‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯ (Prajakeeya) ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆ್ಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಮುಂದಿನ ದಿನಗಳಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಇಂದು (ಏಪ್ರಿಲ್ 1) ಆ್ಯಪ್ ಬಿಡುಗಡೆ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ‘ಮುಂದೆ ನಾನು ಕೂಡ ಕತ್ತರಿಗುಪ್ಪೆಯಿಂದ ಚುನಾವಣೆಗೆ ನಿಂತುಕೊಳ್ಳಬಹುದು. ಗೊತ್ತಿಲ್ಲ. ಸದ್ಯಕ್ಕೆ ಜಿಬಿಎ ಎಲೆಕ್ಷನ್ ಸುಲವಾಗಿ ಈ ಆ್ಯಪ್ ಆರಂಭಿಸಿದ್ದೇನೆ’ ಎಂದು ಉಪೇಂದ್ರ (Upendra) ಅವರು ಹೇಳಿದ್ದಾರೆ. ಈ ಆ್ಯಪ್ ತುಂಬಾ ಪಾರದರ್ಶಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ರಾಜಾ ಶಿವಾಜಿ’ ಪಾತ್ರದಲ್ಲಿ ಅಬ್ಬರಿಸಿದ ರಿತೇಶ್ ದೇಶ್‌ಮುಖ್; ಟೀಸರ್ ಹೇಗಿದೆ ನೋಡಿ

ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ಭಾರತದ ಶ್ರೇಷ್ಠ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಆಧಾರಿತ ಬಹುನಿರೀಕ್ಷಿತ ‘ರಾಜಾ ಶಿವಾಜಿ’ (Raja Shivaji) ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ರಿತೇಶ್ ದೇಶ್‌ಮುಖ್ (Riteish Deshmukh) ಅವರು ಈ ಐತಿಹಾಸಿಕ ಕಥಾಹಂದರದ, ಸಾಹಸ ಪ್ರಧಾನ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆಯಲ್ಲಿ ಅವರೇ ನಟಿಸುತ್ತಿದ್ದಾರೆ. 2 ನಿಮಿಷ 31 ಸೆಕೆಂಡುಗಳ ಈ ಟೀಸರ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ.

ಸಂಜಯ್ ದತ್ ಈ ಸಿನಿಮಾದಲ್ಲಿ ಕ್ರೂರ ಅಫ್ಜಲ್ ಖಾನ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಮಹೇಶ್ ಮಾಂಜ್ರೇಕರ್ ಲಖೂಜಿ ಜಾಧವ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟ ಅಭಿಷೇಕ್ ಬಚ್ಚನ್ ಅವರು ಸಂಭಾಜಿ ಶಹಾಜಿ ಭೋಸಲೆ ಅವರ ಪಾತ್ರದಲ್ಲಿ ಮಿಂಚಿದ್ದಾರೆ. ವಿದ್ಯಾ ಬಾಲನ್, ಜೆನಿಲಿಯಾ ದೇಶ್‌ಮುಖ್, ಭಾಗ್ಯಶ್ರೀ, ಫರ್ದೀನ್ ಖಾನ್, ಬೋಮನ್ ಇರಾನಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಈ ಚಿತ್ರದ ಮತ್ತೊಂದು ದೊಡ್ಡ ಹೈಲೈಟ್ ಎಂದರೆ ಸಲ್ಮಾನ್ ಖಾನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಶಿವಾಜಿ ಮಹಾರಾಜರ ಅತ್ಯಂತ ನಂಬಿಕಸ್ತ ಕಮಾಂಡರ್ ಆಗಿದ್ದ ಜೀವಾ ಮಹಾಲಾ ಪಾತ್ರದಲ್ಲಿ ಸಲ್ಮಾನ್ ಖಾನ್ ಅಬ್ಬರಿಸಲಿದ್ದಾರೆ. ರಿತೇಶ್ ದೇಶ್‌ಮುಖ್ ಅವರ ಜೊತೆಗಿನ ಸ್ನೇಹಕ್ಕಾಗಿ ಸಲ್ಮಾನ್ ಈ ಚಿತ್ರದಲ್ಲಿ ನಟಿಸಲು ತಕ್ಷಣ ಒಪ್ಪಿಕೊಂಡಿದ್ದಾರೆ.

‘ರಾಜಾ ಶಿವಾಜಿ’ ಸಿನಿಮಾದ ಟೀಸರ್:

ಸ್ವರಾಜ್ಯದ ಅಡಿಪಾಯ ಹಾಕಲು ಶಿವಾಜಿ ಮಹಾರಾಜರು ನಡೆಸಿದ ಹೋರಾಟದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ‘ಜಿಯೋ ಸ್ಟುಡಿಯೋಸ್’ ಮತ್ತು ‘ಮುಂಬೈ ಫಿಲ್ಮ್ ಕಂಪನಿ’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮರಾಠಿ, ಹಿಂದಿ ಮತ್ತು ತೆಲುಗು ಭಾಷೆಯಲ್ಲಿ ಮೇ 1ರಂದು ಸಿನಿಮಾ ರಿಲೀಸ್ ಆಗಲಿದೆ. ಟೀಸರ್ ನೋಡಿದ ಬಳಿಕ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ಶವವಾಗಿ ಪತ್ತೆಯಾದ ಡ್ಯಾನ್ಸರ್; ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್ ವೇಳೆ ಅವಘಡ

