T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ – Kannada News | India Pakistan T20 World Cup 2026 Clash At Risk: Boycott Looms

2026ರ ಟಿ20 ವಿಶ್ವಕಪ್ (T20 World Cup 2026) ಇದೇ ಫೆಬ್ರವರಿ 9 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಹೈವೋಲ್ಟೇಜ್ ಕದನ ಫೆಬ್ರವರಿ 15 ರಂದು ಭಾರತ ಹಾಗೂ ಪಾಕಿಸ್ತಾನದ (India vs Pakistan) ನಡುವೆ ನಡೆಯಲಿದೆ. ಆದಾಗ್ಯೂ ಈ ಪಂದ್ಯ ನಡೆಯುವುದು ಅನುಮಾನ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವಂತೆ, ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡವನ್ನು ಕಣಕ್ಕಿಳಿಸದಿರಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಚಿಂತಿಸುತ್ತಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಮತ್ತು ಪ್ರಧಾನಿ ಶಹಬಾಜ್ ಷರೀಫ್ ನಡುವೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಭೆ ನಡೆಯಲಿದೆ. ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶವನ್ನು ಹೊರಗಿಟ್ಟಿದ್ದಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಸಮಾಧಾನಗೊಂಡಿದ್ದು, ಟೀಂ ಇಂಡಿಯಾ ವಿರುದ್ಧ ತನ್ನ ಪಂದ್ಯವನ್ನು ಬಹಿಷ್ಕರಿಸಲು ಪಿಸಿಬಿ ಯೋಚಿಸುತ್ತಿದೆ.

ಪಂದ್ಯ ರದ್ದಾದರೆ ಏನಾಗುತ್ತದೆ?

ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕೊ್ ಪಂದ್ಯ ರದ್ದಾದರೆ, ಅದು ಐಸಿಸಿಗೆ ಸಾಕಷ್ಟು ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ. ಟಿ20 ವಿಶ್ವಕಪ್ ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳ ಜೊತೆಗೆ, ಭಾರತ-ಪಾಕಿಸ್ತಾನ ಪಂದ್ಯವು ವಿಶ್ವದಲ್ಲೇ ಅತಿ ಹೆಚ್ಚು ರೇಟಿಂಗ್ ಪಡೆದ ಪಂದ್ಯವಾಗಿದೆ. ಹೀಗಾಗಿ ಒಂದು ವೇಳೆ ಪಾಕಿಸ್ತಾನ ಈ ಪಂದ್ಯದಿಂದ ಹಿಂದೆ ಸರಿದರೆ ಐಸಿಸಿ ಮತ್ತು ಪ್ರಸಾರಕರಿಗೆ ಗಮನಾರ್ಹ ನಷ್ಟಕ್ಕೆ ಕಾರಣವಾಗಬಹುದು. ಆದಾಗ್ಯೂ, ಇದು ಪಾಕಿಸ್ತಾನದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ, ಏಕೆಂದರೆ ಐಸಿಸಿ ಪಾಕ್ ತಂಡದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬಹುದು.

T20 World Cup 2026: ಪಾಕ್ ವಿಶ್ವಕಪ್‌ ತಂಡದಿಂದ 7 ಆಟಗಾರರು ಔಟ್

ಬಹಿಷ್ಕಾರಕ್ಕೆ ಮಾಜಿ ಆಟಗಾರರ ಒತ್ತಾಯ

ಬಾಂಗ್ಲಾದೇಶ ಟಿ20 ವಿಶ್ವಕಪ್‌ನಿಂದ ಹೊರಬಿದ್ದ ನಂತರ, ಪಾಕಿಸ್ತಾನದ ಮಾಜಿ ಆಟಗಾರರು ವಿಲಕ್ಷಣ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಾಜಿ ನಾಯಕ ರಶೀದ್ ಖಾನ್ ಅವರು ಪಾಕಿಸ್ತಾನ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ಅನ್ನು ಬಹಿಷ್ಕರಿಸಬೇಕೆಂದಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಆಡದಿರುವುದು ಭಾರತ ಮತ್ತು ಐಸಿಸಿಗೆ ಗಮನಾರ್ಹ ಹೊಡೆತವಾಗಲಿದೆ ಎಂಬುದು ಅವರ ಅಭಿಪ್ರಾಯವಾಗಿದೆ. ಪ್ರಸ್ತುತ ಭಾರತದ ವಿರುದ್ಧದ ಪಂದ್ಯವನ್ನು ಪಾಕ್ ತಂಡ ಬಹಿಷ್ಕರಿಸುವ ವರದಿಗಳು ಪಾಕಿಸ್ತಾನಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ಆದಾಗ್ಯೂ ಶಹಬಾಜ್ ಷರೀಫ್ ಮತ್ತು ಮೊಹ್ಸಿನ್ ನಖ್ವಿ ನಡುವಿನ ಸಭೆಯ ನಂತರ ಈ ಸುದ್ದಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಲಭ್ಯವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:54 pm, Mon, 26 January 26

Source link

CUSMA ನಿಯಮಗಳಿಗೆ ಬದ್ಧ; ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ಕೆನಡಾ ಹೇಳಿಕೆ – Kannada News | Canada clarifies that it is binded by CUSMA rules, says no trade deal with China

ನವದೆಹಲಿ, ಜನವರಿ 26: ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ಯೋಚನೆ ಇಲ್ಲ ಎಂದು ಕೆನಡಾ ಹೇಳಿದೆ. ಚೀನಾದೊಂದಿಗೆ ಕೆನಡಾ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಲ್ಲಿ, ಆ ದೇಶದ ಮೇಲೆ ಶೇ. 100 ಟ್ಯಾರಿಫ್ ಹಾಕುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೆನಡಾದಿಂದ ಈ ಸ್ಪಷ್ಟನೆ ಬಂದಿದೆ. ಕೆನಡಾ ಪ್ರಧಾನಿ ಮಾರ್ಕ್ ಕಾರ್ನೀ (Mark Carney) ಅವರು ಈ ಸ್ಪಷ್ಟನೆ ನೀಡಿದ್ದಾರೆ.

