ಪ್ರತ್ಯಕ ಪಾಲಿಕೆ ಹೋರಾಟಕ್ಕೆ ತೆರೆ: ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
Image Credit source: tv9 kannada

ಹುಬ್ಬಳ್ಳಿ, ಮೇ 29: ರಾಜ್ಯದಲ್ಲೇ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಡೆದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC)  ವಿಭಜನೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಇತ್ತೀಚೆಗೆ ಪಾಲಿಕೆ ವಿಭಜನೆಗೆ ಷರತ್ತುಬದ್ಧ ಅನುಮೋದನೆ ಕೂಡ ದೊರೆತಿತ್ತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್​ ಪ್ರತ್ಯಕ ಪಾಲಿಕೆ ಕಡಿತಕ್ಕೆ ಸಹಿ ಬೆನ್ನಲ್ಲೇ ಬೃಹತ್ ಮಹಾನಗರ ಪಾಲಿಕೆಯ ಠರಾವು ಅಸಿಂಧುಗೊಂಡಿದೆ. ಹೀಗಾಗಿ ಈ ಹಿಂದೆ ಕೈಗೊಳ್ಳಲಾಗಿದ್ದ ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆಯ ಠರಾವು ರದ್ದಾಗಿದೆ.

ಮುಖ್ಯಾಂಶಗಳು

  • ಬೃಹತ್ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವು ರದ್ದು
  • ಪ್ರತ್ಯಕ ಪಾಲಿಕೆ ಹೋರಾಟಕ್ಕೆ ತೆರೆ
  • ಪ್ರತ್ಯಕ ಧಾರವಾಡ ಪಾಲಿಕೆಗೆ ಎಲ್ಲರಿಗೂ ಸಮ್ಮತಿ ಎಂದ ಮೇಯರ್

ಪಾಲಿಕೆ ಮೇಯರ್ ಜೋತಿ ಪಾಟೀಲ್ ಹೇಳಿದ್ದಿಷ್ಟು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪಾಲಿಕೆ ಮೇಯರ್ ಜೋತಿ ಪಾಟೀಲ್, ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮಾಡಲು ಕೈಗೊಳ್ಳಲಾಗಿದ್ದ ಠರಾವು ಅಧಿಕೃತವಾಗಿ ರದ್ದಾಗಲಿದ್ದು, ಅವಳಿ ನಗರಗಳ ಪಾಲಿಕೆ ವಿಭಜನೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ತಿಳಿಸಿದರು.

ಬೃಹತ್ ಪಾಲಿಕೆ ನಿರ್ಧಾರಕ್ಕೆ ಕಾರಣವೇನು?

ನಾವು ಈ ಹಿಂದೆ ಪಾಲಿಕೆ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೋರಿದ್ದೆವು. ಆದರೆ ಸರ್ಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಬಿಡುಗಡೆಯಾಗಿರಲಿಲ್ಲ. 16ನೇ ಹಣಕಾಸು ಆಯೋಗದ ನಿಯಮಾವಳಿಗಳ ಪ್ರಕಾರ, 10 ಲಕ್ಷಕ್ಕಿಂತ ಅಧಿಕ ಜನಸಂಖ್ಯೆ ಹೊಂದಿರುವ ನಗರಗಳಿಗೆ ಹೆಚ್ಚಿನ ಅನುದಾನ ದೊರೆಯುತ್ತದೆ. ಈ ತಾಂತ್ರಿಕ ಕಾರಣದಿಂದಾಗಿ ಹುಬ್ಬಳ್ಳಿ-ಧಾರವಾಡವನ್ನು ಒಳಗೊಂಡ ಬೃಹತ್ ಮಹಾನಗರ ಪಾಲಿಕೆ ಮಾಡಲು ಈ ಹಿಂದೆ ನಿರ್ಧಾರ ಕೈಗೊಳ್ಳಲಾಗಿತ್ತು ಎಂದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ

ಇನ್ನು ಈ ವೇಳೆ ಧಾರವಾಡವನ್ನು ಪ್ರತ್ಯೇಕ ಪಾಲಿಕೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ವ್ಯಾಪಕ ಹೋರಾಟಗಳು ನಡೆದಿದ್ದವು. ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಪ್ರತ್ಯೇಕ ಪಾಲಿಕೆ ರಚನೆಯ ಕಡತಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ರಾಜ್ಯಪಾಲರ ಈ ನಿರ್ಧಾರದಿಂದಾಗಿ, ಈ ಹಿಂದೆ ಕೈಗೊಳ್ಳಲಾಗಿದ್ದ ಬೃಹತ್ ಮಹಾನಗರ ಪಾಲಿಕೆ ರಚನೆಯ ಠರಾವು ಇದೀಗ ತಾನಾಗಿಯೇ ಅಸಿಂಧುವಾಗುತ್ತದೆ. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ನಿರ್ಧಾರಕ್ಕೆ ಎಲ್ಲರೂ ಸಮ್ಮತಿ ನೀಡಿದ್ದಾರೆ ಎಂದು ತಿಳಿಸಿದರು.

