Headlines

ವಿಪಕ್ಷ ಬಿಜೆಪಿಯ ಸಮೀಕರಣ ಬದಲಿಸಲಿದ್ಯಾ ಸಿದ್ದರಾಮಯ್ಯ ರಾಜೀನಾಮೆ?: ಹೀಗೊಂದು ಲೆಕ್ಕಾಚಾರ

ವಿಪಕ್ಷ ಬಿಜೆಪಿಯ ಸಮೀಕರಣ ಬದಲಿಸಲಿದ್ಯಾ ಸಿದ್ಧರಾಮಯ್ಯ ರಾಜೀನಾಮೆ?Image Credit source: PTI ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿರೋದು ರಾಜ್ಯ ರಾಜಕಾರಣದಲ್ಲಿ ಹತ್ತು ಹಲವು ಬದಲಾವಣೆಗಳಿಗೆ ನಾಂದಿ ಹಾಡಿದೆ. ನೂತನ ಮುಖ್ಯಮಂತ್ರಿಯ ಆಯ್ಕೆ, ಸಚಿವ ಸಂಪುಟ ಹೀಗೆ ನಾನಾ ಚರ್ಚೆಗಳಲ್ಲಿ ಕಾಂಗ್ರೆಸ್​​ ಹೈಕಮಾಂಡ್​​ ಇದ್ದರೆ ಇತ್ತ ಬಿಜೆಪಿ ಕೂಡ ತನ್ನದೇ ಆದ ತಂತ್ರ ಹೆಣೆಯಲು ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ರಾಜೀನಾಮೆ ರಾಜ್ಯ ಬಿಜೆಪಿಯಲ್ಲಿನ ರಾಜಕೀಯ ಲೆಕ್ಕಾಚಾರ ಬದಲು ಮಾಡುವ ಸಾಧ್ಯತೆ ಇದ್ದು,…

Read More

ನೋಟು ಹಾಳಾಗುವ ಭಯ ಬೇಡ; ಕಾಗದದ ಬದಲು ಪಾಲಿಮರ್ ನೋಟು ಮುದ್ರಿಸಲು ಸರ್ಕಾರದ ಆಲೋಚನೆ

ನವದೆಹಲಿ, ಮೇ 29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಪ್ರದಾಯಿಕ ಕಾಗದದ ನೋಟುಗಳ ಬದಲಿಗೆ ಪ್ಲಾಸ್ಟಿಕ್ ಅಥವಾ ಪಾಲಿಮರ್ ಬ್ಯಾಂಕ್‌ನೋಟುಗಳನ್ನು (Polymer Banknotes) ಪರಿಚಯಿಸಲು ಗಂಭೀರ ಚಿಂತನೆ ನಡೆಸಿದೆ. ನೋಟು ಮುದ್ರಣದ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ನಕಲಿ ನೋಟುಗಳ ಹಾವಳಿಗೆ ಬ್ರೇಕ್ ಹಾಕುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆರಂಭದಲ್ಲಿ ದೇಶದ ಐದು ಆಯ್ದ ನಗರಗಳಲ್ಲಿ (ವಿವಿಧ ಹವಾಮಾನ ವಲಯಗಳನ್ನು ಆಧರಿಸಿ) ₹10 ಮುಖಬೆಲೆಯ ಪಾಲಿಮರ್ ನೋಟುಗಳನ್ನು ಪ್ರಾಯೋಗಿಕವಾಗಿ (Pilot Project) ಚಲಾವಣೆಗೆ…

Read More

‘ಎತೊ ಕ ನಾಯ್’: ಜೆನ್ ಜಿ ಪ್ರೇಕ್ಷಕರಿಗಾಗಿ ಹೊಸ ಸಿನಿಮಾ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್’

