ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಬಯೋಪಿಕ್ ಮಾಡಲಿರುವ ರಾಮ್ ಗೋಪಾಲ್ ವರ್ಮಾ? – Kannada News | Ram Gopal Varma likely to do biopic of Mumbai Encounter Specialist Daya Nayak

ಬಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ತಮ್ಮ ವಿಭಿನ್ನ ಹಾಗೂ ರಿಯಲಿಸ್ಟಿಕ್ ಕ್ರೈಂ ಸಿನಿಮಾಗಳ ಮೂಲಕವೇ ಸೆನ್ಸೇಷನ್ ಸೃಷ್ಟಿಸಿದ್ದ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma), ಈಗ ಮುಂಬೈ ಅಂಡರ್‌ವರ್ಲ್ಡ್ ಇತಿಹಾಸದ ಮತ್ತೊಂದು ರೋಚಕ ಪುಟವನ್ನು ತೆರೆಗೆ ತರಲು ಸಜ್ಜಾಗುತ್ತಿದ್ದಾರೆ. ಮುಂಬೈನ ಖ್ಯಾತ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ (Daya Nayak) ಅವರ ಜೀವನಾಧಾರಿತ ಚಿತ್ರವನ್ನು ನಿರ್ದೇಶಿಸಲು ಆರ್‌ಜಿವಿ ಮಾತುಕತೆ ನಡೆಸುತ್ತಿದ್ದಾರೆ ಎಂಬ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಚಿತ್ರರಂಗದ ಮೂಲಗಳ ಪ್ರಕಾರ, ಈ ಬಯೋಪಿಕ್ ಸದ್ಯ ಆರಂಭಿಕ ಹಂತದಲ್ಲಿದ್ದು, ಚಿತ್ರಕಥೆ ಸಿದ್ಧಪಡಿಸುವ ಕೆಲಸ ನಡೆಯುತ್ತಿದೆ.

ಮುಂಬೈ ಪೊಲೀಸ್ ಇತಿಹಾಸದಲ್ಲೇ ದಯಾ ನಾಯಕ್ ಅವರ ಜರ್ನಿ ಅತ್ಯಂತ ಚರ್ಚೆಯಾದ ವಿಷಯವಾಗಿದೆ. ಮಿಡ್-ಡೇ ವರದಿಯ ಪ್ರಕಾರ, ನಿರ್ಮಾಪಕರು ಈ ಚಿತ್ರವನ್ನು ಕೇವಲ ಬಯೋಪಿಕ್ ಆಗಿ ಮಾಡಬೇಕೇ ಅಥವಾ ಆರ್‌ಜಿವಿ ಅವರದ್ದೇ ಸೂಪರ್ ಹಿಟ್ ‘ಕಂಪನಿ’ ಸಿನಿಮಾದ ಸೀಕ್ವೆಲ್ ಆಗಿ ಪ್ರಸ್ತುತಪಡಿಸಬೇಕೇ ಎಂಬ ಬಗ್ಗೆ ಚರ್ಚಿಸುತ್ತಿದ್ದಾರೆ.

2010ರಲ್ಲೇ ಆರ್‌ಜಿವಿ ಅವರು ‘ಕಂಪನಿ 2’ ಮಾಡುವ ಆಲೋಚನೆ ಹೊಂದಿದ್ದರು. ಅದರಲ್ಲಿ ಗ್ಯಾಂಗ್‌ಸ್ಟರ್‌ಗಳ ಬದಲು ಎನ್‌ಕೌಂಟರ್ ಸ್ಪೆಷಲಿಸ್ಟ್‌ಗಳ ಕಥೆಯ ಮೇಲೆಯೇ ಹೆಚ್ಚು ಗಮನ ಹರಿಸಲು ಪ್ಲಾನ್ ಮಾಡಲಾಗಿತ್ತು. ಹಾಗಾಗಿ, ಈಗ ಮೂಡಿಬರಲಿರುವ ದಯಾ ನಾಯಕ್ ಬಯೋಪಿಕ್‌ಗೆ ಖುದ್ದು ದಯಾ ನಾಯಕ್ ಅವರನ್ನೇ ಸಲಹೆಗಾರರನ್ನಾಗಿ ಮಾಡಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಸಖತ್ ಆ್ಯಕ್ಟಿವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಬಿಗ್ ಬಜೆಟ್ ಸಿನಿಮಾಗಳನ್ನು ಅನೌನ್ಸ್ ಮಾಡುತ್ತಿದ್ದಾರೆ. ಅವರ ಮುಂಬರುವ ಚಿತ್ರಗಳಲ್ಲಿ ‘ಸಿಂಡಿಕೇಟ್’ ಪ್ರಮುಖವಾಗಿದೆ. ಇದೊಂದು ಜಾಗತಿಕ ಭಯೋತ್ಪಾದನೆ ಮತ್ತು ಕ್ರೈಂ ನೆಟ್‌ವರ್ಕ್ ಆಧಾರಿತ ಅತ್ಯಂತ ಭಯಾನಕ ಸಿನಿಮಾವಾಗಲಿದ್ದು, ‘ಧುರಂಧರ್’ ಚಿತ್ರದ ಮೇಕಿಂಗ್ ಶೈಲಿಯಿಂದ ಪ್ರೇರಿತವಾಗಿರಲಿದೆ.

ಇದನ್ನೂ ಓದಿ: ನನ್ನ ಯಶಸ್ಸಿಗೆ ದಾವುದ್ ಇಬ್ರಾಹಿಂ ಕಾರಣ: ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಹೇಳಿಕೆ

‘ಸಿಂಡಿಕೇಟ್’ ಸಿನಿಮಾವನ್ನು ಆದಿತ್ಯ ಧರ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ‘ಧುರಂಧರ್ 2 ನೋಡಿದ ಮೇಲೆ ನನ್ನ ಹಳೇ ಸಿನಿಮಾಗಳು ಏನೇನೂ ಅಲ್ಲ ಅನಿಸಿತು, ಸಿಂಡಿಕೇಟ್ ನನ್ನ ಹೊಸ ಸಿನಿಮಾ. ಹೊಸ ಇತಿಹಾಸ ಸೃಷ್ಟಿಸಲಿದೆ’ ಎಂದು ಆರ್‌ಜಿವಿ ಹೇಳಿಕೊಂಡಿದ್ದಾರೆ. ಅಲ್ಲದೇ, ‘ಸಿಂಡಿಕೇಟ್’ ಸಿನಿಮಾದ ಶೂಟಿಂಗ್ ಮುಗಿದ ಬೆನ್ನಲ್ಲೇ ಅವರ ‘ಸರ್ಕಾರ್ 4’ ಸಿನಿಮಾ ಸೆಟ್ಟೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ENG vs NZ: 18 ವರ್ಷಗಳ ನಂತರ ಕಿವೀಸ್ ತಂಡದಿಂದ ಸಿಡಿಯಿತು ಅಪರೂಪದ ಶತಕ – Kannada News | Glenn Phillips’ Maiden Test Ton Breaks 18 Year NZ Record Against England

ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (New Zealand vs England) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ದಿ ಓವಲ್​ನಲ್ಲಿ ನಡೆಯುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ನ್ಯೂಜಿಲೆಂಡ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಕಲೆಹಾಕಿದೆ. ಒಂದು ಹಂತದಲ್ಲಿ ನ್ಯೂಜಿಲೆಂಡ್ ತಂಡ 188 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಆ ನಂತರ, 7 ನೇ ಕ್ರಮಾಂಕದಲ್ಲಿ ಬಂದ ಗ್ಲೆನ್ ಫಿಲಿಪ್ಸ್ (Glenn Phillips) ಅದ್ಭುತ ಶತಕ ಬಾರಿಸುವ ಮೂಲಕ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕರೆದೊಯ್ದರು. ಮಾತ್ರವಲ್ಲದೆ ನ್ಯೂಜಿಲೆಂಡ್‌ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 18 ವರ್ಷಗಳ ನಂತರ ಅಪರೂಪದ ದಾಖಲೆಯನ್ನು ನಿರ್ಮಿಸಿದರು.