‘ಮುಂಚಿತವಾಗಿ ಸೂಚನೆ ಇಲ್ಲದೆ, ಮುಕ್ತ ಮಾರುಕಟ್ಟೆಯಲ್ಲದ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವಂತಿಲ್ಲ ಎನ್ನುವ CUSMA (Canada US Mexico Agreement) ನಿಯಮಗಳಿಗೆ ಬದ್ಧರಾಗಿದ್ದೇವೆ. ಚೀನಾ ಆಗಲೀ ಬೇರೆ ಇತರ ನಾನ್ ಮಾರ್ಕೆಟ್ ಎಕನಾಮಿಯ (Non-market economy) ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವ ಉದ್ದೇಶವೂ ಇಲ್ಲ’ ಎಂದು ಕೆನಡಾ ಪ್ರಧಾನಿ ಮಾರ್ಕ್ ಕಾರ್ನೀ ಹೇಳಿದ್ದಾರೆ.

ಇದನ್ನೂ ಓದಿ: ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ?

ಏನಿದು CUSMA ಒಪ್ಪಂದ?

ಇದು ಕೆನಡಾ, ಅಮೆರಿಕ ಮತ್ತು ಮೆಕ್ಸಿಕೋ ದೇಶಗಳ ಮಧ್ಯೆ ಇರುವ ಮುಕ್ತ ವ್ಯಾಪಾರ ಒಪ್ಪಂದವಾಗಿದೆ. ಮಾರುಕಟ್ಟೆ ನಿರ್ದೇಶಿತ ಆರ್ಥಿಕತೆ ಅಲ್ಲದ ಇತರ ದೇಶಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮುನ್ನ ತಮಗೆ ಮುಂಚಿತವಾಗಿ ತಿಳಿಸಬೇಕು ಈ ಮೂರೂ ದೇಶಗಳು ಪರಸ್ಪರ ನಿರ್ಬಂಧಗಳನ್ನು ಹಾಕಿಕೊಂಡಿವೆ. ಅಂದರೆ, ಚೀನಾ, ಉತ್ತರ ಕೊರಿಯಾ, ಇರಾನ್ ಇತ್ಯಾದಿ ಮುಕ್ತವಲ್ಲದ ಮಾರುಕಟ್ಟೆ ಇರುವ ದೇಶಗಳೊಂದಿಗೆ ಟ್ರೇಡ್ ಡೀಲ್ ಮಾಡಿಕೊಳ್ಳಲು ನಿರ್ಬಂಧಗಳಿವೆ.

‘ಅಮೆರಿಕ ಮತ್ತು ಮೆಕ್ಸಿಕೋ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿರುವ ನಿಯಮಗಳಿಗೆ ಕೆನಡಾ ಬದ್ಧವಾಗಿಯೇ ಇದೆ. ಕಳೆದ ಒಂದೆರಡು ವರ್ಷದಲ್ಲಿ ಚೀನಾದೊಂದಿಗೆ ಉದ್ಭವಿಸಿದ ಕೆಲ ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡಿದ್ದೇವಷ್ಟೇ’ ಎಂದು ಕೆನಡಾ ಪ್ರಧಾನಿಗಳು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆ್ಯಪಲ್​ನಂತಹ ಮೊಬೈಲ್ ಕಂಪನಿ ಸದ್ಯದಲ್ಲೇ ಶುರುವಾಗುತ್ತಾ? ಡಾವೊಸ್​ನಲ್ಲಿ ಸುಳಿವು ಕೊಟ್ಟ ಸಚಿವರು

ಕೆನಡಾವನ್ನು ಚೀನಾ ನುಂಗಿ ನೀರು ಕುಡಿಯುತ್ತೆ ಎಂದ ಟ್ರಂಪ್

ಚೀನಾದೊಂದಿಗೆ ಕೆನಡಾ ನಡೆಸುತ್ತಿದೆ ಎನ್ನಲಾದ ಮಾತುಕತೆಗಳ ವಿಚಾರದಲ್ಲಿ ಅಮೆರಿಕ ಕೆಂಗಣ್ಣು ಬೀರಿದೆ. ಚೀನಾದೊಂದಿಗೆ ಒಪ್ಪಂದ ಮಾಡಿಕೊಂಡರೆ ಕೆನಡಾ ಕಥೆ ಮುಗಿಯುತ್ತದೆ. ಅದು ವ್ಯವಸ್ಥಿತವಾಗಿ ಸ್ವನಾಶ ಮಾಡಿಕೊಳ್ಳುತ್ತಿದೆ ಎಂದು ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ಪೋಸ್​ಟ್​ಗಲ್ಲಿ ತಿಳಿಸಿದ್ದಾರೆ.

‘ಕೆನಡಾವನ್ನು ಚೀನಾ ಜೀವಂತವಾಗಿ ತಿಂದು ಪೂರ್ಣ ನುಂಗಿ ಹಾಕುತ್ತದೆ. ಅದರ ವ್ಯವಹಾರಗಳು, ಸಾಮಾಜಿಕ ವ್ಯವಸ್ಥೆ, ಜನಜೀವನ ಎಲ್ಲವನ್ನೂ ನಾಶ ಮಾಡುತ್ತದೆ. ಒಂದು ಕಾಲದಲ್ಲಿ ಶ್ರೇಷ್ಠ ದೇಶವೆನಿಸಿದ್ದ ಕೆನಡಾವನ್ನು ಚೀನಾ ಪೂರ್ಣವಾಗಿ ಸ್ವಾಹ ಮಾಡುತ್ತಿರುವುದನ್ನು ನೋಡಲು ಕಷ್ಟವೆನಿಸುತ್ತಿದೆ’ ಎಂದು ಅಮೆರಿಕ ಅಧ್ಯಕ್ಷರು ವ್ಯಾಕುಲತೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಉಳಿದೆರಡು ಪಂದ್ಯಗಳಿಂದಲೂ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಔಟ್

Source link

Video: ಜೀವನವನ್ನು ಆನಂದಿಸಲು ಬೆಂಗಳೂರನ್ನು ಹೀಗೆ ಬಳಸಿಕೊಳ್ಳಿ ಎಂದ ಮಹಿಳೆ – Kannada News | Bengaluru: Lucknow woman says Bengaluru not just for work, but to get what you wants