ಸರ್ಕಾರಕ್ಕೆ ಅನುದಾನದ ಬೇಡಿಕೆ

ಹುಬ್ಬಳ್ಳಿ ಮತ್ತು ಧಾರವಾಡ ಪಾಲಿಕೆಗಳ ವಿಭಜನೆಯ ಪ್ರಕ್ರಿಯೆ ಪೂರ್ಣಗೊಂಡ ನಂತರ, ಸರ್ಕಾರವು ಎರಡೂ ಪಾಲಿಕೆಗಳಿಗೆ ಪ್ರತ್ಯೇಕವಾಗಿ ಹೆಚ್ಚಿನ ಅಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮೇಯರ್ ಜ್ಯೋತಿ ಪಾಟೀಲ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹಿಂದುಳಿದ ವರ್ಗದ ನಾಯಕತ್ವಕ್ಕೆ ಕೊಡಲಿ ಪೆಟ್ಟು: ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬೊಮ್ಮಾಯಿ

ಹಾವೇರಿ, (ಮೇ 29): ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದ ಅವರ ಆಪ್ತರಿಗೆ ಹಾಗು ಅಭಿಮಾನಿಗಳಿಗೆ ಬೇಸರ ತರಿಸಿದೆ. ಅದರಲ್ಲೂ ಮುಖ್ಯವಾಗಿ ಪಕ್ಷ ಬೇರೆ ಇದ್ದರೂ ಸಹ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿದ್ದರಾಮಯ್ಯನವರ ರಾಜೀನಾಮೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅವರ ಜೊತೆಗಿನ ರಾಜಕೀಯ ಹಳೇ ನೆನಪುಗಳನ್ನ ಮೆಲುಕು ಹಾಕಿದ್ದಾರೆ. ಅದರಂತೆ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ (Basavaraj bommai) ಸಹ ಸಿದ್ದರಾಮಯ್ಯ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ನಾಲ್ಕು ದಶಕ ರಾಜಕಾರಣ ಮಾಡಿದ್ದಾರೆ. ಅವರು ಮೊದಲ ಅಹಿಂದ ಸಭೆ ಮಾಡಿದಾಗ ನಾನೇ ಮುಖ್ಯ ಭಾಷಣ ಮಾಡಿದ್ದೆ. ಅವರೇ ಮೊನ್ನೆ ನೆನಪು ಮಾಡಿಕೊಂಡಿದ್ರು. ಕಾಂಗ್ರೆಸ್ ಸೇರಿ 2007 ರಲ್ಲಿ ಬೈ ಎಲೆಕ್ಷನ್ ನಿಂತಿದ್ರು. ಆಗ ಅವರಿಗೆ ನಾವೂ ಸಹ ಸಹಾಯ ಮಾಡಿದ್ದೆವು. ಅವರು ಕಾಂಗ್ರೆಸ್ ಗೆ ಹೋದ ಮೇಲೆ ನನಗೆ ಅವರ ಜೊತೆ ರಾಜಕೀಯ ನಂಟಿಲ್ಲ. ಸೈಂದಾತಿಕವಾಗಿ ನಾವು ಕಾಂಪ್ರಮೈಸ್ ಆಗಿಲ್ಲ. ಆದ್ರೆ, ಅವರು ಸಮಾಜವಾದಿ, ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಇರುವ ನಾಯಕ. ಅವರನ್ನು ಇಳಿಸಿ ಕಾಂಗ್ರೆಸ್ ನವರು ಹಿಂದುಳಿದ ವರ್ಗದ ನಾಯಕತ್ವಕ್ಕೆ ಕೊಡಲಿ ಪೆಟ್ಟು ನೀಡಿದ್ದಾರೆ. ಇದರ ಪರಿಣಾಮ ಖಂಡಿತವಾಗಿ ಆಗುತ್ತೆ ಎಂದಿದ್ದಾರೆ.

Source link

ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ‘ಪೆದ್ದಿ’ ಕಾನೂನು ಕ್ರಮ

ಇತ್ತೀಚೆಗೆ ಸಿನಿಮಾಗಳ (Cinema) ವಿರುದ್ಧ ಉದ್ದೇಶಪೂರ್ವಕ ನೆಗೆಟಿವ್ ವಿಮರ್ಶೆ, ಸುಳ್ಳು ಸುದ್ದಿ, ಸುಳ್ಳು ವಿಮರ್ಶೆಗಳನ್ನು ನೀಡುವ ಸಂಪ್ರದಾಯ ಹೆಚ್ಚಾಗಿದೆ. ಒಬ್ಬ ಸ್ಟಾರ್ ಹೀರೋ ಸಿನಿಮಾಕ್ಕೆ ಆತನ ಪ್ರತಿಸ್ಪರ್ಧಿ ನಾಯಕನ ಅಭಿಮಾನಿಗಳು ಉದ್ದೇಶಪೂರ್ವಕವಾಗಿ ನೆಗೆಟಿವ್ ರಿವ್ಯೂ ನೀಡುವುದು, ಕೆಟ್ಟದಾಗಿ ಟ್ರೋಲ್ ಮಾಡುವುದು, ಬುಕ್​​ಮೈಶೋ ಇನ್ನಿತರೆ ಕಡೆಗಳಲ್ಲಿ ಕಡಿಮೆ ಸ್ಟಾರ್ಸ್ ನೀಡುವುದು, ಕೆಟ್ಟ ರಿವ್ಯೂ ಕಮೆಂಟ್ ಹಾಕುವುದು ಇನ್ನಿತರೆ ಚಾಲ್ತಿಯಲ್ಲಿದೆ. ಇವುಗಳನ್ನು ಇದೀಗ ಚಿತ್ರತಂಡಗಳು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಿವೆ. ಇದೀಗ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಸಹ ಇಂಥಹದ್ದೊಂದು ನಿರ್ಣಯ ಕೈಗೊಂಡಿದೆ.