7ನೇ ಕ್ರಮಾಂಕದಲ್ಲಿ ಬಂದು ಶತಕ ಬಾರಿಸಿದ ಫಿಲಿಪ್ಸ್

ಗ್ಲೆನ್ ಫಿಲಿಪ್ಸ್ ಅವರ ಈ ಶತಕ ಎರಡು ಕಾರಣಗಳಿಗಾಗಿ ವಿಶೇಷವಾಗಿದೆ. ಮೊದಲನೆಯದಾಗಿ, ಇದು ಅವರ ಮೊದಲ ಟೆಸ್ಟ್ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 133 ಎಸೆತಗಳನ್ನು ಎದುರಿಸಿದ ಫಿಲಿಪ್ಸ್ 18 ಬೌಂಡರಿಗಳನ್ನು ಬಾರಿಸಿದರು. ಇದಲ್ಲದೆ, 18 ವರ್ಷಗಳ ನಂತರ ಇಂಗ್ಲೆಂಡ್‌ನಲ್ಲಿ 7 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಶತಕ ಬಾರಿಸಿದ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು.

ಇದಕ್ಕೂ ಮೊದಲು ಅಂದರೆ 2008 ರಲ್ಲಿ ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಜಾಕೋಬ್ ಓರಾಮ್ ಈ ಸಾಧನೆ ಮಾಡಿದ್ದರು. ಇಂಗ್ಲೆಂಡ್‌ನಲ್ಲಿ 7 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಕೇವಲ ನಾಲ್ಕು ಕಿವೀಸ್ ಬ್ಯಾಟ್ಸ್‌ಮನ್‌ಗಳು ಮಾತ್ರ ಟೆಸ್ಟ್ ಶತಕ ಬಾರಿಸಿದ್ದಾರೆ. 1973 ರಲ್ಲಿ ವಿಕ್ ಪೊಲಾರ್ಡ್, 1986 ರಲ್ಲಿ ಜಾನ್ ಬ್ರೇಸ್‌ವೆಲ್, 2008 ರಲ್ಲಿ ಜಾಕೋಬ್ ಓರಾಮ್ ಮತ್ತು ಈಗ 2026 ರಲ್ಲಿ ಗ್ಲೆನ್ ಫಿಲಿಪ್ಸ್ 7ನೇ ಕ್ರಮಾಂಕದಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದಾರೆ.

ಬೆನ್ ಸ್ಟೋಕ್ಸ್​ಗೆ ಗೇಟ್​ ಪಾಸ್; 4 ವರ್ಷಗಳ ಬಳಿಕ ಜೋ ರೂಟ್​ಗೆ ಟೆಸ್ಟ್ ನಾಯಕತ್ವ

ಫಿಲಿಪ್ಸ್​ಗೆ ನೆರವಾದ ಬಾಲಂಗೋಚಿಗಳು

ಡ್ಯಾರಿಲ್ ಮಿಚೆಲ್ ಔಟಾದ ನಂತರ ಕ್ರೀಸ್‌ಗೆ ಬಂದ ಗ್ಲೆನ್ ಫಿಲಿಪ್ಸ್, ಬ್ಲಂಡೆಲ್ ಅವರೊಂದಿಗೆ ಕೇವಲ 52 ಎಸೆತಗಳಲ್ಲಿ 50 ರನ್‌ಗಳ ಜೊತೆಯಾಟವನ್ನಾಡಿದರು. ಇದರಲ್ಲಿ ಫಿಲಿಪ್ಸ್ 36 ರನ್‌ಗಳ ಕೊಡುಗೆ ನೀಡಿದರು. ಫಿಲಿಪ್ಸ್ ಮತ್ತು ಬ್ಲಂಡೆಲ್ 90 ಎಸೆತಗಳಲ್ಲಿ 75 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಬ್ಲಂಡೆಲ್ ಔಟಾದ ನಂತರ ಫಿಲಿಪ್ಸ್, ಜೇಮಿಸನ್ ಅವರೊಂದಿಗೆ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಹಾಗೆಯೇ ಟೆಸ್ಟ್‌ ಪಂದ್ಯದ ಎರಡನೇ ದಿನದಂದು 82 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಫಿಲಿಪ್ಸ್, ಕೈಲ್ ಜೇಮಿಸನ್ ಅವರೊಂದಿಗೆ ಕೇವಲ 96 ಎಸೆತಗಳಲ್ಲಿ 87 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:58 pm, Thu, 18 June 26

Source link

ಮರಾಠಿ ಸಿನಿಮಾದ 42 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಿದ ಶಾರುಖ್ ಖಾನ್ – Kannada News | Shah Rukh Khan waves of 42 lakh rs loan of Marathi movie Deool Band 2

ಶಾರುಖ್ ಖಾನ್ (Shah Rukh Khan) ಅವರನ್ನು ಕಿಂಗ್ ಖಾನ್ ಎಂದು ಕರೆಯಲಾಗುತ್ತದೆ. ಇದೀಗ ಅವರು ತಮ್ಮ ಹೆಸರಿಗೆ ತಕ್ಕಂತೆ ರಾಜರ ಹೃದಯ ವೈಶಾಲ್ಯ, ಉದಾರತೆ ಮೆರೆದಿದ್ದಾರೆ. ಸಿನಿಮಾದ ತಾಂತ್ರಿಕತೆಗೆ ಸಂಬಂಧಿಸಿದ ಉದ್ಯಮಗಳನ್ನು ಹೊಂದಿರುವ ಶಾರುಖ್ ಖಾನ್ ಇದೀಗ ಮರಾಠಿ ಸಿನಿಮಾ ಒಂದರ 42 ಲಕ್ಷ ರೂಪಾಯಿ ಬಾಕಿ ಹಣವನ್ನು ಮನ್ನಾ ಮಾಡಿದ್ದು, ತಮಗೆ ಹಣಕ್ಕಿಂತಲೂ ಸಿನಿಮಾ ಮುಖ್ಯ ಎಂದು ತೋರಿಸಿದ್ದಾರೆ. ಮರಾಠಿ ಚಿತ್ರರಂಗದ ‘ದೇವೂಲ್ ಬಂದ್ 2’ ಚಿತ್ರಕ್ಕೆ ಸಂಬಂಧಿಸಿದಂತೆ, ಶಾರುಖ್ ಅವರ ನಿರ್ಮಾಣ ಸಂಸ್ಥೆಯಾದ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಸುಮಾರು 42 ಲಕ್ಷ ರೂಪಾಯಿಗಳ ಬಾಕಿಯನ್ನು ಮನ್ನಾ ಮಾಡಿದೆ. ಶಾರುಖ್ ಅವರ ಈ ನಡೆಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ.

ಮರಾಠಿ ಸಿನಿಮಾ ‘ದೇವೂಲ್ ಬಂದ್ 2’ ತನ್ನ ಕಂಟೆಂಟ್​ ಇಂದಾಗಿ ಸಖತ್ ಹಿಟ್ ಆಗಿದೆ. ವಿಮರ್ಶಕರು ಮತ್ತು ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿದೆ. ಅತಿ ಹೆಚ್ಚು ಗಳಿಕೆ ಮಾಡಿದ ಮರಾಠಿ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ. ಆದರೆ ಈ ಸಿನಿಮಾದ ಚಿತ್ರಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಕ್ರಿಯೆಗಳು ಮತ್ತು ವಿತರಣೆಯ ವಿಷಯದಲ್ಲಿ ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಸಂಸ್ಥೆಗೆ ಹಣ ಬಾಕಿ ಇತ್ತು. ಈ ಸಿನಿಮಾದ ನಿರ್ದೇಶಕ ಪ್ರವೀಣ್ ತರ್ಡೆ ಅವರ ಕಠಿಣ ಪರಿಶ್ರಮ ಮತ್ತು ಮರಾಠಿ ಚಿತ್ರರಂಗದ ಮೇಲಿನ ಗೌರವದಿಂದ ಶಾರುಖ್ ಖಾನ್ ಅವರು 42 ಲಕ್ಷ ರೂಪಾಯಿ ಬಾಕಿಯನ್ನು ಮನ್ನಾ ಮಾಡಿದ್ದಾರೆ. ಯಾವುದೇ ರೀತಿಯ ಕಾನೂನು ವಿವಾದಗಳಿಗೆ ಹೋಗದೆ, ಮರಾಠಿ ನಿರ್ಮಾಪಕರಿಗೆ ನೆರವಾಗಲು ರೆಡ್ ಚಿಲ್ಲೀಸ್ ಸಂಸ್ಥೆಯು ಈ ಬಾಕಿಯನ್ನು ರದ್ದುಗೊಳಿಸಿದೆ.