‘ಕೆಜಿಎಫ್’, ‘ಸಲಾರ್’ ರೀತಿಯ ಕಮರ್ಷಿಯಲ್ ಬ್ಲಾಕ್‌ಬಸ್ಟರ್‌ಗಳು, ನಮ್ಮ ಮಣ್ಣಿನ ಸೊಗಡಿನ ‘ಕಾಂತಾರ’ ಹಾಗೂ ಭವ್ಯ ಅನಿಮೇಷನ್ ಲೋಕದ ‘ಮಹಾವತಾರ ನರಸಿಂಹ’ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ (Hombale Films) ಈಗ ಮತ್ತೊಂದು ವಿಭಿನ್ನ ಪ್ರಯೋಗಕ್ಕೆ ಕೈಹಾಕಿದೆ. ಸದಾ ಹೊಸತನಕ್ಕೆ ಒತ್ತು ನೀಡುವ ಈ ಸಂಸ್ಥೆ, ಇದೀಗ ಇಂದಿನ ಯುವ ಪೀಳಿಗೆ ಹಾಗೂ ‘ಜೆನ್ ಜಿ’ (Gen Z) ಪ್ರೇಕ್ಷಕರನ್ನು ಸೆಳೆಯಲು ಸಂಪೂರ್ಣ ಕಂಟೆಂಟ್ ಆಧಾರಿತ ಹಿಪ್-ಹಾಪ್…

Read More

‘ಧುರಂಧರ್’ ಯಶಸ್ಸು ಸಹಿಸದವರಿಂದ ರಣ್ವೀರ್ ಸಿಂಗ್ ವಿರುದ್ಧ ಪಿತೂರಿ’

‘ಡಾನ್ 3’ (Don 3) ಸಿನಿಮಾದ ಒಪ್ಪಂದ ಮುರಿದು ಚಿತ್ರದಿಂದ ಹೊರನಡೆದ ಕಾರಣ ನಟ ರಣವೀರ್ ಸಿಂಗ್ (Ranveer Singh) ವಿರುದ್ಧ ಅಸಹಕಾರವನ್ನು ಸಿನಿಮಾ ನೌಕರರ ಸಂಘ ಘೋಷಿಸಿದೆ. ರಣ್ವೀರ್ ಸಿಂಗ್ ಅವರು ಒಪ್ಪಂದ ಮುರಿದಿದ್ದು ಮಾತ್ರವಲ್ಲದೆ ಸಿನಿಮಾದ ಪ್ರೀ ಪ್ರೊಡಕ್ಷನ್​​ಗೆ ಆಗಿರುವ ಖರ್ಚನ್ನು ಕೊಡಲು ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಪಕ ಫರ್ಹಾನ್ ಅಖ್ತರ್ ಸಿನಿಮಾ ಒಕ್ಕೂಟಕ್ಕೆ ದೂರು ನೀಡಿದ್ದರು. ಈಗ ರಣ್ವೀರ್ ಸಿಂಗ್ ಮೇಲೆ ಹೇರಲಾಗಿರುವ ಅನಧಿಕೃತ ನಿಷೇಧದ ಬಗ್ಗೆ ಚಿತ್ರರಂಗಕ್ಕೆ ಸಂಬಂಧಿಸಿದವರು…

Read More

ಕಾರಾಗೃಹ ಇಲಾಖೆಯ ಕೋಟ್ಯಂತರ ರೂ ಮೌಲ್ಯದ ಕಟ್ಟಡವನ್ನೇ ಕಬ್ಜ ಮಾಡಿದ ಭಲೇ ಕಿಲಾಡಿಗಳು

ಕಾರಾಗೃಹ ಇಲಾಖೆಯ ಕಟ್ಟಡImage Credit source: tv9 kannada ಬೆಂಗಳೂರು, ಮೇ 29: ಸುಮಾರು 40ರಿಂದ 50 ಕೋಟಿ ರೂ ಮೌಲ್ಯದ ಕಾರಾಗೃಹ ಇಲಾಖೆಯ ಕಟ್ಟಡದ ಮೇಲೆ ಖದೀಮರು ಕಣ್ಣು ಹಾಕಿದ್ದಾರೆ. ಸ್ವತ್ತು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀನದಲ್ಲಿರುವ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಮಾರ್ಜ್ ಪ್ರಿಸನರ್ಸ್ ಏಡ್ ಸೊಸೈಟಿಯ ಆಸ್ತಿಯನ್ನು (Property) ಕಬ್ಜ ಮಾಡಲಾಗಿದೆ. ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಮುಖ್ಯಾಂಶಗಳು ಮೈಸೂರು…