‘ಪೆದ್ದಿ’ ಸಿನಿಮಾ ರಾಮ್ ಚರಣ್ ಪಾಲಿಗೆ ಮತ್ತು ಮೈತ್ರಿ ಮೂವಿ ಮೇಕರ್ಸ್ ಪಾಲಿಗೆ ಮಹತ್ವದ ಪ್ರಾಜೆಕ್ಟ್ ಆಗಿದ್ದು, ಸಿನಿಮಾದ ಪ್ರಚಾರವನ್ನು ಬಲು ಆಸ್ತೆಯಿಂದ ಅದ್ಧೂರಿಯಾಗಿ ಚಿತ್ರತಂಡ ಮಾಡಿದೆ. ಒಟ್ಟಾರೆ ಸಿನಿಮಾದ ಬಗ್ಗೆ ಒಂದು ಪಾಸಿಟಿವ್ ಅಭಿಪ್ರಾಯವನ್ನು ಮೂಡಿಸಲು ಚಿತ್ರತಂಡ ಯಶಸ್ವಿಯಾಗಿದೆ. ಹೀಗಾಗಿ ಸಿನಿಮಾ ಬಿಡುಗಡೆ ಆದ ಮೇಲೆ ಸುಳ್ಳು ಸುದ್ದಿಗೆ, ನೆಗೆಟಿವ್ ಟ್ರೋಲ್​​ಗಳಿಗೆ ಸಿನಿಮಾ ಬಲಿ ಆಗಬಾರದು, ಟ್ರೋಲರ್​​ಗಳ ಹಾವಳಿ ತಮ್ಮ ಸಿನಿಮಾಕ್ಕೆ ಇರಬಾರದೆಂದು ‘ಪೆದ್ದಿ’ ಚಿತ್ರತಂಡ ಮುಂಜಾಗೃತೆ ತೆಗೆದುಕೊಳ್ಳುತ್ತಿದೆ.

ಸಿನಿಮಾದ ವಿರುದ್ಧ ಉದ್ದೇಶಪೂರ್ವಕ ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಚಿತ್ರತಂಡ ಮುಂದಾಗಿದೆ. ಈ ಬಗ್ಗೆ ಮುಂಚಿತವಾಗಿ ಸೈಬರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಿನಿಮಾದ ವಿರುದ್ಧ ಸುಳ್ಳು ಸುದ್ದಿ ಹಬ್ಬುವವರು, ಸಿನಿಮಾದ ಪೈರಸಿ ಮಾಡುವವರು, ಸಿನಿಮಾದ ಬಗ್ಗೆ ನೆಗೆಟಿವ್ ಟ್ರೋಲ್ ಮಾಡುವವರನ್ನು ಹತ್ತಿಕ್ಕಲು ರೆಡಿಯಾಗಿದೆ. ಬುಕ್​​ಮೈ ಶೋನಲ್ಲಿ ಸಹ ರೇಟಿಂಗ್ ಆಪ್ಷನ್ ಅನ್ನು ತೆಗೆಸಲಿದೆ ‘ಪೆದ್ದಿ’ ಚಿತ್ರತಂಡ.

ಇದನ್ನೂ ಓದಿ:ಅಮೆರಿಕನಲ್ಲಿ ‘ಪೆದ್ದಿ’ ಟಿಕೆಟ್ ದರ ಹಾಲಿವುಡ್ ಸಿನಿಮಾಗಳಿಗೂ ಹೆಚ್ಚು: ಅಭಿಮಾನಿಗಳ ಬೇಸರ

ರಾಮ್ ಚರಣ್ ಅವರ ಈ ಹಿಂದಿನ ‘ಗೇಮ್ ಚೇಂಜರ್’ ಸಿನಿಮಾ ಆನ್​​ಲೈನ್ ನಲ್ಲಿ ಬಹಳಷ್ಟು ಟ್ರೋಲ್​​ಗೆ ಒಳಗಾಗಿತ್ತು. ಸಿನಿಮಾ ಸಹ ಅಷ್ಟೇನೂ ಚೆನ್ನಾಗಿ ಇಲ್ಲದ ಕಾರಣ ಚಿತ್ರತಂಡ ಆ ಬಗ್ಗೆ ಹೆಚ್ಚು ಗಮನ ವಹಿಸಿರಲಿಲ್ಲ. ಆದರೆ ‘ಪೆದ್ದಿ’ ಸಿನಿಮಾದ ಮೇಲೆ ಚಿತ್ರತಂಡಕ್ಕೆ ಹೆಚ್ಚಿನ ಭರವಸೆ ಇರುವ ಕಾರಣ, ಅನವಶ್ಯಕ ಕಾರಣಗಳಗೆ ಸಿನಿಮಾದ ಬಗ್ಗೆ ನೆಗೆಟಿವಿಟಿ ಹಬ್ಬಬಾರದೆಂದು ಈ ನಿರ್ಣಯವನ್ನು ಚಿತ್ರತಂಡ ತೆಗೆದುಕೊಂಡಿದೆ.