ಬೆಂಗಳೂರು, ಜನವರಿ 26: ಬೆಂಗಳೂರು (Bengaluru) ಅಂದರೆ ಯುವಕ ಯುವತಿಯರಿಗೆ ಅದೇನೋ ಸೆಳೆತ, ಹೀಗಾಗಿ ಅದೆಷ್ಟೋ ಯುವ ಮನಸ್ಸುಗಳನ್ನು ಕೈ ಬೀಸಿ ತನ್ನತ್ತ ಕರೆಯುವ ತಾಕತ್ತು ಈ ನಗರಕ್ಕಿದೆ. ಆದರೆ ಪ್ರಾರಂಭದಲ್ಲಿ ಈ ನಗರದ ವಾತಾವರಣಕ್ಕೆ, ಇಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳುವುದು ಎಷ್ಟೋ ಜನರಿಗೆ ಕಷ್ಟವಾಗುವುದಿದೆ. ಲಕ್ನೋದ ಮಹಿಳೆಯೊಬ್ಬರು (Lucknow woman) ಈಗ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇಲ್ಲಿನ ಜೀವನದ ಬಗ್ಗೆ ಚಿಂತನಶೀಲ ಪೋಸ್ಟ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ.  ಕೆಲಸದ ಜತೆ ಜತೆಗೆ ಈ ನಗರದಲ್ಲಿ ಈ ರೀತಿ ಬದುಕಿ ಎಂದು ಸಲಹೆ ನೀಡಿದ್ದಾರೆ.

ಜ್ಯೋತ್ಸ್ನಾ ಗುಪ್ತಾ (Jyotsna Gupta) ಬೆಂಗಳೂರು ವೃತ್ತಿಪರ ಅವಕಾಶಗಳಿಗಿಂತ ಹೆಚ್ಚಿನದನ್ನು ಹೇಗೆ ನೀಡುತ್ತದೆ ಎಂಬುವುದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಿಮಗೆ ನೀಡಲು ತುಂಬಾ ಇದೆ. ಈ ನಗರವನ್ನು ಸರಿಯಾಗಿ ಬಳಸಿಕೊಳ್ಳದ ಅನೇಕ ಜನರನ್ನು ನಾನು ನೋಡುತ್ತೇನೆ. ಜನರ ಸಂಪರ್ಕಗಳು, ಭೇಟಿಗಳು, ತಂತ್ರಜ್ಞಾನದಿಂದ ಹವ್ಯಾಸಗಳವರೆಗೆ, ಕ್ರೀಡೆ, ನೃತ್ಯ, ಬೈಕಿಂಗ್, ಓಟ ಎಲ್ಲವೂ ಇದೆ. ಬೆಂಗಳೂರು ಕೇವಲ ಹಠಮಾರಿ ಸ್ಥಳವಲ್ಲ. ನೀವು ಬಯಸಿದ್ದನ್ನು ಪಡೆಯಲು ಹೆದರುತ್ತಿದ್ದರೆ ಈ ಸ್ಥಳವು ಅಂತಹ ಜೀವನವನ್ನು ನಡೆಸಲು ಉತ್ತಮ ಸ್ಥಳವಾಗಿದೆ. ಈ ನಗರವನ್ನು ಕೆಲಸಕ್ಕಾಗಿ ಮಾತ್ರವಲ್ಲ, ಜೀವನವನ್ನು ನಿಜವಾಗಿಯೂ ಆನಂದಿಸಲು ಬಳಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಬೆಂಗಳೂರಿನ ಈ ಏರಿಯಾದಲ್ಲಿ 2BHK ಮನೆ ಬಾಡಿಗೆ 70 ಸಾವಿರ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್

ಜನವರಿ 25 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಮೂವತ್ತೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಿಮ್ಮ ಮಾತನ್ನು ಒಪ್ಪುತ್ತೇನೆ ಎಂದಿದ್ದಾರೆ. ಮತ್ತೊಬ್ಬರು, ಒಮ್ಮೆ ನೀವು ನಗರದಿಂದ ಹೊರಬಂದರೆ ನೀವು ಇದೆಲ್ಲವನ್ನೂ ಕಳೆದುಕೊಳ್ಳುತ್ತೀರಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಇಡೀ ದೇಶದ ಬೇರೆ ಯಾವುದೇ ನಗರವು ಬೆಂಗಳೂರು ನೀಡುವ ಕಾಸ್ಮೋಪಾಲಿಟನ್ ವೈಬ್‌ಗಳಿಗೆ ಹತ್ತಿರ ಬರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:26 pm, Mon, 26 January 26

Source link

Kolar: ಬಂಗಾರದ ನಗರಿಯ ಫಲಪುಷ್ಪ ಪ್ರದರ್ಶನಕ್ಕೆ ಮಾರುಹೋದ ಜನ: ಇಲ್ಲಿವೆ ಸುಂದರ ಚಿತ್ರಗಳು – Kannada News | Kolar Flower Show: Various Artworks Steal the Spotlight

ಕೋಲಾರ ತೋಟಗಾರಿಕೆ ಮತ್ತು ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಮೂರು ದಿನಗಳ ಫಲಪುಷ್ಪ ಪ್ರದರ್ಶನ, ಸಿರಿಧಾನ್ಯ ಮತ್ತು ಸಾವಯವ ಮೇಳ ನೋಡುಗರನ್ನು ಪುಳಕಗೊಳಿಸಿದೆ. ಹೂವು ಮತ್ತು ಹಣ್ಣುಗಳಲ್ಲಿ ಅರಳಿದ ಸುಂದರ ಕಲಾಕೃತಿಗಳು ಮನಸೂರೆಗೊಂಡಿದ್ದು, ಕಲ್ಲಂಗಡಿಯಲ್ಲಿ ಮೂಡಿದ ವಿವಿಧ ಸೆಲೆಬ್ರಿಟಿಗಳ ಚಿತ್ರಗಳು ನೋಡುಗರನ್ನು ವಿಶೇಷವಾಗಿ ಆಕರ್ಷಿಸಿವೆ.

ಹೂವಿನಲ್ಲಿ ನಿರ್ಮಾಣ ಮಾಡಿರುವ ಹಸು-ಕರು ಶಿಲ್ಪ, ಸಾಲುಮರದ ತಿಮ್ಮಕ್ಕ ಅವರ ಮರಳು ಶಿಲ್ಪ, ರಂಗೋಲಿಯಲ್ಲಿ ಅರಳಿರುವ ಗಣ್ಯರ ಚಿತ್ರಗಳು ನೋಡುಗರ ಕಣ್ಮನ ಸೆಳೆದಿವೆ. ಇತ್ತೀಚೆಗೆ ಬಿಗ್ ಬಾಸ್​​ನಲ್ಲಿ ಗೆಲುವು ಸಾಧಿಸಿದ ಗಿಲ್ಲಿನಟ, ಕ್ರಿಕೆಟ್ ತಾರೆಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಕಲಾಕೃತಿಗಳಿಗೆ ಸಾರ್ವಜನಿಕರು ಫಿದಾ ಆಗಿದ್ದಾರೆ.