ಇದನ್ನೂ ಓದಿ:ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರತಂಡ, ಶಾರುಖ್ ಖಾನ್ ಅವರ ಈ ಸಹಾಯವು ಮರಾಠಿ ಚಿತ್ರರಂಗಕ್ಕೆ ದೊಡ್ಡ ಬೆಂಬಲ ನೀಡಿದಂತಾಗಿದೆ ಎಂದು ತಿಳಿಸಿದೆ. ಪ್ರವೀಣ್ ತರ್ಡೆ ಅವರು ಶಾರುಖ್ ಖಾನ್ ಅವರ ಈ ಉದಾರ ಗುಣಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಸ್ಟಾರ್ ನಟನೊಬ್ಬ ಸಣ್ಣ ಚಿತ್ರರಂಗದ ತಂಡಕ್ಕೆ ನೀಡಿದ ಈ ಸಹಕಾರವು ಈಗ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.

‘ದೇವೂಲ್ ಬಂದ್ 2’ ಸಿನಿಮಾವು ದೇವರು ಮತ್ತು ಭಕ್ತರ ನಡುವಿನ ಕತೆಯನ್ನು ಒಳಗೊಂಡಿದೆ. ಜೀವನದಲ್ಲಿ ನೊಂದ ಯುವತಿಯೊಬ್ಬರು ದೇವರ ಮೇಲೆ ಸಿಟ್ಟಾಗಿ ದೇವಸ್ಥಾನದ ಕಡೆ ಕಲ್ಲು ಎಸೆಯುತ್ತಾಳೆ. ಆಗ ಖುದ್ದು ದೇವರು (ಸ್ವಾಮಿ ಸಮರ್ಥ್) ಪ್ರತ್ಯಕ್ಷವಾಗಿ ಆಕೆಗೆ ಕಾಣುತ್ತಾರೆ. ಆ ಬಳಿಕ ಆ ಇಬ್ಬರೂ ಒಟ್ಟಿಗೆ ಒಂದು ಪಯಣ ಮಾಡುತ್ತಾರೆ. ಈ ವೇಳೆ ನಡೆಯುವ ತಮಾಷೆ, ಸಂದೇಶಗಳು, ಸನ್ನಿವೇಶಗಳ ಕತೆಯನ್ನು ಸಿನಿಮಾ ಒಳಗೊಂಡಿದೆ. ಮೇ ತಿಂಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ದೊಡ್ಡ ಹಿಟ್ ಆಗಿದೆ. ಸಿನಿಮಾ ಈ ವರೆಗೆ 85 ಕೋಟಿಗೂ ಹೆಚ್ಚು ಮೊತ್ತವನ್ನು ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Father’s Day 2026: ಅಪ್ಪಂದಿರ ದಿನದಂದು ನಿಮ್ಮ ಪ್ರೀತಿಯ ತಂದೆಗೆ ಈ ಸ್ಪೆಷಲ್‌ ಉಡುಗೊರೆಗಳನ್ನು ನೀಡಿ – Kannada News | Father’s Day 2026: Here is a list of gifts you can give to your father on Father’s Day

ತಾಯಿಯಂತೆ ಮಕ್ಕಳ ಜೀವನದಲ್ಲಿ ತಂದೆಯೂ (Father) ಸಹ ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಮಕ್ಕಳ ಸಂತೋಷಕ್ಕಾಗಿ ತನ್ನ ಸಂತೋಷವನ್ನೇ ತ್ಯಾಗ ಮಾಡಿ ಹಗಲಿರುಳು ದುಡಿಯುವ ಶ್ರಮಜೀವಿ ತಂದೆಯೇ ಮಕ್ಕಳ ಪಾಲಿನ ರಿಯಲ್‌ ಹೀರೋ. ಮಕ್ಕಳ ಪಾಲಿನ ಈ ಸೂಪರ್‌ ಹೀರೋಗಳನ್ನು ಸಂಭ್ರಮಿಸಲು, ಅಪ್ಪಂದಿರ ಪ್ರೀತಿ, ತ್ಯಾಗವನ್ನು ಸ್ಮರಿಸಲು ಪ್ರತಿವರ್ಷ ಜೂನ್‌ ತಿಂಗಳ ಮೂರನೇ ಭಾನುವಾರದಂದು ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತದೆ. ಇದು ತಂದೆಯರ ಪಾಲಿಗಂತೂ ತುಂಬಾನೇ ವಿಶೇಷವಾದ ದಿನ. ಅನೇಕ ಜನರು ತಮ್ಮ ತಂದೆಯ ಸಲುವಾಗಿ ಈ ದಿನವನ್ನು ಸ್ಪೆಷಲ್‌ ಆಗಿ ಆಚರಿಸುತ್ತಾರೆ. ಈ ಬಾರಿ ಫಾದರ್ಸ್‌ ಡೇಯನ್ನು ಜೂನ್‌ 21 ರಂದು ಆಚರಿಸಲಾಗುತ್ತಿದ್ದು, ಈ ದಿನ ನಿಮ್ಮ ಪ್ರೀತಿಯ ತಂದೆಯ ಮುಖದಲ್ಲಿ ನಗು ತರಿಸಲು ಬಯಸಿದರೆ ಈ ಕೆಲವೊಂದು ವಿಶೇಷ ಉಡುಗೊರೆಗಳನ್ನು ನೀಡಿ.

ಫಾದರ್ಸ್‌ ಡೇ ದಿನ ತಂದೆಗೆ  ನೀಡಬಹುದಾದ ಉಡುಗೊರೆಗಳ ಪಟ್ಟಿ:

ನಿಮ್ಮ ತಂದೆಯೊಂದಿಗೆ ಸಮಯ ಕಳೆಯಿರಿ: ನೀವು ಎಷ್ಟೇ ದುಬಾರಿ ಉಡುಗೊರೆಯನ್ನು ಖರೀದಿಸಿದರೂ, ನಿಮ್ಮ ತಂದೆಗೆ ನೀವು ನೀಡಬಹುದಾದ ಅತ್ಯಂತ ಅಮೂಲ್ಯ ಉಡುಗೊರೆ ನಿಮ್ಮ ಸಮಯ. ಇಂದಿನ ಒತ್ತಡದ ಜೀವನದಲ್ಲಿ, ಹೆತ್ತವರೊಂದಿಗೆ ಸಮಯ ಕಳೆಯಲು ಯಾಗಿಗೂ ಟೈ ಇಲ್ಲ. ಹೀಗಿರುವಾಗ ಒಂದು ದಿನ ಬಿಡುವು ತೆಗೆದುಕೊಂಡು ತಂದೆ ತಾಯಿಯ ಜೊತೆ ಪಿಕ್ನಿಕ್‌ಗೆ ಹೋಗಿ ಅಮೂಲ್ಯ ಸಮೈವನ್ನು ಕಳೆಯಿರಿ. ಇಲ್ಲವೇ ಫಿಲ್ಮ್‌ಗೆ ಹೋಗಿ, ಇಲ್ಲವೇ ಮನೆಯಲ್ಲಿಯೇ ಇದ್ದು ನಿಮ್ಮ ತಂದೆಗೆ ಅವರಿಷ್ಟದ ಅಡುಗೆಗಳನ್ನು ನಿಮ್ಮ ಕೈಯಾರೆ ಮಾಡಿ ಉಣಬಡಿಸಿ, ಸ್ನೇಹಿತರಂತೆ ತಂದೆಯೊಂದಿಗೆ ಮನಬಿಚ್ಚಿ ಮಾತನಾಡಿ, ಖಂಡಿತವಾಗಿ ಈ ವಿಷಯ ನಿಮ್ಮ ತಂದೆಗೆ ತುಂಬಾ ಖುಷಿಯನ್ನು ನೀಡುತ್ತದೆ.

