗದ ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮುಖ್ಯಾಂಶಗಳು

  • ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
  • ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಲ್ಲಿ ತೀವ್ರ ಮಳೆ
  • ಉತ್ತರ ಒಳನಾಡು ಭಾಗದ ಹಲವೆಡೆಯೂ ವರುಣಾರ್ಭಟ ಸಾಧ್ಯತೆ

ನಾಳೆ ಎರಡು ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​​

ಕರಾವಳಿ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯ ನಿರೀಕ್ಷೆ ಹಿನ್ನೆಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 10 ಮತ್ತು 11ರಂದು ಹಾಗೆಯೇ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್​​ 10 ಮತ್ತು ಉತ್ತರ ಒಳನಾಡು ಭಾಗದಲ್ಲಿ ಜೂನ್​​ 11ರ ವರೆಗೆ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ:  ಬೈಲಹೊಂಗಲದಲ್ಲಿ ವರುಣಾರ್ಭಟ; ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?

ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆ ಮಳೆಯನ್ನು ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜೇನುಗೂಡಿಗೆ ಕಲ್ಲು ಎಸೆದ ಪರಿಣಾಮ ಹೆಜ್ಜೇನು ದಾಳಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊರಾರ್ಜಿ ಶಾಲೆಯ 21ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – Kannada News

ಕಾರವಾರ, ಜೂ,9: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ಕಟ್ಟಡದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನುಗಳು ಒಮ್ಮೆಲೆ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣವೇ ಮುಂಡಗೋಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ ಸುಮಾರು 3:30 ರ ವೇಳೆಗೆ ಈ ಘಟನೆ ನಡೆದಿದೆ. ವಸತಿ ಶಾಲಾ ಕಟ್ಟಡದ ಎರಡನೇ ಮಹಡಿಯ ಮೇಲ್ಭಾಗದಲ್ಲಿ ದೊಡ್ಡದಾದ ಹೆಜ್ಜೇನು ಗೂಡು ಇತ್ತು. ಶಾಲೆಯ ಓರ್ವ ಆಟವಾಡುವ ಭರದಲ್ಲಿ ಆ ಜೇನುಗೂಡಿಗೆ ಭಾರವಾದ ಕಲ್ಲು ಎಸೆದಿದ್ದಾನೆ ಎನ್ನಲಾಗಿದೆ. ತಕ್ಷಣ ಜೇನುನೊಣಗಳ ಹಿಂಡು ಒಮ್ಮೆಲೆ ಶಾಲಾ ಆವರಣದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಮುಗಿಬಿದ್ದಿವೆ. ಜೇನುನೊಣಗಳು ಹಿಂಡುಹಿಂಡಾಗಿ ಬಂದು ಕಚ್ಚಲು ಆರಂಭಿಸುತ್ತಿದ್ದಂತೆ ಗಾಬರಿಗೊಂಡ ವಿದ್ಯಾರ್ಥಿಗಳು ಕಿರುಚಾಡುತ್ತಾ ಓಡಿದ್ದಾರೆ. ಘಟನೆಯನ್ನು ಗಮನಿಸಿದ ಶಾಲೆಯ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ಧಾವಿಸಿ ಬಂದು ಜೇನುನೊಣಗಳನ್ನು ಓಡಿಸಿ ಮಕ್ಕಳನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಸದ್ಯ ಮುಂಡಗೋಡ ತಾಲೂಕು ಆಸ್ಪತ್ರೆಯ ವೈದ್ಯರ ತಂಡ ಮಕ್ಕಳಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾತ್ರಿ ಸಮಯದಲ್ಲಿ ಏಕೆ ಉಗುರು ಕತ್ತರಿಸಬಾರದು? ಇದರ ಹಿಂದಿನ ವೈಜ್ಞಾನಿಕ ಕಾರಣವೇನು? – Kannada News