ಮೂರು ದಿನ ನಡೆಯುತ್ತಿರುವ ಈ ಫಲಪುಷ್ಪ ಪ್ರದರ್ಶನವನ್ನು ಎಲ್ಲ ವಯೋಮಾನದವರ ಅಭಿರುಚಿಗೆ ಅನುಗುಣವಾಗಿ ಆಯೋಜಿಸಲಾಗಿದೆ. ರೈತರಿಗೆ ರೇಷ್ಮೆ ಕೃಷಿ, ಸಾವಯವ ಕೃಷಿ, ಮೀನು ಕೃಷಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುವ ಮಾಹಿತಿಯನ್ನೂ ಇಲ್ಲಿ ನೀಡಲಾಗ್ತಿದೆ. ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ತಿಳಿಸುವ ವಿವಿಧ ಫೋಟೋಗಳನ್ನು ಒಂದೇ ಸೂರಿನಡಿ ಇಡಲಾಗಿದೆ.

ಇನ್ನು ಮಹಿಳೆಯರು ಮತ್ತು ಯುವತಿಯರಿಗೆ ಹೆಚ್ಚು ಇಷ್ಟವಾಗುವ ಹೂವು ಹಾಗೂ ತೆಂಗಿನ ಗರಿಗಳಿಂದ ಮಾಡಲಾದ ವಿವಿಧ ಕಲಾಕೃತಿಗಳನ್ನು ಇಲ್ಲಿ ನೋಡಬಹುದಾಗಿದೆ. ವಿಶೇಷವಾಗಿ ಬಗೆ ಬಗೆಯ ಬಣ್ಣದ ಹೂಗಳು ನೋಡುಗರನ್ನು ಆಕರ್ಷಿಸುತ್ತಿದ್ದು, ಅಪರೂಪದ ಹಣ್ಣುಗಳು ಕೂಡ ಸಾರ್ವಜನಿಕರ ಕುತೂಹಲ ಹೆಚ್ಚಿಸಲಿವೆ.

ತೋಟಗಾರಿಕಾ ಇಲಾಖೆಯ ಈ ಅದ್ಬುತವಾದ ಫಲಪುಷ್ಟ ಪ್ರದರ್ಶನ ನಿಜಕ್ಕೂ ಜಿಲ್ಲೆಯ ಜನರಿಗೆ ಮೂರು ದಿನಗಳ ಕಾಲ ಭರಪೂರ ಮನೋರಂಜನೆ ಜೊತೆಗೆ ಮಾಹಿತಿ ನೀಡುವ ಕೆಲಸವನ್ನೂ ಮಾಡುತ್ತಿದೆ. ಅಪರೂಪದ ಹೂ, ಹಣ್ಣುಗಳನ್ನು ಕಣ್ತುಂಬಿಕೊಳ್ಳಲು ಅವಕಾಶ ಒದಗಿಸಿರುವ ಇಲಾಖೆಯ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆಯೂ ಕೇಳಿಬಂದಿದೆ.

Published On – 4:19 pm, Mon, 26 January 26

Source link

ಇರಾನ್ ಮೇಲೆ ಅಮೆರಿಕದ ದಾಳಿಯ ಭೀತಿ; ಭೂಗತ ಸ್ಥಳಕ್ಕೆ ಖಮೇನಿ ಶಿಫ್ಟ್ – Kannada News | Iran’s Supreme Leader Khamenei moves to underground bunker Amid Fears Of Potential US Attack threat

ಟೆಹ್ರಾನ್, ಜನವರಿ 26: ಟೆಹ್ರಾನ್‌ನಲ್ಲಿ ಕೆಲವು ವಾರಗಳಿಂದ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗಿವೆ. ಇದರಿಂದ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಇಸ್ಲಾಮಿಕ್ ಆಡಳಿತದ ಹಿಂಸಾತ್ಮಕ ಕ್ರಮಗಳ ನಡುವೆ ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಉಂಟಾಗುವ ಭೀತಿ ಎದುರಾಗಿದೆ. ಇದರ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Khamenei) ಟೆಹ್ರಾನ್‌ನ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೆರಿಕ ಇರಾನ್ ಮೇಲೆ ದಾಳಿ ನಡೆಸುವ ಅಪಾಯವಿದೆ ಎಂಬ ಸೂಚನೆ ಲಭ್ಯವಾಗುತ್ತಿದ್ದಂತೆ ಖಮೇನಿ ರಹಸ್ಯವಾದ ಸ್ಥಳಕ್ಕೆ ಶಿಫ್ಟ್ ಆಗಿದ್ದಾರೆ. ಈ ರಹಸ್ಯವಾದ ಸ್ಥಳ ಕೋಟೆಯನ್ನು ಒಳಗೊಂಡಿದ್ದು, ಸುರಂಗ ಮಾರ್ಗಗಳೂ ಇವೆ ಎನ್ನಲಾಗಿದೆ.

ದಿ ಟೈಮ್ಸ್ ಆಫ್ ಇಸ್ರೇಲ್, ಇರಾನ್ ಇಂಟರ್ನ್ಯಾಷನಲ್ ಪ್ರಕಟಿಸಿದ ವರದಿಯ ಪ್ರಕಾರ, ಟೆಹ್ರಾನ್ ಮೇಲೆ ಅಮೆರಿಕದ ದಾಳಿಯ ಅಪಾಯ ಹೆಚ್ಚಾಗಿದೆ ಎಂದು ಇರಾನ್ ಹಿರಿಯ ಅಧಿಕಾರಿಗಳು ನಿರ್ಣಯಿಸಿದ ನಂತರ ಖಮೇನಿ ಭೂಗತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ. ಖಮೇನಿ ಇರುವ ಬಂಕರ್ ಇರಾನ್​ನ ಸರ್ವೋಚ್ಚ ನಾಯಕನ ಭದ್ರತೆಗಾಗಿ ವಿನ್ಯಾಸಗೊಳಿಸಲಾದ ಸುರಂಗ ಮಾರ್ಗಗಳ ವ್ಯವಸ್ಥೆಯನ್ನು ಹೊಂದಿದೆ ಎಂದು ವರದಿಯಾಗಿದೆ. ಆದರೆ, ಇರಾನ್​ನ ಅಧಿಕಾರಿಗಳು ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಇದನ್ನೂ ಓದಿ: ಇರಾನ್ ಹಿಂದೆ ಸರಿಯುವುದಿಲ್ಲ, ಟ್ರಂಪ್ ಪದಚ್ಯುತಿ ಖಚಿತ; ಸುಪ್ರೀಂ ನಾಯಕ ಖಮೇನಿ ಪ್ರತಿಜ್ಞೆ