‘ಪೆದ್ದಿ’ ಸಿನಿಮಾವು ಜೂನ್ 4 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ರಾಮ್ ಚರಣ್ ಜೊತೆಗೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ನಟಿಸಿದ್ದಾರೆ. ಸಿನಿಮಾಕ್ಕೆ ಜಾನ್ಹವಿ ಕಪೂರ್ ನಾಯಕಿ. ಸಿನಿಮಾನಲ್ಲಿ ಬಾಲಿವುಡ್ ನಟರಾದ ದಿವ್ಯೇಂದು, ಬೊಮನ್ ಇರಾನಿ, ತೆಲುಗಿನ ಜಗಪತಿ ಬಾಬು ಇನ್ನೂ ಹಲವರಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದು, ನಿರ್ದೇಶನ ಮಾಡಿರುವುದು ಬುಚ್ಚಿಬಾಬು ಸನಾ. ನಿರ್ಮಾಣ ಮೈತ್ರಿ ಮೂವಿ ಮೇಕರ್ಸ್ ಅವರದ್ದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರಿನ ಜನರೇ ಸಂಜೆ 6ರೊಳಗೆ ಮನೆಗೆ ತಲುಪಿ!: ಇಂದು ಕರಾವಳಿ ಹಾಗೂ ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರು, ಮೇ.29: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಮುನ್ಸೂಚನೆ ಹೆಚ್ಚಾಗಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಭಾರಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಜಂಟಿ ಮುನ್ನೆಚ್ಚರಿಕೆ ನೀಡಿದೆ. ವಿಶೇಷವಾಗಿ ಇಂದಿನಿಂದ (ಮೇ 29) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇನ್ನು ಬೆಂಗಳೂರಿನಲ್ಲೂ ಕೂಡ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು (ಮೇ 29) ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಮೇ 29 ಮತ್ತು 30ರಂದು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಮೇ 31 ರಿಂದ ಜೂನ್ 2 ರವರೆಗೆ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ಎಚ್ಚರಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಇದನ್ನೂ ಓದಿ: ಸಿಲ್ಕ್ ಬೋರ್ಡ್ ಜಂಕ್ಷನ್ ಈಗ ‘ಸ್ವಿಮ್ಮಿಂಗ್ ಪೂಲ್’!: ಕೋಟಿ ಕೋಟಿ ಖರ್ಚು ಮಾಡಿದ್ರೂ ಸುಧಾರಿಸದ ಸಿಲಿಕಾನ್ ಸಿಟಿ

ಇತ್ತ ಉತ್ತರ ಒಳನಾಡಿನ (NIK) ಜಿಲ್ಲೆಗಳಲ್ಲಿ ಮೇ 29 ರಿಂದ ಜೂನ್ 2 ರವರೆಗೆ ಒಂದು ಅಥವಾ ಎರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರಾವಳಿ ಕರ್ನಾಟಕದ (Coastal Karnataka) ಜಿಲ್ಲೆಗಳಲ್ಲೂ ಸಹ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಸಿಡಿಲು ಹಾಗೂ ಮಿಂಚಿನಿಂದ ಕೂಡಿರುವ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಮೀನುಗಾರರು ಮತ್ತು ನದಿ ತೀರದ ಜನರಿಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rate: ಚಿನ್ನ, ಬೆಳ್ಳಿ ಬೆಲೆಗಳೆರಡೂ ಹೆಚ್ಚಳ; ಇಲ್ಲಿದೆ ದರಪಟ್ಟಿ

ನವದೆಹಲಿ, ಮೇ 29: ಸತತ ಇಳಿಕೆಯಾಗುತ್ತಿದ್ದ ಬಂಗಾರದ ಬೆಲೆ (Gold Rates) ಇವತ್ತು ಶುಕ್ರವಾರ ಗ್ರಾಮ್​ಗೆ 145 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇವತ್ತು 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,764 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,450 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,823 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,764 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,450 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,450 ರೂ
  • ಚೆನ್ನೈ: 14,600 ರೂ
  • ಮುಂಬೈ: 14,450 ರೂ
  • ದೆಹಲಿ: 14,465 ರೂ
  • ಕೋಲ್ಕತಾ: 14,450 ರೂ
  • ಕೇರಳ: 14,450 ರೂ
  • ಅಹ್ಮದಾಬಾದ್: 14,455 ರೂ
  • ಜೈಪುರ್: 14,465 ರೂ
  • ಲಕ್ನೋ: 14,465 ರೂ
  • ಭುವನೇಶ್ವರ್: 14,450 ರೂ

