Headlines

ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ – Kannada News | French President Emmanuel Macron to visit India on February 17

ನವದೆಹಲಿ, ಫೆಬ್ರವರಿ 10: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಭಾರತಕ್ಕೆ ಫೆಬ್ರವರಿ 17ರಿಂದ 3 ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿಯ ಸಮಯದಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರ ಸೇರಿದಂತೆ ಪರಸ್ಪರ ಆಸಕ್ತಿಯ ಪ್ರಾದೇಶಿಕ…

Read More

ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ: ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ? – Kannada News | I will not run away from the battle, says Siddaramaiah; what is the secret behind the CM series of posts

ಬೆಂಗಳೂರು, ಫೆಬ್ರವರಿ 21: ಸಿಎಂ ಸಿದ್ದರಾಮಯ್ಯ (Siddaramaiah) ನಿನ್ನೆ ಮಾಡಿದ ಸರಣಿ ಟ್ವೀಟ್​ಗಳು ಸದ್ಯ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷಗಳ ನಾಯಕರಿಗೆ ಸಿದ್ದರಾಮಯ್ಯ ಮಾಡಿರುವ ಪೋಸ್ಟ್​ಗಳೇ ಅಸ್ತ್ರವಾಗಿವೆ. ಇನ್ನು ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ ಅಂತಾ ಅವರ ಆಪ್ತ ಶಾಸಕರು ನೀಡುತ್ತಿರುವ ಡೇಟ್​ಗಳು ಕಾಂಗ್ರೆಸ್​ ಪಕ್ಷದಲ್ಲಿ ಪಟ್ಟದ ಕಾಳಗವನ್ನ ತೀವ್ರಗೊಳಿಸಿದೆ. ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರ ಇರೋವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ…

Read More

ಕುಟುಂಬ ಸಮೇತ ‘ಟಾಕ್ಸಿಕ್’ ಟೀಸರ್ ನೋಡಿದ ಪ್ರೇಕ್ಷಕರು ಕಂಗಾಲು – Kannada News | Family Audience shocked after watching Yash starrer Toxic movie teaser

ನಟ ಯಶ್ (Yash) ಅವರು ಇಂದು (ಜನವರಿ 8) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 40ನೇ ವರ್ಷದ ಜನ್ಮದಿನದ ಪ್ರಯುಕ್ತ ಅಭಿಮಾನಿಗಳಿಗೆ ಅವರು ದೊಡ್ಡ ಗಿಫ್ಟ್ ನೀಡಿದ್ದಾರೆ. ‘ಟಾಕ್ಸಿಕ್’ (Toxic) ಸಿನಿಮಾದಿಂದ ಗಿಫ್ಟ್ ರೂಪದಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಸಖತ್ ಅದ್ದೂರಿಯಾಗಿ ಮೂಡಿಬರುತ್ತಿದೆ. ಟೀಸರ್ ತುಂಬಾ ಬೋಲ್ಡ್ ಆಗಿದೆ. ಮೊದಲ ಬಾರಿಗೆ ಕುಟುಂಬ ಸಮೇತರಾಗಿ ‘ಟಾಕ್ಸಿಕ್’ ಟೀಸರ್ (Toxic Teaser) ನೋಡಿದ ಫ್ಯಾಮಿಲಿ ಪ್ರೇಕ್ಷಕರಿಗೆ ಶಾಕ್ ಆಗಿದೆ. ಅದರಲ್ಲಿ ಯಶ್ ಅವತಾರ…

Read More

ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ – Kannada News | SSLC Student Killed in Shivamogga’s Sulekebailu Layout; Two Students Detained After School Clash

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ…

Read More

‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಡಕಾಯತ್’ ಸಿನಿಮಾದಲ್ಲಿ ಟಾಲಿವುಡ್‌ನ ಯುವ ಮತ್ತು ಪ್ರತಿಭಾನ್ವಿತ ನಾಯಕ ಅಡಿವಿ ಶೇಷ್ ನಟಿಸಿದ್ದಾರೆ. ಶನಿಲ್ ಡಿಯೋ ನಿರ್ದೇಶನದ ಈ ಲವ್ ಮತ್ತು ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಮೃಣಾಲ್ ಠಾಕೂರ್ ನಾಯಕಿ. ಬಾಲಿವುಡ್ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೂಡ ಈ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಶಕ್ತಿಶಾಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಇಂದು (ಏಪ್ರಿಲ್ 10) ರಿಲೀಸ್ ಆಗಿದೆ. ಈ ಸಿನಿಮಾದ ಆಫರ್ ಹೋಗಿದ್ದು ಮೊದಲು ಯುವ ಹೀರೋಗೆ….

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ದಂಪತಿ: ಬೇಬಿ ಬಂಪ್ ಫೋಟೊಶೂಟ್

ನಟ, ನಿರ್ಮಾಪಕ ಡಾಲಿ ಧನಂಜಯ್ ಅವರು ಇದೀಗ ತಂದೆಯಾಗುವ ಶುಷಿಯಲ್ಲಿದ್ದಾರೆ. ಡಾಲಿ ಅವರ ಪತ್ನಿ ಡಾ ಧನ್ಯತಾ ಗರ್ಭಿಣಿ ಆಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಧನ್ಯತಾ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಪತಿ ಡಾಲಿ ಸಹ ಪತ್ನಿಯ ಫೋಟೋಶೂಟ್​ನಲ್ಲಿ ಜೊತೆಯಾಗಿದ್ದಾರೆ. ಧನ್ಯತಾ ಮತ್ತು ಡಾಲಿ ಧನಂಜಯ್ ಅವರುಗಳು ಫೋಟೊಶೂಟ್​​ನಲ್ಲಿ ಮುದ್ದಾಗಿ ಕಾಣುತ್ತಿದ್ದು, ಮಗುವಿನ ನಿರೀಕ್ಷೆಯಲ್ಲಿರುವ ಪೋಷಕರ ಖುಷಿಯಲ್ಲಿದ್ದಾರೆ. ಡಾಲಿ ಹಾಗೂ ಧನ್ಯತಾ ಅವರು ಪ್ರಕೃತಿಯ ನಡುವೆ ಫೋಟೊಶೂಟ್ ಮಾಡಿಸಿದ್ದು, ಡಾಲಿ, ಗರ್ಭಿಣಿ ಪತ್ನಿಯ ಕೈ…

