Headlines

ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಿರಾಕರಣೆ, ಸಂಕೀರ್ಣದೊಳಗೆ ನಮಾಜ್ ನಿಷೇಧ ಯಥಾವತ್ತು – Kannada News | Bhojshala Dispute: Supreme Court Refuses Stay on Namaz Ban, High Court Order Stands

ನವದೆಹಲಿ, ಜುಲೈ 14: ದೇಶದ ಮತ್ತೊಂದು ಅತ್ಯಂತ ಸೂಕ್ಷ್ಮ ಧಾರ್ಮಿಕ ಕೇಂದ್ರವಾದ ಮಧ್ಯಪ್ರದೇಶದ ಧಾರ್ ಜಿಲ್ಲೆಯ ‘ಭೋಜಶಾಲಾ-ಕಮಲ್ ಮೌಲಾ ಮಸೀದಿ’ ಸಂಕೀರ್ಣವನ್ನು ದೇವಾಲಯವೆಂದು ಘೋಷಿಸಿದ್ದ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಇದರೊಂದಿಗೆ ಸಂಕೀರ್ಣದ ಒಳಭಾಗದಲ್ಲಿ ಮುಸ್ಲಿಮರು ನಮಾಜ್(Namaz) ಮಾಡುವುದಕ್ಕೆ ಇದ್ದ ನಿಷೇಧ ಸದ್ಯಕ್ಕೆ ಮುಂದುವರೆದಿದೆ. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (CJI) ನೇತೃತ್ವದ ಪೀಠವು ಮಧ್ಯಂತರ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದೆ. ಅದರಂತೆ, ಭೋಜಶಾಲಾ…

Read More

ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್ – Kannada News | Bengaluru PSI Bhairappa Held for Attempted Murder of Wife and Dowry Torture

ಬೆಂಗಳೂರು, ಜು.14: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆ ಕಿರುಕುಳ ನೀಡಿರುವ ಗಂಭೀರ ಆರೋಪದಡಿ ಬಂಧನ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ (Commissioner of Police) ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪ ಅವರನ್ನು ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಪಿಎಸ್ಐ ಭೈರಪ್ಪ ಕಳೆದ ಕೆಲವು ಸಮಯದಿಂದ ತಮ್ಮ ಪತ್ನಿಗೆ…

Read More

ಬಿಡದಿ ಟೌನ್​​ಶಿಪ್​​ ವಿವಾದ: ಯೋಜನೆ ಕೈಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ – Kannada News | Bidadi Township Row: HD Deve Gowda Warns of Vidhana Soudha Satyagraha if Project Isn’t Scrapped

ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ Image Credit source: PTI ಬೆಂಗಳೂರು, ಜುಲೈ 14: ವಿವಾದಿತ ಬಿಡದಿ ಟೌನ್​​ಶಿಪ್​​ ವಿರುದ್ಧ ಅನ್ನದಾತರ ಕಿಚ್ಚು ಕಟ್ಟೆಯೊಡೆದಿರುವ ಬೆನ್ನಲ್ಲೇ ಯೋಜನೆಯನ್ನ ತಕ್ಷಣವೇ ಕೈ ಬಿಡುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ. ಒಂದೊಮ್ಮೆ ರಾಜ್ಯ ಸರ್ಕಾರ ತಮ್ಮ ಮನವಿ ತಿರಸ್ಕರಿಸಿದ್ದೇ ಆದಲ್ಲಿ ಈಗಾಗಲೇ ನಿರಂತರ ಹೋರಾಟ ಮತ್ತು ಧರಣಯಲ್ಲಿ ಇರುವ ರೈತರನ್ನು ಬೆಂಬಲಿಸಿ, ನಮ್ಮ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ…