ಇನ್ನೊಂದೆಡೆ ನಟ ರಿಷಬ್ ಶೆಟ್ಟಿ ಅವರು ಕೂಡ ಶಿವಾಜಿ ಮಹಾರಾಜ್ ಜೀವನಾಧಾರಿತ ಇನ್ನೊಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಆ ಸಿನಿಮಾ ಮುಂದಿನ ವರ್ಷ ಬಿಡುಗಡೆ ಆಗಲಿದೆ. 2025ರಲ್ಲಿ ಛತ್ರಪತಿ ಸಂಭಾಜಿ ಮಹಾರಾಜರ ಜೀವನವನ್ನು ಆಧರಿಸಿದ ‘ಛಾವ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಅಭಿನಯಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುಳ್ಳು ಮತ್ತು ಆಧಾರರಹಿತ; ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಇರಾನ್

ಟೆಹ್ರಾನ್, ಏಪ್ರಿಲ್ 1: ಇರಾನ್ ಜೊತೆಗಿನ ಅಮೆರಿಕ ಮತ್ತು ಇಸ್ರೇಲ್ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ (Iran War) ಕದನ ವಿರಾಮವನ್ನು ಕೋರಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗಳನ್ನು ಇರಾನ್ ಬಲವಾಗಿ ನಿರಾಕರಿಸಿದೆ. ಇರಾನ್ ರಾಜ್ಯ ಟಿವಿ ಜೊತೆ ಮಾತನಾಡಿದ ಇರಾನ್ ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಈ ಹೇಳಿಕೆಯನ್ನು “ಸುಳ್ಳು ಮತ್ತು ಆಧಾರರಹಿತ” ಎಂದು ಕರೆದಿದ್ದಾರೆ. ಕದನವಿರಾಮದ ಯಾವುದೇ ವಿನಂತಿಯನ್ನು ಇರಾನ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರ ಹಾಸ್ಯಾಸ್ಪದ ಪ್ರದರ್ಶನದ ಮೂಲಕ ಹಾರ್ಮುಜ್ ಜಲಸಂಧಿಯನ್ನು ಶತ್ರುಗಳಿಗೆ ತೆರೆಯಲು ಸಾಧ್ಯವಿಲ್ಲ” ಎಂದು ಇರಾನ್ ಹೇಳಿದೆ.

ಇದನ್ನೂ ಓದಿ: ಇರಾನ್​ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾದಲ್ಲಿದ್ದಾರಾ? ರಾಯಭಾರಿ ಹೇಳಿದ್ದೇನು?

ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಇರಾನ್ ಕದನ ವಿರಾಮವನ್ನು ಕೋರಿ ಅಮೆರಿಕವನ್ನು ಸಂಪರ್ಕಿಸಿದೆ ಎಂದು ಹೇಳಿದ ನಂತರ ಈ ಪ್ರತಿಕ್ರಿಯೆ ಬಂದಿದೆ. ಇರಾನ್ ನಮ್ಮ ಬಳಿ ಬಂದು ಕದನವಿರಾಮ ಘೋಷಿಸುವ ಮಾತುಕತೆಗೆ ಮುಂದಾಗಿದೆ. ಆದರೆ, ನಾನು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆದ ಮೇಲೆ ನೋಡೋಣ ಎಂದಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು.

ಇದನ್ನೂ ಓದಿ: ಇರಾನ್ ಕದನವಿರಾಮಕ್ಕೆ ಮನವಿ ಮಾಡಿದೆ; ಡೊನಾಲ್ಡ್ ಟ್ರಂಪ್ ಸ್ಫೋಟಕ ಹೇಳಿಕೆ

ಇರಾನ್ ಈ ಹೇಳಿಕೆಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಹೇಳಿಕೆಯಲ್ಲಿ ಯಾವುದೇ ಸತ್ಯವಿಲ್ಲ, ಇದು ಇರಾನ್ ದೇಶದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸಮರ್ಥಿಸಿಕೊಂಡಿದೆ. ಅಗತ್ಯವಿದ್ದರೆ ದೇಶವು ಸಂಘರ್ಷವನ್ನು ಮುಂದುವರಿಸಲು ಸಿದ್ಧವಾಗಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ರಾಷ್ಟ್ರಪತಿಗಳ ಗಮನಸೆಳೆದ ಬೆಂಗಳೂರು ಕರಗ: ಅಧ್ಯಕ್ಷರನ್ನ ಕರೆಯಿಸಿ ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್​ 01: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ಇಂದು ನಡೆಯಲಿದೆ. ಸಕಲ ಸಿದ್ಧತೆ ಮಾಡಲಾಗಿದೆ. ಈ ಮಧ್ಯೆ ಕರಗ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಗ ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿಯನ್ನು ಬೆಂಗಳೂರಿನ ಹೆಚ್​ಎಎಲ್ ಏರ್​ಪೋರ್ಟ್​​ನಲ್ಲಿ ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಮುಂದಿನ ದಿನಗಳಲ್ಲಿ ದೇಗುಲಕ್ಕೆ ಭೇಟಿ ನೀಡುವ ಭರವಸೆ ಕೂಡ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮುರ್ಮು ಅವರಿಗೆ ಶ್ರೀಧರ್ಮರಾಯ ಸ್ವಾಮಿ ದೇವಾಲಯದಿಂದ ಕರಗದ ವಸ್ತ್ರವನ್ನು ನೀಡಲಾಗಿದೆ. ಈ ಬಗ್ಗೆ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಮಾತನಾಡಿದ್ದು, ರಾಷ್ಟ್ರಪತಿಗಳನ್ನು ಭೇಟಿ ಮಾಡಿದೆ. ನಾನೇ ಅಧ್ಯಕ್ಷ ಎಂದು ಹೇಳಿದೆ. ದೇವಸ್ಥಾನದ ಮಹಿಮೆ ಹೇಳಿದೆ. ಒಂದು ದಿನ ದೇವಸ್ಥಾನಕ್ಕೆ ಬರುತ್ತೇನೆ, ಜನರಿಗೆ ನನ್ನ ಶುಭಹಾರೈಕೆ ತಿಳಿಸಿ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕೇಂದ್ರದ ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪ: ಶಿವಕುಮಾರ ಶ್ರೀಗಳನ್ನ ಸ್ಮರಿಸಿದ ಜೋಶಿ