ಖಮೇನಿ ತಲೆಮರೆಸಿಕೊಂಡಿದ್ದರೂ ಅವರ ಮೂರನೇ ಮಗ ಮಸೌದ್ ಖಮೇನಿ ತನ್ನ ತಂದೆಯ ಕಚೇರಿಯಲ್ಲಿ ದೈನಂದಿನ ಕಾರ್ಯಾಚರಣೆಗಳನ್ನು ವಹಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಪ್ರತಿಭಟನಾಕಾರರ ಮೇಲಿನ ಹಿಂಸಾತ್ಮಕ ದಮನದ ಬಗ್ಗೆ ಇರಾನ್‌ನ ಹಿರಿಯ ನಾಯಕತ್ವದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇರಾನ್​​ನಲ್ಲಿ ಯುದ್ಧದ ಭೀತಿ ಎದುರಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

400 ಕೋಟಿ ರೂ. ಕಳ್ಳತನ ಪ್ರಕರಣದ ಬಿಗ್ ಅಪ್​ಡೇಟ್: ಅಸಲಿಗೆ ದರೋಡೆ ಹೇಗಾಯ್ತು? ಯಾರಿಗೆ ಯಾವ ಜವಾಬ್ದಾರಿ? – Kannada News | Gujarat politician Link to Belagavi Rs 400 crore Robbery: here Is How to theft money

ಬೆಳಗಾವಿ, ಜನವರಿ 26): ಒಂದಲ್ಲ ಎರಡಲ್ಲ ಬೆಳಗಾವಿಯಲ್ಲಿ (Belagavi) ದರೋಡೆಯಾಗಿದ್ದು ಬರೋಬ್ಬರಿ 400 ಕೋಟಿ ರೂಪಾಯಿ ( Rs 400 Crore Robbery Case). ಈ ದರೋಡೆಯ ರಹಸ್ಯ ಬಟಾಬಯಲಾಗಿದ್ದು,  ಇದು ಸಿನಿಮಾ ಕಥೆಯನ್ನೂ ಮೀರಿಸುವಂತಿದೆ. ದರೋಡೆ ಆಗಿದೆ ಎಂದು ಯಾರು ಬಂದು ದೂರು ಕೊಡಲಿಲ್ಲ. ಅಯ್ಯಯ್ಯೋ ನನ್ನ ಕೋಟ್ಯಾಂತರ ರೂಪಾಯಿ ಹೋಯ್ತು ಎಂದು ಯಾರು ಬಾಯಿ ಬಡೆದುಕೊಳ್ಳಲಿಲ್ಲ.  ಪ್ರಕರಣವನ್ನ ಬಯಲು ಮಾಡಿದ್ದ ಸಂದೀಪ್, ಹಣ ಕಿಶೋರ್ ಸೇಠ್​ಗೆ ಸೇರಿದ್ದು, ಇದರಲ್ಲಿ ವಿರಾಟ್ ಗಾಂಧಿ ಎನ್ನುವರ ಕೈವಾಡವೂ ಇದೆ ಎಂದಿದ್ದ. ಆದ್ರೆ, ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಇಬ್ಬರ ಹೆಸರಿನ ಜೊತೆಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ

ಅಕ್ಟೋಬರ್ 22ರಂದು ಮಹಾರಾಷ್ಟ್ರದ ಸಂದೀಪ್ ಪಾಟೀಲ್ ಎಂಬಾತನನ್ನ ಉದ್ಯಮಿ ಕಿಶೋರ್ ಸೇಠ್ ಮತ್ತವನ ಕಡೆಯವರು ಅಪಹರಿಸಿರುತ್ತಾರೆ. ಹೀಗೆ ಹೊತ್ತೊಯ್ದವನಿಗೆ ಚಿತ್ರಹಿಂಸೆ ಕೊಟ್ಟವರೇ ದರೋಡೆ ಬಗ್ಗೆ ಪ್ರಶ್ನೆ ಕೇಳೋದಕ್ಕೆ ಶುರುಮಾಡ್ತಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ 2 ಕಂಟೇನರ್​ನಲ್ಲಿ ಹಣ ಹೋಗ್ತಿತ್ತು. ಈ 400 ಕೋಟಿ ಹಣವನ್ನ ಬೆಳಗಾವಿಯ ಚೋರ್ಲಾ ಘಾಟ್ ಬಳಿ ದರೋಡೆ ಮಾಡಲಾಗಿದೆ. ಇದರಲ್ಲಿ ನೀನು ಕೂಡ ಇದಿಯಾ. ಹಣ ಎಲ್ಲೊಯ್ತು ಎಂದು ಒಂದೇ ಸಮನೇ ಕೇಳೋದಕ್ಕೆ ಶುರುಮಾಡ್ತಾರೆ. ಆಗ್ಲೇ ನೋಡಿ ದರೋಡೆಯಾದ ವಿಚಾರ, ದರೋಡೆ ಮಾಡಿದವರಿಗೆ, ಹಣ ಕೊಟ್ಟವರಿಗೆ ಬಿಟ್ಟು ಮೂರನೇ ವ್ಯಕ್ತಿ ಕಿವಿಗೆ ಬಿದ್ದಿದ್ದು.