ಅವರು ಆನಂದಿಸುವ ವಿಷಯಗಳಿಗೆ ಸಮಯ ಮೀಸಲಿಡಿ: ತಂದೆಯಂದಿರು ಹೆಚ್ಚಾಗಿ ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುವುದರಲ್ಲಿಯೇ ಕಳೆದುಹೋಗುತ್ತಾರೆ. ಹೀಗಿರುವಾಗ ತಂದೆಯಂದಿರ ದಿನದಂದು, ಅವರು ಆನಂದಿಸುವ ಕೆಲಸಗಳನ್ನು ಮಾಡಲು ಅವರಿಗೆ ಅವಕಾಶ ನೀಡಿ. ಅವರು ವಿಶ್ರಾಂತಿ ಪಡೆಯಲಿ, ಅವರ ನೆಚ್ಚಿನ ಪುಸ್ತಕ, ಸಂಗೀತ ಅಥವಾ ಹವ್ಯಾಸಕ್ಕಾಗಿ ಸಮಯವನ್ನು ಕಂಡುಕೊಳ್ಳಲು ಅವರಿಗೆ ನೀವು ಸಹಾಯ ಮಾಡಿ.

ಹಳೆಯ ಸ್ನೇಹಿತರನ್ನು ಭೇಟಿ ಮಾಡಿಸಿ: ಕುಟುಂಬದ ಜವಾಬ್ದಾರಿಗಳಿಂದಾಗಿ, ತಂದೆಯಂದಿರು ಸ್ನೇಹಿತರಿಂದ ದೂರವಿರುತ್ತಾರೆ, ಅವರಿಗೆ ಅವರ ಹಳೆಯ ಸ್ನೇಹಿತರನ್ನು ಭೇಟಿಯಾಗಲು ಸಹ ಸಾಧ್ಯವಾಗುವುದಿಲ್ಲ. ಹೀಗಿರುವಾಗ ಅಪ್ಪಂದಿರ ದಿನದಂದು  ನಿಮ್ಮ ತಂದೆಯ  ಕ್ಲೋಸ್‌ ಫ್ರೆಂಡ್ಸ್‌, ಶಾಲಾ, ಕಾಲೇಜು ಸ್ನೇಹಿತರನ್ನು ಒಟ್ಟು ಸೇರಿಸಿ ಅವರಿಗಾಗಿ ಒಂದು ಸ್ನೇಹ ಕೂಟವನ್ನು ಆಯೋಜಿಸಿ. ಹಲವು ವರ್ಷಗಳ ನಂತರ ತಂದೆ ತಮ್ಮ ಹಳೆಯ ಸ್ನೇಹಿತರನ್ನು ನೋಡಿದಾಗ ಅವರ ಮುಖದಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಳ್ಳುವ ನಗು ಯಾವುದೇ ದುಬಾರಿ ಉಡುಗೊರೆಗಿಂತ ಹೆಚ್ಚು ಮೌಲ್ಯಯುತವಾಗಿರುತ್ತದೆ.

ಇದನ್ನೂ ಓದಿ: ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಪಿಕ್ನಿಕ್‌ ಹೋಗುವ ಖುಷಿಯೇ ಬೇರೆ

ಆರೋಗ್ಯ ಸಂಬಂಧಿತ ಉಡುಗೊರೆಗಳು: ವಯಸ್ಸಾದಂತೆ, ಅಪ್ಪಂದಿರಿಗೆ ವಿಶ್ರಾಂತಿ ಹೆಚ್ಚು ಬೇಕಾಗುತ್ತದೆ. ಅವರು ದೀರ್ಘ ದಿನದ ನಂತರ ದಣಿದಿದ್ದಾಗ, ಅವರಿಗೆ ರೆಸ್ಟ್‌ ಪಡೆಯಲು ನೀವು ಅವರಿಗೆ ಫೂಟ್ ಮಸಾಜ್ ಯಂತ್ರ ಅಥವಾ ಉತ್ತಮ ಮಸಾಜ್ ದಿಂಬನ್ನು ಉಡುಗೊರೆಯಾಗಿ ನೀಡಬಹುದು. ಸ್ಮಾರ್ಟ್ ವಾಚ್‌ ಉಡುಗೊರೆಯಾಗಿ ನೀಡಬಹುದು. ಇದಲ್ಲದೆ ಮಸಾಜ್ ಸೆಷನ್, ಆಕ್ಯುಪ್ರೆಶರ್ ಥೆರಪಿ ಅಥವಾ ಉತ್ತಮ ಕ್ಷೇಮ ಕೇಂದ್ರದಲ್ಲಿ ಯೋಗ/ಧ್ಯಾನ ತರಗತಿಗೆ ಒಂದು ತಿಂಗಳ ಚಂದಾದಾರಿಕೆಯನ್ನು ಉಡುಗೊರೆಯಾಗಿ ನೀಡಬಹುದು.  ಈ ಉಡುಗೊರೆಗಳು ಅವರು ತಮ್ಮ ಆರೋಗ್ಯವನ್ನು ಉತ್ತಮವಾಗಿ ನೋಡಿಕೊಳ್ಳುವಂತೆ ಮಾಡುತ್ತದೆ.

ನೆನಪುಗಳನ್ನು ಮರಳಿ ತರುವ ಉಡುಗೊರೆಗಳು: ನಿಮ್ಮ ತಂದೆಯ ಬಾಲ್ಯದ ಫೋಟೋಗಳು, ತಂದೆ ಅವರ ಸಹೋದರ, ಸಹೋದರಿಯರೊಂದಿಗಿರುವ ಫೋಟೋ ಅಥವಾ ನಿಮ್ಮ ಕುಟುಂಬದ ಮರೆಯಲಾದ ಕ್ಷಣದ ಫೋಟೋಗಳನ್ನು ಫೋಟೋ ಫ್ರೇಮ್‌ ಹಾಕಿಸಿ ತಂದೆಗೆ ಉಡುಗೊರೆಯಾಗಿ ನೀಡಬಹುದು.

ಪ್ರತಿದಿನ ಉಪಯೋಗಕ್ಕೆ ಬರುವ ವಸ್ತುಗಳು: ನಿಮ್ಮ ತಂದೆಗೆ ಅವರು ಪ್ರತಿದಿನ ಬಳಸುವ ವಸ್ತುಗಳನ್ನು ಸಹ ನೀವು ಗಿಫ್ಟ್‌ ಆಗಿ ನೀಡಬಹುದು. ವಾಚ್‌, ಶೇವಿಂಗ್‌ ಕಿಟ್, ಬಟ್ಟೆ, ವಾಕಿಂಗ್‌ ಶೂ, ಪರ್ಫ್ಯೂಮ್‌ ಇತ್ಯಾದಿ ವಸ್ತುಗಳನ್ನು ಉಡುಗೊರೆಯಾಗಿ ನೀಡಬಹುದು. ಇದಲ್ಲದೆ ಅಪ್ಪನಿಗೆ ಓಡಾಡಲು ದ್ವಿಚಕ್ರ ವಾಹನವನ್ನೂ ಗಿಫ್ಟ್‌ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ – Kannada News | India’s defence production and exports see big increase in 2025 26, says minister Rajnath Singh

ನವದೆಹಲಿ, ಜೂನ್ 18: ಭಾರತದ ರಕ್ಷಣಾ ಕ್ಷೇತ್ರ ಮಿಂಚಿನ ಸಂಚಾರ ನಡೆಸುತ್ತಿದೆ. ಸರ್ಕಾರದ ‘ಸ್ವಾವಲಂಬಿ ಭಾರತ’ (Aatmanirbhar Bharat) ಯೋಜನೆಗೆ ಭಾರಿ ಯಶಸ್ಸು ಸಿಕ್ಕಿದೆ. ದೇಶದ ವಾರ್ಷಿಕ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ (FY26) ಸಾರ್ವಕಾಲಿಕ ದಾಖಲೆಯಾದ ₹1.78 ಲಕ್ಷ ಕೋಟಿ ತಲುಪಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದ್ದನ್ನು ತಿಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು, ರಕ್ಷಣಾ ಕ್ಷೇತ್ರದ ಉತ್ಪಾದನೆ, ರಫ್ತು ಇತ್ಯಾದಿ ಸಾಧನೆಗಳನ್ನು ಹಂಚಿಕೊಂಡಿದ್ದಾರೆ.