Read More

ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಆಕೆಯೇ ಕಾರಣ! ಅವರ ಜೀವನದ ಅದೃಷ್ಟ ಲಕ್ಷ್ಮಿ ಎಂದ ಸುಧಾಕರ್

ಬೆಂಗಳೂರು, ಮೇ.29: ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಮತ್ತು ಇತ್ತೀಚಿನ ವೈಯಕ್ತಿಕ ಘಟನೆಗಳ ಕುರಿತು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವ ನಿರ್ಧಾರ ಡಿ.ಕೆ. ಶಿವಕುಮಾರ್ ಅವರ ಆಡಳಿತಕ್ಕೆ ಒಂದು ರೀತಿಯಲ್ಲಿ ಎಚ್ಚರಿಕೆ ಗಂಟೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಡಾ. ಸುಧಾಕರ್ ಪ್ರಕಾರ, ಸಿದ್ದರಾಮಯ್ಯ ಅವರನ್ನು ಜೊತೆಗೆ ಕರೆದುಕೊಂಡು ಮುಂದಿನ ಎರಡು ವರ್ಷಗಳನ್ನು ಪೂರೈಸುವುದು ಮತ್ತು 2028ರ ಚುನಾವಣೆಯಲ್ಲಿ ಅವರ ಸಹಕಾರ ಪಡೆಯುವುದು…

Read More

Video: ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ; ಹೃದಯಸ್ಪರ್ಶಿ ವೀಡಿಯೊ ವೈರಲ್

ತನ್ನ ಯೂಟ್ಯೂಬ್‌ ಆದಾಯದ ಮೊದಲ ಸಂಪಾದನೆಯಿಂದ ತಂದೆಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡಿದ ಪುಟ್ಟ ಬಾಲಕಿಯ ಹೃದಯಸ್ಪರ್ಶಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ನೆಟ್ಟಿಗರ ಮನ ಗೆದ್ದಿದೆ. ವಿಡಿಯೊದಲ್ಲಿ ಮುದ್ದಾದ ಬಾಲಕಿ ತಂದೆಯ ಮುಂದೆ ಮಂಡಿಯೂರಿ ಪ್ರೀತಿಯಿಂದ ಉಂಗುರ ತೊಡಿಸುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆಯುತ್ತದೆ. ಮಗಳ ಮುಖದಲ್ಲಿನ ಹೆಮ್ಮೆ ಮತ್ತು ಸಂತೋಷ ಸ್ಪಷ್ಟವಾಗಿ ಕಾಣುತ್ತಿದ್ದರೆ, ಆಕೆಯ ಈ ಅಮೂಲ್ಯ ಉಡುಗೊರೆಯನ್ನು ಕಂಡ ತಂದೆ ಭಾವುಕರಾಗಿ ಮಗಳ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವ ಕ್ಷಣ ನೋಡುಗರ…