ಇದನ್ನೋ ನೋಡಿ: ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಸ್ಫೋಟಕ ಮಾಹಿತಿ ಬಯಲಿಗೆ

ಗುಜರಾತ್​ನ ದೊಡ್ಡ ರಾಜಕಾರಣಿ ಕೈವಾಡ

ಪ್ರಕರಣವನ್ನ ಬಯಲು ಮಾಡಿದ್ದ ಸಂದೀಪ್, ಹಣ ಕಿಶೋರ್ ಸೇಠ್​ಗೆ ಸೇರಿದ್ದು, ಇದರಲ್ಲಿ ವಿರಾಟ್ ಗಾಂಧಿ ಎನ್ನುವರ ಕೈವಾಡವೂ ಇದೆ ಎಂದಿದ್ದ. ಆದ್ರೆ, ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಇಬ್ಬರ ಹೆಸರಿನ ಜೊತೆಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ. ಉದ್ಯಮಿ ಕಿಶೋರ್ ಹಾಗೂ ಮತ್ತಿವನ ಸ್ನೇಹಿತ ಜಯೇಶ್ ನಡುವಿನ ಸಂಭಾಷಣೆಯೊಂದು ವೈರಲ್ ಆಗಿದೆ. ಈ ಆಡಿಯೋದ ಪ್ರಕಾರ, ಬರೋಬ್ಬರಿ 400 ಕೋಟಿ ಹಣ ಗುಜರಾತ್​​ನ ರಾಜಕಾರಣಿಗೆ ಸೇರಿದ್ದು ಎನ್ನಲಾಗಿದೆ. ಆಡಿಯೋದಲ್ಲಿ ಹೇಳೋ ರೀತಿ ನೋಡಿದ್ರೆ, ದರೋಡೆಯಾದ ಹಣದಲ್ಲಿ ಗುಜರಾತ್​ನ ರಾಜಕಾರಣಿಯದ್ದು ಬಹುಪಾಲಿದೆ. ಹಾಗಂತ ಕಿಶೋರ್​ನ ಹಣ ಇಲ್ಲ ಅಂತಲ್ಲ. ಇವರ ಪಾಲು ಕೂಡ ಇದೆ. ಹೀಗಾಗಿ ತಿರುಪತಿಯಲ್ಲಿ ದರೋಡೆಯಾದ 2 ಸಾವಿರ ಮುಖಬೆಲೆಯ ಹಳೇ ನೋಟುಗಳನ್ನ ಎಕ್ಸ್​ಚೇಂಜ್ ಆಗಿತ್ತು. ಇದರ ಮಧ್ಯಸ್ಥಿಕೆಯನ್ನ ಕಿಶೋರ್ ವಹಿಸಿಕೊಂಡಿದ್ದ.

400 ಕೋಟಿ ದರೋಡೆ ಆಗಿದ್ಹೇಗೆ?

ಇನ್ನು ಅಸಲಿಗೆ ದರೋಡೆ ಹೇಗಾಯ್ತು? ಯಾರಿಗೆ ಯಾವ ಜವಾಬ್ದಾರಿಯನ್ನ ಕೊಡಲಾಗಿತ್ತು ಅನ್ನೋದನ್ನ ನೋಡೋದಾದ್ರೆ, ಮಧ್ಯವರ್ತಿಯಾಗಿ ಕೆಲಸ ಮಾಡ್ತಿದ್ದ ಕಿಶೋರ್, ಗುಜರಾತ್​​ ರಾಜಕಾರಣಿಯ ಹಣ ಬದಲಾಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದ. ಹೀಗಾಗಿ 400 ಕೋಟಿ ಸಾಗಾಟ ಮಾಡೋ ಕೆಲಸವನ್ನ ಸ್ನೇಹಿತ ವಿರಾಟ್​ಗೆ ಕೊಟ್ಟಿದ್ದ. ವಿರಾಟ್ ತನ್ನ ಹುಡುಗರಿಗೆ ಹಣ ಸಾಗಾಟ ಜವಾಬ್ದಾರಿ ನೀಡಿದ್ದ. ಹೀಗಾಗಿ ಈ ಹುಡುಗರು ಎರಡು ಕಂಟೇನರ್​ಗಳಲ್ಲಿ ಹಣ ತೆಗೆದುಕೊಂಡು ಹೋಗಿದ್ರು. ನೋಟು ಎಕ್ಸ್​ಚೇಂಜ್ ಮಾಡೋಕೆ ಗೋವಾದಿಂದ ಸಾಗಾಟ ಮಾಡ್ತಿದ್ರು. ನೆಟ್​ವರ್ಕ್ ಸಿಗದ ಚೋರ್ಲಾ ಘಾಟ್​​ನಲ್ಲಿ ಕಂಟೇನರ್ ಮಿಸ್ ಆಗಿತ್ತು. ಬರೀ ಕಂಟೇನರ್ ಅಷ್ಟೇ ಅಲ್ಲ. ವಿರಾಟ್ ಹುಡುಗರು ಕೂಡ ನಾಪತ್ತೆ ಆಗಿದ್ದಾರೆ. ಸದ್ಯ ಮಹಾರಾಷ್ಟ್ರ ಪೊಲೀಸರು ವಿರಾಟ್​ನನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರ ಎಸ್​ಐಟಿ ಅಧಿಕಾರಿಗಳು ಪ್ರಕರಣವನ್ನ ಕೆದಕುತ್ತಿದ್ದಾರೆ. ಈ ತನಿಖೆಯ ಗುಜರಾತ್​ನ ರಾಜಕಾರಣಿ ಯಾರು? ಇಷ್ಟು ಹಣವನ್ನ ಯಾಕೆ ಎಕ್ಸ್​​ಚೇಂಜ್ ಮಾಡುತ್ತಿದ್ದರು? ತಿರುಪತಿಯಲ್ಲಿ ಹಳೇ ನೋಟುಗಳಿಗೆ ಬದಲಾಗಿ ಯಾರು ನೋಟು ಕೊಡುತ್ತಾರೆ?ಇದು ಬರೀ 4 ಜನರ ನಡುವಿನ ವ್ಯವಹಾರನಾ? ಅಥವಾ ಇದರ ಹಿಂದೆ ದೊಡ್ಡ ಜಾಲವೇ ಇದ್ಯಾ ಎನ್ನುವುದು ಬಯಲಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು – Kannada News | Train Hits BMTC Bus In Sadaramangala Railway Parallel Road at Bengaluru