ಶೇ. 15.6 ರಷ್ಟು ಹೆಚ್ಚಿದ ರಕ್ಷಣಾ ಉತ್ಪಾದನೆ

ಕಳೆದ ಹಣಕಾಸು ವರ್ಷಕ್ಕೆ (2024-25) ಹೋಲಿಸಿದರೆ ಭಾರತದ ರಕ್ಷಣಾ ಉತ್ಪಾದನೆಯು ಈ ಬಾರಿ ಶೇ. 15.6 ರಷ್ಟು ಗಮನಾರ್ಹ ಬೆಳವಣಿಗೆ ಕಂಡಿದೆ. ಕಳೆದ ವರ್ಷ ಡಿಫೆನ್ಸ್ ಪ್ರೊಡಕ್ಷನ್​ನ ಮೊತ್ತವು ₹1.54 ಲಕ್ಷ ಕೋಟಿಯಷ್ಟಿತ್ತು. ಈಗ ಅದು ₹1.78 ಲಕ್ಷ ಕೋಟಿ ತಲುಪಿದೆ.

ದೀರ್ಘಾವಧಿಯ ಪ್ರಗತಿಯನ್ನು ಗಮನಿಸಿದರೆ, 2020-21ರ ಹಣಕಾಸು ವರ್ಷದಲ್ಲಿ ದೇಶದ ರಕ್ಷಣಾ ಉತ್ಪಾದನೆ ₹84,643 ಕೋಟಿಯಷ್ಟಿತ್ತು. ಅಲ್ಲಿಂದ ಇಂದಿನವರೆಗೆ ಅಂದರೆ ಕೇವಲ 5 ವರ್ಷಗಳಲ್ಲಿ ಉತ್ಪಾದನೆಯು ಶೇ. 110 ರಷ್ಟು ಬೃಹತ್ ಬೆಳವಣಿಗೆಯನ್ನು ದಾಖಲಿಸಿದೆ. ಇನ್ನು 2013-14ರ ಸಾಲಿಗೆ (₹43,746 ಕೋಟಿ) ಹೋಲಿಸಿದರೆ ಇದು ಸರಿಸುಮಾರು 4 ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಕ್ಯಾರಿ ಬ್ಯಾಗ್​ಗೆ ₹10 ವಸೂಲಿ; ಶೂ ಕಂಪನಿಗೆ ಬಿತ್ತು ₹8,000 ದಂಡ; ಇದು ವ್ಯಾಪಾರಿಗಳು, ಗ್ರಾಹಕರಿಗೆ ಕಣ್ತೆರೆಸುವ ಪ್ರಕರಣ

ಖಾಸಗಿ ವಲಯದ ಸಾರ್ವಕಾಲಿಕ ದಾಖಲೆಯ ಕೊಡುಗೆ

ರಕ್ಷಣಾ ಉತ್ಪಾದನೆಯಲ್ಲಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಷ್ಟೇ ಅಲ್ಲದೆ, ಖಾಸಗಿ ಕಂಪನಿಗಳ ಪಾಲ್ಗೊಳ್ಳುವಿಕೆಯೂ ಹೆಚ್ಚಾಗಿದೆ. ರಕ್ಷಣಾ ಕ್ಷೇತ್ರದಲ್ಲಿನ ಒಟ್ಟು ಉತ್ಪಾದನೆಯಲ್ಲಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಪಾಲು ಶೇ. 76ರಷ್ಟಿದೆ. ಖಾಸಗಿ ವಲಯದ ಕೊಡುಗೆ ಶೇ. 24 ಮಾತ್ರವೇ ಇದೆ. ಆದರೂ ಕೂಡ ಇತಿಹಾಸದಲ್ಲೇ ಈ ಸೆಕ್ಟರ್​ನ ಗರಿಷ್ಠ ಸಾಧನೆ ಎನಿಸಿದೆ. ಪ್ರೈವೇಟ್ ಸೆಕ್ಟರ್ ಕಂಪನಿಗಳ ಡಿಫೆನ್ಸ್ ಪ್ರೊಡಕ್ಷನ್​ನ ಒಟ್ಟು ಮೊತ್ತ ₹42,000 ಕೋಟಿಯಷ್ಟಿದೆ.

ದಾಖಲೆ ಬರೆದ ರಕ್ಷಣಾ ರಫ್ತು

ದೇಶೀಯವಾಗಿ ಉತ್ಪಾದನೆ ಹೆಚ್ಚಿರುವುದು ಭಾರತದ ರಫ್ತು ಸಾಮರ್ಥ್ಯವನ್ನೂ (Defence Exports) ಬಲಪಡಿಸಿದೆ. 2025-26ರ ಸಾಲಿನಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ದಾಖಲೆಯ ₹38,424 ಕೋಟಿ ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಿದೆ. ಇದು ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ರಕ್ಷಣಾ ಉತ್ಪನ್ನಗಳಿಗೆ ಇರುವ ಬೇಡಿಕೆಯನ್ನು ತೋರಿಸುತ್ತದೆ.

ಇದನ್ನೂ ಓದಿ: 2025-26ಕ್ಕೆ ಶೇ. 8.25 ಇಪಿಎಫ್ ಬಡ್ಡಿಗೆ ಅನುಮೋದನೆ; ಸಕ್ರಿಯವಲ್ಲದ ಇಪಿಎಫ್ ಖಾತೆಗಳಿಗೂ ಸಿಗುತ್ತಾ ಹಣ?

ರಕ್ಷಣಾ ಇಲಾಖೆ, ಸಾರ್ವಜನಿಕ ಸ್ವಾಮ್ಯದ ಉದ್ಯಮಗಳು (DPSUs), ಖಾಸಗಿ ಉದ್ಯಮಗಳು ಮತ್ತು ಸ್ಟಾರ್ಟ್‌ಅಪ್‌ಗಳ ಜಂಟಿ ಪರಿಶ್ರಮದಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಪೂರಕ ನೀತಿಗಳು ಮತ್ತು ರಫ್ತು ಸಾಮರ್ಥ್ಯದೊಂದಿಗೆ ಈ ವಲಯವು ಮತ್ತಷ್ಟು ವೇಗವಾಗಿ ಮುನ್ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​ – Kannada News | Davanagere Headmaster Death Case: FIR Registered Against 10 for Alleged Caste Harassment and Mental Torture

ಮೃತ ಮುಖ್ಯ ಶಿಕ್ಷಕ ಜಯಪ್ಪImage Credit source: Tv9 Kannada

ದಾವಣಗೆರೆ, ಜೂನ್​​ 18: ವಿಷ ಸೇವಿಸಿ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಪ್ರಕರಣ ಸಂಬಂಧ ಐವರು ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್​​ಪಿ, ಬಿಆರ್​ಪಿ ಸೇರಿದಂತೆ 10 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ,ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಸೇರಿದಂತೆ 10 ಜನರ ವಿರುದ್ಧ ಮಲೆಬೆನ್ನೂರು ಠಾಣೆಗೆ ಜಯಪ್ಪ ಪತ್ನಿ ಅಂಜನಮ್ಮ ದೂರು ನೀಡಿದ್ದರು.

ಅಂಜನಮ್ಮ ದೂರಿನಲ್ಲಿ ಏನಿದೆ?

