Headlines

ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ

ನವದೆಹಲಿ, (ಮೇ 29): ಡಿಕೆ ಶಿವಕುಮಾರ್ ಗಾಗಿ ಸಿದ್ದರಾಮಯ್ಯನವರು ಸಿಎಂ ಕುರ್ಚಿ ತ್ಯಾಗ ಮಾಡಿದ್ದಾರೆ. ನಿನ್ನೆ(ಮೇ 28) ಹೈಕಮಾಂಡ್ ಹೇಳಿದಂತೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಸರ್ಕಾರದ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಸಚಿವ ಸಂಪುಟ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜತೆ ಮಾತುಕಡೆ ನಡೆಸಿದ್ದಾರೆ. ಇದರ ಮಧ್ಯೆ ರಾಜೀನಾಮೆ ಬಳಿಕವೂ ಯಾವುದೇ ಕೋಪ, ಅಸಮಾಧಾನವಿಲ್ಲದೇ ಸಿದ್ದರಾಮಯ್ಯನವರು…

Read More

PM Kisan Scheme: ಪಿಎಂ ಕಿಸಾನ್ 23ನೇ ಕಂತಿನ ಹಣ ಜೂನ್​ನಲ್ಲಿ ಬರುತ್ತಾ? ಈ ಕಾರ್ಯ ಮಾಡದವರಿಗೆ ಸಿಕ್ಕೋದಿಲ್ಲಾ ಹಣ

ನವದೆಹಲಿ, ಮೇ 29: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Scheme) 23ನೇ ಕಂತಿನ ಹಣ ಜೂನ್ ತಿಂಗಳಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. 22ನೇ ಕಂತಿನ ಹಣ ಮಾರ್ಚ್ 13ರಂದು ರಿಲೀಸ್ ಆಗಿತ್ತು. 9 ಕೋಟಿಗೂ ಅಧಿಕ ಫಲಾನುಭವಿ ಸಂಖ್ಯೆ ಇರುವ ಈ ಯೋಜನೆಯಲ್ಲಿ ಸರ್ಕಾರ ಪ್ರತೀ ಕಂತಿನಲ್ಲಿ 2,000 ರೂ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ರವಾನೆ ಮಾಡುತ್ತದೆ. ಈ ಸ್ಕೀಮ್​ನಲ್ಲಿ ರೈತರಿಗೆ (Farmers) ಸರ್ಕಾರ ಪ್ರತೀ ವರ್ಷ 3 ಕಂತುಗಳಲ್ಲಿ…

Read More

ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?

ಬೆಂಗಳೂರು, ಮೇ 29: ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಅಧಿಕಾರಿಗಳಿಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್​​ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ ನಡೆದಿದ್ದು, ಬಂದೋಬಸ್ತ್‌ಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆ, ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್​​ ಶಾಸಕಾಂಗ ಪಕ್ಷದ…

Read More

ಪ್ರಾಣಿ ಪ್ರಿಯರಿಗೆ ಗುಡ್​​ನ್ಯೂಸ್​​: ದಕ್ಷಿಣ ಆಫ್ರಿಕಾದ ಚೀತಾಗಳು ಬನ್ನೇರುಘಟ್ಟದಲ್ಲಿ ಜೂನ್ 4ರಿಂದ ವೀಕ್ಷಣೆಗೆ ಲಭ್ಯ

ಬೆಂಗಳೂರು, ಮೇ 29: ಪ್ರಾಣಿ ಪ್ರಿಯರಿಗೆ ಅರಣ್ಯ ಇಲಾಖೆ ಗುಡ್​​ನ್ಯೂಸ್​​ ನೀಡಿದ್ದು, ಕಳೆದ ತಿಂಗಳು ಬೆಂಗಳೂರಿಗೆ (Bengaluru) ತರಲಾಗಿದ್ದ ದಕ್ಷಿಣ ಆಫ್ರಿಕಾದ ನಾಲ್ಕು ಚೀತಾಗಳು ಜೂನ್ 4ರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿವೆ. ಚೀತಾಗಳು ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅವುಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ. ಚೀತಾಗಳ ಸಹಜ ಚುರುಕು ಚಲನವಲನಗಳಿಗೆ ಅನುಗುಣವಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ ಹೊಸ ಎನ್‌ಕ್ಲೋಸರ್‌ನಲ್ಲಿ ಅವುಗಳನ್ನು ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಾಂಶಗಳು ಅರಣ್ಯ ಇಲಾಖೆಯಿಂದ ಪ್ರಾಣಿ…

Read More

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ಸರ್ಕಾರ ತಂದಿದ್ದ ಕಾನೂನು ಎತ್ತಿ ಹಿಡಿದ ಸುಪ್ರೀಂ