ನಮ್ಮ ಸಂಪ್ರದಾಯದ ಪ್ರಕಾರ, ಸಂಜೆ ವಿಶೇಷವಾಗಿ ಸೂರ್ಯಾಸ್ತದ ನಂತರ, ಲಕ್ಷ್ಮಿ ದೇವಿಯು ಮನೆಗೆ ಪ್ರವೇಶಿಸಿ ಸಂಪತ್ತು ಮತ್ತು ಸಮೃದ್ಧಿಯನ್ನು ಸ್ಥಾಪಿಸುವ ಸಮಯವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಕಸ ತೆಗೆಯುವುದು ಅಥವಾ ಹಣವನ್ನು ವಿನಿಮಯ ಮಾಡಿಕೊಳ್ಳುವಂತಹ ಕೆಲಸಗಳನ್ನು ಅಶುಭ ಹೇಳಲಾಗುತ್ತದೆ ಮತ್ತು ಇದು ದುರದೃಷ್ಟವನ್ನು ಆಕರ್ಷಿಸುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಈ ಪ್ರತಿ ನಂಬಿಕೆಗಳ ಹಿಂದೆ ವೈಜ್ಞಾನಿಕ ಕಾರಣಗಳೂ ಇವೆ. ಇಂತಹ ನಂಬಿಕೆಗಳಲ್ಲಿ ಸೂರ್ಯಾಸ್ತದ ನಂತರ ಉಗುರು (nails) ಕತ್ತರಿಸಬಾರದು ಎಂಬುದು ಸಹ ಒಂದು. ರಾತ್ರಿ ಸಮಯದಲ್ಲಿ ಉಗುರು ಕತ್ತರಿಸಿದರೆ ಹಿರಿಯರು ಗದರುವುದನ್ನು ನೀವು ನೋಡಿರುತ್ತೀರಿ ಅಲ್ವಾ. ಅಷ್ಟಕ್ಕೂ ರಾತ್ರಿ ಏಕೆ ಉಗುರು ಉಗುರು ಕತ್ತರಿಸಬಾರದು, ಅದರ ಹಿಂದಿರುವ ನೈರ್ಮಲ್ಯ, ಆರೋಗ್ಯ ಮತ್ತು ವೈಜ್ಞಾನಿಕ ಕಾರಣವಾದರೂ ಏನು ಎಂಬುದನ್ನು  ತಪ್ಪದೇ ತಿಳಿಯಿರಿ.

ರಾತ್ರಿ ಸಮಯದಲ್ಲಿ ಉಗುರು ಏಕೆ ಕತ್ತರಿಸಬಾರದು?