Read More

‘ರಾಮ ಮಂದಿರದ ಬಗ್ಗೆ ಮಾತನಾಡಿದ್ದನ್ನು ಸಹಿಸದೇ ಈ ರೀತಿ ಮಾಡಿದ್ದಾರೆ’; ಕಿಡಿಕಾರಿದ ಅನುಪಮ್ ಖೇರ್ – Kannada News | Anupam Kher Opens Up on Ram Mandir Donation Row and Shri Ram Bhoomi Shooting in Ayodhya

ಬಾಲಿವುಡ್ ಹಿರಿಯ ನಟರಾದ ಅನುಪಮ್ ಖೇರ್ (Anupam Kher) ಮತ್ತು ನಸೀರುದ್ದೀನ್ ಶಾ ನಡುವಿನ ವೈಮನಸ್ಸಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗಿದೆ. ರಾಜಕೀಯ ವಿಚಾರವಾಗಿ ನಸೀರುದ್ದೀನ್ ಶಾ ಅವರು ಅನುಪಮ್ ಅವರನ್ನು ಕೋಡಂಗಿ ಎಂದು ಕರೆದಿದ್ದರು. ಈ ವಿಡಿಯೋ ವೈರಲ್ ಆಗಿದ್ದಕ್ಕೆ ಅನುಪಮ್ ಖೇರ್ ಈಗ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮಿಬ್ಬರ ನಡುವಿನ ಇಂದಿನ ಸಂಬಂಧ ಹೇಗಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಹಳೆಯ ವಿಡಿಯೋ ವೈರಲ್ ಆದದ್ದಕ್ಕೆ ಅನುಪಮ್ ಬೇಸರ: ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಹಂಚಿಕೊಂಡಿರುವ ಅನುಪಮ್…

Read More

ಫಿಫ್ಟಿ ಮತ್ತು ಫಿಫ್ಟಿ ಪ್ಲಸ್: 2 ದಾಖಲೆಗಳ ಮೇಲೆ ಕೊಹ್ಲಿ ಕಣ್ಣು!

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿ ಇಂದಿನಿಂದ (ಜುಲೈ 14) ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದ ಮೂಲಕ ವಿರಾಟ್ ಕೊಹ್ಲಿ 2 ಭರ್ಜರಿ ದಾಖಲೆಗಳನ್ನು ಬರೆಯಬಹುದು. ಅದು ಕೂಡ ಒಂದೇ ಅರ್ಧಶತಕದೊಂದಿಗೆ. ಹಾಗಿದ್ರೆ ಕೊಹ್ಲಿ ಮುಂದಿರುವ ದಾಖಲೆಗಳಾವುವು ಎಂದು ನೋಡುವುದಾದರೆ… (PC: BCCI) ಇಂಗ್ಲೆಂಡ್ ವಿರುದ್ಧದ ಏಕದಿನ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ 37 ಪಂದ್ಯಗಳಿಂದ 1,455 ರನ್ ಗಳಿಸಿದ್ದಾರೆ. ಸದ್ಯ 38 ಇನ್ನಿಂಗ್ಸ್‌ಗಳಿಂದ 1,397 ರನ್ ಹೊಂದಿರುವ ಕೊಹ್ಲಿ, ಮೊದಲ ಮ್ಯಾಚ್​ನಲ್ಲಿ…

Read More

Indian Army Recruitment 2026: ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ; ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ನೇಮಕಾತಿ! – Kannada News | Indian Army SSC Tech Recruitment 2026: Engineering Graduates, Apply Now for Officer Jobs!

ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶImage Credit source: Getty Images ದೇಶಸೇವೆ ಮಾಡಬೇಕೆಂಬ ಕನಸು ಹೊತ್ತಿರುವ ಇಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ಸೇನೆಯು (Indian Army) ಸುವರ್ಣ ಅವಕಾಶವೊಂದನ್ನು ತಂದಿದೆ. ಏಪ್ರಿಲ್ 2027 ರಿಂದ ಪ್ರಾರಂಭವಾಗಲಿರುವ 68 ನೇ ಶಾರ್ಟ್ ಸರ್ವಿಸ್ ಕಮಿಷನ್ – SSC (Tech) ಕೋರ್ಸ್‌ಗೆ ಸೇರಲು ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಿ-ಕಮಿಷನಿಂಗ್ ಟ್ರೈನಿಂಗ್ ಅಕಾಡೆಮಿ (PCTA)…

Read More

ಕೆಆರ್​ಎಸ್ ಡ್ಯಾಂನಲ್ಲಿ ಅನುಮತಿಯಿಲ್ಲದೆ ಖಾಸಗಿ ಕಂಪನಿಯಿಂದ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ – Kannada News | KRS Dam Soil Testing Row: Farmers Oppose Private Company’s Unauthorized Survey Inside Reservoir Premises

ಮಂಡ್ಯ, ಜುಲೈ 14: ಕೆಆರ್​ಎಸ್ ಜಲಾಶಯದ ಆವರಣದಲ್ಲಿ ಖಾಸಗಿ ಕಂಪನಿಯೊಂದು ಅನುಮತಿ ಪಡೆಯದೆ ಮಣ್ಣು ಪರೀಕ್ಷೆ ನಡೆಸುತ್ತಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾವೇರಿ ನೀರಾವರಿ ನಿಗಮದ ಅನುಮತಿ ಇಲ್ಲದೆ, ಡ್ಯಾಂ ಒಳಗೆ ಯಂತ್ರಗಳ ಮೂಲಕ ಮಣ್ಣು ಪರೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಯಿಂದ ಆರನೇ ಹಂತದ ಯೋಜನೆ ಕಾಮಗಾರಿಗೆ ಟೆಂಡರ್ ಪಡೆದಿರುವ ಕಂಪನಿ ಈ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. ಯೋಜನೆಯ ಭಾಗವಾಗಿ ಕೆಆರ್​ಎಸ್ ಡ್ಯಾಂನಿಂದ ನೀರು ಪೂರೈಕೆ ಮಾಡುವ…

Read More

ಹಾರ್ಮುಜ್ ಜಲಸಂಧಿಯಲ್ಲಿ ಟೋಲ್​ಗೆ ಅಮೆರಿಕ-ಇರಾನ್ ಪೈಪೋಟಿ; ಭಾರತಕ್ಕೆ ಏನು ತಲೆನೋವು? – Kannada News | Hormuz Strait USA Iran toll war, how India and other countries affected

ನವದೆಹಲಿ, ಜುಲೈ 14: ಹಾರ್ಮುಜ್ ಜಲಸಂಧಿಯು (Strait of Hormuz) ಅಮೆರಿಕದ ನೌಕಾಪಡೆಯ ರಕ್ಷಣೆಯಲ್ಲಿದೆ ಎಂದು ಪುನರುಚ್ಚರಿಸಿರುವ ಟ್ರಂಪ್, ಈ ಜಲ ಮಾರ್ಗದ ಮೂಲಕ ಸಾಗುವ ಸರಕುಗಳ ಮೇಲೆ ಶೇ. 20ರಷ್ಟು ಶುಲ್ಕ (Toll on oil tankers) ವಿಧಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಇರಾನ್‌ನ ಬಂದರುಗಳಿಗೆ ನೌಕಾ ದಿಗ್ಬಂಧನವನ್ನು ಮರುಸ್ಥಾಪಿಸುವುದಾಗಿಯೂ ತಿಳಿಸಿದ್ದಾರೆ. ಜಲಮಾರ್ಗದಲ್ಲಿ ನೌಕೆಗಳ ಮೇಲೆ ಅಮೆರಿಕ ಟೋಲ್ ವಿಧಿಸಲು ಆರಂಭಿಸಿದರೆ ಅದು ಭಾರತದ ಮೇಲೆ ಪರಿಣಾಮ ಬೀರುವುದು ಹೌದು. ಹೀಗಾಗಿ, ಭಾರತ ಈ ಬೆಳವಣಿಗೆಯನ್ನು ಹೆಚ್ಚಿನ…