Read More

ಕೊನೆಗೂ ಗೆದ್ದ ಸಲ್ಮಾನ್ ಖಾನ್? ‘ಮಾತೃಭೂಮಿ’ ಚಿತ್ರಕ್ಕೆ ಭರ್ಜರಿ ಪಾಸಿಟಿವ್ ವಿಮರ್ಶೆ

ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಅದೆಷ್ಟು ಸೋಲುಗಳನ್ನು ಕಂಡರೋ. ಬಹುಶಃ ಅವರಿಗೂ ಅದರ ಲೆಕ್ಕ ತಪ್ಪಿ ಹೋಗಿರಬಹುದು. ಒಂದು ಕಾಲದಲ್ಲಿ ಬಾಲಿವುಡ್​​ನಲ್ಲಿ ದೊಡ್ಡ ಮಟ್ಟದಲ್ಲಿ ಪಾರುಪತ್ಯ ನಡೆಸಿದ್ದ ಅವರು, ಈಗ ಗೆಲ್ಲಲು ಹಾತೊರೆಯುತ್ತಿದ್ದಾರೆ. ಈಗ ಸಲ್ಮಾನ್ ಖಾನ್ ಅವರು ‘ಮಾತೃಭೂಮಿ’ ಸಿನಿಮಾ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಇದ್ದಾರೆ. ಹೀಗಿರುವಾಗಲೇ ಸಿನಿಮಾಗೆ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್​’ ಅನ್ನೋದು ಸಿನಿಮಾದ ಹೆಸರು. ಈ ಚಿತ್ರವನ್ನು ಅಪೂರ್ವ ಲಖಿಯಾ ಅವರು…

Read More

ArivuPro Academy: ಸಿಎ, ಎಸಿಸಿಎ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕೋರ್ಸ್​ಗಳಿಗೆ ಗುಣಮಟ್ಟದ ತರಬೇತಿ ನೀಡುವ ಅರಿವುಪ್ರೋ

ಅರಿವುಪ್ರೋ ಅಕಾಡೆಮಿ ವಿದ್ಯಾರ್ಥಿಗಳುImage Credit source: Arivupro Academy ಇಂದಿನ ತೀವ್ರ ಸ್ಪರ್ಧಾತ್ಮಕ ಶೈಕ್ಷಣಿಕ ವಲಯದಲ್ಲಿ, ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಪದವಿಗಳಿಗಷ್ಟೇ ಸೀಮಿತವಾಗದೆ ಕೌಶಲ್ಯಾಧಾರಿತ ಕಲಿಕೆ, ಜಾಗತಿಕ ಮನ್ನಣೆ ಹೊಂದಿರುವ ಕೋರ್ಸ್‌ಗಳು ಮತ್ತು ಉತ್ತಮ ವೃತ್ತಿಜೀವನದ ಅವಕಾಶಗಳ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಈ ಬದಲಾವಣೆಯನ್ನು ಮನಗಂಡಿರುವ ‘ಅರಿವುಪ್ರೋ ಅಕಾಡೆಮಿ’ (ArivuPro Academy), ಹಣಕಾಸು (Finance) ಮತ್ತು ಅಕೌಂಟಿಂಗ್ ಕ್ಷೇತ್ರಗಳಲ್ಲಿ ಯಶಸ್ವಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಸಾವಿರಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಪ್ರಮುಖ ವೃತ್ತಿಪರ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ….

Read More

ಆಪ್ತರನ್ನೇ ಅನ್​ಫಾಲೋ ಮಾಡಿದ್ದಕ್ಕೆ ಕಾರಣ ತಿಳಿಸಿದ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್

ಬಾಲಿವುಡ್‌ನ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ (Karan Johar) ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದಿಢೀರನೆ ಚಿತ್ರರಂಗದ ಹಲವು ಸ್ಟಾರ್‌ ನಟ-ನಟಿಯರು ಹಾಗೂ ಆಪ್ತ ಸ್ನೇಹಿತರನ್ನು ಅನ್‌ಫಾಲೋ (Unfollow) ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದರು. ಇದೀಗ ಈ ಎಲ್ಲಾ ಚರ್ಚೆಗಳಿಗೆ ಸ್ವತಃ ಕರಣ್ ಜೋಹರ್ ಅವರೇ ತೆರೆ ಎಳೆದಿದ್ದು, ತಮ್ಮ ಈ ನಡೆಗೆ ಅಸಲಿ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ. ಗುರುವಾರ (ಮೇ 28) ಕರಣ್ ಜೋಹರ್ ಅವರು ಇನ್‌ಸ್ಟಾಗ್ರಾಮ್ ಫಾಲೋಯಿಂಗ್ ಲಿಸ್ಟ್‌ನಿಂದ ಶಾರುಖ್…

Read More