ಇದನ್ನೂ ಓದಿ: ಶೇರುಗಳಂತೆ ರಿಯಲ್ ಎಸ್ಟೇಟ್ ಆಸ್ತಿಯಲ್ಲಿ ಪಾಲು ಖರೀದಿಸಿ… ಇದು REITs ಮತ್ತು InvITs ಕೊಡುವ ಅವಕಾಶ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 589 ರಿಂಗಿಟ್ (14,177 ರುಪಾಯಿ)
  • ದುಬೈ: 541.25 ಡಿರಾಮ್ (14,063 ರುಪಾಯಿ)
  • ಅಮೆರಿಕ: 147.50 ಡಾಲರ್ (14,099 ರುಪಾಯಿ)
  • ಸಿಂಗಾಪುರ: 197 ಸಿಂಗಾಪುರ್ ಡಾಲರ್ (14,744 ರುಪಾಯಿ)
  • ಕತಾರ್: 543.50 ಕತಾರಿ ರಿಯಾಲ್ (14,231 ರೂ)
  • ಸೌದಿ ಅರೇಬಿಯಾ: 559 ಸೌದಿ ರಿಯಾಲ್ (14,217 ರುಪಾಯಿ)
  • ಓಮನ್: 56.60 ಒಮಾನಿ ರಿಯಾಲ್ (14,031 ರುಪಾಯಿ)
  • ಕುವೇತ್: 45.54 ಕುವೇತಿ ದಿನಾರ್ (14,171 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 290 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 290 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 290 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ಚಿತ್ರತಂಡದ ಸದಸ್ಯನ ಲೈಂಗಿಕ ದೌರ್ಜನ್ಯ ಕೃತ್ಯ ಸಾಬೀತು; ಕಠಿಣ ಕ್ರಮ

ಸೂಪರ್ ಹಿಟ್ ‘ಧುರಂಧರ್’ (Dhurandhar) ಚಿತ್ರದ ಪ್ರೊಡಕ್ಷನ್ ಡಿಸೈನರ್ ಸೈನಿ ಎಸ್. ಜೊಹ್ರೆ (Saini S Johray) ವಿರುದ್ಧ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಸೈನಿ ಎಸ್. ಜೊಹ್ರೆಯನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ, ಚಿತ್ರದ ಆಂತರಿಕ ಲೈಂಗಿಕ ಕಿರುಕುಳ ತಡೆ ಸಮಿತಿಯು (POSH Committee) ನಡೆಸಿದ ತನಿಖೆಯಲ್ಲಿ ಜೊಹ್ರೆ ತಪ್ಪಿತಸ್ಥ ಎಂದು ಸಾಬೀತಾಗಿದೆ. ಹಾಗಾಗಿ ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆಯ ಮುಂಬರುವ ಸಿನಿಮಾದಿಂದ ಆತನ ಹೆಸರನ್ನು ತೆಗೆದುಹಾಕಿದೆ.

‘ಮಿಡ್-ಡೇ’ ವರದಿಯ ಪ್ರಕಾರ, ಸಂತ್ರಸ್ತೆ ಈ ಹಿಂದೆ ನಿರ್ಮಾಪಕ ಲೋಕೇಶ್ ಧರ್ ಮತ್ತು ನಿರ್ದೇಶಕ ಆದಿತ್ಯ ಧರ್ ಒಡೆತನದ ‘B62 ಸ್ಟುಡಿಯೋಸ್’ ಸಂಸ್ಥೆಗೆ ಸೈನಿ ಎಸ್. ಜೊಹ್ರೆ ವಿರುದ್ಧ ಅಧಿಕೃತವಾಗಿ ದೂರು ನೀಡಿದ್ದರು. ಲೈಂಗಿಕ ಕಿರುಕುಳದ ವಿರುದ್ಧ ಕಠಿಣ ನಿಲುವು ಹೊಂದಿರುವ ‘B62 ಸ್ಟುಡಿಯೋಸ್’ ಸಂಸ್ಥೆಯು 2025ರ ಅಕ್ಟೋಬರ್ ತಿಂಗಳಲ್ಲಿ ದೂರು ಸ್ವೀಕರಿಸಿದ ತಕ್ಷಣವೇ POSH ಸಮಿತಿಯನ್ನು ಸಕ್ರಿಯಗೊಳಿಸಿತ್ತು.

ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿದ ಸಮಿತಿಯು ಅತ್ಯಂತ ಕೂಲಂಕಷವಾಗಿ ತನಿಖೆ ನಡೆಸಿದೆ. ಸುಮಾರು ಆರು ತಿಂಗಳ ಕಾಲ ನಡೆದ ಈ ಸುದೀರ್ಘ ತನಿಖೆಯು 2026ರ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಂಡಿದ್ದು, ಸೈನಿ ಎಸ್. ಜೊಹ್ರೆ ಅಪರಾಧಿ ಎಂಬ ತೀರ್ಮಾನಕ್ಕೆ ಸಮಿತಿ ಬಂದಿದೆ. ತನಿಖಾ ವರದಿಯ ಪ್ರಕಾರ, ಆತ ಎರಡು ಪ್ರಮುಖ ಆರೋಪಗಳಲ್ಲಿ (ಲೈಂಗಿಕ ದೌರ್ಜನ್ಯ ಮತ್ತು ಸಾಕ್ಷ್ಯ ನಾಶಕ್ಕೆ ಯತ್ನ) ಅಪರಾಧ ಎಸಗಿರುವುದು ದೃಢಪಟ್ಟಿದೆ.