Read More

ಬಿಜೆಪಿ ಸಂಸದ ಮನೋಜ್ ತಿವಾರಿ ಮನೆಯಲ್ಲಿ ಕಳ್ಳತನ – Kannada News | BJP MP Manoj Tiwari’s Mumbai Home Theft, former worker Arrested, Rs 5.4 Lakh Stolen

ಮುಂಬೈ, ಜನವರಿ 18: ಬಿಜೆಪಿ ಸಂಸದ ಮನೋಜ್ ತಿವಾರಿ(Manoj Tiwari) ಮನೆಯಲ್ಲಿ ಕಳ್ಳತನ(Theft) ನಡೆದಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ದೆಹಲಿಯ ಈಶಾನ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಪ್ರಸಿದ್ಧ ಗಾಯಕ ಮನೋಜ್ ತಿವಾರಿ ಅವರ ಮುಂಬೈ ನಿವಾಸದಲ್ಲಿ ಕಳ್ಳತನ ನಡೆದಿದೆ. ಅಂಧೇರಿ ಪಶ್ಚಿಮದ ಶಾಸ್ತ್ರಿ ನಗರ ಪ್ರದೇಶದಲ್ಲಿರುವ ಸುಂದರ್‌ಬನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಈ ಕಳ್ಳತನದಲ್ಲಿ ಕಳ್ಳರು 5.40 ಲಕ್ಷ ರೂ. ದೋಚಿದ್ದಾರೆ ಎಂಬುದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಅವರ ಮಾಜಿ ಕೆಲಸಗಾರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ….

Read More

Video: ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ, ಭಯಾನಕ ವಿಡಿಯೋ – Kannada News | Fatal Road Mishap as Truck Loses Balance and Lands on Vehicle

ರಾಂಪುರ, ಡಿಸೆಂಬರ್ 29: ಲಾರಿಯೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಘಟನೆ ರಾಂಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಪಹಾಡಿ ಗೇಟ್ ಬಳಿಯ ಗಂಜ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಹೊಟ್ಟು ಸಾಗಿಸುತ್ತಿದ್ದ ಟ್ರಕ್ ಹೆದ್ದಾರಿಯಲ್ಲಿ ಹಾದುಹೋಗುವಾಗ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಬೊಲೆರೊ ವಾಹನದ…

Read More

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!ಎಸಿ ಗೋದಾಮಿಗೂ ತಗುಲಿದ ಬೆಂಕಿ – Kannada News | Makali Warehouse Fire: Short Circuit Leads to Multi Warehouse Blaze

ನೆಲಮಂಗಲ, ಫೆಬ್ರವರಿ 22: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿಯ ಒಂದು ಪ್ರಮುಖ ವೇರ್‌ಹೌಸ್ ಸಂಕೀರ್ಣದಲ್ಲಿ ಭಾನುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿದ ಅಗ್ನಿ ದುರಂತದಿಂದ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಭೀಕರ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ…

Read More

ಧುರಂಧರ್ 2: ಪ್ರೊಪಗಾಂಡ ಸಿನಿಮಾಗಳ ವಿರುದ್ಧ ನಿರ್ದೇಶಕ ವೆಟ್ರಿಮಾರನ್ ಕಿಡಿ; ವಿಡಿಯೋ ವೈರಲ್

ಶ್ರೀಲಂಕಾ ನಾಗರಿಕ ಯುದ್ಧದ ಕಹಿ ಘಟನೆಗಳನ್ನಾಧರಿಸಿದ ‘ನೀಲಿರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ತಮಿಳು ನಿರ್ದೇಶಕ ವೆಟ್ರಿಮಾರನ್ ಪಾಲ್ಗೊಂಡಿದ್ದರು. ಈ ವೇಳೆ ಅವರು ಸಿನಿಮಾರಂಗದಲ್ಲಿ ಹೆಚ್ಚುತ್ತಿರುವ ಪ್ರೊಪಗಾಂಡ (Propaganda) ಮತ್ತು ದ್ವೇಷ ಬಿತ್ತುವ ಚಿತ್ರಗಳ ಬಗ್ಗೆ ನೇರವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ವೆಟ್ರಿಮಾರನ್ (Vetrimaaran) ಅವರ ಈ ಮಾತುಗಳು ಈಗ ಇಂಟರ್ನೆಟ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ. ಆದಿತ್ಯ ಧರ್ ಮತ್ತು ರಣವೀರ್ ಸಿಂಗ್ ಅವರ ‘ಧುರಂಧರ್ 2’ (Dhurandhar 2) ಚಿತ್ರವನ್ನೇ ಗುರಿಯಾಗಿಸಿಕೊಂಡು ಅವರು ಟೀಕಿಸಿದ್ದಾರೆ…

Read More