ರಾತ್ರಿ ಉಗುರು ಕತ್ತರಿಸಬಾರದಂತೆ ಮನೆಯ ಹಿರಿಯರು ಆಗಾಗ್ಗೆ ಹೇಳುತ್ತಿರುತ್ತಾರೆ. ಇದರ ಹಿಂದಿನ ಮುಖ್ಯ ಕಾರಣವೆಂದರೆ ಪ್ರಾಚೀನ ಕಾಲದಲ್ಲಿ ವಿದ್ಯುತ್ ಇರಲಿಲ್ಲ. ರಾತ್ರಿಯಲ್ಲಿ ಬೆಳಕು ಸಹ ತುಂಬಾ ಕಡಿಮೆ ಇತ್ತು, ಸೀಮೆಎಣ್ಣೆ ದೀಪಗಳನ್ನೇ ಹೆಚ್ಚಾಗಿ ಬಳಸಲಾಗುತ್ತಿತ್ತು.  ಅಲ್ಲದೆ ಆ ಸಮಯದಲ್ಲಿ, ಇಂದು ಲಭ್ಯವಿರುವ ಆಧುನಿಕ ನೈಲ್‌ ಕಟರ್‌ಗಳೂ ಇರಲಿಲ್ಲ. ಅಗೆಲ್ಲಾ  ಸಾಮಾನ್ಯವಾಗಿ ಉಗುರುಗಳನ್ನು ಕತ್ತರಿಸಲು ಚಾಕುಗಳು ಅಥವಾ ಚೂಪಾದ ವಸ್ತುಗಳನ್ನು ಬಳಸುತ್ತಿದ್ದರು. ಹೀಗಿರುವಾಗ ರಾತ್ರಿ ಸಮಯದಲ್ಲಿ ಕಡಿಮೆ ಬೆಳಕಿನಲ್ಲಿ ಉಗುರು ಕತ್ತರಿಸಿದರೆ ಬೆರಳಿಗೆ ಗಾಯವಾಗುವ ಸಾಧ್ಯತೆ ಹೆಚ್ಚು. ರಾತ್ರಿಯಲ್ಲಿ ಗಾಯವಾದರೆ, ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಕಷ್ಟಕರವಾಗಿತ್ತು.  ಇದಲ್ಲದೆ ಕತ್ತರಿಸಿದ ಉಗುರಿನ ತುಂಡುಗಳು ಕೆಳಗೆ ಬಿದ್ದರೆ, ಅವುಗಳನ್ನು ಸಂಗ್ರಹಿಸಿ ಕತ್ತಲೆಯಲ್ಲಿ ಸರಿಯಾಗಿ ವಿಲೇವಾರಿ ಮಾಡುವುದು ಕಷ್ಟಕರವಾಗಿತ್ತು. ಹೀಗೆ ಆರಂಭದಲ್ಲಿ ರಾತ್ರಿ ಉಗುರು ಕತ್ತರಿಸಬಾರದು ಎನ್ನುವುದಕ್ಕೆ ಮುಖ್ಯ ಕಾರಣ ಸುರಕ್ಷತೆ ಮತ್ತು ಸ್ವಚ್ಛತೆಯ ದೃಷ್ಟಿಕೋನವಾಗಿತ್ತು. ಕಾಲಾನಂತರದಲ್ಲಿ, ಜನರು ಇದನ್ನು ಸರಿಯಾಗಿ ಅನುಸರಿಸಲು ಆಧ್ಯಾತ್ಮಿಕ ವಿವರಣೆಗಳು ಮತ್ತು ಕಥೆಗಳನ್ನು ಸೇರಿಸಲಾಯಿತು.

ಆರೋಗ್ಯ ಕಾರಣಗಳು:

ದಿನವಿಡೀ ಕೆಲಸ ಮಾಡುವುದರಿಂದ ನಿಮ್ಮ ಉಗುರುಗಳ ಒಳಗೆ ಕೊಳಕು, ಸೂಕ್ಷ್ಮಜೀವಿಗಳು ಮತ್ತು ಬ್ಯಾಕ್ಟೀರಿಯಾಗಳು ಸಿಕ್ಕಿಹಾಕಿಕೊಳ್ಳುತ್ತವೆ. ಹೀಗಿರುವಾಗ ರಾತ್ರಿಯಲ್ಲಿ ನಿಮ್ಮ ಕೈಗಳನ್ನು ತೊಳೆಯದೆ  ಉಗುರುಗಳನ್ನು ಕತ್ತರಿಸಿದಾಗ, ಆ ತುಂಡುಗಳು  ಬೆಡ್ ಶೀಟ್‌ಗಳು, ಸೋಫಾ ಅಥವಾ ನೆಲದ ಮೇಲೆ ಬಿದ್ದು ಸೂಕ್ಷ್ಮಜೀವಿಗಳು ಹರಡುವ ಅಪಾಯವಿರುತ್ತದೆ.  ಅಲ್ಲದೆ ಕತ್ತರಿಸಿದ ಉಗುರುಗಳು ಆಹಾರ ಅಥವಾ ಇತರ ವಸ್ತುಗಳೊಂದಿಗೆ ಬೆರೆತು ಅದು ಕೂಡ ಸೋಂಕಿಗೆ ಕಾರಣವಾಗಬಹುದು. ಹಗಲು ಹೊತ್ತಿನಲ್ಲಿ ಉಗುರು ಕತ್ತರಿಸಿದರೆ, ಅವುಗಳನ್ನು ವಿಲೇವಾರಿ ಮಾಡಲು ಸುಲಭವಾಗುತ್ತದೆ. ಹಾಗಾಗಿ ರಾತ್ರಿ ಸಮಯದಲ್ಲಿ ಉಗುರು ಕತ್ತರಿಸಬಾರದು.   ಆಯುರ್ವೇದದ ಪ್ರಕಾರ, ಚಂದ್ರನ ಶಕ್ತಿಯು ರಾತ್ರಿಯಲ್ಲಿ ಅತ್ಯಂತ ಬಲವಾಗಿರುತ್ತದೆ ಮತ್ತು ಈ ಸಮಯದಲ್ಲಿ ಉಗುರುಗಳನ್ನು ಕತ್ತರಿಸುವುದರಿಂದ ದೇಹದ ಆಂತರಿಕ ಸಮತೋಲನಕ್ಕೆ ಅಡ್ಡಿಯಾಗುತ್ತದೆ ಮತ್ತು ಇದು  ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಭಯಗೊಂಡಾಗ ಕೈ ಕಾಲುಗಳು ನಡುಗುವುದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ?