ಕಳೆದ 10 ತಿಂಗಳಿಂದ ಕೊಕ್ಕನೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪತಿ ಜಯಪ್ಪಗೆ ನಿತ್ಯವೂ ಹಿಂಸೆ ನೀಡಲಾಗುತ್ತಿತ್ತು. ನಾವು ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಜಾತಿ ನಿಂದನೆ ಮಾಡುತ್ತಿದ್ದರು. ಈ ವಿಚಾರವನ್ನು ಹತ್ತಾರು ಸಲ ಪತಿ ಜಯಪ್ಪ ತನಗೆ ಹೇಳಿದ್ದರು. ಇವರು ನೀಡಿದ ಮಾನಸಿಕ ಹಿಂಸೆಯೇ ತನ್ನ ಪತಿ ಆತ್ಮಹತ್ಯೆಗೆ ಕಾರಣ ಎಂದು ದೂರಿನಲ್ಲಿ ಅಂಜಿನಮ್ಮ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು; ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ!

ಕೊಕ್ಕನೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ನಡುವೆ ಒಳಜಗಳದ ಆರೋಪ ಕೇಳಿಬಂದಿತ್ತು. ಸಹಶಿಕ್ಷಕರು, ಅಡುಗೆ ಸಹಾಯಕರು ಮತ್ತು ಮುಖ್ಯ ಶಿಕ್ಷಕನ ನಡುವೆ ಮನಸ್ಥಾಪದ ಹಿನ್ನೆಲೆ ಎಸ್​​ಡಿಎಂಸಿ ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆದಿತ್ತು. ಸಭೆ ಸೇರಿದ್ದ ವೇಳೆ ಶಾಲಾ ಶೌಚಾಲಯಕ್ಕೆ ಹೋಗಿ ಮುಖ್ಯ ಶಿಕ್ಷಕ ಜಯಪ್ಪ ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಂಪೂರ್ಣ ಬತ್ತಿದ ಕಾವೇರಿ ನದಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ – Kannada News | Cauvery River Faces Alarming Drought: June Flow Drastically Reduced in Kodagu

ಮಡಿಕೇರಿ, ಜೂನ್​​ 18: ರಾಜ್ಯದಲ್ಲಿ ಶೇಕಡ 60ರಷ್ಟು ಮಳೆ ಕೊರತೆ ಆತಂಕಕಾರಿ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಜೂನ್ ತಿಂಗಳಲ್ಲಿ ಧಾರಾಕಾರ ಮಳೆ ನಿರೀಕ್ಷಿಸಲಾಗಿದ್ದ ಕೊಡಗು ಜಿಲ್ಲೆಯ ಕಾವೇರಿ ನದಿ ಪಾತ್ರದಲ್ಲಿ, ನದಿ ಹರಿವು ಗಣನೀಯವಾಗಿ ಕುಸಿದಿದೆ. ಕೊಡಗು-ಮೈಸೂರು ಗಡಿಯಲ್ಲಿರುವ ಕೊಪ್ಪ ಸೇತುವೆ ಬಳಿ ಕಾವೇರಿ ನದಿಯ ಸ್ಥಿತಿಗತಿ ಪರಿಶೀಲಿಸಿದಾಗ, ಸಾಮಾನ್ಯವಾಗಿ 10-15 ಅಡಿ ಹರಿಯಬೇಕಿದ್ದ ನದಿ ಈಗ ಕೇವಲ ಅರ್ಧದಿಂದ ಒಂದು ಅಡಿ ನೀರಿಗೆ ಸೀಮಿತವಾಗಿದೆ. ನದಿಯ ಒಡಲು ಕಲ್ಲುಗಳಿಂದ ಕೂಡಿದ್ದು, ಜಲಮಾಪಕದಲ್ಲಿ ನೀರು ಶೂನ್ಯ ಮಟ್ಟವನ್ನು ತಲುಪಿದೆ. ಕಾವೇರಿ ಕೊಳ್ಳದಲ್ಲಿನ ಮಳೆಯ ತೀವ್ರ ಅಭಾವವೇ ಈ ಪರಿಸ್ಥಿತಿಗೆ ಕಾರಣವಾಗಿದ್ದು ಇದರಿಂದ ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು ಸೇರಿದಂತೆ ಕಾವೇರಿ ನದಿ ನೀರನ್ನು ಅವಲಂಬಿಸಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಲಿದೆ. ಕೃಷಿ ಚಟುವಟಿಕೆಗಳಿಗೂ ನೀರು ಸಿಗದೆ ಬೆಳೆಗಳು ಒಣಗುವ ಭೀತಿ ಎದುರಾಗಿದೆ. ಕಾವೇರಿ ನದಿಯ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್ ಮತ್ತು ಹಾರಂಗಿ ಸಹ ತುಂಬದೆ ಇರುವುದರಿಂದ ಮುಂಬರುವ ದಿನಗಳಲ್ಲಿ ಜಲಸಂಕಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ – Kannada News | Karnataka Mango Growers Hit by Price Crash; Pralhad Joshi Writes to Shivraj Singh Chouhan

ಬೆಂಗಳೂರು, ಜೂನ್​​ 18: ಕರ್ನಾಟಕದ ಮಾವು ಬೆಳೆಗಾರರು (Mango growers) ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ತೋತಾಪುರಿ ಮಾವಿನ ಬೆಲೆ ತೀವ್ರ ಕುಸಿತವಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಸೇರಿದಂತೆ ಹಲವು ಭಾಗದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಮಾವು ಬೆಳೆಗಾರರಿಗೆ ಪಿಡಿಪಿಎಸ್​ (PDPS) ಅಡಿಯಲ್ಲಿ ಸೂಕ್ತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್​ಗೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ (Pralhad Joshi) ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಮುಖ್ಯಾಂಶಗಳು

  • ತೋತಾಪುರಿ ಮಾವಿನ ಬೆಲೆ ಕುಸಿತ
  • ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರು
  • ಸಚಿವ ಶಿವರಾಜ್ ಸಿಂಗ್ ಚೌಹಾಣ್​ಗೆ ಪ್ರಲ್ಹಾದ್​​ ಜೋಶಿ ಪತ್ರ

ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಬರೆದ ಪತ್ರದಲ್ಲಿ ಏನಿದೆ?

ರಾಜ್ಯದ ಹಲವು ಜಿಲ್ಲೆಗಳ ಲಕ್ಷಾಂತರ ರೈತರ ಜೀವನೋಪಾಯಕ್ಕೆ ಪ್ರಮುಖ ಆಧಾರವಾಗಿರುವ ಮಾವು ಬೆಳೆ ಪ್ರಸ್ತುತ ಸಂಕಷ್ಟದಲ್ಲಿದೆ. ಪ್ರಸಕ್ತ 2026ರ ಜೂನ್ ತಿಂಗಳಿನಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದಂತಹ ಪ್ರಮುಖ ಮಾರುಕಟ್ಟೆಗಳಲ್ಲಿ ತೋತಾಪುರಿ ತಳಿಯ ಮಾವಿನ ಬೆಲೆಯು ರೈತರಿಗೆ ಸಿಗಬೇಕಾದ ಕನಿಷ್ಠ ಲಾಭದಾಯಕ ದರಕ್ಕಿಂತಲೂ ಗಣನೀಯವಾಗಿ ಕುಸಿದಿದ್ದು, ಇದು ಬೆಳೆಗಾರರನ್ನು ತೀವ್ರ ಕಷ್ಟಕ್ಕೆ ದೂಡಿದೆ.