ಏನಿದು ಘಟನೆ?
‘ಇಂಡಿಯಾ ಟುಡೇ’ ವರದಿಯ ಪ್ರಕಾರ, ಚಂಡೀಗಢದ ಐಷಾರಾಮಿ ತಾಜ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿತ್ತು. ಸೈನಿ ಜೊಹ್ರೆ ತನ್ನನ್ನು ಹೋಟೆಲ್ ರೂಮಿಗೆ ಕರೆಸಿಕೊಂಡು, ಪಾನೀಯದಲ್ಲಿ ಮಾದಕ ಪದಾರ್ಥವನ್ನು ಬೆರೆಸಿ ಪ್ರಜ್ಞೆ ತಪ್ಪುವಂತೆ ಮಾಡಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ, ಹಲ್ಲೆ ನಡೆಸಿ, ಕಾನೂನುಬಾಹಿರವಾಗಿ ಕೊಠಡಿಯಲ್ಲಿ ಕೂಡಿ ಹಾಕಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ: ‘ಧುರಂಧರ್’ ಚಿತ್ರದಲ್ಲಿ ದೇಶದ ಭದ್ರತೆಯ ರಹಸ್ಯ ಮಾಹಿತಿ ಸೋರಿಕೆ ಆರೋಪ; ಹೈಕೋರ್ಟ್ ಮಹತ್ವದ ಆದೇಶ

ಈ ದೂರಿನ ಅನ್ವಯ ಚಂಡೀಗಢ ಪೊಲೀಸರು ಸೈನಿ ಜೊಹ್ರೆನನ್ನು ಬಂಧಿಸಿದ್ದರು. ಆದರೆ, ನಂತರ ಸ್ಥಳೀಯ ಜಿಲ್ಲಾ ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ಚಿತ್ರತಂಡದ ಆಂತರಿಕ ಸಮಿತಿಯೇ ಆತನನ್ನು ಅಪರಾಧಿ ಎಂದು ಘೋಷಿಸಿರುವುದರಿಂದ ಆತನಿಗೆ ಕಾನೂನು ಸಂಕಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ

ನವದೆಹಲಿ, (ಮೇ 29): ಡಿಕೆ ಶಿವಕುಮಾರ್ ಗಾಗಿ ಸಿದ್ದರಾಮಯ್ಯನವರು ಸಿಎಂ ಕುರ್ಚಿ ತ್ಯಾಗ ಮಾಡಿದ್ದಾರೆ. ನಿನ್ನೆ(ಮೇ 28) ಹೈಕಮಾಂಡ್ ಹೇಳಿದಂತೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಸರ್ಕಾರದ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಸಚಿವ ಸಂಪುಟ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜತೆ ಮಾತುಕಡೆ ನಡೆಸಿದ್ದಾರೆ. ಇದರ ಮಧ್ಯೆ ರಾಜೀನಾಮೆ ಬಳಿಕವೂ ಯಾವುದೇ ಕೋಪ, ಅಸಮಾಧಾನವಿಲ್ಲದೇ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಜತೆ ಅನ್ಯೂನ್ಯತೆಯಿಂದ ಇದ್ದು, ಹೋಟೆಲ್​​ ನಲ್ಲಿ ಜೊತೆಗೂಡಿ ಊಟ ಸವಿದ ಗಮನ ಸೆಳೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

PM Kisan Scheme: ಪಿಎಂ ಕಿಸಾನ್ 23ನೇ ಕಂತಿನ ಹಣ ಜೂನ್​ನಲ್ಲಿ ಬರುತ್ತಾ? ಈ ಕಾರ್ಯ ಮಾಡದವರಿಗೆ ಸಿಕ್ಕೋದಿಲ್ಲಾ ಹಣ

ನವದೆಹಲಿ, ಮೇ 29: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Scheme) 23ನೇ ಕಂತಿನ ಹಣ ಜೂನ್ ತಿಂಗಳಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. 22ನೇ ಕಂತಿನ ಹಣ ಮಾರ್ಚ್ 13ರಂದು ರಿಲೀಸ್ ಆಗಿತ್ತು. 9 ಕೋಟಿಗೂ ಅಧಿಕ ಫಲಾನುಭವಿ ಸಂಖ್ಯೆ ಇರುವ ಈ ಯೋಜನೆಯಲ್ಲಿ ಸರ್ಕಾರ ಪ್ರತೀ ಕಂತಿನಲ್ಲಿ 2,000 ರೂ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ರವಾನೆ ಮಾಡುತ್ತದೆ. ಈ ಸ್ಕೀಮ್​ನಲ್ಲಿ ರೈತರಿಗೆ (Farmers) ಸರ್ಕಾರ ಪ್ರತೀ ವರ್ಷ 3 ಕಂತುಗಳಲ್ಲಿ ಒಟ್ಟು 6,000 ರೂ ನೀಡುತ್ತದೆ. ವ್ಯವಸಾಯಕ್ಕೆ ಅನುಕೂಲವಾಗಲೆಂದು ರೈತರಿಗೆ ನೀಡಲಾಗುವ ಸಹಾಯಧನ ಇದು.