Read More

ಆದಾಯ ತೆರಿಗೆ ನಿಯಮಗಳ ಪ್ರಕಾರ ಎನ್​ಆರ್​ಐ ಯಾರು? ಇವರಿಗೆ ಇನ್ಕಮ್ ಟ್ಯಾಕ್ಸ್ ಎಷ್ಟಿದೆ? – Kannada News | Income Tax rules define who are Indian residents and who are NRIs, details here

ಭಾರತೀಯ ಪಾಸ್​ಪೋರ್ಟ್Image Credit source: Getty Images ವಿದೇಶದಲ್ಲಿ ವಾಸಿಸುತ್ತಿರುವ ಕಾರಣಕ್ಕೆ ಮಾತ್ರ ಅನಿವಾಸಿ ಭಾರತೀಯರಿಗೆ (NRI) ಭಾರತದಲ್ಲಿ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವುದರಿಂದ ಸ್ವಯಂಚಾಲಿತವಾಗಿ ವಿನಾಯಿತಿ ಸಿಗುವುದಿಲ್ಲ. ಭಾರತದಲ್ಲಿ ಗಳಿಸುವ ಆದಾಯ ಮತ್ತು ಅವರ ವಾಸಸ್ಥಳದ ಸ್ಥಿತಿಯ (Residential Status) ಆಧಾರದ ಮೇಲೆ ಅವರು ತೆರಿಗೆ ಸಲ್ಲಿಸಬೇಕಾಗುತ್ತದೆಯೇ ಇಲ್ಲವೇ ಎಂಬುದು ನಿರ್ಧಾರವಾಗುತ್ತದೆ. ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 6ರ ಅಡಿಯಲ್ಲಿ ‘ನಿವಾಸಿ ಭಾರತೀಯ’ (Resident) ಆಗಲು ಇರುವ ನಿಯಮಗಳನ್ನು ಪೂರೈಸದವರನ್ನು ಅನಿವಾಸಿ ಭಾರತೀಯ…

Read More

ಗಂಭೀರ್ vs ಅಗರ್ಕರ್ ನಡುವೆ ಶೀತಲ ಸಮರ: ಆಟಗಾರರಲ್ಲಿ ಆತಂಕ! – Kannada News | Gambhir vs Agarkar: Cold War in Team India

ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಮ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಜಗಜ್ಜಾಹೀರಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನಡುವಿನ ವೈಚಾರಿಕ ಭಿನ್ನಾಭಿಪ್ರಾಯಗಳು ಆಟಗಾರರಲ್ಲಿ ಅಭದ್ರತೆಯನ್ನು ಮೂಡಿಸುತ್ತಿವೆ ಎಂದು ದಿನೇಶ್ ಕಾರ್ತಿಕ್ ಕಳವಳ ವ್ಯಕ್ತಪಡಿಸಿದ್ದಾರೆ. ಭಿನ್ನಾಭಿಪ್ರಾಯಕ್ಕೆ ಮುಖ್ಯ ಕಾರಣವೇನು? ದಿನೇಶ್ ಕಾರ್ತಿಕ್ ಅವರ ಪ್ರಕಾರ, ಈ ಇಬ್ಬರು ದಿಗ್ಗಜರ ನಡುವಿನ ಸಂಘರ್ಷಕ್ಕೆ ಪ್ರಮುಖ ಕಾರಣ ‘ದೀರ್ಘಾವಧಿ ಯೋಜನೆ vs ತತ್‌ಕ್ಷಣದ ಗೆಲುವು’. ಅಜಿತ್ ಅಗರ್ಕರ್ ಅವರ ನಿಲುವು: ಚೀಫ್ ಸೆಲೆಕ್ಟರ್…

Read More