ಇದನ್ನೂ ಓದಿ: ಮಾವು ಬೇಕೇ ಮಾವು! ಒಂದೇ ಸೂರಿನಡಿ ಬಗೆಬಗೆಯ ಮಾವಿನ ಹಣ್ಣುಗಳ ಮಾರಾಟ ಹೇಗಿದೆ ನೋಡಿ

ಈ ಬಾರಿ ಕಠಿಣ ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಮಾವಿನ ಉತ್ಪಾದನೆಯೂ ಕುಂಠಿತಗೊಂಡಿದೆ. ಒಂದೆಡೆ ಇಳುವರಿ ಕಡಿಮೆಯಾಗಿದ್ದರೆ, ಇನ್ನೊಂದೆಡೆ ಮಾರುಕಟ್ಟೆಯಲ್ಲಿ ತೀವ್ರ ಬೆಲೆ ಕುಸಿತ ಉಂಟಾಗಿರುವುದು ರೈತರಿಗೆ ದೊಡ್ಡ ಮಟ್ಟದ ಆರ್ಥಿಕ ನಷ್ಟವನ್ನು ಉಂಟುಮಾಡಿದೆ. ಈ ದ್ವಿಮುಖ ಹೊಡೆತದಿಂದಾಗಿ ತೋತಾಪುರಿ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಮಾವು ಪ್ರಿಯರು

ಈ ಹಿನ್ನೆಲೆಯಲ್ಲಿ ರೈತರ ಹಿತರಕ್ಷಣೆಯನ್ನು ಕಾಯುವ ಸಲುವಾಗಿ, ಕಳೆದ ವರ್ಷ ನೀಡಿದಂತೆಯೇ ಪ್ರಸಕ್ತ ವರ್ಷವೂ ‘ಬೆಲೆ ಕೊರತೆ ಪಾವತಿ ಯೋಜನೆ’ಯಡಿ (PDPS) ಮಾವು ಬೆಳೆಗಾರರಿಗೆ ತುರ್ತು ಆರ್ಥಿಕ ಬೆಂಬಲ ನೀಡುವಂತೆ ಪತ್ರದಲ್ಲಿ ಪ್ರಲ್ಹಾದ್​​ ಜೋಶಿ ಮನವಿ ಮಾಡಿದ್ದು, ಕೇಂದ್ರ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 6:29 pm, Thu, 18 June 26

Source link

‘ಸೈನಿಕ 2’: ಚಿತ್ರರಂಗಕ್ಕೆ ಕಾಲಿಡಲಿರುವ ಸಿಪಿ ಯೋಗೇಶ್ವರ್ ಪುತ್ರ – Kannada News | MLA CP Yogeshwar bringing his son Dhyan to Kannada movie industry

ಸಿಪಿ ಯೋಗೇಶ್ವರ್ (CP Yogeshwar), ನಟನಾಗಿ ಯಶಸ್ಸು ಗಳಿಸಿ, ಬಳಿಕ ರಾಜಕಾರಣಿಯಾಗಿ ಅಲ್ಲಿಯೂ ಯಶಸ್ಸು ಗಳಿಸಿದವರು. ಇದೀಗ ಅವರು ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಕರೆತರಲು ಸಜ್ಜಾಗಿದ್ದಾರೆ. ಕೆಲವು ರಾಜಕಾರಣಿಗಳು ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ತಂದಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರೂ ಸಹ ರಾಜಕಾರಣದತ್ತ ತಿರುಗುತ್ತಾರೆ. ಮಕ್ಕಳನ್ನು ರಾಜಕಾರಣಕ್ಕೆ ತರುವ ಮುನ್ನ ಸಿನಿಮಾ ರಂಗದಲ್ಲಿ ಜನಪ್ರಿಯತೆ ಸಿಗುವಂತೆ ಮಾಡಲಾಗುತ್ತದೆ. ಇದು ಒಂದು ರೀತಿಯ ಮಾಡೆಲ್ ಆಗಿಬಿಟ್ಟಿದೆ. ಅದರಂತೆ ಈಗ ಸಿಪಿ ಯೋಗೇಶ್ವರ್ ಸಹ ತಮ್ಮ ಮಗನನ್ನು ಸಿನಿಮಾ ರಂಗಕ್ಕೆ ತರುತ್ತಿದ್ದು, ರಾಜಕಾರಣಕ್ಕೆ ಸಿನಿಮಾ ರಂಗದಲ್ಲಿ ತಳಹದಿ ಹಾಕುತ್ತಿದ್ದಾರೆ.

ಸಿಪಿ ಯೋಗೇಶ್ವರ್ ಅವರ ಪುತ್ರ ಧ್ಯಾನ್ ಯೋಗೇಶ್ವರ್ ಅವರು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಯೋಗೇಶ್ವರ್ ಅವರಿಗೆ ಭಾರಿ ಹೆಸರು, ಖ್ಯಾತಿ, ಯಶಸ್ಸು ತಂದುಕೊಟ್ಟ ‘ಸೈನಿಕ’ ಸಿನಿಮಾದ ಹೆಸರನ್ನೇ ಇರಿಸಿಕೊಂಡು ಧ್ಯಾನ್ ಅವರು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಧ್ಯಾನ್ ಅವರು ನಟಿಸುತ್ತಿರುವ ಮೊದಲ ಸಿನಿಮಾದ ಹೆಸರು ‘ಸೈನಿಕ 2’.

ಅಂದಹಾಗೆ ‘ಸೈನಿಕ’ ಸಿನಿಮಾನಲ್ಲಿ ಕೇವಲ ಮಗನಷ್ಟೇ ಅಲ್ಲ ಖುದ್ದು ಸಿಪಿ ಯೋಗೇಶ್ವರ್ ಅವರು ಪ್ರಮುಖ ಪಾತ್ರವೊಂದರಲ್ಲಿ ನಟಿಸಲಿದ್ದಾರೆ. ಯೋಗೇಶ್ವರ್ ಅವರು ಸಿನಿಮಾಕ್ಕಾಗಿ ಬಣ್ಣ ಹಚ್ಚಿ ವರ್ಷಗಳೇ ಆಗಿವೆ. ಇದೀಗ ಮಗನ ಸಿನಿಮಾಕ್ಕಾಗಿ ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ನಾಗಣ್ಣ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ಮಾಪಕ ಕೆಪಿ ಶ್ರೀಕಾಂತ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಪ್ರಸ್ತುತ ಲೊಕೇಶನ್ ಹುಡುಕಾಟದ ಕೆಲಸಗಳು ಸಾಗುತ್ತಿವೆಯಂತೆ.

ಇದನ್ನೂ ಓದಿ:ನಮ್ಮಪ್ಪನೊಂದಿಗೆ ಇರೋದು ಆಸ್ತಿ ಕಲಹ ಅಲ್ಲವೇ ಅಲ್ಲ, ಹಾಗೆ ಬಿಂಬಿಸಲಾಗುತ್ತಿದೆ: ನಿಶಾ ಯೋಗೇಶ್ವರ್ 

ಬೆಂಗಳೂರು, ಬೀದರ್, ಗುಲ್ಬರ್ಗ ಸೇರಿದಂತೆ ಇನ್ನೂ ಕೆಲ ಭಾಗಗಳಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜಿಸುತ್ತಿದೆ. ಜುಲೈ 5ರಂದು ಸಿನಿಮಾದ ಮುಹೂರ್ತ ನಿಗದಿ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸಿ.ಪಿ. ಯೋಗೇಶ್ವರ್ ಅವರ ಕುಟುಂಬದಿಂದ ಯಾವುದೇ ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ. ಸಿಪಿ ಯೋಗೇಶ್ವರ್ ಅವರ ಪುತ್ರಿ ನಿಶಾ ಸಹ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ದರ್ಶನ್ ಎದುರು ‘ಅಂಬರೀಶ’ ಸಿನಿಮಾದ ನಾಯಕಿಯಾಗಿ ಆಯ್ಕೆ ಆಗಿದ್ದರು ಆದರೆ ಬಳಿಕ ಆ ಸಿನಿಮಾದಿಂದ ಹೊರ ನಡೆದರು. ಬಳಿಕ ತೆಲುಗಿನ ಸಿನಿಮಾನಲ್ಲಿ ನಟಿಸುತ್ತಾರೆಂಬ ಸುದ್ದಿಯಾಗಿತ್ತು. ಬಳಿಕ ಅವರು ಸಹ ರಾಜಕೀಯದ ಕಡೆ ಗಮನ ಹರಿಸಿದರು. ಜೊತೆಗೆ ತಂದೆಯ ಜೊತೆಗೆ ವಿವಾದವನ್ನೂ ಮಾಡಿಕೊಂಡರು.