ಬೆಂಗಳೂರು, (ಜನವರಿ 26): ಬಿಎಂಟಿಸಿ ಬಸ್​​​ಗೆ  (BMTC Bus)ರೈಲು ನಡುವೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ (Bengaluru) ಸಾದರಮಂಗಲ ಬಳಿ ನಡೆದಿದೆ. ರೈಲ್ವೆ ಪ್ಯಾರ್ಲಲ್ ರೋಡ್​ನಲ್ಲಿ ರಿವರ್ಸ್ ತೆಗೆದುಕೊಳ್ಳುವಾಗ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬಸ್​ನಲ್ಲಿ ಪ್ರಯಾಣಿಕರು ಇರಲಿಲ್ಲ. ಇದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಇಂದು (ಜನವರಿ 26) ಬೆಳಗ್ಗೆ ಸಾದರಮಂಗಲ ಡಿಪೋ 51ರ KA57 F6000 ನಂಬರ್​ನ ಬಸ್​ ಕಾಡುಗೋಡಿ ಬಸ್ ಸ್ಟ್ಯಾಂಡ್ ಹೋಗಬೇಕೆಂದು ಚಾಲಕ ರಿವರ್ಸ್ ತೆಗೆದುಕೊಳ್ಳಲು ರೈಲ್ವೆ ಪ್ಯಾರ್ಲಲ್ ರೋಡ್ ನುಗ್ಗಿಸಿದ್ದಾನೆ. ಪರಿಣಾಮ ಏಕಾಏಕಿ ರೈಲು ಬಂದು ಗುದ್ದಿದ್ದು, ಬಸ್​ ಹಿಂಭಾಗ ಜಖಂ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಗಂಭೀರ ಆರೋಪ – Kannada News | Bengaluru Woman Found Dead: Parents Allege Dowry Harassment by Husband

ಬೆಂಗಳೂರು, ಜನವರಿ 26: 2 ವರ್ಷಗಳ ಹಿಂದೆ ಮದುವೆ ಆಗಿದ್ದ ಮಹಿಳೆಯೋರ್ವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕೀರ್ತಿ ಮೃತ ಮಹಿಳೆಯಾಗಿದ್ದು, ವರದಕ್ಷಿಣೆ ಕಿರುಕುಳಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ. ಕಳೆದ 2 ತಿಂಗಳಿಂದ ಕಿರುಕುಳದ ಬಗ್ಗೆ ತಾಯಿ ಬಳಿ ಕೀರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತಲೆ ತಿರುಗಿ ಬಿದ್ದಿದ್ದಳು ಆಸ್ಪತ್ರೆಗೆ ಸೇರಿಸಿದ್ದೇವೆ ಎಂದು ಪತ್ನಿ ಪೋಷಕರಿಗೆ ಪತಿ ಗುರುಪ್ರಸಾದ್​​ ಮಾಹಿತಿ ನೀಡಿದ್ದ ಎನ್ನಲಾಗಿದ್ದು, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್​ಐಆರ್​ ದಾಖಲಾಗಿದೆ.  2023ರ ನವೆಂಬರ್​ನಲ್ಲಿ ಕೀರ್ತಿ, ಗುರುಪ್ರಸಾದ್​ ಮದುವೆ ಆಗಿತ್ತು. ಸುಮಾರು 30-35 ಲಕ್ಷ ಖರ್ಚು ಮಾಡಿ ಮದುವೆ ಮಾಡಿದ್ದರೂ, 2025ರ ಡಿಸೆಂಬರ್​ನಲ್ಲಿ ಮತ್ತೆ 10 ಲಕ್ಷ ಹಣವನ್ನು ಗುರುಪ್ರಸಾದ್ ಕೇಳಿದ್ದ. ಮನೆ ಕಟ್ಟಿಸುವುದಕ್ಕೆ ಹಣ ಕೊಡಿ ಎಂದಿದ್ದರಿಂದ ಕೀರ್ತಿ ಪೋಷಕರು 8 ಲಕ್ಷ ನೀಡಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

“ಮದರ್ ಆಫ್ ಆಲ್ ಟ್ರೇಡ್ ಡೀಲ್ಸ್”: ಈ ಒಪ್ಪಂದದಿಂದ ಅಗ್ಗವಾಗಲಿದೆ ಈ ವಸ್ತುಗಳ ಬೆಲೆ – Kannada News | India EU FTA: Cheaper Luxury Cars, Exports Boost and Global Stability in Fractured World.

EU ಮುಖ್ಯಸ್ಥೆ ಉರ್ಸುಲಾ ವಾನ್ ಡೆರ್ ಲೇಯೆನ್

ದೆಹಲಿ, ಜ.26: 77ನೇ ಗಣರಾಜ್ಯೋತ್ಸವದ (2026) ಮುಖ್ಯ ಅತಿಥಿಯಾಗಿ ಭಾಗವಹಿಸಿರುವ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ನೀಡಿರುವ ಹೇಳಿಕೆ ಇದೀಗ ಭಾರೀ ಚರ್ಚೆಯಲ್ಲಿದೆ. ಯಶಸ್ವಿ ಭಾರತವು ಜಗತ್ತನ್ನು ಹೆಚ್ಚು ಸ್ಥಿರ, ಸಮೃದ್ಧ ಮತ್ತು ಸುರಕ್ಷಿತವಾಗಿಸುತ್ತದೆ. ಪ್ರಸ್ತುತ ಜಗತ್ತು ಸಂಘರ್ಷಗಳಿಂದ ಹರಿದುಹಂಚಿಹೋಗಿರುವಾಗ (Fractured World), ಭಾರತ ಮತ್ತು ಯುರೋಪ್‌ ದೇಶಗಳು ‘ಸಂವಾದ ಮತ್ತು ಮುಕ್ತತೆ’ಯ ಮೂಲಕ ಹೊಸ ಹಾದಿಯನ್ನು ತೋರಿಸುತ್ತಿವೆ ಎಂದು ಅವರು ಶ್ಲಾಘಿಸಿದ್ದಾರೆ. 77ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿರುವುದು “ಜೀವಮಾನದ ಗೌರವ” ಎಂದು ಹೇಳಿದರು. ಮಂಗಳವಾರ ನಿಗದಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ನಡುವೆ ಸುಮಾರು 18 ವರ್ಷಗಳಿಂದ ನಡೆಯುತ್ತಿರುವ ಮುಕ್ತ ವ್ಯಾಪಾರ ಒಪ್ಪಂದಕ್ಕೆ “ಮದರ್ ಆಫ್ ಆಲ್ ಟ್ರೇಡ್ ಡೀಲ್ಸ್” ಎಂಬ ಹೆಸರನ್ನು ಇಡಲಾಗಿದೆ.