2018-19ರಲ್ಲಿ ಶುರುವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದಲೇ ಹಣ ಪಾವತಿಯಾಗುತ್ತದೆ. ಈ ಯೋಜನೆಗೆ ಫಲಾನುಭವಿಗಳಾಗಬಯಸುವವರು ಸ್ವಂತ ಕೃಷಿಭೂಮಿ ಹೊಂದಿದವರಾಗಿರಬೇಕು. ಅಷ್ಟು ಮಾತ್ರವಲ್ಲ, ಎಂಜಿನಿಯರ್, ವೈದ್ಯ ಇತ್ಯಾದಿ ವೃತ್ತಿಪರರು, ಶಾಸಕರು, ಸಂಸದರು, ಸರ್ಕಾರಿ ನೌಕರರು, ಪಿಂಚಣಿದಾರರು ಕೃಷಿ ಭೂಮಿ ಹೊಂದಿದರೂ ಯೋಜನೆಗೆ ಅರ್ಹರಾಗಿರುವುದಿಲ್ಲ.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ

ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಪಿಎಂ ಕಿಸಾನ್ ಸ್ಕೀಮ್​ನ ಫಲಾನುಭವಿಗಳಾಗಲು ಬರುವುದಿಲ್ಲ. 2019ರ ನಂತರ ಕೃಷಿ ಭೂಮಿ ಮಾಲಕತ್ವ ಪಡೆದವರಿಗೂ ಹಣ ಸಿಗುವುದಿಲ್ಲ. ಹಾಗೆಯೇ, ತಂದೆ ಅಥವಾ ತಾಯಿ ಜೀವಂತ ಇರುವಾಗಲೇ ಅವರಿಂದ ವರ್ಗಾವಣೆಯಾದ ಕೃಷಿಭೂಮಿಯನ್ನು ಹೊಂದಿದವರಿಗೂ ಯೋಜನೆ ಹಣ ಸಿಗೋದಿಲ್ಲ.

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದೀರಾ? ಫಲಾನುಭವಿಗಳ ಪಟ್ಟಿ ಗಮನಿಸಿ

ನೀವು ಈಗಾಗಲೇ ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದರೆ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇರುತ್ತದೆ. ಅದನ್ನು ನೋಡಲು ಯೋಜನೆಯ ಅಧಿಕೃತ ವೆಬ್​ಸೈಟ್​ಗೆ ಹೋಗಬೇಕು. ಅದರ ವಿಳಾಸ:

ಇಲ್ಲಿ ತುಸು ಕೆಳಗೆ ಸ್ಕ್ರಾಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸಿಗುತ್ತದೆ. ಅಲ್ಲಿ ಬೆನಿಫಿಶಿಯರಿ ಲಿಸ್ಟ್ ಅನ್ನು ಒತ್ತಬೇಕು. ನಂತರ ರಾಜ್ಯ, ಜಿಲ್ಲೆ, ತಾಲೂಕು, ನಿಮ್ಮ ಊರನ್ನು ಆಯ್ದುಕೊಳ್ಳಬೇಕು. ಆಗ ಆ ಊರಿನಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿ ಸಿಗುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಬಹುದು.

ಇದನ್ನೂ ಓದಿ: ನೋಟು ಹಾಳಾಗುವ ಭಯ ಬೇಡ; ಕಾಗದದ ಬದಲು ಪಾಲಿಮರ್ ನೋಟು ಮುದ್ರಿಸಲು ಸರ್ಕಾರದ ಆಲೋಚನೆ

ಯೋಜನೆಗೆ ನೊಂದಾಯಿಸಿದ್ದರೂ ಈ ಕಾರ್ಯ ಮಾಡದಿದ್ದರೆ ಬರೋದಿಲ್ಲ ದುಡ್ಡು

ನೀವು ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿ, ಈ ಹಿಂದೆ ಹಣವನ್ನು ಸ್ವೀಕರಿಸಿದ್ದರೂ 23ನೇ ಕಂತಿನ ಹಣ ಸಿಗುತ್ತದೆಂದು ಖಾತ್ರಿ ಇಲ್ಲ. ಇಕೆವೈಸಿ ವೆರಿಫಿಕೇಶನ್ ಮಾಡಿಸದಿದ್ದರೆ ಹಣ ಬರೋದಿಲ್ಲ. ಭೂದಾಖಲೆ ಪರಿಶೀಲನೆ ಆಗದಿದ್ದರೆ ಅಥವಾ ಬ್ಯಾಂಕ್ ಖಾತೆ ಮತ್ತು ಆಧಾರ್ ಲಿಂಕ್ ಆಗದೇ ಇದ್ದರೆ ಪಿಎಂ ಕಿಸಾನ್ ಹಣ ಸಿಕ್ಕೋದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?

ಬೆಂಗಳೂರು, ಮೇ 29: ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಅಧಿಕಾರಿಗಳಿಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್​​ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ ನಡೆದಿದ್ದು, ಬಂದೋಬಸ್ತ್‌ಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆ, ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ. ಹೈಕಮಾಂಡ್ ಸೂಚನೆಯಂತೆ ಬಹುತೇಕ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ವಿಧಾನಸೌಧದ ಮುಂಭಾಗದಲ್ಲೇ ಪದಗ್ರಹಣ ಮಾಡಬೇಕು ಎಂಬುದು ಅವರ ಅಭಿಲಾಷೆಯಾಗಿದೆ. ಹೀಗಾಗಿ, ಪ್ರಮಾಣ ವಚನ ಸಮಾರಂಭಕ್ಕೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆಗಳು ತೀವ್ರ ಗತಿಯಲ್ಲಿ ನಡೆಯುತ್ತಿವೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರಾಣಿ ಪ್ರಿಯರಿಗೆ ಗುಡ್​​ನ್ಯೂಸ್​​: ದಕ್ಷಿಣ ಆಫ್ರಿಕಾದ ಚೀತಾಗಳು ಬನ್ನೇರುಘಟ್ಟದಲ್ಲಿ ಜೂನ್ 4ರಿಂದ ವೀಕ್ಷಣೆಗೆ ಲಭ್ಯ