ತುಮಕೂರು, (ಮೇ 01): “ಅನ್ನ-ಅಕ್ಷರ-ಆಶ್ರಯ’ ನೀಡಿ ತ್ರಿವಿಧ ದಾಸೋಹಿಯಾದ ಸಿದ್ಧಗಂಗಾ ಶ್ರೀಗಳು (siddaganga shree) ಸರ್ಕಾರದ ಅನೇಕ ಯೋಜನೆಗಳಿಗೆ ಮಹಾನ್ ಸ್ಪೂರ್ತಿಯಾಗಿದ್ದಾರೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (pralhad joshi) ಸ್ಮರಿಸಿದರು. ತುಮಕೂರಿನಲ್ಲಿ (Tumakuru) ಇಂದು (ಮೇ 01) ಶ್ರೀ ಶಿವಕುಮಾರ ಮಹಾಸ್ವಾಮಿಗಳ (Sri Shivakumar Swamiji) 119ನೇ ಜಯಂತ್ಯುತ್ಸವದಲ್ಲಿ ನುಡಿ ನಮನ ಸಲ್ಲಿಸುತ್ತಾ, ಕೇಂದ್ರ ಸರ್ಕಾರದಲ್ಲಿ ನಾವಿಂದು ಅನುಷ್ಠಾನಕ್ಕೆ ತರುತ್ತಿರುವ ಅನೇಕ ಜನಪರ ಯೋಜನೆಗಳಿಗೆ ಈ ಮಠದ ದಾಸೋಹ ತತ್ವವೇ ಸ್ಫೂರ್ತಿಯಾಗಿದೆ ಎಂದು ಬಣ್ಣಿಸಿದರು.

ನಮ್ಮ ಸರ್ಕಾರದ ‘ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪವಾಗಿದೆ. ಹಸಿದವರಿಗೆ ಅನ್ನ ನೀಡುವ ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ” ಇರಲಿ, ಬಡ ಮಕ್ಕಳಿಗೆ ಶಿಕ್ಷಣದ ಹಕ್ಕು ನೀಡುವ ನೀತಿಗಳಿರಲಿ, ಸರ್ವರಿಗೂ ಸಮಾನ ಅವಕಾಶ ನೀಡುವ ನಮ್ಮ ಧೈಯವಿರಲಿ ಎಲ್ಲದೂ ಸಿದ್ಧಗಂಗಾ ಶ್ರೀಗಳು ಹಾಕಿಕೊಟ್ಟ ದಾಸೋಹದ ಬುನಾದಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಾಮಾಜಿಕ ನ್ಯಾಯದ ಪ್ರತಿರೂಪ

ಹಸಿದವರಿಗೆ ಅನ್ನ, ನಿರಾಶ್ರಿತರಿಗೆ ಆಶ್ರಯ, ಅಜ್ಞಾನಿಗಳಿಗೆ ಶಿಕ್ಷಣ ಒದಗಿಸುತ್ತಾ ಸಹಸ್ರಾರು ಕುಟುಂಬಗಳನ್ನು ಬೆಳಗಿದ ಸಿದ್ಧಗಂಗಾ ಶಿವಕುಮಾರ ಶ್ರೀಗಳು ಸಾಮಾಜಿಕ ನ್ಯಾಯದ ಪ್ರತಿರೂಪವೇ ಆಗಿದ್ದರು . ತುಮಕೂರು ಸಿದ್ದಗಂಗಾ ಮಠ ಕೇವಲ ಮಠವಲ್ಲ, ಇದು ಆಧುನಿಕ ಭಾರತದ ಸಂಸ್ಕಾರದ ಕೇಂದ್ರ. ಇಲ್ಲಿ ಪ್ರತಿ ದಿನವೂ ನಡೆಯುವ ‘ಅನ್ನ ದಾಸೋಹ’, ‘ಅಕ್ಷರ ದಾಸೋಹ” ವಿಶ್ವದ ಯಾವುದೇ ದೊಡ್ಡ ವಿಶ್ವವಿದ್ಯಾಲಯಕ್ಕೆ ಮತ್ತು ಸರ್ಕಾರಕ್ಕೆ ಮಾದರಿ ಎಂದು ಜೋಶಿ ಹೇಳಿದರು

ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು ಮಹಾನ್ ಸಂತರಷ್ಟೇ ಅಲ್ಲ ಅವರೊಂದು ದಿವ್ಯಶಕ್ತಿ. ಅವರು ಪ್ರಾರಂಭಿಸಿದ “ಅನ್ನದಾಸೋಹ” ಕೇವಲ ಊಟವಲ್ಲ. ಸಮಾನತೆಯ ಸಂದೇಶ. ಜಾತಿ-ಧರ್ಮ-ಬಡತನವೆಂಬ ಬೇಧ ತೊಡೆದು ಹಾಕಿ ಜಗತ್ತಿಗೆ ಮಾನವೀಯ ಮಂತ್ರವನ್ನು ಸಾರಿದ ದೈವಪುರುಷರು ಎಂದು ಸ್ಮರಿಸಿದರು.