ಸುಪ್ರಿಂಕೋರ್ಟ್, ಬಸವರಾಜ್ ಬೊಮ್ಮಾಯಿ ಬೆಂಗಳೂರು, (ಮೇ 29): ನನ್ನ ನೇತೃತ್ವದ ಬಿಜೆಪಿ ಸರ್ಕಾರದ (BJP Governmnet)  ಅವಧಿಯಲ್ಲಿ ಜಾರಿಗೆ ತಂದಿರುವ ಆನ್‌ಲೈನ್ ಗೇಮಿಂಗ್ (Online Gaming)  ನಿಷೇಧಿಸುವ ಕಾನೂನನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದ್ದು, ಆನ್‌ಲೈನ್ ಗೇಮಿಂಗ್ ತಡೆಯುವ ನಮ್ಮ ಉದ್ದೇಶಕ್ಕೆ ಜಯ ಸಿಕ್ಕಂತಾಗಿದ್ದು, ಸುಪ್ರೀಂ ಕೊರ್ಟ್‌ನ ಈ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj bommai) ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,…

Read More

ಸಿಕ್ಸರ್‌ಗಳ ಮಳೆಗರೆಯುವ ವೈಭವ್ ವಿರುದ್ಧ ಮೇಡನ್ ಓವರ್ ಎಸೆದ ಬೌಲರ್ ಯಾರು ಗೊತ್ತಾ?

2026 ರ ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಎಂಬ ಬಿರುಗಾಳಿಯನ್ನು ಕಟ್ಟಿಹಾಕುವುದೇ ಎದುರಾಳಿ ತಂಡದ ಬೌಲರ್​ಗಳ ದೊಡ್ಡ ಸವಾಲಾಗಿದೆ. ಪಂದ್ಯದಿಂದ ಪಂದ್ಯಕ್ಕೆ ಉಗ್ರರೂಪಿಯಾಗುತ್ತಿರುವ ವೈಭವ್ ಏಕಾಂಗಿಯಾಗಿ ನಿಂತು ತಂಡಕ್ಕೆ ಗೆಲುವು ತಂದುಕೊಡುತ್ತಿದ್ದಾರೆ. ಇದರ ಪರಿಣಾಮವಾಗಿಯೇ ರಾಜಸ್ಥಾನ್ ರಾಯಲ್ಸ್ ತಂಡ ಇಂದು ಕ್ವಾಲಿಫೈಯರ್ 2 ಆಡಲು ಸಿದ್ಧವಾಗಿದೆ. ಗುಜರಾತ್ ವಿರುದ್ಧದ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ಗೆದ್ದರೆ ನೇರವಾಗಿ ಫೈನಲ್​ ಆಡಲಿದೆ. ಅದು ಸಾಧ್ಯವಾಗಬೇಕಾದರೆ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸ್ಫೋಟಕ ಇನ್ನಿಂಗ್ಸ್ ಆಡಬೇಕಾಗುತ್ತದೆ. ಆದರೆ ಅದಕ್ಕೂ ಮುನ್ನ ಮೊದಲ ಎಸೆತದಿಂದಲೇ ಸಿಕ್ಸರ್​ಗಳ…

Read More

ವಿಪಕ್ಷ ಬಿಜೆಪಿಯ ಸಮೀಕರಣ ಬದಲಿಸಲಿದ್ಯಾ ಸಿದ್ದರಾಮಯ್ಯ ರಾಜೀನಾಮೆ?: ಹೀಗೊಂದು ಲೆಕ್ಕಾಚಾರ

ವಿಪಕ್ಷ ಬಿಜೆಪಿಯ ಸಮೀಕರಣ ಬದಲಿಸಲಿದ್ಯಾ ಸಿದ್ಧರಾಮಯ್ಯ ರಾಜೀನಾಮೆ?Image Credit source: PTI ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿರೋದು ರಾಜ್ಯ ರಾಜಕಾರಣದಲ್ಲಿ ಹತ್ತು ಹಲವು ಬದಲಾವಣೆಗಳಿಗೆ ನಾಂದಿ ಹಾಡಿದೆ. ನೂತನ ಮುಖ್ಯಮಂತ್ರಿಯ ಆಯ್ಕೆ, ಸಚಿವ ಸಂಪುಟ ಹೀಗೆ ನಾನಾ ಚರ್ಚೆಗಳಲ್ಲಿ ಕಾಂಗ್ರೆಸ್​​ ಹೈಕಮಾಂಡ್​​ ಇದ್ದರೆ ಇತ್ತ ಬಿಜೆಪಿ ಕೂಡ ತನ್ನದೇ ಆದ ತಂತ್ರ ಹೆಣೆಯಲು ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ರಾಜೀನಾಮೆ ರಾಜ್ಯ ಬಿಜೆಪಿಯಲ್ಲಿನ ರಾಜಕೀಯ ಲೆಕ್ಕಾಚಾರ ಬದಲು ಮಾಡುವ ಸಾಧ್ಯತೆ ಇದ್ದು,…