ಜಗತ್ತು ಪ್ರಸ್ತುತ ಭೌಗೋಳಿಕ ರಾಜಕೀಯ ಉದ್ವಿಗ್ನತೆ (Geopolitical tensions) ಮತ್ತು ಆರ್ಥಿಕ ಅಸ್ಥಿರತೆಯನ್ನು ಎದುರಿಸುತ್ತಿರುವಾಗ, ಭಾರತವು ಒಂದು “ಭದ್ರವಾದ ನಕ್ಷತ್ರ”ದಂತೆ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ. ಭಾರತದ ಆರ್ಥಿಕ ಯಶಸ್ಸು ಕೇವಲ ದೇಶಕ್ಕಷ್ಟೇ ಅಲ್ಲ, ಇಡೀ ಜಗತ್ತಿನ ಪೂರೈಕೆ ಸರಪಳಿಯನ್ನು (Supply Chain) ಸ್ಥಿರಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಈ ಒಪ್ಪಂದದ ಭಾಗವಾಗಿ, ಯುರೋಪ್‌ನಿಂದ ಬರುವ ಐಷಾರಾಮಿ ಕಾರುಗಳು (ಉದಾಹರಣೆಗೆ ಮೆರ್ಸಿಡಿಸ್, ಬಿಎಂಡಬ್ಲ್ಯೂ), ವೈನ್ ಮತ್ತು ಎಲೆಕ್ಟ್ರಾನಿಕ್ಸ್ ಮೇಲಿನ ಆಮದು ಸುಂಕವನ್ನು ಭಾರತವು ಗಣನೀಯವಾಗಿ ಇಳಿಸಲು ಒಪ್ಪಿದೆ ಎಂದು ಹೇಳಲಾಗಿದೆ. ಇದಕ್ಕೆ ಪ್ರತಿಯಾಗಿ, ಭಾರತದ ಜವಳಿ (Textile), ಚರ್ಮದ ವಸ್ತುಗಳು, ಆಭರಣ ಮತ್ತು ಐಟಿ ಸೇವೆಗಳಿಗೆ ಯುರೋಪ್‌ನ 27 ದೇಶಗಳಲ್ಲಿ ತೆರಿಗೆ ರಹಿತ ಅಥವಾ ಕಡಿಮೆ ತೆರಿಗೆಯ ಪ್ರವೇಶ ಸಿಗಲಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ‘ಅಮೆರಿಕ ಫಸ್ಟ್’ ನೀತಿ ಮತ್ತು ಭಾರತದ ಮೇಲೆ ವಿಧಿಸಿರುವ ಸುಂಕಗಳ ನಡುವೆ, ಯುರೋಪ್‌ನೊಂದಿಗೆ ಈ ಒಪ್ಪಂದ ಮಾಡಿಕೊಳ್ಳುವುದು ಭಾರತಕ್ಕೆ ಆರ್ಥಿಕವಾಗಿ ದೊಡ್ಡ ಬಲ ನೀಡಲಿದೆ.ಕೇವಲ ವ್ಯಾಪಾರ ಮಾತ್ರವಲ್ಲದೆ, ಯುರೋಪ್‌ನ ಹಸಿರು ಇಂಧನ ಮತ್ತು ಸೆಮಿಕಂಡಕ್ಟರ್ ತಂತ್ರಜ್ಞಾನವನ್ನು ಭಾರತಕ್ಕೆ ವರ್ಗಾಯಿಸುವ ಬಗ್ಗೆಯೂ ಈ ಒಪ್ಪಂದದಲ್ಲಿ ಪ್ರಮುಖ ಒತ್ತು ನೀಡಲಾಗಿದೆ. ಭಾರತವು ಯುರೋಪಿಯನ್ ಕಾರುಗಳ ಮೇಲಿನ ಆಮದು ಸುಂಕವನ್ನು ಪ್ರಸ್ತುತ ಇರುವ ಶೇ. 110 ರಿಂದ ಶೇ. 40ಕ್ಕೆ ಇಳಿಸಲು ಯೋಜಿಸಿದೆ. ಇದರಿಂದ ಮರ್ಸಿಡಿಸ್-ಬೆನ್ಜ್, BMW, ಆಡಿ, ವೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ 10 ರಿಂದ 50 ಲಕ್ಷ ರೂ. ವರೆಗೆ ಇಳಿಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ

ಯುರೋಪಿನ ಪ್ರಸಿದ್ಧ ವೈನ್ ಮತ್ತು ಆಲ್ಕೋಹಾಲ್ ಉತ್ಪನ್ನಗಳ ಮೇಲಿನ ಸುಂಕವು ಗಣನೀಯವಾಗಿ ಕಡಿಮೆಯಾಗಲಿದೆ. ಇದರಿಂದಾಗಿ ಫ್ರಾನ್ಸ್, ಇಟಲಿ ಮತ್ತು ಸ್ಪೇನ್‌ನಿಂದ ಬರುವ ಉತ್ತಮ ಗುಣಮಟ್ಟದ ವೈನ್‌ಗಳು ಮತ್ತು ಸ್ಕಾಚ್‌ಗಳ ಬೆಲೆ ಇಳಿಯಲಿದೆ.ಯುರೋಪಿಯನ್ ಒಕ್ಕೂಟದಿಂದ ಆಮದು ಮಾಡಿಕೊಳ್ಳುವ ಸುಧಾರಿತ ತಂತ್ರಜ್ಞಾನದ ಉಪಕರಣಗಳು ಅಗ್ಗವಾಗಲಿವೆ. ಬೆಲ್ಜಿಯಂ ಮತ್ತು ಸ್ವಿಟ್ಜರ್ಲೆಂಡ್‌ನಂತಹ ದೇಶಗಳಿಂದ ಬರುವ ಪ್ರೀಮಿಯಂ ಚಾಕೊಲೇಟ್‌ಗಳು, ಚೀಸ್ ಮತ್ತು ಇತರ ಸಂಸ್ಕರಿಸಿದ ಆಹಾರ ಪದಾರ್ಥಗಳ ಬೆಲೆಯೂ ತಗ್ಗಲಿದೆ. ಈ ಒಪ್ಪಂದದಿಂದ ಕೇವಲ ವಿದೇಶಿ ವಸ್ತುಗಳು ಅಗ್ಗವಾಗುವುದು ಮಾತ್ರವಲ್ಲ, ಭಾರತದ ಜವಳಿ (Textile) ಮತ್ತು ಆಭರಣಗಳು ಯುರೋಪ್‌ಗೆ ಸುಲಭವಾಗಿ ರಫ್ತಾಗುವುದರಿಂದ ಭಾರತದಲ್ಲಿ ಲಕ್ಷಾಂತರ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:30 pm, Mon, 26 January 26

Source link

Exit mobile version