1930ರಲ್ಲಿ ಮಠದ ಜವಾಬ್ದಾರಿ ವಹಿಸಿಕೊಂಡು ದೀನ ದಲಿತರು, ನಿರ್ಗತಿಕರಿಗಾಗಿ ಶ್ರೀಗಳು ಪಟ್ಟ ಶ್ರಮ ಕಣ್ಣ ಮುಂದಿದೆ. ಬಸವಣ್ಣನವರ “ಕಾಯಕವೇ ಕೈಲಾಸ” ತತ್ವವನ್ನು ಅಕ್ಷರಶಃ ಪಾಲಿಸಿದವರು ಶ್ರೀಗಳು. ಜೀವನದ 111 ವರ್ಷಗಳಲ್ಲಿ ಅವರು ಒಂದು ದಿನವೂ ವಿಶ್ರಮಿಸಲಿಲ್ಲ. ಅವರ ಹಣೆಯಲ್ಲಿ ವಿಭೂತಿ ಮಾತ್ರವಲ್ಲ ಸದಾ ಸಮಾಜದ ಹಿತಚಿಂತನೆ ಇರುತ್ತಿತ್ತು. ಅವರದ್ದು ಅನ್ನ-ಅರಿವು ಮತ್ತು ಆಧ್ಯಾತ್ಮದ “ತ್ರಿವಿಧ ದಾಸೋಹ”ವಾಗಿತ್ತು ಎಂದು ಹೇಳಿದರು.

ಸಿದ್ಧಗಂಗಾ ಮಠದಲ್ಲಿ ಪ್ರತಿದಿನ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಯಾತ್ರಿಕರಿಗೆ ಉಚಿತವಾಗಿ ಆಹಾರ, ವಸತಿ ಕಲ್ಪಿಸಲಾಗುತ್ತಿದೆ. ನರ್ಸರಿಯಿಂದ ತಾಂತ್ರಿಕ (SIT), ಪಾಲಿಟೆಕ್ನಿಕ್, ಬಿ.ಎಡ್, ಮತ್ತು ಸಂಸ್ಕೃತ ಪಾಠಶಾಲೆಗಳವರೆಗೆ 124ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿದೆ ಎಂದು ಶ್ಲಾಘಿಸಿದರು.

ಅನ್ನದಾಸೋಹದ ಒಲೆ ನಿರಂತರ

ಶ್ರೀಮಠ ಗ್ರಾಮೀಣ, ಬಡ ವಿದ್ಯಾರ್ಥಿಗಳಿಗೆ ಉಚಿತ ಆಶ್ರಯ ನೀಡಿ, ಸ್ವಾವಲಂಬಿಗಳಾಗಲು ನೆರವಾಗಿದೆ. ಸಹಾಯ ಮಾಡಿದೆ. ಅಂಧ ಮಕ್ಕಳಿಗಾಗಿ ವಿಶೇಷ ಶಾಲೆಗಳನ್ನು ನಡೆಸಿ ಪುನರ್ವಸತಿ ಕಲ್ಪಿಸಿದೆ. ಶ್ರೀಮಠದ ವಿಶೇಷತೆ ಅಂದರೆ, 90 ವರ್ಷ ಮೊದಲು ಹಚ್ಚಿದ ಅಡುಗೆ ಮನೆಯ ಒಲೆ ಇನ್ನೂ ಉರಿಯುತ್ತಲೇ ಇದ್ದು, ಇದು ನಿರಂತರವಾಗಿರುತ್ತದೆ ಎಂದು ಸಚಿವ ಜೋಶಿ ಆಶಿಸಿದರು.

ಶ್ರೀ ಸಿದ್ದಗಂಗಾ ಮಠದ ಕೊಡುಗೆಯಿಂದಲೇ ಕರುನಾಡು ಇಂದು ದಾಸೋಹದ ನಾಡಾಗಿದೆ ಎಂದರೆ ತಪ್ಪಾಗಲಾರದು. ಲಕ್ಷಾಂತರ ಜನರು ಉತ್ತಮ ಹುದ್ದೆ, ಉನ್ನತ ಸ್ಥಾನಕ್ಕೇರಿದ್ದಾರೆ, ಅತ್ಯುತ್ತಮ ಸಾಧನೆ ತೋರಿದ್ದಾರೆ ಎಂದರೆ ಅದಕ್ಕೆ ಕಾರಣ ಶ್ರೀಗಳ ತ್ರಿವಿಧ ದಾಸೋಹವೆಂದು ಬಣ್ಣಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆಗಿದ್ದಾಗ ಸಿದ್ದಗಂಗಾ ಮಠಕ್ಕೆ ಬಂದು, ಸ್ವಾಮೀಜಿಗಳ ಪದಸ್ಪರ್ಶಿಸಿ ಆಶೀರ್ವಾದ ಪಡೆದ ಕ್ಷಣ ಸಂಸ್ಕೃತಿಯ ನಮನದ ಸಂಕೇತ. ‘ಶಿವಕುಮಾರ ಸ್ವಾಮಿಗಳು ನಡೆಯುವ ದೇವರು’ ಎಂದಿದ್ದರು ಮತ್ತು ಉತ್ತರದಲ್ಲಿ ಗಂಗಾ ನದಿ ಹರಿಯುತ್ತಿದ್ದರೆ, ದಕ್ಷಿಣದಲ್ಲಿ ಈ ಸಿದ್ದಗಂಗೆ ಹರಿಯುತ್ತಿದೆ ಎಂದ ಮಾತು ನಿಜಕ್ಕೂ ಸತ್ಯದ ದಾರಿದೀಪವಾಗಿದೆ ಎಂದರು.