ಬೆಂಗಳೂರು, ಮೇ 29: ಪ್ರಾಣಿ ಪ್ರಿಯರಿಗೆ ಅರಣ್ಯ ಇಲಾಖೆ ಗುಡ್​​ನ್ಯೂಸ್​​ ನೀಡಿದ್ದು, ಕಳೆದ ತಿಂಗಳು ಬೆಂಗಳೂರಿಗೆ (Bengaluru) ತರಲಾಗಿದ್ದ ದಕ್ಷಿಣ ಆಫ್ರಿಕಾದ ನಾಲ್ಕು ಚೀತಾಗಳು ಜೂನ್ 4ರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿವೆ. ಚೀತಾಗಳು ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅವುಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ. ಚೀತಾಗಳ ಸಹಜ ಚುರುಕು ಚಲನವಲನಗಳಿಗೆ ಅನುಗುಣವಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ ಹೊಸ ಎನ್‌ಕ್ಲೋಸರ್‌ನಲ್ಲಿ ಅವುಗಳನ್ನು ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಅರಣ್ಯ ಇಲಾಖೆಯಿಂದ ಪ್ರಾಣಿ ಪ್ರಿಯರಿಗೆ ಶುಭಸುದ್ದಿ
  • ಸಾರ್ವಜನಿಕರಿಗೆ ಆಫ್ರಿಕಾ ಚೀತಾಗಳ ವೀಕ್ಷಣೆಗೆ ಅವಕಾಶ
  • ಬನ್ನೇರುಘಟ್ಟದಲ್ಲಿ ಜೂನ್ 4ರಿಂದ ವೀಕ್ಷಣೆಗೆ ವ್ಯವಸ್ಥೆ

ದಕ್ಷಿಣ ಆಫ್ರಿಕಾದ ಇಂಡುನಾ ಪ್ರೈಮೇಟ್ ಮತ್ತು ಪ್ಯಾರಟ್ ಪಾರ್ಕ್‌ನಿಂದ ಬೆಂಗಳೂರಿಗೆ ಏಪ್ರಿಲ್​​ 18ರಂದು ಎರಡು ಗಂಡು ಹಾಗೂ ಎರಡು ಹೆಣ್ಣು ಸೇರಿ ನಾಲ್ಕು ಚೀತಾಗಳನ್ನು ಕರೆತರಲಾಗಿತ್ತು. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಅವುಗಳನ್ನು ಸ್ಥಳಾಂತರಿಸಲಾಗಿತ್ತು. ಇವುಗಳನ್ನು ಭಾರತಕ್ಕೆ ಕರೆತರುವ ಮೊದಲು ದಕ್ಷಿಣ ಆಫ್ರಿಕಾದಲ್ಲೇ ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್​​ ಮಾಡಲಾಗಿತ್ತು. ಬಳಿಕ ಬೆಂಗಳೂರಿಗೆ ಬಂದ ನಂತರವೂ 30 ದಿನಗಳಿಗಿಂತ ಹೆಚ್ಚು ಕಾಲ ಕಟ್ಟುನಿಟ್ಟಿನ ಕ್ವಾರಂಟೈನ್‌ನಲ್ಲಿ ಇವನ್ನು ಇಡಲಾಗಿದ್ದು, ಪಶುವೈದ್ಯರ ವಿಶೇಷ ತಂಡವು ಅವುಗಳ ಆರೋಗ್ಯ ಮತ್ತು ಪರಿಸರ ಹೊಂದಾಣಿಕೆಯನ್ನು 24 ಗಂಟೆಗಳ ಕಾಲ ಮೇಲ್ವಿಚಾರಣೆ ಮಾಡಿತ್ತು.

ಇದನ್ನೂ ಓದಿ: ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ!

ಕರ್ನಾಟಕದಲ್ಲಿ ‘ಶಿವಂಗಿ’ ಎಂದು ಕರೆಯಲ್ಪಡುತ್ತಿದ್ದ ಏಷ್ಯಾಟಿಕ್ ಚೀತಾಗಳು ಡೆಕ್ಕನ್ ಸಮತಟ್ಟು ಪ್ರದೇಶಗಳಲ್ಲಿ ಕಂಡುಬರುತ್ತಿದ್ದವು. ಆದರೆ ಅತಿಯಾದ ಬೇಟೆ ಮತ್ತು ವಾಸಸ್ಥಳ ನಾಶದಿಂದಾಗಿ ಅವು ನಾಮಾಶೇಷಾಗಿವೆ. ಭಾರತದಲ್ಲಿ ಏಷ್ಯಾಟಿಕ್ ಚೀತಾ ಸಂಪೂರ್ಣವಾಗಿ ಅಳಿದುಹೋಗಿದ್ದರೂ, ಇದೀಗ ಆಫ್ರಿಕನ್ ಚೀತಾಗಳನ್ನು ರಾಜ್ಯದ ಪ್ರಮುಖ ಜೈವಿಕ ಉದ್ಯಾನವನಲ್ಲಿ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಿರೋದು ಪ್ರಾಣಿ ಪ್ರಿಯರ ಸಂತಸ ಹೆಚ್ಚಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:54 pm, Fri, 29 May 26

Source link

Exit mobile version