ಉಗುರು ಕತ್ತರಿಸಲು ಸರಿಯಾದ ಸಮಯ ಯಾವುದು?

ನಮ್ಮ ಉಗುರುಗಳು ಕೆರಾಟಿನ್ ನಿಂದ ಮಾಡಲ್ಪಟ್ಟಿದೆ. ಆದ್ದರಿಂದ, ಸ್ನಾನದ ನಂತರ ನಿಮ್ಮ ಉಗುರುಗಳನ್ನು ಕತ್ತರಿಸುವುದು ಉತ್ತಮ, ಏಕೆಂದರೆ ಈ ಸಮಯದಲ್ಲಿ  ಉಗುರುಗಳು ನೀರಿನಲ್ಲಿ ನೆನೆದಿರುವ ಕಾರಣ ಅವುಗಳನ್ನು ಕತ್ತರಿಸಲು ಸುಲಭವಾಗುತ್ತದೆ. ಇದಲ್ಲದೆ ಬೆಳಗಿನ ಸಮಯದಲ್ಲಿ ಉಗುರುಗಳನ್ನು ಸೌಮ್ಯವಾದ ಎಣ್ಣೆ ಅಥವಾ ನೀರಿನಲ್ಲಿ ನೆನೆಸಿ, ಉಗುರು ಮೃದುವಾದ ನಂತರ ಉಗುರು ಕತ್ತರಿಸಿ. ಉಗುರಿ ಕತ್ತರಿಸಿದ ಬಳಿಕ ಕೈಗಳನ್ನು ತೊಳೆದುಕೊಳ್ಳಿ. ಕೈ ಒಣಗಿದ ಬಳಿಕ ಮಾಯಿಶ್ಚರೈಸರ್ ಅಥವಾ ಎಣ್ಣೆಯನ್ನು ಹಚ್ಚಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ – Kannada News

ನವದೆಹಲಿ, ಜೂನ್ 9: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಿರುವ ಹಣದುಬ್ಬರ, ಗಗನಕ್ಕೇರಿರುವ ವಿದ್ಯುತ್ ಬಿಲ್‌ಗಳು, ಗೋಧಿ ಹಿಟ್ಟಿನ ಬೆಲೆ ಏರಿಕೆ ಹಾಗೂ ಸರ್ಕಾರದ ಅಸಮರ್ಪಕ ನೀತಿಗಳ ವಿರುದ್ಧ ಸಾರ್ವಜನಿಕರು ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ. ‘ಅವಮಿ ಆಕ್ಷನ್ ಕಮಿಟಿ’ ನೇತೃತ್ವದಲ್ಲಿ ಮುಜಾಫರಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಜನಾಂದೋಲನ ತೀವ್ರಗೊಂಡಿದೆ. ಈ ವೇಳೆ ಪ್ರತಿಭಟನಾಕಾರರು ಪಾಕಿಸ್ತಾನಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ

ರಾವಲ್ಕೋಟ್‌ನಲ್ಲಿ ಜನರು ಬೆಳಿಗ್ಗೆಯಿಂದಲೇ ಎಲ್ಲಾ ಪ್ರಮುಖ ರಸ್ತೆಗಳನ್ನು ನಿರ್ಬಂಧಿಸುತ್ತಿದ್ದಾರೆ. ಪ್ರತಿಭಟನಾಕಾರರು ಭಿಂಬರ್‌ನಿಂದ ರಾವಲ್ಕೋಟ್ ಕಡೆಗೆ ಮುನ್ನಡೆಯದಂತೆ ತಡೆಯಲು ಪಾಕಿಸ್ತಾನಿ ಪೊಲೀಸರು, ಸೇನೆ ಮತ್ತು ರೇಂಜರ್‌ಗಳು ತಡೆದರು. ಪ್ರತಿಭಟನಾಕಾರರ ಮೇಲೆ ನೇರವಾಗಿ ಗುಂಡು ಹಾರಿಸುವುದರ ಜೊತೆಗೆ, ಅಶ್ರುವಾಯು ಬಳಸಲಾಯಿತು. ಅತ್ಯಂತ ಅಪಾಯಕಾರಿ ಪೆಲೆಟ್ ಗನ್‌ಗಳನ್ನು ಸಹ ಬಳಸಿದ್ದರಿಂದ 7 ಜನರು ಗಂಭೀರವಾಗಿ ಗಾಯಗೊಂಡರು. ಪಲಾಂದ್ರಿ ಮತ್ತು ಸುಧಾನೋತಿಯಂತಹ ಪ್ರದೇಶಗಳಲ್ಲಿ, ಜನರು ಕೈಯಲ್ಲಿ ಕೋಲುಗಳನ್ನು ಹಿಡಿದು ಪಾಕಿಸ್ತಾನಿ ಪಡೆಗಳನ್ನು ಎದುರಿಸಿದರು. ಪ್ರತಿಭಟನೆಗಳಿಂದಾಗಿ ಪಿಒಕೆಯಾದ್ಯಂತ ಮಾರುಕಟ್ಟೆಗಳು ಮತ್ತು ವ್ಯಾಪಾರ ಸಂಸ್ಥೆಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟವು.

ಇದನ್ನೂ ಓದಿ: ಪಹಲ್ಗಾಮ್ ದಾಳಿ ತನಿಖೆಯಲ್ಲಿ ಮಹತ್ವದ ಸುಳಿವು: ಉಗ್ರರು ಬಳಸಿದ್ದ ಫೋನ್​ಗೆ ಪಾಕಿಸ್ತಾನ ಬ್ಯಾಂಕ್​ ಲಿಂಕ್

ಈ ವೇಳೆ ಭದ್ರತಾ ಪಡೆಗಳು ನಡೆಸಿದ ಲಘು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮತ್ತು ಪ್ಲಾಸ್ಟಿಕ್ ಹಾಗೂ ಜೀವಂತ ಗುಂಡುಗಳ ದಾಳಿಯಿಂದಾಗಿ 200ಕ್ಕೂ ಹೆಚ್ಚು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಈ ಘಟನೆಯ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪ್ರಮುಖ ನಗರಗಳಲ್ಲಿ ಕರ್ಫ್ಯೂ ಪರಿಸ್ಥಿತಿ ಇದೆ.

ಹಿಂಸಾಚಾರದ ವೀಡಿಯೊಗಳು ಮತ್ತು ಮಾಹಿತಿಗಳು ಹರಡದಂತೆ ತಡೆಯಲು ಪಾಕಿಸ್ತಾನ ಸರ್ಕಾರವು ಇಡೀ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಪಾಕಿಸ್ತಾನ ಸರ್ಕಾರವು ಪ್ರತಿಭಟನೆಯನ್ನು ಹತ್ತಿಕ್ಕಲು ಹೆಚ್ಚುವರಿ ಸೇನಾ ಪಡೆಗಳನ್ನು ನಿಯೋಜಿಸಿದೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪಾಕಿಸ್ತಾನಿ ಪಡೆಗಳು ನಡೆಸಿರುವ ಈ ಭೀಕರ ದಾಳಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಖಂಡನೆಗೆ ಒಳಗಾಗಿದ್ದು, ಭಾರಿ ಪ್ರಮಾಣದ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದೆ ಎಂದು ಸ್ಥಳೀಯ ನಾಯಕರು ಆರೋಪಿಸಿದ್ದಾರೆ.