ದಾಸೋಹ ದಿನ ಘೋಷಣೆ ಪಾಲಿಸಲಿ ರಾಜ್ಯ ಸರ್ಕಾರ: ರಾಜ್ಯದಲ್ಲಿ ಈ ಹಿಂದೆ ಬಸವರಾಜ ಬೊಮ್ಮಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರ ‘ಜನವರಿ 21’ ಅನ್ನು “ದಾಸೋಹ ದಿನ”ವಾಗಿ ಘೋಷಿಸಿದ್ದು, ಇಂದಿನ ರಾಜ್ಯ ಸರ್ಕಾರ ಅದನ್ನು ಪಾಲಿಸುವ ಮೂಲಕ ಶ್ರೀಗಳಿಗೆ ಗೌರವ ಸೂಚಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದೇ ವೇಳೆ ಆಗ್ರಹಿಸಿದರು.

ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜಿ, ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ಧೇಶ್ವರ ಸ್ವಾಮಿಜಿ, ಕೇಂದ್ರ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ‌, ರಾಜ್ಯ ಸರ್ಕಾರದ ಸಚಿವರು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ, ಕೇವಲಮ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಆಘಾತ ಎದುರಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ ಆರಂಭಿಕರಲ್ಲಿ ಬದಲಾವಣೆ ಮಾಡಿದೆ. ಅದರಂತೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಶ್ರೀಲಂಕಾದ ಪಾತುಮ್ ನಿಸ್ಸಾಂಕ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿ ಹೊತ್ತಿದ್ದರು. ಇತ್ತ ಲಕ್ನೋ ಪರ ಅನುಭವಿ ಮೊಹಮ್ಮದ್ ಶಮಿ ಬೌಲ್ ಮಾಡಿದ ಮೊದಲ ಓವರ್​ನ ಮೊದಲ ಎಸೆತವನ್ನು ಎದುರಿಸಲು ಸ್ಟ್ರೈಕ್ ತೆಗೆದುಕೊಂಡ ಕೆಎಲ್ ರಾಹುಲ್ ಮೊದಲ ಎಸೆತವನ್ನು ಸಿಕ್ಸರ್ ಸಿಡಿಸುವ ಯತ್ನದಲ್ಲಿ ಡೀಪ್ ಬ್ಯಾಕ್ವರ್ಡ್​ ಪಾಯಿಂಟ್ ದಿಕ್ಕಿನಲ್ಲಿ ಮೊಹ್ಸಿನ್ ಖಾನ್​ಗೆ ಕ್ಯಾಚ್ ನೀಡಿದರು. ಹೀಗಾಗಿ ರಾಹುಲ್​ಗೆ ಮೊದಲ ಪಂದ್ಯದಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

Source link

ಕೊಲೆಯಾದ SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು: ಪೋಷಕರಿಗೆ ಮತ್ತೆ ಆಘಾತ

ಶಿವಮೊಗ್ಗ, ಏಪ್ರಿಲ್​ 01: ಆ ಬಾಲಕ ಸಾವನ್ನಪ್ಪಿದರೂ ಆತನ ಸಮಾಧಿಯನ್ನ ಮಾತ್ರ ಕಿಡಿಗೇಡಿಗಳು ಬಿಡುತ್ತಿಲ್ಲ. ಕಳೆದ ಫೆಬ್ರವರಿಯಲ್ಲಿ ಜಗಳ ಬಿಡಸಲು ಹೋದ ಅಮಾಯಕ ಬಾಲಕ ಸಂಕೇತ್​ನನ್ನ (Sanketh Murder Case) ಕಿಡಿಗೇಡಿ ಯುವಕರು ಹತ್ಯೆ ಮಾಡಿದ್ದರು. ಇದೀಗ ಆತನ ಸಮಾಧಿ ಸಿದ್ಧಪಡಿಸಿ ಎರಡು ದಿನ ಕಳೆದಿಲ್ಲ, ಅಷ್ಟರಲ್ಲೇ  ಸಮಾಧಿಯನ್ನೇ ಕೆಡವಲಾಗಿದೆ. ಯಾರೋ ದುಷ್ಕರ್ಮಿಗಳು ಸಮಾಧಿಯನ್ನು ಕೆಡವಿದ್ದಾರೆ. ಇದೀಗ ಮತ್ತೊಮ್ಮೆ ಸಮಾಧಿ ನಿರ್ಮಾಣ ಮಾಡಲಾಗಿದೆ.

ನಡೆದಿದ್ದೇನು? 

ಶಿವಮೊಗ್ಗ ಸೂಳೆಬೈಲು ಬಡಾವಣೆ ನಿವಾಸಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಸಂಕೇತ್ ಕೊಲೆ ಕೇಸಿನಲ್ಲಿ ಈಗಾಗಲೇ ಅಪ್ರಾಪ್ತರು ಬಂಧಿಯಾಗಿ ಜೈಲು ಸೇರಿದ್ದು, ಸಂಕೇತ್ ಪೋಷಕರು ಇನ್ನು ಆ ದುಖಃದಿಂದ ಹೊರಬಂದಿಲ್ಲ. ಅಷ್ಟರಲ್ಲೇ ಮತ್ತೊಂದು ಅವಘಡ ನಡೆದಿದೆ. ಅದೇನೆಂದರೆ ಮೃತ ಸಂಕೇತ್​​ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ

ಶಿವಮೊಗ್ಗದ ಊರುಗಡೂರಿನ ಸೂಳೆಬೈಲಿನ ಸರ್ಕಾರಿ ಶಾಲೆ ಮುಂಭಾಗವೇ, ಗಲಾಟೆ ಬಿಡಿಸಲು ಹೋಗಿ ಕೊಲೆಯಾಗಿದ್ದ ಶಾಲಾ ಬಾಲಕ ಸಂಕೇತ್‌ನ ಸಮಾಧಿಗೆ ಹಾನಿ ಮಾಡಲಾಗಿದೆ. ಫೆ. 23 ರಂದು ವಿದ್ಯಾರ್ಥಿ ಸಂಕೇತ್‌ ಹತ್ಯೆಯಾಗಿತ್ತು. ಬಳಿಕ ಸಮೀಪದ ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಸಂಕೇತ್‌ನ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಕಳೆದೆರೆಡು ದಿನಗಳ ಹಿಂದೆಯಷ್ಟೇ, ಆತನ ಸಮಾಧಿಗೆ ಕಟ್ಟೆ ನಿರ್ಮಿಸಿ ಫೋಟೋ ಸಹ ಅಳವಡಿಸಲಾಗಿತ್ತು. ಮಂಗಳವಾರ ಸಂಜೆ ಸಮಾಧಿಯ ಒಂದು ಭಾಗ ಒಡೆದಿರುವುದು ಗೊತ್ತಾಗಿದೆ. ಇದರಿಂದ ಬೇಸರ ಮತ್ತು ಆಕ್ರೋಶಗೊಂಡ ಸಂಕೇತ್‌ನ ಪೋಷಕರು ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಿಡಿಗೇಡಿಗಳ ವರ್ತನೆಗೆ ಶಾಸಕ ಚನ್ನಬಸಪ್ಪ ಆಕ್ರೋಶ

ಇನ್ನು ಮಾ. 26 ರಂದಷ್ಟೇ ನಿರ್ಮಿಸಲಾಗಿರುವ ಮೃತ ಸಂಕೇತ್ ಸಮಾಧಿಯನ್ನು ಕಲ್ಲಿನಿಂದ ಜಜ್ಜಿದ್ದಾರೆ. ಹಿಂದೆ ಹಾಕಿದ್ದ ಗ್ರಾನೈಟ್ ಒಡೆದು ಹಾಕಿದ್ದಾರೆ. ಪ್ರತಿದಿನ ಸಂಜೆ ಸಮಾಧಿ ಸ್ಥಳಕ್ಕೆ ಹೋಗಿ ಪೋಷಕರು ಪೂಜೆ ಮಾಡಿ ಬರುತ್ತಿದ್ದರು. ಮೊದಲೇ ಸಂಕೇತ್‌ನ ಸಾವಿನ ಬಳಿಕ ಅವರ ಮನೆಯಲ್ಲಿ ನೆಮ್ಮದಿ ಇಲ್ಲವಾಗಿದೆ. ಈಗ ಇಂತಹ ಘಟನೆ ನಡೆದಿರುವುದು ಸಂಕೇತ್ ಪೋಷಕರಿಗೆ ಮತ್ತಷ್ಟು ಆಘಾತ ತಂದಿದೆ. ಈ ವಿಚಾರದ ಬಗ್ಗೆ ಶಾಸಕ ಚನ್ನಬಸಪ್ಪ ಆಕ್ರೋಶ ಹೊರಹಾಕಿದ್ದು, ಕಿಡಿಗೇಡಿಗಳ ವರ್ತನೆ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಕೊಲೆ ಪ್ರಕರಣ: 15 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

ತಮ್ಮಿಂದ ಬಹುಬೇಗನೇ ಅಗಲಿರುವ ಪ್ರೀತಿಯ ಪುತ್ರನನ್ನು ನೆನೆದು, ಕಟ್ಟೆ ಕಟ್ಟಿಸಿದ್ದ ಪೋಷಕರು, ಮುಂಭಾಗದಲ್ಲಿ ದೀಪ ಇಡಲು ವ್ಯವಸ್ಥೆ ಮಾಡಿದ್ದರು. ಆದರೆ ಕಿರಾತಕರು, ಸಮಾಧಿಯಲ್ಲೂ ಸಂಕೇತ್​ಗೆ ನೆಮ್ಮದಿಯಾಗಿರಲು ಬಿಡದೇ ಸತಾಯಿಸಿಸುತ್ತಿರುವುದು ಬೇಸರದ ಸಂಗತಿಯೇ ಸರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ನಿರ್ದೇಶಕ ರೋಹಿತ್ ಶೆಟ್ಟಿ ಖಾಸಗಿ ಕಾರಿನ ಮೇಲೆ ಪೊಲೀಸ್ ಸ್ಟಿಕ್ಕರ್: ವಿವಾದಕ್ಕೆ ಸ್ಪಷ್ಟನೆ

ಆ್ಯಕ್ಷನ್ ಸಿನಿಮಾಗಳ ಮೂಲಕ ಫೇಮಸ್ ಆದ ಬಾಲಿವುಡ್‌ನ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರು ಇದೀಗ ಹೊಸ ವಿವಾದವೊಂದಕ್ಕೆ ಸಿಲುಕಿದ್ದಾರೆ. ತಮ್ಮ ಖಾಸಗಿ ಕಾರುಗಳಲ್ಲಿ ಪೊಲೀಸ್ ಸ್ಟಿಕ್ಕರ್ ಮತ್ತು ಲೈಟ್‌ಗಳನ್ನು ಬಳಸಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರೋಹಿತ್ ಶೆಟ್ಟಿ ಅವರ ತಂಡವು ಸ್ಪಷ್ಟನೆಯನ್ನು ನೀಡಿದೆ. ಅಷ್ಟಕ್ಕೂ ರೋಹಿತ್ ಶೆಟ್ಟಿ ಅವರು ತಮ್ಮ ಸ್ವಂತ ಕಾರಿನ ಮೇಲೆ ಪೊಲೀಸ್ (Police) ಸ್ಟಿಕ್ಕರ್ ಮತ್ತು ಲೈಟ್ ಯಾಕೆ ಹಾಕಿದ್ದರು? ಅದಕ್ಕೆ ಉತ್ತರ ಸಿಕ್ಕಿದೆ.