Read More

ನೋಟು ಹಾಳಾಗುವ ಭಯ ಬೇಡ; ಕಾಗದದ ಬದಲು ಪಾಲಿಮರ್ ನೋಟು ಮುದ್ರಿಸಲು ಸರ್ಕಾರದ ಆಲೋಚನೆ

ನವದೆಹಲಿ, ಮೇ 29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಪ್ರದಾಯಿಕ ಕಾಗದದ ನೋಟುಗಳ ಬದಲಿಗೆ ಪ್ಲಾಸ್ಟಿಕ್ ಅಥವಾ ಪಾಲಿಮರ್ ಬ್ಯಾಂಕ್‌ನೋಟುಗಳನ್ನು (Polymer Banknotes) ಪರಿಚಯಿಸಲು ಗಂಭೀರ ಚಿಂತನೆ ನಡೆಸಿದೆ. ನೋಟು ಮುದ್ರಣದ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ನಕಲಿ ನೋಟುಗಳ ಹಾವಳಿಗೆ ಬ್ರೇಕ್ ಹಾಕುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆರಂಭದಲ್ಲಿ ದೇಶದ ಐದು ಆಯ್ದ ನಗರಗಳಲ್ಲಿ (ವಿವಿಧ ಹವಾಮಾನ ವಲಯಗಳನ್ನು ಆಧರಿಸಿ) ₹10 ಮುಖಬೆಲೆಯ ಪಾಲಿಮರ್ ನೋಟುಗಳನ್ನು ಪ್ರಾಯೋಗಿಕವಾಗಿ (Pilot Project) ಚಲಾವಣೆಗೆ…

Read More

‘ಎತೊ ಕ ನಾಯ್’: ಜೆನ್ ಜಿ ಪ್ರೇಕ್ಷಕರಿಗಾಗಿ ಹೊಸ ಸಿನಿಮಾ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್’

‘ಕೆಜಿಎಫ್’, ‘ಸಲಾರ್’ ರೀತಿಯ ಕಮರ್ಷಿಯಲ್ ಬ್ಲಾಕ್‌ಬಸ್ಟರ್‌ಗಳು, ನಮ್ಮ ಮಣ್ಣಿನ ಸೊಗಡಿನ ‘ಕಾಂತಾರ’ ಹಾಗೂ ಭವ್ಯ ಅನಿಮೇಷನ್ ಲೋಕದ ‘ಮಹಾವತಾರ ನರಸಿಂಹ’ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ (Hombale Films) ಈಗ ಮತ್ತೊಂದು ವಿಭಿನ್ನ ಪ್ರಯೋಗಕ್ಕೆ ಕೈಹಾಕಿದೆ. ಸದಾ ಹೊಸತನಕ್ಕೆ ಒತ್ತು ನೀಡುವ ಈ ಸಂಸ್ಥೆ, ಇದೀಗ ಇಂದಿನ ಯುವ ಪೀಳಿಗೆ ಹಾಗೂ ‘ಜೆನ್ ಜಿ’ (Gen Z) ಪ್ರೇಕ್ಷಕರನ್ನು ಸೆಳೆಯಲು ಸಂಪೂರ್ಣ ಕಂಟೆಂಟ್ ಆಧಾರಿತ ಹಿಪ್-ಹಾಪ್…

Read More

‘ಧುರಂಧರ್’ ಯಶಸ್ಸು ಸಹಿಸದವರಿಂದ ರಣ್ವೀರ್ ಸಿಂಗ್ ವಿರುದ್ಧ ಪಿತೂರಿ’

‘ಡಾನ್ 3’ (Don 3) ಸಿನಿಮಾದ ಒಪ್ಪಂದ ಮುರಿದು ಚಿತ್ರದಿಂದ ಹೊರನಡೆದ ಕಾರಣ ನಟ ರಣವೀರ್ ಸಿಂಗ್ (Ranveer Singh) ವಿರುದ್ಧ ಅಸಹಕಾರವನ್ನು ಸಿನಿಮಾ ನೌಕರರ ಸಂಘ ಘೋಷಿಸಿದೆ. ರಣ್ವೀರ್ ಸಿಂಗ್ ಅವರು ಒಪ್ಪಂದ ಮುರಿದಿದ್ದು ಮಾತ್ರವಲ್ಲದೆ ಸಿನಿಮಾದ ಪ್ರೀ ಪ್ರೊಡಕ್ಷನ್​​ಗೆ ಆಗಿರುವ ಖರ್ಚನ್ನು ಕೊಡಲು ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಪಕ ಫರ್ಹಾನ್ ಅಖ್ತರ್ ಸಿನಿಮಾ ಒಕ್ಕೂಟಕ್ಕೆ ದೂರು ನೀಡಿದ್ದರು. ಈಗ ರಣ್ವೀರ್ ಸಿಂಗ್ ಮೇಲೆ ಹೇರಲಾಗಿರುವ ಅನಧಿಕೃತ ನಿಷೇಧದ ಬಗ್ಗೆ ಚಿತ್ರರಂಗಕ್ಕೆ ಸಂಬಂಧಿಸಿದವರು…

Read More