ಕುಮಾರಸ್ವಾಮಿ, ಜಮೀರ್ ಅಹ್ಮದ್, ಅಂಬರೀಶ್, ಎಚ್​​ಎಂ ರೇವಣ್ಣ, ಜನಾರ್ದನ ರೆಡ್ಡಿ ಇನ್ನೂ ಕೆಲವು ರಾಜಕಾರಣಿಗಳು ತಮ್ಮ ಮಕ್ಕಳನ್ನು ನಟರನ್ನಾಗಿ ಮಾಡಿದ್ದಾರೆ. ಬಳಿಕ ರಾಜಕೀಯಕ್ಕೂ ಕರೆತರುತ್ತಾರೆ. ಈಗ ಯೋಗೇಶ್ವರ್ ಸಹ ತಮ್ಮ ಮಗನನ್ನು ಸಿನಿಮಾಕ್ಕೆ ಕರೆತರುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Viral: 40 ಸಾವಿರ ರೂ ಮನೆ ಬಾಡಿಗೆ, 2.4 ಲಕ್ಷ ರೂ ಭದ್ರತಾ ಠೇವಣಿ; ಬೆಂಗಳೂರಿನಲ್ಲಿ ಮನೆ ಹುಡುಕುತ್ತಿದ್ದ ವ್ಯಕ್ತಿಗೆ ಫುಲ್ ಶಾಕ್ – Kannada News | Bengaluru: A man reveals his friend’s experience while looking for a house in Bengaluru

ಬೆಂಗಳೂರು, ಜೂನ್ 18: ಬೆಂಗಳೂರಿನಲ್ಲಿ (Bengaluru) ಬಾಡಿಗೆ ಮನೆ ಮಾಡಿ ನೆಮ್ಮದಿಯಿಂದ ಇರೋಣ ಅಂದ್ರೆ ಮನೆ ಮಾಲೀಕರ ಡಿಮ್ಯಾಂಡ್ ಹೆಚ್ಚಾಗಿದೆ. ದುಡ್ಡಿನ ಆಸೆಗೆ ಬಿದ್ದು ಮನೆ ಮಾಲೀಕರು ಬೇಕಾಬಿಟ್ಟಿ ಬಾಡಿಗೆ ಹಾಗೂ ಭದ್ರತಾ ಠೇವಣಿ ಕೇಳುತ್ತಿದ್ದಾರೆ. ನೀವೇನಾದ್ರೂ ಸಿಲಿಕಾನ್‌ ಸಿಟಿಯಲ್ಲಿ ಮನೆ ಹುಡುಕುತ್ತಿದ್ರೆ ಕಡಿಮೆ ಬಾಡಿಗೆ ಹಾಗೂ ಠೇವಣಿ ಇರುವ ಮನೆ ಸಿಗುತ್ತೆ ಅನ್ನೋದು ದೂರದ ಮಾತು. ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕಾಟ ವಿಚಾರದಲ್ಲಿ ತನ್ನ ಸ್ನೇಹಿತನಿಗಾದ ಅನುಭವವನ್ನು ಪೋಸ್ಟ್ ಮಾಡಿದ್ದಾರೆ. ಬೆಂಗಳೂರಿಗೆ ಸ್ಥಳಾಂತರಗೊಂಡ ತನ್ನ ಸ್ನೇಹಿತ ಫ್ಲಾಟ್‌ಗಾಗಿ ಹುಡುಕುತ್ತಿದ್ದಾಗ ಆತನಿಗೆ ಮನೆ ಮಾಲೀಕರು ಕೇಳಿದ ಬಾಡಿಗೆ ಹಾಗೂ ಠೇವಣಿ ಮೊತ್ತ ಕೇಳಿದ್ರೆ ನಿಮ್ಮದು ತಲೆ ಗಿರ್ ಅನ್ನುತ್ತೆ. ಹೌದು, 40,000 ರೂ ತಿಂಗಳ ಬಾಡಿಗೆ ಹಾಗೂ 2.4 ಲಕ್ಷ ರೂ ಭದ್ರತಾ ಠೇವಣಿಯಂತೆ. ಸದ್ಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

ಪರಿತಷ್ ಶರ್ಮಾ (Paritsh Shrrma) ತಮ್ಮ ಎಕ್ಸ್ ಖಾತೆಯಲ್ಲಿ ಬೆಂಗಳೂರಿಗೆ ಸ್ಥಳಾಂತರಗೊಂಡ ತನ್ನ ಸ್ನೇಹಿತನೊಬ್ಬನಿಗೆ ಮನೆ ಹುಡುಕುತ್ತಿದ್ದ ವೇಳೆ ಆದ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ನನ್ನ ಒಬ್ಬ ಸ್ನೇಹಿತ ಬೆಂಗಳೂರಿಗೆ ಸ್ಥಳಾಂತರಗೊಂಡು ಫ್ಲಾಟ್ ಹುಡುಕುತ್ತಿದ್ದ. ಅವನಿಗೆ ತಿಂಗಳಿಗೆ 40,000 ರೂ ಬಾಡಿಗೆ ಇರುವ ಗೆ ಫ್ಲಾಟ್ ಸಿಕ್ಕಿತು. ಮಾಲೀಕರು ಆರು ತಿಂಗಳ ಭದ್ರತಾ ಠೇವಣಿ 2.4 ಲಕ್ಷ ರೂ ಕೇಳುತ್ತಿದ್ದಾರೆ. ಅದರ ಜೊತೆಗೆ 40,000 ರೂ ಬ್ರೋಕರೇಜ್.

ವೈರಲ್ ಪೋಸ್ಟ್ ಇಲ್ಲಿದೆ

ಆರು ತಿಂಗಳ ಠೇವಣಿಯ ಹಿಂದಿನ ತರ್ಕವನ್ನು ಯಾರಾದರೂ ವಿವರಿಸಬಹುದೇ? ಬೇರೆ ಯಾವುದೇ ಪ್ರಮುಖ ನಗರದಲ್ಲಿ ಇದನ್ನು ಸಾಮಾನ್ಯ ಅಭ್ಯಾಸವಾಗಿ ನಾನು ನೋಡಿಲ್ಲ. ಅನೇಕ ಸಂದರ್ಭಗಳಲ್ಲಿ, ಮನೆ ಮಾಲೀಕರು ಕೊನೆಯಲ್ಲಿ ಪೂರ್ಣ ಠೇವಣಿಯನ್ನು ಹಿಂದಿರುಗಿಸುವುದಿಲ್ಲ. ಬೆಂಗಳೂರಿನ ಬಾಡಿಗೆ ಮಾರುಕಟ್ಟೆ ತುಂಬಾ ಉತ್ಸುಕವಾಗಿ ಕಾಣುತ್ತದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಎಚ್ಎಸ್ಆರ್ ಲೇಔಟ್‌ನ 1BHK ನಲ್ಲಿ ವಾಸಿಸುವ ಮಹಿಳೆಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಈ ಪೋಸ್ಟ್ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಟೈಯರ್ 1 ಹಾಗೂ ಮೆಟ್ರೋ ಸಿಟಿಗಳಲ್ಲಿ ಆರು ತಿಂಗಳ ಠೇವಣಿ ಸರ್ವೇ ಸಾಮಾನ್ಯ ಎಂದಿದ್ದಾರೆ. ಇನ್ನೊಬ್ಬರು, ಆರು ತಿಂಗಳ ಭದ್ರತಾ ಠೇವಣಿ ಪಡೆದಿರುವುದಕ್ಕೆ ನಿಮ್ಮ ಸ್ನೇಹಿತ ನಿಜಕ್ಕೂ ಅದೃಷ್ಟವಂತ. ಕೆಲವು ಕಡೆಗಳಲ್ಲಿ 12 ತಿಂಗಳ ಭದ್ರತಾ ಠೇವಣಿಯಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ದಯವಿಟ್ಟು ಬ್ರೋಕರೇಜ್ ಕೊಡಬೇಡಿ ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:15 pm, Thu, 18 June 26

Source link

Exit mobile version