ವರದಿಗಳ ಪ್ರಕಾರ, ರೋಹಿತ್ ಶೆಟ್ಟಿ ಅವರು ತಮ್ಮ ಎರಡು ವೈಯಕ್ತಿಕ ಐಷಾರಾಮಿ ಕಾರುಗಳಿಗೆ ಯಾವುದೇ ಮುನ್ಸೂಚನೆ ಅಥವಾ ಅನುಮತಿಯಿಲ್ಲದೆ ಪೊಲೀಸ್ ವಾಹನಗಳಲ್ಲಿ ಬಳಸುವಂತಹ ಸ್ಟಿಕ್ಕರ್ ಮತ್ತು ಲೈಟ್‌ಗಳನ್ನು ಅಳವಡಿಸಿದ್ದರು. ನಿಯಮದ ಪ್ರಕಾರ, ಪೊಲೀಸ್ ಇಲಾಖೆಯ ವಾಹನಗಳನ್ನು ಹೊರತುಪಡಿಸಿ ಬೇರೆ ಯಾವುದೇ ಖಾಸಗಿ ವಾಹನಗಳಲ್ಲಿ ಇವುಗಳನ್ನು ಬಳಸುವುದು ಕಾನೂನುಬಾಹಿರ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ರೋಹಿತ್ ಶೆಟ್ಟಿ ಅವರ ವಕ್ತಾರರು, ‘ಇತ್ತೀಚೆಗೆ ನಿರ್ದೇಶಕರ ನಿವಾಸದ ಬಳಿ ಗುಂಡಿನ ದಾಳಿ ನಡೆದ ಘಟನೆಯ ನಂತರ, ಪೊಲೀಸರು ಅವರಿಗೆ ಬಿಗಿ ಭದ್ರತೆಯನ್ನು ಒದಗಿಸಿದ್ದರು. ಆ ಸಮಯದಲ್ಲಿ ಭದ್ರತಾ ದೃಷ್ಟಿಯಿಂದ ಮತ್ತು ವಾಹನಗಳ ಗುರುತಿಗಾಗಿ ಆರಂಭಿಕ ಹಂತದಲ್ಲಿ ಸ್ಟಿಕ್ಕರ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಈಗ ಅವುಗಳನ್ನು ತೆಗೆಯಲಾಗಿದೆ’ ಎಂದು ತಿಳಿಸಿದ್ದಾರೆ.

‘ಈಗಲೂ ರೋಹಿತ್ ಶೆಟ್ಟಿ ಅವರಿಗೆ ಇಬ್ಬರು ಪೊಲೀಸ್ ಸಿಬ್ಬಂದಿಯ ಭದ್ರತೆ ಮುಂದುವರಿದಿದೆ. ಇಡೀ ಪ್ರಕರಣವು ಇನ್ನೂ ತನಿಖೆಯ ಹಂತದಲ್ಲಿದೆ. ಸಂಕಷ್ಟದ ಸಮಯದಲ್ಲಿ ಸತತವಾಗಿ ಸಹಕಾರ ನೀಡುತ್ತಿರುವ ಮುಂಬೈ ಪೊಲೀಸರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ’ ಎಂದು ಅವರ ತಂಡದವರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ರೋಹಿತ್ ಶೆಟ್ಟಿ ಮನೆಮೇಲಿನ ದಾಳಿಗೆ ನಾಲ್ಕು ತಿಂಗಳ ಹಿಂದೆಯೇ ನಡೆದಿತ್ತು ಪ್ಲ್ಯಾನ್

ಜನವರಿ 31ರ ರಾತ್ರಿ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ 4 ಸುತ್ತು ಗುಂಡು ಹಾರಿಸಲಾಗಿತ್ತು. ಕಿಡಿಗೇಡಿಗಳು ನಡೆಸಿದ ಈ ಕೃತ್ಯದಿಂದ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಯಿತು. ದಾಳಿಗೆ ಕಾರಣ ಏನು ಎಂದು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಗುಂಡಿನ ದಾಳಿ ಬಳಿಕ ರೋಹಿತ್ ಶೆಟ್ಟಿ ಅವರಿಗೆ ಪೊಲೀಸರು ಭದ್ರತೆ ಒದಗಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ

ನವದೆಹಲಿ, ಏಪ್ರಿಲ್ 1: ಚಂಡೀಗಢದ ಪಂಜಾಬ್ ಬಿಜೆಪಿ ಕಚೇರಿಯ (BJP Office) ಹೊರಗೆ ಇಂದು ಸ್ಫೋಟ ಸಂಭವಿಸಿದೆ. ಸೆಕ್ಟರ್ 37ರಲ್ಲಿರುವ ಕಚೇರಿಯ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಗ್ರೆನೇಡ್ ಅನ್ನು ಎಸೆಯುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಚಂಡೀಗಢದ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕೈಯಲ್ಲಿ ಹೆಲ್ಮೆಟ್ ಹಿಡಿದಿರುವ ವ್ಯಕ್ತಿಯೊಬ್ಬ ಗ್ರೆನೇಡ್ ತೆಗೆದು ಎಸೆಯುತ್ತಿರುವುದನ್ನು ಇನ್ನೊಬ್ಬ ವ್ಯಕ್ತಿ ರೆಕಾರ್ಡ್ ಮಾಡಿದ್ದಾನೆ. ಬಳಿಕ ಭಾರೀ ಸ್ಫೋಟದ ಸದ್ದು ಕೇಳುತ್ತದೆ. ದಾಳಿ ನಡೆಸಿದ ಇಬ್ಬರು ಶಂಕಿತರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಅವರ ಮುಖಗಳು ಸೆರೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ಮಹಿಳಾ ಕ್ರಿಕೆಟರ್ಸ್​ಗೆ ಪಿಂಚಣಿ ಘೋಷಿಸಿದ ಕೆಎಸ್​ಸಿಎ