ಪ್ರತಿಭಟನೆಗೆ ಕಾರಣವೇನು?:

ಪಿಒಕೆ ಜನರು ಮುಖ್ಯವಾಗಿ 38 ಬೇಡಿಕೆಗಳ ಈಡೇರಿಕೆಗಾಗಿ ಈ ದೀರ್ಘ ಹೋರಾಟವನ್ನು ನಡೆಸುತ್ತಿದ್ದಾರೆ. ಮುಜಫರಾಬಾದ್‌ನ ನೀಲಂ ಸೇತುವೆಯಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದವು. ಪಾಕಿಸ್ತಾನದ ಭಾಗವಲ್ಲದ ಪಿಒಕೆ ಪ್ರದೇಶದಲ್ಲಿ ಮಂಗಳಾ ಅಣೆಕಟ್ಟಿನಂತಹ ಪ್ರತಿಷ್ಠಿತ ಜಲವಿದ್ಯುತ್ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಅಗ್ಗದ ವಿದ್ಯುತ್ ಮತ್ತು ಸಬ್ಸಿಡಿ ಬೆಲೆಯಲ್ಲಿ ಹಿಟ್ಟು, ಅಕ್ಕಿ ಮತ್ತು ಬೇಳೆಕಾಳುಗಳನ್ನು ಒದಗಿಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ

ಪಿಒಕೆ ಸಂಸತ್ತಿನಲ್ಲಿರುವ 12 ನಿರಾಶ್ರಿತರ ಸ್ಥಾನಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ವಾಸ್ತವವಾಗಿ, ಈ 12 ಸ್ಥಾನಗಳನ್ನು ಭಾರತೀಯ ಕಾಶ್ಮೀರದಿಂದ ವಲಸೆ ಬಂದವರು ಮತ್ತು ಪ್ರಸ್ತುತ ಪಾಕಿಸ್ತಾನದ ವಿವಿಧ ನಗರಗಳಲ್ಲಿ ವಾಸಿಸುತ್ತಿರುವವರಿಗೆ ಮೀಸಲಿಡಲಾಗಿತ್ತು. ಆದರೆ, ಪಾಕಿಸ್ತಾನ ಸೇನೆ ಮತ್ತು ಐಎಸ್‌ಐ ಇಸ್ಲಾಮಾಬಾದ್ ಮತ್ತು ಕರಾಚಿಯಲ್ಲಿ ಅಡಗಿರುವ ‘ಹಿಜ್ಬುಲ್ ಮುಜಾಹಿದ್ದೀನ್’ ಭಯೋತ್ಪಾದಕರು ಮತ್ತು ಅವರ ಕುಟುಂಬ ಸದಸ್ಯರನ್ನು ಈ 12 ಸ್ಥಾನಗಳಿಗೆ ಆಯ್ಕೆ ಮಾಡುತ್ತಿದೆ.

ಇದರಿಂದಾಗಿ, ಪಿಒಕೆ ಸಂಸತ್ತಿನ ಒಟ್ಟು 45 ಸ್ಥಾನಗಳಲ್ಲಿ 12 ಸ್ಥಾನಗಳು ನೇರವಾಗಿ ಪಾಕಿಸ್ತಾನ ಸೇನೆಯ ಕೈಗೆ ಹೋಗುತ್ತಿವೆ. ಇವುಗಳ ಸಹಾಯದಿಂದ, ಪಾಕಿಸ್ತಾನ ಸೇನೆಯು ಪಿಒಕೆಯ ಸ್ಥಳೀಯ ಜನರ ಇಚ್ಛೆಗೆ ವಿರುದ್ಧವಾಗಿ ತನ್ನ ನೆಚ್ಚಿನ ವ್ಯಕ್ತಿಯನ್ನು ಅಲ್ಲಿ ಪ್ರಧಾನಿಯನ್ನಾಗಿ ಪ್ರತಿಷ್ಠಾಪಿಸುತ್ತಿದೆ ಎಂದು ಇಲ್ಲಿನ ಜನರು ಆರೋಪಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version