ಹೊಟ್ಟೆಪಾಡಿಗೆ ದುಡಿಯಲು ಬಂದವನ ದಾರುಣ ಅಂತ್ಯ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರ ಪೈಕಿ ಓರ್ವ ಸಾವು
ಹುಬ್ಬಳ್ಳಿ, ಮಾರ್ಚ್ 19: ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಚಿಕಿತ್ಸೆ ಫಲಿಸದೆ ಓರ್ವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರಾಮನಗರ ಮೂಲದ ಕಾರ್ಮಿಕ ಅಮ್ಜದ್ ಪಾಷಾ(26) ಮೃತ ದುರ್ದೈವಿಯಾಗಿದ್ದು, ಕಳೆದ 3 ದಿನಗಳಿಂದ ಕಿಮ್ಸ್ನಲ್ಲಿ ಅಮ್ಜದ್ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಉಳಿದ ಮೂವರಾದ ಜಾಫರ್, ಜಬಿ, ಹೈದರ್ಗೆ ಚಿಕಿತ್ಸೆ ಮುಂದುವರಿದ್ದು, ಮಾ.17ರಂದು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಆಕ್ಸಿಜನ್ ಸಮಸ್ಯೆಯಿಂದ ಮಲಗಿದ್ದಲ್ಲೇ ಕಾರ್ಮಿಕರು ಅಸ್ವಸ್ಥರಾಗಿದ್ದರು. ಘಟನೆ ಬೆಳಕಿಗೆ ಬಂದ…