ಅಸಾಧ್ಯವಾದುದ್ದನ್ನು ಸಾಧ್ಯವಾಗಿಸಿ, ಎಲ್ಲಾ ಆಡೆತಡೆಗಳನ್ನು ನಿವಾರಿಸಿ 2026 ರ ಐಪಿಎಲ್ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸುವಲ್ಲಿ ಯಶಸ್ವಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ಇದೀಗ ರಾಜ್ಯದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪಿಂಚಣಿ (Karnataka’s Former Women Cricketers Get KSCA Pension) ಸೌಲಭ್ಯವನ್ನು ಘೋಷಿಸಿದೆ. ಸೀನಿಯರ್ ಮಹಿಳಾ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಮಾಸಿಕ ಪಿಂಚಣಿ ನೀಡಲು ಕೆಎಸ್‌ಸಿಎ ನಿರ್ಧರಿಸಿದೆ.

ಪಿಂಚಣಿಗೆ ಯಾರು ಅರ್ಹರು?

ಈ ಪಿಂಚಣಿ ಸೌಲಭ್ಯವನ್ನು 55 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳಾ ಆಟಗಾರ್ತಿಯರಿಗೆ ನೀಡಲಾಗುವುದು. ಆದರೆ ಕರ್ನಾಟಕದ ಮಹಿಳಾ ಆಟಗಾರ್ತಿಯರು ಈಗಾಗಲೇ ಬಿಸಿಸಿಐನಿಂದ ಪಿಂಚಣಿ ಪಡೆಯುತಿದ್ದರೆ, ಅವರು ಈ ಪ್ರಯೋಜನಕ್ಕೆ ಅರ್ಹರಾಗಿರುವುದಿಲ್ಲ. ಆದಾಗ್ಯೂ ಅರ್ಹ ಆಟಗಾರ್ತಿಯರು ರಾಜ್ಯಕ್ಕಾಗಿ ತಮ್ಮ ಪ್ರಾತಿನಿಧ್ಯ ಮತ್ತು ಆಡಿದ ಪಂದ್ಯಗಳ ಸಂಖ್ಯೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ಒದಗಿಸಬೇಕಾಗುತ್ತದೆ ಎಂದು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿದೆ.

ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?

ರಾಜ್ಯದಲ್ಲಿ ಮಾಜಿ ಮಹಿಳಾ ಆಟಗಾರ್ತಿಯರು ನೀಡಿದ ಕೊಡುಗೆಗಳನ್ನು ಗುರುತಿಸುವುದು ಮತ್ತು ಗೌರವಿಸುವುದು ಈ ನಿರ್ಧಾರದ ಹಿಂದಿರುವ ಉದ್ದೇಶ ಎಂದು ಕೆಎಸ್‌ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಹೇಳಿದ್ದಾರೆ. ಕರ್ನಾಟಕ ಕ್ರಿಕೆಟ್ ಸಂಘದ ಈ ನಿರ್ಧಾರವು ರಾಜ್ಯದ ಯುವ ಮಹಿಳಾ ಆಟಗಾರ್ತಿಯರಿಗೆ ಸ್ಫೂರ್ತಿ ನೀಡುತ್ತದೆ. ರಾಜೇಶ್ವರಿ ಗಾಯಕ್ವಾಡ್ ಮತ್ತು ಶ್ರೇಯಾಂಕ ಪಾಟೀಲ್ ಸೇರಿದಂತೆ ಕರ್ನಾಟಕವು ಟೀಂ ಇಂಡಿಯಾಕ್ಕೆ ಹಲವಾರು ಆಟಗಾರ್ತಿಯರನ್ನು ನೀಡಿದ್ದು, ರಾಜ್ಯದಿಂದ ದೇಶವನ್ನು ಪ್ರತಿನಿಧಿಸುವವರ ಸಂಖ್ಯೆ ಹೆಚ್ಚಾಗಲಿ ಎಂಬುದು ಕೆಎಸ್​ಸಿಎ ಉದ್ದೇಶವಾಗಿದೆ.

ಬಿಸಿಸಿಐನಿಂದಲೂ ಸಿಗಲಿದೆ ಪಿಂಚಣಿ

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯಾದ ಬಿಸಿಸಿಐ, ಈಗಾಗಲೆ ಮಹಿಳಾ ಆಟಗಾರ್ತಿಯರಿಗೂ ಪಿಂಚಣಿ ನೀಡುತ್ತಿದೆ. ಅದರಂತೆ ತಂಡದ ಪರ ಅಂತರರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಆಟಗಾರ್ತಿಯರಿಗೆ ಮಾಸಿಕವಾಗಿ 52,500 ರೂ. ಪಿಂಚಣಿ ಸಿಗುತ್ತದೆ. ಹಾಗೆಯೇ 2003 ಕ್ಕಿಂತ ಮೊದಲು ನಿವೃತ್ತರಾದ ಪ್ರಥಮ ದರ್ಜೆ ಕ್ರಿಕೆಟರ್ಸ್​ಗೆ ತಿಂಗಳಿಗೆ 45,000 ರೂ. ಸಿಗಲಿದೆ. 25 ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ ಮತ್ತು 1993 ಕ್ಕಿಂತ ಮೊದಲು ನಿವೃತ್ತರಾದ ಹಿರಿಯ ಟೆಸ್ಟ್ ಆಟಗಾರ್ತಿಯರು ತಿಂಗಳಿಗೆ 70,000 ರೂ. ಪಿಂಚಣಿ ಪಡೆಯುತ್ತಾರೆ.

Source link

Exit mobile version